Tag: MTB Nagaraju

  • ತಾಯಿಗೆ ನಾನು ಮೋಸ ಮಾಡಲಿಲ್ಲ, ತಾಯಿಯೇ ನನ್ನ ತಬ್ಬಲಿ ಮಾಡಿದಳು: ಶರತ್ ಬಚ್ಚೇಗೌಡ

    ತಾಯಿಗೆ ನಾನು ಮೋಸ ಮಾಡಲಿಲ್ಲ, ತಾಯಿಯೇ ನನ್ನ ತಬ್ಬಲಿ ಮಾಡಿದಳು: ಶರತ್ ಬಚ್ಚೇಗೌಡ

    ಬೆಂಗಳೂರು: ತಾಯಿಗೆ ನಾನು ಮೋಸ ಮಾಡಲಿಲ್ಲ. ತಾಯಿಯೇ ನನ್ನ ತಬ್ಬಲಿ ಮಾಡಿದಳು ಎಂದು ಹೊಸಕೋಟೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಹೇಳಿದ್ದಾರೆ.

    ಇಂದು ಹೊಸಕೋಟೆಯಲ್ಲಿ ಮಾತನಾಡಿದ ಅವರು, ಕಂದಾಯ ಸಚಿವ ಆರ್ ಅಶೋಕ್ ಶರತ್ ಬಚ್ಚೇಗೌಡ ತಾಯಿಯಂತಹ ಪಕ್ಷಕ್ಕೆ ಮೋಸ ಮಾಡಿದ್ರು ಎನ್ನುವ ಹೇಳಿಕೆಗೆ ತಿರುಗೇಟು ನೀಡಿದರು. ನಾವು ಕಟ್ಟಿದ ಪಕ್ಷದಲ್ಲಿ ನಮಗೆ ಸ್ಥಾನ ಇಲ್ಲದಂತಾಗಿದೆ. ನಾವೆಲ್ಲೂ ಪಕ್ಷಕ್ಕೆ ಮೋಸ ಮಾಡಿಲ್ಲ. ಪಕ್ಷವೇ ನನ್ನ ತಬ್ಬಲಿ ಮಾಡಿದೆ ಎಂದು ತಿಳಿಸಿದ್ದಾರೆ.

    ನಾನು 2018ರಲ್ಲಿ ಎಲೆಕ್ಷನ್ ಗೆ ಬಿಜೆಪಿಯಿಂದ ನಿಲ್ಲುವುದರಲ್ಲಿ ಅಶೋಕಣ್ಣನ ಪಾತ್ರ ದೊಡ್ಡದಿದೆ. ಆದರೆ ಇವತ್ತು ನಾನು ಗಲಾಟೆ ಮಾಡಿಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ. ನಾನು ವಿದೇಶದಲ್ಲಿ ಓದಿದ್ದೇನೆ ಅಲ್ಲೆ ಕೆಲಸ ಕೂಡ ಮಾಡಿದ್ದೇನೆ. ಈಗ ನಾಡಿನ ಜನತೆಗೆ ಸೇವೆ ಮಾಡಲು ಇಲ್ಲಿ ಬಂದಿದ್ದೇನೆ. ನಾನೆಲ್ಲೂ ಗಲಾಟೆ ದೊಂಬಿ ಮಾಡಿಲ್ಲ. ಜನ ಇಲ್ಲಿ ಪ್ರೀತಿ ಅಭಿಮಾನದಿಂದ ಸೇರುತ್ತಿದ್ದಾರೆ ಎಂದು ಆರ್ ಅಶೋಕ್‍ಗೆ ತಿರುಗೇಟು ನೀಡಿದರು.

    ಇದೇ ವೇಳೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರು ಹೊಸಕೋಟೆಯನ್ನು ಮಿನಿ ಬಿಹಾರ ಎಂದ ವಿಚಾರವಾಗಿ ಪ್ರತಿಕ್ರಿಯಿಸಿ, ಹೊಸಕೋಟೆ ಜನ ಮತ್ತು ಈ ಕ್ಷೇತ್ರ ನಮ್ಮ ತಾಯಿ ಇದ್ದಂತೆ. ಇದರ ಬಗ್ಗೆ ನಾವ್ಯಾರು ಕೆಟ್ಟದಾಗಿ ಮಾತಾಡಬಾರದು. ಆದರೆ ಅವರು ಇಂತಹ ಹೇಳಿಕೆ ನೀಡಿರುವುದು ಕ್ಷೇತ್ರದ ಬಗೆಗಿನ ಅವರ ಒಲವು ಎಂತಹದ್ದು ಎಂಬುದನ್ನು ತೋರಿಸುತ್ತದೆ ಎಂದು ಎಂಟಿಬಿ ವಿರುದ್ಧ ಕಿಡಿಕಾರಿದರು.

    ಸೋಮವಾರ ಹೊಸಕೋಟೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ್ದ ಎಂಟಿಬಿ ನಾಗರಾಜು, ಯಾರು ಗತಿ ಇಲ್ಲದಕ್ಕೆ ಕಾಂಗ್ರೆಸ್ ಪಕ್ಷ ನನ್ನ ತಂದು ಈ ಮಿನಿ ಬಿಹಾರ್ ನಲ್ಲಿ ಚುನಾವಣೆಗೆ ನಿಲ್ಲಿಸಿದರು ಎಂದು ತಮ್ಮ ಸ್ವಕ್ಷೇತ್ರವನ್ನು ಬಿಹಾರಕ್ಕೆ ಹೋಲಿಕೆ ಮಾಡಿ ಎಡವಟ್ಟು ಮಾಡಿಕೊಂಡಿದ್ದರು.

  • ಬಚ್ಚೇಗೌಡರು ಒಪ್ಪಿಕೊಂಡ ಮೇಲೆ ನಾನು ರಾಜೀನಾಮೆ ನೀಡಿದೆ – ಎಂಟಿಬಿ ಕಿಡಿ

    ಬಚ್ಚೇಗೌಡರು ಒಪ್ಪಿಕೊಂಡ ಮೇಲೆ ನಾನು ರಾಜೀನಾಮೆ ನೀಡಿದೆ – ಎಂಟಿಬಿ ಕಿಡಿ

    – ಶರತ್ ಕಾಂಗ್ರೆಸ್ ಜೊತೆ ಒಳಒಪ್ಪಂದ ಮಾಡಿಕೊಂಡಿದ್ದಾರೆ

    ಬೆಂಗಳೂರು: ಹೈವೋಲ್ಟೆಜ್ ಕ್ಷೇತ್ರ ಎಂದೇ ಬಿಂಬಿತವಾಗಿರೋ ಬೆಂಗಳೂರು ಗ್ರಾಮಾಂತರ ಹೊಸಕೋಟೆಯಲ್ಲಿ ಅನರ್ಹ ಶಾಸಕ ಎಂಟಿಬಿ ಹಾಗೂ ಸಂಸದ ಬಚ್ಚೇಗೌಡರ ನಡುವೆ ವಾರ್ ಶುರುವಾಗಿದೆ. ಸಂಸದ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಪಕ್ಷೇತರರಾಗಿ ಇದೇ 15 ರಂದು ನಾಮಪತ್ರ ಸಲ್ಲಿಕೆ ಮಾಡಲು ನಿರ್ಧಾರ ಮಾಡಿದ್ದಾರೆ.

    ಶರತ್ ಕಣಕ್ಕಿಳಿಯೋದು ಖಚಿತವಾಗುತ್ತಿದ್ದಂತೆ ಎಂಟಿಬಿ ನಾಗರಾಜ್ ಸಂಸದ ಬಚ್ಚೇಗೌಡರ ವಿರುದ್ದ ಕಿಡಿಕಾರಿದ್ದಾರೆ. ಎಂಟಿಬಿ ಯಡಿಯೂರಪ್ಪನವರ ಸಮ್ಮುಖದಲ್ಲಿ ಸಂಸದ ಬಿ.ಎನ್ ಬಚ್ಚೇಗೌಡರು ಒಪ್ಪಿಕೊಂಡ ಮೇಲೆ ನಾನು ರಾಜೀನಾಮೆ ನೀಡಿದ್ದಾಗಿ ಎಂಟಿಬಿ ಒಪ್ಪಂದವನ್ನು ಬಹಿರಂಗ ಪಡಿಸಿದ್ದಾರೆ. ಹೊಸಕೋಟೆ ಕ್ಷೇತ್ರದ ಮುಖಂಡರ ಮನೆಯೊಂದರಲ್ಲಿ ಬಹಿರಂಗವಾಗಿ ಸತ್ಯವನ್ನು ಹೊರಹಾಕಿದ್ದಾರೆ.

    ಬಿಜೆಪಿಗೆ ಬರಲು ಒಪ್ಪಿಕೊಂಡ ಬಚ್ಚೇಗೌಡ ಇದೀಗ ಉಲ್ಟಾ ಹೊಡೆಯುತ್ತಿದ್ದು, ಶರತ್‍ಗೆ ಎಂಎಲ್‍ಸಿ ದೊಡ್ಡಬಳ್ಳಾಪುರ ಬಿಜೆಪಿ ಟಿಕೆಟ್ ಅಥವಾ ಮುಂದಿನ ಎಂಪಿ ಚುನಾವಣೆಗೆ ಟಿಕೆಟ್ ನಿಡೋದಾಗಿ ಬಿಎಸ್‍ವೈ ಭರವಸೆ ನೀಡಿದ್ದರು ಎಂದು ಎಂಟಿಬಿ ಹೇಳಿದ್ದಾರೆ. ಜೊತೆಗೆ ಬಿಜೆಪಿ ಟಿಕೆಟ್ ಬದಲಾಗಿ ಗೃಹಮಂಡಳಿ ಅಧ್ಯಕ್ಷ ಸ್ಥಾನ ನೀಡಿದರೂ ತಿರಸ್ಕರಿಸಿದ ಶರತ್ ಬಚ್ಚೇಗೌಡ ಕಾಂಗ್ರೆಸ್ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆಂದು ಆಕ್ರೋಶವನ್ನು ಹೊರಹಾಕಿದ್ದಾರೆ.

    ಒಂದು ಶರತ್ ಗೆಲ್ಲಬೇಕು, ಇಲ್ಲವೆ ಕಾಂಗ್ರೆಸ್ ಗೆಲ್ಲಬೇಕು, ಯಾವುದೇ ಕಾರಣಕ್ಕೂ ಎಂಟಿಬಿ ನಾಗರಾಜ್ ಗೆಲ್ಲಲು ಬಿಡಬಾರದೆಂದು ಒಳತಂತ್ರವನ್ನು ರೂಪಿಸಿದ್ದಾರೆಂದು ಎಂಟಿಬಿ ಆರೋಪಿಸಿದ್ದಾರೆ. ಈ ಮೊದಲೇ ಮಾಡಿಕೊಂಡ ಒಪ್ಪಂದಂತೆ ನಾನು ಬಚ್ಚೇಗೌಡ, ಅವರ ಪುತ್ರ ಶರತ್ ಮೂವರು ಸೇರಿ ಹೊಸಕೋಟೆ ತಾಲೂಕನ್ನು ಅಭಿವೃದ್ಧಿ ಪಡಿಸುವುದನ್ನು ಬಿಟ್ಟು ಅಪ್ಪ ಮಗ ಹೈಡ್ರಾಮಾ ಮಾಡುತ್ತಿದ್ದಾರೆ ಎಂದು ಎಂಟಿಬಿ ವಾಗ್ದಾಳಿ ನಡೆಸಿದ್ದಾರೆ.

  • ಕೈಕೊಟ್ಟ ಎಂಟಿಬಿ- ವಿಶ್ವಾಸ ನಿರೀಕ್ಷೆಯಲ್ಲಿದ್ದ ಸಿಎಂಗೆ ಫುಲ್ ಟೆನ್ಶನ್

    ಕೈಕೊಟ್ಟ ಎಂಟಿಬಿ- ವಿಶ್ವಾಸ ನಿರೀಕ್ಷೆಯಲ್ಲಿದ್ದ ಸಿಎಂಗೆ ಫುಲ್ ಟೆನ್ಶನ್

    ಬೆಂಗಳೂರು: ಕಾಂಗ್ರೆಸ್ ಘಟಾನುಘಟಿ ನಾಯಕರ ಮನವೊಲಿಕೆಗೂ ಬಗ್ಗದ ಅತೃಪ್ತ ಶಾಸಕ ಎಂಟಿಬಿ ನಾಗರಾಜ್ ಇದೀಗ ಏಕಾಏಕಿ ಮುಂಬೈನತ್ತ ಪ್ರಯಾಣ ಬೆಳೆಸಿದ್ದಾರೆ. ಈ ವಿಚಾರ ತಿಳಿದು ಸಿಎಂ ಅವರಿಗೆ ಶಾಕ್ ಆಗಿದೆ. ಪರಿಣಾಮ ವಿಶ್ವಾಸ ಮತಯಾಚನೆಯ ನಿರೀಕ್ಷೆಯಲ್ಲಿದ್ದ ಸಿಎಂ ಈಗ ಫುಲ್ ಟೆನ್ಶನ್ ಆಗಿದ್ದಾರೆ.

    ಇಂದು ಬೆಳಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಟಿಬಿ, ಇಂದು ನನಗೆ ಸ್ವಲ್ಪ ಪರ್ಸನಲ್ ಕೆಲಸ ಇದೆ. ದೇವಸ್ಥಾನಕ್ಕೆ ಹೋಗಬೇಕು ಎಂದಿದ್ದರು. ಇದೇ ವೇಳೆ ನಾನು ಯಾವುದೇ ಕಾರಣಕ್ಕೂ ಮುಂಬೈಗೆ ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದರು. ಆದರೆ ಇದೀಗ ದಿಢೀರ್ ಆಗಿ ಎಂಟಿಬಿ ವಿಶೇಷ ವಿಮಾನದ ಮೂಲಕ ಮುಂಬೈಗೆ ತೆರಳಿದ್ದಾರೆ.

    ಶನಿವಾರದ ಮನವೊಲಿಕೆಯಲ್ಲಿ ಎಂಟಿಬಿ ತಮ್ಮ ರಾಜೀನಾಮೆ ವಾಪಸ್ ಪಡೆಯುತ್ತೇನೆ. ಆದರೆ ಸ್ವಲ್ಪ ಸಮಯ ಬೇಕು ಎಂದು ಹೇಳಿದ್ದರು. ಸಿಎಂ ಅವರು ಕೂಡ ನಿನ್ನೆ ರಾತ್ರಿ ಕರೆ ಮಾಡಿ ಮಾತುಕತೆ ನಡೆಸಿದ್ದರು. ಹೀಗಾಗಿ ಎಂಟಿಬಿ ಅವರು ವಾಪಸ್ ಬರುತ್ತಾರೆ ಎಂದು ನಂಬಿದ್ದ ಸಿಎಂ ಅವರಿಗೆ ಈ ವಿಚಾರ ತಿಳಿದು ಆತಂಕ ಉಂಟಾಗಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ನಿನ್ನೆ ರಾತ್ರಿವರೆಗೂ ಎಂಟಿಬಿ ಅವರನ್ನು ಸಮಾಧಾನ ಮಾಡಿ ಬಂದಿದ್ದ ಸಿಎಂ, ಇಂದು ಎಂಟಿಬಿ ಮುಂಬೈ ಫ್ಲೈಟ್ ಹತ್ತಿದ್ದ ವಿಚಾರ ತಿಳಿದು ಶಾಕ್ ಆಗಿದ್ದಾರೆ. ನಿನ್ನೆಯಷ್ಟೇ ವಾಪಸ್ ಬರುವುದಾಗಿ ಹೇಳಿದ್ದ ಎಂಟಿಬಿ, ಇಂದು ಅತೃಪ್ತರ ಬಣ ಸೇರ್ಪಡೆ ಹಿನ್ನೆಲೆಯಲ್ಲಿ ಸುಮಾರು 15 ಗಂಟೆಗಳ ಕಾಲ ಡಿಕೆ ಶಿವಕುಮಾರ್ ಹಾಗು ಮಾಜಿ ಸಿಎಂ ಸಿದ್ದರಾಮಯ್ಯ ಮಾಡಿದ ಪ್ರಯತ್ನ ಈ ಮೂಲಕ ವ್ಯರ್ಥವಾಗಿದೆ.

    ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕದಲ್ಲಿ ಇದ್ದಂತೆಯೇ ಇಂದು ಮಾರ್ಗ ಮಧ್ಯದಲ್ಲಿ ವಾಹನ ಬದಲಿಸಿದ ಎಂಟಿಬಿ ನಾಗರಾಜ್, ಸತೀಶ್ ರೆಡ್ಡಿ ಅವರ ಕಾರಿನಲ್ಲಿ ಹೆಚ್‍ಎಎಲ್‍ಗೆ ಹೋಗಿ ಆರ್.ಆಶೋಕ್ ನೇತೃತ್ವದಲ್ಲಿ ವಿಶೇಷ ವಿಮಾನದಲ್ಲಿ ಮುಂಬೈಗೆ ಹಾರಿದ್ದಾರೆ.