Tag: mother

  • ತಾಯಿ, ಸಹೋದರಿ, ಅತ್ತಿಗೆ ಮೇಲೆ ರೇಪ್- ಕುಟುಂಬಸ್ಥರಿಂದ್ಲೇ ಯುವಕನ ಕೊಲೆ

    ತಾಯಿ, ಸಹೋದರಿ, ಅತ್ತಿಗೆ ಮೇಲೆ ರೇಪ್- ಕುಟುಂಬಸ್ಥರಿಂದ್ಲೇ ಯುವಕನ ಕೊಲೆ

    ಭೋಪಾಲ್: ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದ ದಾಟಿಯಾ ಪೊಲೀಸರು ಒಂದೇ ಕುಟುಂಬದ ನಾಲ್ವರನ್ನು ಬಂಧಿಸಿದ್ದಾರೆ.

    ಕುಟುಂಬವು 24 ವರ್ಷದ ಯುವಕನನ್ನು ಕೊಲೆ ಮಾಡಿತ್ತು. ಮೃತ ಯುವಕ ಮದ್ಯವ್ಯಸನಿಯಾಗಿದ್ದು, ತಾಯಿ, ಸಹೋದರಿ ಹಾಗೂ ಸಹೋದರ ಪತ್ನಿಯ ಮೇಲೆ ಹಲವು ಬಾರಿ ಅತ್ಯಾಚಾರ ಮಾಡುತ್ತಿದ್ದನು. ಇದರಿಂದ ಕುಟುಂಬ ಆತನನ್ನು ಕೊಲೆ ಮಾಡಿದೆ ಎಂಬ ಆರೋಪ ಕೇಳಿ ಬಂದಿತ್ತು.

    ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕುಟುಂಬದ ನಾಲ್ವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಯಿತು. ಈ ವೇಳೆ 24 ವರ್ಷದ ಮಗ ಎಲ್ಲಿ ಎಂದು ನಾಲ್ವರನ್ನು ಪ್ರಶ್ನಿಸಿದ್ದೇವೆ. ಆಗ ಅವರು ನಡೆದ ಘಟನೆಯನ್ನು ವಿವರಿಸಿದರು ಎಂದು ಉಪ ವಿಭಾಗೀಯ ಅಧಿಕಾರಿ ಗೀತಾ ಭಾರದ್ವಾಜ್ ತಿಳಿಸಿದ್ದಾರೆ.

    ನವೆಂಬರ್ 12ರಂದು ಗೋಪಾಲ್ ದಾಸ್ ಬೆಟ್ಟದಿಂದ ಯುವಕನ ಶವವನ್ನು ಹೊರತಂದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವೇಳೆ ಆತನನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ವರದಿಯಲ್ಲಿ ಉಲ್ಲೇಖವಾಗಿದೆ.

    ಇತ್ತ ಕುಟುಂಬ ಕೂಡ ಮಗನ ಕೊಲೆಯನ್ನು ಒಪ್ಪಿಕೊಂಡಿದೆ. ಮಗ ವಿಪರೀತವಾಗಿ ಕುಡಿಯುತ್ತಿದ್ದನು. ಅಲ್ಲದೆ ತಾಯಿ, ಸಹೋದರಿ ಹಾಗೂ ಸಹೋದರನ ಪತ್ನಿಯ ಮೇಲೆ ಅತ್ಯಾಚಾರವೆಸಗುತ್ತಿದ್ದನು. ಇದರಿಂದ ಬೇಸತ್ತು ಆತನ ಕೊಲೆ ಮಾಡಿರುವುದಾಗಿ ಕುಟುಂಬ ತಪ್ಪೊಪ್ಪಿಕೊಂಡಿದೆ ಎಂದು ಭಾರದ್ವಾಜ್ ಹೇಳಿದ್ದಾರೆ.

    ನವೆಂಬರ್ 11 ರಂದು ಮಗ ವಿಪರೀತ ಕುಡಿದುಕೊಂಡು ಮನೆಗೆ ಬಂದಿದ್ದಾನೆ. ಅಲ್ಲದೆ ಆತನ ಸಹೋದರನ ಪತ್ನಿಯನ್ನು ರೇಪ್ ಮಾಡಲು ಯತ್ನಿಸಿದನು. ಈ ಹಿಂದೆಯೂ ಆತ ಹಲವು ಬಾರಿ ಅತ್ಯಾಚಾರ ಮಾಡಿದ್ದಾನೆ. ಹೀಗಾಗಿ ಈ ಬಾರಿ ಆತನನ್ನು ಕೊಲೆ ಮಾಡುವುದಾಗಿ ತೀರ್ಮಾನ ಮಾಡಿ ಹತ್ಯೆ ಮಾಡಿದೆವು. ನಂತರ ಶವವನ್ನು ಗೋಪಾಲ್ ದಾಸ್ ಬೆಟ್ಟದಲ್ಲಿ ಎಸದೆವು ಎಂದು ಯುವಕನ ತಂದೆ ತಿಳಿಸಿದ್ದಾರೆ.

    ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ತಾಯಿ, ತಂದೆ, ಅಣ್ಣ ಹಾಗೂ ಅತ್ತಿಗೆಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

  • ಹಸುವಿನ ಹೊಟ್ಟೆ ಮೇಲೆ ತಾಯಿ, ಮಗುವಿನ ಆರೈಕೆಯ ಚಿತ್ರ

    ಹಸುವಿನ ಹೊಟ್ಟೆ ಮೇಲೆ ತಾಯಿ, ಮಗುವಿನ ಆರೈಕೆಯ ಚಿತ್ರ

    ಬೆಳಗಾವಿ(ಚಿಕ್ಕೋಡಿ): ಸಾಮಾನ್ಯವಾಗಿ ಕಪ್ಪು-ಬಿಳುಪು ಬಣ್ಣವಿರುವ ಹಸುವಿನ ಮೇಲೆ ನಾನಾ ರೀತಿಯ ಚಿತ್ರಗಳು ಕಾಣಸಿಗುತ್ತವೆ. ಇದೀಗ ಇಂತದ್ದೇ ಹಸುವಿನ ಹೊಟ್ಟೆ ಮೇಲೆ ತಾಯಿ ಮಗುವನ್ನ ಆರೈಕೆ ಮಾಡುವ ಹೋಲಿಕೆಯ ಚಿತ್ರವೊಂದು ಮೂಡಿ ಗಮನ ಸೆಳೆದಿದೆ.

    ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದ ರೈತ ರಾಹುಲ್ ಜಾಧವ್ ಅವರಿಗೆ ಸೇರಿದ ಹಸುವಿನ ಹೊಟ್ಟೆಯ ಮೇಲೆ ಈ ರೀತಿಯ ಚಿತ್ರ ಮೂಡಿದ್ದು, ಅಚ್ಚರಿಗೆ ಕಾರಣವಾಗಿದೆ. ಅಲ್ಲದೆ ಇದನ್ನು ನೋಡಲು ಜನರು ದೌಡಾಯಿಸುತ್ತಿದ್ದಾರೆ.

    ಮೂಲತಃ ಕೃಷಿ ಜೊತೆಗೆ ಹೈನುಗಾರಿಕೆ ಮಾಡುವ ಜಾಧವ್ ಕುಟುಂಬ ನಾಲ್ಕು ವರ್ಷಗಳ ಹಿಂದೆ ಮಹಾರಾಷ್ಟ್ರದ ಮೀರಜ್ ಜಾನುವಾರು ಮಾರುಕಟ್ಟೆಯಿಂದ ಬಿಳಿ – ಕಪ್ಪು ಬಣ್ಣದ ಜರ್ಸಿ ಪ್ರಬೇಧದ ಹಸುವನ್ನು ತಂದಿದ್ದರು. ಕಳೆದ ಮೂರು ವರ್ಷಗಳಿಂದ ಹೊಟ್ಟೆಯ ಮೇಲೆ ಈ ರೀತಿ ಹಚ್ಚೆ ಮೂಡಲು ಆರಂಭವಾಗಿ ದಿನ ಕಳೆದಂತೆಯೇ ಈಗ ಸಂಪೂರ್ಣವಾಗಿ ಮಹಿಳೆ ಕುಳಿತುಕೊಂಡು ಮಗುವನ್ನ ಆರೈಕೆ ಮಾಡುವ ರೀತಿಯ ಚಿತ್ರ ಸ್ಪಷ್ಟವಾಗಿ ಕಾಣುತ್ತಿದೆ.

    ಈ ರೀತಿಯ ಅಚ್ಚರಿಯ ಚಿತ್ರ ಮೂಡಿರುವ ಕಾರಣ ಇದೀಗ ಹೆಚ್ಚಿನ ಸಂಖ್ಯೆಯ ಜನರು ಬಂದು ಈ ಅಚ್ಚರಿಯನ್ನ ಕಣ್ಣು ತುಂಬಿ ಕೊಳ್ಳುತ್ತಿದ್ದಾರೆ.

  • ತಾಯಿ ಆತ್ಮಹತ್ಯೆಗೆ ಶರಣಾಗಿದ್ದನ್ನು ನೋಡಿ ಮಗನೂ ನೇಣಿಗೆ ಶರಣು

    ತಾಯಿ ಆತ್ಮಹತ್ಯೆಗೆ ಶರಣಾಗಿದ್ದನ್ನು ನೋಡಿ ಮಗನೂ ನೇಣಿಗೆ ಶರಣು

    ಮಡಿಕೇರಿ: ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿ ಮಗ ಕೂಡ ನೇಣಿಗೆ ಶರಣಾಗಿರುವ ಘಟನೆ ಭಾನುವಾರ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮದ ಆಲೇಕಟ್ಟೆಯಲ್ಲಿ ನಡೆದಿದೆ.

    ತಂಗಮಣಿ (55) ಮತ್ತು ಹರೀಶ್ (26) ಆತ್ಮಹತ್ಯೆ ಶರಣಾದ ತಾಯಿ-ಮಗ. ಆಲೇಕಟ್ಟೆ ರಸ್ತೆ ನಿವಾಸಿಯಾಗಿರುವ ತಂಗಮಣಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಆದರೆ ಭಾನುವಾರ ತಂಗಮಣಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆಟೋ ಚಾಲಕರಾಗಿರುವ ಹರೀಶ್ ಮನೆಗೆ ಬಂದ ಸಂದರ್ಭದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

    ತಾಯಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ನೋಡಿದ ಹರೀಶ್ ತಕ್ಷಣ ತನ್ನ ಸಂಬಂಧಿಕರಿಗೆ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದು ಮನೆಗೆ ಆಗಮಿಸಿದ ಸಂಬಂಧಿಕರು ಈ ಬಗ್ಗೆ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಹೋಗಿದ್ದಾರೆ. ಈ ಸಂದರ್ಭದಲ್ಲಿ ಹರೀಶ್ ಮನೆಯೊಳಗೆ ತೆರಳಿ ಪಂಚೆಯಿಂದ ನೇಣು ಬಿಗಿದುಕೊಂಡಿದ್ದಾರೆ.

    ಏನಿದು ಘಟನೆ?
    ಕಳೆದ 9 ತಿಂಗಳ ಹಿಂದೆ ಆಲೇಕಟ್ಟೆ ರಸ್ತೆಯ ಸಿದ್ದೇಶ್ವರ ಟಯರ್ ವರ್ಕ್ ಸಮೀಪದ ಯುವತಿಯನ್ನು ವಿವಾಹವಾಗಿದ್ದ ಹರೀಶ್‍ನ ದಾಂಪತ್ಯ ಜೀವನ ಸರಿಯಾಗಿರಲಿಲ್ಲ. ಆತನ ಪತ್ನಿ ಕೇವಲ 15 ದಿನಗಳ ಕಾಲ ಮಾತ್ರ ಮನೆಯಲ್ಲಿದ್ದು, ನಂತರ ತವರು ಮನೆ ಸೇರಿಕೊಂಡಿದ್ದಳು. ಹರೀಶ್ ಆಗಾಗ ತನ್ನ ಪತ್ನಿಯನ್ನು ಕರೆ ತರಲು ಯತ್ನಿಸಿದರೂ ಫಲಕಾರಿಯಾಗಲಿಲ್ಲ. ಈ ಮಧ್ಯೆ ಪತ್ನಿ ವಿವಾಹ ವಿಚ್ಛೇದನ ಸಹಿತ ಜೀವನಾಂಶಕ್ಕಾಗಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು, ಇದರಿಂದಾಗಿ ತಾಯಿ-ಮಗ ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರು.

    ಈ ಬಗ್ಗೆ ಇಬ್ಬರು ತನ್ನ ಸಂಬಂಧಿಕರ ಬಳಿ ಹಾಗೂ ಸ್ಥಳೀಯರೊಂದಿಗೆ ಆಗಾಗ ಬೇಸರ ವ್ಯಕ್ತಪಡಿಸುತ್ತಿದ್ದರು. ಭಾನುವಾರ ಮಧ್ಯಾಹ್ನ 2.30ರ ಸುಮಾರಿಗೆ ತಂಗಮಣಿ ಅವರು ತಮ್ಮ ಮನೆಯಲ್ಲಿ ಪಂಚೆಯಿಂದ ನೇಣು ಬಿಗಿದುಕೊಂಡಿದ್ದು, ಇದನ್ನು ಗಮನಿಸಿದ ಮಗ ಹರೀಶ್ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಸೋಮವಾರಪೇಟೆ ಪೊಲೀಸ್ ವೃತ್ತ ನಿರೀಕ್ಷಕ ನಂಜುಂಡೇಗೌಡ, ಠಾಣಾಧಿಕಾರಿ ಶಿವಶಂಕರ್ ಸೇರಿದಂತೆ ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಅಮ್ಮನಿಗೆ ವರ ಬೇಕಿದೆ, ಷರತ್ತುಗಳು ಅನ್ವಯ: ಮಗನ ಪೋಸ್ಟ್

    ಅಮ್ಮನಿಗೆ ವರ ಬೇಕಿದೆ, ಷರತ್ತುಗಳು ಅನ್ವಯ: ಮಗನ ಪೋಸ್ಟ್

    ಕೋಲ್ಕತ್ತಾ: ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್‍ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

    ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್‍ಬುಕ್ ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: 50 ವರ್ಷದ ಅಮ್ಮನಿಗೆ ವರ ಬೇಕಾಗಿದೆ- ಮಗಳ ಟ್ವೀಟ್ ವೈರಲ್

    ಈ ಕುರಿತು ಪ್ರತಿಕ್ರಿಯಿಸಿರುವ ಗೌರವ್, ನನ್ನ ತಂದೆ ಕುಲ್ಟಿಯಲ್ಲಿ ನೌಕರಿ ಮಾಡುತ್ತಿದ್ದರು. 2014ರಲ್ಲಿ ತಂದೆಯ ನಿಧನದ ಬಳಿಕ ಅಮ್ಮ ಮನೆಯಲ್ಲಿ ಏಕಾಂಗಿಯಾಗಿದ್ದಾರೆ ಎಂಬುವುದು ನನ್ನ ಅಭಿಪ್ರಾಯ. ನಾನು ಬೆಳಗ್ಗೆ ಏಳು ಗಂಟೆಗೆ ಕೆಲಸಕ್ಕಾಗಿ ಮನೆಯಿಂದ ಹೋದರೆ ರಾತ್ರಿ ಹಿಂದಿರುಗುತ್ತೇನೆ. ಪ್ರತಿಯೊಬ್ಬ ವ್ಯಕ್ತಿಗೂ ಜೀವನದಲ್ಲಿ ಓರ್ವ ಗೆಳೆಯನ ಅವಶ್ಯಕತೆ ಇರುತ್ತದೆ. ಮದುವೆ ಬಗ್ಗೆ ಅಮ್ಮನ ಜೊತೆ ಮಾತನಾಡಿದ್ದೇನೆ. ಅಮ್ಮ ಸಹ ಈ ಕುರಿತು ಯೋಚನೆ ಮಾಡುತ್ತಿದ್ದಾರೆ. ಏಕಾಂಗಿಯಾಗಿರುವ ಅಮ್ಮನಿಗೆ ಸಂಗಾತಿ ಹುಡುಕುವುದು ನಮ್ಮ ಕರ್ತವ್ಯ. ಹಾಗಾಗಿ ಪೋಸ್ಟ್ ಮಾಡಿದ್ದೇನೆ ಎಂದು ಹೇಳುತ್ತಾರೆ. ಇದನ್ನೂ ಓದಿ: ಆಸ್ತಾ ವರ್ಮಾ ಸ್ಫೂರ್ತಿ- ತಾಯಿಗೆ ವರ ಹುಡುಕ್ತಿರೋ ಮತ್ತೊಬ್ಬ ಯುವತಿ

    ಜನರು ಬೆನ್ನ ಹಿಂದೆ ನೂರು ಮಾತನಾಡಬಹುದು. ಯಾರಿಗೂ ನನ್ನ ಮುಂದೆ ಮಾತನಾಡಲ್ಲ. ಸಮಾಜದಲ್ಲಿ ಮಾಡುವ ಪ್ರತಿಯೊಂದು ಕೆಲಸಗಳಿಗೆ ಕೊಂಕು ಮಾತನಾಡುವ ಜನ ಇರುತ್ತಾರೆ. ಹಾಗಾಗಿ ಈ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲ್ಲ. ಕೆಲವರು ಪ್ರಚಾರ ಪಡೆದುಕೊಳ್ಳಲು ಈ ರೀತಿಯ ಪೋಸ್ಟ್ ಮಾಡಿದ್ದೇನೆ ಎಂದು ಮಾತನಾಡಿಕೊಂಡಿದ್ದಾರೆ. ಮುಂದೆ ಮಾತನಾಡದೇ ಇರುವ ಜನರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಕೆಲವರು ಸಮಾಜಕ್ಕೆ ಹೆದರಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಾರೆ ಎಂದು ಗೌರವ್ ಬೇಸರ ವ್ಯಕ್ತಪಡಿಸುತ್ತಾರೆ.

    ಫೇಸ್‍ಬುಕ್ ನಲ್ಲಿ ನನ್ನ ಮನವಿ ಉತ್ತಮ ಪ್ರತಿಕ್ರಿಯೆಗಳು ಬಂದಿವೆ. ಎಂಜಿನಿಯರ್, ಡಾಕ್ಟರ್ ಮತ್ತು ಶಿಕ್ಷಕರು ಸೇರಿದಂತೆ ಹಲವರು ತಮ್ಮ ಬಯೋಡೇಟಾ ಕಳುಹಿಸಿದ್ದಾರೆ. ಇವುಗಳಲ್ಲಿ ಉತ್ತಮವಾದವರನ್ನು ಆಯ್ಕೆ ಮಾಡುವ ಜವಾಬ್ದಾರಿ ನನ್ನ ಮೇಲಿದೆ ಎಂದು ಗೌರವ್ ಹೇಳಿದ್ದಾರೆ.

  • ವಾಯುಸೇನೆಯಲ್ಲಿದ್ದ ಮಗನ ಸಾವನ್ನು ಮರೆಯಲು ಸ್ಲಂ ಮಕ್ಕಳಿಗೆ ಶಿಕ್ಷಣ ಕೊಡ್ತಿರುವ ದಂಪತಿ

    ವಾಯುಸೇನೆಯಲ್ಲಿದ್ದ ಮಗನ ಸಾವನ್ನು ಮರೆಯಲು ಸ್ಲಂ ಮಕ್ಕಳಿಗೆ ಶಿಕ್ಷಣ ಕೊಡ್ತಿರುವ ದಂಪತಿ

    ಇಟಾನಗರ: ಭಾರತೀಯ ವಾಯು ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಗನನ್ನು ವಿಮಾನ ಅಪಘಾತದಲ್ಲಿ ಕಳೆದುಕೊಂಡ ದಂಪತಿ ಈಗ ಸ್ಲಂ ಮಕ್ಕಳ ಏಳಿಗೆಗಾಗಿ ಶ್ರಮಿಸುವ ಜೊತೆ ಆ ಮಕ್ಕಳಲ್ಲಿ ಮಗನನ್ನು ಕಾಣುತ್ತಿದ್ದಾರೆ.

    ಘಾಜಿಯಾಬಾದ್ ನಿವಾಸಿಗಳಾದ ನಿವೃತ್ತ ಗ್ರೂಪ್ ಕ್ಯಾಪ್ಟನ್ ಶರದ್ ತೆವಾರಿ ಮತ್ತು ಸಾಮಾಜಿಕ ಕಾರ್ಯಕರ್ತೆ ಸವಿತಾ ತೆವಾರಿ ದಂಪತಿ ಸ್ಲಂ ಮಕ್ಕಳಿಗಾಗಿ ಶ್ರಮಿಸುತ್ತಿದ್ದಾರೆ. ಇವರ ಮಗ ಶಿಶಿರ್ ತೆವಾರಿ ಅವರು ಭಾರತೀಯ ವಾಯುಸೇನೆಯಲ್ಲಿ ಸ್ಕ್ವಾಡ್ರನ್ ಲೀಡರ್ ಆಗಿದ್ದರು. ದುರಾದೃಷ್ಟವಶಾತ್ 2017ರ ಅ. 6ರಂದು ಅರುಣಾಚಲ ಪ್ರದೇಶದ ತವಾಂಗ್ ಜಿಲ್ಲೆಯಲ್ಲಿ ಎಂಐ-17 ವಿ5(Mi-17 V5) ವಿಮಾನ ಅಪಘಾತದಲ್ಲಿ ಶಿಶಿರ್ ಹುತಾತ್ಮರಾಗಿದ್ದರು.

    ಮಗನ ಅಗಲಿಕೆಯ ನೋವು ಮರೆಯಲು ತೆವಾರಿ ದಂಪತಿ ಶಿಕ್ಷಣದಿಂದ ವಂಚಿತರಾಗಿರುವ ಸ್ಲಂ ಮಕ್ಕಳಿಗೆ ಶಿಕ್ಷಣ ಕೊಟ್ಟು, ಸಾಮಾಜದಲ್ಲಿ ಒಳ್ಳೆಯ ಪ್ರಜೆಗಳನ್ನಾಗಿ ಮಾಡಬೇಕು ಎಂದು ಪಣತೊಟ್ಟರು. 2018ರ ಆಗಸ್ಟ್ 15 ರಂದು ದಂಪತಿ ದೆಹಲಿಯ ಯಮುನಾ ಖಾದರ್ ಸ್ಲಂನ 100 ಬಡಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಆರಂಭಿಸಿದರು. ಇದೇ ಉದ್ದೇಶದಿಂದ ಶಹೀದ್ ಸ್ಕ್ವಾಡ್ರನ್ ಲೀಡರ್ ಶಿಶಿರ್ ತೆವಾರಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ನ್ನು ಶುರುಮಾಡಿದರು. ಬಡ ಮಕ್ಕಳು ಕೂಡ ಶಿಕ್ಷಣ ಪಡೆದು ತಮ್ಮ ಮಗನಂತೆ ಮುಂದೆ ದೇಶ ಸೇವೆ ಮಾಡುವ ವ್ಯಕ್ತಿಗಳಾಗಿ ಹೊರಹೊಮ್ಮಲಿ ಎಂದು ಆಶಿಸಿದರು. ಸದ್ಯ ದಂಪತಿ 350 ಸ್ಲಂ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿದ್ದಾರೆ.

    ತೆವಾರಿ ದಂಪತಿಗೆ ಸ್ಲಂ ಮಕ್ಕಳ ಶಿಕ್ಷಣದ ಬಗ್ಗೆ ಇರುವ ಕಾಳಜಿ ನೋಡಿದ ಸ್ಲಂ ಕಮಿಟಿ ಈ ಪ್ರದೇಶದಲ್ಲಿ ಶಾಲೆ ತೆರೆಯಲು ಅವರಿಗೆ ಅವಕಾಶ ನೀಡಿತ್ತು. ಅಷ್ಟೇ ಅಲ್ಲದೆ ತೆವಾರಿ ದಂಪತಿ ಕಾರ್ಯ ನೋಡಿ ಅವರ ಸಂಬಂಧಿಕರು, ಸ್ನೇಹಿತರು ಕೂಡ ಅವರೊಂದಿಗೆ ಕೈಜೋಡಿಸಿದ್ದಾರೆ. ಈ ಸ್ಲಂ ಮಕ್ಕಳಿಗಾಗಿ ತೆರೆದ ಶಾಲೆಯಲ್ಲಿ ವಾರಕ್ಕೆ 5 ದಿನಗಳು ಮಾತ್ರ ಪಾಠ ನಡೆಯುತ್ತದೆ. ಪ್ರಸ್ತುತವಾಗಿ 1ನೇ ತರಗತಿಯಿಂದ 12ನೇ ತರಗತಿವರೆಗೆ 350 ಮಕ್ಕಳು ಶಾಲೆಯಲ್ಲಿ ಕಲಿಯುತ್ತಿದ್ದಾರೆ. ಈ ಬಡ ಮಕ್ಕಳಿಗೆ ಪಾಠ ಹೇಳಿಕೊಡಲು, ಹೋಂವರ್ಕ್ ಮಾಡಿಸಲು 25 ಮಂದಿ ಸ್ವಯಂ ಸೇವಕರು ದಂಪತಿಗೆ ಸಹಾಯ ಮಾಡುತ್ತಿದ್ದಾರೆ. ಗಣಿತ, ಸಮಾಜ ವಿಜ್ಞಾನ ಮತ್ತು ವಿಜ್ಞಾನ ವಿಷಯಗಳನ್ನೂ ಸಹ ಶಾಲೆಯಲ್ಲಿ ಮಕ್ಕಳಿಗೆ ಹೇಳಿಕೊಡಲಾಗುತ್ತದೆ ಎಂದು ಶರದ್ ಅವರು ತಿಳಿಸಿದರು.

    ಸ್ಲಂ ಮಕ್ಕಳಿಗೆ ಶಿಕ್ಷಣ ಪಡೆಯುವ ಅವಕಾಶ ಸಿಗುವುದು ತೀರಾ ಕಡಿಮೆ. ಅವರು ಶಿಕ್ಷಣದಿಂದ ವಂಚಿತರಾಗುತ್ತಾರೆ, ಬಡ ಪೋಷಕರು ಜೀವನ ನಡೆಸಲು ಮಕ್ಕಳನ್ನು ಕೂಡ ಕೆಲಸಕ್ಕೆ ಕಳಿಸುತ್ತಾರೆ. ಅಲ್ಲದೆ ಸ್ಲಂ ಪ್ರದೇಶಗಳಲ್ಲಿ ಅನಾರೋಗ್ಯವು ಹೆಚ್ಚಾಗಿರುತ್ತದೆ. ಹೊತ್ತಿನ ಊಟಕ್ಕೆ ಕಷ್ಟಪಡುವ ಮಂದಿ ಆರೋಗ್ಯದ ಕಡೆ ಸರಿಯಾಗಿ ಗಮನ ಕೊಡುವುದಿಲ್ಲ. ಆದ್ದರಿಂದ ಇಂತಹ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ನಿರ್ಧರಿಸಿದೆವು. ನಮ್ಮಲ್ಲಿರುವ ಜ್ಞಾನ ಮತ್ತು ಸಂಪತ್ತನ್ನು ಈ ಮಕ್ಕಳಿಗೆ ಧಾರೆ ಎರೆಯಲು ಶ್ರಮಿಸುತ್ತಿದ್ದೇವೆ ಎಂದು ಶರದ್ ಅವರು ಹೇಳಿದರು.

    ಪ್ರೌಢ ಶಿಕ್ಷಣದ ಬಳಿಕ ಓದಲು ಇಚ್ಛಿಸದ ಹೆಣ್ಣುಮಕ್ಕಳಿಗೆ ಈ ಶಾಲೆಯಲ್ಲಿ ಬಟ್ಟೆ ಹೊಲಿಯುವ ತರಬೇತಿಯನ್ನು ನೀಡಲಾಗುತ್ತಿದೆ. ಸ್ಲಂ ಪ್ರದೇಶಗಳಲ್ಲಿ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ. ಆದ್ದರಿಂದ ಆಗಾಗ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಇಲ್ಲಿ ಮಾಡಲಾಗುತ್ತದೆ. ಈ ಮೂಲಕ ಇಲ್ಲಿನ ಮಕ್ಕಳು ಮಾತ್ರವಲ್ಲ ಜನರಲ್ಲಿ ಕೂಡ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ.

    ಕಳೆದ 1 ವರ್ಷ ನಾವು ಸ್ವಚ್ಛತೆ, ನೈರ್ಮಲ್ಯ ಹೀಗೆ ಪ್ರಮುಖ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಹೇಳಿಕೊಟ್ಟಿದ್ದೇವೆ. ಶಾಲೆ ಆರಂಭಿಸಿದ ಕೆಲವು ತಿಂಗಳ ಬಳಿಕ ದಂಪತಿ ತಮ್ಮ ಟ್ರಸ್ಟ್‍ನ ಚಟುವಟಿಕೆಗಳನ್ನು ವಿಸ್ತರಿಸಿಸದೆವು. ಮೊದಲು ಕೇವಲ ಮೆಟ್ರೋ ಶೆಡ್‍ನ ಕೆಳಗೆ 50ಕ್ಕೂ ಹೆಚ್ಚು ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದರು. ಆ ಬಳಿಕ ಬೇರೆ ಸ್ಲಂ ಪ್ರದೇಶಗಳಲ್ಲಿನ ಮಕ್ಕಳಿಗೂ ಶಿಕ್ಷಣ ಕೊಡಬೇಕೆಂದು ತೀರ್ಮಾನಿಸಿದೆವು. ಇಲ್ಲಿ ಶಿಕ್ಷಣ ಕಲಿತ ಮಕ್ಕಳು ತಮ್ಮ ಮಗನಂತೆ ದೇಶಕ್ಕಾಗಿ ಕೊಡುಗೆ ನೀಡಬೇಕು. ಲಾಯರ್, ಎಂಜಿನಿಯರ್, ಪೈಲಟ್, ಜರ್ನಲಿಸ್ಟ್, ಯೋಧನಾಗಿ ಉತ್ತಮ ಪ್ರಜೆಗಳನ್ನಾಗಿ ಮಾಡಬೇಕು ಎಂಬ ಆಶಯವನ್ನು ಸವಿತಾ ಹೊಂದಿದ್ದಾರೆ.

    ನಮ್ಮ ಮಗ ಶಿಶಿರ್‍ನ ಶೌರ್ಯ ಮತ್ತು ತತ್ವವೇ ನಮಗೆ ಪ್ರೇರಣೆ. ನಮ್ಮ ಮಗನಿಗೆ ಗೌರವ ಸಲ್ಲಿಸಲು ಈ ಮಾರ್ಗವನ್ನು ನಾವು ಆಯ್ದುಕೊಂಡೆವು. ನಮ್ಮ ಮಗ ನಮ್ಮ ಕೆಲಸ ನೋಡಿ ಹೆಮ್ಮೆ ಪಡುತ್ತಾನೆ ಎಂದು ನಾನು ನಂಬಿದ್ದೇನೆ ಎಂದು ಸವಿತಾ ಅವರು ಖುಷಿಯನ್ನು ಹಂಚಿಕೊಂಡರು.

  • ಅತ್ತೆ ಮೇಲಿನ ಕೋಪಕ್ಕೆ 2 ಮಕ್ಕಳಿಗೆ ವಿಷವಿಕ್ಕಿ ತಾಯಿ ಆತ್ಮಹತ್ಯೆಗೆ ಯತ್ನ

    ಅತ್ತೆ ಮೇಲಿನ ಕೋಪಕ್ಕೆ 2 ಮಕ್ಕಳಿಗೆ ವಿಷವಿಕ್ಕಿ ತಾಯಿ ಆತ್ಮಹತ್ಯೆಗೆ ಯತ್ನ

    ಮಂಡ್ಯ: ಅತ್ತೆ ಮೇಲಿನ ಕೋಪಕ್ಕೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳಿಗೆ ವಿಷವಿಕ್ಕಿ ತಾನೂ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ತಾಯಿಯ ಕೋಪಕ್ಕೆ ಇಬ್ಬರು ಮಕ್ಕಳಲ್ಲಿ ಒಂದು ಮಗು ಸಾವನ್ನಪ್ಪಿದ್ದು, ಇನ್ನೋರ್ವ ಬಾಲಕನ ಸ್ಥಿತಿ ಗಂಭಿರವಾಗಿದೆ.

    ಜಿಲ್ಲೆಯ ಮಳವಳ್ಳಿ ತಾಲೂಕಿನ ದಳವಾಯಿಕೋಡಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದಳವಾಯಿಕೋಡಿಹಳ್ಳಿ ಗ್ರಾಮದ ನಿವಾಸಿ ಶಿವಪ್ಪ ಅವರ ಪತ್ನಿ ಸೌಜನ್ಯ(24) ಮಕ್ಕಳಿಗೆ ವಿಷ ಕುಡಿಸಿ, ತಾನೂ ಆತ್ಮಹತ್ಯಗೆ ಯತ್ನಿಸಿದ ತಾಯಿ. ಮೃತಪಟ್ಟ ಮಗುವನ್ನು ಲೋಹಿತ್(1) ಎಂದು ಗುರುತಿಸಲಾಗಿದ್ದು, ಇನ್ನೋರ್ವ ಮಗ ಪುನೀತ್(3) ಸ್ಥಿತಿ ಗಂಭಿರವಾಗಿದೆ.

    ಕಳೆದ 6 ವರ್ಷಗಳ ಹಿಂದೆ ಶಿವಪ್ಪ ಸೌಜನ್ಯರನ್ನು ಪ್ರೀತಿ ಮಾಡಿ ಮದುವೆಯಾಗಿದ್ದರು. ಸೌಜನ್ಯಗೆ ಅವರ ಅತ್ತೆ ಮಕ್ಕಳನ್ನು ಮತಾನಾಡಿಸೋದು, ಆಟವಾಡಿಸೋದು ಇಷ್ಟವಾಗುತ್ತಿರಲಿಲ್ಲ. ಇದೇ ಕಾರಣಕ್ಕೆ ಸೌಜನ್ಯ ಹಾಗೂ ಅತ್ತೆ ಮಧ್ಯೆ ಗಲಾಟೆ ನಡೆದಿತ್ತು. ಇದೇ ಸಿಟ್ಟಿನಲ್ಲಿದ್ದ ತಾಯಿ ಬುಧವಾರ ತನ್ನಿಬ್ಬರು ಮಕ್ಕಳಿಗೆ ವಿಷ ಕುಡಿಸಿ, ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ವಿಷ ಸೇವನೆಯಿಂದ ನರಳಾಡುತ್ತಿದ್ದ ಮೂವರನ್ನು ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ಸೇರಿಸಿದ್ದರು.

    ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಲೋಹಿತ್ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾನೆ. ಇತ್ತ ಪುನೀತ್ ಹಾಗೂ ತಾಯಿ ಸ್ಥಿತಿ ಕೂಡ ಗಂಭಿರವಾಗಿದ್ದು ಇಬ್ಬರೂ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.

  • ಹಣ ಕಟ್ಟಿದ್ರೆ ಚಿಕಿತ್ಸೆ ಎಂದ ವೈದ್ಯರು- ದುಡ್ಡಿಲ್ಲದೆ ಕಣ್ಣೀರಿಡುತ್ತಿರುವ ತಾಯಿ

    ಹಣ ಕಟ್ಟಿದ್ರೆ ಚಿಕಿತ್ಸೆ ಎಂದ ವೈದ್ಯರು- ದುಡ್ಡಿಲ್ಲದೆ ಕಣ್ಣೀರಿಡುತ್ತಿರುವ ತಾಯಿ

    ಬೆಳಗಾವಿ: ನೆರೆಯಲ್ಲಿ ಮನೆ ಕಳೆದುಕೊಂಡ ತಾಯಿಯೊಬ್ಬರಿಗೆ ಈಗ ಮಗನನ್ನು ಕಳೆದುಕೊಳ್ಳುವ ಭೀತಿ ಎದುರಾಗಿದೆ. ಆಸ್ಪತ್ರೆಗೆ ಹಣ ಕಟ್ಟಿಲ್ಲ ಎಂಬ ಕಾರಣಕ್ಕೆ ವೈದ್ಯರು ಚಿಕಿತ್ಸೆ ಸ್ಥಗಿತಗೊಳಿಸಿದ್ದು, ದುಡ್ಡಿಲ್ಲದೆ ತಾಯಿ ಕಣ್ಣೀರಿಡುತ್ತಿದ್ದಾರೆ.

    ಜಿಲ್ಲೆಯ ಗೋಕಾಕ್ ನಗರದ ಗುರುವಾರ ಪೇಟೆ ನಿವಾಸಿ ಸುಜಾತಾ ಅವರು ತಮ್ಮ ಹದಿನೇಳು ತಿಂಗಳ ಮಗ ಸುಪ್ರಜ್‍ಗೆ ಚಿಕಿತ್ಸೆ ಕೊಡಿಸಲಾಗದೇ ಪರದಾಡುತ್ತಿದ್ದಾರೆ. ಕಳೆದ 1 ವಾರದಿಂದ ಮಗು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು, 2 ದಿನಗಳ ಹಿಂದೆ ಮಗನನ್ನ ಬೆಳಗಾವಿಯ ಕೆಎಲ್‍ಇ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಅಲ್ಲಿ ಐಸಿಯುನಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆಸ್ಪತ್ರೆಗೆ ಹಣ ಕಟ್ಟದ ಕಾರಣಕ್ಕೆ ಮಗುವಿಗೆ ಚಿಕಿತ್ಸೆ ಕೊಡುವುದನ್ನು ವೈದ್ಯರು ನಿಲ್ಲಿಸಿದ್ದಾರೆ. ಹಣ ಕಟ್ಟದಿದ್ದರೆ ಚಿಕಿತ್ಸೆ ನೀಡುವುದಿಲ್ಲ, ಸದ್ಯ ಆಗಿರುವ ಬಿಲ್ ಕಟ್ಟಿ ಮಗನನ್ನ ಕರೆದುಕೊಂಡು ಹೋಗುವಂತೆ ವೈದ್ಯರು ತಾಕೀತು ಮಾಡಿದ್ದಾರೆ. ಆದರೆ ನನ್ನ ಬಳಿ ಹಣವಿಲ್ಲ ಎಂದು ತಾಯಿ ಅಳಲನ್ನು ತೋಡಿಕೊಂಡಿದ್ದಾರೆ.

    ಕಳೆದ ಎಂಟು ತಿಂಗಳ ಹಿಂದೆ ಪತಿಯನ್ನು ಕಳೆದುಕೊಂಡ ಸುಜಾತಾ ಅವರು, ಮೂರು ತಿಂಗಳ ಹಿಂದೆ ಘಟಪ್ರಭಾ ನದಿ ಪ್ರವಾಹಕ್ಕೆ ಇದ್ದ ಒಂದು ಮನೆಯನ್ನೂ ಕೂಡ ಕಳೆದುಕೊಂಡಿದ್ದಾರೆ. ಸದ್ಯ ತಗಡಿನ ಶೆಡ್‍ನಲ್ಲಿ ಸುಜಾತಾ ಹಾಗೂ ಅವರ ಮಗ ಜೀವನ ಸಾಗಿಸುತ್ತಿದ್ದಾರೆ. ಭೀಕರ ನೆರೆಯಲ್ಲಿ ಆಧಾರ್ ಕಾರ್ಡ್, ಪಡಿತರ ಚೀಟಿ ಹಾಗೂ ಇತರೆ ದಾಖಲೆಗಳು ಕೊಚ್ಚಿಹೋಗಿದೆ. ಹೀಗಾಗಿ ದಾಖಲೆ ನೀಡದೆ ಸರ್ಕಾರಿ ಸ್ಕಿಮ್ ಅನ್ವಯಿಸದ ಕಾರಣಕ್ಕೆ ಆಸ್ಪತ್ರೆ ಆಡಳಿತ ಮಂಡಳಿ, ಮೊದಲು ಹಣ ಕಟ್ಟಿ ಆಮೇಲೆ ಚಿಕಿತ್ಸೆ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಇತ್ತ ಹಣವಿಲ್ಲದೆ, ಅತ್ತ ಮಗುವನ್ನು ಕಳೆದುಕೊಳ್ಳುವ ಭೀತಿಯಲ್ಲಿ ತಾಯಿ ಜೀವಿ ಪರದಾಡುತ್ತಿದೆ.

    ಭೀಕರ ಪ್ರವಾಹ ಉಂಟು ಮಾಡಿದ ಅವಾಂತರ ಇನ್ನು ಸರಿಹೋಗಿಲ್ಲ. ಒಂದೆಡೆ ಮನೆಮಠ ಕಳೆದುಕೊಂಡು ಸಂತ್ರಸ್ತರ ಬದುಕು ಮೂರಾಬಟ್ಟೆಯಾಗಿದೆ. ಬಂದ ನೆರೆಯಲ್ಲಿ ಅವರು ತಮ್ಮ ಜೀವವನ್ನ ಉಳಿಸಿಕೊಳ್ಳಲು ಸಾಕಷ್ಟು ಕಷ್ಟ ಪಟ್ಟಿದ್ದಾರೆ. ಹೀಗಿರುವಾಗ ಪ್ರವಾಹದಲ್ಲಿ ಕೊಚ್ಚಿಹೋದ ದಾಖಲೆಗಳನ್ನು ಎಲ್ಲಿಂದ ತರುತ್ತಾರೆ ಎನ್ನುವ ಬಗ್ಗೆ ಆಸ್ಪತ್ರೆ ಆಡಳಿತ ಯೋಚಿಸಬೇಕು. ಮೊದಲೇ ನೊಂದು ಸುಣ್ಣವಾಗಿರುವ ಸಂತ್ರಸ್ತರ ಬಳಿ ಹಣ ಕೇಳಿದರೆ ಎಲ್ಲಿಂದ ತರುತ್ತಾರೆ ಎನ್ನುವುದನ್ನು ಯೋಚಿಸಬೇಕು. ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ತೆಗೆದುಕೊಂಡು ಸಂತ್ರಸ್ತ ಕುಟುಂಬಕ್ಕೆ ನೆರವಾಗಬೇಕು ಎಂದು ಜನರು ಆಗ್ರಹಿಸಿದ್ದಾರೆ.

  • ಆಸ್ತಾ ವರ್ಮಾ ಸ್ಫೂರ್ತಿ- ತಾಯಿಗೆ ವರ ಹುಡುಕ್ತಿರೋ ಮತ್ತೊಬ್ಬ ಯುವತಿ

    ಆಸ್ತಾ ವರ್ಮಾ ಸ್ಫೂರ್ತಿ- ತಾಯಿಗೆ ವರ ಹುಡುಕ್ತಿರೋ ಮತ್ತೊಬ್ಬ ಯುವತಿ

    ನವದೆಹಲಿ: ಇತ್ತೀಚೆಗೆ ಕಾನೂನು ವಿದ್ಯಾರ್ಥಿನಿ ಆಸ್ತಾ ವರ್ಮಾ, ತನ್ನ 50 ವರ್ಷದ ತಾಯಿಗೆ ವರಬೇಕು ಎಂದು ಟ್ವೀಟ್ ಮಾಡಿದ್ದು, ಸಾಕಷ್ಟು ವೈರಲ್ ಆಗಿತ್ತು. ಇದೀಗ ಆಸ್ತಾ ವರ್ಮಾ ಅವರಿಂದ ಸ್ಫೂರ್ತಿ ಪಡೆದು ಯುವತಿಯೊಬ್ಬಳು ತನ್ನ ತಾಯಿಗೂ ವರ ಹುಡುಕುತ್ತಿದ್ದಾಳೆ.

    ಮೋಹಿನಿ ವಿಗ್ ಎಂಬಾಕೆ ತನ್ನ ಅಮ್ಮನ ಜೊತೆಗಿರುವ ಸೆಲ್ಫಿ ಫೋಟೋವನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾಳೆ. ಅಲ್ಲದೆ 56 ವರ್ಷದ ನನ್ನ ತಾಯಿಗೆ ಸೂಕ್ತವಾದ ವರ ಬೇಕಾಗಿದ್ದು, ಹುಡುಕುತ್ತಿದ್ದೇನೆ. ವರ ಅಮ್ಮನ ಪ್ರೀತಿಯಲ್ಲಿ ಪಾಲುದಾರನಾಗಬೇಕು ಹಾಗೂ ಕಾಳಜಿಯುಳ್ಳವನಾಗಿರಬೇಕು ಎಂದು ಬರೆದುಕೊಂಡಿದ್ದಾಳೆ.

    https://twitter.com/mohini_vig/status/1193544558841253889

    ಇದರ ಜೊತೆಗೆ, ಆಸ್ತಾವರ್ಮಾ ಅವರಿಂದ ಸ್ಫೂರ್ತಿ ಪಡೆದು ನಾನು ನನ್ನ 56 ವರ್ಷದ ತಾಯಿಗೆ ಮತ್ತೆ ಮದುವೆ ಮಾಡಲು ಪ್ರಯತ್ನಿಸುತ್ತಿದ್ದೇನೆ. ಹೀಗಾಗಿ 55 ರಿಂದ 60 ವರ್ಷದ ಒಳಗಿನ ಸಸ್ಯಹಾರಿ, ಧೂಮಪಾನ, ಮದ್ಯ ಸೇವಿಸಬಾರದು ಹಾಗೂ ಉತ್ತಮ ನಡತೆಯುಳ್ಳ ಮನುಷ್ಯನಾಗಿರಬೇಕು ಎಂದು ಬರೆದುಕೊಂಡಿದ್ದಾಳೆ. ಇದನ್ನೂ ಓದಿ: 50 ವರ್ಷದ ಅಮ್ಮನಿಗೆ ವರ ಬೇಕಾಗಿದೆ- ಮಗಳ ಟ್ವೀಟ್ ವೈರಲ್

    ಇತ್ತೀಚೆಗಷ್ಟೇ ತಾಯಿಗೆ ವರ ಹುಡುಕಲು ಹೊರಟ ಆಸ್ತಾ ವರ್ಮಾ ಅವರ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಹಲವರ ಮನ ಕರಗುವಂತೆ ಮಾಡಿತ್ತು. ಇದೀಗ ಮೋಹಿನಿ ಟ್ವೀಟ್ ಗೂ ಇದೇ ರೀತಿಯ ಪ್ರತಿಕ್ರಿಯೆಗಳು ಬರುತ್ತಿದ್ದು, ಗುಡ್ ಲಕ್, ನಿನ್ನ ತಾಯಿಯ ಮುಂದಿನ ಪಯಣಕ್ಕೆ ದೇವರು ಒಳ್ಳೆ ಮಾಡಲಿ. ಆದಷ್ಟು ಬೇಗ ನೀನು ಅಂದುಕೊಂಡಂತೆ ಅಮ್ಮನಿಗೆ ಒಳ್ಳೆಯ ವರ ಸಿಗಲಿ ಎಂದು ಆಶೀರ್ವದಿಸಿದ್ದಾರೆ.

    https://twitter.com/AasthaVarma/status/1189915673897529345?ref_src=twsrc%5Etfw%7Ctwcamp%5Etweetembed%7Ctwterm%5E1189915673897529345&ref_url=https%3A%2F%2Fpublictv.jssplgroup.com%2Flooking-for-a-handsome-50-year-old-man-for-my-mother-girl-tweets%2Famp

  • ಪರೀಕ್ಷೆ ಬರೆಯಲು ಹೋದ ತಾಯಂದಿರು – ಮಕ್ಳನ್ನು ನೋಡ್ಕೊಂಡ ಪೇದೆಗಳಿಗೆ ಮೆಚ್ಚುಗೆ

    ಪರೀಕ್ಷೆ ಬರೆಯಲು ಹೋದ ತಾಯಂದಿರು – ಮಕ್ಳನ್ನು ನೋಡ್ಕೊಂಡ ಪೇದೆಗಳಿಗೆ ಮೆಚ್ಚುಗೆ

    ದಿಸ್ಪುರ್: ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ತರಗತಿ ಹೊರಗೆ ನಿಂತ ಬಾಲಕಿ- ಫೋಟೋ ವೈರಲ್ ಆಗ್ತಿದ್ದಂತೆ ಅದೇ ಶಾಲೆಯಲ್ಲಿ ದಾಖಲಾತಿ

    ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿಯಾಗುವುದು ಒಂದು ಕ್ರಿಯೆ. ನೀವು ಅದನ್ನು ಮಾಡಬೇಕಾಗುತ್ತದೆ. ಅಸ್ಸಾಂ ಪೊಲೀಸರು ದಾರಂಗ್ ಜಿಲ್ಲೆಯಲ್ಲಿ ಈ ಮಕ್ಕಳ ತಾಯಂದಿರು ಶಿಕ್ಷಕರ ಅರ್ಹತಾ ಪರೀಕ್ಷೆ ಬರೆಯಲು ಹೋಗಿದ್ದರು. ಈ ವೇಳೆ ಅವರವರ ಮಕ್ಕಳನ್ನು ಇಬ್ಬರು ಪೇದೆಗಳು ನೋಡಿಕೊಂಡಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಭಿಕ್ಷೆ ಬೇಡುವ ಮಕ್ಕಳಿಗಾಗಿ ಶಾಲೆ ತೆರೆದ ಪೊಲೀಸರು – 450 ಮಕ್ಕಳಿಗೆ ವಿದ್ಯಾಭ್ಯಾಸ

    ನವೆಂಬರ್ 10ರಂದು ಅಸ್ಸಾಂನಲ್ಲಿ ಈ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಆಯ್ಕೆಯಾದ ಶಿಕ್ಷಕರು ಮೊದಲನೇ ತರಗತಿಯಿಂದ 8ನೇ ತರಗತಿವರೆಗೂ ಕಲಿಸಲು ಅರ್ಹರಾಗುತ್ತಾರೆ. ಈ ಫೋಟೋ ವೈರಲ್ ಆಗುತ್ತಿದ್ದಂತೆ ಹಲವು ಮಂದಿ ಪೇದೆಗಳನ್ನು ಹೊಗಳಿದ್ದಾರೆ. ಕೆಲವರು ‘ಸೆಲ್ಯೂಟ್’ ಎಂದು ಟ್ವೀಟ್ ಮಾಡಿದ್ದಾರೆ. ಮತ್ತೆ ಕೆಲವರು ‘ಸೆಲ್ಯೂಟ್ ಮ್ಯಾಮ್. ನೀವು ಸೂಪರ್ ಮೇಡಂ’ ಎಂದು ಟ್ವೀಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

  • ಮಗುವನ್ನು ಕಚ್ಚಿ ಕಚ್ಚಿ ತಿಂದ ನಾಯಿಗಳು

    ಮಗುವನ್ನು ಕಚ್ಚಿ ಕಚ್ಚಿ ತಿಂದ ನಾಯಿಗಳು

    ತೈವಾನ್: ತಾಯಿಯೊಬ್ಬಳು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಿ ಮನೆಯಿಂದ ಹೊರಗೆ ಎಸೆದಿದ್ದ ನವಜಾತ ಶಿಶುವನ್ನು ನಾಯಿಗಳು ಕಚ್ಚಿ ಕಚ್ಚಿ ತಿಂದ ಘಟನೆ ತೈವಾನ್‍ನಲ್ಲಿ ನಡೆದಿದೆ.

    ದಕ್ಷಿಣ ತೈವಾನ್‍ನ ಕಾವೋಸಿಯುಂಗ್‍ನ ನಿವಾಸಿ ಕ್ಸಿಯಾವೋ ಮೇ (19) ಮಗುವನ್ನು ಎಸೆದಿದ್ದ ತಾಯಿ. ಕ್ಸಿಯಾವೋ ಮಾನಸಿಕ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ವರದಿಯಾಗಿದೆ.

    ದಕ್ಷಿಣ ತೈವಾನ್‍ನ ಕಾವೋಸಿಯುಂಗ್‍ನಲ್ಲಿನ ಬಂಜರು ಭೂಮಿಯಲ್ಲಿ ಬೆಳೆದಿದ್ದ ಎತ್ತರದ ಕಳೆಗಳ ಮಧ್ಯೆ ನವಜಾತ ಶಿಶುವಿನ ಮೂಳೆಗಳು ಪತ್ತೆಯಾಗಿದ್ದವು. ಇದನ್ನು ನೋಡಿದ್ದ ತೈವಾನ್‍ನ ಪೊಲೀಸರು, ಯಾರೋ ಮಗುವನ್ನು ಕೊಲೆಗೈದು, ಎಸೆದು ಹೋಗಿದ್ದಾರೆ ಎಂಬ ಶಂಕೆ ವ್ಯಕ್ತಪಡಿಸಿದ್ದರು. ಆರೋಪಿಗಳ ಪತ್ತೆಗಾಗಿ ತನಿಖೆ ಆರಂಭಿಸಿದ್ದರು.

    ಕ್ಸಿಯಾವೋ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ವ್ಯಕ್ತಿಯನ್ನು ಪ್ರೀತಿಸಿ ಮದುವೆ ಆಗಿದ್ದಳು. ಹಣಕ್ಕಾಗಿ ಕಷ್ಟಪಡುತ್ತಿದ್ದ ಕ್ಸಿಯಾವೋ ದಂಪತಿ ಕಾವೋಸಿಯುಂಗ್‍ನ ಬಾಡಿಗೆ ಫ್ಲ್ಯಾಟ್‍ನಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು. ಆದರೆ ಮಾನಸಿಕವಾಗಿ ಕುಂದಿದ್ದ ಕ್ಸಿಯಾವೋ ಅಕ್ಟೋಬರ್ 2ರಂದು ಮಗುವಿಗೆ ಜನ್ಮ ನೀಡಿದ್ದಳು. ಬಳಿಕ ಆ ಮಗುವನ್ನು ಪ್ಲಾಸ್ಟಿಕ್ ಬ್ಯಾಗ್‍ನಲ್ಲಿ ತುಂಬಿ ಮನೆಯ ಹಿಂಭಾಗದಲ್ಲಿ ಎಸೆದಿದ್ದಳು.

    ಕೃತ್ಯದ ಬಳಿಕ ಈ ಜೋಡಿಯು ತೈವಾನ್‍ಗೆ ಓಡಿಹೋಗಿ ಸುಮಾರು ಒಂದು ತಿಂಗಳು ಇಂಟರ್ನೆಟ್ ಕೆಫೆಯಲ್ಲಿ ತಲೆಮರೆಸಿಕೊಂಡಿದ್ದರು. ಈ ಕುರಿತು ಮಾಹಿತಿ ಕಲೆ ಹಾಕಿದ್ದ ಪೊಲೀಸರು ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಿದ್ದರು. ಕೆಲ ದಿನಗಳ ಹಿಂದೆಯಷ್ಟೇ ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

    ನಿನ್ನ ಮಗು ಎಲ್ಲಿದೆ ಎಂದು ಪೊಲೀಸರು ವಿಚಾರಣೆ ವೇಳೆ ಕ್ಸಿಯಾವೋಗೆ ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಆರೋಪಿಯು, ಆ ಮಗುವನ್ನು ಹುಟ್ಟಿದ ದಿನವೇ ಎಸೆದಿದ್ದೇನೆ ಎಂದು ಸತ್ಯ ಒಪ್ಪಿಕೊಂಡಿದ್ದಾಳೆ. ಬಳಿಕ ಮಹಿಳೆ ತಿಳಿಸಿದ ಜಾಗದಲ್ಲಿ ಪರಿಶೀಲನೆ ನಡೆಸಿದಾಗ ಮಗುವಿನ ಅವಶೇಷಗಳನ್ನು ಪತ್ತೆಯಾಗಿವೆ.