Tag: Mubai

  • ಮದ್ವೆಗೆ ಬರೋ ಅತಿಥಿಗಳಿಗೆ ಸ್ಪೆಷಲ್ ಗಿಫ್ಟ್ ನೀಡ್ತಾರೆ ಪ್ರಿಯಾಂಕ

    ಮದ್ವೆಗೆ ಬರೋ ಅತಿಥಿಗಳಿಗೆ ಸ್ಪೆಷಲ್ ಗಿಫ್ಟ್ ನೀಡ್ತಾರೆ ಪ್ರಿಯಾಂಕ

    ಮುಂಬೈ: ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರ ಹಾಗೂ ಅಮೆರಿಕ ಗಾಯಕ ನಿಕ್ ಜೋನ್ಸ್ ಅವರ ಮದುವೆ ಸಿದ್ಧತೆ ಜೋರಾಗಿದೆ. ಈ ತಾರಾ ಜೋಡಿಯ ಮದುವೆಗೆ ಬರುವ ಅತಿಥಿಗಳಿಗೆ ವಿಶೇಷ ಗಿಫ್ಟ್ ಸಿಗಲಿದೆ.

    ಮದುವೆ ನಿಮಿತ್ತ ನಿಕ್ ಜೋನ್ಸ್ ಸಹೋದರ ಜೋ ಜೋನ್ಸ್ ಮತ್ತು ಆತನ ಗೆಳತಿ ಸೋಫಿ ಟರ್ನರ್ ಮುಂಬೈಗೆ ಬಂದಿದ್ದಾರೆ. ಈ ಇಬ್ಬರೂ ಸೇರಿ ವಿಶೇಷ ಉಡುಗೊರೆ ಆಯ್ಕೆ ಮಾಡಿದ್ದಾರಂತೆ. ಮದುವೆಗೆ ಆಗಮಿಸಲಿರುವ ಅತಿಥಿಗಳಿಗೆ ಬೆಳ್ಳಿ ನಾಣ್ಯ ನೀಡಲಾಗುತ್ತಿದ್ದು, ಇದನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ನಾಣ್ಯದ ಒಂದು ಬದಿಯಲ್ಲಿ ಇಂಗ್ಲಿಷ್ ವರ್ಣಮಾಲೆಯ ಎನ್‍ಪಿ ಎಂದು ಬರೆಯಲಾಗಿದೆ. ಮತ್ತೊಂದು ಮುಖದ ಮೇಲೆ ಲಕ್ಷ್ಮಿ ಹಾಗೂ ಗಣೇಶನ ಚಿತ್ರ ಬಿಡಿಸಲಾಗಿದೆ.

    ಮುಂಬೈನ ಪ್ರಿಯಾಂಕ ಮನೆಯಲ್ಲಿ ಈಗಾಗಲೇ ಮದುವೆಯ ಸಂಭ್ರಮ ಮನೆ ಮಾಡಿದೆ. ಉಮೈದ್ ಭವನದಲ್ಲಿ ಹಿಂದೂ ಸಂಪ್ರದಾಯದಂತೆ ಇಂದಿನಿಂದ ಮದುವೆ ಕಾರ್ಯಕ್ರಮ ಆರಂಭವಾಗಲಿವೆ. ಹೀಗಾಗಿ ಮನೆ ವಿದ್ಯುತ್ ದೀಪಾಲಂಕಾರದಿಂದ ಸಿಂಗಾರಗೊಂಡಿದ್ದು, ಸಂಭ್ರಮ ಮನೆ ಮಾಡಿದೆ. ಪ್ರಿಯಾಂಕ ನಿಕ್ ಜೋನ್ಸ್ ಡಿಸೆಂಬರ್ 2ರಂದು ಮದುವೆ ನಡೆಯಲಿದೆ.

    ಇತ್ತೀಚೆಗೆ ಬಾಲಿವುಡ್ ಜೋಡಿ ದೀಪಿಕಾ, ರಣವೀರ್ ಇಟಲಿಯಲ್ಲಿ ಮದುವೆಯಾಗಿದ್ದರು. ಅವರ ಮದುವೆ ಸಂಭ್ರಮದಲ್ಲಿ ಭಾಗವಹಿಸಿದ ಆತ್ಮೀಯರಿಗೆ ದೀಪ್‍ವೀರ್ ಜೋಡಿ ಬೆಳ್ಳಿ ಲೇಪಿತ ಫೋಟೋ ಫ್ರೇಮ್‍ನಲ್ಲಿ ಇಬ್ಬರ ಫೋಟೋ ಹಾಕಿ ಉಡುಗೊರೆ ನೀಡಿದ್ದರು. ಈ ಉಡುಗೊರೆಯ ಫೋಟೋ ಕ್ಲಿಕ್ಕಿಸಿ ಅನೇಕರು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು, ಖುಷಿ ಹಂಚಿಕೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಮೋದಿ ದೇಶದಲ್ಲಿ `ಮೌನಿ ಬಾಬಾ’, ವಿದೇಶದಲ್ಲಿ ಮಾತ್ರ ಮಾತಾಡ್ತಾರೆ : ಶಿವಸೇನೆ

    ಮೋದಿ ದೇಶದಲ್ಲಿ `ಮೌನಿ ಬಾಬಾ’, ವಿದೇಶದಲ್ಲಿ ಮಾತ್ರ ಮಾತಾಡ್ತಾರೆ : ಶಿವಸೇನೆ

    ಮುಂಬೈ: ಬಿಜೆಪಿ ಪಕ್ಷದ ಬಹುಕಾಲದ ಮಿತ್ರ ಪಕ್ಷವಾಗಿದ್ದ ಶಿವಸೇನೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಮೋದಿ ದೇಶದ ಸ್ಥಳೀಯ ವಿಷಯಗಳನ್ನು ವಿದೇಶಿದಲ್ಲಿ ನಿಂತು ಮಾತನಾಡುತ್ತಾರೆ. ಪ್ರಧಾನಿಗಳ ಈ ನಡೆ ಸೂಕ್ತವಲ್ಲ ಎಂದು ಕಿಡಿಕಾರಿದೆ.

    ಪ್ರಧಾನಿ ನರೇಂದ್ರ ಮೋದಿ ಅವರ ಇಂಗ್ಲೆಂಡ್ ಪ್ರವಾಸವನ್ನು ಟೀಕಿಸಿರುವ ಶಿವಸೇನೆ, ಬಹುಕೋಟಿ ಸಾಲ ಮಾಡಿ ಇಂಗ್ಲೆಂಡ್ ಗೆ ಪರಾರಿಯಾಗಿರುವ ವಿಜಯ್ ಮಲ್ಯ ಅಲ್ಲೇ ಇದ್ದರೂ ಪ್ರಧಾನಿಗಳು ಬರಿಗೈ ನಲ್ಲಿ ಭಾರತಕ್ಕೆ ವಾಪಸ್ ಆಗುತ್ತಿದ್ದಾರೆ ಅಂತಾ ವ್ಯಂಗ್ಯ ಮಾಡಿದೆ.

    ತನಗೆ ಕಾಂಗ್ರೆಸ್ ಅಥವಾ ಗಾಂಧಿ ಹೆಸರಿನ ಕುಟುಂಬದ ವಿರುದ್ಧ ಅಸಮಾಧಾನವಿದ್ದು, ಆದರೆ ದೇಶದ ವಿಷಯಗಳ ಕುರಿತು ವಿದೇಶದಲ್ಲಿ ಮಾತನಾಡುವುದು ಯಾರಿಗೂ ಲಾಭ ತಂದು ಕೊಡುವುದಿಲ್ಲ ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಹೇಳಿದೆ.

    ಇದೇ ವೇಳೆ ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸಲಹೆಯನ್ನು ಅನುಸರಿಸಬೇಕು ಎಂದು ತಿಳಿಸಿದೆ. ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದ ಮನಮೋಹನ್ ಸಿಂಗ್ ತಮ್ಮ ಆಡಳಿತ ಅವಧಿಯಲ್ಲಿ ಹೇಗೆ ತಮ್ಮನ್ನು ಮೌನಿ ಎಂದು ಟೀಕಿಸುತ್ತಿದ್ದು ಇಂದು ತಮಗೂ ಆನ್ವಯವಾಗುತ್ತದೆ ಎಂದು ಹೇಳಿದ್ದರು. ಈ ಹೇಳಿಕೆಯನ್ನು ಶೀವಸೇನೆ ತನ್ನ ಮುಖವಾಣಿ ಸಾಮ್ನಾ ಪತ್ರಿಕೆ ಸಂಪಾದಕೀಯದಲ್ಲಿ ಬರೆದುಕೊಂಡಿದೆ.

    ಇಂಗ್ಲೆಂಡ್ ಪ್ರವಾಸದ ವೇಳೆ ಪ್ರಧಾನಿ ಮೋದಿ ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳ ಕುರಿತು ಲಂಡನ್ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ ಭಾವುಕರಾಗಿದ್ದರು. ಅಲ್ಲದೇ ಕಳೆದ ಬಾರಿ ಜಪಾನ್ ಪ್ರವಾಸದ ವೇಳೆ ಸಭೆಯೊಂದರಲ್ಲಿ ಭ್ರಷ್ಟಾಚಾರದ ಕುರಿತು ಹೇಳಿಕೆ ನೀಡಿದ್ದರು. ಈ ಎರಡು ಘಟನೆಗಳನ್ನು ತನ್ನ ಸಂಪಾದಕೀಯದಲ್ಲಿ ಉಲ್ಲೇಖಿಸಿರುವ ಶಿವಶೇನೆ ವಿದೇಶದಲ್ಲಿ ಭಾರತ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿ ದೇಶದ ಹೆಸರಿಗೆ ಕೆಟ್ಟ ಅಭಿಪ್ರಾಯ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸಿದೆ.  ಇದನ್ನೂ ಓದಿ : ದೇಶದ ಮಹಿಳೆಯರ ಸುರಕ್ಷತೆ ಬಗ್ಗೆ ಮೋದಿ ಗಮನ ಹರಿಸಬೇಕು- ಐಎಂಎಫ್ ಮುಖ್ಯಸ್ಥೆ

    ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸದ್ಯ ಮಾತನಾಡಲು ಆರಂಭಿಸಿದ್ದಾರೆ. ಆದರೆ ಪ್ರಧಾನಿಗಳು ಮೌನಿಯಾಗಿದ್ದಾರೆ. ರಾಹುಲ್ ಗಾಂಧಿ ಮೋದಿ ಅವರನ್ನು ಮೌನವಾಗಿ ಮಾಡಲು 15 ನಿಮಿಷ ಸಮಯಾವಕಾಶ ಕೇಳಿರುವುದು ಪ್ರಧಾನಿ ಮೌನಿಯಾಗಿದ್ದರೆ ಎಂಬುವುದಕ್ಕೆ ಸೂಕ್ತ ಸಾಕ್ಷಿ ಎಂದು ಹೇಳಿದೆ.  ಇದನ್ನೂ ಓದಿ: ನಮಗೆ ದೇಶಭಕ್ತಿ ಬಗ್ಗೆ ಬೋಧನೆ ಮಾಡಬೇಡಿ ಎಂದು ಬಿಜೆಪಿ ವಿರುದ್ಧ ಹರಿಹಾಯ್ದ ಉದ್ಧವ್ ಠಾಕ್ರೆ