Tag: MP Shivaramegowda

  • ಎಚ್‍ಡಿಡಿ ಪಾದದ ಧೂಳಿಗೆ ಸಿಕ್ಕಿ ಸಂಸದನಾದೆ: ಶಿವರಾಮೇಗೌಡ

    ಎಚ್‍ಡಿಡಿ ಪಾದದ ಧೂಳಿಗೆ ಸಿಕ್ಕಿ ಸಂಸದನಾದೆ: ಶಿವರಾಮೇಗೌಡ

    – ಚುನಾವಣೆ ಬಳಿಕ ಮಂಡ್ಯದಲ್ಲಿ ಟೂರಿಂಗ್ ಟಾಕೀಸ್ ಮುಚ್ಚಿ ಹೋಗುತ್ತೆ

    ತುಮಕೂರು: ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ವಿರುದ್ಧ ‘ಮಾಯಾಂಗನೆ’ ಎಂಬ ಪದ ಬಳಕೆ ಮಾಡಿದ್ದ ಸಂಸದ ಶಿವರಾಮೇಗೌಡ ಅವರು ಎದುರಾಳಿಗಳ ಮೇಲೆ ತಮ್ಮ ವಾಗ್ದಾಳಿಯನ್ನು ಮುಂದುವರಿಸಿದ್ದು, ಚುನಾವಣೆ ಬಳಿಕ ಮಂಡ್ಯದಲ್ಲಿ ಟೂರಿಂಗ್ ಟಾಕೀಸ್ ಮುಚ್ಚಿಕೊಂಡು ಹೋಗುತ್ತದೆ ಎಂದು ಹೇಳಿದ್ದಾರೆ.

    ತುಮಕೂರು ಕ್ಷೇತ್ರದ ತುರುವೆಕೆರೆಯಲ್ಲಿ ಬಹಿರಂಗ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ನಾನು ಈ ತಾಲೂಕಿನ ಅಳಿಯ. ಕಾಂಗ್ರೆಸ್ ಪಕ್ಷದಲ್ಲಿ ಇದ್ದ ಸಂದರ್ಭದಲ್ಲಿ ನನಗೆ ಯಾವುದೇ ಸ್ಥಾನಮಾನ ಸಿಗಲಿಲ್ಲ. ಹೀಗಾಗಿ ಪಕ್ಷ ತೊರೆದು ಜೆಡಿಎಸ್‍ಗೆ ಬಂದೆ. ಈಗ ದೇವೇಗೌಡರ ಪಾದದ ಧೂಳಿಗೆ ಹೋದ ಮೇಲೆ ಅಧಿಕಾರ ಸಿಕ್ಕಿ ಸಂಸದನಾಗಿದ್ದೇನೆ. 6 ತಿಂಗಳ ಕಾಲ ನಾನು ಸಂಸದನಾಗಿ ಕೆಲಸ ಮಾಡಿದ್ದೇನೆ ಎಂದರು.

    ದೇವೇಗೌಡರು ಸಂಸತ್ತಿನಲ್ಲಿ ಇದೇ ಕೊನೆಯ ಭಾಷಣ ಎಂದು ಹೇಳಿದ್ದರು. ಆಗ ಪ್ರಧಾನಿ ಮೋದಿ, ಸೇರಿ ಹಲವರು ನೀವು ಸ್ಪರ್ಧೆ ಮಾಡಬೇಕು ಎಂದು ಹೇಳಿದರು. ನಾವು ಕೂಡ ಮಂಡ್ಯದಿಂದಲೇ ಸ್ಪರ್ಧೆ ಮಾಡುವಂತೆ ಮನವಿ ಮಾಡಿದ್ದೇವು. ಆದರೆ ತುಮಕೂರು ಹಿಂದುಳಿದಿದೆ ಎಂದು ಈ ಕ್ಷೇತ್ರಕ್ಕೆ ದೇವೇಗೌಡ ಅವರು ಬಂದರು ಎಂದು ವಿವರಿಸಿದರು.

    ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಂಸದರು, ಬಿಜೆಪಿ ಪಕ್ಷಕ್ಕೂ ರೈತರಿಗೂ ಸಂಬಂಧವೇ ಇಲ್ಲ. ಅವರನ್ನ ತಿರಸ್ಕಾರ ಮಾಡಬೇಕು ಎಂದರು. ಸಿಎಂ ಕುಮಾರಸ್ವಾಮಿ ಅವರ ಗುಣಗಾನ ಮಾಡಿ, ರಾಜ್ಯದ 17 ಜನ ಸಂಸದರಿಗೆ ಸಂಸತ್ತಿನಲ್ಲಿ ಮಾತನಾಡಲು ಧಮ್ಮಿಲ್ಲ. ಬಾಯಿ ಬಿಟ್ಟು ಮಾತನಾಡಿದರೆ ಎಲ್ಲಿ ಮೋದಿ ನೋಡುತ್ತಾರೆ ಎಂದು ಉಸಿರು ಬಿಗಿದಿಟ್ಟುಕೊಂಡು ಕುಳಿತಿರುತ್ತಾರೆ ಎಂದು ಬಿಜೆಪಿ ಸಂಸದರನ್ನ ಕುಟುಕಿದರು.

    ಇತ್ತ ಸುಮಲತಾ ಅವರ ವಿರುದ್ಧ ಶಿವರಾಮೇಗೌಡ ಅವರು ಮಾಯಾಂಗನೆ ಎಂಬ ಪದ ಬಳಕೆ ಮಾಡಿದ ಸಂಬಂಧ ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಯಿತು. ಕ್ಯಾಂಡಲ್ ಹಿಡಿದು ವಿವಿಧ ಸಂಘಟನೆಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಶಿವರಾಮೇಗೌಡರ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

  • ಜೆಡಿಎಸ್‍ಗೆ ಕಾಂಗ್ರೆಸ್ ಅನಿವಾರ್ಯವಲ್ಲ. ಆದರೆ ಕಾಂಗ್ರೆಸ್‍ಗೆ ಜೆಡಿಎಸ್ ಅನಿವಾರ್ಯ: ಶಿವರಾಮೇಗೌಡ

    ಜೆಡಿಎಸ್‍ಗೆ ಕಾಂಗ್ರೆಸ್ ಅನಿವಾರ್ಯವಲ್ಲ. ಆದರೆ ಕಾಂಗ್ರೆಸ್‍ಗೆ ಜೆಡಿಎಸ್ ಅನಿವಾರ್ಯ: ಶಿವರಾಮೇಗೌಡ

    – ದೇವೇಗೌಡರ ಶಕ್ತಿ ರಾಹುಲ್ ಗಾಂಧಿಗೆ ಗೊತ್ತಿದೆ ಆದರೆ ರಾಜ್ಯದವರಿಗೆ ಗೊತ್ತಿಲ್ಲ
    – ಎಚ್‍ಡಿಡಿ ನಂಬಿದವರು ಯಾರೂ ಬದುಕಿಲ್ಲ

    ಮಂಡ್ಯ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಶಕ್ತಿ ದೆಹಲಿಯಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಗೊತ್ತಿದೆ. ಆದರೆ ರಾಜ್ಯ ಕಾಂಗ್ರೆಸ್ಸಿಗರಿಗೆ ದೇವೇಗೌಡರ ಶಕ್ತಿ ಅರ್ಥವಾಗುತ್ತಿಲ್ಲ ಎಂದು ಹಾಲಿ ಸಂಸದ ಶಿವರಾಮೇಗೌಡ ವಾಗ್ದಾಳಿ ನಡೆಸಿದರು.

    ನಗರದ ಸಿಲ್ವರ್ ಜ್ಯುಬಲಿ ಪಾರ್ಕಿನಲ್ಲಿ ಎಚ್.ಡಿ.ದೇವೇಗೌಡ ಅವರ ಸಮ್ಮುಖದಲ್ಲಿ ನಡೆದಿದ್ದ ಜೆಡಿಎಸ್ ಸಮಾವೇಶದಲ್ಲಿ ಸಂಸದರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಜೆಡಿಎಸ್‍ಗೆ ಕಾಂಗ್ರೆಸ್ ಅನಿವಾರ್ಯವಲ್ಲ. ಆದರೆ ಕಾಂಗ್ರೆಸ್‍ಗೆ ಜೆಡಿಎಸ್ ಅನಿವಾರ್ಯ ಎಂದರು.

    ನಾವೆಲ್ಲರೂ ಒಪ್ಪಿ ನಿಖಿಲ್ ಕುಮಾರಸ್ವಾಮಿ ಅವರನ್ನು ಅಭ್ಯರ್ಥಿ ಮಾಡಿದ್ದೇವೆ. ಎಚ್.ಡಿ.ದೇವೇಗೌಡ ಅವರು ನನ್ನನ್ನು ಕರೆದು ಲೋಕಸಭಾ ಉಪಚುನಾವಣೆಯ ಟಿಕೆಟ್ ನೀಡಿದರು. ಅವರ ಆಶೀರ್ವಾದದಿಂದ ಸಂಸದನಾದೆ. ಕೆಲವು ವಿಚಾರ ಹೇಳದಿದ್ದರೆ ತಪ್ಪಾಗುತ್ತೆ. ಬೇರೆ ಬೇರೆ ಕಾರಣದಿಂದ ಜಿಲ್ಲೆಯ ಅಭಿವೃದ್ಧಿಗಾಗಿ ನಿಖಿಲ್ ಅವರನ್ನು ಅಭ್ಯರ್ಥಿ ಮಾಡಿದ್ದೇವೆ. ನನ್ನನ್ನು ಗೆಲ್ಲಿಸಿದಕ್ಕಿಂತ ಹೆಚ್ಚು ಮತಗಳಿಂದ ನಿಖಿಲ್ ಅವರನ್ನು ಗೆಲ್ಲಿಸಿ ಎಂದು ಮತದಾರರಲ್ಲಿ ಅವರು ಮನವಿ ಮಾಡಿಕೊಂಡರು.

    ದೇವೇಗೌಡ ಅವರದ್ದು ಕುಟುಂಬ ರಾಜಕಾರಣ ಎಂಬ ರೀತಿ ಬಿಂಬಿಸಲಾಗಿದೆ. ಇದು ಕುಟುಂಬ ರಾಜಕಾರಣವಲ್ಲ. ಎಚ್.ಡಿ.ದೇವೇಗೌಡ ಅವರು ಸ್ವಂತ ಆಸ್ತಿ ಮಾಡಿಕೊಳ್ಳಲಿಲ್ಲ ಎಂದು ಸಂಸದರು ಹೊಗಳಿದರು. ಮಂಡ್ಯ ಕ್ಷೇತ್ರ ಬಿಟ್ಟುಕೊಟ್ಟಿದ್ದಕ್ಕೆ ನನಗೆ ಕಿಂಚಿತ್ತು ನೋವಿಲ್ಲ. ಐದು ಲಕ್ಷ ಬಹುಮತದಿಂದ ನಿಖಿಲ್ ಅವರನ್ನು ಗೆಲ್ಲಿಸುತ್ತೇವೆ ಎಂದರು.

    ಎಚ್.ಡಿ.ದೇವೇಗೌಡ ಅವರನ್ನು ನಂಬಿದವರು ಯಾರೂ ಬದುಕಿಲ್ಲ ಎಂದು ಸಂಸದರು ಹೇಳಿ ಎಡವಟ್ಟು ಮಾಡಿಕೊಂಡರು. ಆದರೆ ತಮ್ಮ ಹೇಳಿಕೆ ಮೇಲೆ ಗಮನ ಹರಿಸದೇ ಮಾತು ಮುಂದುವರಿಸಿದರು. ಬಳಿಕ ಎಚ್.ಡಿ.ದೇವೇಗೌಡ ಅವರ ಗರಡಿಯಲ್ಲಿ ಪಳಗಿ ಬಳಿಕ ಪಕ್ಷ ತ್ಯಜಿಸಿ ಅಧಿಕಾರ ಹಿಡಿದವರ ಹೆಸರನ್ನು ಶಿವರಾಮೇಗೌಡ ಪ್ರಸ್ತಾಪಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv