Tag: Motorists

  • ಕಿತ್ತುಹೋಗಿರುವ ರಸ್ತೆ, ಪ್ರತಿನಿತ್ಯ ಅಪಘಾತ- ರಾಷ್ಟ್ರೀಯ ಹೆದ್ದಾರಿ ದುಸ್ಥಿತಿಗೆ ಸವಾರರು ಸುಸ್ತು

    ಕಿತ್ತುಹೋಗಿರುವ ರಸ್ತೆ, ಪ್ರತಿನಿತ್ಯ ಅಪಘಾತ- ರಾಷ್ಟ್ರೀಯ ಹೆದ್ದಾರಿ ದುಸ್ಥಿತಿಗೆ ಸವಾರರು ಸುಸ್ತು

    ಹಾವೇರಿ: ಈ ರಸ್ತೆಗಳಲ್ಲಿ ಹಾದು ಹೋಗಿ ನೀವೇನಾದ್ರೂ ಸುರಕ್ಷಿತವಾಗಿ ಅಂದುಕೊಂಡ ಜಾಗ ಸೇರಿದ್ರೆ ನೀವು ಸಾವು ಗೆದ್ದು ಬಂದಂತೆಯೇ. ಯಾಕೆಂದರೆ ಭಾರೀ ಮಳೆಗೆ ರಸ್ತೆಗಳು ಕಿತ್ತು ಹೋಗಿ ಗುಂಡಿಗಳಾಗಿವೆ. ಕಿತ್ತು ಹೋದ ರಸ್ತೆಯಲ್ಲೇ ವಾಹನ ಸವಾರರು ಸಾಗುವ ದುಸ್ಥಿತಿ ನಿರ್ಮಾಣವಾಗಿದೆ.

    ಹಾವೇರಿ ಜಿಲ್ಲೆಯ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ಗುಂಡಿಮಯವಾಗಿವೆ. ಆಗಸ್ಟ್ ನಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳು ಕಿತ್ತುಹೋಗಿವೆ. ಅನೇಕ ಕಡೆಗಳಲ್ಲಿ ರಸ್ತೆಗಳ ಗುಂಡಿಗಳಲ್ಲಿ ನೀರು ತುಂಬಿಕೊಂಡಿದೆ. ಕೆಲವೆಡೆ ರಸ್ತೆಗಳು ಕೆಸರು ಗದ್ದೆಗಳಾಗಿವೆ. ಇಂಥಾ ರಸ್ತೆಗಳಲ್ಲಿ ವಾಹನ ಸವಾರರು ಜೀವ ಕೈಯಲ್ಲಿ ಹಿಡ್ಕೊಂಡು ಓಡಾಡುತ್ತಿದ್ದಾರೆ.

    ಮಳೆಗೆ ರಸ್ತೆ ಕಿತ್ತು ಹೋಗಿ ಮೂರು ತಿಂಗಳು ಕಳೆದರೂ ದುರಸ್ತಿ ಕಾರ್ಯ ನಡೆದಿಲ್ಲ. ಕಿತ್ತು ಹೋದ ರಸ್ತೆಗಳಲ್ಲಿ ಯಾವುದಾದರು ಒಂದು ವಾಹನ ಮುಂದೆ ಹೋಗೋದು ಸ್ವಲ್ಪ ತಡವಾದರೆ ವಾಹನಗಳು ಸಾಲುಗಟ್ಟಿ ನಿಂತು ಟ್ರಾಫಿಕ್ ಜಾಮ್ ಉಂಟಾಗುತ್ತದೆ. ಅಲ್ಲದೇ, ಈ ರಸ್ತೆಗಳಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಅನಾಹುತಗಳು ನಡೆಯುತ್ತಿವೆ. ಅಲ್ಲದೆ ಜಿಲ್ಲೆಯಲ್ಲಿ ಹಾದು ಹೋಗಿರೋ ಪೂಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ಸ್ಥಿತಿಯಂತೂ ಹೇಳತೀರದ್ದು. ರಸ್ತೆ ಅಗಲೀಕರಣ ಕಾಮಗಾರಿ ತೀರಾ ಮಂದಗತಿಯಲ್ಲಿ ಸಾಗುತ್ತಿರುವುದರಿಂದ ವಾಹನ ಸವಾರರು ಈ ರಸ್ತೆಯಲ್ಲಿ ಓಡಾಡಲು ಹರಸಾಹಸ ಪಡಬೇಕಿದೆ.

    ಇನ್ನಾದರೂ ಜಿಲ್ಲಾಡಳಿತ ಮತ್ತು ಸರ್ಕಾರ ಈ ಬಗ್ಗೆ ಗಮನಹರಿಸಿ ಕಿತ್ತು ಹೋಗಿರೋ ರಸ್ತೆ ಸರಿಪಡಿಸಬೇಕಿದೆ. ಆಗ ಮಾತ್ರ ವಾಹನ ಸವಾರರ ಎದುರಿಸುತ್ತಿರುವ ತೊಂದೆರೆ ನಿವಾರಣೆಯಾಗಲಿದೆ ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

  • ಒಂದೇ ದಿನಕ್ಕೆ 21.52 ಲಕ್ಷಕ್ಕೂ ಹೆಚ್ಚು ದಂಡ ಸಂಗ್ರಹಿಸಿದ ಬೆಂಗ್ಳೂರು ಟ್ರಾಫಿಕ್ ಪೊಲೀಸರು

    ಒಂದೇ ದಿನಕ್ಕೆ 21.52 ಲಕ್ಷಕ್ಕೂ ಹೆಚ್ಚು ದಂಡ ಸಂಗ್ರಹಿಸಿದ ಬೆಂಗ್ಳೂರು ಟ್ರಾಫಿಕ್ ಪೊಲೀಸರು

    ಬೆಂಗಳೂರು: ರಾಜ್ಯ ಸರ್ಕಾರ ಸಂಚಾರಿ ನಿಯಮ ಉಲ್ಲಂಘನೆಯ ದಂಡದ ಮೊತ್ತ ಇಳಿಸಿದ್ದರೂ ಪ್ರಕರಣಗಳು ಮಾತ್ರ ಕಡಿಮೆಯಾಗಿಲ್ಲ. ಒಂದೇ ದಿನಕ್ಕೆ ಸಿಲಿಕಾನ್ ಸಿಟಿಯಲ್ಲಿ ಟ್ರಾಫಿಕ್ ಪೊಲೀಸರು ಬರೋಬ್ಬರಿ 21.52 ಲಕ್ಷಕ್ಕೂ ಅಧಿಕ ದಂಡ ಸಂಗ್ರಹಿಸಿದ್ದಾರೆ.

    ಮೋಟಾರ್ ವಾಹನ ಕಾಯ್ದೆ ತಿದ್ದುಪಡಿ ಮಾಡಿ, ಕೇಂದ್ರ ಸರ್ಕಾರ ದುಬಾರಿ ದಂಡ ವಿಧಿಸಿತ್ತು. ಆದರೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ದುಬಾರಿ ದಂಡಕ್ಕೆ ಬ್ರೇಕ್ ಹಾಕಿ, ದಂಡದ ಮೊತ್ತವನ್ನ ಇಳಿಸಿತ್ತು. ಈ ಬೆನ್ನಲ್ಲೇ ವಾಹನ ಸವಾರರು ತಮ್ಮ ಹಳೇ ಚಾಳಿಯನ್ನ ಮುಂದುವರಿಸಿದ್ದಾರೆ. 24 ಗಂಟೆಯಲ್ಲಿ ಅಂದರೆ ಮಂಗಳವಾರ ಒಂದೇ ದಿನಕ್ಕೆ 6,782 ಟ್ರಾಫಿಕ್ ನಿಯಮ ಉಲ್ಲಂಘನೆಯ ಪ್ರಕರಣಗಳು ಸಿಲಿಕಾನ್ ಸಿಟಿ ವಾಹನ ಸವಾರರಿಂದ ದಾಖಲಾಗಿವೆ.

    ಈ ಪ್ರಕರಣಗಳಲ್ಲಿ ಹೆಲ್ಮೆಟ್ ಧರಿಸದೆ ವಾಹನ ಚಾಲನೆಯ ಕೇಸ್‍ಗಳೇ ಹೆಚ್ಚು ದಾಖಲಾಗಿವೆ. ಬರೋಬ್ಬರಿ 1,546 ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದು, ಇದರಿಂದ ಸುಮಾರು 2,87,500 ರೂ. ದಂಡ ಸಂಗ್ರಹವಾಗಿದೆ. ಹಿಂಬದಿ ಸವಾರ ಹೆಲ್ಮೆಟ್ ಧರಿಸದ ಪ್ರಕರಣಗಳು 1,046 ದಾಖಲಾಗಿದ್ದು, ಇದರಿಂದ 2,22,000 ರೂ. ದಂಡ ವಸೂಲಾಗಿದೆ.

    806 ವಾಹನಗಳನ್ನು ತಪ್ಪಾಗಿ ಪಾರ್ಕಿಂಗ್ ಮಾಡಿದ ಪ್ರಕರಣಗಳು ದಾಖಲಾಗಿದ್ದು 1,66,100 ರೂ. ದಂಡವನ್ನು ವಾಹನ ಸವಾರರಿಂದ ಪೊಲೀಸರು ವಸೂಲಿ ಮಾಡಿದ್ದಾರೆ. ಸಿಗ್ನಲ್ ಜಂಪ್ 818 ಪ್ರಕರಣದಿಂದ 1,41,800 ರೂ., ನೋ ಎಂಟ್ರಿ ಪ್ರಕರಣಗಳು 355, ಅದರಿಂದ 1,03,800 ರೂ., ಅಲ್ಲದೆ ವಾಹನದಲ್ಲಿ ಉದ್ದದ ಸಾಮಾಗ್ರಿಗಳನ್ನು ಸಾಗಿಸಿದ 318 ಪ್ರಕರಣಗಳಿಂದ 3,18,100 ರೂ. ದಂಡ ಸಂಗ್ರಹಿಸಲಾಗಿದೆ.

    ಸುಮಾರು 65 ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ 6,782 ಪ್ರಕರಣಗಳಿಂದ ಸಂಚಾರಿ ಪೊಲೀಸರು ಒಂದೇ ದಿನಕ್ಕೆ ಬರೋಬ್ಬರಿ 21,52,100 ರೂಪಾಯಿಯನ್ನು ದಂಡ ವಸೂಲಿ ಮಾಡಿದ್ದಾರೆ.

  • 5 ದಿನದಲ್ಲಿ 72 ಲಕ್ಷ ದಂಡ ಸಂಗ್ರಹ – ಹೆಲ್ಮೆಟ್ ಹಾಕದ್ದಕ್ಕೆ ಬಿತ್ತು ಅತಿ ಹೆಚ್ಚು ಕೇಸ್

    5 ದಿನದಲ್ಲಿ 72 ಲಕ್ಷ ದಂಡ ಸಂಗ್ರಹ – ಹೆಲ್ಮೆಟ್ ಹಾಕದ್ದಕ್ಕೆ ಬಿತ್ತು ಅತಿ ಹೆಚ್ಚು ಕೇಸ್

    ಬೆಂಗಳೂರು: ಬೆಂಗಳೂರು ಸಂಚಾರಿ ಪೊಲೀಸರು ಹೊಸ ತಿದ್ದುಪಡಿ ಕಾಯ್ದೆ ಜಾರಿಯಾದ ಐದೇ ದಿನದಲ್ಲಿ ಬರೋಬ್ಬರಿ 72.49 ಲಕ್ಷ ದಂಡ ವಸೂಲಿ ಮಾಡಿದ್ದಾರೆ.

    ಕೇಂದ್ರ ಸರ್ಕಾರ ಹೊರಡಿಸಿರುವ ಹೊಸ ಅಧಿಸೂಚನೆಯ ನಿರ್ದೇಶನದಂತೆ ಸೆ.4 ರಿಂದ ಇಂದು(ಸೆ.9) ಬೆಳಗ್ಗೆ 10 ಗಂಟೆಯವರೆಗೆ ಬೆಂಗಳೂರು ನಗರ ಸಂಚಾರ ಪೊಲೀಸರು ಒಟ್ಟು 6,813 ಪ್ರಕರಣ ದಾಖಲಿಸಿ 72,49,900 ದಂಡವನ್ನು ವಸೂಲಿ ಮಾಡಿದ್ದಾರೆ.

     

    ಹಿಂಬದಿಯ ಸವಾರ ಹೆಲ್ಮಟ್ ಹಾಕದ್ದಕ್ಕೆ ಅತಿ ಹೆಚ್ಚು ದಂಡ ಬಿದ್ದಿದ್ದು, ಬರೋಬ್ಬರಿ 2,645 ಪ್ರಕರಣಗಳು ದಾಖಲಾಗಿದ್ದು, ಸುಮಾರು 26,45,000 ದಂಡವನ್ನು ವಸೂಲಿ ಮಾಡಲಾಗಿದೆ. ಇದನ್ನು ಬಿಟ್ಟರೆ ಚಾಲನೆ ಮಾಡುವಾಗ ಹೆಲ್ಮಟ್ ಹಾಕದ 1,968 ಪ್ರಕರಣಗಳು ದಾಖಲಾಗಿದ್ದು 19,68,000 ದಂಡ ವಸೂಲಿ ಮಾಡಲಾಗಿದೆ.

    ವಾಹನ ಚಾಲಿಸುವ ಮೊಬೈಲ್ ಬಳಕೆ ಮಾಡಿದ ಒಟ್ಟು 695 ಪ್ರಕರಣ ದಾಖಲಾಗಿದ್ದು, 13,90,000 ದಂಡ ವಸೂಲಿ ಮಾಡಲಾಗಿದೆ. ಕಾರಿನಲ್ಲಿ ಸೀಟ್ ಬೆಲ್ಟ್ ಧರಿಸದಕ್ಕೆ 708 ಪ್ರಕರಣಗಳು ದಾಖಲಾಗಿದ್ದು, 7,08,000 ವಸೂಲಿ ಮಾಡಲಾಗಿದೆ. ಇದನ್ನು ಬಿಟ್ಟರೆ ಒನ್ ವೇಯಲ್ಲಿ ವಾಹನ ಚಾಲನೆ ಮಾಡಿದ 425 ಪ್ರಕರಣ ದಾಖಲಾಗಿದ್ದು, ಒಟ್ಟು 2,12,500 ದಂಡ ವಸೂಲಿ ಮಾಡಲಾಗಿದೆ.

  • ಬೆಂಗ್ಳೂರಿನಲ್ಲಿ ಒಂದೇ ದಿನಕ್ಕೆ ಟ್ರಾಫಿಕ್ ಪೊಲೀಸರಿಂದ ಬರೋಬ್ಬರಿ 30 ಲಕ್ಷ ದಂಡ ವಸೂಲಿ

    ಬೆಂಗ್ಳೂರಿನಲ್ಲಿ ಒಂದೇ ದಿನಕ್ಕೆ ಟ್ರಾಫಿಕ್ ಪೊಲೀಸರಿಂದ ಬರೋಬ್ಬರಿ 30 ಲಕ್ಷ ದಂಡ ವಸೂಲಿ

    ಬೆಂಗಳೂರು: ದೇಶಾದ್ಯಂತ ನೂತನ ಮೋಟಾರ್ ವಾಹನ ತಿದ್ದುಪಡಿ ಕಾಯ್ದೆ ಜಾರಿಯಾಗಿದ್ದು, ನಿಯಮ ಉಲ್ಲಂಘಿಸಿದ ವಾಹನ ಸವಾರರ ಜೇಬಿಗೆ ಕತ್ತರಿ ಬಿದ್ದಿದೆ, ಭಾರೀ ಪ್ರಾಮಾಣದ ದಂಡ ಕಟ್ಟಿ ಸುತ್ತಾಗಿದ್ದಾರೆ.

    ಬೆಂಗಳೂರಿನಲ್ಲಿ ಗುರುವಾರ ಮಧ್ಯಾಹ್ನದವರೆಗೆ ಒಂದೇ ದಿನದಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ 2,978 ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣಗಳಿಂದ ಟ್ರಾಫಿಕ್ ಪೊಲೀಸರು ವಾಹನ ಸವಾರರಿಂದ ಭರ್ತಿ 30 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ. ನಿಯಮ ಉಲ್ಲಂಘಿಸಿದವರ ಬಳಿ ಭಾರೀ ದಂಡ ಕಟ್ಟಿಸಿಕೊಂಡು ಪೊಲೀಸರು ವಾಹನ ಸವಾರರ ಬೆವರಿಳಿಸಿದ್ದಾರೆ.

    ಇದರ ನಡುವೆ, ದುಬಾರಿ ದಂಡ ತಪ್ಪಿಸಿಕೊಳ್ಳಲು ದೇಸೀ ಉಪಾಯಕ್ಕೆ ಪೊಲೀಸರೇ ಬೇಸ್ತು ಬಿದ್ದಿದ್ದಾರೆ. ಗುರುಗ್ರಾಮದಲ್ಲಿ ಬೈಕ್ ಸವಾರರು ಪೊಲೀಸರ ಪರಿಶೀಲನೆ ಕಂಡು ಬೈಕ್‍ಗಳನ್ನು ತಳ್ಳಿಕೊಂಡು ಹೋಗುತ್ತಿದ್ದಾರೆ. ಈ ಕುರಿತ ಹಾಸ್ಯಾತ್ಮಕ ವಿಡಿಯೋವೊಂದನ್ನು ಗುರುಗ್ರಾಮದ ಐಪಿಎಸ್ ಅಧಿಕಾರಿ ಪಂಕಜ್ ನೈನ್ ಶೇರ್ ಮಾಡಿಕೊಂಡಿದ್ದಾರೆ.

  • ಬೆಂಗಳೂರಿನಲ್ಲೂ ಶುರುವಾಯ್ತು ವರುಣನ ಆರ್ಭಟ- ವಾಹನ ಸವಾರರ ಪರದಾಟ

    ಬೆಂಗಳೂರಿನಲ್ಲೂ ಶುರುವಾಯ್ತು ವರುಣನ ಆರ್ಭಟ- ವಾಹನ ಸವಾರರ ಪರದಾಟ

    ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಮಹಾಮಳೆ ಇಂದು ಸಿಲಿಕಾನ್ ಸಿಟಿಯಲ್ಲು ತನ್ನ ಆರ್ಭಟ ತೋರಿದೆ. ಬೆಂಗಳೂರಿನಲ್ಲಿ ಹಲವು ಕಡೆ ಸುರಿದ ಮಳೆಯಿಂದ ವಾಹನ ಸವಾರರು ಪರದಾಡಿದ್ದಾರೆ.

    ಉತ್ತರ ಕರ್ನಾಟಕದಲ್ಲಿ ಅವಂತರ ಸೃಷ್ಟಿ ಮಾಡಿರುವ ಮಳೆ ಬೆಂಗಳೂರಿಗೂ ಬರುವ ಮನ್ಸೂಚನೆ ನೀಡಿದೆ. ಇಂದು ಬೆಂಗಳೂರಿನ ಯಶವಂತಪುರ, ಮಲ್ಲೇಶ್ವರಂ, ಮೆಜೆಸ್ಟಿಕ್ ಸೇರಿ ಬೆಂಗಳೂರಿನ ಬಹುತೇಕ ಕಡೆ ಜೋರು ಮಳೆಯಾಗಿದೆ.

    ವೆಸ್ಟ್ ಆಫ್ ಕಾರ್ಡ್ ರೋಡ್, ಮಹಾಲಕ್ಷ್ಮೀ ಲೇಔಟ್ ಮತ್ತು ಮೆಜೆಸ್ಟಿಕ್ ಸುತ್ತಮುತ್ತ ಮಳೆಯಿಂದಾಗಿ ಮನೆಗೆ ತೆರಳಲು ಆಗದೇ ಶಾಲಾ ಮಕ್ಕಳು ರಸ್ತೆ ಇಕ್ಕೆಲಗಳಲ್ಲೇ ನಿಂತಿದ್ದರು. ಇಂದು ಸುರಿದ ಮಳೆಯಿಂದಾಗಿ ವಿಜಯನಗರ ಆದಿಚುಂಚನಗಿರಿ ಮಠದ ಬಳಿ ಮರ ಬಿದ್ದು ರಸ್ತೆ ಸಂಚಾರಕ್ಕೆ ಸಮಸ್ಯೆಯಾಗಿತ್ತು.

    ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದರ ಜೊತೆಗೆ ಉಡುಪಿ, ಉತ್ತರ ಕನ್ನಡ, ಬೆಳಗಾವಿ ಮತ್ತು ಶಿವಮೊಗ್ಗ ಸೇರಿದಂತೆ ಇತರೆ ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.