Tag: mother

  • 2ರ ಕಂದಮ್ಮನನ್ನು ಕಿಡ್ನಾಪ್‍ಗೈದು ರೇಪ್ ಮಾಡಿ ರೈಲ್ವೇ ಹಳಿ ಬಳಿ ಬಿಸಾಕ್ದ!

    2ರ ಕಂದಮ್ಮನನ್ನು ಕಿಡ್ನಾಪ್‍ಗೈದು ರೇಪ್ ಮಾಡಿ ರೈಲ್ವೇ ಹಳಿ ಬಳಿ ಬಿಸಾಕ್ದ!

    – ಪೊಲೀಸರಿಂದ ಪುಟಾಣಿಯ ರಕ್ಷಣೆ

    ನವದೆಹಲಿ: ಫುಟ್ ಪಾತ್ ನಲ್ಲಿ ತಾಯಿ ಜೊತೆ ಮಲಗಿದ್ದ 2 ವರ್ಷದ ಪುಟ್ಟ ಕಂದಮ್ಮನನ್ನು ಯುವಕನೊಬ್ಬ ಕಿಡ್ನಾಪ್ ಮಾಡಿ, ಅತ್ಯಾಚಾರವೆಸಗಿ ಬಳಿಕ ರೈಲ್ವೇ ಟ್ರ್ಯಾಕ್ ಬಳಿ ಎಸೆದು ಹೋದ ಹೃದಯವಿದ್ರಾವಕ ಘಟನೆಯೊಂದು ನವದೆಹಲಿಯಲ್ಲಿ ನಡೆದಿದೆ.

    ಈ ಘಟನೆ ದೆಹಲಿಯ ಹಳೇ ರೈಲ್ವೇ ನಿಲ್ದಾಣದಲ್ಲಿ ಶನಿವಾರ ನಸುಕಿನ ಜಾವ ನಡೆದಿದ್ದು, ಇಂದು ಬೆಳಗ್ಗೆ ಆರೋಪಿಯನ್ನು ಬಂಧಿಸಿದ್ದಾರೆ. 24 ವರ್ಷದ ಅನಿಲ್ ಬಂಧಿತ ಆರೋಪಿಯಾಗಿದ್ದು, ಈತ ಡ್ರಗ್ ವ್ಯಸನಿಯಾಗಿದ್ದಾನೆ ಎನ್ನುವುದು ತಿಳಿದುಬಂದಿದೆ.

    ಘಟನೆ ವಿವರ:
    ಉತ್ತರ ದೆಹಲಿಯ ಕಾಟ್ ವಾಲಿ ಪ್ರದೇಶದ ಫುಟ್ ಪಾತ್ ನಲ್ಲಿ ಶುಕ್ರವಾರ ರಾತ್ರಿ ಕಂದಮ್ಮ ತನ್ನ ತಾಯಿ ಜೊತೆ ಮಲಗಿದ್ದಳು. ಆದ್ರೆ ನಸುಕಿನ ಜಾವ 2.30ರ ಸುಮಾರಿಗೆ ಕಂದಮ್ಮ ತನ್ನ ಬಳಿ ಇಲ್ಲದಿರುವುದನ್ನು ತಾಯಿ ಗಮನಿಸಿದ್ದಾರೆ. ಅಲ್ಲದೇ ಎಲ್ಲಾ ಕಡೆ ಹುಡುಕಾಡಿದ್ದಾರೆ.

    ಈ ವೇಳೆ ಮಗಳು ಇಲ್ಲದಿರುವುದನ್ನು ಮನಗಂಡ ತಾಯಿ ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಮಗಳು ಕಾಣದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಕಂದಮ್ಮ ನಾಪತ್ತೆ ದೂರು ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    ಮಹಿಳೆಯ ದೂರಿನಂತೆ ಕಂದಮ್ಮನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಮಧ್ಯಾಹ್ನ ಸುಮಾರಿಗೆ ಕೇಂದ್ರ ದೆಹಲಿಯ ಆಸ್ಪತ್ರೆಯೊಂದರಲ್ಲಿ ಕಂದಮ್ಮ ದಾಖಲಾಗಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭಿಸಿದೆ. ಆ ಕಂದಮ್ಮನನ್ನು ಕಾಟ್ ವಾಲಿ ಪ್ರದೇಶದ ನಿವಾಸಿ ಎಂಬುದಾಗಿ ಗುರುತಿಸಲಾಗಿತ್ತು ಅಂತ ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.

    ಅಲ್ಲದೇ ಕಂದಮ್ಮನ ಮೇಲೆ ಲೈಂಗಿಕ ದೌರ್ಜನ್ಯವೆಸಗಲಾಗಿದ್ದು, ಬಳಿಕ ಆಕೆಯನ್ನು ಕಿಡಿಗೇಡಿಗಳು ರೈಲ್ವೇ ಟ್ರ್ಯಾಕ್ ಬಳಿ ಬಿಸಾಕಿ ಹೋಗಿದ್ದರು. ಇದನ್ನು ಗಮನಿಸಿದ ಅಲ್ಲಿನ ಪೊಲೀಸರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಕಂದಮ್ಮನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯವಾಗಿದ್ದಾಳೆ ಅಂತ ಪೊಲೀಸರು ತಿಳಿಸಿದ್ದಾರೆ.

    ಘಟನೆ ನಡೆದ ಸ್ಥಳೀಯ ಸಿಸಿಟಿವಿಗಳನ್ನು ಪರಿಶೀಲಿಸಿದ ಪೊಲೀಸರು ಆರೋಪಿಗಾಗಿ ಬಲೆ ಬೀಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಈ ಹಿಂದೆ ಹರಿದ್ವಾರದಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದನು ಎಂಬುದಾಗಿ ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಮಗುವಿಗೆ ನೇಣು ಬಿಗಿದು, ತಾನೂ ಆತ್ಮಹತ್ಯೆ ಮಾಡ್ಕೊಂಡ ತಾಯಿ!

    ಮಗುವಿಗೆ ನೇಣು ಬಿಗಿದು, ತಾನೂ ಆತ್ಮಹತ್ಯೆ ಮಾಡ್ಕೊಂಡ ತಾಯಿ!

    ಮೈಸೂರು: ತಾಯಿಯೊಬ್ಬಳು 2 ವರ್ಷದ ಪುಟ್ಟ ಕಂದಮ್ಮನನ್ನು ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ಕುನ್ನೇಗಾಲ ಗ್ರಾಮದಲ್ಲಿ ನಡೆದಿದೆ.

    ಪುಟ್ಟ ಕಂದಮ್ಮ ಮಾನ್ವಿತಾಳನ್ನು ಕೊಲೆಗೈದ ಬಳಿಕ 23 ವರ್ಷದ ರಾಜೇಶ್ವರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಜೇಶ್ವರಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

    ಕೂಡಗಿ ಗ್ರಾಮದ ಸೋಮಣ್ಣ ಹಾಗೂ ರಾಜೇಶ್ವರಿ ಆರು ವರ್ಷಗಳು ಹಿಂದೆ ಪ್ರೀತಿಸಿ ಮದುವೆ ಆಗಿದ್ದರು. ಈ ದಂಪತಿಗೆ ಒಂದು ಹೆಣ್ಣು ಹಾಗೂ ಗಂಡು ಮಕ್ಕಳಿದ್ದವು. ಆದ್ರೆ ರಾಜೇಶ್ವರಿ ಅವರು ಕಳೆದ 2 ವರ್ಷದಿಂದ ಕೂಡಗಿ ಗ್ರಾಮದ ವಿನೋದ ಎಂಬಾತನೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದರು ಎಂದು ಪತಿ ಆರೋಪಿಸಿದ್ದಾರೆ.

    ಪತ್ನಿಯ ಅಕ್ರಮ ಸಂಬಂಧವನ್ನು ಪತಿ ಸೋಮಣ್ಣ ಹಲವು ಬಾರಿ ಗಮನಿಸಿದ್ದರು. ಅಲ್ಲದೇ ಆ ಬಳಿಕ ಪತ್ನಿಯನ್ನು ತವರು ಮನೆಗೆ ಬಿಟ್ಟುಬಂದಿದ್ದರು. ಇದರಿಂದ ಮನನೊಂದ ರಾಜೇಶ್ವರಿ ತನ್ನ ಮಗುವಿಗೆ ನೇಣು ಹಾಕಿ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಈ ಸಂಬಂಧ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಹೆತ್ತ ತಾಯಿಯ ಕತ್ತು ಕೊಯ್ದ ಕ್ರೂರಿ ಮಗ!

    ಹೆತ್ತ ತಾಯಿಯ ಕತ್ತು ಕೊಯ್ದ ಕ್ರೂರಿ ಮಗ!

    ರಾಮನಗರ: ಹೆತ್ತ ತಾಯಿಯನ್ನೆ ಮಗ ಬರ್ಬರವಾಗಿ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕರಲಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಪಾರ್ವತಮ್ಮ (50) ಮಹಿಳೆಯಾಗಿದ್ದು, ಮಗ ಕುಮಾರ್ (20) ಕೊಲೆ ಮಾಡಿದ ಆರೋಪಿ. ಇಂದು 4 ಗಂಟೆ ಸಮಯದಲ್ಲಿ ನಡೆದಿದ್ದು, ಮನೆಯ ಆವರಣದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ನಡೆದ ಗಲಾಟೆಯಲ್ಲಿ ಕುಮಾರ್ ಕೋಪಗೊಂಡು ಕುಡುಗೋಲಿನಿಂದ ತಾಯಿಯ ಹತ್ಯೆ ಮಾಡಿದ್ದಾನೆ.

    ಅಂದಹಾಗೇ ಮಗ ಕುಮಾರ್ ತಾಯಿಯ ಅನೈತಿಕ ಸಂಬಂಧ ಹೊಂದಿದ್ದಾರೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದು, ಬಳಿಕ ಮೃತದೇಹವನ್ನು ಸ್ಥಳದಲ್ಲೇ ಬಿಟ್ಟು ನೇರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಆರೋಪಿಯ ಕುಮಾರ್ ಹೇಳಿಕೆ ಕೇಳಿದ ಪೊಲೀಸರು ಒಂದು ಕ್ಷಣ ಶಾಕ್ ಆಗಿದ್ದರು. ಬಳಿಕ ಆತನನ್ನು ವಶಕ್ಕೆ ಪಡೆದ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕುಮಾರ ಪಾರ್ವತಮ್ಮನನ್ನ ಹತ್ಯೆ ಮಾಡಿದ್ದಾನೆ ಎಂಬ ವಿಚಾರ ಇಡೀ ಗ್ರಾಮಕ್ಕೆ ಹರಡುತ್ತಿದ್ದಂತೆ ಇಡೀ ಗ್ರಾಮವೇ ಆತಂಕಕ್ಕೆ ಒಳಗಾಗಿತ್ತು. ಟ್ರ್ಯಾಕ್ಟರ್ ಚಾಲಕನಾಗಿದ್ದ ಕುಮಾರ್ ಗೆ ಕಳೆದ ಹದಿನೈದು ದಿನಗಳ ಕೆಳಗೆ ತನ್ನ ತಾಯಿಯ ನಡುವಳಿಕೆ ಸರಿಯಿಲ್ಲ ಎಂಬುದು ತಿಳಿದಿದೆ. ಇದರಿಂದ ತಾಯಿ ಬೇರೆಯೇ ದಾರಿ ಹಿಡಿದ್ದಾಳೆ ಎಂದು ಕುಪಿತಗೊಂಡಿದ್ದ. ಈ ಬಗ್ಗೆ ಸಾಕಷ್ಟು ಬಾರಿ ತಾಯಿಗೆ ಹೇಳಿದರೂ ಪಾರ್ವತಮ್ಮ ತನ್ನ ನಡುವಳಿಕೆ ಸರಿಪಡಿಸಿಕೊಂಡಿಲ್ಲ. ಹೀಗಾಗಿ ಇವತ್ತು ಬೆಳಗ್ಗೆಯಿಂದಲೇ ಜಗಳ ನಡೆಯುತ್ತಲೇ ಇತ್ತು. ಅಲ್ಲದೆ ಪಾರ್ವತಮ್ಮನ ಗಂಡ ಸಹಾ ಸಾಕಷ್ಟು ಬಾರಿ ತನ್ನ ಹೆಂಡತಿಗೆ ತಿಳಿಹೇಳಿದ್ದರು ಪ್ರಯೋಜನ ಆಗಿರಲಿಲ್ಲ. ಹೀಗಾಗಿ ಇದರಿಂದ ಕುಪಿತಗೊಂಡ ಕುಮಾರ್ ಮನೆಯ ಆವರಣದಲ್ಲಿ ತಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಿ, ನಂತರ ತನ್ನ ತಂದೆಗೆ ಈ ವಿಚಾರವನ್ನ ತಿಳಿಸಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಅರ್ಜುನ್ ಸರ್ಜಾರನ್ನು ಚಕ್ರವ್ಯೂಹದಿಂದ ಬಿಡಿಸಲು ಅಖಾಡಕ್ಕಿಳಿದ ತಾಯಿ..!

    ಅರ್ಜುನ್ ಸರ್ಜಾರನ್ನು ಚಕ್ರವ್ಯೂಹದಿಂದ ಬಿಡಿಸಲು ಅಖಾಡಕ್ಕಿಳಿದ ತಾಯಿ..!

    ಬೆಂಗಳೂರು: ನಟಿ ಶೃತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ಮೀಟೂ ವಿವಾದಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ.

    ಅರ್ಜುನ್ ಸರ್ಜಾರನ್ನು ಮೀಟೂ ಚಕ್ರವ್ಯೂಹದಿಂದ ಬಿಡಿಸಲು ಅವರ ತಾಯಿ ಅಖಾಡಕ್ಕಿಳಿದ್ದಾರೆ. ಬುಧವಾರವಷ್ಟೇ ಮಹಿಳಾ ಆಯೋಗದ ಮುಂದೆ ಸರ್ಜಾ ವಿರುದ್ಧ ಹೇಳಿಕೆ ಕೊಟ್ಟಿದ್ದ ಶೃತಿ ಹರಿಹರನ್‍ಗೆ ಕೌಂಟರ್ ಕೊಡೋದಕ್ಕೆ ಸರ್ಜಾ ತಾಯಿ ಸಜ್ಜಾಗಿದ್ದಾರೆ.

    ಸೋಮವಾರ ಖುದ್ದು ಮಹಿಳಾ ಆಯೋಗದಲ್ಲಿ ಶೃತಿ ಹರಿಹರನ್ ವಿರುದ್ಧವೇ ಸರ್ಜಾ ತಾಯಿ ದೂರು ದಾಖಲಿಸಲಿದ್ದಾರೆ. ನನ್ನ ಮಗನ ವಿರುದ್ಧ ಶೃತಿ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಯಾವುದೇ ಆಧಾರವಿಲ್ಲದೇ ವೈಯಕ್ತಿಕ ತೇಜೋವಧೆ ಮಾಡುತ್ತಿದ್ದಾರೆ ಅಂತಾ ಸರ್ಜಾ ತಾಯಿ ದೂರು ನೀಡಲಿದ್ದಾರೆ ಅನ್ನುವ ಮಾಹಿತಿ ಸರ್ಜಾ ಕುಟುಂಬದ ಮೂಲದಿಂದ ಪಬ್ಲಿಕ್ ಟಿವಿಗೆ ಮಾಹಿತಿ ಬಂದಿದೆ.

    ಸದ್ಯ ಆಯೋಗದಲ್ಲಿ ದೂರು ದಾಖಲಾದ ಬಳಿಕ ಮತ್ತೆ ಶೃತಿ ಹರಿಹರನ್ ವಿಚಾರಣೆಯನ್ನು ಆಯೋಗ ನಡೆಸಲಿದೆ.


    ನಾನು ಸಕ್ಕರೆ, ಮಾಧ್ಯಮಗಳು ಇರುವೆಯಿದ್ದಂತೆ:
    ಇಂದು ನಟಿ ಶೃತಿ ಹರಿಹರನ್ ಮಹಿಳಾ ಆಯೋಗದ ಕಚೇರಿಗೆ ಆಗಮಿಸಿ ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು. ಕಚೇರಿಗೆ ಆಗಮಿಸಿದ ಶೃತಿ ಹರಿಹರನ್, ನಾನು ಸಕ್ಕರೆ ಇದ್ದಂತೆ. ಮಾಧ್ಯಮಗಳು ಇರುವೆ ಅಂತಾ ಹೇಳಿದ್ದರು. ಮಹಿಳಾ ಆಯೋಗದಿಂದ ಹೊರ ಬಂದಾಗ ಈ ಕುರಿತು ಪ್ರಶ್ನಿಸಿದಾಗ, ನಾನು ಆ ರೀತಿ ಹೇಳಿಯೇ ಇಲ್ಲ ಎಂದು ಮಾತು ಬದಲಿಸಿದ್ದರು.

    ನನ್ನ ಜೀವನದಲ್ಲಿ ಮಾಧ್ಯಮಗಳನ್ನು ತುಂಬಾ ಗೌರವಿಸುತ್ತೇನೆ. ನಾನು ಆ ರೀತಿ ಹೇಳಿಲ್ಲ ಅಂತಾ ಹೇಳಿದಾಗ ಪಬ್ಲಿಕ್ ಟಿವಿ ಪ್ರತಿನಿಧಿ, ನೀವು ಮಾತನಾಡಿರುವ ಆಡಿಯೋ ಮತ್ತು ವಿಡಿಯೋ ಇದೆ. ಬೇಕಾದರೆ ಒಂದು ಸಾರಿ ಕೇಳಿ ಎಂದು ಪ್ರಶ್ನೆ ಮಾಡಿದ್ದರು. ಇದರಿಂದ ಒಂದು ಕ್ಷಣ ಗೊಂದಲಕ್ಕೊಳಗಾದ ಶೃತಿ ನಗುವೊಂದನ್ನು ಬೀರಿ ಕಾರ್ ಹತ್ತಿ ಹೊರಟು ಹೋಗಿದ್ದರು.

    ನಟ ಅರ್ಜುನ್ ಸರ್ಜಾ ವಿರುದ್ಧ ಶೃತಿ ಹರಿಹರನ್ ಮಾಧ್ಯಮಗಳ ಮುಂದೆಯೇ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಈ ಸಂಬಂಧ ಮಹಿಳಾ ಅಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿತ್ತು. ಪ್ರಕರಣ ದಾಖಲಿಸಿಕೊಂಡ ಮಹಿಳಾ ಅಯೋಗ ಶೃತಿಗೆ ತಮ್ಮ ಹೇಳಿಕೆಯನ್ನು ದಾಖಲಿಸುವಂತೆ ಸೂಚಿಸಿತ್ತು. ಅದ್ಯಾಕೋ ಶೃತಿ ಮಾತ್ರ ಕಳೆದ ಕೆಲ ದಿನಗಳಿಂದ ಫುಲ್ ಸೈಲೆಂಟ್ ಆಗಿದ್ದರು. ಈ ಹಿನ್ನೆಲೆಯಲ್ಲಿ ಇಂದು ವಕೀಲ ಅನಂತ್ ನಾಯ್ಕ್ ಅವರ ಜೊತೆ ಮಹಿಳಾ ಆಯೋಗದ ಮುಂದೆ ಹಾಜರಾದ ಶೃತಿ, ವಿಸ್ಮಯ ಚಿತ್ರೀಕರಣದ ಅನುಭವವನ್ನು ಹಂಚಿಕೊಂಡಿದ್ದಾರೆ. ಶೃತಿಯನ್ನು ಪ್ರತ್ಯೇಕ ಕೊಠಡಿಗೆ ಕರೆದುಕೊಂಡ ಹೋದ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಂಡಿದ್ದು, ಈ ವಿಚಾರಣೆ ನಡೆಯಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • 3 ವರ್ಷದ ಮಗುವಿನ ಜೊತೆ ಬಾವಿಗೆ ಹಾರಿದ ತಾಯಿ

    3 ವರ್ಷದ ಮಗುವಿನ ಜೊತೆ ಬಾವಿಗೆ ಹಾರಿದ ತಾಯಿ

    ಚಿಕ್ಕಬಳ್ಳಾಪುರ: ಮೂರು ವರ್ಷದ ಮುದ್ದು ಕಂದಮ್ಮನ ಜೊತೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅವುಲನಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

    26 ವರ್ಷದ ಐಶ್ವರ್ಯ ಹಾಗೂ 3 ವರ್ಷದ ಪ್ರಣೀತಾ ಮೃತರು. 4 ವರ್ಷಗಳ ಹಿಂದೆ ಬಿ.ಕೊತ್ತಕೋಟ ಗ್ರಾಮದ ಸೋದರಮಾವ ಮಂಜನಾಥ್ ನೊಂದಿಗೆ ಐಶ್ವರ್ಯ ಗೆ ವಿವಾಹ ಮಾಡಿಕೊಡಲಾಗಿತ್ತು. ಮಂಜುನಾಥ್ ಹೈದರಾಬಾದ್ ನ ಪ್ರಿಂಟಿಗ್ ಪ್ರೆಸ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರಣ ದಂಪತಿ ಹೈದರಾಬಾದ್ ನಲ್ಲಿ ಜೀವನ ಸಾಗಿಸುತ್ತಿದ್ದರು. 3 ದಿನಗಳ ಹಿಂದೆ ತವರು ಮನೆಗೆ ತನ್ನ ಮಗುವಿನ ಜೊತೆ ಬಂದ ಐಶ್ವರ್ಯ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಗ್ರಾಮದ ರೈತ ವೆಂಕಟರೆಡ್ಡಿ ಎಂಬವರ ತೋಟದಲ್ಲಿನ ಬಾವಿಗೆ ತನ್ನ ಮಗುವಿನ ಜೊತೆ ಹಾರಿ ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಬಾವಿ ಬಳಿ ಇದ್ದ ಚಪ್ಪಲಿಯನ್ನ ಕಂಡು ಬಾವಿ ಕಡೆಗೆ ರೈತ ವೆಂಕಟರೆಡ್ಡಿ ನೋಡಿದಾಗ ಬಾವಿಯಲ್ಲಿ ಐಶ್ವರ್ಯ ಹಾಗೂ ಮಗು ಬಿದ್ದಿರುವುದು ಕಂಡು ಬಂದಿದೆ. ಈ ಸಂಬಂಧ ಗುಡಿಬಂಡೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತದೇಹಗಳನ್ನ ಬಾವಿಯಿಂದ ಹೊರತೆಗೆದಿದ್ದಾರೆ. ಸದ್ಯ ಮೃತ ದೇಹಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

    ಕೌಟುಂಬಿಕ ಕಲಹದ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಮಕ್ಕಳ ದಿನಾಚರಣೆಯಂದು ತ್ರಿವಳಿ ಮಕ್ಕಳಿಗೆ ಜನ್ಮ- ಮತ್ತೊಂದೆಡೆ ಮಗುವನ್ನೇ ಬಿಟ್ಟು ಹೋದ ತಾಯಿ

    ಮಕ್ಕಳ ದಿನಾಚರಣೆಯಂದು ತ್ರಿವಳಿ ಮಕ್ಕಳಿಗೆ ಜನ್ಮ- ಮತ್ತೊಂದೆಡೆ ಮಗುವನ್ನೇ ಬಿಟ್ಟು ಹೋದ ತಾಯಿ

    ತುಮಕೂರು/ಯಾದಗಿರಿ: ಮಕ್ಕಳ ದಿನಾಚರಣೆಯಂದು ತುಮಕೂರಿನಲ್ಲಿ ತಾಯಿಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದರೆ, ಯಾದಗಿರಿಯಲ್ಲಿ ತಾಯಿಯೇ ತನ್ನ ನವಜಾತ ಹೆಣ್ಣು ಶಿಶುವನ್ನು ಬಿಟ್ಟು ಹೋಗಿರುವ ಪ್ರಕರಣ ಬೆಳಕಿಗೆ ಬಂದಿದೆ.

    ತುಮಕೂರು ಜಿಲ್ಲೆ ಶಿರಾ ತಾಲೂಕಿನ ಖಾಸಗಿ ಆಸ್ಪತ್ರೆಯಲ್ಲಿ ಅಪರೂಪದ ಘಟನೆ ನಡೆದಿದೆ. ಮಕ್ಕಳ ದಿನಾಚರಣೆಯಂದೇ ತಾಯಿಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. 24 ವರ್ಷದ ಶೈಲಾ ಅವರು ಮೂವರು ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸದ್ಯ ತಾಯಿ ಹಾಗೂ ಮಕ್ಕಳು ಆರೋಗ್ಯದಿಂದ ಇದ್ದಾರೆ. ಡಾ. ಶಿಲ್ಪಾಶ್ರೀ ನೇತೃತ್ವದ ವೈದ್ಯರ ತಂಡದಿಂದ ಡೆಲಿವರಿ ಮಾಡಿಸಿದೆ.

    ಇತ್ತ ಯಾದಗಿರಿಯಲ್ಲಿ ಮಕ್ಕಳ ದಿನಾಚರಣೆ ದಿನವೇ ತಾಯಿಯೊಬ್ಬರು ನವಜಾತ ಹೆಣ್ಣು ಶಿಶುವನ್ನು ಬಿಟ್ಟು ಹೋಗಿದ್ದಾಳೆ. ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆ ದಾಖಲಾಗಿದ್ದಳು. ಹೆರಿಗೆ ನಂತರ ಬೆಳಿಗ್ಗೆ ತಾಯಿ ಹೆತ್ತ ಮಗುವನ್ನು ಬಿಟ್ಟು ಪರಾರಿಯಾಗಿದ್ದಾಳೆ.

    ಸದ್ಯ ಮಕ್ಕಳ ರಕ್ಷಣಾ ಘಟಕ ಅಧಿಕಾರಿಗಳಿಂದ ನವಜಾತ ಹೆಣ್ಣು ಶಿಶು ರಕ್ಷಿಸಿದ್ದು, ಹೆತ್ತಮ್ಮಳ ಮಡಿಲು ಸೇರಲು ಮಗು ಹಂಬಲಿಸುತ್ತಿದೆ. ಮಗುವನ್ನು ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿದ್ದು, ಗುರುಮಠಕಲ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದ ಮಹಾತಾಯಿ!

    21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದ ಮಹಾತಾಯಿ!

    ಲಂಡನ್: ಇಂಗ್ಲೆಂಡಿನ 43 ವರ್ಷದ ಮಹಾತಾಯಿಯೊಬ್ಬರು 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದು ಹೇಳುವುದರ ಮೂಲಕ ಎಲ್ಲರಿಗೂ ಆಶ್ಚರ್ಯ ಮೂಡಿಸಿದ್ದಾರೆ.

    ಸ್ಯೂ ರಾಡ್ಫೋರ್ಡ್ 21ನೇ ಮಗುವಿಗೆ ಜನ್ಮ ನೀಡಿದ ಮಹಿಳೆ. 20 ಮಕ್ಕಳನ್ನು ಪಡೆದು ರಾಡ್ಫೋರ್ಡ್ ಕುಟುಂಬ ಯುಕೆಯಲ್ಲೇ ಅತಿ ದೊಡ್ಡದಾದ ಕುಟುಂಬ. ಸದ್ಯ ಈ ಕುಟುಂಬಕ್ಕೆ 21ನೇ ಸದಸ್ಯ ಎಂಟ್ರಿ ನೀಡಿದ್ದು, ರಾಡ್ಫೋರ್ಡ್ ಇದು ಲಾಸ್ಟ್ ಮಗು ಎಂದು ತಿಳಿಸಿದ್ದಾರೆ.

    ರಾಡ್ಫೋರ್ಡ್ ನ.6ರಂದು ತನ್ನ 21ನೇ ಮಗು ಬೋನಿ ರಾಯೈಗೆ ಜನ್ಮ ನೀಡಿದ್ದಾರೆ. ಬೋನಿ ಜನ್ಮದಿಂದ ಈಗ ನನ್ನ ಕುಟುಂಬದಲ್ಲಿ 23 ಮಂದಿ ಆಗಿದ್ದಾರೆ. ಸದ್ಯ ನಾನು ಹಾಗೂ ನನ್ನ ಪತಿ ಇನ್ನು ಮಗು ಬೇಡ ಎಂದು ನಿರ್ಧರಿಸಿದ್ದೇವೆ. ಬೋನಿ ನಮ್ಮ ಕುಟುಂಬವನ್ನು ಕಂಪ್ಲೀಟ್ ಮಾಡಿದ್ದಾಳೆ ಎಂದು ಹೇಳಿ ಸಂಭ್ರಮಿಸಿದ್ದಾರೆ.

    ನಾವು ಎರಡು ಅಥವಾ ಮೂರು ಮಗುವನ್ನು ಪಡೆಯಲು ಮಾತ್ರ ನಿರ್ಧರಿಸಿದ್ದೇವು. ಆದರೆ ನಾವು ಈಗ 21 ಮಗುವನ್ನು ಪಡೆದಿದ್ದೇವೆ. ನನ್ನ ಎಲ್ಲ ಮಕ್ಕಳು ತಮ್ಮ ಮೂರು ದಶಕದ ಕಿರಿಯ ಸಹೋದರಿಯನ್ನು ನೋಡಲು ನನ್ನ ಎಲ್ಲ ಮಕ್ಕಳು ಖುಷಿಯಾಗಿದ್ದಾರೆ ಎಂದು ರಾಡ್ಫೋರ್ಡ್ ಹೇಳಿದ್ದಾರೆ.

    ತಮ್ಮ ಸಹೋದರಿಯನ್ನು ನೋಡಲು ಎಲ್ಲರೂ ಜಗಳವಾಡಿದರು. ನಂತರ ನಾವು ಮಗುವನ್ನು ಮನೆಗೆ ಕರೆದುಕೊಂಡು ಬಂದಾಗ ಎಲ್ಲರೂ ಮಗುವನ್ನು ನೋಡಲು ಸರದಿಯಲ್ಲಿ ನಿಂತಿದ್ದರು. ನಾವು ಮೂರು ಮಕ್ಕಳು ಪಡೆಯಲು ನಿರ್ಧರಿಸಿದ್ದೇವು. ರಾಡ್ಫೋರ್ಡ್ ಒಂಬತ್ತನೇ ಮಗುವಿಗೆ ಜನ್ಮ ನೀಡಿದ ನಂತರ ಕೆಲವು ವರ್ಷಗಳ ಹಿಂದೆ ನಾನು ಸಂತಾನಹರಣ ಮಾಡಿಸಲು ನಿರ್ಧರಿಸಿದೆ. ಆದರೆ ನನಗೆ ತಂದೆಯಾಗುವ ಬಯಕೆಯಿತ್ತು. ಹಾಗಾಗಿ ನಾನು ಈ ನಿರ್ಧಾರದಿಂದ ಹಿಂದೆ ಸರಿದೆ ಎಂದು ರಾಡ್ಫೋರ್ಡ್ ಪತಿ ತಿಳಿಸಿದ್ದಾರೆ.

    ರಾಡ್ಫೋರ್ಡ್ ಹಾಗೂ ಆಕೆಯ ಪತಿ ಮೋರ್ ಕ್ಯಾಂಬೇಯಲ್ಲಿ ಮಕ್ಕಳ ಸಹಾಯದಲ್ಲಿ ಬೇಕರಿ ನಡೆಸುತ್ತಿದ್ದಾರೆ. ನಾನು ಮತ್ತೆ ಗರ್ಭಿಣಿಯಾಗುವುದನ್ನು ಮಿಸ್ ಮಾಡುತ್ತೇನೆ ಎಂದಿದ್ದಾರೆ. ಸದ್ಯ ರಾಡ್ಫೋರ್ಡ್ 7ನೇ ವಯಸ್ಸಿನಲ್ಲಿದ್ದಾಗ ತನ್ನ ಪತಿ ನಿಯೋಲ್‍ಯನ್ನು ಭೇಟಿಯಾಗಿದ್ದರು. 14ನೇ ವಯಸ್ಸಿಗೆ ರಾಡ್ಫೋರ್ಡ್ ಮೊದಲನೇ ಗಂಡು ಮಗುವಿಗೆ ಜನ್ಮ ನೀಡಿದ್ದು ಆತನಿಗೆ ಈಗ 29 ವರ್ಷ. ರಾಡ್ಫೋರ್ಡ್ ತನ್ನ ಜೀವನದಲ್ಲಿ ಒಟ್ಟು 800 ವಾರ ಗರ್ಭಿಣಿಯಾಗಿದ್ದರು.

    ಕ್ರಿಸ್, ಸೋಫಿ, ಕ್ಲೋಯ್, ಜ್ಯಾಕ್, ಡೇನಿಯಲ್, ಲ್ಯೂಕ್, ಮಿಲ್ಲಿ, ಕೇಟೀ, ಜೇಮ್ಸ್, ಎಲ್ಲೀ, ಐಮೀ, ಜೋಶ್, ಮ್ಯಾಕ್ಸ್, ಟೆಲ್ಲೀ, ಆಸ್ಕರ್, ಕ್ಯಾಸ್ಪರ್, ಹ್ಯಾಲೀ, ಫೋಬೆ ಮತ್ತು ಆರ್ಚೀ ಅವರ ಮಕ್ಕಳ ಹೆಸರಾಗಿದ್ದು, ಸೋಫಿ ಮೂರು ಮಕ್ಕಳ ತಾಯಿ. ಸದ್ಯ ರಾಡ್ಫೋರ್ಡ್ ಈಗ ಅಜ್ಜಿ ಆಗಿದ್ದಾರೆ. ರಾಡ್ಫೋರ್ಡ್ ಡೆಲಿವರಿಗೆ ಆಸ್ಪತ್ರೆಗೆ ಹೋದಾಗ, ಮುಂದಿನ ವರ್ಷ ಬರುತ್ತೀರಾ ಎಂದು ಸಿಬ್ಬಂದಿ ಪ್ರಶ್ನಿಸಿದ್ದಾರೆ. ಅದಕ್ಕೆ ಅವರು ಇಲ್ಲವೆಂದು ಉತ್ತರಿಸಿದ್ದರು. ಆದರೆ ಹಿಂದಿನ ವರ್ಷ 20ನೇ ಮಗು ಜನಿಸಿದಾಗ ಕೂಡ ರಾಡ್ಫೋರ್ಡ್ ಇದೇ ಉತ್ತರ ನೀಡಿದ್ದರು ಎಂದು ವರದಿಯಾಗಿದೆ.

     

    View this post on Instagram

     

    This is what breakfast time looks like well one table anyway ????????

    A post shared by Radford Family (@theradfordfamily) on

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ತನ್ನ ಇನಿಯನ ಜೊತೆ ಅಪ್ರಾಪ್ತ ಮಗಳ ಮದ್ವೆ ಮಾಡಿಸಿದ ತಾಯಿ

    ತನ್ನ ಇನಿಯನ ಜೊತೆ ಅಪ್ರಾಪ್ತ ಮಗಳ ಮದ್ವೆ ಮಾಡಿಸಿದ ತಾಯಿ

    -ಮದ್ವೆ ಬಳಿಕ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ

    ಚೆನ್ನೈ: ತಾಯಿ ತನ್ನ ಪ್ರಿಯಕರನ ಜೊತೆ ಅಪ್ರಾಪ್ತ ಮಗಳ ಮದುವೆ ಮಾಡಿಸಿರುವ ಘಟನೆ ತಮಿಳುನಾಡಿನ ನಿಲಕರಾಯಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಅಪ್ರಾಪ್ತ ಬಾಲಕಿಯನ್ನು ಮಹಿಳಾ ಮತ್ತು ಮಕ್ಕಳ ಸಂರಕ್ಷಣಾ ಕಲ್ಯಾಣ ಇಲಾಖೆ ಅಧಿಕಾರಿಗಳು ರಕ್ಷಿಸಿ ಬಾಲಗೃಹದಲ್ಲಿ ಇರಿಸಿದ್ದಾರೆ.

    ಶುಕ್ರವಾರ ರಾತ್ರಿ ಮಕ್ಕಳ ಕಲ್ಯಾಣ ಇಲಾಖೆಯ ಸಹಾಯವಾಣಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದ ಅಧಿಕಾರಿಗಳು ಸ್ಥಳೀಯ ಪೊಲೀಸರ ಸಹಾಯದಿಂದ ಕೂಡಲೇ ಘಟನಾ ಸ್ಥಳಕ್ಕೆ ತೆರಳಿ ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ.

    ಏನಿದು ಪ್ರಕರಣ?
    ಬಾಲಕಿ ತನ್ನ ಪೋಷಕರೊಂದಿಗೆ ನಿಲಕರಾಯಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದಳು. ಬಾಲಕಿಯ ತಂದೆ ಸಾವನ್ನಪ್ಪಿದ ಬಳಿಕ ಆಕೆಯ ತಾಯಿ ಗ್ರಾಮದ ಮುಖಂಡನಾದ ರಾಜಶೇಖರ್ (33) ಎಂಬಾತನೊಂದಿಗೆ ಅಕ್ರಮ ಸಂಬಂಧದಲ್ಲಿದ್ದಳು. ಒಂದು ದಿನ ರಾಜಶೇಖರ್ ನಿನ್ನ ಮಗಳನ್ನು ನನಗೆ ಮದುವೆ ಮಾಡಿಕೊಡು ಭವಿಷ್ಯದಲ್ಲಿ ಇಬ್ಬರನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ಮದುವೆ ಬಳಿಕ ನೀನು ಸಹ ನನ್ನೊಂದಿಗೆ ದೈಹಿಕ ಸಂಪರ್ಕದಲ್ಲಿ ಇರಬೇಕೆಂದು ಷರತ್ತು ವಿಧಿಸಿದ್ದಾನೆ. ರಾಜಶೇಖರ್ ಮಾತು ಕೇಳಿದ ತಾಯಿ, ಮಗಳ ಮುಂದೆ ಮದುವೆ ಪ್ರಸ್ತಾಪ ಇಟ್ಟಿದ್ದಾಳೆ. ಆದ್ರೆ ಮಗಳು ಆತನನ್ನು ಮದ್ವೆ ಆಗಲ್ಲ ಎಂದು ಹೇಳಿದ್ದಾಳೆ.

    ಮಗಳು ಒಪ್ಪದೇ ಇದ್ದಾಗ ಆಕೆಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ತಾಯಿಯ ಸಮ್ಮುಖದಲ್ಲಿ ಬಾಲಕಿಯ ಮದುವೆ ಮಾಡಿಸಿದ್ದಾರೆ. ಮೂರು ದಿನ ನಿರ್ಜನ ಪ್ರದೇಶದಲ್ಲಿ ಬಂಧಿಸಿದ್ದಾರೆ. ನಂತರ ಗ್ರಾಮಕ್ಕೆ ಕರೆದುಕೊಂಡು ಮನೆಯಲ್ಲಿರಿಸಿ 20 ದಿನಗಳ ಕಾಲ ಬಾಲಕಿಯ ಮೇಲೆ ಮೂವರು ಅತ್ಯಾಚಾರ ಎಸೆಗಿದ್ದಾರೆ ಎಂದು ಸ್ಥಳೀಯ ಪತ್ರಿಕೆಗಳು ಪ್ರಕಟಿಸಿವೆ.

    ಬಾಲಕಿ ಹೇಳಿದ್ದೇನು?
    ಮದುವೆಗೆ ನಾನು ಒಪ್ಪಲಿಲ್ಲ. ಸಂಜೆ ಟ್ಯೂಷನ್ ಮುಗಿಸಿಕೊಂಡು ಮನೆಗೆ ಹಿಂದಿರುಗುವ ವೇಳೆ ಮೂವರು ನನ್ನನ್ನು ಕಾರಿನಲ್ಲಿ ಕಿಡ್ನಾಪ್ ಮಾಡಿದರು. ನಂತರ ಒಂದು ಸ್ಥಳದಲ್ಲಿ ಮದುವೆಯೂ ನಡೆಯಿತು. ಮದುವೆಯಾದ ಬಳಿಕ ನಿರಂತರವಾಗಿ ನನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಬಾಲಕಿ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    ಸಹಾಯವಾಣಿಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿ, ಅಧಿಕಾರಿಗಳಿಗೆ ಬಾಲಕಿಯೊಬ್ಬಳನ್ನು ಮನೆಯಲ್ಲಿ ಬಲವಂತವಾಗಿ ಕೂಡಿ ಹಾಕಲಾಗಿದೆ. ಬಾಲ್ಯ ವಿವಾಹ ನಡೆದಿದೆ ಎಂದು ಸಹ ಹೇಳಲಾಗುತ್ತಿದೆ. ಕಳೆದ 20 ದಿನಗಳಿಂದ ಬಾಲಕಿ ಮೂವರು ಪುರುಷರು ಮತ್ತು ಮಹಿಳೆಯೊಬ್ಬಳ ಕಣ್ಗಾವಲಿನಲ್ಲಿದ್ದಾಳೆ. ಮನೆಯಲ್ಲಿ ಬಾಲಕಿಗೆ ದೈಹಿಕವಾಗಿ ಚಿತ್ರಹಿಂಸೆ ಕೊಡುತ್ತಿರುವ ಹಾಗೆ ಕಾಣ್ತಿದೆ. ಆದಷ್ಟು ಬೇಗ ಬಾಲಕಿಯನ್ನು ರಕ್ಷಿಸಿ ಎಂದು ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದರು.

    ಅಧಿಕಾರಿಗಳು ಘಟನಾ ಸ್ಥಳಕ್ಕೆ ಹೋಗುತ್ತಿದ್ದಂತೆ ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ. ಸದ್ಯ ಬಾಲಕಿಯನ್ನು ಕಾಂಚಿಪುರಂ ನಗರದ ಬಾಲಗೃಹದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಪೊಲೀಯೋ ಲಸಿಕೆ ಹಾಕ್ಸೊಂಡು ಬರ್ತಿನಿ, ಅಂತ ಮಗು ಸಮೇತ ಡೂಪ್ಲಿಕೇಟ್ ನರ್ಸ್ ಎಸ್ಕೇಪ್

    ಪೊಲೀಯೋ ಲಸಿಕೆ ಹಾಕ್ಸೊಂಡು ಬರ್ತಿನಿ, ಅಂತ ಮಗು ಸಮೇತ ಡೂಪ್ಲಿಕೇಟ್ ನರ್ಸ್ ಎಸ್ಕೇಪ್

    ರಾಯಚೂರು: ನವಜಾತ ಶಿಶುವಿಗೆ ಪೊಲೀಯೋ ಲಸಿಕೆ ಹಾಕಿಸಿಕೊಂಡು ಬರುತ್ತೇನೆಂದು ಹೇಳಿ, ನಕಲಿ ನರ್ಸ್ ವೊಬ್ಬರು ಮಗುವಿನೊಂದಿಗೆ ನಾಪತ್ತೆಯಾಗಿರುವ ಘಟನೆ ಲಿಂಗಸೂಗೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

    ಮಾರಲದಿನ್ನಿ ತಾಂಡ ನಿವಾಸಿಗಳಾದ ಪೋಷಕರು ಮಗು ಕಳುವಾಗಿದೆ. ಶುಕ್ರವಾರ ಬೆಳಗ್ಗೆ 6 ಗಂಟೆಗೆ ನವಜಾತ ಶಿಶು ಜನಿಸಿತ್ತು. ಇಂದು ಮಧ್ಯಾಹ್ನ ಆಸ್ಪತ್ರೆಯಲ್ಲಿದ್ದ ತಾಯಿ ಹಾಗೂ ಅಜ್ಜಿಗೆ ತಾನು ನರ್ಸ್ ಎಂದು ಅಪರಿಚಿತ ಮಹಿಳೆಯೊಬ್ಬಳು ಪರಿಚಯ ಮಾಡಿಕೊಂಡಿದ್ದಾಳೆ. ಈ ವೇಳೆ ದಾಖಲೆಗಳಿಗೆ ಸಹಿ ಹಾಕಬೇಕೆಂದು ಅಜ್ಜಿಯನ್ನು ಕಳುಹಿಸಿಕೊಟ್ಟಿದ್ದಾರೆ.

    ನಂತರ ತಾಯಿಗೆ ಮಗುವಿಗೆ ಪೊಲೀಯೋ ಲಸಿಕೆ ಹಾಕಬೇಕೆಂದು ಹೇಳಿ, ಮಗುವನ್ನು ಎತ್ತಿಕೊಂಡು ಹೋಗಿದ್ದಾಳೆ. ಆದರೆ ಮಗುವನ್ನು ತೆಗೆದುಕೊಂಡ ಹೋದ ನರ್ಸ್ ಎಷ್ಟೇ ಸಮಯ ಕಳೆದರು ಬಂದಿಲ್ಲ. ಇದರಿಂದ ಅನುಮಾನಗೊಂಡು ಆಸ್ಪತ್ರೆ ಸಿಬ್ಬಂದಿ ಬಳಿ ವಿಚಾರಿಸಿದಾಗ, ಮಗು ಕಳುವಾಗಿರುವ ಕುರಿತು ತಿಳಿದು ಬಂದಿದೆ.

    ಕೂಡಲೇ ಆಸ್ಪತ್ರೆಗೆ ಸಿಬ್ಬಂದಿ ಎಲ್ಲಾ ಸಿಸಿಟಿವಿಯ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಅಪರಿಚಿತ ಮಹಿಳೆಯ ಯಾರು ಎಂಬುದರ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಆದರೆ ತಾಯಿ ತನ್ನ ಒಂದು ದಿನದ ಹಸುಗೂಸನ್ನು ಕಳೆದುಕೊಂಡು, ದುಃಖಸಾಗರದಲ್ಲಿ ಮುಳುಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಕತ್ತು ಕೊಯ್ದ ಸ್ಥಿತಿಯಲ್ಲಿ ಹೆಣವಾದ 4 ತಿಂಗ್ಳ ಗರ್ಭಿಣಿ ಪ್ರಕರಣಕ್ಕೆ ಟ್ವಿಸ್ಟ್- ಹೆತ್ತ ತಾಯಿಯಿಂದ ಕೊಲೆ

    ಕತ್ತು ಕೊಯ್ದ ಸ್ಥಿತಿಯಲ್ಲಿ ಹೆಣವಾದ 4 ತಿಂಗ್ಳ ಗರ್ಭಿಣಿ ಪ್ರಕರಣಕ್ಕೆ ಟ್ವಿಸ್ಟ್- ಹೆತ್ತ ತಾಯಿಯಿಂದ ಕೊಲೆ

    ವಿಜಯಪುರ: ಜಿಲ್ಲೆ ನಿಡಗುಂದಿ ತಾಲೂಕಿನ ಯಲಗೂರು ಗ್ರಾಮದಲ್ಲಿ ಮರ್ಯಾದಾ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿತ್ತು. ಆದರೆ ಇದೀಗ ಈ ಶಂಕೆ ನಿಜಾಂಸ ಬಯಲಾಗಿದ್ದು, ಹೆತ್ತ ತಾಯಿಯೇ ಕೊಲೆ ಮಾಡಿರುವುದಾಗಿ ಬೆಳಕಿಗೆ ಬಂದಿದೆ.

    ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕ್ಯಾದಿಗೇರಾ ಗ್ರಾಮದ ರೇಣುಕಾ, ಸಿರವಾರ ಗ್ರಾಮದ ಶಂಕರನನ್ನು ಪ್ರೀತಿಸಿ ಮದುವೆ ಆಗಿ ಯಲಗೂರಿನಲ್ಲಿ ವಾಸವಾಗಿದ್ದರು. 2 ವರ್ಷ ಸಂಸಾರ ನಡೆಸಿದ್ದ ರೇಣುಕಾ ನ.6ರಂದು ಸಂಜೆ ಮನೆಯಲ್ಲೇ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು.

    ಅನ್ಯಜಾತಿಯ ಯುವಕನನ್ನು ಮದುವೆಯಾಗಿ ಊರು ಬಿಟ್ಟು ಓಡಿ ಬಂದು ಮನೆತನದ ಮಾನ, ಮರ್ಯಾದೆ ಹಾಳು ಮಾಡಿದ್ದಾಳೆಂದು ಹೆತ್ತ ಮಗಳ ಕತ್ತು ಸೀಳಿ ತಾಯಿ ಶಿವಲಿಂಗಮ್ಮ ಕೊಲೆಗೈದಿದ್ದಾಳೆ. ಮಗಳನ್ನು ಕೊಲೆ ಮಾಡಲು ತನ್ನೂರಿನಿಂದ ಕೈ ಚೀಲದಲ್ಲಿ ಚಾಕು ತಂದಿದ್ದ ಶಿವಲಿಂಗಮ್ಮ ತನ್ನ ಮಗ, ಅಳಿಯನನ್ನು ಕರೆಯಿಸಿಕೊಂಡಿದ್ದಾಳೆ.

    ಕೊಲೆ ವೇಳೆ ಸಹೋದರ ಮಲ್ಲಿಕಾರ್ಜುನ ರೇಣುಕಾಳ ಕಾಲು ಹಿಡಿದಿರೆ, ತಂಗಿ ಗಂಡ ರಮೇಶ್ ಕೈಗಳನ್ನು ಹಿಡಿದಿದ್ದಾನೆ. ಬಳಿಕ ತಾನು ತಂದಿದ್ದ ಚಾಕುವಿನಿಂದ ಮಗಳ ಕತ್ತು ಸೀಳಿ ಶಿವಲಿಂಗಮ್ಮ ಮಗಳ ಹತ್ಯೆ ಮಾಡಿದ್ದಾಳೆ.

    ಪೊಲೀಸರ ತನಿಖೆ ವೇಳೆ ಎಲ್ಲ ಸಂಗತಿಗಳು ಬಯಲಾಗಿದ್ದು, ಇದೊಂದು ಮರ್ಯಾದಾ ಹತ್ಯೆ ಎಂದು ದೃಢಪಟ್ಟಿದೆ. ಈ ಸಂಬಂಧ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿರುವ ನಿಡಗುಂದಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews