Tag: MSK Prasad

  • ಧೋನಿ ಭವಿಷ್ಯ ಈಗಾಗಲೇ ನಿರ್ಧರವಾಗಿದೆ- ಎಂಎಸ್‍ಕೆ ಪ್ರಸಾದ್

    ಧೋನಿ ಭವಿಷ್ಯ ಈಗಾಗಲೇ ನಿರ್ಧರವಾಗಿದೆ- ಎಂಎಸ್‍ಕೆ ಪ್ರಸಾದ್

    ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ, ಮಹೇಂದ್ರ ಸಿಂಗ್ ಧೋನಿ ಅವರ ಭವಿಷ್ಯ ಈಗಾಗಲೇ ನಿರ್ಧರವಾಗಿದೆ ಎಂದು ಟೀಂ ಇಂಡಿಯಾದ ಆಯ್ಕೆ ಸಮಿತಿಯ ಮಾಜಿ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್ ಹೇಳಿದ್ದಾರೆ.

    2019ರ ವಿಶ್ವಕಪ್ ಸೆಮಿಫೈನಲ್ ನಂತರ ಎಂ.ಎಸ್.ಧೋನಿ ಯಾವುದೇ ಅಂತರರಾಷ್ಟ್ರೀಯ ಪಂದ್ಯದಲ್ಲಿ ಕಾಣಿಸಿಕೊಂಡಿಲ್ಲ. ಹೀಗಾಗಿ ಅವರ ನಿವೃತ್ತಿಯ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಂಎಸ್‍ಕೆ ಪ್ರಸಾದ್, ಧೋನಿ ಹಾಗೂ ನಾವೇಲ್ಲ ಸೇರಿ ನಿವೃತ್ತಿಯ ವಿಚಾರವಾಗಿ ಚೆರ್ಚೆ ಮಾಡಿದ್ದೇವೆ. ಈ ವೇಳೆ ಅವರ ಮುಂದಿನ ಭವಿಷ್ಯ ನಿರ್ಧಾರವಾಗಿದೆ ಎಂದು ಹೇಳಿದರು.

    ಮಾಧ್ಯಮಗಳ ಜೊತೆ ಇಂದು ಮಾತನಾಡಿರುವ ಎಂಎಸ್‍ಕೆ, ಎಂಎಸ್ ಧೋನಿ ಅವರು ನನಗೆ ಮತ್ತು ಆಡಳಿತ ಮಂಡಳಿಗೆ ತಿಳಿಸಿರುವ ಹಾಗೇ ತಮ್ಮ ಭವಿಷ್ಯದ ಬಗ್ಗೆ ಸ್ಪಷ್ಟವಾಗಿದ್ದಾರೆ. ಇದು ಗೌಪ್ಯವಾಗಿರು ವಿಷಯವಾದ ಕಾರಣ ನಾನು ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ನಮ್ಮ ನಡುವೆ ಧೋನಿ ಅವರು ಚರ್ಚಿಸಿದ ಮತ್ತು ಹಂಚಿಕೊಂಡ ಯಾವುದೇ ವಿಷಯಗಳು ಗೌಪ್ಯವಾಗಿರುವುದು ಉತ್ತಮ. ಅದು ಅಲಿಖಿತ ಕೋಡ್ ಎಂದು ತಿಳಿಸಿದರು.

    ಈ ತಿಂಗಳ ಕೊನೆಯಲ್ಲಿ ಆರಂಭವಾಗಲಿರುವ ಐಪಿಎಲ್‍ಗೆ ಧೋನಿ ಸಿದ್ಧತೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈಗಾಗಲೇ ಭರ್ಜರಿ ಅಭ್ಯಾಸ ನಡೆಸಿದೆ. ಅದರಲ್ಲೂ ಮಹೇಂದ್ರ ಸಿಂಗ್ ಧೋನಿ ಸ್ಫೋಟಕ ಬ್ಯಾಟಿಂಗ್ ಮಾಡಿ ಕಠಿಣ ಅಭ್ಯಾಸ ನಡೆಸಿದ್ದಾರೆ. ಅಭ್ಯಾಸದ ವೇಳೆ ಎಂ.ಎಸ್.ಧೋನಿ ಸತತ ಐದು ಸಿಕ್ಸರ್ ಸಿಡಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

    ಸಿಎಸ್‍ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಮಾರ್ಚ್ 3ರಂದು ಚೆನ್ನೈಗೆ ಆಗಮಿಸಿ, ಅಭ್ಯಾಸ ಆರಂಭಿಸಿದ್ದಾರೆ. ಜೊತೆಗೆ ತಂಡದ ಅನುಭವಿ ಆಟಗಾರ ಸುರೇಶ್ ರೈನಾ ಸೇರಿದಂತೆ ಕೆಲ ಆಟಗಾರರು ಈಗಾಗಲೇ ಚೆನ್ನೈನ ಚಿದಂಬರಂ ಮೈದಾನದಲ್ಲಿ ಕ್ರಿಕೆಟ್ ಅಭ್ಯಾಸ ನಡೆಸಿದ್ದಾರೆ. ಈ ಹಿಂದೆ ರಾಂಚಿಯಲ್ಲೂ ಕೂಡ ಧೋನಿ ಅವರು ರಣಜಿ ಆಟಗಾರರ ಜೊತೆ ಅಭ್ಯಾಸ ಮಾಡಿದ್ದರು.

  • ಟೆಸ್ಟ್ ಆರಂಭಿಕನಾಗಿ ರೋಹಿತ್ ಶರ್ಮಾ ಕಣಕ್ಕೆ?

    ಟೆಸ್ಟ್ ಆರಂಭಿಕನಾಗಿ ರೋಹಿತ್ ಶರ್ಮಾ ಕಣಕ್ಕೆ?

    ನವದೆಹಲಿ: ಮುಂಬರುವ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಪರ ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕೆ ಇಳಿಯುವ ಸಾಧ್ಯತೆಯ ಕುರಿತು ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್ ಮಾತನಾಡಿದ್ದಾರೆ.

    ಸದ್ಯ ತಂಡದ ಆರಂಭಿಕನಾಗಿ ಕಣಕ್ಕೆ ಇಳಿಯುತ್ತಿರುವ ಕೆಎಲ್ ರಾಹುಲ್ ಫಾರ್ಮ್ ಸಮಸ್ಯೆ ಆಯ್ಕೆ ಸಮಿತಿಯ ಈ ಚಿಂತನೆಗೆ ಕಾರಣವಾಗಿದೆ. ಉತ್ತಮ ಬ್ಯಾಟಿಂಗ್ ಫಾರ್ಮ್ ಹೊಂದಿದ್ದರೂ ರೋಹಿತ್ ಶರ್ಮಾ ಅವರಿಗೆ ವೆಸ್ಟ್ ಇಂಡೀಸ್ ಟೂರ್ನಿಯಲ್ಲಿ ಆಡುವ 11ರ ಬಳಗದಲ್ಲಿ ಸ್ಥಾನ ಸಿಕ್ಕಿರಲಿಲ್ಲ.

    ಈ ಕುರಿತು ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿರುವ ಎಂಎಸ್‍ಕೆ ಪ್ರಸಾದ್, ವಿಂಡೀಸ್ ಸರಣಿಯ ಬಳಿಕ ಆಯ್ಕೆ ಸಮಿತಿ ಸಭೆ ನಡೆದಿಲ್ಲ. ಮುಂದಿನ ಸಭೆಯಲ್ಲಿ ರೋಹಿತ್ ಅವರನ್ನು ಆರಂಭಿಕರಾಗಿ ಕಣಕ್ಕೆ ಇಳಿಸುವ ಬಗ್ಗೆ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ.

    ರಾಹುಲ್ ಪ್ರತಿಭಾನ್ವಿತ ಆಟಗಾರರಾಗಿದ್ದು, ಟೆಸ್ಟ್ ಪಂದ್ಯಗಳಲ್ಲಿ ಅವರು ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಎಂಎಸ್‍ಕೆ ಪ್ರಸಾದ್ ಅಭಿಪ್ರಾಯ ಪಟ್ಟಿದ್ದಾರೆ. ಅಂದಹಾಗೇ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಪಂದ್ಯಗಳಲ್ಲಿ ಕೆಎಲ್ ರಾಹುಲ್ ಕ್ರಮವಾಗಿ 13, 6, 44, 38 ರನ್ ಗಳಿಸಿದ್ದರು. ಇತ್ತ ವಿಂಡೀಸ್ ಟೂರ್ನಿಯಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡಲು ಅವಕಾಶ ಪಡೆದ ರಹಾನೆ, ವಿಹಾರಿ ಉತ್ತಮ ಬ್ಯಾಟಿಂಗ್ ನಡೆಸಿ ಗಮನ ಸೆಳೆದಿದ್ದರು. ಪರಿಣಾಮ ಇದುವರೆಗೂ ಟೆಸ್ಟ್ ಪಂದ್ಯಗಳಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸುತ್ತಿದ್ದ ರೋಹಿತ್ ಆರಂಭಿಕರಾಗಿ ಅವಕಾಶ ಪಡೆಯುವ ಸಾಧ್ಯತೆ ಇದೆ.

  • ಧೋನಿ ಭಾರತದ ಸರ್ವಶ್ರೇಷ್ಠ ವಿಕೆಟ್ ಕೀಪರ್, ಗ್ರೇಟ್ ಫಿನಿಶರ್: ಎಂಎಸ್‍ಕೆ ಪ್ರಸಾದ್

    ಧೋನಿ ಭಾರತದ ಸರ್ವಶ್ರೇಷ್ಠ ವಿಕೆಟ್ ಕೀಪರ್, ಗ್ರೇಟ್ ಫಿನಿಶರ್: ಎಂಎಸ್‍ಕೆ ಪ್ರಸಾದ್

    ನವದೆಹಲಿ: ಕ್ರಿಕೆಟ್ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ಬ್ಯಾಟಿಂಗ್ ಗೆ 11ನೇ ಸ್ಥಾನದಲ್ಲಿ ಕಳುಹಿಸಿರುವ ಕುರಿತು ಹಲವು ಪ್ರಶ್ನೆಗಳು ಹುಟ್ಟಿಕೊಂಡಿದ್ದವು. ಈ ಕುರಿತು ಪ್ರತಿಕ್ರಿಯಿಸಿರುವ ಟೀಂ ಇಂಡಿಯಾ ಆಟಗಾರರ ಆಯ್ಕೆ ಸಮಿತಿಯ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್, ಧೋನಿ ನಿಗದಿತ ಓವರ್ ಗಳಲ್ಲಿ ಭಾರತದ ಸರ್ವಶ್ರೇಷ್ಠ ವಿಕೆಟ್ ಕೀಪರ್ ಮತ್ತು ಫಿನಿಶರ್ ಎಂದು ಹೇಳಿದ್ದಾರೆ.

    ಸುದ್ದಿಸಂಸ್ಥೆಗೆ ಸಂದರ್ಶನ ನೀಡಿರುವ ಎಂಎಸ್‍ಕೆ ಪ್ರಸಾದ್, ಧೋನಿ ಅವರನ್ನ ತಂಡದಲ್ಲಿದ್ದರಿಂದ ಮಧ್ಯಮ ಕ್ರಮಾಂಕದಲ್ಲಿ ಸಮತೋಲನ ಕಾಯ್ದುಕೊಳ್ಳಲು ಸಾಧ್ಯವಾಗಿತ್ತು. ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ನಲ್ಲಿ ಆರಂಭಿಕ ವಿಕೆಟ್ ಕಳೆದುಕೊಂಡು ಗೆಲುವು ದಾಖಲಿಸಿದ್ದರೆ, ಧೋನಿ ಮತ್ತು ಜಡೇಜಾರನ್ನು ಸರ್ವಶ್ರೇಷ್ಠ ಸಾಲಿನಲ್ಲಿ ಸೇರ್ಪಡೆ ಮಾಡಲಾಗುತಿತ್ತು ಎಂದು ತಿಳಿಸಿದ್ದಾರೆ.

    ವಿಶ್ವ ಕಪ್ ಪಂದ್ಯಗಳಲ್ಲಿ ಓರ್ವ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್ ಮನ್ ರೂಪದಲ್ಲಿ ತಂಡದ ದೊಡ್ಡ ಶಕ್ತಿಯಾಗಿದ್ದರು ಎಂಬುದನ್ನು ನಾನು ಯಾವುದೇ ಸಂದೇಹಗಳಿಲ್ಲದೇ ಹೇಳಬಲ್ಲೆ ಎಂದಿದ್ದಾರೆ.

    ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ನಲ್ಲಿ 18 ರನ್ ಗಳಿಂದ ಸೋಲು ಕಂಡಿತ್ತು. ಈ ಪಂದ್ಯದಲ್ಲಿ ಜಡೇಜಾ 77 ರನ್ ಮತ್ತು ಧೋನಿ 50 ರನ್ ಹೊಡೆದಿದ್ದರು.

    ವೆಸ್ಟ್ ಇಂಡೀಸ್ ಪ್ರವಾಸದಿಂದ ರಜೆ ತೆಗೆದುಕೊಂಡಿರುವ ಧೋನಿ ಇಂದಿನಿಂದ ಆಗಸ್ಟ್ 15ರವರೆಗೆ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಆರಂಭದ ಮೂರು ದಿನ ಧೋನಿಯವರಿಗೆ ಸೇನೆಯ ಪ್ರಾಥಮಿಕ ತರಬೇತಿಯನ್ನು ನೀಡಲಾಗುತ್ತದೆ. ಇದೇ ವೇಳೆ ಸೇನೆಯ ಬಗ್ಗೆ ಮಾಹಿತಿ, ಫೈರಿಂಗ್ ಸಹ ಹೇಳಿಕೊಡಲಾಗುತ್ತದೆ. ಈ ಬಾರಿಯ ಸ್ವತಂತ್ರ ದಿನಾಚರಣೆಯನ್ನು ಧೋನಿ ಸೈನಿಕರೊಂದಿಗೆ ಆಚರಿಸಲಿದ್ದಾರೆ.

  • ಧೋನಿಯಂತಹ ಪ್ರಸಿದ್ಧ ಆಟಗಾರನಿಗೆ ಯಾವಾಗ ನಿವೃತ್ತಿ ಹೊಂದಬೇಕು ಗೊತ್ತು – ಎಂಎಸ್‍ಕೆ ಪ್ರಸಾದ್

    ಧೋನಿಯಂತಹ ಪ್ರಸಿದ್ಧ ಆಟಗಾರನಿಗೆ ಯಾವಾಗ ನಿವೃತ್ತಿ ಹೊಂದಬೇಕು ಗೊತ್ತು – ಎಂಎಸ್‍ಕೆ ಪ್ರಸಾದ್

    ನವದೆಹಲಿ: ಎಂ.ಎಸ್ ಧೋನಿಯಂತಹ ಪ್ರಸಿದ್ಧ ಆಟಗಾರನಿಗೆ ಯಾವಾಗ ನಿವೃತ್ತಿ ಹೊಂದಬೇಕು ಎಂಬುದು ಗೊತ್ತು ಎಂದು ಭಾರತದ ಆಯ್ಕೆ ಸಮಿತಿಯ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್ ಹೇಳಿದ್ದಾರೆ.

    ಎಂಎಸ್‍ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ಇಂದು ಮುಂಬೈನಲ್ಲಿ ಸಭೆ ಸೇರಿ ಆಗಸ್ಟ್ 2ರಿಂದ ಭಾರತದ ಮತ್ತು ವೆಸ್ಟ್ ಇಂಡೀಸ್ ಪ್ರವಾಸಕ್ಕಾಗಿ ಏಕದಿನ, ಟಿ-20 ಮತ್ತು ಟೆಸ್ಟ್ ಸರಣಿಯ ತಂಡಗಳನ್ನು ಆಯ್ಕೆ ಮಾಡಿದರು.

    ಈ ವೇಳೆ ಧೋನಿ ವಿಚಾರದ ಬಗ್ಗೆ ಮಾತನಾಡಿರುವ ಎಂ.ಎಸ್.ಕೆ ಪ್ರಸಾದ್, ನಿವೃತ್ತಿ ಎಂಬುದು ಆಟಗಾರ ವೈಯಕ್ತಿಕ ವಿಷಯವಾಗಿದ್ದು, ಅವರೇ ಆ ಬಗ್ಗೆ ನಿರ್ಧಾರ ಮಾಡಬೇಕು. ಅದ್ದರಿಂದ ಧೋನಿಯಂತಹ ಅನುಭವಿ ಆಟಗಾರರಿಗೆ ಯಾವಾಗ ನಿವೃತ್ತಿ ಹೊಂದಬೇಕು ಎಂಬುದು ಗೊತ್ತು ಎಂದು ಹೇಳಿದ್ದಾರೆ.

    ಎಂಎಸ್ ಧೋನಿ ಅವರು ಈ ಸರಣಿಗೆ ಲಭ್ಯವಿಲ್ಲ. ಅವರು ಈ ಸರಣಿಗೆ ತಮ್ಮ ಅಲಭ್ಯತೆಯನ್ನು ವ್ಯಕ್ತಪಡಿಸಿದ್ದಾರೆ. ಈ ವೇಳೆ ಧೋನಿ ಅವರ ಬದಲು ಮೂರು ಮಾದರಿಯ ಕ್ರಿಕೆಟ್‍ಗೂ ರಿಷಭ್ ಪಂತ್ ಅವರನ್ನು ಆಯ್ಕೆ ಮಾಡಿಕೊಂಡಿರುವ ಬಗ್ಗೆ ಸ್ಪಷ್ಟನೆ ನೀಡಿ ಈ ಬಾರಿಯ ವಿಶ್ವಕಪ್ ನಂತರ ಹಲವಾರು ಯೋಜನೆಗಳನ್ನು ಹಾಕಿಕೊಂಡಿದ್ದೇವೆ. ಅದ್ದರಿಂದ ರಿಷಬ್ ಪಂತ್ ಅವರಿಗೆ ಹೆಚ್ಚಿನ ಅವಕಾಶ ನೀಡಿ ಅವರನ್ನು ಮುಂದಿನ ಯೋಜನೆಗಳಿಗೆ ತಯಾರಿ ಮಾಡುತ್ತಿದ್ದೇವೆ ಎಂದು ಹೇಳಿದರು.

    ವಿಶ್ವಕಪ್‍ನಲ್ಲಿ ಎಂ ಎಸ್ ಧೋನಿ ಅವರ ಸ್ಟ್ರೈಕ್ ರೇಟ್ ಬಗ್ಗೆ ಬಹಳ ಚರ್ಚೆಯಾಗುತ್ತಿದೆ. ಆದರ ಬಗ್ಗೆ ಈಗ ಮಾತನಾಡುವುದು ಸೂಕ್ತವಲ್ಲ. ಆದರೆ ಭಾರತ ತಂಡದಲ್ಲಿ ಯುವ ಆಟಗಾರರನ್ನು ಸಿದ್ಧ ಮಾಡಲು ಹೊರಟಿದ್ದೇವೆ. ಅದ್ದರಿಂದ ರಿಷಬ್ ಪಂತ್‍ಗೆ ಮೂರು ಮಾದರಿಯ ಪಂದ್ಯಗಳಲ್ಲೂ ವಿಕೆಟ್ ಕೀಪರ್ ಆಗಿ ಅವಕಾಶ ನೀಡಿದ್ದೇವೆ ಎಂದರು.

    ಧೋನಿ ಟೆರಿಟೋರಿಯಲ್ ಆರ್ಮಿಯ ಪ್ಯಾರಾಶೂಟ್ ರೆಜಿಮೆಂಟ್‍ನ ಕರ್ನಲ್ ಆಗಿದ್ದಾರೆ. ಹಾಗಾಗಿ ತಮ್ಮ ಎರಡು ತಿಂಗಳ ರಜೆಯನ್ನು ರೆಜಿಮೆಂಟ್ ನಲ್ಲಿ ಕಳೆಯಲಿದ್ದಾರೆ. ಧೋನಿ ಅವರೇ ಸ್ವಇಚ್ಛೆಯಿಂದ ವೆಸ್ಟ್ ಇಂಡೀಸ್ ಜೊತೆಗಿನ ಪಂದ್ಯಕ್ಕೆ ಅಲಭ್ಯರಾಗುತ್ತಿದ್ದಾರೆ. ತಮ್ಮ ಎರಡು ತಿಂಗಳ ರಜಾವಧಿಯನ್ನು ಪ್ಯಾರಾಮಿಲಿಟ್ರಿ ರೆಜಿಮೆಂಟ್ ಜೊತೆ ವ್ಯಯಿಸಲಿದ್ದಾರೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದರು.

    ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಮೂರು ಮಾದರಿಯ ಪಂದ್ಯಗಳಿಗೂ ಆಟಗಾರನ್ನು ಆಯ್ಕೆ ಮಾಡಿದ್ದು, ಆಟಗಾರರ ಪಟ್ಟಿ ಇಂತಿದೆ.

    ಟೆಸ್ಟ್ ತಂಡ:
    ವಿರಾಟ್ ಕೊಹ್ಲಿ (ನಾಯಕ) ರೋಹಿತ್ ಶರ್ಮಾ (ಉಪನಾಯಕ), ಅಜಿಂಕ್ಯ ರಹಾನೆ, ಮಯಾಂಕ್ ಅಗರ್ವಾಲ್, ಕೆ. ಎಲ್.ರಾಹುಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರಿಷಬ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ, ಆರ್ ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬೂಮ್ರಾ ಹಾಗೂ ಉಮೇಶ್ ಯಾದವ್.

    ಏಕದಿನ ತಂಡ:
    ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶಿಖರ್ ಧವನ್, ಕೆ.ಎಲ್.ರಾಹುಲ್, ಶ್ರೇಯಸ್ ಐಯ್ಯರ್, ಮನೀಶ್ ಪಾಂಡೆ, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಯಜುವೇಂದ್ರ ಚಹಲ್, ಕೇದಾರ್ ಜಾಧವ್, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್ ಹಾಗೂ ನವದೀಪ್ ಸೈನಿ.

    ಟಿ-20 ತಂಡ:
    ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶಿಖರ್ ಧವನ್, ಕೆ.ಎಲ್.ರಾಹುಲ್, ಶ್ರೇಯಸ್ ಐಯ್ಯರ್, ಮನೀಶ್ ಪಾಂಡೆ, ರಿಷಬ್ ಪಂತ್ (ವಿಕೆಟ್ ಕೀಪರ್), ಕೃಣಾಲ್ ಪಾಂಡ್ಯ, ರವೀಂದ್ರ ಜಡೇಜ, ವಾಷಿಂಗ್ಟನ್ ಸುಂದರ್, ರಾಹುಲ್ ಚಹರ್, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ದೀಪಕ್ ಚಹರ್ ಹಾಗೂ ನವದೀಪ್ ಸೈನಿ.

  • ವಿಶ್ವಕಪ್ ಟೂರ್ನಿಗೆ 18 ಆಟಗಾರರ ಟೀಂ ಇಂಡಿಯಾ ಸಿದ್ಧ

    ವಿಶ್ವಕಪ್ ಟೂರ್ನಿಗೆ 18 ಆಟಗಾರರ ಟೀಂ ಇಂಡಿಯಾ ಸಿದ್ಧ

    ಮುಂಬೈ: 2019ರ ವಿಶ್ವಕಪ್ ಟೂರ್ನಿಗೆ 18 ಆಟಗಾರರ ಪಟ್ಟಿ ಸಿದ್ಧವಾಗಿದೆ ಎಂದು ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್ ತಿಳಿಸಿದ್ದಾರೆ.

    ವಿಶ್ವಕಪ್ ದೃಷ್ಟಿಯಿಂದ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿದ್ದು, ಪಟ್ಟಿಯಲ್ಲಿರುವ ಆಟಗಾರರು ಆಡುತ್ತಿರುವ ಐಪಿಎಲ್ ತಂಡಗಳ ಪ್ರಾಂಚೈಸಿಗಳಿಗೆ ಈ ಕುರಿತು ಮಾಹಿತಿ ನೀಡಲಾಗಿದೆ. ಅಂತಹ ಆಟಗಾರರ ಮೇಲೆ ಆಗುವ ಹೆಚ್ಚಿನ ಒತ್ತಡವನ್ನು ಕಡಿಮೆ ಮಾಡುವುದು ಇದರ ಉದ್ದೇಶವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

    ಮಾರ್ಚ್ 23 ರಿಂದ ಐಪಿಎಲ್ ಟೂರ್ನಿ ಆರಂಭವಾಗಲಿದ್ದು, ಮೇ 30ರಿಂದ ಜುಲೈ 14ರ ವರೆಗೂ ಇಂಗ್ಲೆಂಡ್‍ನಲ್ಲಿ ಏಕದಿನ ವಿಶ್ವಕಪ್ ನಡೆಯಲಿದೆ. ಈಗಾಗಲೇ 18 ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಮುಂದಿನ ಅವಧಿಯಲ್ಲಿ ಆಟಗಾರರ ಪಟ್ಟಿ ಬದಲಾಗುವ ಸಾಧ್ಯತೆ ಇದೆ. ಇಲ್ಲಿಯವರೆಗೂ ಆಟಗಾರರ ಮೇಲಿನ ಹೊರೆ ನಿಭಾಯಿಸಿದ್ದು, ಮುಂದಿನ ಅವಧಿಯಲ್ಲೂ ಇಂದು ಮುಂದುವರಿಯುತ್ತದೆ ಎಂದು ಪ್ರಸಾದ್ ತಿಳಿಸಿದ್ದಾರೆ.

    ಆಸೀಸ್ ವಿರುದ್ಧ ಸಿಮೀತ ಓವರ್ ಗಳ ಸರಣಿಗೆ ಆಟಗಾರರ ಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದ್ದು, ಸರಣಿಯಲ್ಲಿ ಆಟಗಾರರು ತೋರುವ ಪ್ರದರ್ಶನ ಮೇರೆಗೆ ಆಯ್ಕೆ ತಂಡ ಆಟಗಾರರ ಹೆಸರನ್ನು ಅಂತಿಮಗೊಳಿಸಲಿದೆ. ಸರಣಿಯಲ್ಲಿ ಕೆಎಲ್ ರಾಹುಲ್ ಹಾಗೂ ಪಂತ್ ಸ್ಥಾನ ಪಡೆದಿದ್ದು, ರಾಹುಲ್ ಅವರಿಗೆ ವಿಶ್ವಕಪ್ ತಂಡಕ್ಕೆ ಆಯ್ಕೆ ಆಗಲು ಅಂತಿಮ ಅವಕಾಶವೆಂದೇ ವಿಶ್ಲೇಷಣೆ ಮಾಡಲಾಗಿದೆ. ಆದರೆ ಆಸೀಸ್ ವಿರುದ್ಧ ಸರಣಿಗೆ ದಿನೇಶ್ ಕಾರ್ತಿಕ್ ಅವರನ್ನು ಕೈಬಿಟ್ಟಿರುವುದಕ್ಕೆ ಅಭಿಮಾನಿಗಳಿಂದ ಆಕ್ರೋಶ ವ್ಯಕ್ತವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವಿಶ್ವಕಪ್ ಆಯ್ಕೆಗೆ ‘ಆರೋಗ್ಯಕರ ತಲೆನೋವಾದ’ ರಿಷಬ್ ಪಂತ್

    ವಿಶ್ವಕಪ್ ಆಯ್ಕೆಗೆ ‘ಆರೋಗ್ಯಕರ ತಲೆನೋವಾದ’ ರಿಷಬ್ ಪಂತ್

    – ಆಯ್ಕೆಯ ರೇಸ್‍ನಲ್ಲಿ ರಹಾನೆ, ವಿಜಯ್ ಶಂಕರ್: ಎಂಎಸ್‍ಕೆ ಪ್ರಸಾದ್

    ಮುಂಬೈ: ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ವಿರುದ್ಧ ಸರಣಿಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವ ಟೀಂ ಇಂಡಿಯಾ ಯುವ ಆಟಗಾರ ರಿಷಬ್ ಪಂತ್ ಮುಂದಿನ ವಿಶ್ವಕಪ್ ಸರಣಿಗೆ ಆಯ್ಕೆ ಆಗುವುದು ಬಹುತೇಕ ಖಚಿತ ಆಗಿದೆ ಎನ್ನಲಾಗಿದೆ.

    ಈ ಕುರಿತು ಟೀಂ ಇಂಡಿಯಾ ಆಯ್ಕೆ ಸಮಿತಿಯ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್ ಅವರು ಮಾಹಿತಿ ನೀಡಿದ್ದು, ವಿಶ್ವಕಪ್ ತಂಡದ ಆಯ್ಕೆ ವೇಳೆ ರಿಷಬ್ ಪಂತ್‍ರನ್ನು ಪರಿಗಣಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಅಲ್ಲದೇ ರಿಷಬ್ ಪಂತ್ ಆಯ್ಕೆ ಆರೋಗ್ಯಕರ ತಲೆನೋವಾಗಿದೆ ಎಂದು ತಿಳಿಸಿದ್ದಾರೆ.

    ರಿಷಬ್ ಟೀಂ ಇಂಡಿಯಾಗೆ ಆಯ್ಕೆಯಾದ ಬಳಿಕ ಅವರ ಬ್ಯಾಟಿಂಗ್‍ನಲ್ಲಿ ಉತ್ತಮ ಸುಧಾರಣೆ ಆಗಿದೆ. ಮತ್ತಷ್ಟು ಪರಿಪಕ್ವತೆ ಸಾಧಿಸಲು ಟೀಂ ಇಂಡಿಯಾ ಎ ತಂಡ ಸೇರುವಂತೆ ಸಾಕಷ್ಟು ಅವಕಾಶಗಳನ್ನು ಅವರಿಗೆ ನೀಡಿದ್ದೇವೆ. ಮೊದಲು ರಿಷಬ್‍ರನ್ನು ದಪ್ಪ ಚರ್ಮದ ವ್ಯಕ್ತಿ ಎಂದು ತಿಳಿದಿದ್ದೇವು. ಆದರೆ ಇಂದು ಆತ ಅನುಭವಿ ಆಟಗಾರರಂತಾಗಿದ್ದು, ತಂಡಕ್ಕೆ ಸಾಕಷ್ಟು ಬದ್ಧತೆಯನ್ನು ತೋರಿದ್ದಾರೆ ಎಂದರು.

    ಇದೇ ವೇಳೆ ರಹಾನೆ ಹಾಗೂ ವಿಜಯ್ ಶಂಕರ್ ಅವರನ್ನು ಆಯ್ಕೆ ವೇಳೆ ಪರಿಗಣಿಸಲಾಗುತ್ತದೆ. ಏಕೆಂದರೆ ಅವರು ದೇಶಿಯ ಕ್ರಿಕೆಟ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು. ಅಂದಹಾಗೇ ಕಳೆದ 11 ಇನ್ನಿಂಗ್ಸ್ ಗಳಲ್ಲಿ ರಹಾನೆ 74.62 ಸರಾಸರಿಯಲ್ಲಿ 597 ರನ್ ಗಳಿಸಿದ್ದಾರೆ. 2018 ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅಂತಿಮ ಏಕದಿನ ಪಂದ್ಯಗಳನ್ನು ಆಡಿದ್ದರು. ತಂಡದಲ್ಲಿ ಸದ್ಯ ಮಧ್ಯಮ ಕ್ರಮಾಂಕದ ಆಯ್ಕೆ ಕುರಿತು ಹೆಚ್ಚಿನ ಒತ್ತು ನೀಡಲಾಗುತ್ತಿದೆ.

    2019 ವಿಶ್ವಕಪ್ ಟೂರ್ನಿಗೆ 15 ಆಟಗಾರರ ಪಟ್ಟಿಯನ್ನು ಪ್ರಕಟ ಮಾಡಲು ಏಪ್ರಿಲ್ 23 ಅಂತಿಮ ದಿನಾಂಕವಾಗಿದೆ. ಜೂನ್ 05 ರಂದು ಟೀಂ ಇಂಡಿಯಾ ದಕ್ಷಿಣ ಆಫ್ರಿಕಾರನ್ನು ಎದುರಿಸುವ ಮೂಲಕ ವಿಶ್ವಕಪ್ ಜರ್ನಿಯನ್ನು ಆರಂಭಿಸಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವಿಂಡೀಸ್, ಆಸೀಸ್ ಟಿ20 ಟೂರ್ನಿಗೆ ಎಂಎಸ್‍ಡಿ ಡ್ರಾಪ್-ಧೋನಿ ವೃತ್ತಿ ಜೀವನದ ಅಂತ್ಯವೇ?

    ವಿಂಡೀಸ್, ಆಸೀಸ್ ಟಿ20 ಟೂರ್ನಿಗೆ ಎಂಎಸ್‍ಡಿ ಡ್ರಾಪ್-ಧೋನಿ ವೃತ್ತಿ ಜೀವನದ ಅಂತ್ಯವೇ?

    ಮುಂಬೈ: ಬಿಸಿಸಿಐ ಆಯ್ಕೆ ಸಮಿತಿಯ ಮುಖ್ಯಸ್ಥ ಎಂಎಸ್‍ಕೆ ಪ್ರಸಾದ್ ವೆಸ್ಟ್ ಇಂಡೀಸ್, ಆಸೀಸ್ ವಿರುದ್ಧದ ಟಿ20 ಸರಣಿಗೆ ತಂಡದಿಂದ ಧೋನಿ ಅವರನ್ನು ಡ್ರಾಪ್ ಮಾಡಿರುವುದು ಅವರ ಟಿ20 ವೃತ್ತಿ ಜೀವನದ ಅಂತ್ಯವಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ ಟೀಂ ಇಂಡಿಯಾ ಆಡಲಿರುವ ಮುಂದಿನ 6 ತಿಂಗಳ ಟಿ20 ಟೂರ್ನಿಗಳ ವೇಳಾಪಟ್ಟಿ ಗಮನಿಸಿದರೆ ಈ ಅನುಮಾನ ವ್ಯಕ್ತವಾಗುತ್ತದೆ.

    ಹಲವು ಟಿ20 ಸರಣಿಯಗಳಲ್ಲಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಧೋನಿ ಅವರಿಗೆ ಮುಂದಿನ ಟೂರ್ನಿಗೆ ವಿಶ್ರಾಂತಿ ನೀಡಲಾಗಿದ್ದು, ತಂಡಕ್ಕೆ 2ನೇ ವಿಕೆಟ್ ಕೀಪರ್ ಹುಡುಕಾಟ ನಡೆದಿದೆ ಎಂದು ಎಂಎಸ್‍ಕೆ ಪ್ರಸಾದ್ ತಿಳಿಸಿದ್ದು, ಇದೇ ವೇಳೆ ಧೋನಿ ಟಿ20 ವೃತ್ತಿ ಜೀವನದ ಅಂತ್ಯದ ಕುರಿತ ಪ್ರಶ್ನೆಗೆ ಉತ್ತರಿಸಿ, ಸದ್ಯಕ್ಕೆ ಅಂತಹ ಯಾವುದೇ ಚಿಂತನೆ ಇಲ್ಲ. ಮುಂದಿನ ಟೂರ್ನಿಯಲ್ಲಿ ತಂಡಕ್ಕೆ 2ನೇ ವಿಕೆಟ್ ಕೀಪರ್ ಅಗತ್ಯವಿರುವುದರಿಂದ ಉತ್ತಮ ಆಟಗಾರರ ಆಯ್ಕೆಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಬಿಸಿಸಿಐ ಶುಕ್ರವಾರ ಪ್ರಕಟಿಸಿರುವ ಆಟಗಾರರ ಪಟ್ಟಿಯಲ್ಲಿ ಟಿ20 ಟೂರ್ನಿಗೆ ರಿಷಭ್ ಪಂತ್ ಹಾಗೂ ದಿನೇಶ್ ಕಾರ್ತಿಕ್ ಅವರನ್ನು ಆಯ್ಕೆ ಮಾಡಲಾಗಿದೆ. ಆಸೀಸ್ ವಿರುದ್ಧ ಟಿ20 ಕ್ರಿಕೆಟ್ ಟೂರ್ನಿ ನವೆಂಬರ್ 21 ರಂದು ಆರಂಭವಾಗಲಿದೆ.

    ಧೋನಿ ಇದುವರೆಗೂ ಪ್ರಸಕ್ತ ವರ್ಷದಲ್ಲಿ 7 ಟಿ20 ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಅಲ್ಲದೇ ವಿಂಡೀಸ್ ಟೂರ್ನಿಯ ಬಳಿಕ ಟೀಂ ಇಂಡಿಯಾ ಆಸೀಸ್ ಪ್ರವಾಸದಲ್ಲಿ ಜನವರಿಯಲ್ಲಿ ಏಕದಿನ ಕ್ರಿಕೆಟ್ ಪಂದ್ಯಗಳನ್ನು ಆಡಲಿದೆ. ಇದರ ನಡುವೆ ಧೋನಿ ದೇಶಿಯ ಕ್ರಿಕೆಟ್ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿಯೂ ಭಾಗವಹಿಸುತ್ತಿಲ್ಲ. ಉಳಿದಂತೆ ದೇವಧರ್ ಟ್ರೋಫಿ ಈಗಾಗಲೇ ಅಂತ್ಯವಾಗಿದೆ. 37 ವರ್ಷದ ಧೋನಿ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ವಿಕೆಟ್ ಹಿಂದೆ ತಂಡಕ್ಕೆ ನೆರವಾದರೂ, ಬ್ಯಾಟಿಂಗ್‍ನಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲರಾಗಿದ್ದರು. ಧೋನಿ ಇದುವರೆಗೂ 93 ಟಿ20 ಪಂದ್ಯಗಳನ್ನು ಆಡಿದ್ದು, 127.09 ಸ್ಟ್ರೈಕ್ ರೇಟ್‍ನಲ್ಲಿ 1,487 ರನ್ ಸಿಡಿಸಿದ್ದಾರೆ.

    ಆಯ್ಕೆ ಸಮಿತಿಯ ಈ ನಿರ್ಣಯ ಧೋನಿ ಅವರನ್ನು ಒಂದು ಮಾದರಿಯ ಕ್ರಿಕೆಟ್ ಮಾತ್ರ ಸೀಮಿತ ಮಾಡುವ ಮುನ್ಸೂಚನೆಯೇ ಎಂಬ ಚರ್ಚೆಗೆ ಕಾರಣವಾಗಿದೆ. ಉಳಿದಂತೆ ನಿಗದಿತ ವೇಳಾಪಟ್ಟಿಯಂತೆ ಮುಂದಿನ 6 ತಿಂಗಳಲ್ಲಿ ಒಂದು ಟಿ20 ಟೂರ್ನಿಯಲ್ಲಿ ಮಾತ್ರ ಆಡಲು ಧೋನಿ ಅವರಿಗೆ ಅವಕಾಶವಿದ್ದು, ನ್ಯೂಜಿಲೆಂಡ್ ವಿರುದ್ಧ ಫೆಬ್ರವರಿಯಲ್ಲಿ ಮೂರು ಟಿ20 ಪಂದ್ಯಗಳು ನಡೆಯಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಟೀಂ ಇಂಡಿಯಾದಲ್ಲಿ ಕನ್ನಡಿಗ ಮಾಯಾಂಕ್‍ಗೆ ಸ್ಥಾನ ಖಚಿತ!

    ಟೀಂ ಇಂಡಿಯಾದಲ್ಲಿ ಕನ್ನಡಿಗ ಮಾಯಾಂಕ್‍ಗೆ ಸ್ಥಾನ ಖಚಿತ!

    ಮುಂಬೈ: ದೇಶಿಯ ಕ್ರಿಕೆಟ್‍ನಲ್ಲಿ ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದರು ಬಿಸಿಸಿಐ ಆಯ್ಕೆ ಸಮಿತಿ ನಿರ್ಲಕ್ಷ್ಯದಿಂದ ಟೀಂ ಇಂಡಿಯಾದಲ್ಲಿ ಅವಕಾಶ ಪಡೆಯಲು ವಿಫಲವಾಗಿದ್ದ ಕನ್ನಡಿಗ ಮಾಯಾಂಕ್ ಅಗರ್ವಾಲ್ ತಂಡದಲ್ಲಿ ಸ್ಥಾನ ಪಡೆಯವುದು ಬಹುತೇಕ ಖಚಿತವಾಗಿದೆ.

    ಮಾಯಾಂಕ್‍ರ ಪ್ರದರ್ಶನವನ್ನು ನಿರಂತವಾಗಿ ಗಮನಿಸುತ್ತಿದ್ದು, ದೇಶಿಯ ಕ್ರಿಕೆಟ್ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನವನ್ನು ನೀಡಿ ಬ್ಯಾಟಿಂಗ್ ಸಾಮರ್ಥ್ಯವನ್ನು ಕಾಯ್ದುಕೊಂಡಿದ್ದಾರೆ. ಆಸೀಸ್ ಎ ತಂಡದ ವಿರುದ್ಧ ನಡೆದ ಪಂದ್ಯದಲ್ಲೂ ಅರ್ಧ ಶತಕ ಸಿಡಿಸಿದ್ದಾರೆ. ಇದರ ಹೊರತಾಗಿಯೂ ಅಗರ್ವಾಲ್ ಟೀಂ ಇಂಡಿಯಾ ಕ್ಯಾಪ್ ಧರಿಸದಿರುವುದು ಕ್ರಿಕೆಟ್ ವಿಶ್ಲೇಷಕರಲ್ಲಿ ಹಾಗೂ ಅಭಿಮಾನಿಗಳಲ್ಲಿ ನಿರಾಸೆ ತಂದಿದೆ. ಶೀಘ್ರವೇ ತಂಡಕ್ಕೆ ಮಾಯಾಂಕ್ ಸೇರ್ಪಡೆಯಾಗಲಿದ್ದಾರೆ ಎಂದು ಪ್ರಸಾದ್ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

    ಈಗಾಗಲೇ ಟೀಂ ಇಂಡಿಯಾ ಮುಖ್ಯ ಕೋಚ್ ಹಾಗೂ ಕರ್ನಾಟಕ ತಂಡದ ಕೋಚ್ ಗಳಿಗೆ ಅಗರ್ವಾಲ್ ಬ್ಯಾಟಿಂಗ್ ಬಗ್ಗೆ ಹೆಚ್ಚಿನ ಗಮನಹರಿಸಲು ಸೂಚನೆ ನೀಡಲಾಗಿದೆ. ಅಲ್ಲದೇ ಹೆಚ್ಚಿನ ಅವಕಾಶಗಳನ್ನು ನೀಡಲು ತಿಳಿದ್ದೇವೆ ಎಂದು ಪ್ರಸಾದ್ ಹೇಳಿದ್ದಾರೆ.

    ರಣಜಿ ಟ್ರೋಫಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಮಾಯಾಂಕ್ 105.46 ಸರಾಸರಿಯಲ್ಲಿ 1160 ರನ್ ಸಿಡಿಸಿದ್ದಾರೆ. ಇದರಲ್ಲಿ ಐದು ಶತಕಗಳು ಸೇರಿದೆ. ಇನ್ನು ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ತಂಡವನ್ನು ಮುನ್ನಡೆಸಿದ್ದ ಮಾಯಾಂಕ್ 3 ಶತಕ ಸಿಡಿಸಿದ್ದರು. 2018 ಐಪಿಎಲ್ ಟೂರ್ನಿಯಲ್ಲಿ ನಿರಾಸೆ ಮೂಡಿಸಿದ್ದರೂ ಇಂಡಿಯಾ ಎ ತಂಡ ಇಂಗ್ಲೆಂಡ್ ವಿರುದ್ಧ ಆಡಿದ್ದ ಟೂರ್ನಿಯಲ್ಲಿ ಮತ್ತೆ ಮಿಂಚಿದ್ದರು. ಅಲ್ಲದೇ ದಕ್ಷಿಣ ಆಫ್ರಿಕಾ ಎ ತಂಡದ ವಿರುದ್ಧ ಬೆಂಗಳೂರಿನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ 220 ರನ್ ಗಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಶಟ್ಲರ್ ಶ್ರೀಕಾಂತ್‍ಗೆ ಕೊಟ್ಟ ಮಾತು ಉಳಿಸಿಕೊಂಡ ಧೋನಿ!

    ಶಟ್ಲರ್ ಶ್ರೀಕಾಂತ್‍ಗೆ ಕೊಟ್ಟ ಮಾತು ಉಳಿಸಿಕೊಂಡ ಧೋನಿ!

    ಹೈದರಾಬಾದ್: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಭಾರತದ ಟಾಪ್ ಶಟ್ಲರ್ ಕಿಡಂಬಿ ಶ್ರೀಕಾಂತ್ ಅವರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದು, ತಮ್ಮ ಹಸ್ತಾಕ್ಷರ ಹೊಂದಿರುವ ಬ್ಯಾಟನ್ನು ಉಡುಗೊರೆಯಾಗಿ ನೀಡಿದ್ದಾರೆ.

    ಧೋನಿ ಹಸ್ತಾಕ್ಷರ ಹೊಂದಿರುವ ಬ್ಯಾಟನ್ನು ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್‍ಕೆ ಪ್ರಸಾದ್ ಅವರು ಶ್ರೀಕಾಂತ್ ಅವರಿಗೆ ಹಸ್ತಾಂತರಿಸಿದ್ದಾರೆ. ಸದ್ಯ ವಿಶ್ವ ಬ್ಯಾಡ್ಮಿಂಟನ್ ನಲ್ಲಿ ನಾಲ್ಕನೇ ಶ್ರೇಯಾಂಕ ಹೊಂದಿರುವ ಶ್ರೀಕಾಂತ್, ಧೋನಿಯವರ ಕೊಡುಗೆ ಕಂಡು ಸಂತಸ ವ್ಯಕ್ತಪಡಿಸಿದ್ದಾರೆ.

    ಅಂದಹಾಗೇ ಶ್ರೀಕಾಂತ್ ಈ ಹಿಂದೆ ಧೋನಿಯ ಬಳಿ ಬ್ಯಾಟ್ ಕೊಡುಗೆ ನೀಡುವಂತೆ ಕೇಳಿದ್ದರು. ಅದಕ್ಕೆ ಬ್ಯಾಡ್ಮಿಂಟನ್ ನಲ್ಲಿ ನಂ.1 ಸ್ಥಾನಕ್ಕೆ ತಲುಪಿದರೆ ಗಿಫ್ಟ್ ಕೊಡುವುದಾಗಿ ಧೋನಿ ಭರವಸೆ ನೀಡಿದ್ದರು. ಇದರಂತೆ ಕಳೆದ ಏಪ್ರಿಲ್ ನಲ್ಲಿ ಶ್ರೀಕಾಂತ್ ವಿಶ್ವ ಶ್ರೇಯಾಂಕ ಪಟ್ಟಿಯಲ್ಲಿ ನಂ.1 ಸ್ಥಾನ ಪಡೆದಿದ್ದರು. ಅಲ್ಲದೇ ಭಾರತದಿಂದ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಯನ್ನು ಪಡೆದಿದ್ದರು. ಸದ್ಯ ಧೋನಿ ತಾವು ಕೊಟ್ಟ ಮಾತಿನಂತೆ ಶ್ರೀಕಾಂತ್ ಅವರಿಗೆ ಗಿಫ್ಟ್ ನೀಡಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಶ್ರೀಕಾಂತ್, ಧೋನಿ ಅವರು ಬ್ಯಾಟ್ ಗಿಫ್ಟ್ ನೀಡಿರುವುದು ಹೆಚ್ಚು ಸಂತಸ ತಂದಿದೆ. ಇದು ತನ್ನ ಜೀವನದ ಅತ್ಯಂತ ಸ್ಮರಣೀಯ ದಿನ ಎಂದು ತಿಳಿಸಿದ್ದಾರೆ.

    ಸದ್ಯ ಹೈದರಾಬಾದ್ ನ ಗೋಪಿಚಂದ್ ಬ್ಯಾಡ್ಮಿಂಟನ್ ಆಕಾಡೆಮಿಯಲ್ಲಿ ತರಬೇತಿಯಲ್ಲಿ ನಿರತರಾಗಿರುವ ಶ್ರೀಕಾಂತ್ ಅವರಿಗೆ ಎಂಎಎಸ್‍ಕೆ ಪ್ರಸಾದ್ ಅವರು ಬ್ಯಾಟ್ ಹಸ್ತಾಂತರಿಸುವ ವೇಳೆ ಬ್ಯಾಡ್ಮಿಂಟನ್ ರಾಷ್ಟ್ರೀಯ ತಂಡದ ಕೋಚ್ ಗೋಪಿಚಂದ್, ಶ್ರೀಕಾಂತ್ ಅವರ ತಂದೆ ಕೆವಿಎಸ್ ಕೃಷ್ಣ ಸೇರಿದಂತೆ ಹಲವರು ಹಾಜರಿದ್ದರು.