Tag: mother

  • ಹೆತ್ತಮ್ಮನಿಗೆ ಪೊರಕೆಯಲ್ಲಿ ಹೊಡೆದ ಮಗ- ಡಿಸಿಪಿ ಅಣ್ಣಾಮಲೈ ಪ್ರತಿಕ್ರಿಯೆ

    ಹೆತ್ತಮ್ಮನಿಗೆ ಪೊರಕೆಯಲ್ಲಿ ಹೊಡೆದ ಮಗ- ಡಿಸಿಪಿ ಅಣ್ಣಾಮಲೈ ಪ್ರತಿಕ್ರಿಯೆ

    ಬೆಂಗಳೂರು: ಬುದ್ಧಿವಾದ ಹೇಳಿದ್ದಕ್ಕೆ ಮಗನೊಬ್ಬ ತನ್ನ ಹೆತ್ತಮ್ಮನಿಗೆ ಪೊರಕೆಯಿಂದ ಹೊಡೆದು ಕ್ಲಾಸ್ ತೆಗೆದುಕೊಂಡ ಪ್ರಕರಣಕ್ಕೆ ಡಿಸಿಪಿ ಅಣ್ಣಾಮಲೈ ಪ್ರತಿಕ್ರಿಯಿಸಿದ್ದಾರೆ.

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಡಿಸಿಪಿ ಅಣ್ಣಾಮಲೈ, “ನಾನು ಈ ಪ್ರಕರಣದ ದೃಶ್ಯಗಳನ್ನು ಪಬ್ಲಿಕ್ ಟಿವಿಯಲ್ಲಿ ನೋಡಿದೆ. ನಂತರ ಈ ಪ್ರಕರಣದ ಬಗ್ಗೆ ಪರಿಶೀಲಿಸಿದಾಗ ಜೆ.ಪಿ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಸುದ್ದಿ ನೋಡಿದ ತಕ್ಷಣ ಪೊಲೀಸರು ಸುಮೋಟೋ ಕೇಸ್ ದಾಖಲಿಸಿ ಕಾನೂನು ಪ್ರಕಾರ ಕ್ರಮಕೈಗೊಳ್ಳುತ್ತೇವೆ” ಎಂದರು. ಇದನ್ನೂ ಓದಿ: ಹೆತ್ತಮ್ಮನಿಗೆ ಪೊರಕೆಯಲ್ಲಿ ಹೊಡೆದು ಮಗನಿಂದ ಕ್ಲಾಸ್..!

    ಈ ಮೊದಲು ಜೀವನ್ ತಾಯಿಯ ಬಳಿ ಮಾತನಾಡಿ ಅವರಿಗೆ ಹಲ್ಲೆಯಿಂದ ಗಾಯಗಾಳಾಗಿದ್ದೀಯಾ ಎಂಬುದು ಪರಿಶೀಲಿಸಬೇಕು. ನಂತರ ಸೂಕ್ತ ಕ್ರಮಕೈಗೊಳ್ಳುತ್ತೇವೆ. ಈ ಪ್ರಕರಣದಲ್ಲಿ ತಾಯಿಯೇ ದೂರು ನೀಡಬೇಕಾಗುತ್ತೆ. ಆದರೆ ಸ್ವಂತ ಮಗನ ವಿರುದ್ಧ ಏಕೆ ದೂರು ನೀಡಬೇಕು ಎಂದು ತಾಯಿ ಹಿಂಜರಿಯುತ್ತಾರೆ. ಕುಟುಂಬದವರು ಯಾರೂ ದೂರು ನೀಡದ ಕಾರಣ ನಾವೇ ಸ್ವತಃ ದೂರು ದಾಖಲಿಸಿಕೊಳ್ಳುತ್ತಿದ್ದೇವೆ ಎಂದರು.

    ಏನಿದು ಪ್ರಕರಣ?
    ಬುದ್ಧಿವಾದ ಹೇಳಿದ್ದಕ್ಕೆ ಜೀವನ್ ತನ್ನ ತಾಯಿಗೆ ಪೊರಕೆಯಿಂದ ಹೊಡೆದು ಕ್ಲಾಸ್ ತೆಗೆದುಕೊಂಡಿದ್ದಾನೆ. ಅಲ್ಲದೇ ಹೊರಗಡೆ ನನ್ನ ವಿಚಾರ ಮಾತಾಡಿದರೆ, ಇದೇ ರೀತಿ ಟ್ರೀಟ್‍ಮೆಂಟ್ ಇರುತ್ತೆ ಎಂದು ಜೀವನ್ ತಾಯಿಗೆ ಧಮ್ಕಿ ಹಾಕಿದ್ದಾನೆ. ತಾಯಿ ತನ್ನ ಮಗನ ಮುಂದೆ ಕೈ ಮುಗಿದರೂ ಜೀವನ್ ಕರುಣೆ ತೋರಲಿಲ್ಲ. ಅಲ್ಲದೇ ತಾಯಿ ಎದುರಲ್ಲೇ ಸಿಗರೇಟ್ ಸೇದಿ ಅಸಭ್ಯವಾಗಿ ವರ್ತಿಸಿದ್ದಾನೆ. ಹಾಗಾಗಿ ತಾಯಿ ಮಗನಿಗೆ ಬುದ್ಧಿವಾದ ಹೇಳುವಂತೆ ಪೊಲೀಸರ ಮೊರೆ ಹೋಗಿದ್ದರು ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಾಂಸ್ಕೃತಿಕ ನಗರದಲ್ಲಿ ಬರೋಬ್ಬರಿ 5 ಕೆ.ಜಿಯ ಅಪರೂಪದ ಮಗು ಜನನ

    ಸಾಂಸ್ಕೃತಿಕ ನಗರದಲ್ಲಿ ಬರೋಬ್ಬರಿ 5 ಕೆ.ಜಿಯ ಅಪರೂಪದ ಮಗು ಜನನ

    ಮೈಸೂರು: ಸಾಂಸ್ಕೃತಿಕ ನಗರದಲ್ಲಿ ಬರೋಬ್ಬರಿ 5 ಕೆ.ಜಿಯ ಅಪರೂಪದ ಮಗು ಜನನವಾಗಿದೆ. ನಗರದ ರಾಜೇಶ್ವರಿ ಈ ಭಾರೀ ತೂಕದ ಮಗುವಿಗೆ ಜನ್ಮ ನೀಡಿದ ತಾಯಿ.

    ರಾಜೇಶ್ವರಿ ತಿಲಕ್ ನಗರದ ನಿವಾಸಿ ಸಿದ್ದರಾಜು ಅವರ ಪತ್ನಿಯಾಗಿದ್ದು, ಜಯನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಪರೂಪದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿನ ತೂಕ ಜಾಸ್ತಿಯಿದ್ದ ಕಾರಣ ಸಿಸೇರಿಯನ್ ಮೂಲಕ ವೈದ್ಯಾಧಿಕಾರಿಗಳು ಹೊರತೆಗೆದಿದ್ದಾರೆ. ಇದನ್ನೂ ಓದಿ: ಗರ್ಭಿಣಿಯರಿಗೆ ಸಿಸೇರಿಯನ್ ಹೆರಿಗೆ ಯಾಕೆ ಮಾಡ್ತಾರೆ? ಕಾರಣಗಳೇನು?

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹೆತ್ತಮ್ಮನಿಗೆ ಪೊರಕೆಯಲ್ಲಿ ಹೊಡೆದು ಮಗನಿಂದ ಕ್ಲಾಸ್..!

    ಹೆತ್ತಮ್ಮನಿಗೆ ಪೊರಕೆಯಲ್ಲಿ ಹೊಡೆದು ಮಗನಿಂದ ಕ್ಲಾಸ್..!

    ಬೆಂಗಳೂರು: ಬುದ್ಧಿವಾದ ಹೇಳಿದ್ದಕ್ಕೆ ಮಗನೊಬ್ಬ ತನ್ನ ಹೆತ್ತಮ್ಮನಿಗೆ ಪೊರಕೆಯಿಂದ ಹೊಡೆದು ಕ್ಲಾಸ್ ತೆಗೆದುಕೊಂಡ ಪ್ರಕರಣವೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

    ಜೀವನ್(19) ತಾಯಿಗೆ ಥಳಿಸಿದ ಮಗ. ಬುದ್ಧಿವಾದ ಹೇಳಿದ್ದಕ್ಕೆ ಜೀವನ್ ತನ್ನ ತಾಯಿಗೆ ಪೊರಕೆಯಿಂದ ಹೊಡೆದು ಕ್ಲಾಸ್ ತೆಗೆದುಕೊಂಡಿದ್ದಾನೆ. ಅಲ್ಲದೇ ಹೊರಗಡೆ ನನ್ನ ವಿಚಾರ ಮಾತಾಡಿದರೆ, ಇದೇ ರೀತಿ ಟ್ರೀಟ್‍ಮೆಂಟ್ ಇರುತ್ತೆ ಎಂದು ಜೀವನ್ ತಾಯಿಗೆ ಧಮ್ಕಿ ಹಾಕಿದ್ದಾನೆ.

    ತಾಯಿ ತನ್ನ ಮಗನ ಮುಂದೆ ಕೈ ಮುಗಿದರೂ ಜೀವನ್ ಕರುಣೆ ತೋರಲಿಲ್ಲ. ಅಲ್ಲದೇ ತಾಯಿ ಎದುರಲ್ಲೇ ಸಿಗರೇಟ್ ಸೇದಿ ಅಸಭ್ಯವಾಗಿ ವರ್ತಿಸಿದ್ದಾನೆ. ಹಾಗಾಗಿ ತಾಯಿ ಮಗನಿಗೆ ಬುದ್ಧಿವಾದ ಹೇಳುವಂತೆ ಪೊಲೀಸರ ಮೊರೆ ಹೋಗಿದ್ದಾರೆ.

    ಅಪ್ರಾಪ್ತಳ ಜೊತೆಗಿನ ಲವ್ ಕಹಾನಿ ಬಗ್ಗೆ ತಾಯಿ ತನ್ನ ಮಗ ಜೀವನ್‍ನನ್ನು ಪ್ರಶ್ನಿಸಿದರು. ಮಗನ ಹುಚ್ಚಾಟಕ್ಕೆ ನೊಂದಿರುವ ತಾಯಿ ರಕ್ಷಣೆ ಕೋರಿ ಪೊಲೀಸರ ಮೊರೆ ಹೋಗಿದ್ದಾರೆ. ತಾಯಿ ತನ್ನ ಮಗ ಜೀವನ್ ವಿರುದ್ಧ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರೇಯಸಿ ಜೊತೆ ಸೇರಿ ಹೆತ್ತ ತಾಯಿಗೆ ಹಿಗ್ಗಾಮುಗ್ಗಾ ಥಳಿಸಿ ಕಾಲು ಮುರಿದ ಮಗ

    ಪ್ರೇಯಸಿ ಜೊತೆ ಸೇರಿ ಹೆತ್ತ ತಾಯಿಗೆ ಹಿಗ್ಗಾಮುಗ್ಗಾ ಥಳಿಸಿ ಕಾಲು ಮುರಿದ ಮಗ

    ಗದಗ: ಮಗನೊಬ್ಬ ಪ್ರೇಯಸಿ ಜೊತೆ ಸೇರಿ ಹೆತ್ತ ತಾಯಿಯನ್ನೇ ಹಿಗ್ಗಾಮುಗ್ಗಾ ಥಳಿಸಿ, ಹಿರಿ ಜೀವದ ಕಾಲುಗಳನ್ನೇ ಮುರಿದ ಪ್ರಕರಣವೊಂದು ಗದಗದಲ್ಲಿ ಬೆಳಕಿಗೆ ಬಂದಿದೆ. ಮಗ ಹಾಗೂ ಆತನ ಪ್ರೇಯಸಿಯ ದೌರ್ಜನ್ಯಕ್ಕೆ ಹಿರಿಜೀವ ನಲುಗಿ ಹೋಗಿದ್ದು, ಆಸ್ಪತ್ರೆಯಲ್ಲಿ ನರಳಾಡುತ್ತಿದ್ದಾರೆ.

    ಗದಗ ನಗರದ ಎಸ್.ಎಂ ಕೃಷ್ಣಾ ನಗರದಲ್ಲಿ ಸಿದ್ದಲಿಂಗಯ್ಯ ನಾಗಾವಿಮಠ ತನ್ನ ಪ್ರೇಯಸಿ ಜೊತೆ ಸೇರಿಕೊಂಡು ಹೆತ್ತ ತಾಯಿಯನ್ನೇ ಥಳಿಸಿದ್ದಾನೆ. ವೃದ್ಧಾಪ್ಯದಲ್ಲಿ ನಮ್ಮನ್ನು ಆರೈಕೆ ಮಾಡುತ್ತಾನೆ ಅಂತ ವೃದ್ಧ ದಂಪತಿ ಕಿರಿಯ ಮಗನನ್ನು ಮುದ್ದಾಗಿ ಸಾಕಿದ್ದರು. ಆದರೆ ಆ ಕಿರಿಯ ಪುತ್ರ ತನ್ನ ಪ್ರಿಯತಮೆಯ ಜೊತೆ ಸೇರಿಕೊಂಡು ಹೆತ್ತ ತಾಯಿ ಮೇಲೆಯೇ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ.

    ಸಿದ್ದಲಿಂಗಯ್ಯ ನಾಗಾವಿಮಠ ಹಾಗೂ ಆತನ ಪ್ರೇಯಸಿ ಕರುಣೆ ಇಲ್ಲದೇ ಹಿರಿಜೀವದ ಎರಡೂ ಮೊಣಕಾಲನ್ನು ಮುರಿಯೋ ಮೂಲಕ ರಾಕ್ಷಸಿತನ ಮೆರೆದಿದ್ದಾಳೆ. ಪುತ್ರ, ಪ್ರೇಯಸಿ ಹೊಡೆತಕ್ಕೆ ಜಿಮ್ಸ್ ಆಸ್ಪತ್ರೆಯಲ್ಲಿ ವೃದ್ಧೆ ತಾಯಿ ಪ್ರೇಮವ್ವ ಕಣ್ಣೀರು ಹಾಕುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

    ಈ ಘಟನೆ ನಡೆದು ನಾಲ್ಕು ದಿನಗಳಾಗಿದ್ದು, ಈಗಾಗಲೇ ವೃದ್ಧೆ ಪ್ರೇಮವ್ವ ದೂರನ್ನು ನೀಡಿದ್ದಾರೆ. ಇಷ್ಟಾದರೂ ಸಹ ದೂರು ದಾಖಲಿಸಿಕೊಂಡ ಗದಗ ಗ್ರಾಮೀಣ ಪೊಲೀಸರು ಕಿರಾತಕ ಪುತ್ರ ಹಾಗೂ ಪ್ರೇಯಸಿಯನ್ನು ಬಂಧಿಸಿಲ್ಲ. ದೂರು ದಾಖಲು ಮಾಡಿಕೊಳ್ಳುವ ವೇಳೆ ಗದಗ ಗ್ರಾಮೀಣ ಪೊಲೀಸರೂ ಸಹ ಅಮಾನವೀಯ ವರ್ತನೆ ಮಾಡಿದ್ದಾರೆ. ಹಲ್ಲೆ ಮಾಡಿದವರ ವಿರುದ್ಧ ದೂರು ದಾಖಲಿಸಿಕೊಳ್ಳದ ಗದಗ ಗ್ರಾಮೀಣ ಪಿಎಸ್‍ಐ ಮಲ್ಲಿಕಾರ್ಜುನ, ನೀನು ಮೊದ್ಲು ಆಸ್ಪತ್ರೆಗೆ ಹೋಗು ಅಂತ ಗದರಿಸಿದ್ದಾರಂತೆ.

    ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ದೂರು ನೀಡಿದರೂ ದೂರು ದಾಖಲಿಸಿಕೊಳ್ಳದ ಪೊಲೀಸರು, ವೃದ್ಧೆಗೆ ಹೆದರಿಸಿ ಕಿರಾತಕರಿಗೆ ಮನೆ ಬೀಗ ಕೊಡಿಸಿದ್ದಾರೆ. ಪೊಲೀಸರ ಅಮಾನವೀಯ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಮ್ಮ, ಐ ಲವ್ ಯೂ.. ಅಂತ ಬರೆದು 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

    ಅಮ್ಮ, ಐ ಲವ್ ಯೂ.. ಅಂತ ಬರೆದು 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

    ನವದೆಹಲಿ: ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನವದೆಹಲಿಯ ಇಂದೇರ್ ಪುರಿ ಎಂಬಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ಡಿಸೆಂಬರ್ 1 ರಂದು ಸಂಜೆ 3 ಗಂಟೆ ಸುಮಾರಿಗೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 12 ವರ್ಷದ ಬಾಲಕಿ ಮನೆಯ ಕೋಣೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆಯ ಸಾವಿಗೆ ಶಾಲೆಯ ಶಿಕ್ಷಕರೇ ಕಾರಣ ಅಂತ ಬಾಲಕಿ ತಾಯಿ ನೇರವಾಗಿ ಆರೋಪಿಸಿರುವುದಾಗಿ ಪೊಲೀಸ್ ಉಪ ಆಯುಕ್ತ ಸಮೀರ್ ಶರ್ಮಾ ತಿಳಿಸಿದ್ದಾರೆ.

    ಆತ್ಮಹತ್ಯೆಗೂ ಮುನ್ನ ಬಾಲಕಿ ತನ್ನ ಕೈಯಲ್ಲಿ, “ಅಮ್ಮ.. ಐ ಲವ್ ಯೂ.. ನಾನು ಈ ಜಗತ್ತನ್ನೇ ಬಿಟ್ಟು ಹೋಗುತ್ತಿದ್ದೇನೆ” ಅಂತ ಬರೆದುಕೊಂಡಿದ್ದಾಳೆ. ಬಾಲಕಿಗೆ ಶಾಲೆಯಲ್ಲಿ ಟೀಚರ್ ಬೈದಿದ್ದಾರೆ. ಇದರಿಂದ ಆಕೆ ಮನನೊಂದಿದ್ದಳು ಅಂತ ತಾಯಿ ಆರೋಪಿಸಿದ್ದು, ಸದ್ಯ ತಾಯಿಯ ಹೇಳಿಕೆಯ ಕುರಿತು ತನಿಖೆ ನಡೆಸುತ್ತಿರುವುದಾಗಿ ಅಂತ ಶರ್ಮಾ ಹೇಳಿದ್ದಾರೆ.

    ಬಾಲಕಿಯ ತಾಯಿ ತೀಸ್ ಹಜಾರಿ ಕೋರ್ಟ್ ನಲ್ಲಿ ವಕೀಲೆಯಾಗಿದ್ದು, ಕೆಲಸಕ್ಕೆ ಹೋಗುವ ಮೊದಲೇ ನಾನು ಆಕೆಯನ್ನು ಕೊನೆಯ ಬಾರಿ ಜೀವಂತವಾಗಿ ನೋಡಿದ್ದೆ. ಸಂಜೆ 4 ಗಂಟೆ ಸುಮಾರಿಗೆ ನಾನು ಮನೆಗೆ ವಾಪಸ್ ಬಂದು ನೋಡಿದಾಗ ಆಕೆ ಶವವಾಗಿದ್ದಳು ಅಂತ ತಾಯಿ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    ಶಾಲೆಯಲ್ಲಿ ಶಿಕ್ಷಕರಿಂದಾಗಿ ನಾನು ಅವಮಾನಿತಳಾಗಿದ್ದೇನೆ ಅಂತ ಆಕೆ ನನ್ನ ಬಳಿ ದೂರಿದ್ದಳು. ನನ್ನ ಮಗಳು ಯಾವ ಟೀಚರ್ ವಿರುದ್ಧ ದೂರು ನೀಡಿದ್ದಳೋ, ಆ ಟೀಚರ್ ಪ್ರತೀ ನಿತ್ಯ ಆಕೆಯನ್ನು ಅವಮಾನಿಸುತ್ತಿದ್ದರಂತೆ. ಅಲ್ಲದೇ ಶುಕ್ರವಾರವೂ ಕೂಡ ಬಯೋಲಾಜಿ ಲ್ಯಾಬ್ ನಲ್ಲಿ ಸುಮಾರು 10 ನಿಮಿಷಗಳ ಕಾಲ ಇತರ ವಿದ್ಯಾರ್ಥಿಗಳ ಮುಂದೆ ಅವಮಾನ ಮಾಡಿದ್ದರಂತೆ. ಇದರಿಂದ ಬೇಸರಗೊಂಡ ಆಕೆ ಶಾಲೆಯ ಬಾತ್ ರೂಮಿನಲ್ಲಿ ಹೋಗಿ ಅತ್ತಿದ್ದಾಳೆ ಅಂತ ಬಾಲಕಿ ಹೇಳಿರುವುದಾಗಿ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.

    ಆಕೆ ಹಲವು ಬಾರಿ ಶಾಲೆ ಬದಲಾವಣೆ ಮಾಡುವಂತೆ ನನಗೆ ಒತ್ತಾಯಿಸಿದ್ದಳು. ಆದ್ರೆ ನಾನು, ಇವತ್ತೋ ನಾಳೆಯೋ ಸರಿಹೋಗಬಹುದೆಂದು ಸುಮ್ಮನಾಗಿದ್ದೆ. ಅಲ್ಲದೇ ಈ ವಿಚಾರ ಇಷ್ಟೊಂದು ಮುಂದುವರಿದು, ಆಕೆ ಆತ್ಮಹತ್ಯೆ ಮಾಡಿಕೊಳ್ಳುವ ಯೋಚನೆ ಮಾಡುತ್ತಾಳೆ ಅಂತ ಅಂದುಕೊಂಡಿರಲಿಲ್ಲ ಅಂತ ತಾಯಿ ತನ್ನ ಅಳಲು ತೋಡಿಕೊಂಡಿದ್ದಾರೆ.

    ಹುಟ್ಟುಹಬ್ಬಕ್ಕೆ ಮಗಳೇ ಇಲ್ಲ:
    ಡಿಸೆಂಬರ್ 20ರಂದು ಆಕೆಯ ಹುಟ್ಟುಹಬ್ಬವಾಗಿದ್ದು, ಆಕೆಯನ್ನು ಹೊರಗಡೆ ಕರೆದುಕೊಂಡು ಹೋಗಿ ಬರ್ತ್ ಡೇಯನ್ನು ಅದ್ಧೂರಿಯಾಗಿ ಆಚರಣೆ ಮಾಡಬೇಕು ಅಂತ ಯೋಚನೆ ಮಾಡಿದ್ದೆನು. ಆದ್ರೆ ಇದೀಗ ಆಕೆಯೇ ನಮ್ಮನ್ನ ಬಿಟ್ಟು ಹೋಗಿದ್ದಾಳೆ. ಆಕೆ ಒತ್ತಾಯಿಸುವಾಗಲೇ ನಾನು ಅರ್ಥಮಾಡಿಕೊಂಡು ಆಕೆಯನ್ನು ಬೇರೆ ಶಾಲೆಗೆ ಕಳುಹಿಸಬೇಕಿತ್ತು. ನಾನು ತಪ್ಪು ಮಾಡಿದೆ ಅಂತ ತಾಯಿ ಕಣ್ಣೀರು ಹಾಕಿದ್ದಾರೆ.

    ಸದ್ಯ ಶಾಲೆಯ ಆಡಳಿತ ಮಂಡಳಿ ಈ ಬಗ್ಗೆ ತನಿಖೆ ನಡೆಸಿ ವರದಿಯನ್ನು ದೆಹಲಿ ಪೊಲೀಸರಿಗೆ ಸಲ್ಲಿಸಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಾವಿನಲ್ಲೂ ಒಂದಾದ ತಾಯಿ-ಮಗ

    ಸಾವಿನಲ್ಲೂ ಒಂದಾದ ತಾಯಿ-ಮಗ

    ಬೆಂಗಳೂರು: ಮಗನ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ತಾಯಿಯೂ ಕೂಡ ಮೃತಪಟ್ಟಿರುವ ಘಟನೆ ನಗರದ ಶೇಷಾದ್ರಿಪುರಂನಲ್ಲಿ ನಡೆದಿದೆ.

    ವಳ್ಳಿಯಮ್ಮ (83) ಮತ್ತು ರವಿಚಂದ್ರ (62) ಸಾವಿನಲ್ಲೂ ಒಂದಾದ ತಾಯಿ-ಮಗ. ವಳ್ಳಿಯಮ್ಮ ಮಗ ರವಿಚಂದ್ರ ವೃತ್ತಿಯಲ್ಲಿ ಕ್ಯಾಟರಿಂಗ್ ಬ್ಯುಸಿನೆಸ್ ನಡೆಸುತ್ತಿದ್ದರು. ಎರಡು ದಿನಗಳ ಹಿಂದೆ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ತೆರಳುತ್ತಿದ್ದರು.

    ಓಲಾ ಕ್ಯಾಬ್ ನಲ್ಲಿ ತೆರಳುತಿದ್ದ ವೇಳೆ ರವಿಚಂದ್ರ ಅವರಿಗೆ ಹೃದಯಾಘಾತವಾಗಿದೆ. ಕೂಡಲೇ ಓಲಾ ಚಾಲಕ ಅಪೋಲೊ ಆಸ್ಪತ್ರೆಗೆ ದಾಖಲಿಸಿದ್ದನು. ಹೃದಯ ಬಡಿತದ ಸಮಸ್ಯೆಯಿಂದ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮಧ್ಯಾಹ್ನ ಸುಮಾರು 12:30ಕ್ಕೆ ರವಿಚಂದ್ರ ಮೃತಪಟ್ಟಿದ್ದಾರೆ.

    ತಕ್ಷಣವೇ ಈ ವಿಚಾರವನ್ನು ತಿಳಿಸಿದರೆ ಗಾಬರಿಯಾಗುತ್ತಾರೆ ಎಂದು ರವಿಚಂದ್ರನ ತಾಯಿಗೆ ನಿಧಾನವಾಗಿ ಸಂಬಂಧಿಕರು ಮಗನ ಸಾವಿನ ವಿಚಾರವನ್ನು ತಿಳಿಸಿದ್ದರು. ಆದರೂ ಮಗನ ಅಗಲಿಕೆಯಿಂದ ನೊಂದ ತಾಯಿಗೂ ಕೂಡ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ನೀಡುವ ಮೊದಲೇ ತಾಯಿ ವಳ್ಳಿಯಮ್ಮ ಕೂಡ ಮೃತಪಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅವಧಿಗೆ ಮುನ್ನವೇ ಹೆರಿಗೆ- ಮೃತಪಟ್ಟ ತ್ರಿವಳಿ ಮಕ್ಕಳು

    ಅವಧಿಗೆ ಮುನ್ನವೇ ಹೆರಿಗೆ- ಮೃತಪಟ್ಟ ತ್ರಿವಳಿ ಮಕ್ಕಳು

    ದಾವಣಗೆರೆ: ಅವಧಿಗೂ ಮುನ್ನವೇ ತಾಯಿಯೊಬ್ಬರು ಮೂರು ಮಕ್ಕಳಿಗೆ ಜನ್ಮ ನೀಡಿದ್ದು, ಹೆರಿಗೆ ನಂತರ ಮೂರು ನವಜಾತ ಶಿಶುಗಳು ಮೃತಪಟ್ಟಿರುವ ಪ್ರಕರಣವೊಂದು ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ.

    ಬಿಳಚೋಡು ಗ್ರಾಮದ ನಿವಾಸಿ ಕಾವೇರಿ(24) ಅವರಿಗೆ ಬುಧವಾರ ಬೆಳಗಿನ ಜಾವ 4.30ರ ಸುಮಾರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ದಾವಣಗೆರೆ ಜಿಲ್ಲಾಸ್ಪತ್ರೆಗೆ ಅಂಬುಲೆನ್ಸ್ ನಲ್ಲಿ ಸಾಗಿಸುವಾಗ ಹೆರಿಗೆ ನೋವು ಜಾಸ್ತಿಯಾಗಿದೆ.

    ಕಾವೇರಿ ಅಂಬುಲೆನ್ಸ್ ನಲ್ಲೇ ಎರಡು ಹೆಣ್ಣು ಮಗು ಹಾಗೂ ಒಂದು ಗಂಡು ಶಿಶುವಿಗೆ ಜನ್ಮ ನೀಡಿದ್ದಾರೆ. ಮೂರು ಶಿಶುಗಳು ಕೇವಲ 300 ರಿಂದ 350 ಗ್ರಾಂ ತೂಕವಿತ್ತು. ಹಾಗಾಗಿ ಮೂರು ಶಿಶುಗಳು ಮೃತಪಟ್ಟಿದೆ. ತಾಯಿ ಕಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 8 ವರ್ಷದ ಮಗಳಿನೊಂದಿಗೆ ಕಲ್ಲುಕ್ವಾರಿಗೆ ಹಾರಿದ ತಾಯಿ

    8 ವರ್ಷದ ಮಗಳಿನೊಂದಿಗೆ ಕಲ್ಲುಕ್ವಾರಿಗೆ ಹಾರಿದ ತಾಯಿ

    ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗೊಂದಿಬಸವನಹಳ್ಳಿಯಲ್ಲಿ ಸಾಲಬಾಧೆಯಿಂದ ಬೇಸತ್ತು ಮಹಿಳೆಯೊಬ್ಬರು ತನ್ನ 8 ವರ್ಷದ ಮಗಳಿನೊಂದಿಗೆ ಕಲ್ಲಿನಕ್ವಾರಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಗೊಂದಿಬಸವನಹಳ್ಳಿಯ ತಾಯಮ್ಮ (35) ಹಾಗೂ 8 ವರ್ಷದ ಮಗಳು ಗಾನವಿ (ದಿವ್ಯ) ಮೃತಪಟ್ಟ ದುರ್ದೈವಿಗಳು. ಸಾಲಬಾಧೆಯಿಂದ ಬೇಸತ್ತ ತಾಯಮ್ಮ ಮಂಗಳವಾರ ಬೆಳಗ್ಗೆ ತನ್ನ ಮಗಳು ದಿವ್ಯ ಜೊತೆಗೆ ಊರ ಹೊರಗಿರುವ ಕಲ್ಲುಕ್ವಾರಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಇಬ್ಬರ ಮೃತದೇಹಗಳನ್ನು ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

    ಘಟನೆ ಕುರಿತು ಮೃತ ತಾಯಮ್ಮರ ಪತಿ ಸ್ವಾಮಿ ನಾಯಕ್ ಮಾತನಾಡಿ, ನಾನು ವೃತ್ತಿಯಲ್ಲಿ ಕೂಲಿ ಕಾರ್ಮಿಕನಾಗಿದ್ದೇನೆ. ಎಂದಿನಂತೆ ಬೆಳಗ್ಗೆ 6 ಗಂಟೆಗೆ ಮನೆಯಿಂದ ಹೊರ ಬಂದೆ. ನಾನು ಬಂದ ಮೇಲೆ ಅಮ್ಮ ಮಗಳು ಹೋಗಿ ಇಂತಹ ಕೆಲಸಕ್ಕೆ ಕೈ ಹಾಕಿ ಜೀವ ಕಳೆದುಕೊಂಡಿದ್ದಾರೆ. ಸಂಘ ಮತ್ತು ಇತರರಿಂದ ಕೈ ಸಾಲ ಮಾಡಿಕೊಂಡಿದ್ದೇವು. ಇದರಿಂದ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

    ಮೃತ ಗಾನವಿ ಗೊಂದಿಬಸವನಹಳ್ಳಿ ಸರ್ಕಾರಿ ಶಾಲೆಯಲ್ಲಿ ಐದನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಶಾಲೆಯಲ್ಲಿ ತುಂಬಾ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದಳೆಂದು ಶಿಕ್ಷಕರು ಕಂಬನಿ ಮಿಡಿದಿದ್ದಾರೆ. ಘಟನೆ ಸಂಬಂಧ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೆಂಗ್ಳೂರಲ್ಲಿ ತಾಯಿ, ಮಗಳು, ಪತಿಯಿಂದ್ಲೇ ಹನಿಟ್ರ್ಯಾಪ್!

    ಬೆಂಗ್ಳೂರಲ್ಲಿ ತಾಯಿ, ಮಗಳು, ಪತಿಯಿಂದ್ಲೇ ಹನಿಟ್ರ್ಯಾಪ್!

    ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಪ್ರಕರಣ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಂದಿನಿ ಲೇಔಟ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

    ಬಂಧಿತರನ್ನು ತಾಯಿ ಬೇಬಿರಾಣಿ, ಪುತ್ರಿ ಪ್ರೀತಿ, ಗಂಡ ಪಟೇಲ್ ಬಾಬು ಮತ್ತು ಪಟೇಲ್ ಬಾಬು ಸಹೋದರ ಪ್ರಸಾದ್ ಅಂತಾ ಗುರುತಿಸಲಾಗಿದೆ. ಇಲ್ಲಿ ತಾಯಿ ಮತ್ತು ಮಗಳೇ ಪ್ರಮುಖ ಆರೋಪಿಗಳಾಗಿದ್ದಾರೆ.

    ಕೃಷ್ಣದಾಸ್ ಎಂಬಾತನ ಹನಿಟ್ರ್ಯಾಪ್ ಮಾಡಿದ್ದ ಆರೋಪಿಗಳು, ಬ್ಲಾಕ್ ಮೇಲ್ ಮಾಡಿ ಬರೊಬ್ಬರಿ 73 ಲಕ್ಷ 55 ಸಾವಿರ ಹಣ ಪೀಕಿದ್ರು. ಬಳಿಕ ಜಡ್ಜ್ ಹೆಸರಿನಲ್ಲಿ 65 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಗಾಬರಿಯಾದ ಕೃಷ್ಣದಾಸ್, ಪೊಲೀಸರಿಗೆ ದೂರು ನೀಡಿದ್ರು.

    ದೂರು ಸ್ವೀಕರಿಸಿದ ನಂದಿನಿಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹನಿಟ್ರ್ಯಾಪ್ ಜಾಲವನ್ನು ಬೇಧಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ಈ ಹನಿಟ್ರ್ಯಾಪ್ ನಡೆದಿದೆ ಅಂತ ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗರ್ಭಿಣಿಯರಿಗೆ ಸಿಸೇರಿಯನ್ ಹೆರಿಗೆ ಯಾಕೆ ಮಾಡ್ತಾರೆ? ಕಾರಣಗಳೇನು?

    ಗರ್ಭಿಣಿಯರಿಗೆ ಸಿಸೇರಿಯನ್ ಹೆರಿಗೆ ಯಾಕೆ ಮಾಡ್ತಾರೆ? ಕಾರಣಗಳೇನು?

    ಬೆಂಗಳೂರು: ಸ್ಯಾಂಡಲ್ ವುಡ್ ಸಿಂಡ್ರೆಲಾ ರಾಧಿಕಾ ಪಂಡಿತ್ ಅವರು ಇಂದು ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ರಾಧಿಕಾ ಅವರಿಗೆ ಸಿಸೇರಿಯನ್ ಮಾಡುವ ಮೂಲಕ ಮಗುವನ್ನು ಹೊರತೆಗೆಯಲಾಗಿದೆ. ಸದ್ಯ ತಾಯಿ-ಮಗು ಆರೋಗ್ಯವಾಗಿದ್ದಾರೆ.

    ಸಿಸೇರಿಯನ್ ಯಾಕೆ?:
    ತನ್ನ ಜೀವದೊಂದಿಗೆ ಇನ್ನೊಂದು ಜೀವವನ್ನು ಜೋಪಾನ ಮಾಡಿಟ್ಟುಕೊಂಡು ಜಗತ್ತಿಗೆ ಪರಿಚಯಿಸುವ ಶಕ್ತಿ ಹೆಣ್ಣಿಗೆ ವರದಾನವಾಗಿದೆ. ಒಂಬತ್ತು ತಿಂಗಳು ತಾಯಿಯ ಜೀವದಲ್ಲಿ ಬೆರೆತು ಸೂಕ್ತ ಸಮಯದ ನಂತರ ಹೊರಬರುವ ನೈಸರ್ಗಿಕ ಪ್ರಕ್ರಿಯೆ ಅತ್ಯಂತ ಮಹತ್ವದ್ದಾಗಿರುತ್ತದೆ. ಕೆಲವೊಮ್ಮೆ ಪ್ರಸವದ ಸಂದರ್ಭದಲ್ಲಿ ಉಂಟಾಗುವ ವ್ಯತ್ಯಾಸ ಅಥವಾ ಅವಘಡದಿಂದಾಗಿ ತಾಯಿ ಮತ್ತು ಮಗು ಇಬ್ಬರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿರುತ್ತವೆ. ಕೆಲ ಗಂಟೆ ತಾಯಿ ಅನುಭವಿಸುವ ಪ್ರಸವದ ನೋವು ಜೀವನದ ಒಂದು ಅವಿಸ್ಮರಣೀಯ ಅನುಭವವಾಗುತ್ತದೆ. ಅಲ್ಲದೇ ಸಾರ್ಥಕತೆಯ ಭಾವನೆ ಮೂಡುತ್ತದೆ. ಆದರೆ ಇತ್ತೀಚೆಗೆ ಪ್ರಸವ ನೋವು ಅನುಭವಿಸಲು ಮಹಿಳೆಯರು ಹಿಂಜರಿಯುತ್ತಿದ್ದು, ಪರಿಣಾಮ ಸಿಸೇರಿಯನ್ ಕಡೆ ಮುಖಮಾಡುತ್ತಾರೆ.


    ಹೆರಿಗೆ ನೋವು ಇರಲ್ಲ:
    ಹೆರಿಗೆ ಎನ್ನುವುದು ಮಹಿಳೆಯ ಜೀವನದ ಪ್ರಧಾನ ಘಟ್ಟವಾಗಿರುತ್ತದೆ. ತನ್ನ ಜೀವದೊಂದಿಗೆ ಮತ್ತೊಂದು ಜೀವವನ್ನು ಹೊರಜಗತ್ತಿಗೆ ಪರಿಚಯಿಸುವ ಶುಭಸಂದರ್ಭದಲ್ಲಿ ನಾರ್ಮಲ್ ಇರಲಿ, ಸಿಸೇರಿಯನ್ ಇರಲಿ ನೋವು ಇದ್ದೇ ಇರುತ್ತದೆ. ಸಿಸೇರಿಯನ್(ಶಸ್ತ್ರಚಿಕಿತ್ಸೆ) ಮಾಡುವ ಸಂದರ್ಭದಲ್ಲಿ ನೋವು ಅನುಭವಕ್ಕೆ ಬಾರದಿದ್ದರೂ ಅನಸ್ತೇಷಿಯಾದ ಪವರ್ ಕಡಿಮೆಯಾದ ಮೇಲೆ ನೋವು ಅನುಭವಕ್ಕೆ ಬರುತ್ತದೆ.

    ಸಿಸೇರಿಯನ್‍ಗೆ ಕಾರಣಗಳೇನು?
    ಮಗು ದಪ್ಪ ಅಥವಾ ತೂಕ ಇದ್ದರೆ ಸಾಮಾನ್ಯ ಹೆರಿಗೆ ಕಷ್ಟವಾಗುತ್ತದೆ. ಅಲ್ಲದೇ ಗರ್ಭದಲ್ಲಿ ಮಗು ತಲೆ ಕೆಳಗಾಗಿದ್ದರೆ ಅಥವಾ ಇನ್ನಿತರ ಸ್ಥಿತಿಗಳಲ್ಲಿದ್ದರೆ ಶಸ್ತ್ರಚಿಕಿತ್ಸೆ ಅನಿವಾರ್ಯವಾಗುತ್ತದೆ. ಈ ಸಂದರ್ಭದಲ್ಲಿ ವೈದ್ಯರು ಶಸ್ತ್ರ ಚಿಕಿತ್ಸೆಯ ಮೂಲಕ ಮಗುವನ್ನು ಹೊರ ತೆಗೆಯುವಂತೆ ಸೂಚನೆ ನೀಡುತ್ತಾರೆ.

    ಇಷ್ಟು ಮಾತ್ರವಲ್ಲದೇ ಗರ್ಭಿಣಿ ತೂಕದಲ್ಲಿ ಕಡಿಮೆಯಾದಾಗಲು ನಾರ್ಮಲ್ ಹೆರಿಗೆ ಕಷ್ಟವಾಗುತ್ತದೆ. 7-8 ತಿಂಗಳಲ್ಲಿ ಗರ್ಭದಲ್ಲಿ ಸಮಸ್ಯೆಯಾದಲ್ಲಿ ಮಗು ಹೊರ ತೆಗೆಯುವುದು ಅನಿವಾರ್ಯವಾಗುತ್ತದೆ. ಈ ವೇಳೆಯೂ ಶಸ್ತ್ರಚಿಕಿತ್ಸೆ ಆಯ್ದುಕೊಳ್ಳುತ್ತಾರೆ. ಪ್ರಸ್ತುತ ದಂಪತಿ ಒಂದು ಮಗು ಪಡೆದರೆ ಹೆಚ್ಚು ಅನ್ನೋ ಸಂದರ್ಭ ಬಂದಾಗ ಗರ್ಭಿಣಿಯರಲ್ಲಿ ನೋವು ತಡೆದುಕೊಳ್ಳುವ ಶಕ್ತಿ ಕೊಂಚ ಕಡಿಮೆ ಇರುತ್ತದೆ. ಹೀಗಾಗಿ ಕುಟುಂಬದವರೇ ಶಸ್ತ್ರಚಿಕಿತ್ಸೆ ಮಾಡುವಂತೆ ತಿಳಿಸುತ್ತಾರೆ.

    ಕನಿಷ್ಠ 3 ತಿಂಗ್ಳು ವಿಶ್ರಾಂತಿ:
    ಸಿಸೇರಿಯನ್ ಬಳಿಕ ಕಡಿಮೆಯೆಂದ್ರೂ 3 ತಿಂಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳಬೇಕು. ಈ ಸಮಯದಲ್ಲಿ ಆಹಾರದ ಬಗ್ಗೆ ಎಚ್ಚರವಹಿಸಬೇಕು. ದೇಹದ ಮೂಳೆಗಳನ್ನು ಗಟ್ಟಿಗೊಳೀಸುವಂತಹ ಆಹಾರಗಳನ್ನು ಸೇವಿಸಿಬೇಕು. ಜೊತೆಗೆ ಹೆಚ್ಚು ಕೆಲಸ ಮಾಡಬಾರದು. ತುಂಬಾ ಭಾರ ಎತ್ತಬಾರದು. ಯಾಕಂದ್ರೆ ಆಪರೇಷನ್ ಬಳಿಕ ಸರಿಯಾಗಿ ಆರೈಕೆ ಮಾಡದಿದ್ದರೆ ದೇಹಕ್ಕೆ ತೊಂದರೆ ಎದುರಾಗುವ ಸಾಧ್ಯತೆಗಳಿವೆ. ಹೀಗಾಗಿ ಆಪರೇಷನ್ ಬಳಿಕ ಸಿ ಸೆಕ್ಷನ್ ಅನ್ನೋ ಬೆಲ್ಟ್ ಧರಿಸುವುದು ಉತ್ತಮ. ಇದರಿಂದ ಸೊಂಟ ನೋವು ತಡೆಗಟ್ಟಬಹುದು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv