Tag: Mp ravindra

  • ಉಪಕಾರ ಮಾಡಿದವರನ್ನೇ ಸೋಲಿಸಿದ್ದೀರಿ – ಎಚ್.ಆಂಜನೇಯ

    ಉಪಕಾರ ಮಾಡಿದವರನ್ನೇ ಸೋಲಿಸಿದ್ದೀರಿ – ಎಚ್.ಆಂಜನೇಯ

    -ಮತ್ತೇ ಮತದಾರರ ವಿರುದ್ಧ ಸೋಲಿನ ಬೇಸರ ಹೊರ ಹಾಕಿದ ಮಾಜಿ ಸಚಿವ

    ದಾವಣಗೆರೆ: ಉಪಕಾರ ಮಾಡಿದವರನ್ನೇ ಸೋಲಿಸಿದ್ದೀರಿ. ಹೀಗಿರುವಾಗ ಒಳ್ಳೆಯದನ್ನು ಮಾಡುವುದೇ ತಪ್ಪೇ ಎಂದು ಮಾಜಿ ಸಚಿವ ಎಚ್.ಆಂಜನೇಯ ಪ್ರಶ್ನಿಸಿ ಬೇಸರ ವ್ಯಕ್ತಪಡಿಸಿದ್ದಾರೆ.

    ಹರಪ್ಪನಹಳ್ಳಿಯ ಎಡಿಬಿ ಕಾಲೇಜು ಮೈದಾನದಲ್ಲಿ ನಡೆದ ಎಂ.ಪಿ.ರವೀಂದ್ರ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಚಿವರು, ಎಂ.ಪಿ.ರವೀಂದ್ರ ಹಾಗೂ ನಮ್ಮಂತವನ್ನು ಸೋಲಿಸಿದ್ದೀರಿ. ಹೀಗಾಗಿ ಬಡವರಿಗೆ ಉಪಕಾರ ಮಾಡುವುದೇ ಕಷ್ಟವಾಗಿದೆ. ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ ಅಂತ ಹೇಳುವವರ್ನು ಕೈಬಿಡುತ್ತಿದ್ದೀರಿ. ನಾವು ಹೇಗಪ್ಪ ಬದುಕುವುದು ಎನ್ನುವ ಪ್ರಶ್ನೆಗೆ ಸಿಲುಕಿದ್ದೇವೆ ಎಂದು ಅಸಮಾಧಾನ ಹೊರಹಾಕಿದರು.

    ಎಂ.ಪಿ.ರವೀಂದ್ರ ಒಬ್ಬ ಅಭಿವೃದ್ಧಿ ಹರಿಕಾರ. ಅವರ ತಂದೆಯಂತೆ ಕ್ಷೇತ್ರದ ಅಭಿವೃದ್ಧಿಗೆ ಹಲವು ಕನಸುಗಳನ್ನು ಕಂಡಿದ್ದರು. ಒಂದು ಬಾರಿ ಶಾಸಕರಾಗಿ ಜಯಗಳಿಸಿದ್ದ ಅವರು ಕೆರೆಗಳ ಜೋಡಣೆ ಕಾಮಗಾರಿ ಆರಂಭಿಸಿದ್ದರು. ಕ್ಷೇತ್ರದ ಅಭಿವೃದ್ಧಿಗೆ ನಿತ್ಯವೂ ಶ್ರಮಿಸಿದರು. ಆದರೆ ಕಳೆದ ಬಾರಿಯ ಚುನಾವಣೆಯಲ್ಲಿ ಅವರನ್ನು ನೀವು ಸೋಲಿಸಿದ್ದೀರಿ. ಇದೇ ಕಾರಣಕ್ಕೆ ಯಾರಿಗೂ ಉಪಕಾರ ಮಾಡಬಾರದು ಅಂತಾ ಅನಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ಒಂದು ವೇಳೆ ಎಂ.ಪಿ.ರವೀಂದ್ರ ಅವರನ್ನು ನೀವು ಆಯ್ಕೆ ಮಾಡಿದ್ದರೆ ಸಚಿವರಾಗುತ್ತಿದ್ದರು. ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸಗಳು ಆಗುತ್ತಿದ್ದವು. ಅವರನ್ನು ಹಾಗೂ ನಮ್ಮಂತವರನ್ನು ಸೋಲಿಸುವ ಮೂಲಕ ಅಭಿವೃದ್ಧಿಯನ್ನು ಕುಂಠಿತಗೊಳಿಸಲಾಗಿದೆ ಎಂದು ಕಿಡಿಕಾರಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‍ಗೆ ಬಿಗ್ ಶಾಕ್ – ಎಂಪಿ ರವೀಂದ್ರ ಗುಡ್‍ಬೈಗೆ ನಿರ್ಧಾರ

    ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‍ಗೆ ಬಿಗ್ ಶಾಕ್ – ಎಂಪಿ ರವೀಂದ್ರ ಗುಡ್‍ಬೈಗೆ ನಿರ್ಧಾರ

    ದಾವಣಗೆರೆ: ಚುನಾವಣಾ ರಾಜಕಾರಣದಿಂದ ನಿವೃತ್ತಿ ಪಡೆಯುತ್ತೇನೆ. ಆದ್ರೆ ಪಕ್ಷ ಸಂಘಟನೆಯಲ್ಲಿ ಇರ್ತಿನಿ. ಕಲುಷಿತ ರಾಜಕೀಯ, ದುಬಾರಿ ಚುನಾವಣೆಯಿಂದ ಬೇಸತ್ತು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹರಪ್ಪನಹಳ್ಳಿ ಕಾಂಗ್ರೆಸ್ ಶಾಸಕ ಎಂಪಿ ರವೀಂದ್ರ ಹೇಳಿದ್ದಾರೆ.

    ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಭಾವುಕರಾದ ಅವರು, ನನ್ನನ್ನು ಪಕ್ಷ ಕಡೆಗಣಿಸಿಲ್ಲ. ಸಿಎಂ ಕಡೆಗಣಿಸಿಲ್ಲ. ನನ್ನ ಚುನಾವಣೆಯ ಸ್ವಯಂ ನಿವೃತ್ತಿ. ನಾನು ಯಾವ ಪಕ್ಷಕ್ಕೂ ಹೋಗಲ್ಲ. ಬಹಳ ದಿನದ ಆಲೋಚನೆ ಮಾಡಿ ನಾನು ನಿರ್ಧಾರ ಪ್ರಕಟಿಸಿದ್ದೇನೆ ಎಂದು ಹೇಳಿ ಗದ್ಗದಿತರಾದ್ರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ತಂದೆಗೆ ಸಮಾನ. ಅವರ ಬಗ್ಗೆ ನನಗೆ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ಕಾಂಗ್ರೆಸ್ ಪಕ್ಷಕ್ಕೆ, ಪಕ್ಷ ಹೇಳಿದಂತೆ ಕೆಲಸ ಮಾಡುತ್ತೇನೆ. ವ್ಯವಸ್ಥೆ ಸರಿ ಇಲ್ಲ, ವೈಯಕ್ತಿಕ ಕಾರಣದಿಂದ ನಾನು ಚುನಾವಣೆ ನಿವೃತ್ತಿ ಪಡೆಯುತ್ತಿದ್ದೇನೆ ಅಂದ್ರು.

    ಎಂ ರವೀಂದ್ರ ಚುನಾವಣಾ ನಿವೃತ್ತಿ ಹೇಳಿಕೆ ಹಿನ್ನಲೆಯಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಕೂಡಲೇ ಎಂ ಪಿ ರವೀಂದ್ರ ರವರು ಹೇಳಿಕೆಯನ್ನು ಹಿಂಪಡೆಯಬೇಕು. ಅವರೇ ಮತ್ತೇ ನಮ್ಮ ಶಾಸಕರಾಗಬೇಕು. ಇಲ್ಲವಾದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ರು.

    ಅಲ್ಲದೇ ಎಂಪಿ ರವೀಂದ್ರ ಅಭಿಮಾನಿಗಳು ಹರಪ್ಪನಹಳ್ಳಿಯ ಪ್ರವಾಸಿ ಮಂದಿರದ ಬಳಿ ಪೆಟ್ರೋಲ್ ಸುರಿದುಕೊಂಡ ಅತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ನಿಯಂತ್ರಿಸಿದ್ರು.