ಮೈಸೂರು: ರಾಜಕೀಯ ಲಾಭಕ್ಕಾಗಿ ಸಂಸದ ಪ್ರತಾಪ್ ಸಿಂಹ ಕೋಮು ಗಲಭೆ ಸೃಷ್ಟಿಸಲು ಹುನ್ನಾರ ರೂಪಿಸಿದ್ದಾರೆ ಎಂದು ಆರೋಪಿಸಿ ಮೈಸೂರು ಕಾಂಗ್ರೆಸ್ ನಿಯೋಗ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದೆ.
ಮುಸ್ಲಿಂರ ದರ್ಗಾ ಹೊಡೆಯಲು ನಿಮಗೆ ತೊಡೆ ನಡುಗುತ್ತಾ ಎಂದು ಪ್ರತಾಪ್ ಸಿಂಹ ಹೇಳಿಕೆ ಸರಿಯಲ್ಲ. ಕೆಡಿಪಿ ಸಭೆಯಲ್ಲಿ ಸಂಸದರು ಜಿಲ್ಲಾಧಿಕಾರಿಗಳಿಗೆ ಧಮ್ಕಿ ಹಾಕಿರುವುದು ಅಕ್ಷಮ್ಯ ಅಪರಾಧ. ರಾಜಕೀಯ ಲಾಭಕ್ಕಾಗಿ ರಾತ್ರೋ ರಾತ್ರಿ ದೇವಸ್ಥಾನಗಳನ್ನು ಹೊಡೆದು ಹಾಕಿ ಕೋಮು ಗಲಾಭೆ ಸೃಷ್ಟಿಸಲು ಮುಂದಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿ ಮೈಸೂರು ಜಿಲ್ಲಾಧಿಕಾರಿಗಳಿಗೆ ನೀಡಿದೆ. ಇದನ್ನೂ ಓದಿ: ಮೈಸೂರಿನಲ್ಲಿ ದೇವಸ್ಥಾನ ತೆರವು ಕಾರ್ಯಚರಣೆಗೆ ಜಿಲ್ಲಾಡಳಿತ ಬ್ರೇಕ್
ಅರಸು ರಸ್ತೆಯ ದರ್ಗಾ, ಇರ್ವೀನ್ ರಸ್ತೆಯಲ್ಲಿರುವ ಮಸೀದಿ, ಎರಡು ವಿಚಾರ ಈಗ ಕೋರ್ಟ್ ನಲ್ಲಿದೆ. ಆದರೂ ಪದೇ ಪದೇ ಇದನ್ನು ಕೆಡವಿ ಎಂದು ಕೆಡಿಪಿ ಸಭೆಯಲ್ಲಿ ಸಂಸದರು ಆಗ್ರಹಿಸಿದ್ದಾರೆ. ಇದರ ಹಿಂದೆ ರಾಜಕೀಯ ಲಾಭದ ಹುನ್ನಾರವಿದೆ ಎಂದು ಆರೋಪಿಸಿದೆ. ಇದನ್ನೂ ಓದಿ: ದೇಶ-ಧರ್ಮದ ವಿಚಾರದಲ್ಲಿ ನಾನು ಸದಾ ಧ್ವನಿ ಎತ್ತುತ್ತೇನೆ: ಪ್ರತಾಪ್ ಸಿಂಹ
ಮೈಸೂರು: ದಶಪಥ ರಸ್ತೆ ಕಾಮಗಾರಿ ವೀಡಿಯೋ ಮಾಡಿದ್ದು ಇಷ್ಟು ಜನರ ಹೊಟ್ಟೆಗೆ ಬೆಂಕಿ ಬೀಳಿಸುತ್ತೆ ಅಂತ ಗೊತ್ತಿರಲಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಎಂಎಲ್ಸಿ ಹೆಚ್.ವಿಶ್ವನಾಥ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ವಿಶ್ವನಾಥ್ ಅವರ ಹೇಳಿಕೆಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಸಂಸದರು, ಮೋದಿ ಸರ್ಕಾರ ಈ ಯೋಜನೆಗೆ ಹಣ ಬಿಡುಗಡೆ ಮಾಡಿ ಕಾಮಗಾರಿ ಚಾಲನೆ ನೀಡಲಾಗಿದೆ. 8,666 ಕೋಟಿ ರೂ. ಪ್ರಾಜೆಕ್ಟ್ ನಲ್ಲಿ 8 ಪೈಸೆನಾದರೂ ವಿಶ್ವನಾಥ್ ಅವರು ಬಿಡುಗಡೆ ಮಾಡಿಸಿದ್ರಾ? ಅಥವಾ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದ್ರಾ? ಒಂದು ವೇಳೆ ಈ ಯೋಜನೆ ನೀವೇ ತಂದಿದ್ರೆ ಚುನಾವಣೆ ವೇಳೆ ಯಾಕೆ ಹೇಳಿಕೊಳ್ಳಲಿಲ್ಲ ಎಂದು ಪ್ರಶ್ನೆ ಮಾಡಿದರು.
ವಿಶ್ವನಾಥ್ ಅವರು ಟೀಕೆ ಮಾಡದ ವ್ಯಕ್ತಿಯೇ ಇಲ್ಲ. ಟ್ರಂಪ್, ಬೈಡೆನ್ ಅವರನ್ನೇ ಅವರು ಬಿಟ್ಟಿಲ್ಲ. ದೇವೇಗೌಡರು, ಯಡಿಯೂರಪ್ಪ, ವಿಜಯೇಂದ್ರ, ಎಸ್.ಟಿ.ಸೋಮಶೇಖರ್ ಎಲ್ಲರನ್ನೂ ವಿಶ್ವನಾಥ್ ಬೈಯ್ದಿದ್ದು ಆಯ್ತು. ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಟೀಕೆ ಮಾಡುವ ಗ್ಯಾಪ್ ನಲ್ಲಿ ನನ್ನ ಬಗ್ಗೆ ಮಾತನಾಡಿದ್ದಾರೆ. ಈ ಯೋಜನೆಗೆ ಡೇ ಟು ಡೇ ಬಗ್ಗೆ ಮಾಧ್ಯಮಗಳ ಮುಂದೆ ಚರ್ಚೆ ಮಾಡೋಣ ಬನ್ನಿ ಎಂದು ಪ್ರತಾಪ್ ಸಿಂಹ ಸವಾಲು ಹಾಕಿದರು.
ಹಳೆ ಉಂಡುವಾಡಿ ಕುಡಿಯುವ ನೀರು ಯೋಜನೆಗೂ ವಿಶ್ವನಾಥ್ ಐದು ಪೈಸೆ ಕೊಡಿಸಿಲ್ಲ. ನೀವು ಸತ್ಯಸಂಧರ ರೀತಿ ಮಾತಾಡಬೇಡಿ ವಿಶ್ವನಾಥ್ ಅವರೇ. ಮಾಜಿ ಸಚಿವ ಮಹದೇವಪ್ಪ ಅವರೇ ನೀವು ನಿಮ್ಮ ಅವಧಿಯಲ್ಲಿ ಮಾಡಿದ ಒಂದು ರಸ್ತೆ ನೆಟ್ಟಗಿದ್ದಿಯಾ ಸರ್? ನಿಮಗೆ ದಶಪಥ ರಸ್ತೆಯ ಕ್ರೆಡಿಟ್ ಬೇಕಾ? ನೀವು ಹಿರಿಯರು. ನೀವು ಮಾರ್ಗದರ್ಶನ ಮಾಡಿ ಸರ್. ಬೀದಿ ಜಗಳಕ್ಕೆ ಇಳಿಯಬೇಡಿ ಎಂದು ಟಾಂಗ್ ಕೊಟ್ಟರು.
ಹೆಚ್.ವಿಶ್ವನಾಥ್ ಹೇಳಿದ್ದೇನು?:
ಈ ಹಿಂದೆ ಆಸ್ಕರ್ ಫರ್ನಾಂಡೀಸ್ ಕೇಂದ್ರ ಸಚಿವರಾಗಿದ್ದಾಗ ಸುಮಾರು ಸಭೆಗಳನ್ನು ನಡೆಸಿ 1,882 ಕಿಲೋ ಮೀಟರ್ ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಪರಿವರ್ತಿಸುವ ಬಗ್ಗೆ ತೀರ್ಮಾನವಾಯ್ತು. ಧೃವ ನಾರಾಯಣ್, ರಮ್ಯಾ, ಡಿ.ಕೆ.ಸುರೇಶ್ ಸೇರಿದಂತೆ ನಾವೆಲ್ಲರೂ ಸುಮಾರು ಸಭೆಗಳಲ್ಲಿ ಭಾಗಿಯಾಗಿದ್ದೇವೆ. ಆನಂತರ ಕೇಂದ್ರದಲ್ಲಿ ಯುಪಿಎ ಸರ್ಕಾರ ಹೋಗಿ ಎನ್ಡಿಎ ಅಧಿಕಾರಕ್ಕೆ ಬಂತು. ಆದ್ರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದಾಗ ಅಂದಿನ ಸಿಎಂ ಸಿದ್ದರಾಮಯ್ಯ, ಸಚಿವರಾಗಿದ್ದ ಮಹದೇವ ಪ್ರಸಾದ್ ಹೆದ್ದಾರಿ ನಿರ್ಮಾಣದ ಕೆಲಸ ಆರಂಭಿಸಿದ್ದರು. ಇದನ್ನೂ ಓದಿ:ದಶಪಥದ ರಸ್ತೆ ಇರೋದು ಮೈಸೂರಿಗಾಗಿ, ಇದಕ್ಕಾಗಿ ಹೆಚ್ಚು ಆಸಕ್ತಿವಹಿಸಿದ್ದೇನೆ: ಪ್ರತಾಪ್ ಸಿಂಹ
ಮೈಸೂರು: ದಶಪಥದ ರಸ್ತೆ ಮೈಸೂರಿಗಾಗಿ ಇರೋದರಿಂದ ನಾನು ಹೆಚ್ಚು ಆಸಕ್ತಿ ತೆಗೆದುಕೊಂಡಿದ್ದೇನೆ ಎಂದು ಹೇಳುವ ಮೂಲಕ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದರು.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೈಜ್ಞಾನಿಕವಾಗಿ ನಡೆಯುತ್ತಿಲ್ಲ ಎಂಬ ಸುಮಲತಾ ಅಂಬರೀಶ್ ಹೇಳಿಕೆಗೆ ಮೈಸೂರಿನಲ್ಲಿ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಯಾರಿಗೆ ಕಾಮಗಾರಿ ಬಗ್ಗೆ ಅನುಮಾನ ಇದೆಯೋ ಅಂತಹವರು ತಜ್ಞರನ್ನು ಕರೆದುಕೊಂಡು ಬಂದು ಪರಿಶೀಲನೆ ಮಾಡಿಸಿಕೊಳ್ಳಿ ಎಂದರು.
ಇದು ಮೋದಿ ಸರ್ಕಾರದ ಯೋಜನೆ:
ಬೆಂಗಳೂರು ಮೈಸೂರು ಹೆದ್ದಾರಿ ಕಾಮಗಾರಿ ಮೂರು ಸಂಸದರಿಗೆ ಸೇರುತ್ತದೆ ಎಂಬ ಹೇಳಿಕೆಗೂ ಸ್ಪಷ್ಟೀಕರಣ ರೂಪದ ತಿರುಗೇಟು ನೀಡಿದ ಸಂಸದ ಪ್ರತಾಪ್ ಸಿಂಹ, ಹತ್ತು ಪಥದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತಂದಿರುವುದು ಮೈಸೂರಿಗೋಸ್ಕರ ಮಾತ್ರ. ಮೈಸೂರು ಡೆಸ್ಟಿನೇಷನ್ ಎಂಬ ಕಾರಣಕ್ಕಾಗಿ ನಾನು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದೇನೆ. ಮಂಡ್ಯದ ಮೇಲೆ ಹೋಗುತ್ತೆ ಅಂತಾ ಮಂಡ್ಯದವರು, ರಾಮನಗರದ ಮೇಲೆ ಹೋಗುತ್ತೆ ಅಂತಾ ರಾಮನಗರದವರು. ಈ ಕಾಮಗಾರಿ ನನ್ನದು ಅಂತಾ ಹೇಳಿಕೊಂಡರೇ ಅದಕ್ಕೆ ಅರ್ಥ ಇದೆಯಾ? ಎಂದು ಪ್ರಶ್ನಿಸಿದ ಅವರು ಇದು ಮೋದಿ ಸರ್ಕಾರದ ಯೋಜನೆ. ಈ ಯೋಜನೆಗೆ ಕಾಂಗ್ರೆಸ್ ನವರಿಂದ ಬಿಡಿಗಾಸು ಕೂಡ ಸಿಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ:ಅಫ್ಘಾನಿಸ್ತಾನದಿಂದ ಸೇನೆ ಹಿಂಪಡೆದಿದ್ದು ಅಮೆರಿಕಾ ಇತಿಹಾಸದಲ್ಲಿ ಕಪ್ಪು ಚುಕ್ಕೆ: ಬೈಡನ್ ವಿರುದ್ಧ ಟ್ರಂಪ್ ವಾಗ್ದಾಳಿ
ತಿರಸ್ಕೃತರಾದವರ ಮಾತಿಗೆ ಅರ್ಥವಿಲ್ಲ:
ಸಿದ್ದರಾಮಯ್ಯ ಅವರ ಹೇಳಿಕೆಗೂ ಅರ್ಥವಿಲ್ಲ. ಪದೇ ಪದೇ ಜನರಿಂದ ತಿರಸ್ಕೃತರಾದವರ ಮಾತಿಗೆ ಅರ್ಥವಿಲ್ಲ ಎಂದರು. ಸುಮಲತಾ ಅವರು ಈ ಯೋಜನೆಯ ಕಾಮಗಾರಿ ನನ್ನ ರಸ್ತೆ ಮೇಲೆ ಹೋಗುತ್ತದೆ ಎಂದರೆ ಏನು ಮಾಡಲು ಆಗಲ್ಲ. ಅವರಿಗೆ ಅವಶ್ಯಕತೆ ಇದ್ದರೆ ಮಂಡ್ಯದವರು ಮಂಡ್ಯದವರಗೆ, ರಾಮನಗರದವರು ರಾಮನಗರದವರೆಗೂ ಕಾಮಗಾರಿ ತರಲಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಟಿ20 ವರ್ಲ್ಡ್ ಕಪ್ – ಅಕ್ಟೋಬರ್ 24ರಂದು ಭಾರತ Vs ಪಾಕಿಸ್ತಾನ
ಈಗ ಕೆಲವರಿಗೆ ಅರ್ಥವಾಗಿದೆ:
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ವಿಚಾರದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು ಭಾರತೀಯರಿಗೆ ಸಿಎಎ ಕಾಯ್ದೆಯನ್ನು ಏಕೆ ಜಾರಿಗೆ ತರಲಾಯಿತು ಎಂಬುದು ಈಗ ಅರ್ಥವಾಗಬೇಕು. ಮೋದಿಯವರು ಪರಿಸ್ಥಿತಿಯನ್ನು ಮೊದಲೇ ಅರ್ಥ ಮಾಡಿಕೊಂಡು ಸಿಎಎ ಕಾಯ್ದೆಯನ್ನು ಜಾರಿಗೊಳಿಸಿದರು. ಪ್ರತಿಯೊಬ್ಬ ಭಾರತೀಯರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
The Mysuru-Bengaluru 10 lane Highway will be completed by Dasara 2022. Guess what, you can travel from Blr to Mys in just 90 minutes! Take a look at how this project is progressing!
ಇವತ್ತು ಅಫ್ಘಾನಿಸ್ತಾನದ ಸುತ್ತಮುತ್ತ ಹಲವಾರು ಮುಸ್ಲಿಂ ರಾಷ್ಟ್ರಗಳಿದ್ದರೂ ಅವರನ್ನು ಕರೆಸಿಕೊಳ್ಳುತ್ತಿಲ್ಲ. ಷರಿಯಾ, ತಾಲಿಬಾನ್ ಮಾನವ ವಿರೋಧಿಯೆಂಬುದು ಇದೀಗ ಸಾಬೀತಾಗಿದೆ. ಕೇವಲ ಅಫ್ಘಾನಿಸ್ತಾನದ ಮನಃಸ್ಥಿತಿಯ ಜನರಿಲ್ಲ, ಭಾರತದಲ್ಲೂ ಅದೇ ಮನಃಸ್ಥಿತಿಯ ಜನರಿದ್ದಾರೆ. ಸಿಎಎ ಜಾರಿಗೆ ತಂದದ್ದು ಅಫ್ಘಾನಿಸ್ತಾನದ ಕಾರಣಕ್ಕಾಗಿ ಮಾತ್ರವಲ್ಲ. ಇತರ ಕಡೆಗಳಲ್ಲಿ ಈ ರೀತಿಯ ಅನಾಹುತಗಳಾಗಬಹುದು. ಎಲ್ಲರೂ ಸೇರಿ ಇದನ್ನು ಎದುರಿಸಬೇಕಾಗಿದೆ. ಅಫ್ಘಾನಿಸ್ತಾನದ ಇತ್ತೀಚಿನ ಬೆಳವಣಿಗೆ ಮುಸ್ಲಿಂ ರಾಷ್ಟ್ರಗಳಿಗೂ ಅಪಾಯಕಾರಿಯಾಗಿ ಪರಿಣಮಿಸಬಹುದು ಎಂದರು. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಶಾಲೆ, ಕಾಲೇಜು ಬಂದ್ – ಬುರ್ಖಾ ಅಂಗಡಿ ಓಪನ್
ಮಡಿಕೇರಿ: ಕೊಡಗನ್ನು 300 ವರ್ಷಗಳ ಕಾಲ ಆಳ್ವಿಕೆ ಮಾಡಿದ ಹಾಲೇರಿ ರಾಜವಂಶಸ್ಥರಿಗೆ ಅಪಮಾನ ಮಾಡಲಾಗಿದೆ ಎಂದು ಕೊಡಗು ರಕ್ಷಣಾ ವೇದಿಕೆ ಅಧ್ಯಕ್ಷ ಪವನ್ ಪೆಮ್ಮಯ್ಯ ವಿರುದ್ಧ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದೆ. ಎಲ್ಲಿಂದಲೋ ಬೂದಿ ಬಳಿದುಕೊಂಡು ಬಂದವರಿಗೆ ಪಟ್ಟಕಟ್ಟಿ ಈಗ ಕೊಡಗಿನ ಜನರು ಪಡಬಾರದ ಕಷ್ಟ ಪಡುತ್ತಿದ್ದೇವೆ ಎಂದು ಪವನ್ ಪೆಮ್ಮಯ್ಯ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿದ್ದರು.
ಸಂಸದ ಪ್ರತಾಪ್ ಸಿಂಹ ಅವರು ಕೊಡಗು ಪ್ರವಾಸೋದ್ಯಮದ ಮೇಲೆ ನಿಂತಿದೆ ಎಂದು ಹೇಳಿದ್ದರು. ಇದನ್ನು ಟೀಕಿಸಿಸುವ ಭರದಲ್ಲಿ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿರುವ ಪವನ್ ಪೆಮ್ಮಯ್ಯ, ಕೊಡಗಿನ ರಾಜವಂಶವನ್ನು ಹೀಯಾಳಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ವೀರಶೈವ ಮಹಾಸಭಾ, ವೀರಶೈವ ಯುವ ವೇದಿಕೆ ಮತ್ತು ಅಖಿಲ ಭಾರತ ವೀರಶೈವ ಆರ್ಯ ಸಮಾಜ ಸೇರಿದಂತೆ ಹಲವು ಸಂಘಟನೆಗಳಿಂದ ದೂರು ನೀಡಲಾಗಿದೆ.
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕುಶಾಲನಗರ, ಸೋಮವಾರಪೇಟೆ ಮತ್ತು ಕೊಡ್ಲಿಪೇಟೆ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದೆ. ಆದರೆ ಪವನ್ ಪೆಮ್ಮಯ್ಯ ಯಾವ ಸುಮುದಾಯದವರಿಗೂ ನೋವು ಉಂಟು ಮಾಡುವ ಉದ್ದೇಶ ಇರಲಿಲ್ಲ. ಪೋಸ್ಟ್ ನಿಂದ ಯಾರಿಗಾದರೂ ನೋವಾಗಿದ್ದರೆ ಬಹಿರಂಗವಾಗಿ ಕ್ಷಮೆ ಯೋಚಿಸುತ್ತೇನೆ ಎಂದು ಕ್ಷಮೆಯಾಚಿಸಿದ್ದಾರೆ.
ಮಡಿಕೇರಿ: ಕೊರೋನಾ ವೈರಸ್ನ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು. ಮೈಸೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ವೇಳೆ ಪರಿಸ್ಥಿತಿ ಹಾಗೂ ಪರಿಹಾರ ಕ್ರಮಗಳ ಕುರಿತು ಚರ್ಚೆ ನಡೆಸಲು ವಿರಾಜಪೇಟೆಗೆ ಸಂಸದ ಪ್ರತಾಪ್ ಸಿಂಹ, ಸಚಿವ ಸೋಮಣ್ಣ ಅವರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಕಾಲಿಗೆ ನಮಸ್ಕರಿಸಲು ಮುಂದಾದ ಪ್ರತಾಪ್ ಸಿಂಹ ಅವರನ್ನು ತಡೆದ ಶಾಸಕ ಬೋಪಯ್ಯ ಅವರು ದೂರದಿಂದಲೇ ನಮಸ್ಕರಿಸಲು ತಿಳಿಸಿದ ಘಟನೆ ನಡೆಯಿತು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಅವರೊಂದಿಗೆ ವಿರಾಜಪೇಟೆಗೆ ಸಂಸದ ಪ್ರತಾಪ್ ಸಿಂಹ ಆಗಮಿಸಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಕೆ.ಜಿ ಬೋಪಯ್ಯ ಅವರ ಕಾಲಿಗೆ ನಮಸ್ಕರಿಸಲು ಪ್ರತಾಪ್ ಸಿಂಹ ಮುಂದಾದರು. ಕೂಡಲೇ ಸಂಸದರನ್ನು ತಡೆದ ಬೋಪಯ್ಯ ಅವರು, ‘ದೂರವೇ ನಿಂತು ನಮಸ್ಕರಿಸಿ. ನೀವು ಮೈಸೂರಿನವರು ಸ್ವಲ್ಪ ಭಯವಾಗುತ್ತದೆ ಎಂದರು. ಇದಕ್ಕೆ ನಗುತ್ತಲೇ ಉತ್ತರಿಸಿದ ಸಂಸದರು, ‘ಮೈಸೂರಿನವರನ್ನು ಕಂಡ್ರೆ ಭಯ ನಾ ಸರ್..!’ ಎಂದು ಸ್ಥಳದಿಂದ ತೆರಳಿದರು. ಇತ್ತ ಪಕ್ಷದ ಕಾರ್ಯಕರ್ತರು ಮಾತ್ರ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಉಸ್ತುವಾರಿ ಸಚಿವರನ್ನು ಮುಗಿಬಿದ್ದು ಮಾತಾನಾಡಿಸುವ ದೃಶ್ಯ ಕಂಡು ಬಂತು.
ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ದೇಶವೇ ಲಾಕ್ಡೌನ್ ಆಗಿದೆ. ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸಾಕಷ್ಟು ತಿಳುವಳಿಕೆ ನೀಡಲಾಗುತ್ತಿದೆ. ಸಚಿವ ಸೋಮಣ್ಣ ಬಂದಿದ್ದ ವೇಳೆ ಸ್ಥಳೀಯರು, ಕಾರ್ಯಕರ್ತರು ಮಾತ್ರ ಸಾಮಾಜಿಕ ಅಂತರ ಕಾಯ್ದುಕೊಳ್ಳಲಿಲ್ಲ. ಘಟನೆ ಬಳಿಕ ಎಚ್ಚೆತ್ತ ಪೊಲೀಸರು ಬಿಜೆಪಿ ಕಾರ್ಯಕರ್ತರು ಮತ್ತು ಅಧಿಕಾರಿಗಳಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಪದೇ ಪದೇ ಸೂಚನೆ ನೀಡಿದರು. ಪೊಲೀಸರ ಸೂಚನೆಯ ಬಳಿಕವೂ ಸ್ಥಳದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿರ್ಲಷ್ಯ ವಹಿಸಲಾಗಿತ್ತು.
ಮೈಸೂರು: ಕನಕಪುರ ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ಸ್ಥಾಪನೆ ವಿಚಾರದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಪ್ರತಾಪ್ ಸಿಂಹ ನಡುವಿನ ಜಟಾಪಟಿ ಮುಂದುವರಿದಿದೆ. ಈ ಕುರಿತು ವ್ಯಂಗ್ಯವಾಡಿರುವ ಸಂಸದರು, ಡಿ.ಕೆ.ಶಿವಕುಮಾರ್ ಅವರೇ ನೀವೂ ಏಸುಕುಮಾರ್ ಆಗಬೇಡಿ ಎಂದಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಕಪಾಲ ಬೆಟ್ಟ ಶಿವನ ಬೆಟ್ಟ. ಆ ಬೆಟ್ಟವನ್ನು ಏಸು ಬೆಟ್ಟ ಮಾಡಿ ನೀವು ಏಸುಕುಮಾರ ಅನಿಸಿಕೊಳ್ಳಬೇಡಿ. ಶಿವ ಮತ್ತು ಭಕ್ತರ ನಡುವಿನ ಸಂಬಂಧ ಇದು. ಆ ಸಂಬಂಧವನ್ನು ನೀವು ಮುರಿಯಬೇಡಿ ಎಂದರು.
ಕೆಲ ದಿನಗಳ ಹಿಂದೆಯಷ್ಟೇ ಪ್ರತಾಪ್ ಸಿಂಹ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲೂ ಡಿಕೆಶಿ ಅವರಿಗೆ ಈ ವಿಚಾರದಲ್ಲಿ 4 ಪ್ರಶ್ನೆ ಕೇಳಿದ್ದರು.
ಪ್ರತಾಪ್ ಸಿಂಹ ಪ್ರಶ್ನೆಗಳು:
1. ಏನು ಡಿ.ಕೆ. ಶಿವಕುಮಾರರೇ, ಸ್ವಂತ ಹಣದಲ್ಲಿ 114 ಅಡಿ ಎತ್ತರದ ಏಸು ಪ್ರತಿಮೆ ನಿರ್ಮಾಣದ ಹಿಂದಿರುವ ಉದ್ದೇಶವೇನು?
2. ಆಂಧ್ರದಲ್ಲಿ ಮತಾಂತರವನ್ನೇ ಅಧಿಕಾರದ ಮೆಟ್ಟಿಲಾಗಿಸಿಕೊಂಡ ಜಗನ್ ಮೋಹನ್ ರೆಡ್ಡಿಯವರಂತೆ, ಕನಕಪುರದ ಒಕ್ಕಲಿಗರನ್ನು ಕನ್ವರ್ಟ್ ಮಾಡುವ ಸ್ಕೀಮಾ ಇದು?
3. ಸಿದ್ದಗಂಗಾ, ಸುತ್ತೂರು, ಸಿರಿಗೆರೆಗಳಂತೆ ಆದಿಚುಂಚನಗಿರಿ ಸಂಸ್ಥೆಯನ್ನೂ ಉತ್ತುಂಗಕ್ಕೆ ತೆಗೆದುಕೊಂಡು ಹೋದ ಬಾಲಗಂಗಾಧರ ಶ್ರೀಗಳು ಮರೆತುಹೋದರಾ ನಿಮಗೆ?
4. ಸರ್ವ ಜಾತಿಜನಾಂಗದ ದೈವ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯವರ ಪ್ರತಿಮೆ ನಿರ್ಮಿಸಿದ್ದರೆ ಕಪಾಲಿ ಬೆಟ್ಟಕ್ಕೆ ಕಳಶಪ್ರಾಯವಾಗುತ್ತಿರಲಿಲ್ಲವೇ? ಎಂದು ಪ್ರಶ್ನಿಸಿದ್ದರು.
ಡಿಕೆಶಿ ಸಮರ್ಥನೆ: ಏಸು ಪ್ರತಿಮೆ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಿರುವುದನ್ನು ಸಮರ್ಥನೆ ಮಾಡಿಕೊಂಡಿದ್ದ ಡಿಕೆಶಿ ಅವರು, ಎಲ್ಲಾ ಸಮುದಾಯಗಳಿಗೂ ನಾನು ನೆರವಾಗಿದ್ದು, ಅಂಬೇಡ್ಕರ್ ಅವರು ರಚಿಸಿದ್ದ ಸಂವಿಧಾನವನ್ನು ಬದಲಾಯಿಸಲು ಹೊರಟಿರುವ ಅವರಿಂದ ನೀತಿಪಾಠ ನನಗೆ ಬೇಕಿಲ್ಲ. ಬಿಜೆಪಿ ನಾಯಕರು ಯಾವಾಗಲೂ ಬೇರೊಬ್ಬರ ವಿಚಾರದಲ್ಲಿ ತಪ್ಪು ಕಂಡು ಹಿಡಿರುವ ಕೆಲಸವನ್ನಷ್ಟೇ ಮಾಡುತ್ತಾರೆ. ಈಗಲೂ ಅವರು ತಮ್ಮ ಕೆಲಸವನ್ನು ಮಾಡುತ್ತಿದ್ದಾರೆ. ಆದರೆ ಕಪಾಲ ಬೆಟ್ಟ ತನ್ನದೇ ಆದ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿದ್ದು, ಅಲ್ಲಿನ ಜನರು ನನ್ನ ಪರವಾಗಿ ನಿಂತು ಬೆಳೆಸಿದ್ದಾರೆ. ಇಡೀ ಗ್ರಾಮದ ಜನರು ನನ್ನ ಪರ ಪ್ರಾರ್ಥನೆ ಮಾಡಿದ್ದಾರೆ. ಕಳೆದ 2 ವರ್ಷಗಳ ಹಿಂದೆ ಗ್ರಾಮಸ್ಥರು ಮೂರ್ತಿ ನಿರ್ಮಾಣ ಮಾಡುವ ಪ್ರಸ್ತಾಪ ಮಾಡಿದ್ದರು. ಆದರೆ ಈ ಜಾಗ ಸರ್ಕಾರಿ ಸ್ಥಳವಾಗಿದೆ. ಆದ್ದರಿಂದ ಬೇಡ ಎಂದು ಹೇಳಿ ಯಾವುದೇ ತೊಂದರೆ ಇಲ್ಲದೇ ಜಮೀನು ನೀಡುವ ಭರವಸೆ ನೀಡಿದ್ದೆ.
ಕುಮಾರಸ್ವಾಮಿ ಅವರ ಸರ್ಕಾರದಲ್ಲಿ ಈ ಸ್ಥಳವನ್ನು ಮಂಜೂರು ಮಾಡಿಸಿ ಸ್ವತಃ ಹಣವನ್ನೂ ನೀಡಿ ಅವರಿಗೆ ಹಕ್ಕು ಪತ್ರವನ್ನು ನೀಡಿದ್ದೇನೆ. ಬೆಟ್ಟ 16 ಎಕರೆ ಇದ್ದು, 10 ಎಕರೆ ಜಮೀನು ಮಾತ್ರ ಅವರಿಗೆ ಕಾನೂನಾತ್ಮಕವಾಗಿ ನೀಡಿದ್ದೇನೆ. ಈ ಒಂದು ಸ್ಥಳ ಮಾತ್ರವಲ್ಲ, ನನ್ನದೇ ಸ್ವತಃ ಜಮೀನನ್ನು ಕೂಡ ಕರ್ನಾಟಕ ಸರ್ಕಾರದ ಶಿಕ್ಷಣ ಸಂಸ್ಥೆ ನಿರ್ಮಾಣ ಮಾಡಲು ನೀಡಿದ್ದೇನೆ. ಅಲ್ಲದೇ ನೂರಾರು ದೇವಾಲಯಗಳನ್ನು ನಿರ್ಮಾಣ ಮಾಡಲು ನೆರವು ನೀಡಿದ್ದೇವೆ ಎಂದು ಹೇಳಿದ್ದರು.
ಮೈಸೂರು: ರಾಮನಗರದ ಕಪಾಲಿ ಬೆಟ್ಟದಲ್ಲಿ ವಿಶ್ವದ ಅತಿ ದೊಡ್ಡ ಏಸು ಪ್ರತಿಮೆ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಿಸಿದ್ದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ಗೆ ಮೈಸೂರು ಸಂಸದ ಪ್ರತಾಪ್ ಸಿಂಹ ಖಾರವಾಗಿ ಪ್ರಶ್ನೆಗಳನ್ನು ಕೇಳಿದ್ದಾರೆ.
ಈ ಕುರಿತು ಪ್ರತಾಪ್ ಸಿಂಹ ಅವರು ತಮ್ಮ ಫೇಸ್ ಬುಕ್ ಹಾಗೂ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ನಾಲ್ಕು ಪ್ರಶ್ನೆ ಕೇಳುವ ಮೂಲಕ ಡಿಕೆಶಿ ಅವರ ಪ್ರತಿಮೆ ಸ್ಥಾಪನೆ ನಿರ್ಧಾರವನ್ನು ಖಂಡಿಸಿದ್ದಾರೆ.
ಪ್ರತಾಪ್ ಸಿಂಹ ಪ್ರಶ್ನೆಗಳು:
1 – ಏನು ಡಿ.ಕೆ. ಶಿವಕುಮಾರರೇ, ಸ್ವಂತ ಹಣದಲ್ಲಿ 114 ಅಡಿ ಎತ್ತರದ ಯೇಸು ಪ್ರತಿಮೆ ನಿರ್ಮಾಣದ ಹಿಂದಿರುವ ಉದ್ದೇಶವೇನು?
2 – ಆಂಧ್ರದಲ್ಲಿ ಮತಾಂತರವನ್ನೇ ಅಧಿಕಾರದ ಮೆಟ್ಟಿಲಾಗಿಸಿಕೊಂಡ ಜಗನ್ ಮೋಹನ್ ರೆಡ್ಡಿಯವರಂತೆ, ಕನಕಪುರದ ಒಕ್ಕಲಿಗರನ್ನು ಕನ್ವರ್ಟ್ ಮಾಡುವ ಸ್ಕೀಮಾ ಇದು?
3 – ಸಿದ್ದಗಂಗಾ, ಸುತ್ತೂರು, ಸಿರಿಗೆರೆಗಳಂತೆ ಆದಿಚುಂಚನಗಿರಿ ಸಂಸ್ಥೆಯನ್ನೂ ಉತ್ತುಂಗಕ್ಕೆ ತೆಗೆದುಕೊಂಡು ಹೋದ ಬಾಲಗಂಗಾಧರ ಶ್ರೀಗಳು ಮರೆತುಹೋದರಾ ನಿಮಗೆ?
4 – ಸರ್ವ ಜಾತಿಜನಾಂಗದ ದೈವ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯವರ ಪ್ರತಿಮೆ ನಿರ್ಮಿಸಿದ್ದರೆ ಕಪಾಲಿ ಬೆಟ್ಟಕ್ಕೆ ಕಳಶಪ್ರಾಯವಾಗುತ್ತಿರಲಿಲ್ಲವೇ?
ಡಿಕೆಶಿ ಸಮರ್ಥನೆ: ಏಸು ಪ್ರತಿಮೆ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಿರುವುದನ್ನು ಸಮರ್ಥನೆ ಮಾಡಿಕೊಂಡಿರುವ ಡಿಕೆಶಿ ಅವರು, ಎಲ್ಲಾ ಸಮುದಾಯಗಳಿಗೂ ನಾನು ನೆರವಾಗಿದ್ದು, ಅಂಬೇಡ್ಕರ್ ಅವರು ರಚಿಸಿದ್ದ ಸಂವಿಧಾನವನ್ನು ಬದಲಾಯಿಸಲು ಹೊರಟಿರುವ ಅವರಿಂದ ನೀತಿಪಾಠ ನನಗೆ ಬೇಕಿಲ್ಲ. ಬಿಜೆಪಿ ನಾಯಕರು ಯಾವಾಗಲೂ ಬೇರೊಬ್ಬರ ವಿಚಾರದಲ್ಲಿ ತಪ್ಪು ಕಂಡು ಹಿಡಿರುವ ಕೆಲಸವನ್ನಷ್ಟೇ ಮಾಡುತ್ತಾರೆ. ಈಗಲೂ ಅವರು ತಮ್ಮ ಕೆಲಸವನ್ನು ಮಾಡುತ್ತಿದ್ದಾರೆ. ಆದರೆ ಕಪಾಲ ಬೆಟ್ಟ ತನ್ನದೇ ಆದ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿದ್ದು, ಅಲ್ಲಿನ ಜನರು ನನ್ನ ಪರವಾಗಿ ನಿಂತು ಬೆಳೆಸಿದ್ದಾರೆ. ಇಡೀ ಗ್ರಾಮದ ಜನರು ನನ್ನ ಪರ ಪ್ರಾರ್ಥನೆ ಮಾಡಿದ್ದಾರೆ. ಕಳೆದ 2 ವರ್ಷಗಳ ಹಿಂದೆ ಗ್ರಾಮಸ್ಥರು ಮೂರ್ತಿ ನಿರ್ಮಾಣ ಮಾಡುವ ಪ್ರಸ್ತಾಪ ಮಾಡಿದ್ದರು. ಆದರೆ ಈ ಜಾಗ ಸರ್ಕಾರಿ ಸ್ಥಳವಾಗಿದೆ. ಆದ್ದರಿಂದ ಬೇಡ ಎಂದು ಹೇಳಿ ಯಾವುದೇ ತೊಂದರೆ ಇಲ್ಲದೇ ಜಮೀನು ನೀಡುವ ಭರವಸೆ ನೀಡಿದ್ದೆ.
ಕುಮಾರಸ್ವಾಮಿ ಅವರ ಸರ್ಕಾರದಲ್ಲಿ ಈ ಸ್ಥಳವನ್ನು ಮಂಜೂರು ಮಾಡಿಸಿ ಸ್ವತಃ ಹಣವನ್ನೂ ನೀಡಿ ಅವರಿಗೆ ಹಕ್ಕು ಪತ್ರವನ್ನು ನೀಡಿದ್ದೇನೆ. ಬೆಟ್ಟ 16 ಎಕರೆ ಇದ್ದು, 10 ಎಕರೆ ಜಮೀನು ಮಾತ್ರ ಅವರಿಗೆ ಕಾನೂನಾತ್ಮಕವಾಗಿ ನೀಡಿದ್ದೇನೆ. ಈ ಒಂದು ಸ್ಥಳ ಮಾತ್ರವಲ್ಲ, ನನ್ನದೇ ಸ್ವತಃ ಜಮೀನನ್ನು ಕೂಡ ಕರ್ನಾಟಕ ಸರ್ಕಾರದ ಶಿಕ್ಷಣ ಸಂಸ್ಥೆ ನಿರ್ಮಾಣ ಮಾಡಲು ನೀಡಿದ್ದೇನೆ. ಅಲ್ಲದೇ ನೂರಾರು ದೇವಾಲಯಗಳನ್ನು ನಿರ್ಮಾಣ ಮಾಡಲು ನೆರವು ನೀಡಿದ್ದೇವೆ ಎಂದು ತಿಳಿಸಿದ್ದಾರೆ.
ಮಡಿಕೇರಿ: ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಅವರ ಸುದ್ದಿಗೋಷ್ಠಿಯನ್ನು ಮಾಧ್ಯಮಗಳು ಬಹಿಷ್ಕರಿಸಿದ ಪ್ರಸಂಗ ಇಂದು ಮಡಿಕೇರಿಯಲ್ಲಿ ನಡೆದಿದೆ.
ಮಡಿಕೇರಿ ಕೋಟೆ ಸಭಾಂಗಣದಲ್ಲಿ ಇಂದು ಕೊಡಗು ಜಿಲ್ಲಾ ಪ್ರಾಕೃತಿಕ ವಿಕೋಪ ಸಂತ್ರಸ್ತರ ಸಭೆ ಆಯೋಜನೆಗೊಂಡಿತ್ತು. ಈ ಸಭೆಯಲ್ಲಿ ಸಚಿವರು ನಡೆದುಕೊಂಡ ರೀತಿಯಿಂದಾಗಿ ಎಲ್ಲ ಮಾಧ್ಯಮಗಳು ಸುದ್ದಿಗೋಷ್ಠಿಯನ್ನು ಬಹಿಷ್ಕರಿಸಿವೆ.
ಆಗಿದ್ದೇನು?
ಕೊಡಗು ಜಿಲ್ಲಾ ಪ್ರಾಕೃತಿಕ ವಿಕೋಪ ಸಂತ್ರಸ್ತರ ಸಭೆ ನಡೆದಿತ್ತು. ವಾರ್ತಾ ಇಲಾಖೆಯಿಂದ ಆಹ್ವಾನ ಬಂದ ಹಿನ್ನೆಲೆಯಲ್ಲಿ ಪತ್ರಕರ್ತರು ಸಭೆಯಲ್ಲಿ ಭಾಗವಹಿಸಿದ್ದರು. ಆದರೆ ಸಭೆ ಆರಂಭಕ್ಕೂ ಮುನ್ನ ಕುಳಿತ್ತಿದ್ದ ಮಾಧ್ಯಮದ ವ್ಯಕ್ತಿಗಳನ್ನು ಉದ್ದೇಶಿಸಿ, ಈಗ ಹೊರಗೆ ಹೋಗಿ. ನಾನು ಕರೆದಾಗ ಬನ್ನಿ ಎನ್ನುವ ಮೂಲಕ ಸಚಿವರು ದರ್ಪ ಮೆರೆದರು.
ಇದನ್ನು ಮಾಧ್ಯಮದವರು ಖಂಡಿಸುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ಸಚಿವರು, ಸಭೆಗೆ ತನ್ನದೆಯಾದ ರೀತಿ ನೀತಿಗಳಿವೆ. ನಿಮ್ಮಲ್ಲಿ ವಿನಂತಿ ಮಾಡಿಕೊಳ್ಳುತ್ತೇನೆ. ದಯವಿಟ್ಟು ಹೊರಗೆ ಹೋಗಿ. ರಾತ್ರಿಯಾದರೂ ಸಭೆ ನಡೆಸಿ ಪ್ರತಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸುತ್ತೇನೆ ಎಂದು ಹೇಳಿದ್ದರು.
ಸಂತ್ರಸ್ತರ ಜೊತೆ ಸಭೆ ನಡೆಸಿದ ಬಳಿಕ ಸಾರಾ ಮಹೇಶ್ ಮಾಧ್ಯಮದವರನ್ನು ಸುದ್ದಿಗೋಷ್ಠಿಗೆ ಬರುವಂತೆ ತಿಳಿಸಿದರು. ಈ ವೇಳೆ ಮಾಧ್ಯಮದವರು ಸಭೆಯಿಂದ ನಮ್ಮನ್ನು ಹೊರಹಾಕಿದ್ದಕ್ಕೆ ಬರುವುದಿಲ್ಲ ಎಂದು ಹೇಳಿ ಸುದ್ದಿಗೋಷ್ಠಿಯನ್ನು ಬಹಿಷ್ಕರಿಸಿದ್ದಾರೆ.
ಸಚಿವ ಸಾ.ರಾ ಮಹೇಶ್ ನೇತೃತ್ವದಲ್ಲಿ ನಡೆದ ಸಭೆಗೆ ಭಾರೀ ಭದ್ರತೆ ನೀಡಲಾಗಿತ್ತು. ಸಂಸದ ಪ್ರತಾಪ್ ಸಿಂಹ, ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ಕೊಡಗು ಜಿಲ್ಲಾಧಿಕಾರಿ ಅನೀಶ್ ಕಣ್ಮಣಿ ಜಾಯ್, ಎಸ್ಪಿ ಡಿ.ಸುಮನ್ ಅವರು ಸಭೆಯಲ್ಲಿ ಭಾಗವಹಿಸಿದ್ದರು. ಕೇವಲ ಸಂತ್ರಸ್ತರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿತ್ತು.
ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರು ತಮ್ಮ ಸ್ವಹಿತಾಸಕ್ತಿಗಾಗಿ ವೀರಶೈವ ಲಿಂಗಾಯತ ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ. ಅವರೇ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಮನವಿ ಸಲ್ಲಿಸಿ ಕೇಂದ್ರಕ್ಕೆ ಪತ್ರ ಬರೆದಿದ್ದರು. ಇದನ್ನು ಅವರು ಇಲ್ಲ ಎಂದು ಹೇಳಲು ಧೈರ್ಯ ಇದೆಯಾ ಎಂದು ಪ್ರತಾಪ್ ಸಿಂಹ ಪ್ರಶ್ನೆ ಮಾಡಿದ್ದಾರೆ.
ಧರ್ಮ ಒಡೆಯುವ ಕೆಲಸ ಮಾಡಲು ಹೋಗಿದ್ದಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ. ಆದರೆ ಅವರು ಇಂದು ನಾವು ಏನು ಮಾಡಿಲ್ಲ. ಈ ಪತ್ರ ನಕಲಿ ಎನ್ನುತ್ತಿದ್ದಾರೆ ವಿನಃ ಪತ್ರ ನಕಲಿ ಹೆಡರ್ ಬಗ್ಗೆ ತನಿಖೆ ನಡೆಸದೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಎಂಬ ಕಾರಣಕ್ಕೆ ಪತ್ರಕರ್ತರನ್ನು ಬಂಧನ ಮಾಡುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದರು.
ಧರ್ಮವನ್ನು ಒಡೆಯೊವುದು ತಪ್ಪಲ್ಲ, ಆದರೆ ಯಾವುದೋ ಲೆಟರ್ ಹೆಡ್ ತಪ್ಪೆಂದು ಪತ್ರಕರ್ತರನ್ನ ಜೈಲಿಗೆ ಕಳಿಸುವುದು ಎಷ್ಟು ಸರಿ? ಲೆಟರ್ ಹೆಡ್ ಬಗ್ಗೆ ತನಿಖೆ ನಡೆಸಬೇಕೆ ವಿನಾ: ರಾಜಕಾರಣ ನಡೆಸೋದು ಸರಿಯಲ್ಲ ಎಂದರು. ಇದೇ ವೇಳೆ ಜಿ.ಟಿ ದೇವೇಗೌಡರ ಹೇಳಿಕೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ನಾಯಕರು ಕೂಡ ಮೈತ್ರಿ ಧರ್ಮ ಪಾಲನೆ ಮಾಡಿಲ್ಲ. ಮೈತ್ರಿ ಧರ್ಮ ಎಂದು ಹೇಳಿ ಜೆಡಿಎಸ್ ಪಕ್ಷಕ್ಕೆ ತುಮಕೂರು, ಹಾಸನ, ಮಂಡ್ಯ ಕ್ಷೇತ್ರದಲ್ಲಿ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದರು.
ಸದ್ಯ ಪತ್ರಕರ್ತ ಹೇಮಂತ್ ಅವರನ್ನು ಭೇಟಿ ಮಾಡಿ ಅವರಿಗೆ ಧೈರ್ಯ ತುಂಬಲು ಇಲ್ಲಿಗೆ ಆಗಮಿಸಿದ್ದು, ಕಾನೂನು ಹೋರಾಟ ಮಾಡಲಾಗುತ್ತದೆ ಎಂದರು.
ಸ್ಪಷ್ಟನೆ: ಸಚಿವ ಡಿ.ಕೆ ಶಿವಕುಮಾರ್ ಕಾಲಿಗೆ ನಮಸ್ಕಾರಿಸಿದ ಬಗ್ಗೆ ಸ್ಪಷ್ಟನೆ ನೀಡಿ, ಹಿರಿಯರು ಯಾರೇ ಸಿಕ್ಕರೂ ಆರ್ಶೀವಾದ ಪಡೆದುಕೊಳ್ಳುತ್ತೇನೆ. ಇದು ನಮ್ಮ ಸಂಪ್ರದಾಯ. ಕಾಂಗ್ರೆಸ್ ಪಕ್ಷದ ನಾಯಕರಾದ ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ ಸೇರಿದಂತೆ ಹಲವು ನಾಯಕರ ಬಳಿ ಆಶೀರ್ವಾದ ಪಡೆದಿದ್ದೇನೆ. ಆದರೆ ಇದಕ್ಕೆ ರಾಜಕೀಯ ಬಣ್ಣದ ಲೇಪನ ಮಾಡಲಾಗಿದೆ ಎಂದರು.
ಕೊಡಗು: ಜಿಲ್ಲಾ ಜೆಡಿಎಸ್ ಘಟಕದಲ್ಲಿ ಆರಂಭವಾಗಿದ್ದ ಭಿನ್ನಮತ ಮೈತ್ರಿ ಪಕ್ಷಗಳ ಪ್ರಚಾರ ಸಭೆಯಲ್ಲೂ ಮುಂದುವರಿದಿದ್ದು, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕಾಗಿ ನಡೆಯುತ್ತಿರುವ ಒಳಜಗಳ ಮೈತ್ರಿಗೆ ಪೆಟ್ಟು ನೀಡಲಿದೆಯೇ ಎಂಬ ಅನುಮಾನಕ್ಕೆ ಕಾರಣವಾಗಿದೆ.
ಸೋಮವಾರಪೇಟೆಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಎರಡು ಪಕ್ಷಗಳ ಮುಖಂಡರು ಭಾಗವಹಿಸಿದ್ದರು. ತಿಂಗಳ ಹಿಂದೆಯಷ್ಟೇ ಜೆಡಿಎಸ್ ಮುಖಂಡ ಕೆ.ಎಂ ಗಣೇಶ್ ಅವರನ್ನ ಜೆಡಿಎಸ್ ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಲಾಗಿದ್ದರೂ ಕೂಡ ಇಂದಿನ ಸಭೆಯಲ್ಲಿ ಮಾಜಿ ಸಚಿವ ಜೀ ವಿಜಯ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸುವಂತೆ ಪಟ್ಟು ಬೆಂಬಲಿಗರು ಪಟ್ಟು ಹಿಡಿದಿದ್ದರು.
ಸಭೆಯಲ್ಲಿ ಉಂಟಾದ ಗದ್ದಲದ ವೇಳೆ ವೇದಿಕೆಯಲ್ಲಿದ್ದ ಜೀ ವಿಜಯ ಅವರು ಸುಮ್ಮನೆ ಕುಳಿತ್ತಿದದ್ದು ಕಂಡು ಬಂತು. ಆದರೆ ಜಗಳ ವಿಕೋಪಕ್ಕೆ ಹೋದಾಗ ಹಂತದಲ್ಲಿ ಮಧ್ಯ ಪ್ರವೇಶಿಸಿ ಕಾರ್ಯಕರ್ತರನ್ನು ಸುಮ್ಮನಿರಿಸಿದರು. ಈಗಿನ ಜೆಡಿಎಸ್ ಜಿಲ್ಲಾಧ್ಯಕ್ಷರನ್ನು ಹೆಚ್ ವಿಶ್ವನಾಥ್ ಅವರು ನೇಮಿಸಿದ್ದರೆ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಜೀ ವಿಜಯ ಅವರು, ಈಗಿನ ಅಧ್ಯಕ್ಷರ ಸಾಧನೆ ಶೂನ್ಯ. ನಮಗೆ ಪಕ್ಷದ ಕಾರ್ಯಕರ್ತರು ಮುಖ್ಯವಾಗಿದೆ ಎಂದರು. ಇತ್ತ ಅಭಿಮಾನಿಗಳು ಹೆಚ್ ವಿಶ್ವನಾಥ್ ಗೊಡ್ಡು ಹಸು ಎಂದು ಕೂಗಿದರು.
ಜೆಡಿಎಸ್ ಬಣದ ಕಿತ್ತಾಟ ನಡುವೆ ಸಭೆಯಲ್ಲಿ ಭಾಗವಹಿಸಿದ್ದ ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ, ಮೈತ್ರಿ ಅಭ್ಯರ್ಥಿ ವಿಜಯ್ ಶಂಕರ್ ಅವರು ಸುಸ್ತಾದರು. ಇತ್ತ ಜೆಡಿಎಸ್ ಪಕ್ಷದ ಒಳ ಜಗಳಗಳು ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರ ಗೆಲುವಿಗೆ ಕಾರಣವಾಗಲಿದೆಯಾ ಎಂಬ ಅನುಮಾನವನ್ನು ಮೂಡಿಸಿದೆ.
ಇದಕ್ಕೂ ಮುನ್ನ ಸಭೆಯಲ್ಲಿ ಮಾತನಾಡಿದ ಮೈತ್ರಿ ಅಭ್ಯರ್ಥಿ ಸಿ.ಹೆಚ್ ವಿಜಯ್ ಶಂಕರ್, ಮೋದಿಯವರು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕುತ್ತೇನೆ ಎಂದು 15 ಪೈಸೆಯನ್ನೂ ಹಾಕಲಿಲ್ಲ. ನಾವು ವರ್ಷಕ್ಕೆ 72 ಸಾವಿರ ಹಾಕುತ್ತೇವ ಎಂದು ಹೇಳಿದ್ದೇವೆ. ಅವರು ಹಣವನ್ನ ಹಾಕಲೇ ಇಲ್ಲ, ನಾವು ಹಾಕುತ್ತೇವೆ ಹಾಗಾಗಿ ಜನರು ಯಾರೂ ನುಡಿದಂತೆ ನಡೆಯುತ್ತಾರೋ ಅವರಿಗೆ ಮತ ನೀಡಿ ಮನವಿ ಮಾಡಿದರು.
ಮಾಜಿ ಸಚಿವ ಮಹಾದೇವಪ್ಪ ಮಾತನಾಡಿ, ಮೋದಿ ಮ್ಯಾಜಿಕ್, ಬರೀ ಮ್ಯಾಜಿಕ್ ಹೊರತು ನೈಜದಿಂದ ಕೂಡಿರುವುದಿಲ್ಲ, ಅದಕ್ಕೆ ಮಾನ್ಯತೆ ಸಿಗುವುದಿಲ್ಲ. ಈ ಬಾರಿ ಮ್ಯಾಜಿಕ್ ನಡಿಯೋದು ಇಲ್ಲ ಎಂದರು. ಅಲ್ಲದೇ ಪ್ರತಾಪ್ ಸಿಂಹರವರು ಯಾವುದರಲ್ಲಿ ನಂಬರ್ ಓನ್ ಆಗಿದ್ದಾರೋ ಗೊತ್ತಿಲ್ಲ, ಆದರೆ ಅವರು ಪ್ರತಿಸ್ಪರ್ಧಿಸುವ ಮೈಸೂರು-ಕೊಡಗು ಕ್ಷೇತ್ರದಲ್ಲಿ ಮಾತ್ರ ಶೂನ್ಯ ಸಾಧನೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.