Tag: MP Bhagwanth Khuba

  • ಸಂಸದ ಭಗವಂತ್ ಖೂಬಾ ಸೇರಿ ಬೀದರ್‌ನಲ್ಲಿ 35 ಜನರಿಗೆ ಕೊರೊನಾ

    ಸಂಸದ ಭಗವಂತ್ ಖೂಬಾ ಸೇರಿ ಬೀದರ್‌ನಲ್ಲಿ 35 ಜನರಿಗೆ ಕೊರೊನಾ

    ಬೀದರ್: ಗಡಿ ಜಿಲ್ಲೆ ಬೀದರ್ ನಲ್ಲಿ ಇಂದು ಸಂಸದರು ಸೇರಿದಂತೆ 35 ಜನರಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ.

    ಸಂಸದ ಭಗವಂತ್ ಖೂಬಾಗೆ ಇಂದು ಪಾಸಿಟಿವ್ ಧೃಡವಾಗಿದ್ದು, ತಮ್ಮ ನಿವಾಸದಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೀದರ್ ನಲ್ಲಿ 11, ಬಾಲ್ಕಿಯಲ್ಲಿ 11, ಹುಮ್ನಬಾದ್ ನಲ್ಲಿ 10 ಬಸವಕಲ್ಯಾಣದಲ್ಲಿ 3 ಜಿಲ್ಲೆಯಾದ್ಯಂತ ಒಟ್ಟು 35 ಕೊರೊನಾ ಪಾಸಿಟಿವ್ ಪ್ರಕರಣಗಳು ಇಂದು ದೃಢಪಟ್ಟಿವೆ. ಸಂಸದರಿಗೆ ಹೇಗೆ ಕೊರೊನಾ ವಕ್ಕಿಸಿತು ಎಂಬುದೇ ಆಶ್ಚರ್ಯವಾಗಿದ್ದು, ಸಂಪರ್ಕವನ್ನು ಪತ್ತೆಹಚ್ಚಲಾಗುತ್ತಿದೆ.

    ಉಳಿದಂತೆ ಎಲ್ಲರಿಗೂ ಪ್ರಾಥಮಿಕ ಹಾಗೂ ಕಂಟೈನ್ಮೆಂಟ್ ಝೋನ್ ಸಂಪರ್ಕದಿಂದಾಗಿ ಸೋಂಕು ಧೃಡವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1138ಕ್ಕೆ ಏರಿಕೆಯಾಗಿದೆ. ಇದರಲ್ಲಿ 667 ಜನ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 418 ಸಕ್ರಿಯ ಪ್ರಕರಣಗಳಿದ್ದು, 53 ಜನರನ್ನು ಮಹಾಮಾರಿ ಬಲಿ ಪಡೆದಿದೆ. ದಿನೇ ದಿನೇ ಜಿಲ್ಲೆಯಲ್ಲಿ ಮಹಾಮಾರಿ ಅಟ್ಟಹಾಸ ಮೇರೆಯುತ್ತಿದ್ದು, ಜಿಲ್ಲೆಯ ಜನ ತೀವ್ರ ಆತಂಕಗೊಂಡಿದ್ದಾರೆ.

  • ನಾಲಾಯಕ್ ಸರ್ಕಾರ ಎಂದ ಖೂಬಾ – ಸಚಿವರ, ಸಂಸದರ ನಡುವೆ ತೀವ್ರ ವಾಗ್ವಾದ

    ನಾಲಾಯಕ್ ಸರ್ಕಾರ ಎಂದ ಖೂಬಾ – ಸಚಿವರ, ಸಂಸದರ ನಡುವೆ ತೀವ್ರ ವಾಗ್ವಾದ

    ಬೀದರ್: ನಗರದಲ್ಲಿ ನಡೆದ ಕೆಡಿಪಿ ಸಭೆಯ ವೇದಿಕೆ ಮೇಲೆ ಸಂಸದ ಸಂಸದ ಭಗವಂತ ಖೂಬಾ ಅವರು ನೀರು ಕೊಡಿಸಲಾಗ ನಾಲಾಯಕ್ ಸರ್ಕಾರ ಎಂದು ಹೇಳಿಕೆ ನೀಡಿದ್ದು, ಈ ವೇಳೆ ಸಚಿವ ಬಂಡೆಪ್ಪ ಕಾಶೆಂಪೂರ್ ಹಾಗೂ ಸಂಸದರ ಮಧ್ಯೆ ತೀವ್ರ ವಾಗ್ದಾಳಿಗೆ ಕಾರಣವಾಯಿತು.

    ಇಂದು ಬೀದರ್ ನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಬರ ನಿರ್ವಹಣೆ ಸಭೆಯಲ್ಲಿ ನಗರದ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಸಂಸದ ಭಗವಂತ ಖೂಬಾ ಅವರು ಸಭೆ ನಡೆಸಿ ಮಾತನಾಡಿದರು. ಈ ವೇಳೆ ಅಧಿಕಾರಿಗಳು ನಗರದ ಹಲವೆಡೆ ನೀರಿನ ಸಮಸ್ಯೆ ಇದೆ ಎಂದು ಹೇಳಿದರು. ಈ ಮಾತಿಗೆ ಪ್ರತಿಕ್ರಿಯೆ ನೀಡಿದ ಸಂಸದರು ಹಾಗಾದರೆ ಸರ್ಕಾರದ ನಾಲಾಯಕ್ ಇದೆಯಾ ಎಂದು ಹೇಳಿದರು…. ಈ ಹೇಳಿಕೆಯಿಂದ ಕೆರಳಿದ ಸಚಿವ ಬಂಡೆಪ್ಪ ಖಾಶೆಂಪೂರ್ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ ಎಂದು ಸಂಸದರ ವಿರುದ್ಧ ಗರಂ ಆದರು. ಆ ಬಳಿಕ ತಾನು ಅಧಿಕಾರಿಗೆ ಈ ರೀತಿ ಹೇಳಿದ್ದಾಗಿ ಸಂಸದರು ಸಮಜಾಯಿಸಿ ನೀಡಿದರು.

    ಸಭೆ ಬಳಿಕ ಮಾಧ್ಯಮಗಳಿಗೆ ಗ್ರಾಮ ವಾಸ್ತವ್ಯದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಈಗಾಗಲೆ ಸಿಎಂ ಜೊತೆ ಮಾತನಾಡಿದ್ದು ಜಿಲ್ಲೆಯ ಗಡಿ ಭಾಗದ ಎರಡು ಗ್ರಾಮಗಳಲ್ಲಿ ವಾಸ್ತವ್ಯ ಮಾಡುವ ಪ್ಲಾನ್ ಇದೆ ಎಂದರು. ಈ ಹಿಂದೆ ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ನಡೆಸಿದ್ದ ವೇಳೆ ಸಿಎಂ ಕುಮಾರಸ್ವಾಮಿ ಅವರು ಬೀದರ್ ನಲ್ಲಿ ಗ್ರಾಮ ವಾಸ್ತವ್ಯ ನಡೆಸಿದ್ದರು. ಅಂದು ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಣಿಕಣಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದರು.