Tag: MP Election

  • 50 ಸಾವಿರಕ್ಕೆ ನನ್ನನ್ನು ಖರೀದಿಸಲು ಯತ್ನಿಸಿದ್ದರು: ಬಿಜೆಪಿ ಮಾಜಿ ಸಚಿವರ ವಿರುದ್ಧ ಮಹಿಳೆ ಆರೋಪ

    50 ಸಾವಿರಕ್ಕೆ ನನ್ನನ್ನು ಖರೀದಿಸಲು ಯತ್ನಿಸಿದ್ದರು: ಬಿಜೆಪಿ ಮಾಜಿ ಸಚಿವರ ವಿರುದ್ಧ ಮಹಿಳೆ ಆರೋಪ

    ಬೆಂಗಳೂರು: ದೇಶದಲ್ಲಿ ಸಾಕಷ್ಟು ಸುದ್ದಿ ಮಾಡಿದ್ದ ಮೀಟೂ ಈಗ ರಾಜ್ಯ ರಾಜಕೀಯದಲ್ಲೂ ಸದ್ದು ಮಾಡಿದ್ದು, ಬಿಜೆಪಿ ಮುಖಂಡ, ಮಾಜಿ ಸಚಿವ ಶಿವಾನಂದ ನಾಯ್ಕ್ ವಿರುದ್ಧ ಆರೋಪ ಕೇಳಿ ಬಂದಿದೆ.

    ಈ ಹಿಂದೆ ರಾಜ್ಯ ಬಿಜೆಪಿಯಲ್ಲಿ ಕೆಲಸ ಮಾಡಿದ್ದ ಮಾಧುರಿ ಎಂಬವರು ತಮ್ಮ ಫೇಸ್‍ಬುಕ್ ನಲ್ಲಿ ಭಟ್ಕಳ ಮಾಜಿ ಶಾಸಕ ಶಿವಾನಂದ ನಾಯಕ್ ಮೇಲೆ ಆರೋಪ ಮಾಡಿದ್ದಾರೆ.

    ಸಾರ್ವಜನಿಕ ಸಭೆಯಲ್ಲಿ ಶಿವಾನಂದ ನಾಯಕ್ ಅವರ ಪರಿಚಯವಾಯಿತು. ಬಳಿಕ ಅವರ ಖಾಸಗಿ ಫೋನ್ ನಂಬರ್ ಪಡೆದು, ತನ್ನನ್ನು ಲೈಂಗಿಕವಾಗಿ ಬಳಕೆ ಮಾಡಿಕೊಳ್ಳಲು ಯತ್ನಿಸಿದ್ದರು. ತಮಗೆ 100ಕ್ಕೂ ಹೆಚ್ಚು ಬಾರಿ ಕರೆ ಮಾಡಿದ್ದು, ಊಟ, ಕಾಪಿಗೆ ಬಂದು ತಮ್ಮೊಂದಿಗೆ ರಾತ್ರಿ ಪೂರ್ಣ ಕಾಲ ಕಳೆಯುವಂತೆ ಹೇಳಿದ್ದರು ಎಂದು ಆರೋಪಿಸಿದ್ದಾರೆ.

    ಎಫ್‍ಬಿ ಪೋಸ್ಟ್ ನಲ್ಲಿ ಏನಿದೆ?
    ನಾನು ಕೆಲ ಮುಖಂಡರಿಗೆ ಫೋನ್ ನಂಬರ್ ನೀಡಿದ್ದನ್ನು ಅವರು ಗ್ರೀನ್ ಸಿಗ್ನಲ್ ಎಂದೇ ಭಾವಿಸಿದ್ದರು. ನನ್ನನ್ನು ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್‍ನಲ್ಲಿ ಕಾಫಿಗಾಗಿ ಕರೆದಿದ್ದರು. ಕಾಫಿ ಕುಡಿಯುವಾಗ ಯಾವ ರೂಮ್ ಬುಕ್ ಮಾಡಲಿ ಎಂದು ಕೇಳಿದ್ದರು. ಯಾಕೆ ಎಂದು ಕೇಳಿದಾಗ ನಿಮ್ಮ ಪ್ರಿಫರೆನ್ಸ್ ನೋಡಬೇಕು ವಿತ್ ಟಬ್ ಆರ್ ವಿಥೌಟ್ ಟಬ್ ಎಂದಿದ್ದರು. ನಾನು ಕೂಡಲೇ ಕಾಫಿಯನ್ನು ಅವರ ಮುಖದ ಮೇಲೆ ಎಸೆದಿದ್ದೆ. ಆಗ ನನಗೆ 500 ರೂ.ಗಳ ಬಂಡಲ್ ಹಣ ಕೊಡಲು ಬಂದಿದ್ರು. ನನ್ನ ಕೈ ಹಿಡಿದು ಎಳೆದಾಡಿದರು. ಅವರು 50 ಸಾವಿರ ರೂ.ಗೆ ನನ್ನನ್ನು ಖರೀದಿಸಬಹುದು ಎಂದುಕೊಂಡಿದ್ದರು. ಇದಕ್ಕೆ ನಾನು, ನೀವು ಇಲ್ಲಿಂದ ಹೊರಗಡೆ ಹೋಗ್ತೀರಾ ಅಥವಾ ಹೊಡೆಯಬೇಕೇ ಎಂದು ಪ್ರಶ್ನಿಸಿದೆ. ಕೂಡಲೇ ಅವರು ಹೊರಟು ಹೋದರು. ಈ ಘಟನೆಯಾದ ಬಳಿಕ 100 ಬಾರಿ ನನಗೆ ಕರೆ ಮಾಡಿದ್ದು ನನಗೆ ನೆನಪಿದೆ. ಆ ಸಮಯದಲ್ಲಿ ಮೊಬೈಲ್ ನಲ್ಲಿ ಯಾವುದೇ ಬ್ಲಾಕ್ ಆಯ್ಕೆಗಳು ಇರಲಿಲ್ಲ ಎಂದು ಬರೆದುಕೊಂಡಿದ್ದಾರೆ..

    ಈ ಕುರಿತು ಪ್ರತಿಕ್ರಿಯಿಸಿರುವ ಶಿವಾನಂದ್ ನಾಯ್ಕ್, ವೈಯಕ್ತಿಕವಾಗಿ ಅವರ ಪರಿಚಯ ನನಗಿಲ್ಲ. ಅವರು ಯಾರೆಂಬುದೇ ನನಗೆ ಗೊತ್ತಿಲ್ಲ. ಅಂತಹ ಯಾವುದೇ ಆರೋಪವನ್ನು ಅವರು ಸಾಬೀತು ಪಡಿಸಲಿ, ನಾನು ಯಾವುದೇ ಹೆಣ್ಣು ಮಕ್ಕಳ ಜೊತೆ ಆ ರೀತಿ ನಡೆದುಕೊಂಡಿಲ್ಲ. ಸಾರ್ವಜನಿಕ ಕ್ಷೇತ್ರದಲ್ಲಿ ಉತ್ತಮ ಹೆಸರು ಗಳಿಸಿದ್ದೇನೆ. ಅವರ ಹೇಳಿಕೆಗಳು ಸುಳ್ಳು, ನನ್ನನ್ನು ಮುಂದಿನ ಲೋಕಸಭಾ ಅಭ್ಯರ್ಥಿಯನ್ನಾಗಿ ಘೋಷಿಸುವ ಸಾಧ್ಯತೆ ಇದ್ದು, ಇದನ್ನು ತಪ್ಪಿಸಲು ಉದ್ದೇಶ ಪೂರ್ವಕವಾಗಿ ಆರೋಪ ಮಾಡುತ್ತಿದ್ದಾರೆ. ಈ ಬಗ್ಗೆ ನಾನು ದೂರನ್ನು ದಾಖಲಿಸುತ್ತೇನೆ ಎಂದು ತಿಳಿಸಿದರು.

    ಫೇಸ್‍ಬುಕ್ ನಲ್ಲಿ ಬಿಜೆಪಿ ನಾಯಕರ ಬಗ್ಗೆ ಹೇಳಿಕೊಂಡಿದ್ದ ಮಾಧುರಿ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗುತ್ತಿದ್ದಂತೆ ಈ ಹಿಂದೆ ಪ್ರಕಟಿಸಿದ್ದ ಪೋಸ್ಟನ್ನು ಡಿಲೀಟ್ ಮಾಡಿದ್ದಾರೆ. ಇದನ್ನೂ ಓದಿ: #MeToo ಸುಳಿಯಲ್ಲಿ ಕೇಂದ್ರ ಸಚಿವ ಸದಾನಂದಗೌಡ!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೊಪ್ಪಳ ಎಂಪಿ ಟಿಕೆಟ್‍ಗೆ ರಾಹುಲ್ ಜೊತೆ ರಾಯರೆಡ್ಡಿ ಕೈಲಾಸ ಯಾತ್ರೆ ಮಾಡಿದ್ರಾ?

    ಕೊಪ್ಪಳ ಎಂಪಿ ಟಿಕೆಟ್‍ಗೆ ರಾಹುಲ್ ಜೊತೆ ರಾಯರೆಡ್ಡಿ ಕೈಲಾಸ ಯಾತ್ರೆ ಮಾಡಿದ್ರಾ?

    ಕೊಪ್ಪಳ: ಮಾಜಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಪ್ರಯಾಣ ಮಾಡಿರುವುದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

    ಬಸವರಾಜ ರಾಯರೆಡ್ಡಿ ಅವರು ರಾಹುಲ್ ಗಾಂಧಿ ಜೊತೆಗೆ ಕೈಲಾಸನಾಥ ಪರ್ವತ ಪ್ರವಾಸ ಕೈಗೊಂಡ ಫೋಟೋ ವೈರಲ್ ಆಗಿವೆ. ಇದರಿಂದಾಗಿ ರಾಯರೆಡ್ಡಿ ಅವರು ಲೋಕಸಭೆ ಟಿಕೇಟ್ ಗಿಟ್ಟಿಸಿಕೊಳ್ಳುವ ಉದ್ದೇಶದಿಂದಲೇ ರಾಹುಲ್ ಗಾಂಧಿ ಜೊತೆ ಪ್ರವಾಸ ಮಾಡಿರಬಹುದು ಎನ್ನುವ ಮಾತನ್ನು ಜಿಲ್ಲೆಯ ಕಾಂಗ್ರೆಸ್ ನಾಯಕರು ಆಡಿಕೊಳ್ಳುತ್ತಿದ್ದಾರೆ.

    2018ರ ವಿಧಾನಸಭೆ ಚುನಾವಣೆ ಸೋಲಿನ ಕಹಿ ಅನುಭವ ಮರೆಯಲು ಕೈಲಸನಾಥ ದರ್ಶನ ಮಾಡುತ್ತಿರುವೆ ಎಂದು ರಾಯರೆಡ್ಡಿ ಹೇಳಿದ್ದರು. ಇತ್ತ ರಾಹುಲ್ ಗಾಂಧಿ ಭೇಟಿ ಆಕಸ್ಮಿಕ ಅಂತಾ ರಾಯರೆಡ್ಡಿ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಎಂಪಿ ಚುನಾವಣೆಯಲ್ಲಿ ಮತ್ತೇ ಸಮಸ್ಯೆ ಕಾಣಿಸಿಕೊಳ್ಳುತ್ತೆ: ಹೈಕಮಾಂಡ್‍ಗೆ ಸತೀಶ್ ಎಚ್ಚರಿಕೆ

    ಎಂಪಿ ಚುನಾವಣೆಯಲ್ಲಿ ಮತ್ತೇ ಸಮಸ್ಯೆ ಕಾಣಿಸಿಕೊಳ್ಳುತ್ತೆ: ಹೈಕಮಾಂಡ್‍ಗೆ ಸತೀಶ್ ಎಚ್ಚರಿಕೆ

    ಬೆಳಗಾವಿ: ಪಿಎಲ್‍ಡಿ ಬ್ಯಾಂಕ್ ಚುನಾವಣೆಯನ್ನು 6 ಕೋಟಿ ಜನ ನೋಡುವಂತಾಯಿತು. ಇದೊಂದು ಮುಗಿದ ಅಧ್ಯಾಯವಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಮತ್ತೇ ಸಮಸ್ಯೆ ಕಾಣಿಸಿಕೊಳ್ಳಲಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ, ಹೈಕಮಾಂಡ್‍ಗೆ ಎಚ್ಚರಿಕೆ ನೀಡಿದ್ದಾರೆ.

    ಪಕ್ಷದ ಹಿತದೃಷ್ಟಿಯಿಂದ ಹಾಗೂ ಎಲ್ಲರ ಸಹಮತದಿಂದ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷರ ಆಯ್ಕೆಯಾಗಿದೆ. ಇದು ಯಾರ ಗೆಲುವು ಅಲ್ಲ, ಯಾರ ಸೋಲು ಅಲ್ಲ. ಜಿಲ್ಲೆಯ ನಾಯಕರಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯನ್ನು ಆರಿಸಬೇಕಿತ್ತು, ಹೀಗಾಗಿ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಸಲಹೆ ಮೇರೆಗೆ ಸಮಸ್ಯೆ ಇತ್ಯರ್ಥ ಪಡಿಸಲಾಗಿದೆ ಎಂದು ಹೇಳಿದರು.

    ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಲೋಕಸಭಾ ಚುನಾವಣೆ ವೇಳೆ ಮತ್ತೇ ಸಮಸ್ಯೆ ಬರಲಿದ್ದು, ಅದನ್ನು ಪಕ್ಷದ ವರಿಷ್ಠರೇ ಬಗೆಹರಿಸುವರು. ಆದರೆ ನಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾದರೆ ನಾವು ಸ್ವತಂತ್ರ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೈಕಮಾಂಡ್‍ಗೆ ಖಡಕ್ ಎಚ್ಚರಿಕೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv