Tag: MSc

  • ವಿಶ್ವದ ದೊಡ್ಡ ಕಂಟೇನರ್‌ ಹಡಗು ವಿಳಿಂಜಂ ಬಂದರಿಗೆ ಆಗಮನ

    ವಿಶ್ವದ ದೊಡ್ಡ ಕಂಟೇನರ್‌ ಹಡಗು ವಿಳಿಂಜಂ ಬಂದರಿಗೆ ಆಗಮನ

    ತಿರುವನಂತಪುರಂ: ವಿಶ್ವದ ಅತಿದೊಡ್ಡ ಕಂಟೇನರ್ ಹಡಗು ಎಂಎಸ್‌ಸಿ ಐರಿನಾ (Mediterranean Shipping Company IRINA) ಸೋಮವಾರ ಬೆಳಿಗ್ಗೆ ವಿಳಿಂಜಂ ಅಂತರರಾಷ್ಟ್ರೀಯ ಬಂದರಿಗೆ (Vizhinjam International Seaport) ಆಗಮಿಸಿದೆ.

    MSC IRINA ಸೋಮವಾರ ಬೆಳಿಗ್ಗೆ 8 ಗಂಟೆಗೆ ವಿಳಿಂಜಂ ಬಂದರಿಗೆ ಆಗಮಿಸಿದ್ದು, ಜಲ ಗೌರವ ನೀಡುವ ಮೂಲಕ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ಎಂಎಸ್‌ಸಿ ಐರಿನಾ 24,346 TEU ಸಾಮರ್ಥ್ಯವನ್ನು ಹೊಂದಿದ್ದು  ಮಂಗಳವಾರದವರೆಗೆ ಈ ಬಂದರಿನಲ್ಲಿ ತಂಗುವ ನಿರೀಕ್ಷೆಯಿದೆ.

    399.9 ಮೀಟರ್ ಉದ್ದ ಮತ್ತು 61.3 ಮೀಟರ್ ಅಗಲವಿರುವ ಈ ಹಡಗು  FIFA ನಿಗದಿ ಮಾಡಿದ  ಫುಟ್‌ಬಾಲ್ ಮೈದಾನಕ್ಕಿಂತ ಸರಿಸುಮಾರು ನಾಲ್ಕು ಪಟ್ಟು ಉದ್ದವನ್ನು ಹೊಂದಿದೆ.

    24,346 TEU ಸಾಮರ್ಥ್ಯವಿರುವ ವಿಶ್ವದ ಅತಿದೊಡ್ಡ ಕಂಟೇನರ್ ಹಡಗಾಗಿರುವ MSC ಐರಿನಾವನ್ನು ನಮ್ಮ ವಿಳಿಂಜಂ ಬಂದರಿಗೆ ಸ್ವಾಗತಿಸಲು ಹೆಮ್ಮೆಪಡುತ್ತೇವೆ. ದಕ್ಷಿಣ ಏಷ್ಯಾದ ಬಂದರಿಗೆ ಮೊದಲ ಬಾರಿ ಆಗಮಿಸಿದೆ. ಜಾಗತಿಕ ಟ್ರಾನ್ಸ್‌ಶಿಪ್‌ಮೆಂಟ್‌ನಲ್ಲಿ ಪ್ರಮುಖ ದೇಶವಾಗಿ ಭಾರತ ಹೊರಹೊಮ್ಮಲು ಇದೊಂದು ದೊಡ್ಡ ಮೈಲಿಗಲ್ಲು ಎಂದು ಅದಾನಿ ಬಂದರಿನ ವ್ಯವಸ್ಥಾಪಕ ನಿರ್ದೇಶಕ ಕರಣ್‌ ಅದಾನಿ ಎಕ್ಸ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: Kerala | ಕೋಝಿಕ್ಕೋಡ್‌ನ ಬೇಪೋರ್ ಕರಾವಳಿಯಲ್ಲಿ ಸರಕು ಹಡಗಿಗೆ ಬೆಂಕಿ

    TEU ಎಂದರೇನು?
    Twenty-Foot Equivalent Unit ಅನ್ನು TEU ಎಂದು ಕರೆಯಲಾಗುತ್ತದೆ. ಇದನ್ನು ಸುಲಭವಾಗಿ ಹೇಳುವುದಾರೆ 20 ಅಡಿ ಉದ್ದ, 8 ಅಡಿ ಅಗಲ ಮತ್ತು 9 ಅಡಿ ಎತ್ತರದ ಕಂಟೇನರ್ ಒಂದು TEU ಅಂತ ಕರೆಯಲಾಗುತ್ತದೆ. 24 ಸಾವಿರ ಟಿಇಯು ಅಂದರೆ 24 ಸಾವಿರ ಕಂಟೇನರ್‌ ಹೊಂದಿರುವ ಹಡಗನ್ನು ವಿಳಿಂಜಂ ಬಂದರಲ್ಲಿ ಡಾಕ್‌ ಮಾಡಬಹುದು. ಕಳೆದ ತಿಂಗಳು ಟರ್ಕಿಯ ಹಡಗು ಇಲ್ಲಿ ಡಾಕ್‌ ಆಗಿತ್ತು. ಈ ಹಡಗು 400 ಮೀಟರ್‌ ಉದ್ದ, 61 ಮೀಟರ್‌ ಅಗಲವನ್ನು ಹೊಂದಿತ್ತು. ಇದರಲ್ಲಿ 24 ಸಾವಿರದ 300 ಕಂಟೇನರ್‌ ಇತ್ತು.

    ವಿಳಿಂಜಂ ಬಂದರಿನ ವಿಶೇಷತೆ ಏನು?
    ಭಾರತದಲ್ಲಿ ದೊಡ್ಡ ಮತ್ತು ಸಣ್ಣ ಬಂದರುಗಳಿವೆ. ಆದರೆ ಇಲ್ಲಿಯವರೆಗೆ Transshipment Port ಇರಲಿಲ್ಲ. ವಿಳಿಂಜಂ ದೇಶದ ಮೊದಲ Transshipment ಬಂದರು ಆಗಿದ್ದು, ಇಲ್ಲಿ ಹಡಗಿನಿಂದ ಹಡಗಿಗೆ ಸರಕನ್ನು ಸಾಗಿಸಬಹುದಾಗಿದೆ. ಸರ್ಕಾರ ಮತ್ತು ಖಾಸಗಿ ಪಾಲುದಾರಿಕೆಯಲ್ಲಿ ಸುಮಾರು 8,800 ಕೋಟಿ ರೂ. ವೆಚ್ಚದಲ್ಲಿ ಈ ಬಂದರನ್ನು ನಿರ್ಮಾಣ ಮಾಡಲಾಗಿದ್ದು ಮೇ 2 ರಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಈ ಬಂದರನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಿದ್ದರು.

    ವಿಳಿಂಜಂನಲ್ಲೇ ಯಾಕೆ?
    ಪ್ರಸ್ತುತ ಭಾರತಕ್ಕೆ ಸಾಗಿಸಲಾಗುವ ಎಲ್ಲಾ ಸಮುದ್ರ ಸರಕುಗಳ ಪೈಕಿ 75% ರಷ್ಟು ಸರಕುಗಳನ್ನು ಸಿಂಗಾಪುರ, ಕೊಲಂಬೊ ಅಥವಾ ದುಬೈನಂತಹ ವಿದೇಶಿ ಬಂದರುಗಳಲ್ಲಿ ಇಳಿಸಲಾಗುತ್ತದೆ. ದೊಡ್ಡ ಹಡಗಿನಲ್ಲಿ ಇಳಿಕೆಯಾದ ಸರಕುಗಳನ್ನು ಸಣ್ಣ ಹಡಗಿನಲ್ಲಿ ತುಂಬಿಸಿ ತರಲಾಗುತ್ತದೆ. ಇನ್ನು ಮುಂದೆ ವಿಳಿಂಜಂನಲ್ಲೇ ಇಳಿಸಬಹುದು. ಇದರಿಂದಾಗಿ ಭಾರತದ ವರ್ತಕರಿಗೆ ಕೋಟ್ಯಂತರ ರೂ. ಲಾಭವಾಗುವದರ ಜೊತೆಗೆ ವಿದೇಶದಿಂದ ಆಮದಾಗುವ ವಸ್ತುಗಳ ಬೆಲೆಯೂ ಇಳಿಕೆಯಾಗಲಿದೆ.

  • MSc ಓದಿ ಕಸ ಗುಡಿಸುತ್ತಿದ್ದ ಮಹಿಳೆಗೆ ಸರ್ಕಾರಿ ಕೆಲಸ ಕೊಟ್ಟ ಸಚಿವರು

    MSc ಓದಿ ಕಸ ಗುಡಿಸುತ್ತಿದ್ದ ಮಹಿಳೆಗೆ ಸರ್ಕಾರಿ ಕೆಲಸ ಕೊಟ್ಟ ಸಚಿವರು

    ಹೈದರಾಬಾದ್: ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರೂ ಕಸ ಗುಡಿಸುವ ಕೆಲಸ ಮಾಡುತ್ತಿದ್ದ ಮಹಿಳೆಗೆ ತೆಲಂಗಾಣದ ಪೌರಾಡಳಿತ ಸಚಿವ ಕೆ.ಟಿ. ರಾಮರಾವ್ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್(ಜೆಎಚ್‍ಎಂಸಿ)ನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸಹಾಯಕ ಕೀಟಶಾಸ್ತ್ರಜ್ಞರ ಕೆಲಸ ನೀಡಿದ್ದಾರೆ.

    ಎಂಎಸ್‍ಸಿ(ಸಾವಯವ ರಸಾಯನ ಶಾಸ್ತ್ರ) ಮಾಡಿದ ಎ.ರಜನಿ, ಜಿಎಚ್‍ಎಂಸಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಸ ಗುಡಿಸುವ ಕೆಲಸ ಮಾಡುತ್ತಿದ್ದರು. ತೆಲುಗಿನ ದಿನಪತ್ರಿಕೆಯೊಂದರಲ್ಲಿ ಮಹಿಳೆ ಬಗ್ಗೆ ಪ್ರಕಟವಾದ ವರದಿಗೆ ಪ್ರತಿಕ್ರಿಯಿಸಿದ ಸಚಿವರು, ಆಕೆಯ ವಿದ್ಯಾರ್ಹತೆಗೆ ಅನುಗುಣವಾಗಿ ಕೆಲಸ ನೀಡಿದ್ದಾರೆ.

    hydrabad women

    ರಜನಿ ಅವರನ್ನು ಸಚಿವರ ಬಳಿ ನಗರಾಭಿವೃದ್ಧಿಯ ವಿಶೇಷ ಮುಖ್ಯ ಕಾರ್ಯದರ್ಶಿಯಾಗಿರುವ ಅರವಿಂದ್ ಕುಮಾರ್‌‌ರವರು ಕರೆದುಕೊಂಡು ಹೋಗಿ ಕೆಲಸ ಕೊಡಿಸಿರುವುದಾಗಿ ತಿಳಿಸಿದ್ದಾರೆ.  ರುಜುವಾತುಗಳನ್ನು ಪರಿಶೀಲಿಸಿದ ಬಳಿಕ ರಜನಿಗೆ ಕೆಲಸ ನೀಡಲು ಆದೇಶಿಸಲಾಯಿತು ಎಂದು ಅರವಿಂದ್ ಕುಮಾರ್‍ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದ್ದಾರೆ. ಇಬ್ಬರು ಹೆಣ್ಣು ಮಕ್ಕಳಿರುವ ರಜನಿಗೆ ಸಚಿವರು ಕರೆದು ಕೀಟಶಾಸ್ತ್ರ ವಿಭಾಗದಲ್ಲಿ ಸಹಾಯಕ ಕೀಟಶಾಸ್ತ್ರಜ್ಞರಾಗಿ ಕೆಲಸ ಕೊಟ್ಟು, ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದಾಗಭಾವುಕರಾಗಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಹೆಮ್ಮೆಯಿಂದ ಬದುಕಿದ್ದು, ಅವಮಾನದಿಂದ ಬದುಕಲು ಸಾಧ್ಯವಾಗ್ತಿಲ್ಲ: ಗಿರಿ ಡೆತ್‍ನೋಟ್

    ವಾರಂಗಲ್ ಜಿಲ್ಲೆಯವರಾಗಿದ್ದು, ಕೃಷಿ ಕಾರ್ಮಿಕರ ಕುಟುಂಬದಲ್ಲಿ ಜನಿಸಿದ್ದಾರೆ. ಹಣಕಾಸಿ ಸಮಸ್ಯೆ ಇದ್ದರೂ ಕೂಡ ಅವರ ಪೋಷಕರ ಬೆಂಬಲದಿಂದಾಗಿ ತಮ್ಮ ವಿದ್ಯಾಭ್ಯಾಸವನು ಮುಂದುವರಿಸಿದರು ಮತ್ತು 2013ರಲ್ಲಿ ಪ್ರಥಮ ದರ್ಜೆ ಜೊತೆಗೆ ಎಂಎಸ್‍ಸಿ(ಸಾವಯವ ರಸಾಯನ ಶಾಸ್ತ್ರ)ಯಲ್ಲಿ ಉತ್ತೀರ್ಣರಾದರು. ಅಲ್ಲದೇ ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಪಿಎಚ್‍ಡಿ ಅರ್ಹತೆ ಪಡೆದರು. ಆದರೆ ಈ ಮಧ್ಯೆ ವಕೀಲರೊಬ್ಬರು ವಿವಾಹವಾಗಿ ಹೈದರಾಬಾದ್‍ಗೆ ಸ್ಥಳಾಂತರಗೊಂಡಿದ್ದಾಗಿ ತಿಳಿಸಿದ್ದಾರೆ.

    ರಜನಿಗೆ ಎರಡು ಮಕ್ಕಳ ತಾಯೊಯಾದ ನಂತರ ಕೂಡ ಉದ್ಯೋಗಕ್ಕಾಗಿ ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವುದನ್ನು ಮುಂದುವರಿಸಿದ್ದರು. ಆದರೆ ಅವರ ಪತಿ ಹೃದಯ ಸಮಸ್ಯೆಯಿಂದ ಹಾಸಿಗೆ ಹಿಡಿದಿದ್ದರಿಂದ ಕುಟುಂಬ ಇಕ್ಕಟ್ಟಿನ ಸ್ಥಿತಿಗೆ ಸಿಲುಕಿತು. ನಂತರ ಕುಟುಂಬವನ್ನು ನಡೆಸಲು ಆಕೆಯ ಅತ್ತೆ ಸೇರಿದಂತೆ ಐವರು ತರಕಾರಿ ಮಾರಾಟ ಮಾಡಲು ಆರಂಭಿಸಿದರು. ಇದರಿಂದ ಗಳಿಸಿದ ಹಣದಿಂದಾಗಿ ರಜನಿ ಜಿಎಚ್‍ಎಂಸಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಸ ಗುಡಿಸುವ ಕೆಲಸ ಪಡೆದು ತಿಂಗಳಿಗೆ 10,000ರೂ, ಸಂಬಳ ತೆಗೆದುಕೊಳ್ಳುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ:ಪಾಕ್ ಗೂಢಾಚಾರಿ ಜಿತೇಂದರ್ ಸಿಂಗ್ ಕಾಟನ್ ಪೇಟೆಯನ್ನೇ ಆಯ್ಕೆ ಮಾಡ್ಕೊಂಡಿದ್ದೇಕೆ..?