Tag: MP Shivarame Gowda

  • ಜಯಲಲಿತಾರನ್ನು ಮೀರಿಸುವ ಮಾಯಾಂಗನೆಯಂತೆ ಹೋರಾಟ: ಶಿವರಾಮೇಗೌಡ

    ಜಯಲಲಿತಾರನ್ನು ಮೀರಿಸುವ ಮಾಯಾಂಗನೆಯಂತೆ ಹೋರಾಟ: ಶಿವರಾಮೇಗೌಡ

    – ವಿರೋಧ ಪಕ್ಷದವರು ಟೂರಿಂಗ್ ಟಾಕೀಸ್
    – ಎಂಪಿ ಗಿರಿ ಇಲ್ಲ ಅಂದ್ರೆ ನಾನು ಬೀದಿಗೆ ಬರಲ್ಲ

    ಮಂಡ್ಯ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ದಿವಂಗತ ಜಯಲಲಿತಾ ಅವರನ್ನು ಮೀರಿಸುವ ಮಾಯಾಂಗನೆಯಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಸಂಸದ ಶಿವರಾಮೇಗೌಡ, ಸುಮಲತಾ ಅಂಬರೀಶ್ ಹೆಸರು ಪ್ರಸ್ತಾಪಿಸದೇ ವಾಗ್ದಾಳಿ ನಡೆಸಿದ್ದಾರೆ.

    ನಾಗಮಂಗಲ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಂಸದರು, ಟೂರಿಂಗ್ ಟಾಕೀಸ್‍ಗೆ ಮಾರು ಹೋಗಬೇಡಿ. ಎಲ್ಲರ ಮೇಲೆ ಆರೋಪ ಮಾಡುವ ನೀಚ ಬುದ್ಧಿ ಇರುವವರಿಗೆ ಅಧಿಕಾರ ಕೊಡಬೇಡಿ. ನಿಮ್ಮ ಸಾವಿಗೆ ಬರುವವರು ನಾವು. ನಿಮ್ಮ ಪಲ್ಲಕ್ಕಿ ಹೊರುವವರು ನಾವು. ವಿರೋಧ ಪಕ್ಷದವರು ಟೂರಿಂಗ್ ಟಾಕೀಸ್, ಅವರ ಸಿನಿಮಾವನ್ನು ದುಡ್ಡು ಕೊಟ್ಟು ನೋಡುತ್ತೇವೆ. ಅವರನ್ನು ನೋಡಲು ಹೋದವರೆಲ್ಲ ವೋಟ್ ಹಾಕಲ್ಲ. ಅವರ ಹಿಂದೆ ಓಡಾಡುವವರಿಗೆ ಯಾವ ಪಕ್ಷಕ್ಕೆ ಹೋಗಬೇಕು ಅಂತ ತೀರ್ಮಾನಿಸುವಂತೆ ಈಗಲೂ ಹೇಳುತ್ತೇನೆ ಎಂದು ಹೇಳಿದರು.

    ಎಂಪಿ ಗಿರಿ ಇಲ್ಲ ಅಂದ್ರೆ ನಾನು ಬೀದಿಗೆ ಬರಲ್ಲ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಮನೆಯಲ್ಲೇ ಇರುತ್ತೇನೆ. ಇದು ನನ್ನ ಮರ್ಯಾದೆ ಪ್ರಶ್ನೆ. ನನ್ನ ಅಭಿಮಾನಿಗಳು ನನ್ನ ಮಾತು ಕೇಳದಿದ್ದರೆ ಅವರು ಅಭಿಮಾನಿಗಳೇ ಅಲ್ಲ ಎಂದರು.

    ದಿಗ್ಗಜರು ಒಂದೇ ವೇದಿಕೆಯಲ್ಲಿ ಕುಳಿತು ಒಟ್ಟಿಗೆ ಹೋಗುವ ತೀರ್ಮಾನ ಕೈಗೊಂಡಿದ್ದಾರೆ. ಎಚ್.ಡಿ.ದೇವೇಗೌಡರ ಗರಡಿಯಲ್ಲೇ ಪಳಗಿ, ಯಾವುದೇ ಕೆಲಸ ಮಾಡಬಲ್ಲೇ ಎಂದು ಐದು ವರ್ಷ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಮ್ಮ ಜೊತೆಯಾಗಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಅವರನ್ನು ಗೆಲ್ಲಿಸಲು ಮುಂದಾದ ಸಚಿವ ಪುಟ್ಟರಾಜು ಅವರ ಮನೆಯ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡುತ್ತಿದ್ದಾರೆ ಎಂದು ಹೇಳಿದರು.

    ಭಾರತದಲ್ಲಿ ಎಲ್ಲ ಕಡೆಯೂ ಚುನಾವಣೆ ನಡೆಯುತ್ತಿದೆ. ಆದರೆ ಮಾಧ್ಯಮ ಮಿತ್ರರು ಮಂಡ್ಯವನ್ನು ಹೈವೋಲ್ಟೇಜ್ ಕ್ಷೇತ್ರ ಮಾಡಿದ್ದಾರೆ. ಇದು ಬೇಕೇ? ಮಂಡ್ಯ ಜಿಲ್ಲೆಯನ್ನು ಮಾಧ್ಯಮದವರು ಪೆಡಂಭೂತ ಎಂಬ ರೀತಿ ಎಂಬಂತೆ ತೋರಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ತೋರಿಸಿದ ರೀತಿ ಇನ್ಯಾರನ್ನೂ ತೋರಿಸಿಲ್ಲ. ಬಿಜೆಪಿಗೆ ಮಂಡ್ಯದಲ್ಲಿ ಅಭ್ಯರ್ಥಿ ಹಾಕಲು ಯೋಗ್ಯತೆಯಿಲ್ಲ. ಹಿಂಬಾಗಿಲ ಮೂಲಕ ಸಪೋರ್ಟ್ ಮಾಡಿದ್ದಾರೆ. ಕುಟುಂಬ ರಾಜಕಾರಣ ಅಂತಾರೆ, ಎಚ್.ಡಿ.ದೇವೇಗೌಡರ ಮೊಮ್ಮಕ್ಕಳು ರಾಜಕೀಯಕ್ಕೆ ಬರಬಾರದೇ ಎಂದು ಸಭೆಯಲ್ಲಿ ಸೇರಿದ್ದ ಜನರಿಗೆ ಪ್ರಶ್ನಿಸಿದರು.

    ಸಭೆ ಆರಂಭವಾಗುವುದಕ್ಕೂ ಮುನ್ನ ವೇದಿಕೆ ಮೇಲಿದ್ದ ಬ್ಯಾನರ್‍ನಲ್ಲಿ ಮಾಜಿ ಶಾಸಕ ಚಲುವರಾಯಸ್ವಾಮಿ ಭಾವಚಿತ್ರವೇ ಇರಲಿಲ್ಲ. ಇದರಿಂದಾಗಿ ತಕ್ಷಣವೇ ಎಚ್ಚೆತ್ತುಕೊಂಡ ಸ್ಥಳೀಯ ಕೆಲ ಮುಖಂಡರು ಬ್ಯಾನರ್ ಅನ್ನು ತೆರವುಗೊಳಿಸಿದರು. ಸಭೆಯಲ್ಲಿ ಸೇರಿದ್ದ ಜನರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಿಜವಾದ ಜೋಡೆತ್ತುಗಳು. ಬಣ್ಣ ಹಚ್ಚಿಕೊಳ್ಳುವವರಲ್ಲ ಜೋಡೆತ್ತುಗಳಲ್ಲ ಎಂದು ಘೋಷಣೆ ಕೂಗಿದರು.

  • ಮಂಡ್ಯ ಲೋಕ ಸಮರಕ್ಕೆ ನಾನೇ ಪಕ್ಷದ ಅಭ್ಯರ್ಥಿ: ಎಲ್.ಆರ್. ಶಿವರಾಮೇಗೌಡ

    ಮಂಡ್ಯ ಲೋಕ ಸಮರಕ್ಕೆ ನಾನೇ ಪಕ್ಷದ ಅಭ್ಯರ್ಥಿ: ಎಲ್.ಆರ್. ಶಿವರಾಮೇಗೌಡ

    ಮಂಡ್ಯ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾನೇ ಎಂದು ಹಾಲಿ ಸಂಸದ ಎಲ್.ಆರ್. ಶಿವರಾಮೇಗೌಡರು ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮುಂದಿನ ಅಭ್ಯರ್ಥಿ ನಾನೇ. ಆದರೆ ನಿಖಿಲ್ ಕುಮಾರಸ್ವಾಮಿ ಅವರು ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದರೆ ನಾನು ಸ್ಥಾನ ಬಿಟ್ಟು ಕೊಡಲು ಸಿದ್ಧವಾಗಿದ್ದೇನೆ. ಈ ಕುರಿತು ಜೆಡಿಎಸ್ ವರಿಷ್ಠರನ್ನು ಕೇಳಿದ್ದು, ನಾನು ಕೇವಲ ಆರು ತಿಂಗಳು ಮಾತ್ರ ಅಧಿಕಾರ ನಡೆಸಿದ್ದೇನೆ ಎಂದರು.

    ಇದೇ ವೇಳೆ ಮಂಡ್ಯ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಅವರು ಸ್ಪರ್ಧೆ ಕುರಿತ ಪ್ರಶ್ನೆಗೆ ಉತ್ತರಿಸಿ, ನಾವು ಜಿಲ್ಲೆಯಲ್ಲಿ ಅಂಬರೀಶ್ ಅವರನ್ನು ಹೊತ್ತು ಮೆರೆದಾಡಿದ್ದೇವೆ. ಅವರು ವಿಧಿವಶರಾದ ವೇಳೆಯೂ ಸಿಎಂ ಕುಮಾರಸ್ವಾಮಿ ಅವರು ಹೆಗಲ ಮೇಲೆ ಹೊತ್ತುಕೊಂಡು ಬಂದಿದ್ದಾರೆ. ಅದಕ್ಕಿಂತ ಇನ್ನೇನು ಮಾಡಲು ಸಾಧ್ಯ. ಆದರೆ ನಾನು ಸುಮಲತಾ ಅವರ ಸ್ಪರ್ಧೆಯ ಬಗ್ಗೆ ಮಾತನಾಡಲ್ಲ ಎಂದು ಹೇಳಿದರು.

    ಈ ಬಾರಿ ಕೇಂದ್ರ ಮೋದಿ ಸರ್ಕಾರದ ಬಜೆಟ್ ವಿಚಾರದಲ್ಲಿ ಭಾರೀ ನಿರೀಕ್ಷೆ ಇತ್ತು. ಆದರೆ ಎಲ್ಲವೂ ಹುಸಿ ಆಗಿದೆ. ಸಮ್ಮಿಶ್ರ ಸರ್ಕಾರದಲ್ಲಿ ಸಾಕಷ್ಟು ರೈತರ ಸಾಲಮನ್ನಾ ಆಗಿದ್ದು, ರೈತರಿಗೆ ಆರು ಸಾವಿರ ಕೊಟ್ಟ ಬಿಜೆಪಿ ರೈತರ ಮೂಗಿಗೆ ತುಪ್ಪ ಸವರಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಸಂಸದರು ತಲೆ ತಗ್ಗಿಸಬೇಕು ಎಂದು ಕಿಡಿಕಾರಿದರು. ಅಲ್ಲದೇ ದೋಸ್ತಿ ಪಕ್ಷವಾದ ಕಾಂಗ್ರೆಸ್ ಮುಖಂಡರು ಬೀದಿಯಲ್ಲಿ ನಿಂತು ಜೆಡಿಎಸ್ ಬಗ್ಗೆ ಮಾತನಾಡುತ್ತಾರೆ. ಅಂತಹ ಮುಖಂಡರ ಹೇಳಿಕೆಗೆ ಪಕ್ಷದ ಹೈಕಮಾಂಡ್ ಬ್ರೇಕ್ ಹಾಕಬೇಕು. ಆ ಮೂಲಕ ಮುಖ್ಯಮಂತ್ರಿಗಳಿಗೆ ಆಡಳಿತ ನಡೆಸಲು ಅವಕಾಶ ಮಾಡಿಕೊಡಬೇಕು. ಆದರೆ ಮಂತ್ರಿ ಸ್ಥಾನ ಪಡೆದವರು ತಮ್ಮ ನಿಷ್ಠೆಯನ್ನು ಎದೆ ಬಗೆದು ತೋರಿಸಬೇಕಾದ ಅವಶ್ಯಕತೆ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಿಗರಿಗೆ ಟಾಂಗ್ ಕೊಟ್ಟರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv