Tag: mother

  • ಸ್ಯಾಂಡಲ್‍ವುಡ್ ಗೆ ಐಟಿ ಶಾಕ್, ಇತ್ತ ಡಿಕೆಶಿ ತಾಯಿಗೂ ಶಾಕ್

    ಸ್ಯಾಂಡಲ್‍ವುಡ್ ಗೆ ಐಟಿ ಶಾಕ್, ಇತ್ತ ಡಿಕೆಶಿ ತಾಯಿಗೂ ಶಾಕ್

    ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸ್ಯಾಂಡಲ್‍ವುಡ್ ನಟರ ಮನೆಯ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಶಾಕ್ ಕೊಟ್ಟಿದ್ದರೆ, ಇತ್ತ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರಿಗೂ ಐಟಿ ಶಾಕ್ ಕೊಟ್ಟಿದೆ.

    ಸಚಿವ ಡಿ.ಕೆ. ಶಿವಕುಮಾರ್ ತಾಯಿ ಗೌರಮ್ಮ ಅವರಿಗೆ ತೆರಿಗೆ ಇಲಾಖೆ ನೋಟಿಸ್ ಕಳುಹಿಸಿದೆ. ಗೌರಮ್ಮ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಕನಕಪುರದ ದೊಡ್ಡ ಆಲಹಳ್ಳಿಯ ನಿವಾಸದಲ್ಲಿ ಐಟಿ ಅಧಿಕಾರಿಗಳು ನೋಟಿಸ್ ಅಂಟಿಸಿ ಹೋಗಿದ್ದಾರೆ. ಇದನ್ನೂ ಓದಿ: Exclusive: ಡಿಕೆ ಶಿವಕುಮಾರ್ ತಾಯಿ ಗೌರಮ್ಮಗೆ ಐಟಿ ಕೇಳಿದ ಪ್ರಶ್ನೆಗಳು ಏನು..?

    2017ರ ನವೆಂಬರ್ 6 ರಂದು ಡಿಕೆ ಶಿವಕುಮಾರ್ ಪತ್ನಿ ಉಷಾ, ಸಹೋದರ ಡಿ ಕೆ ಸುರೇಶ್, ತಾಯಿ ಗೌರಮ್ಮ, ಇಬ್ಬರು ಪುತ್ರಿಯರನ್ನು ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಎಂಎಲ್‍ಸಿ ರವಿ, ಡಿಕೆಶಿ ಮಾವನ ಮಗ, ಡಿಕೆಶಿ ತಾಯಿ ಗೌರಮ್ಮ ಅವರ ಅಣ್ಣನ ಮಗ, ದವನಂ ಜ್ಯುವೆಲ್ಲರ್ಸ್ ಮಾಲೀಕ ಹರೀಶ್, ಶರ್ಮಾ ಟ್ರಾವೆಲ್ಸ್ ಮಾಲೀಕ ಸುನಿಲ್ ಶರ್ಮಾ, ಗ್ಲೋಬಲ್ ಕಾಲೇಜು ನಿರ್ದೇಶಕ ನಂದೀಶ್ ಸೇರಿ ಒಟ್ಟು 15 ಮಂದಿ ವಿಚಾರಣೆಗೆ ಹಾಜರಾಗಿ ಐಟಿ ಅಧಿಕಾರಿಗಳ ಪ್ರಶ್ನೆ ಉತ್ತರ ನೀಡಿದ್ದರು.

    ಕುಟುಂಬ ಸದಸ್ಯರು ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾದ ಬಳಿಕ ಅಂದು ಪ್ರತಿಕ್ರಿಯೆ ನೀಡಿದ್ದ ಡಿಕೆ ಶಿವಕುಮಾರ್, ನಾನು ತೆರೆದ ಪುಸ್ತಕ, ನಾನು ಸಾಕಷ್ಟು ವಿಚಾರಣೆ ನೋಡಿದ್ದೇನೆ. ಜಾರಿ ನಿರ್ದೇಶನಾಲಯ(ಇಡಿ), ಸಿಬಿಐ ಕೊಡಬೇಕು ಎಂದು ಇದ್ದರೆ ಕೊಡಲಿ. ನಾನು ಯಾವುದಕ್ಕೂ ಭಯ ಪಡುವುದಿಲ್ಲ ಎಂದು ಹೇಳಿದ್ದರು.

    ತನಿಖೆಗೆ ನಾನು ನನ್ನ ಕುಟುಂಬದವರು ಸಹಕಾರ ನೀಡಿದ್ದೇವೆ. ನ್ಯಾಯಯುತವಾಗಿ ತನಿಖೆ ನಡೆಯುವ ವಿಶ್ವಾಸವಿದೆ. ನಾವು ಸಂವಿಧಾನ ಒಪ್ಪಿದ್ದೇವೆ. ಕಾನೂನಿಗೆ ಗೌರವ ಕೊಡುತ್ತೇನೆ. ನಾನೊಬ್ಬ ಜವಾಬ್ದಾರಿಯುತ ವ್ಯಕ್ತಿಯಾಗಿದ್ದು ಯಾವುದನ್ನು ಮುಚ್ಚಿಡಲ್ಲ. ಅಧಿಕಾರಿಗಳ ಪ್ರಶ್ನೆಗೆ ಉತ್ತರ ನೀಡುವುದು ನಮ್ಮ ಕರ್ತವ್ಯ. ಐಟಿ ಅಧಿಕಾರಿಗಳಿಗೆ ನಾವು ಈ ಹಿಂದೆ ನೀಡಿದ ಮಾಹಿತಿ ಸಾಲದೇ ಇದ್ದಿದ್ದಕ್ಕೆ ಇಂದು ನಮ್ಮನ್ನು ವಿಚಾರಣೆಗೆ ಕರೆಸಿದ್ದಾರೆ ಎಂದು ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತಾಯಿ ಬಿಟ್ಟು ಹೋದ ಮಗುವಿಗೆ ಹಾಲುಣಿಸಿದ ಮಹಿಳಾ ಪೇದೆ

    ತಾಯಿ ಬಿಟ್ಟು ಹೋದ ಮಗುವಿಗೆ ಹಾಲುಣಿಸಿದ ಮಹಿಳಾ ಪೇದೆ

    ಹೈದರಾಬಾದ್: ತಾಯಿ ಬಿಟ್ಟು ಹೋಗಿದ್ದ ಪುಟ್ಟ ಮಗುವಿಗೆ ಆಂಧ್ರ ಪ್ರದೇಶದ ಮಹಿಳಾ ಪೇದೆಯೊಬ್ಬರು ಹಾಲುಣಿಸಿ ಮಾತೃ ಕಾಳಜಿ ತೋರಿಸಿ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

    ಪೇದೆ ಕೆ.ಪ್ರಿಯಾಂಕ ಹಾಗೂ ಆಕೆಯ ಪತಿ ರವೀಂದರ್ ಮಗುವಿನ ಬಗ್ಗೆ ಕಾಳಜಿ ತೋರಿದ್ದಾರೆ. ಈ ಪೊಲೀಸ್ ದಂಪತಿಯ ನಿಸ್ವಾರ್ಥ ಸೇವೆಗೆ ಸಾಮಾಜಿಕ ಜಾಲತಾಣದಲ್ಲಿ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಉಸ್ಮಾನಿಯಾ ಆಸ್ಪತ್ರೆ ಬಳಿ ಮದ್ಯದ ಮತ್ತಿನಲ್ಲಿದ್ದ ಶಬನಾ ಬೇಗಂ ಎಂಬ ಮಹಿಳೆ ತನ್ನ ಎರಡು ವರ್ಷದ ಮಗುವನ್ನು ಅಪರಿಚಿತ ವ್ಯಕ್ತಿಗೆ ಕೊಟ್ಟು, ಕೆಲವೇ ನಿಮಿಷದಲ್ಲಿ ಮರಳಿ ಬರುವುದಾಗಿ ಹೇಳಿ ಹೋಗಿದ್ದಾಳೆ. ಆಕೆಯ ಮಾತು ನಂಬಿದ ವ್ಯಕ್ತಿ ಮಗುವನ್ನು ಎತ್ತಿಕೊಂಡಿದ್ದಾನೆ. ಆದರೆ ಮಗು ಕೊಟ್ಟು ಹೋದ ಮಹಿಳೆ ಬಹಳ ಸಮಯ ಕಳೆದರೂ ಮಹಿಳೆ ಬಾರದೇ ಇದ್ದಾಗ ಆತ ಮಗುವನ್ನು ಮನೆಗೆ ಕರೆದುಕೊಂಡು ಹೋಗಿ ಹಸಿವಿನಿಂದ ಅಳುತ್ತಿದ್ದ ಮಗುವಿಗೆ ಹಾಲು ಕುಡಿಸಿದ್ದಾನೆ. ಆದರೆ ಅದು ಕುಡಿಯದೇ ಜೋರಾಗಿ ಅಳಲು ಪ್ರಾರಂಭಿಸಿದೆ. ಮಗುವನ್ನು ತನ್ನ ಬಳಿ ಇಟ್ಟುಕೊಳ್ಳುವುದು ಅಪರಾಧ ಎಂದು ಅರಿತ ವ್ಯಕ್ತಿ ಸೋಮವಾರ ಸಮೀಪದ ಅಫ್ಜಲ್‍ಗಂಜ್ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾನೆ.

    ಠಾಣೆಯಲ್ಲಿಯೂ ಮಗು ಅಳುವುದನ್ನು ಕಂಡ ಸಿಬ್ಬಂದಿ ಸಮಾಧಾನ ಮಾಡಲು ಹರಸಾಹಸ ಪಟ್ಟಿದ್ದಾರೆ. ಆದರೆ ಮಗು ಮಾತ್ರ ತನ್ನ ಅಳುವನ್ನು ನಿಲ್ಲಿಸಿರಲಿಲ್ಲ. ಹಾಲು ಕುಡಿಸಲು ಮುಂದಾದರೂ ಕುಡಿಯುತ್ತಿರಲಿಲ್ಲ. ಅದೇ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರವೀಂದರ್ ಎಂಬವವರು ಮಗುವಿನ ವಿಚಾರವಾಗಿ ಪತ್ನಿ ಪ್ರಿಯಾಂಕಾ ಅವರಿಗೆ ಹೇಳಿದ್ದಾರೆ. ಮಗುವಿನ ವಿಚಾರ ಕೇಳಿದ ಪ್ರಿಯಾಂಕ ರಾತ್ರಿ 10.30ರ ವೇಳೆಗೆ ಠಾಣೆಗೆ ಬಂದು ಮಗುವಿಗೆ ಹಾಲುಣಿಸಿದ್ದಾರೆ ಎಂದು ಹೈದರಾಬಾದ್ ಪೊಲೀಸ್ ಆಯುಕ್ತ ಅಂಜನಿ ಕುಮಾರ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 2018ರಲ್ಲಿ ಸಿನಿ ಕುಟುಂಬಕ್ಕೆ ಪಾದಾರ್ಪಣೆ ಮಾಡಿದ ಮುದ್ದು ಕಂದಮ್ಮಗಳು

    2018ರಲ್ಲಿ ಸಿನಿ ಕುಟುಂಬಕ್ಕೆ ಪಾದಾರ್ಪಣೆ ಮಾಡಿದ ಮುದ್ದು ಕಂದಮ್ಮಗಳು

    ಸಿನಿಮಾ ತಾರೆಯರ ಬಗ್ಗೆ ತಿಳಿದುಕೊಳ್ಳಲು ಬಹುತೇಕರು ಇಷ್ಟಪಡುತ್ತಾರೆ. ತೆರೆಯ ಮೇಲೆ ಅಬ್ಬರಿಸಿ, ಬೊಬ್ಬಿರಿಯುವ ತಾರೆಯರ ಖಾಸಗಿ ಜೀವನ ಹೇಗಿರುತ್ತೆ ಎಂಬ ಕುತೂಹಲವನ್ನು ಹೊಂದಿರುತ್ತಾರೆ. 2018ರಲ್ಲಿ ಹಲವು ಕಲಾವಿದರು ಸಾಂಸಾರಿಕ ಜೀವನಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಅಂತೆಯೇ ಹಲವು ಕಲಾವಿದರು ನಿಜ ಜೀವನದಲ್ಲಿ ಪೋಷಕ ಸ್ಥಾನಕ್ಕೆ ಪದವಿಯನ್ನು ಪಡೆದುಕೊಂಡಿದ್ದಾರೆ. ಈ ವರ್ಷ ತಂದೆ/ತಾಯಿ ಸ್ಥಾನಕ್ಕೆ ಪದವಿ ಪಡೆದ ತಾರೆಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಇದನ್ನೂ ಓದಿ: 2018ರಲ್ಲಿ ಸಿನಿಮಾರಂಗ ಕಳೆದುಕೊಂಡ ಕಲಾವಿದರು

    1. ನಿಖಿತಾ ತುಕ್ರಾಲ್:
    ನಿಖಿತಾ 2016 ಅಕ್ಟೋಬರ್ 16 ರಂದು ಮುಂಬೈ ಮೂಲದ ಉದ್ಯಮಿ ಗಗನ್ ದೀಪ್ ಸಿಂಗ್ ಮಾಗೋ ಅವರನ್ನು ಮದುವೆಯಾಗಿದ್ದರು. ನಿಖಿತಾ ತಮ್ಮ ಮಗುವಿನೊಂದಿಗೆ ಇರುವ ಫೊಟೋವನ್ನು ಫೆಬ್ರವರಿ 28ರಂದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಿದ್ದರು. ನಿಖಿತಾ ಮಗುವಿಗೆ `ಜಸ್ಮಿರಾ’ ಎಂದು ಹೆಸರಿಟ್ಟಿದ್ದು, ನಿಖಿತಾ ಸ್ಯಾಂಡಲ್‍ವುಡ್ ನಲ್ಲಿ ದರ್ಶನ್, ಸುದೀಪ್ ಮತ್ತು ಪುನೀತ್ ರಾಜ್‍ಕುಮಾರ್ ಸ್ಟಾರ್ ಗಳ ಜೊತೆ ನಾಯಕಿಯಾಗಿ ನಟಿಸಿದ್ದು, ಬಿಗ್ ಬಾಸ್ ಸೀಸನ್ ಒಂದರಲ್ಲಿ ಸ್ಪರ್ಧಿಸಿದ್ದರು.

    2. ಸನ್ನಿ ಲಿಯೋನ್:
    2017ರಲ್ಲಿ ನಿಶಾ ಎಂಬ ಹೆಣ್ಣು ಮಗುವನ್ನು ದತ್ತು ಪಡೆದುಕೊಂಡಿದ್ದ ಬಾಲಿವುಡ್ ಮಾದಕ ಚೆಲುವೆ ಸನ್ನಿ ಲಿಯೋನ್ ಬಾಡಿಗೆ ತಾಯ್ತನದ ಮೂಲಕ ಮತ್ತೆರಡು ಮಕ್ಕಳಿಗೆ ತಾಯಿಯಾದ್ರು. ಮಾರ್ಚ್ 5ರಂದು ಸನ್ನಿ ಲಿಯೋನ್, ನಾನು ಮತ್ತು ಡೇನಿಯಲ್ ಮಕ್ಕಳಿಗಾಗಿ ಬಾಡಿಗೆ ತಾಯಿಯ ಮೊರೆ ಹೋಗಿದ್ದೇವೆ. ಇಂದು ನಮ್ಮ ಕುಟುಂಬ ಪರಿಪೂರ್ಣವಾಗಿದ್ದು, ಮಕ್ಕಳಿಗೆ ಕಿರೆನ್ ಮತ್ತು ನೋಹಾ ಎಂದು ಹೆಸರಿಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು.

    3. ಅನು ಪ್ರಭಾಕರ್:
    ಸ್ಯಾಂಡಲ್‍ವುಡ್ ನಟಿ ಅನು ಪ್ರಭಾಕರ್ ಸ್ವಾತಂತ್ರ್ಯ ದಿನಾಚರಣೆಯಂದೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ನಟಿ ಅನು ಪ್ರಭಾಕರ್ ಹಾಗೂ ನಟ ರಘು ಮುಖರ್ಜಿ ಅವರು 2016 ಏಪ್ರಿಲ್ 25 ರಂದು ಕುಟುಂಬ ಸದಸ್ಯರ ಸಮ್ಮುಖದಲ್ಲಿ ಮದುವೆಯಾಗಿದ್ದರು. ಇಬ್ಬರಿಗೂ ಇದು ಎರಡನೇ ಮದುವೆಯಾಗಿದೆ. ಇದನ್ನೂ ಓದಿ: 2018ರ ಸಿನಿ ಲೋಕದ ಸುಂದರ ಪ್ರೇಮ ಕಹಾನಿಗಳು

    4. ಹೇಮಾ ಪಂಚಮುಖಿ:
    ‘ಅಮೆರಿಕಾ ಅಮೆರಿಕಾ’ ಚಿತ್ರದಿಂದ ನಾಯಕಿಯಾಗಿ ಗುರುತಿಸಿಕೊಂಡ ನಟಿ ಹೇಮಾ ಪಂಚಮುಖಿ ಸೆಪ್ಟೆಂಬರ್ ನಲ್ಲಿ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ನಟಿ ಹೇಮಾ ಅವರಿಗೆ ಈಗಾಗಲೇ ಒಬ್ಬಳು ಮಗಳಿದ್ದಾಳೆ. ಹೇಮಾ ಭರತನಾಟ್ಯ ಅಭಿನೇತ್ರಿಯಾಗಿದ್ದು, ‘ರಂಗೋಲಿ’ ಚಿತ್ರದ ನಟ ಪ್ರಶಾಂತ್ ಗೋಪಾಲ್ ಅವರ ಜೊತೆ ಎರಡನೇ ಮದುವೆ ಮಾಡಿಕೊಂಡಿದ್ದರು. ಹೇಮಾ ಅಮೆರಿಕಾ ಅಮೆರಿಕಾ, ದೊರೆ, ಸಂಭ್ರಮ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಸದ್ಯಕ್ಕೆ ಹೇಮಾ ಹಾಗೂ ಅವರ ಪತಿ ಪ್ರಶಾಂತ್ ನಾಟ್ಯ ಶಾಲೆ ಮೂಲಕ ಮಕ್ಕಳಿಗೆ ನೃತ್ಯ ಹೇಳಿಕೊಡುತ್ತಿದ್ದಾರೆ.

    5. ನೇಹಾ ಧುಪಿಯಾ:
    ಮದುವೆಯಾದ ಆರು ತಿಂಗಳಿಗೆ ನಟಿ ನೇಹಾ ಧುಪಿಯಾ ಹೆಣ್ಣು ಮಗುವಿಗೆ ನವೆಂಬರ್ 18ರಂದು ಜನ್ಮ ನೀಡಿದ್ದರು. ನೇಹಾ ಧುಪಿಯಾ ತನ್ನ ಬಹುಕಾಲದ ಗೆಳೆಯ ಅಂಗದ್ ಬೇಡಿ ಜೊತೆ ಮೇ ತಿಂಗಳಲ್ಲಿ ಯಾರಿಗೂ ತಿಳಿಸದೇ ಖಾಸಗಿಯಾಗಿ ನವದೆಹಲಿಯ ಗುರುದ್ವಾರದಲ್ಲಿ ಮದುವೆ ಆಗಿದ್ದರು. ಮದುವೆಯಾಗಿ ಕೆಲವೇ ತಿಂಗಳಲ್ಲಿ ಅಂಗದ್ ತಮ್ಮ ಪತ್ನಿ ನೇಹಾ ಗರ್ಭಿಣಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು

    6. ಅಜಯ್ ರಾವ್:
    ಸ್ಯಾಂಡಲ್‍ವುಡ್ ಕೃಷ್ಣ ಎಂದೇ ಖ್ಯಾತರಾಗಿರುವ ಅಜಯ್ ರಾವ್ ನವೆಂಬರ್ 23ರಂದು ಹೆಣ್ಣು ಮಗುವಿಗೆ ತಂದೆಯಾದರು. ನಗರದ ಖಾಸಗಿ ಆಸ್ಪತ್ರೆಯಲ್ಲಿ ಸ್ವಪ್ನ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಅಜಯ್ ಅಂದೇ ಸಾಮಾಜಿಕ ಜಾಲತಾಣದಲ್ಲಿ ಮಗುವಿನ ಫೋಟೋ ಹಾಕಿಕೊಂಡು ತಮ್ಮ ಸಂತಸವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು.

    7. ಯಶ್:
    ಚಂದನವನದ ಮಿಸ್ಟರ್ ರಾಮಾಚಾರಿ ಡಿಸೆಂಬರ್ 2ರಂದು ಹೆಣ್ಣು ಮಗುವಿನ ತಂದೆಯಾದರು. ಪತ್ನಿ ಸ್ಯಾಂಡಲ್‍ವುಡ್ ಸಿಂಡ್ರೆಲಾ ರಾಧಿಕಾ ಪಂಡಿತ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಶಂಕರ್ ಬಿದರಿಗೆ ಮಾತೃ ವಿಯೋಗ

    ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಶಂಕರ್ ಬಿದರಿಗೆ ಮಾತೃ ವಿಯೋಗ

    ಬಾಗಲಕೋಟೆ: ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಅವರ ತಾಯಿ ನಿಧನರಾಗಿದ್ದಾರೆ. ಶ್ರೀಮತಿ ಗುರಬಾಯಿ ಮಹಾದೇವಪ್ಪ ಬಿದರಿ(83) ಬನಹಟ್ಟಿ ಮನೆಯಲ್ಲಿ ನಿಧನರಾಗಿದ್ದಾರೆ.

    ಇಂದು ಬೆಳಗ್ಗಿನ ಜಾವ ಸುಮಾರು 4 ಗಂಟೆಗೆ ತಮ್ಮ ಕುಟುಂಬದವರನ್ನು ಅಗಲಿದ್ದಾರೆ. ಗುರಬಾಯಿ ಮಹಾದೇವಪ್ಪ ಬಿದರಿ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ 6 ಜನ ಗಂಡು ಮಕ್ಕಳು ಹಾಗೂ 3 ಜನ ಹೆಣ್ಣು ಮಕ್ಕಳಿದ್ದಾರೆ. ಈ ಎಲ್ಲ ಮಕ್ಕಳಲ್ಲಿ ಶಂಕರ್ ಬಿದರಿ ಅವರು ಹಿರಿಯರಾಗಿದ್ದರು.

    ಈಗಾಗಲೇ ತನ್ನ ತಂದೆ ಅವರನ್ನು ಕಳೆದುಕೊಂಡ ಶಂಕರ್ ಬಿದರಿ ಅವರು ಈಗ ತಮ್ಮ ತಾಯಿಯನ್ನು ಕೂಡ ಕಳೆದುಕೊಂಡಿದ್ದಾರೆ. ಇಂದು ಸಂಜೆ 5 ಗಂಟೆಗೆ ಯಲ್ಲಟ್ಟಿ ತೋಟದ ಮನೆಯಲ್ಲಿ ಅಂತ್ಯಸಂಸ್ಕಾರ ನಡೆಸಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 3 ತಿಂಗ್ಳ ಹಿಂದೆ ಮೃತಪಟ್ಟ ಮಗನ ಮೃತದೇಹಕ್ಕಾಗಿ ಈಗ್ಲೂ ಕಾಯ್ತಿದ್ದಾರೆ ಅಮ್ಮ!

    3 ತಿಂಗ್ಳ ಹಿಂದೆ ಮೃತಪಟ್ಟ ಮಗನ ಮೃತದೇಹಕ್ಕಾಗಿ ಈಗ್ಲೂ ಕಾಯ್ತಿದ್ದಾರೆ ಅಮ್ಮ!

    ಲಕ್ನೋ: ತಮ್ಮ 25 ವರ್ಷದ ಮಗ ಮೂರು ತಿಂಗಳ ಹಿಂದೆ ಸೌದಿ ಅರೇಬಿಯಾದಲ್ಲಿ ಮೃತಪಟ್ಟಿದ್ದು, ಇನ್ನೂ ಆತನ ಮೃತದೇಹ ತವರಿಗೆ ವಾಪಸ್ಸಾಗಿಲ್ಲ. ಹೀಗಾಗಿ ಸೆಪ್ಟೆಂಬರ್ ತಿಂಗಳಿನಿಂದ ತಾಯಿ, ಮಗನ ಮೃತದೇಹಕ್ಕಾಗಿ ಕಾಯುತ್ತಿರುವ ಮನಕಲಕುವ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ.

    ಮೃತನ ಕುಟುಂಬಸ್ಥರು ಅಮೇಥಿ ಜಿಲ್ಲೆಯ ಬಝಾರ್ ಶುಕುಲ್ ಪೊಲೀಸ್ ಠಾಣೆಗೆ ಮಗ ದಿನೇಶ್ ಕುಮಾರ್ ಸಿಂಗ್ ಮೃತದೇಹಕ್ಕಾಗಿ ಪತ್ರಗಳ ಮೇಲೆ ಪತ್ರ ಬರೆದು ಸುಸ್ತಾಗಿದ್ದಾರೆ. ತಾಯಿ ತನ್ನ ಇಬ್ಬರು ನಿರುದ್ಯೋಗಿಗಳಾಗಿರುವ ಗಂಡು ಮಕ್ಕಳ ಜೊತೆ ಮನೆಗೆ ಆಧಾರ ಸ್ತಂಭವಾಗಿದ್ದ ಮಗನ ಮೃತದೇಹವನ್ನು ಕಾಣಲು ನಿದ್ದೆಗೆಟ್ಟು ಕಾಯುತ್ತಿದ್ದಾರೆ.

    2018ರ ಜನವರಿ ತಿಂಗಳಿನಲ್ಲಿ ಸಿಂಗ್ ಉದ್ಯೋಗಕ್ಕಾಗಿ ಸೌದಿ ಅರೇಬಿಯಾಕ್ಕೆ ತೆರಳಿದ್ದನು. ಅಲ್ಲಿ ದಮ್ಮಾಮ್ ನಗರದಲ್ಲಿರುವ ಖಾಸಗಿ ಕಂಪನಿಯೊಂದರಲ್ಲಿ ಚಾಲಕನಾಗಿ ಕೆಲಸಕ್ಕೆ ಸೇರಿದ್ದನು. ಸೆಪ್ಟೆಂಬರ್ 23ರಂದು ಸಿಂಗ್ ಗೆಳೆಯನೊಬ್ಬ ಕರೆ ಮಾಡಿ, ಹೃದಯಾಘಾತವಾಗಿ ಮೃತಪಟ್ಟಿರುವುದಾಗಿ ಮಾಹಿತಿ ನಿಡಿದ್ದಾನೆ. ಅಲ್ಲದೇ ಆತನ ಮೃತದೇಹವನ್ನು ತವರಿಗೆ ಕಳುಹಿಸಲು ಎಲ್ಲಾ ಸಿದ್ಧತೆಗಳನ್ನು ನಡೆಸುತ್ತಿರುವುದಾಗಿಯೂ ಹೇಳಿದ್ದಾನೆ ಅಂತ ದಿನೇಶ್ ತಾಯಿ ಪ್ರಭಾ ದೇವಿ ಕಣ್ಣೀರು ಹಾಕುತ್ತಾ ರಾಷ್ಟ್ರೀಯ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

    ನನ್ನ ದುರಾದೃಷ್ಟವೋ ಏನೋ, ಇದೂವರೆಗೂ ನನ್ನ ಮಗನ ಶವವನ್ನು ಕಣ್ಣಾರೆ ನೋಡಲು ತವರಿಗೆ ವಾಪಸ್ಸಾಗಿಲ್ಲ ಅಂತ ಪ್ರಭಾ ಗದ್ಗದಿತರಾದ್ರು.

    ಆತ ಸೌದಿಯಲ್ಲಿ ತಿಂಗಳಿಗೆ 90 ಸಾವಿರ ಸಂಪಾದನೆ ಮಾಡುತ್ತಿದ್ದನು. ಅದರಲ್ಲಿ 50 ಸಾವಿರ ಮನೆಗೆ ಕಳುಹಿಸುತ್ತಿದ್ದನು. ಈ ಮೂಲಕ ಮನೆಗೆ ಆಧಾರಸ್ತಂಭವಾಗಿದ್ದನು. ನನ್ನ ದೊಡ್ಡ ಮಗ ನಿರುದ್ಯೋಗಿಯಾಗಿದ್ದಾನೆ. ಸಣ್ಣ ಮಗ ಇನ್ನೂ ಚಿಕ್ಕವನಾಗಿದ್ದು, ಓದುತ್ತಿದ್ದಾನೆ. ಪತಿ ಕೂಡ ಕೆಲ ವರ್ಷಗಳ ಹಿಂದೆಯೇ ತೀರಿಕೊಂಡಿದ್ದಾರೆ. ಇದೀಗ ಮಗನನ್ನು ಕಳೆದುಕೊಂಡ ನಾವು ನಿರ್ಗತಿಕರಾಗಿದ್ದೇವೆ ಅಂತ ಅವರು ತಮ್ಮ ಅಳಲು ತೋಡಿಕೊಂಡಿದ್ದಾರೆ.

    ದಿನೇಶ್ ಮೃತದೇಹವನ್ನು ತವರಿಗೆ ತರುವಲ್ಲಿ ಪ್ರಯತ್ನಿಸುತ್ತಿದ್ದೆ. ಇದಕ್ಕಾಗಿ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರ ಹೆಚ್ಚುವರಿ ಖಾಸಗಿ ಕಾರ್ಯದರ್ಶಿಯ ಜೊತೆ ಸೆ. 26ರಂದು ಮನವಿ ಮಾಡಿಕೊಂಡಿದ್ದೇವೆ. ಆದ್ರೆ ಇದೂವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬಳಿಕ ನಾವು ಸೆ. 28ರಂದು ಸಂಸದ ವರುಣ್ ಗಾಂಧಿಯವರನ್ನು ಸಂಪರ್ಕಿಸಿದ್ದೇವೆ. ಅವರು ವಿದೇಶಾಂಗ ಸಚಿವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ ಅಂತ ಮುಕೇಶ್ ಹೇಳಿದ್ದಾರೆ.

    ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೂ ಈ ಬಗ್ಗೆ ತಿಳಿಸಿದ್ದೇವೆ. `ರಿಯಾದ್ ನಲ್ಲಿರುವ ವಿದೇಶಾಂಗ ಸಚಿವರಿಗೆ ಮಾಹಿತಿ ನೀಡಿದ್ದೇವೆ. ಅವರು ಈ ಬಗ್ಗೆ ಮಾಹಿತಿ ಪಡೆದು ತನಿಖೆ ನಡೆಸಿ ಬಳಿಕ ಕ್ರಮಕೈಗೊಳ್ಳಲಿದ್ದಾರೆ’ ಅಂತ ಅಕ್ಟೋಬರ್ 16ರಂದು ನಮಗೊಂದು ಪತ್ರ ಕಳುಹಿಸಿದ್ದಾರೆ. ಆದ್ರೆ ಆ ಬಳಿಕವೂ ದಿನೇಶ್ ಮೃತದೇಹ ತವರಿಗೆ ರವಾನೆಯಾಗುತ್ತಿರುವ ಬಗ್ಗೆ ಯಾವುದೇ ಸುಳೀವು ಸಿಕ್ಕಿರಲಿಲ್ಲ. ಹೀಗಾಗಿ ಮತ್ತೆ ನಾನು ನವೆಂಬರ್ 15ರಂದು ಪತ್ರ ಬರೆದೆ. ಮೃತದೇಹ ರವಾನೆಗೆ ಅವರು ಇನ್ನೂ ಎಷ್ಟು ದಿನ ತೆಗೆದುಕೊಳ್ಳುತ್ತಾರೆ ಎಂಬುದು ನನಗೆ ಗೊತ್ತಿಲ್ಲ. ಸಚಿವಾಲಯ ನಮಗೆ ಭರವಸೆ ನೀಡುತ್ತಲೇ ಇದೆ. ಆದ್ರೆ ಮೃತದೇಹ ಮಾತ್ರ ಇಂದೂ ಮನೆ ಸೇರಿಲ್ಲ. ನಮಗೆ ನಮ್ಮ ಅಣ್ಣನ ಶವ ಮಾತ್ರ ಬೇಕು. ಅಲ್ಲದೇ ಮೃತ ದೇಹ ಕಳುಹಿಸಲು ಯಾಕೆ ತಡಮಾಡುತ್ತಿದ್ದಾರೆ ಎಂಬುದಕ್ಕೆ ಉತ್ತರ ಕೂಡ ನೀಡಬೇಕು ಅಂತ ಮುಕೇಶ್ ಆಗ್ರಹಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹೆತ್ತ ಮಗನಿಂದಲೇ ತಾಯಿಯ ಕೈ ಕಟ್..!

    ಹೆತ್ತ ಮಗನಿಂದಲೇ ತಾಯಿಯ ಕೈ ಕಟ್..!

    ಹಾಸನ: ಪಾಪಿ ಮಗನೊಬ್ಬ ತನ್ನ ಹೆತ್ತತಾಯಿಯ ಕೈಯನ್ನು ಕತ್ತರಿಸಿ ಭೀಕರವಾಗಿ ಹಲ್ಲೆ ಮಾಡಿರುವ ಅಮಾನುಷ ಘಟನೆ ಹಾಸನದಲ್ಲಿ ನಡೆದಿದೆ.

    ಸಕಲೇಶಪುರದ ತಾಲೂಕಿನ ಯಡವರಹಳ್ಳಿಯಲ್ಲಿ ಈ ಘಟನೆ ನಡೆದಿದೆ. 55 ವರ್ಷದ ಲಲಿತಮ್ಮ ತನ್ನ ಹೆತ್ತ ಮಗನಿಂದಲೇ ಹಲ್ಲೆಗೊಳಗಾದ ನತದೃಷ್ಟ ತಾಯಿ. ಆರೋಪಿ ದಿಲೀಪ್ ಈ ಕೃತ್ಯ ಎಸಗಿರುವ ಪಾಪಿ ಪುತ್ರ.

    ಪಾಪಿ ದಿಲೀಪ್ ಮದುವೆ ಆಗಿ ಮೊದಲನೆ ಪತ್ನಿಯನ್ನು ಬಿಟ್ಟಿದ್ದು ಎರಡನೇ ಮದುವೆ ಆಗಿರುವ ವಿಚಾರವಾಗಿ ತಾಯಿಮಗನಲ್ಲಿ ವೈಮನಸ್ಸು ಇತ್ತು. ಮತ್ತು ಆಸ್ತಿ ವಿಚಾರವಾಗಿ ಪದೇ ಪದೇ ದಿಲೀಪ್ ತನ್ನ ತಾಯಿಯ ಬಳಿ ಜಗಳವಾಡುತಿದ್ದನು. ಒಂದು ದಿನ ಮುಂಚಿತವಾಗಿ ಕತ್ತಿ ಹಿಡಿದುಕೊಂಡು ಓಡಾಡುತ್ತಿದ್ದ ದುರುಳ ಶುಕ್ರವಾರ ರಾತ್ರಿ ತನ್ನ ತಾಯಿಯ ಮೇಲೆ ಏಕಾಏಕಿ ಎಗರಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ.

    ತನ್ನ ಹೆತ್ತಮ್ಮನ ಮೇಲೆ ಮಚ್ಚು ಬೀಸಿದ್ದಾನೆ. ಒಂದು ಕೈ ಸ್ಥಳದಲ್ಲಿಯೇ ಕತ್ತರಿಸಿ ಹೋಗಿದ್ದು ಮತ್ತೊಂದು ಕೈನ ಎರಡು ಬೆರಳುಗಳು ತುಂಡಾಗಿದೆ. ಕೃತ್ಯ ಎಸಗಿದ ಪಾಪಿ ಅಲ್ಲಿಂದ ಪರಾರಿಯಾಗಿದ್ದಾನೆ. ಸ್ಥಳೀಯರ ಸಮಯ ಪ್ರಜ್ಞೆಯಿಂದಾಗಿ ಸಮೀಪದ ಶುಕ್ರವಾರಸಂತೆ ಗ್ರಾಮದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

    ಬಲವಾದ ಪೆಟ್ಟು ಬಿದ್ದಿರುವ ಲಲಿತಮ್ಮ ಈಗ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಪಾಪಿ ಪುತ್ರನಿಗೆ ಕಠಿಣವಾದ ಶಿಕ್ಷೆಯಾಗಬೇಕು ಎಂದು ಸ್ಥಳೀಯರು ಸಂಬಂಧಿಕರು ಆಗ್ರಹಿಸಿದ್ದಾರೆ.

    ಸದ್ಯ ಆರೋಪಿ ವಿರುದ್ಧ ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜನವರಿ 1ರಂದು ಡೆಲಿವರಿಗಾಗಿ ಅಮ್ಮಂದಿರ ದುಂಬಾಲು- ಹೊಸ ವರ್ಷ ತೀರಾ ಸ್ಪೆಷಲ್

    ಜನವರಿ 1ರಂದು ಡೆಲಿವರಿಗಾಗಿ ಅಮ್ಮಂದಿರ ದುಂಬಾಲು- ಹೊಸ ವರ್ಷ ತೀರಾ ಸ್ಪೆಷಲ್

    ಬೆಂಗಳೂರು: ಹೊಸ ವರ್ಷಕ್ಕೆ ದಿನಗಣನೆ ಶುರುವಾಗಿದೆ. ಅತ್ತ ನವಮಾಸ ತುಂಬುತ್ತಿರುವ ಅಮ್ಮಂದಿರು ಹೊಸ ವರ್ಷಕ್ಕೆ ಹೆರಿಗೆ ಮಾಡಿಸಲು ದುಂಬಾಲು ಬೀಳುತ್ತಿದ್ದಾರೆ. ಕೇವಲ ಹೊಸ ವರ್ಷ ನಯಾ ದಿನ ಅನ್ನುವ ಕಾರಣವಲ್ಲ. ಆ ದಿನ ಹುಟ್ಟುವ ಮಗುವಿನ ಅದೃಷ್ಟವೇ ಬದಲಾಗುತ್ತೆ.

    ನವಮಾಸವೂ ತನ್ನ ಕಂದನಿಗಾಗಿ ಚಡಪಡಿಸುವ ಅಮ್ಮ ತನ್ನ ಕರುಳ ಕುಡಿ ಒಳ್ಳೆಯ ದಿನವೇ ಪ್ರಪಂಚ ನೋಡಬೇಕು ಅಂತಾ ಬಯಸುತ್ತಾರೆ. ಆದರೆ ಈಗ ಫ್ಯಾನ್ಸಿ ನಂಬರ್ ಗಳ ಸೆಳೆತ, ಒಳ್ಳೆಯ ದಿನ ನೋಡಿಯೇ ಡೆಲಿವರಿ ಡೇಟ್ ಅಡ್ಜೆಸ್ಟ್ ಮೆಂಟ್ ಮಾಡುವ ಟ್ರೆಂಡ್ ಸಿಕ್ಕಾಪಟ್ಟೆ ಜೋರಾಗಿದೆ. ಅದರಲ್ಲೂ ಹೆರಿಗೆಗೆ ಅಸುಪಾಸಿನಲ್ಲಿರುವವರು ಹೊಸ ವರ್ಷ ಜನವರಿ ಒಂದರಂದು ಡೆಲಿವರಿ ಮಾಡಿಸಲು ವೈದ್ಯರಿಗೆ ಡಿಮ್ಯಾಂಡ್ ಇಡುತ್ತಿದ್ದಾರೆ. ರಿಸ್ಕಿ ಇಲ್ಲದ ಡೆಲಿವರಿಗಳನ್ನು ಅವರಿಚ್ಚೆಯ ದಿನವೇ ಮಾಡಬಹುದು. ಆದರೆ ಸ್ವಾಭಾವಿಕವಾಗಿ ಹೆರಿಗೆ ನೋವು ಬಂದಾಗ ನಾವು ಏನೂ ಮಾಡಲು ಸಾಧ್ಯವಿಲ್ಲ ಎಂದು ವೈದ್ಯರು ಹೇಳುತ್ತಾರೆ.

    ಸಾಮಾನ್ಯವಾಗಿ ಮಂಗಳವಾರ ಡೆಲಿವರಿ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಾರೆ. ಆದರೆ ಈ ಬಾರಿ ಜನವರಿ ಒಂದು ಮಂಗಳವಾರ ಬಂದರೂ ಅಂದೇ ಆಗಬೇಕು ಅಂತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಜ್ಯೋತಿಷಿಗಳ ಸಲಹೆ. ಜನವರಿ ಒಂದರಂದು ಸ್ವಾತಿ ನಕ್ಷತ್ರ, ತುಲಾ ರಾಶಿ ಇರುವುದರಿಂದ ಅದೃಷ್ಟದ ಸಂಕೇತವಾಗಿರುತ್ತದೆ. ಹೀಗಾಗಿ ಈ ಡೇಟ್ ಗೆ ಡಿಮ್ಯಾಂಡ್ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.

    ಹೊಸ ವರ್ಷ ಅಂದರೆ ಒಂಥರ ಹೊಸ ಬದುಕಿನ ಪ್ರಾರಂಭ. ಆ ದಿನ ಕಂದನ ಆಗಮನಕ್ಕೆ ಕಾಯುವ ಅಮ್ಮಂದಿರು. ಅಮ್ಮನ ತವಕ ಗರ್ಭದೊಳಗಿನ ಕಂದಮ್ಮಗೆಲ್ಲ ಅರ್ಥವಾಗುತ್ತಾ? ಒಳ್ಳೆ ದಿನದ ಡೆಲಿವರಿಗೆ ಆಸೆಗೆ ಬಿದ್ದು ತೊಂದರೆ ತೆಗೆದುಕೊಳ್ಳಬಾರದು ಎಂದು ವೈದ್ಯರು ಸಲಹೆ ನೀಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 80ನೇ ವಯಸ್ಸಿನಲ್ಲಿ ತಂದೆಯಾದ ಅಜ್ಜ – ವಿಶ್ವದ ಹಿರಿಯ ತಾಯಿ ಹೆಗ್ಗಳಿಕೆ ಪಾತ್ರವಾದ ಮಹಿಳೆ

    80ನೇ ವಯಸ್ಸಿನಲ್ಲಿ ತಂದೆಯಾದ ಅಜ್ಜ – ವಿಶ್ವದ ಹಿರಿಯ ತಾಯಿ ಹೆಗ್ಗಳಿಕೆ ಪಾತ್ರವಾದ ಮಹಿಳೆ

    ಶ್ರೀನಗರ: 65 ವರ್ಷದ ಮಹಿಳೆ ಆರೋಗ್ಯವಂತ ಮಗುವಿಗೆ ಜನ್ಮ ನೀಡಿರುವ ಅಪರೂಪದ ಘಟನೆ ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ.

    ಬಾಕ್ಸಿಂಗ್ ಡೇ ದಿನದಂದು ಮಗು ಜನಿಸಿದ್ದು, ವಿಶೇಷವೆಂದರೆ 80 ವರ್ಷ ವಯಸ್ಸಿನಲ್ಲಿ ಹಕೀಮ್ ದಿನ್ ತಂದೆಯಾಗಿದ್ದಾರೆ. ಈಗಾಗಲೇ ಈ ದಂಪತಿಗೆ 10 ವರ್ಷದ ಮಗನಿದ್ದಾನೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಆದರೆ ಮಹಿಳೆಯ ಹೆಸರನ್ನು ತಿಳಿಸಿಲ್ಲ.

    ಇಳಿ ವಯಸ್ಸಿನಲ್ಲಿ ತಾಯಿಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಹಿಳೆ ಇದು ದೇವರ ಬೆಲೆ ಬಾಳುವ ಉಡುಗೊರೆಯಾಗಿದ್ದು, ವಿಶ್ವದ ಹಿರಿಯ ತಾಯಿ ಎಂದು ಕರೆಯಿಸಿಕೊಳ್ಳಲು ಸಂತಸವಾಗುತ್ತದೆ ಎಂದು ತಿಳಿಸಿದ್ದಾರೆ.

    ಮಹಿಳೆ ಬುಧವಾರ ಪೂಂಚ್ ಜಿಲ್ಲೆಯ ಆಸ್ಪತ್ರೆ ದಾಖಲಾಗಿದ್ದು, ಮಾಧ್ಯಹ್ನದ ವೇಳೆಗೆ ಮಗುವಿಗೆ ಜನ್ಮ ನೀಡಿದ್ದಾರೆ. ಸಾಮಾನ್ಯವಾಗಿ ಭಾರತೀಯ ಮಹಿಳೆಯಲ್ಲಿ 47 ವರ್ಷಕ್ಕೆ ಋತುಬಂಧ ನಿಲ್ಲುತ್ತದೆ. ಒಮ್ಮೆ ಋತು ಬಂಧ ನಿಂತಲ್ಲಿ ಮತ್ತೆ ತಾಯಿ ಆಗುಲು ಸಾಧ್ಯವಿಲ್ಲ. ಆದರೆ ಅಪರೂಪ ಎಂಬಂತೆ ಈ ಘಟನೆ ನಡೆದಿದೆ ಎಂದು ಕಾಶ್ಮೀರದ ತಜ್ಞ ವೈದ್ಯರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

    ಸಾಮಾನ್ಯವಾಗಿ 50 ವರ್ಷ ಬಳಿಕ ಮಹಿಳೆಯರು ತಾಯಿ ಆಗಲು ಬಯಸಿದರೆ, ಅಂತಹವರಿಗೆ ಐವಿಎಫ್ ಚಿಕಿತ್ಸೆ ವಿಧಾನದ ಮೂಲಕ ಮಕ್ಕಳನ್ನು ಪಡೆಯುವ ಅವಕಾಶವಿದೆ. ಆದರೆ ಈ ಪ್ರಕರಣದಲ್ಲಿ ಮಹಿಳೆ ನೈಸರ್ಗಿಕವಾಗಿ ಗರ್ಭಿಣಿಯಾಗಿದ್ದಾರೆ. ಈ ಹಿಂದೆ ಸ್ಪೇನ್ ದೇಶದ ಮಾರಿಯಾ ಡೆಲ್ ಕಾರ್ಮೆನ್ ಬೊಸಾಡಾ ಡಿ ಲಾರಾ ಎಂಬ ಮಹಿಳೆ ಐವಿಎಫ್ ಚಿಕಿತ್ಸೆಯ ಮೂಲಕ ತಮ್ಮ 66 ನೇ ವಯಸ್ಸಿನಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಈ ಮೂಲಕ ವಿಶ್ವ ಹಿರಿಯ ತಾಯಿ ಎಂಬ ಹೆಗ್ಗಳಿಕೆ ಪಡೆದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಆಸ್ತಿಗಾಗಿ ಹೆತ್ತ ತಂದೆ, ತಾಯಿಯನ್ನೇ ಥಳಿಸಿದ ಮಕ್ಕಳು – ವಿಡಿಯೋ ಇದ್ದರೂ ಕ್ರಮಕೈಗೊಳ್ಳದ ಪೊಲೀಸ್!

    ಆಸ್ತಿಗಾಗಿ ಹೆತ್ತ ತಂದೆ, ತಾಯಿಯನ್ನೇ ಥಳಿಸಿದ ಮಕ್ಕಳು – ವಿಡಿಯೋ ಇದ್ದರೂ ಕ್ರಮಕೈಗೊಳ್ಳದ ಪೊಲೀಸ್!

    ದಾವಣಗೆರೆ: ಆಸ್ತಿಗಾಗಿ ಹೆತ್ತ ತಂದೆ ತಾಯಿಗೆ ಹೊಲದಲ್ಲೇ ಮೂವರು ಪುಂಡ ಮಕ್ಕಳು ಥಳಿಸಿರುವ ಘಟನೆಯ ಜಿಲ್ಲೆಯ ನ್ಯಾಮತಿ ತಾಲೂಕಿನ ಬಸವನಹಳ್ಳಿಯಲ್ಲಿ ನಡೆದಿದೆ.

    ವೃದ್ಧ ಬಸಪ್ಪ ಹೆತ್ತ ಮಕ್ಕಳಿಂದ ಹಲ್ಲೆಗೊಳಗಾದ ತಂದೆಯಾಗಿದ್ದು, ಬಸಪ್ಪ ಅವರ ಮೂವರು ಮಕ್ಕಳ ಒಟ್ಟಿಗೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿರುವ ದೃಶ್ಯಗಳು ಮೊಬೈಲ್‍ನಲ್ಲಿ ಸೆರೆಯಾಗಿದ್ದು, ವಿಡಿಯೋ ಇದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುವ ಆರೋಪ ಕೇಳಿಬಂದಿದೆ.

    ನಡೆದಿದ್ದೇನು?
    ಬಸಪ್ಪ ಅವರಿಗೆ ಐವರು ಮಕ್ಕಳಿದ್ದು, ಅವರು ಹೊಂದಿದ್ದ ಹತ್ತು ಎಕರೆ ಜಮೀನಿನಲ್ಲಿ ಪ್ರತಿಯೊಬ್ಬರಿಗೂ ಪಾಲು ನೀಡಿದ್ದರು. ಉಳಿದ 1 ಮುಕ್ಕಾಲು ಎಕರೆ ಭೂಮಿಯಲ್ಲಿ ಸ್ವತಃ ಕೃಷಿ ಮಾಡಲು ನಿರ್ಧರಿಸಿದ್ದರು. ಆದರೆ ಬಸಪ್ಪ ಅವರು ಈ ಜಮೀನಿನಲ್ಲಿ ಉಳುಮೆಗೆ ಹೋದಾಗ ಮಕ್ಕಳಾದ ಕುಮಾರ್, ಚಂದ್ರಾ, ಸಿದ್ದೇಶ್ ಹಲ್ಲೆ ನಡೆಸಿದ್ದಾರೆ. ಇತ್ತ ತಂದೆಯ ಬೆಂಬಲಕ್ಕೆ ನಿಂತ ಬೀರೇಶ್ ಹಾಗೂ ಗಜೇಂದ್ರ ಮೇಲೂ ಹಲ್ಲೆ ನಡೆಸಿದ್ದಾರೆ.

    ಹಲ್ಲೆಗೊಳಗಾದ ತಂದೆ ಹಾಗೂ ಇಬ್ಬರು ಮಕ್ಕಳು ಶಿವಮೊಗ್ಗದ ಮೆಗ್ಗನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಈ ಕುರಿತು ಠಾಣೆಗೆ ದೂರು ನೀಡಲು ಹೋದರೆ ಪೊಲೀಸರು ಸ್ವೀಕರಿಸಲಿಲ್ಲ ಎಂಬ ಆರೋಪ ಕೇಳಿ ಬಂದಿದೆ. ನ್ಯಾಮತಿ ಠಾಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    https://www.youtube.com/watch?v=Wvj0Pc21yoA

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗೆಳೆಯನೊಂದಿಗೆ ಪರಾರಿಯಾಗ್ತಿದ್ದಾಗ ತಡೆದಿದ್ದಕ್ಕೆ ತಾಯಿಯನ್ನೇ ಕೊಂದೇ ಬಿಟ್ಟಳು ಮಗಳು!

    ಗೆಳೆಯನೊಂದಿಗೆ ಪರಾರಿಯಾಗ್ತಿದ್ದಾಗ ತಡೆದಿದ್ದಕ್ಕೆ ತಾಯಿಯನ್ನೇ ಕೊಂದೇ ಬಿಟ್ಟಳು ಮಗಳು!

    ಚೆನ್ನೈ: ಫೇಸ್ ಬುಕ್ ಗೆಳೆಯನೊಂದಿಗೆ ಓಡಿಹೋಗುವುದನ್ನು ತಡೆದಿದ್ದಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ತನ್ನ ತಾಯಿಯನ್ನೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ತಮಿಳುನಾಡಿನ ತಿರುವಳ್ಳೂರಿನಲ್ಲಿ ಸೋಮವಾರ ನಡೆದಿದೆ.

    ಭಾನುಮತಿ ಮಗಳಿಂದ ಕೊಲೆಯಾದ ತಾಯಿ. ಆಂಜನೇಯಪುರಂ ನಿವಾಸಿ, 19 ವರ್ಷದ ದೇವಿ ಪ್ರಿಯಾ ತಾಯಿಯನ್ನೇ ಕೊಲೆ ಮಾಡಿದ್ದಾಳೆ.

    ಪ್ರಿಯಾಗೆ ಆರು ತಿಂಗಳ ಹಿಂದೇ ಫೇಸ್ ಬುಕ್ ನಲ್ಲಿ ವಿವೇಕ್ ಎಂಬಾತನ ಪರಿಚಯವಾಗಿತ್ತು. ಪರಿಚಯ ಸ್ನೇಹವಾಗಿ ಪ್ರೀತಿಗೆ ತಿರುಗಿತ್ತು. ಸದಾ ಮೊಬೈಲಿನಲ್ಲಿದ್ದ ಮಗಳನ್ನು ಪೋಷಕರು ಗಮನಿಸಿದ್ದರು. ನಂತರ ಪೋಷಕರು ಮನೆಯಿಂದ ಹೊರ ಹೋಗದಂತೆ ಮತ್ತು ಮೊಬೈಲ್ ಬಳಸದಂತೆ ಪ್ರಿಯಾಗೆ ನಿರ್ಬಂಧ ಹಾಕಿದ್ದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

    ಪ್ರಿಯಾ ಈ ವಿಚಾರವನ್ನು ವಿವೇಕ್‍ಗೆ ತಿಳಿಸಿದ್ದಾಳೆ. ಆಗ ವಿವೇಕ್ ತಕ್ಷಣ ನೀನು ಮನೆಯಿಂದ ಬಾ ಇಬ್ಬರು ಓಡಿ ಹೋಗೋಣ ಎಂದು ಹೇಳಿದ್ದಾನೆ. ಅದರಂತೆಯೇ ವಿವೇಕ್ ಸೋಮವಾರ ಸಂಜೆ ಪ್ರಿಯಾಳನ್ನು ಕುಂಬಕೋಣಂಗೆ ಕರೆದುಕೊಂಡು ಬರುವಂತೆ ತನ್ನ ಸ್ನೇಹಿತರಾದ ವಿಘ್ನೇಶ್ ಮತ್ತು ಸತೀಶ್ ಇಬ್ಬರನ್ನು ಕಳುಹಿಸಿದ್ದಾನೆ.

    ಇತ್ತ ಮನೆಯಿಂದ ಓಡಿಹೋಗಲು ಪ್ರಿಯಾ ಬಟ್ಟೆಯನ್ನು ಪ್ಯಾಕ್ ಮಾಡಿಕೊಂಡು ಸಿದ್ಧಳಾಗಿದ್ದಳು. ಆಗ ಪ್ರಿಯಾ ತಾಯಿ ಭಾನುಮತಿ ಮಗಳು ಬಿಟ್ಟು ಹೋಗುವುದನ್ನು ತಡೆಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ಜಗಳ ನಡೆದಿದ್ದು, ಜಗಳ ವಿಕೋಪಕ್ಕೆ ತಿರುಗಿ ಪ್ರಿಯಾ ಅಡುಗೆ ಮನೆಯಿಂದ ಚಾಕು ತೆಗೆದುಕೊಂಡು ಬಂದು ತಾಯಿಗೆ ಇರಿದು ಕೊಲೆ ಮಾಡಿದ್ದಾಳೆ.

    ಪ್ರಿಯಾ ಕೊಲೆ ಮಾಡಿದ್ದನ್ನು ಇಬ್ಬರು ಸ್ನೇಹಿತರು ನೋಡಿ ಮನೆಯಿಂದ ಪರಾರಿಯಾಗಿದ್ದಾರೆ. ಆದರೆ ನೆರೆಹೊರೆಯವರು ಅವರ ಶರ್ಟ್ ಮೇಲೆ ಇದ್ದ ರಕ್ತದ ಕಲೆಯನ್ನು ನೋಡಿ ತಕ್ಷಣ ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯಕ್ಕೆ ಪೊಲೀಸರು ದೇವಿ ಪ್ರಿಯಾ, ವಿವೇಕ್, ವಿಘ್ನೇಶ್ ಮತ್ತು ಸತೀಶ್ ಅವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

    ಪ್ರಿಯಾ ತಂದೆ ಶಿವಗುರುನಾಥನ್, ತಾಯಿ ಭಾನುಮತಿ ಮತ್ತು ಸಹೋದರಿ ಚಾಮುಂಡೇಶ್ವರಿ ಜೊತೆ ವಾಸಿಸುತ್ತಿದ್ದಳು. ವಿವೇಕ್ ಕುಂಬಕೋಣಂ ನಿವಾಸಿಯಾಗಿದ್ದು, ಬಟ್ಟೆಶಾಪ್ ನಲ್ಲಿ ಕೆಲಸ ಮಾಡುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv