Tag: MP Jyotiraditya Scindia

  • ಸದನದಲ್ಲಿ ಕಾಂಗ್ರೆಸ್ ಸಂಸದರ ಕ್ಷಮೆ ಕೋರಿದ ನಿತಿನ್ ಗಡ್ಕರಿ

    ಸದನದಲ್ಲಿ ಕಾಂಗ್ರೆಸ್ ಸಂಸದರ ಕ್ಷಮೆ ಕೋರಿದ ನಿತಿನ್ ಗಡ್ಕರಿ

    ನವದೆಹಲಿ: ಕೇಂದ್ರ ಸಚಿವ ಸಚಿವ ನಿತಿನ್ ಗಡ್ಕರಿ ಲೋಕಸಭಾ ಸದನದ ವೇಳೆ ಕಾಂಗ್ರೆಸ್ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಅವರಲ್ಲಿ ಕ್ಷಮೆ ಕೇಳಿದ್ದಾರೆ.

    ಮಧ್ಯಪ್ರದೇಶದ ಗುನಾ ಕ್ಷೇತ್ರದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ಮುದ್ರಣ ಮಾಡಿಲ್ಲ ಹಾಗೂ ಕಾರ್ಯಕ್ರಮಕ್ಕೆ ತಮಗೇ ಆಹ್ವಾನ ನೀಡಿಲ್ಲ. ಯಾವುದೇ ಯೋಜನೆಯ ಉದ್ಘಾಟನೆಗೆ ಆ ಕ್ಷೇತ್ರದ ಜನಪ್ರತಿನಿಧಿಯನ್ನು ಆಹ್ವಾನಿಸುವುದು ಶಿಷ್ಟಾಚಾರ. ಆದರೆ ರಾಜ್ಯ ಸರ್ಕಾರ ತಮಗೇ ಆಹ್ವಾನ ನೀಡದೆ ಶಿಷ್ಟಾಚಾರ ಉಲ್ಲಂಘಿಸಿದೆ. ಅದ್ದರಿಂದ ಹಕ್ಕುಚ್ಯುತಿ ಮಂಡನೆ ಮಾಡುವುದಾಗಿ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಸದನದಲ್ಲಿ ಹೇಳಿದರು.

    ಸಿಂಧಿಯಾ ಆರೋಪದ ಬಳಿಕ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಹಾಗೂ ಜಲ ಸಂಪ್ಮೂಲ ಸಚಿವ ನಿತಿನ್ ಗಡ್ಕರಿ ಮಾತನಾಡಿ, ಈ ತಪ್ಪಿನ ಕುರಿತು ನನಗೆ ಅರಿವಾಗಿದೆ. ಮುಂದೇ ಇಂತಹ ತಪ್ಪುಗಳು ನಡೆಯದಂತೆ ಎಚ್ಚರವಹಿಸಲಾಗುವುದು. ಕಾರ್ಯಕ್ರಮದಲ್ಲಿ ನಾನು ಭಾಗವಹಿಸಿದ್ದೆ. ಅದ್ದರಿಂದ ತಾನು ಈ ತಪ್ಪಿನ ಜವಾಬ್ದಾರಿ ತೆಗೆದುಕೊಳ್ಳುತ್ತೇನೆ. ಸಂಸದರ ಹೆಸರು ಕಡ್ಡಾಯವಾಗಿ ಆಹ್ವಾನ ಪತ್ರಿಕೆಯಲ್ಲಿ ಮುದ್ರಣವಾಗಬೇಕಿತ್ತು. ಅಲ್ಲದೇ ಅವರಿಗೆ ಆಹ್ವಾನ ನೀಡಬೇಕಿತ್ತು. ಅದ್ದರಿಂದ ಸದನದಲ್ಲಿ ನಾನು ಕ್ಷಮೆ ಕೇಳುವುದಾಗಿ ಹೇಳಿದರು.

    ಗಡ್ಕರಿ ಅವರ ಮಾತಿಗೆ ಸಮಾಧಾನಗೊಳ್ಳದ ಸಿಂಧಿಯಾ, ಘಟನೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಸ್ಪೀಕರ್ ಸುಮಿತ್ರಾ ಮಹಾಜನ್ ಗಡ್ಕರಿ ಅವರು ಈಗಾಗಲೇ ಸಭೆಯಲ್ಲಿ ಕ್ಷಮೆ ಕೇಳಿದ್ದರೆ ಎಂದರು. ಲೋಕಸಭಾ ಸದನ ವಿರೋಧಿ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ ಸಂಸದರನ್ನು ಈ ರೀತಿ ನಡೆಸಿಕೊಳ್ಳುವುದು ಸೂಕ್ತವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಈ ವೇಳೆ ಮಧ್ಯಪ್ರವೇಶ ಮಾಡಿದ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್, ಈ ವಿಷಯದಲ್ಲಿ ರಾಜಕೀಯ ಮಾಡುವುದು ಬೇಡ. ಸದನದಲ್ಲಿ ಈಗಾಗಲೇ ಹಿರಿಯ ಸಚಿವರು ಕ್ಷಮೆ ಕೇಳಿದ್ದಾರೆ. ಯುಪಿಎ ಅವಧಿಯಲ್ಲೂ ಬಿಜೆಪಿ ಸಂಸದರಿಗೆ ಆಹ್ವಾನ ನೀಡದೆ ಹಲವು ಕಾರ್ಯಕ್ರಮ ನಡೆಸಲಾಗಿದೆ ಎಂದು ಹೇಳಿ ಈ ಚರ್ಚೆಗೆ ಪೂರ್ಣವಿರಾಮ ಹಾಕಿದರು.

  • ಪ್ರಧಾನಿ, ಮುಖ್ಯಮಂತ್ರಿ ಹುದ್ದೆಗೆ ಎಷ್ಟು ಬಾರಿ ಆಯ್ಕೆ ಅವಧಿ ನಿಗದಿಪಡಿಸಿ -`ಕೈ’ ಮುಖಂಡ ಸಿಂಧಿಯಾ

    ಪ್ರಧಾನಿ, ಮುಖ್ಯಮಂತ್ರಿ ಹುದ್ದೆಗೆ ಎಷ್ಟು ಬಾರಿ ಆಯ್ಕೆ ಅವಧಿ ನಿಗದಿಪಡಿಸಿ -`ಕೈ’ ಮುಖಂಡ ಸಿಂಧಿಯಾ

    ನವದೆಹಲಿ: ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿ ಹುದ್ದೆಗೆ ಒಬ್ಬ ವ್ಯಕ್ತಿ ಎಷ್ಟು ಬಾರಿ ಆಯ್ಕೆ ಮಾಡಬಹುದು ಎಂಬುವುದನ್ನು ನಿಗದಿ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ, ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.

    ಮಹಾರಾಷ್ಟ್ರ ಗುನಾ ಲೋಕಾಸಭಾ ಕ್ಷೇತ್ರದ ಸಂಸದರಾಗಿರುವ ಜ್ಯೋತಿರಾದಿತ್ಯ ಸಿಂಧಿಯಾ ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

    ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ ಹೆಚ್ಚಿನ ಅವಧಿ ನೇಮಕ ಹಾಗೂ ರಾಜ್ಯ ಸರ್ಕಾರಗಳು ನಿಗಧಿ ಮಾಡಿರುವ ನಿವೃತ್ತಿ ವಯಸ್ಸಿನ ಕುರಿತ ಪ್ರಶ್ನೆಗೆ ಉತ್ತರಿಸಿ, ಅಮೆರಿಕಲ್ಲಿ 2 ಅವಧಿಗೆ ಅಧ್ಯಕ್ಷರಾಗಲು ಅವಕಾಶವಿದ್ದು, ಇಂತಹ ನಿಯಮವನ್ನು ನಾವು ನಿಗಧಿ ಮಾಡಬೇಕಿದೆ ಎಂದು ಹೇಳಿದ್ದಾರೆ. ಅಲ್ಲದೇ ಯಾವುದೇ ಒಬ್ಬ ವ್ಯಕ್ತಿ ವೃತ್ತಿ ಜೀವನದ ಅಂಚಿನಲ್ಲಿದ್ದರೆ ಆತನ ಸ್ಥಾನಕ್ಕೆ ಉತ್ತಮ ವ್ಯಕ್ತಿಯನ್ನು ನೇಮಿಸುವ ಹಾಗೇ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳ ಹುದ್ದೆಗಳನ್ನು ಆಕ್ರಮಿಸಿಕೊಂಡಿರುವ ಜನರ ಅಧಿಕಾರಾವಧಿಗಳನ್ನು ಸಹ ನಿಗದಿಪಡಿಸಬೇಕು ಎಂದು ಸಲಹೆ ನೀಡಿದ್ದಾರೆ.

    ನಿವೃತ್ತ ಸರ್ಕಾರಿ ಅಧಿಕಾರಿಗಳನ್ನು ಮತ್ತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೇಮಕ ಮಾಡುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಅಂತಹ ಅಧಿಕಾರಿಗಳು ನೇಮಕವಾದರೆ ಪಿತೂರಿ ನಡೆಯುವ ಸಾಧ್ಯತೆ ಇದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

    ಇದೇ ವೇಳೆ ಮಹಾರಾಷ್ಟ್ರ ರಾಜ್ಯ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ ಅವರು, ಸರ್ಕಾರದ ರೈತರ ಆತ್ಮಹತ್ಯೆಗಳು ಹಾಗೂ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಯಲು ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ. ಅಲ್ಲದೇ ಭೋಪಾಲ್ ನಲ್ಲಿ 8 ವರ್ಷದ ಬಾಲಕಿ ಮೇಲೆ ನಡೆದ ರೇಪ್ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.