Tag: mudhol

  • ಜನಪದ ಕಲಾವಿದ, ಚಿತ್ರನಟ ಗುರುರಾಜ ಹೊಸಕೋಟೆ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರು

    ಜನಪದ ಕಲಾವಿದ, ಚಿತ್ರನಟ ಗುರುರಾಜ ಹೊಸಕೋಟೆ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರು

    ಬಾಗಲಕೋಟೆ: ಜನಪದ ಕಲಾವಿದ, ಚಿತ್ರನಟ ಗುರುರಾಜ ಹೊಸಕೋಟೆ (Gururaj Hosakote) ಅವರ ಕಾರು ಅಪಘಾತಕ್ಕೀಡಾದ ಘಟನೆ ಬಾಗಲಕೋಟೆ (Bagalkote) ಜಿಲ್ಲೆ ಮುಧೋಳ (Mudhol) ತಾಲೂಕಿನ ಸೋರಗಾವಿ ಬಳಿ ನಡೆದಿದೆ.

    ಎದುರು ಬಂದ ವಾಹನ ತಪ್ಪಿಸಲು ಹೋಗಿ ರಸ್ತೆ ಪಕ್ಕದಲ್ಲಿದ್ದ ಕಲ್ಲಿಗೆ ಕಾರು ಡಿಕ್ಕಿ ಹೊಡೆದಿದೆ. ಘಟನೆಯ ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಇದನ್ನೂ ಓದಿ: ಮೈಸೂರಲ್ಲಿ ಯುವದಸರಾಗೆ ಅದ್ಧೂರಿ ಚಾಲನೆ – ಶ್ರೇಯಾ ಘೋಷಾಲ್ ಹಾಡಿಗೆ ಹುಚ್ಚೆದ್ದು ಕುಣಿದ ಯುವಜನ

    ಇನ್ನು ಕಾರಿನಲ್ಲಿದ್ದ ಗುರುರಾಜ ಹೊಸಕೋಟೆ ಅವರು ಪ್ರಾಣಾಪಾದಿಂದ ಪಾರಾಗಿದ್ದು, ಯಾರಿಗೂ ಯಾವುದೇ ಗಾಯ ಹಾಗೂ ಪ್ರಾಣಹಾನಿ ಉಂಟಾಗಿಲ್ಲ. ಸಿಂಧನೂರಿನಿಂದ ಮಹಾಲಿಂಗಪುರಕ್ಕೆ ಹೊರಟಿದ್ದ ಸಂದರ್ಭ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ದೇವರಾಜ ಅರಸು ಸೇರಿ ಎಲ್ಲಾ ಸಿಎಂಗಳ ಮೇಲೂ ಆಪಾದನೆ ಬಂದಿತ್ತು, ಸಿದ್ದರಾಮಯ್ಯನವರೇ ದೃತಿಗೆಡಬೇಡಿ: ಪಿಜಿಆರ್ ಸಿಂಧ್ಯಾ

    ಗುರುರಾಜ ಹೊಸಕೋಟೆ ಕರ್ನಾಟಕ ಜನಪದ ಗಾಯನ, ರಂಗಭೂಮಿ ಮತ್ತು ಸಿನಿಮಾ ಲೋಕದಲ್ಲಿ ಮಹತ್ವದ ಪ್ರತಿಭೆ. ಜನಪದ ಶೈಲಿಯ ಸಮೂಹ ಗೀತೆಗಳನ್ನು ರಚಿಸಿ ಮಾಡುತ್ತಿದ್ದ ನೃತ್ಯ, ಹಾಡಿನ ಸಂಯೋಜನೆ, ಜನಪದ ಶೈಲಿಯ ಹಾಡುಗಳ ರಚನೆ ಮತ್ತು ಹಾಡುಗಾರಿಕೆಯಿಂದ ಅಪಾರ ಪ್ರಸಿದ್ಧಿ ಗಳಿಸಿದ್ದಾರೆ. ಇದನ್ನೂ ಓದಿ: ಮುಂದಿನ ಸಿಎಂ `ಸತೀಶ್ ಜಾರಕಿಹೊಳಿ’ – ಸಚಿವರ ಸಮ್ಮುಖದಲ್ಲೇ ಬೆಂಬಲಿಗನ ಘೋಷಣೆ!

  • ಪೆಟ್ರೋಲ್ ಸುರಿದು ಶೆಡ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು – ತಾಯಿ, ಮಗಳು ಸಜೀವ ದಹನ

    ಪೆಟ್ರೋಲ್ ಸುರಿದು ಶೆಡ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು – ತಾಯಿ, ಮಗಳು ಸಜೀವ ದಹನ

    – ಮೂವರಿಗೆ ಗಾಯ

    ಬಾಗಲಕೋಟೆ: ಸಿಂಟೆಕ್ಸ್ ಟ್ಯಾಂಕ್‌ನಲ್ಲಿ ಪೆಟ್ರೋಲ್ (Petrol) ತುಂಬಿಸಿ ಶೆಡ್ (Shed) ಮೇಲೆ ಸುರಿದು ಬೆಂಕಿ ಹಚ್ಚಿದ ಪರಿಣಾಮ ತಾಯಿ-ಮಗಳು ಸಜೀವ ದಹನವಾಗಿದ್ದು, ಮೂವರು ಗಂಭೀರ ಗಾಯಗೊಂಡ ಘಟನೆ ಬಾಗಲಕೋಟೆ (Bagalkote) ಜಿಲ್ಲೆ ಮುಧೋಳ ತಾಲೂಕಿನ ಬೆಳಗಲಿ ಗ್ರಾಮದಲ್ಲಿ ನಡೆದಿದೆ.

    ಜೈಬಾನ್ (55), ಶಬಾನ್ (25) ಮೃತ ದುರ್ದೈವಿಗಳು. ಬೆಂಕಿ ಹಚ್ಚಿದ ಪರಿಣಾಮ ತಾಯಿ-ಮಗಳು ಸಜೀವ ದಹನವಾಗಿದ್ದುವ, ಶೆಡ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ದಸ್ತಗೀರಸಾಬ್, ಸುಬಾನ್ ಹಾಗೂ ಸಿದ್ದಿಕಿ ಎಂಬವರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಸ್ಥಳಕ್ಕೆ ಮಹಾಲಿಂಗಪುರ ಪೊಲೀಸರು ಭೇಟಿ ನೀಡಿದ್ದು, ಶ್ವಾನ ದಳ ಮೂಲಕ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಬಾಗಲಕೋಟೆ ಎಸ್‌ಪಿ ಅಮರನಾಥ ರೆಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

  • ದುರ್ಗಾದೇವಿಗೆ ಭಂಡಾರದ ನೈವೇದ್ಯ – ಮುಧೋಳ ಲೋಕಾಪುರದಲ್ಲಿ 7 ವರ್ಷಕ್ಕೊಮ್ಮೆ ನಡೆಯುತ್ತದೆ ವಿಶಿಷ್ಟ ಜಾತ್ರೆ

    ದುರ್ಗಾದೇವಿಗೆ ಭಂಡಾರದ ನೈವೇದ್ಯ – ಮುಧೋಳ ಲೋಕಾಪುರದಲ್ಲಿ 7 ವರ್ಷಕ್ಕೊಮ್ಮೆ ನಡೆಯುತ್ತದೆ ವಿಶಿಷ್ಟ ಜಾತ್ರೆ

    ಬಾಗಲಕೋಟೆ: ಮುಧೋಳ (Mudhol) ತಾಲೂಕಿನ ಲೋಕಾಪುರದ ದುರ್ಗಾದೇವಿ ದೇವಸ್ಥಾನದ (Lokapur Durga Devi Temple) ಜಾತ್ರೆ ಒಂದು ವಿಶಿಷ್ಟ ಜಾತ್ರೆ ಎಂದು ಕರೆಸಿಕೊಳ್ಳುತ್ತದೆ. ಬಹುತೇಕ ಊರುಗಳಲ್ಲಿ ಜಾತ್ರೆಗಳು ವರ್ಷಕ್ಕೊಮ್ಮೆ ನಡೆದರೆ ಈ ದುರ್ಗಾದೇವಿ ಜಾತ್ರೆ ಏಳು ವರ್ಷಕ್ಕೊಮ್ಮೆ ನಡೆಯುತ್ತದೆ.

    ಜೂನ್ 14 ರಿಂದ ಆರಂಭವಾಗಿರುವ ಈ ಜಾತ್ರೆ 18 ರವರೆಗೆ ಸಂಭ್ರಮ ಸಡಗರದಿಂದ ನಡೆಯುತ್ತೆ. ಭಂಡಾರ ತೂರಿ ಹರಕೆ ತಿರುಸುವುದೇ ಈ ಜಾತ್ರೆಯ ವಿಶೇಷ. ಇದನ್ನೂ ಓದಿ: ರಾಜ್ಯದ ವಾಹನ ಸವಾರರಿಗೆ ಶಾಕ್‌; ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ

    ಈ ಲೋಕಾಪುರ ಪಟ್ಟಣ ದುರ್ಗಾಮಾತೆ ನೆಲೆಸಿರುವ ಶಕ್ತಿ ಪರಂಪರೆಯ ಕೇಂದ್ರವಾಗಿದೆ. ಭಕ್ತಾದಿಗಳ ಆರಾಧ್ಯ ದೇವತೆಯಾಗಿರುವ ದುರ್ಗಾದೇವಿ, ಭಕ್ತರ ಇಷ್ಟರ್ಥಗಳನ್ನು ಈಡೇರಿಸುತ್ತಾಳೆಂಬ ನಂಬಿಕೆಯಿದೆ. ಹೀಗಾಗಿ ಏಳು ವರ್ಷಕ್ಕೊಮ್ಮೆ ನಡೆಯುವ ಈ ದೇವಿ ಜಾತ್ರಾಮಹೋತ್ಸವಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸಿ ದೇವಿ ಕೃಪೆಗೆ ಪಾತ್ರರಾಗುತ್ತಾರೆ.ಈ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ಮಹಾರಥೋತ್ಸವ ಹಾಗೂ ಪಲ್ಲಕ್ಕಿ ಉತ್ಸವ ನಡೆಯಲಿದೆ.

    ಜಾತ್ರಾ ಮಹೋತ್ಸವದ ಅಂಗವಾಗಿ ಚಕ್ಕಡಿ ಸ್ಪರ್ಧೆ, ಒಂದು ಕುದುರೆ, ಒಂದು ಎತ್ತಿನ ಓಟ ಸ್ಪರ್ಧೆ, ನಿಮಿಷದ ಚಕ್ಕಡಿ ಸ್ಪರ್ಧೆ, ಟಗರಿನ ಕಾಳಗ ಸೇರಿದಂತೆ ಅನೇಕ ಹಳ್ಳಿ ಸೊಗಡಿನ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಜಾತ್ರೆಯ ಕೊನೆಯದಿನ ಸಾಯಂಕಾಲ 5 ಗಂಟೆಗೆ ದೇವಿಯ ಪಲ್ಲಕ್ಕಿ ಉತ್ಸವ ಹಾಗೂ ಭಂಡಾರ ಓಕುಳಿ ಸಂಭ್ರಮ ನಡೆಯಲಿದೆ.

    ದೇವಿಯ ಜಾತ್ರೆಗೆ ಈಗಾಗಲೇ ನೂತನ ರಥ ಸಿದ್ದವಾಗಿದ್ದು ಮತ್ತು ತಮಿಳುನಾಡಿನ ಕುಂಭಕೋಣಂನಿಂದ ಕಲಶವನ್ನು ತರಲಾಗಿದೆ. ಈ ದೇವಿ ರಥ ಲೋಕಾಪುರದ ದೇಸಾಯಿ ಅವರ ವಾಡೆದಿಂದ ಮಾರ್ಗವಾಗಿ ಶ್ರೀ ದುರ್ಗಾದೇವಿ ಗುಡಿಯವರೆಗೆ ಸಕಲ ವಾದ್ಯ ಮೇಳಗಳೊಂದಿಗೆ, ಕುದುರೆ, ಆನೆಗಳ ಮೂಲಕ ಭವ್ಯ ಮೆರವಣಿಗೆ ಜರುಗಲಿದೆ.

    ಜಾತ್ರೆಯ ದಿನ ಸುತ್ತಮುತ್ತಲಿನ ಹಳ್ಳಿಯ ಗೌಡರು ಮನೆತನದವರ ಆರತಿ, ನೈವೇದ್ಯ, ವಿಶೇಷವಾಗಿ ದುರ್ಗಾದೇವಿಯ ತವರೂರು ನಾಗಣಾಪುರ ಗ್ರಾಮದ ದೈವ ಮಂಡಳಿಯಿಂದ ಸೀರೆ, ಖಣ, ಬಳೆ, ದೇವಿಗೆ ನೈವೇದ್ಯ ನಡೆಯಲಿದೆ.

    ಲೋಕಾಪುರ ದೇವಿಯ ಶಕ್ತಿ ಪರಂಪರೆಯ ಕೇಂದ್ರವಾಗಿರುವುದರಿಂದ ಇಲ್ಲಿಯೇ ದುರ್ಗಾಮಾತೆ ನೆಲೆಸಿದ್ದಾಳೆ ಎಂಬ ನಂಬಿಕೆಯಿಂದ‌ ಈ ಭಾಗದ ಜನರು ದುರ್ಗಾದೇವಿ ಜಾತ್ರೆಯನ್ನು ಅದ್ಧೂರಿಯಿಂದ ಆಚರಿಸುತ್ತಾ ಬಂದಿದ್ದಾರೆ.

  • ಕ್ರೇಜಿಸ್ಟಾರ್ ಪುತ್ರನ ಚಿತ್ರಕ್ಕೆ ಸಂಜನಾ ಆನಂದ್ ನಾಯಕಿ

    ಕ್ರೇಜಿಸ್ಟಾರ್ ಪುತ್ರನ ಚಿತ್ರಕ್ಕೆ ಸಂಜನಾ ಆನಂದ್ ನಾಯಕಿ

    ಹಜ ಅಭಿನಯ, ಸರಳ‌ ಸೌಂದರ್ಯದಿಂದಲೇ ಸ್ಯಾಂಡಲ್ ವುಡ್ ನ್ಯೂ ಕ್ರಶ್ ಎನಿಸಿಕೊಂಡಿರುವ ಸಂಜನಾ ಆನಂದ್ (Sanjana Anand) ಈಗ ಮುಧೋಳ್ (Mudhol) ಬಳಗ ಸೇರಿಕೊಂಡಿದ್ದಾರೆ.  ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪರಿಚಯವಾದ ಸಂಜನಾ ಕಡಿಮೆ‌ ಅವಧಿಯಲ್ಲಿ ಸ್ಟಾರ್ ಹೀರೋ ಜೊತೆ ತೆರೆಹಂಚಿಕೊಳ್ಳುವ ಅವಕಾಶಗಿಟ್ಟಿಸಿಕೊಂಡರು. ದುನಿಯಾ ವಿಜಯ್ ಸಾರಥ್ಯದ‌ ಸಲಗ‌ ಮೂಲಕ ಸೆನ್ಸೇಷನ್ ಸೃಷ್ಟಿಸಿದ್ದ ಈ ಬ್ಯೂಟಿ ಟಾಲಿವುಡ್ ಕೂಡ ಪ್ರವೇಶಿಸಿದ್ದಾರೆ. ಕನ್ನಡದ ಜೊತೆಗೆ ತೆಲುಗು ಅಂಗಳದಲ್ಲಿಯೂ ಬ್ಯುಸಿಯಾಗಿರುವ ಸಂಜನಾ ಆನಂದ್ ಈಗ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಜೊತೆ ರೋಮ್ಯಾನ್ಸ್ ಮಾಡಲು ಒಕೆ ಎಂದಿದ್ದಾರೆ.

    ‘ತ್ರಿವಿಕ್ರಮ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಬಂದ ಕ್ರೇಜಿಸ್ಟಾರ್‌ ರವಿಚಂದ್ರನ್‌ ಪುತ್ರ ವಿಕ್ರಮ್‌ (Vikram Ravichandran) ಈಗ ಎರಡನೇ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಮುಧೋಳ್ ಮೂಲಕ ಸಖತ್‌ ಮಾಸ್ ಅವತಾರ ತಾಳಿರುವ ವಿಕ್ಕಿಗೆ ನಾಯಕಿಯಾಗಿ ರಾಯಲ್ ಹುಡುಗಿ ನಟಿಸುತ್ತಿದ್ದಾರೆ.‌ಈ ಚಿತ್ರ ಸೆಟ್ಟೇರಿದಾಗಿನಿಂದಲೂ ಸಂಜನಾ ನಾಯಕಿ ಎಂಬ ವಿಷ್ಯ ಹರಿದಾಡಿತ್ತು. ಆದ್ರೆ ಚಿತ್ರತಂಡ ಮಾತ್ರ ಗುಟ್ಟುಬಿಟ್ಟುಕೊಟ್ಟಿರಲಿಲ್ಲ.  ಸಲಗ ಸುಂದರಿ ಹುಟ್ಟುಹಬ್ಬದ ವಿಶೇಷವಾಗಿ‌‌ ಇಂದು ಚಿತ್ರತಂಡ ಸಮಾಚಾರವನ್ನು ಅಧಿಕೃತಗೊಳಿಸಿದೆ.

    ವಿಕ್ರಮ್ ಮುಧೋಳ್ ಸಿನಿಮಾದ ನಾಯಕಿಯಾಗಿರುವ ಸಂಜನಾ ಸ್ಪೆಷಲ್ ರೋಲ್ ಪ್ಲೇ ಮಾಡಿದ್ದಾರೆ.‌ ಇಲ್ಲಿವರೆಗೂ ಅವರು ನಟಿಸಿದ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಂದಹಾಗೇ ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ರಾಜನ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

    ಸಂಜನಾ ಆನಂದ್ ಮುಧೋಳ್ ಸಿನಿಮಾ ಜೊತೆಗೆ ದಿನಕರ್ ತೂಗುದೀಪ ನಿರ್ದೇಶನದ ರಾಯಲ್ ಹಾಗೂ ತೆಲುಗಿನ ಫುಲ್ ಬಾಟೆಲ್ ಎಂಬ ಚಿತ್ರಗಳ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಧನ್ವೀರ್ ಗೌಡ ನಟಿಸುತ್ತಿರುವ ಹಯಗ್ರೀವ್ ಗೂ ನಾಯಕಿಯಾಗಿರುವ ರಾಯಲ್ ಕ್ವೀನ್ ಸದ್ಯ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ.

  • ಚಲಿಸುತ್ತಿದ್ದ ಬಸ್‍ನಲ್ಲಿ ಕುಡುಕರ ಗಲಾಟೆ- ಓರ್ವನನ್ನು ತಳ್ಳಿ ಹತ್ಯೆಗೈದ

    ಚಲಿಸುತ್ತಿದ್ದ ಬಸ್‍ನಲ್ಲಿ ಕುಡುಕರ ಗಲಾಟೆ- ಓರ್ವನನ್ನು ತಳ್ಳಿ ಹತ್ಯೆಗೈದ

    ಬಾಗಲಕೋಟೆ: ಚಲಿಸುತ್ತಿದ್ದ ಬಸ್‍ನಲ್ಲಿ ಇಬ್ಬರು ಕುಡುಕರ ನಡುವೆ ನಡೆದ ಗಲಾಟೆಯಲ್ಲಿ ಓರ್ವ ಕೆಳಗೆ ಬಿದ್ದು ಸಾವಿಗೀಡಾದ ಘಟನೆ ಮುಧೋಳ (Mudhol)-ಕುಳಲಿ ರಸ್ತೆಯಲ್ಲಿ ನಡೆದಿದೆ.

    ಮುಧೋಳದ ಸೋರಗಾವಿ ಗ್ರಾಮದ ಪ್ರಹ್ಲಾದ್ ಮುರಿಗೆಪ್ಪ ಮಾದರ (38) ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ. ಮುಧೋಳ ಮೂಲಕ ಬನಹಟ್ಟಿಗೆ ಬಸ್ ಹೊರಟಿತ್ತು. ಈ ವೇಳೆ ಬಸ್‍ನಲ್ಲಿ ಇಬ್ಬರು ಕುಡುಕರು ಗಲಾಟೆ ಶುರು ಮಾಡಿದ್ದಾರೆ. ಬಳಿಕ ಓರ್ವ ಕುಡುಕ ಮತ್ತೋರ್ವನನ್ನು ಬಸ್ಸಿನಿಂದ ಹೊರಗೆ ತಳ್ಳಿದ್ದಾನೆ. ಈ ವೇಳೆ ಚರಂಡಿಗೆ ಬಿದ್ದ ಪ್ರಹ್ಲಾದ್ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಇದನ್ನೂ ಓದಿ: ಶ್ರೀಲಂಕಾದಿಂದ ತಂದು ಅಕ್ರಮ ಸಾಗಾಟ – ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1 ಕೆಜಿ ಚಿನ್ನ ಸೀಜ್‌

    ಸ್ಥಳಕ್ಕೆ ಮುಧೋಳ ಪೊಲೀಸರ (Police )ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಜೆಸಿಬಿ ಬಳಸಿ ಶವವನ್ನು ಹೊರಗೆ ತೆಗೆದಿದ್ದಾರೆ. ಆರೋಪಿ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದನ್ನೂ ಓದಿ: TMC ಪ್ರಭಾವಿ ಶೇಖ್ ಷಹಜಹಾನ್ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ

  • ಅಯೋಧ್ಯೆ ರಾಮಮಂದಿರದ ಮಂಡಲರಾಧನೆಗೆ ಬಾಗಲಕೋಟೆ ಅರ್ಚಕ ಆಯ್ಕೆ

    ಅಯೋಧ್ಯೆ ರಾಮಮಂದಿರದ ಮಂಡಲರಾಧನೆಗೆ ಬಾಗಲಕೋಟೆ ಅರ್ಚಕ ಆಯ್ಕೆ

    ಬಾಗಲಕೋಟೆ: ಅಯೋಧ್ಯೆ (Ayodhya) ರಾಮಮಂದಿರ (Rama Mandir) ಮಂಡಲರಾಧನೆ ಪೂಜೆಗೆ ಜಿಲ್ಲೆಯ ಮುಧೋಳ (Mudhol)  ನಗರದ ಅರ್ಚಕರನ್ನು ಆಯ್ಕೆ ಮಾಡಲಾಗಿದೆ.

    ಮೂಲತಃ ಮುಧೋಳ ತಾಲೂಕಿನ ಮಾಚಕನೂರು ನಿವಾಸಿಯಾದ ಗುರುನಾಥ ಜೋಷಿ (Gurunath Joshi) ಅವರು ರಾಮಮಂದಿರದ ಮಂಡಲರಾಧನೆ ಆಯ್ಕೆಯಾಗಿದ್ದಾರೆ. ಸದ್ಯ ಮೂಧೋಳ ನಗರದಲ್ಲಿ ವಾಸವಿದ್ದಾರೆ. ಇವರು ಮುರಗೋಡ ಚಿದಂಬರ ವೇದ ಸಂಸ್ಕೃತ ಪಾಠಶಾಲೆಯಲ್ಲಿ ಅಧ್ಯಯನ ಮಾಡಿದ್ದು, ಶುಕ್ಲ ಯಜುರ್ವೇದ ಅಧ್ಯಯನವನ್ನು ಮಾಡಿದ್ದಾರೆ. ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಗಳ ಮೂಲಕ ಜೋಷಿಯವರು ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಪಲ್ಸ್ ಪೋಲಿಯೋ ಯಾವಾಗ? – ಗೊಂದಲಕ್ಕೆ ಒಳಗಾಗಿದ್ದ ಪೋಷಕರಿಗೆ ಗುಡ್ ನ್ಯೂಸ್

    ಜೋಷಿಯವರು ಪ್ರಸ್ತುತ ಮುಧೋಳ ನಗರದಲ್ಲಿ ಸದ್ಗುರು ಶ್ರೀ ಚಿದಂಬರ ವೈದಿಕ ಜ್ಯೋತಿಷ್ಯಾಲಯವನ್ನು ನಡೆಸುತ್ತಿದ್ದಾರೆ. ಮೂಲತಃ ಅರ್ಚಕ ವೃತ್ತಿ ಕುಟುಂಬದ ಹಿನ್ನೆಲೆ ಹೊಂದಿರುವ ಇವರು ಈ ಹಿಂದೆ ನಗರದ ಸಾಯಿ ಬಾಬಾ ದೇವಸ್ಥಾನದಲ್ಲಿ ಅರ್ಚಕರಾಗಿದ್ದರು. ಇದನ್ನೂ ಓದಿ: ನಿಮಗೆ ಕೊಟ್ಟ ಕೆಲಸ ಮಾತ್ರ ಪೂರ್ಣ ಮಾಡಿ – ಟಾರ್ಗೆಟ್‌ 28 ಗೆಲ್ಲಲು ಶಾ ಕ್ಲಾಸ್‌

    ಅಯೋಧ್ಯೆ ರಾಮಮಂದಿರದಲ್ಲಿ 48 ದಿನಗಳ ಕಾಲ ಮಂಡಲಾರಾಧನೆ ನಡೆಯಲಿದೆ. ಇದೇ ಫೆ.16 ಮತ್ತು 16 ರಂದು ನಡೆಯುವ ಎರಡು ದಿನಗಳ ಮಂಡಲಾರಾಧನೆ ಪೂಜೆಯಲ್ಲಿ ಗುರುನಾಥ ಜೋಷಿಯವರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ:  ಕರೆಮ್ಮ ನಾಯಕ್ ಪಿ.ಎಗಳ ಮೇಲೆ ಜಾತಿ ನಿಂದನೆ ಕೇಸ್ – ರೊಚ್ಚಿಗೆದ್ದ ಶಾಸಕಿಯಿಂದ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ

    ಈ ಕುರಿತು ಮಾತನಾಡಿದ ಅವರು, ಅಯೋಧ್ಯೆ ರಾಮಮಂದಿರ ಮಂಡಲಾರಾಧನೆಗೆ ನನ್ನನ್ನು ಆಯ್ಕೆ ಮಾಡಿದ್ದು ನಮ್ಮ ಪೂರ್ವಜರು ಮಾಡಿದ ಪುಣ್ಯ. ಇಂತಹ ಅವಕಾಶ ಸಿಕ್ಕಿದ್ದು ಎಂದು ಮರೆಯಲಾಗದು. ರಾಮದೇವರು ಎಲ್ಲರಿಗೂ ಒಳಿತನ್ನು ಮಾಡಲಿ ಎಂದು ಗುರುನಾಥ ಜೋಷಿಯವರು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸುಮಲತಾಗೆ ಟಿಕೆಟ್ ನೀಡಿದ್ರೆ ಮಂಡ್ಯ ಗೆಲುವು ಸುಲಭ – ಅಮಿತ್ ಶಾ ಎದುರು ಬಿಜೆಪಿ ನಾಯಕರ ಬ್ಯಾಟಿಂಗ್

  • ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರನ ಸಿನಿಮಾಗೆ ಸಂಜನಾ ಆನಂದ್ ನಾಯಕಿ?

    ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರನ ಸಿನಿಮಾಗೆ ಸಂಜನಾ ಆನಂದ್ ನಾಯಕಿ?

    ಮೊನ್ನೆಯಷ್ಟೇ ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ‘ಮುಧೋಳ್’ (Mudhol) ಸಿನಿಮಾಗೆ ಮುಹೂರ್ತ ನಡೆದಿದೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಶೂಟಿಂಗ್ ಕೂಡ ಶುರುವಾಗಿದೆ. ರವಿಚಂದ್ರನ್ ಪುತ್ರ ವಿಕ್ರಮ್ (Vikram Ravichandran) ಗೆ ನಾಯಕಿ ಯಾರಾಗಲಿದ್ದಾರೆ ಎನ್ನುವ ಕುತೂಹಲ ಮೂಡಿತ್ತು. ಬಲ್ಲ ಮೂಲಗಳ ಪ್ರಕಾರ ಸಂಜನಾ ಆನಂದ್ (Sanjana Anand) ಈ ಸಿನಿಮಾಗೆ ನಾಯಕಿ ಎಂದು ಹೇಳಲಾಗುತ್ತಿದೆ. ಅಧಿಕೃತವಾಗಿ ಚಿತ್ರತಂಡ ಮಾಹಿತಿ ನೀಡದೇ ಇದ್ದರೂ, ಸಂಜನಾ ಅಂತಿಮ ಎನ್ನುವ ಮಾತು ಕೇಳಿ ಬರುತ್ತಿದೆ.

    ದುನಿಯಾ ವಿಜಯ್ ನಟನೆಯ ಸಲಗ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿರುವ ಸಂಜನಾ ಆನಂದ್, ಕೆಮಿಸ್ಟ್ರಿ ಅಫ್ ಕರಿಯಪ್ಪ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಪ್ರವೇಶ ಮಾಡಿದವರು. ಕೇವಲ ಕನ್ನಡದಲ್ಲಿ ಮಾತ್ರವಲ್ಲ, ತೆಲುಗು ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ. ಇದೀಗ ಮುಧೋಳ್ ಚಿತ್ರಕ್ಕೂ ಆಯ್ಕೆಯಾಗಿದ್ದಾರೆ ಎನ್ನುವ ಮಾಹಿತಿ ಇದೆ. ಸದ್ಯದಲ್ಲೇ ಈ ಕುರಿತು ಮಾಹಿತಿ ಹೊರಬೀಳಬಹುದು.

    ಶೂಟಿಂಗ್ ವೇಳೆ ಅವಘಡ

    ಕನ್ನಡದ ಹೆಸರಾಂತ ಸಾಹಸ ನಿರ್ದೇಶಕ ರವಿವರ್ಮ ಪೆಟ್ಟು ಮಾಡಿಕೊಂಡಿದ್ದಾರೆ. ವಿಕ್ರಮ್ ರವಿಚಂದ್ರನ್ ನಟನೆಯ ಮುಧೋಳ್ ಸಿನಿಮಾದ ಶೂಟಿಂಗ್ ವೇಳೆ ಈ ಘಟನೆ ನಡೆದಿದ್ದು, ಸಾಹಸ ದೃಶ್ಯಕ್ಕಾಗಿ ಕಟ್ಟಿದ ರೋಪ್ ಹರಿದು ಪೆಟ್ಟು ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ:ಮಗಳ ಭವಿಷ್ಯಕ್ಕಾಗಿ ದೇಶ ಬಿಡಲು ಸಿದ್ಧ ಎಂದ ಪ್ರಿಯಾಂಕಾ ಚೋಪ್ರಾ

    ವಿಕ್ರಮ್ ರವಿಚಂದ್ರನ್ ಮುಖ್ಯಭೂಮಿಕೆಯಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಸಾಕಷ್ಟು ಸಾಹಸ ಸನ್ನಿವೇಶಗಳನ್ನು ಚಿತ್ರಕ್ಕಾಗಿ ಕಂಪೋಸ್ ಮಾಡಲಾಗಿದೆಯಂತೆ. ಸಾಮಾನ್ಯವಾಗಿ ಕಷ್ಟದ ಸ್ಟಂಟ್ ಗಳನ್ನೇ ಕಂಪೋಸ್ ಮಾಡುವ ರವಿವರ್ಮ, ಈ ಸಿನಿಮಾದಲ್ಲೂ ಅಂಥದ್ದೊಂದು ದೃಶ್ಯವನ್ನು ಕಂಪೋಸ್ ಮಾಡಿದ್ದರಂತೆ. ಈ ದೃಶ್ಯವನ್ನು ಚಿತ್ರೀಕರಿಸುವಾಗ ಅವರಿಗೆ ಗಾಯವಾಗಿದೆ.

    ಆತಂಕ ಪಡುವಂತಹ ಘಟನೆ ಅದಲ್ಲವಾದರೂ, ರವಿವರ್ಮ ಪದೇ ಪದೇ ಇಂತಹ ಘಟನೆಗಳಿಗೆ ಸಾಕ್ಷಿ ಆಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಮಾಸ್ತಿಗುಡಿ ಸಿನಿಮಾದಲ್ಲೂ ದುರ್ಘಟನೆ ನಡೆದಿತ್ತು. ಮೊನ್ನೆಯಷ್ಟೇ ಜೋಗಿ ಪ್ರೇಮ್ ನಿರ್ದೇಶನ ಕೇಡಿ ಸಿನಿಮಾದಲ್ಲೂ ನಟರೊಬ್ಬರು ಗಾಯ ಮಾಡಿಕೊಂಡಿದ್ದರು. ಈ ಎರಡು ಚಿತ್ರಗಳಿಗೂ ಇವರೇ ಸಾಹಸ ನಿರ್ದೇಶಕರು.

    ಮುಧೋಳ್ ಸಿನಿಮಾ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಶೂಟಿಂಗ್ ನಡೆಯುತ್ತಿದ್ದು, ಪ್ರಧಾನ ಸಾಹಸಮಯ ಸನ್ನಿವೇಶಗಳನ್ನು ನಿರ್ದೇಶಕರು ಸೆರೆ ಹಿಡಿಯುತ್ತಿದ್ದಾರೆ. ಇದೊಂದು ಆಕ್ಷನ್ ಸಿನಿಮಾವಾಗಿದ್ದು, ಕಳೆದ ಒಂದು ವಾರದಿಂದ ಚಿತ್ರೀಕರಣ ನಡೆಯುತ್ತಿದೆ.

  • ಶೂಟಿಂಗ್ ವೇಳೆ ಸಾಹಸ ನಿರ್ದೇಶಕ ರವಿವರ್ಮಗೆ ಗಾಯ

    ಶೂಟಿಂಗ್ ವೇಳೆ ಸಾಹಸ ನಿರ್ದೇಶಕ ರವಿವರ್ಮಗೆ ಗಾಯ

    ನ್ನಡದ ಹೆಸರಾಂತ ಸಾಹಸ ನಿರ್ದೇಶಕ ರವಿವರ್ಮ (Ravi Varma) ಪೆಟ್ಟು ಮಾಡಿಕೊಂಡಿದ್ದಾರೆ. ವಿಕ್ರಮ್ ರವಿಚಂದ್ರನ್ ನಟನೆಯ ಮುಧೋಳ್ (Mudhol) ಸಿನಿಮಾದ ಶೂಟಿಂಗ್ ವೇಳೆ ಈ ಘಟನೆ ನಡೆದಿದ್ದು, ಸಾಹಸ ದೃಶ್ಯಕ್ಕಾಗಿ ಕಟ್ಟಿದ ರೋಪ್ ಹರಿದು ಪೆಟ್ಟು ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ವಿಕ್ರಮ್ ರವಿಚಂದ್ರನ್ (Vikram Ravichandran) ಮುಖ್ಯಭೂಮಿಕೆಯಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಸಾಕಷ್ಟು ಸಾಹಸ ಸನ್ನಿವೇಶಗಳನ್ನು ಚಿತ್ರಕ್ಕಾಗಿ ಕಂಪೋಸ್ ಮಾಡಲಾಗಿದೆಯಂತೆ. ಸಾಮಾನ್ಯವಾಗಿ ಕಷ್ಟದ ಸ್ಟಂಟ್ ಗಳನ್ನೇ ಕಂಪೋಸ್ ಮಾಡುವ ರವಿವರ್ಮ, ಈ ಸಿನಿಮಾದಲ್ಲೂ ಅಂಥದ್ದೊಂದು ದೃಶ್ಯವನ್ನು ಕಂಪೋಸ್ ಮಾಡಿದ್ದರಂತೆ. ಈ ದೃಶ್ಯವನ್ನು ಚಿತ್ರೀಕರಿಸುವಾಗ ಅವರಿಗೆ ಗಾಯವಾಗಿದೆ.

    ಆತಂಕ ಪಡುವಂತಹ ಘಟನೆ ಅದಲ್ಲವಾದರೂ, ರವಿವರ್ಮ ಪದೇ ಪದೇ ಇಂತಹ ಘಟನೆಗಳಿಗೆ ಸಾಕ್ಷಿ ಆಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಮಾಸ್ತಿಗುಡಿ ಸಿನಿಮಾದಲ್ಲೂ ದುರ್ಘಟನೆ ನಡೆದಿತ್ತು. ಮೊನ್ನೆಯಷ್ಟೇ ಜೋಗಿ ಪ್ರೇಮ್ ನಿರ್ದೇಶನ ಕೇಡಿ ಸಿನಿಮಾದಲ್ಲೂ ನಟರೊಬ್ಬರು ಗಾಯ (Injury) ಮಾಡಿಕೊಂಡಿದ್ದರು. ಈ ಎರಡು ಚಿತ್ರಗಳಿಗೂ ಇವರೇ ಸಾಹಸ ನಿರ್ದೇಶಕರು. ಇದನ್ನೂ ಓದಿ:ಕಸ್ಟಡಿಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆದ ನಾಗ ಚೈತನ್ಯ

    ಮುಧೋಳ್ ಸಿನಿಮಾ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಶೂಟಿಂಗ್ ನಡೆಯುತ್ತಿದ್ದು, ಪ್ರಧಾನ ಸಾಹಸಮಯ ಸನ್ನಿವೇಶಗಳನ್ನು ನಿರ್ದೇಶಕರು ಸೆರೆ ಹಿಡಿಯುತ್ತಿದ್ದಾರೆ. ಇದೊಂದು ಆಕ್ಷನ್ ಸಿನಿಮಾವಾಗಿದ್ದು, ಕಳೆದ ಒಂದು ವಾರದಿಂದ ಚಿತ್ರೀಕರಣ ನಡೆಯುತ್ತಿದೆ.

  • ಆಶಾ ಕಾರ್ಯಕರ್ತೆಯ ಎದೆ, ಹೊಟ್ಟೆಗೆ ಒದ್ದು ಹಲ್ಲೆಗೈದ ಪುಂಡ

    ಆಶಾ ಕಾರ್ಯಕರ್ತೆಯ ಎದೆ, ಹೊಟ್ಟೆಗೆ ಒದ್ದು ಹಲ್ಲೆಗೈದ ಪುಂಡ

    ಬಾಗಲಕೋಟೆ: ಪುಂಡನೊಬ್ಬ ಆಶಾ ಕಾರ್ಯಕರ್ತೆಯ ಎದೆ, ಹೊಟ್ಟೆಗೆ ಒದ್ದು ತಲೆಗೆ ಹೊಡೆದು ಹಲ್ಲೆಗೈದ ಘಟನೆ ಮುಧೋಳ ತಾಲೂಕಿನ ಕುಳಲಿ ಗ್ರಾಮದಲ್ಲಿ ನಡೆದಿದೆ.

    ಕುಳಲಿ ಗ್ರಾಮದ ಜ್ಯೋತಿ ಪೋಳ (23) ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆ. ಅದೇ ಗ್ರಾಮದ ವಿಠ್ಠಲ ಗಸ್ತಿ ಹಲ್ಲೆಗೈದ ಆರೋಪಿ. ಇಂದು ಸಂಜೆ ನಡೆದ ಘಟನೆ ನಡೆದಿದ್ದು, ಸ್ಥಳದಿಂದ ಆರೋಪಿ ಪರಾರಿಯಾಗಿದ್ದ.

    ಗ್ರಾಮಕ್ಕೆ ಮಹಾರಾಷ್ಟ್ರದಿಂದ ಜನರು ಬರುತ್ತಿದ್ದಾರೆ ಎಂಬ ಮಾಹಿತಿ ಆಶಾ ಕಾರ್ಯಕರ್ತೆ ಜ್ಯೋತಿ ಪೋಳ ಅವರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆ ಇಂದು ಸಂಜೆ ವಿಠ್ಠಲ ಗಸ್ತಿ ಮನೆಗೆ ಹೋಗಿ ಮಹಾರಾಷ್ಟ್ರದಿಂದ ನಿಮ್ಮ ಮನೆಗೆ ಬರುತ್ತಿರುವವರ ಮಾಹಿತಿ ನೀಡುವಂತೆ ಕೇಳಿಕೊಂಡಿದ್ದಾರೆ. ಬೇರೆ ರಾಜ್ಯದಿಂದ ಬಂದವರನ್ನು ಕ್ವಾರಂಟೈನ್ ಮಾಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

    ಮಾಹಿತಿ ನೀಡಲು ಒಪ್ಪದ ವಿಠ್ಠಲ ಗಸ್ತಿ ಕೋಪಗೊಂಡು ಜ್ಯೋತಿ ಅವರ ಎದೆ, ಒಟ್ಟೆಗೆ ಒದ್ದಿದ್ದಾನೆ. ಅಷ್ಟೇ ಅಲ್ಲದೆ ತಲೆಗೆ ಹೊಡೆದು ಹಲ್ಲೆಗೈದಿದ್ದಾನೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಜ್ಯೋತಿ ಅವರನ್ನು ಮುಧೋಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಈ ಸಂಬಂಧ ಕುಳಲಿ ಗ್ರಾಮ ಪಂಚಾಯತಿ ಪಿಡಿಒ ಕವಿತಾ ಅವರು ವಿಠ್ಠಲ ವಿರುದ್ಧ ಮುಧೋಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಆರೋಪಿಗೆ ಬಲೆ ಬೀಸಿ ವಶಕ್ಕೆ ಪಡೆದಿದ್ದಾರೆ.

  • ಮೈಕ್ ತಗೋ ನೀನೇ ಮಾತಾಡು: ರೈತರ ವಿರುದ್ಧ ಬಿಎಸ್‍ವೈ ಸಿಡಿಮಿಡಿ

    ಮೈಕ್ ತಗೋ ನೀನೇ ಮಾತಾಡು: ರೈತರ ವಿರುದ್ಧ ಬಿಎಸ್‍ವೈ ಸಿಡಿಮಿಡಿ

    ಬಾಗಲಕೋಟೆ: ನೆರೆ ಸಂತ್ರಸ್ತರ ಸಮಸ್ಯೆಗೆ ಇಷ್ಟು ದಿನ ಕೂಲ್ ಆಗಿ ಸ್ಪಂದಿಸುತ್ತಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಇಂದು ಏಕಾಏಕಿ ಸಿಡಿಮಿಡಿಕೊಂಡ ಪ್ರಸಂಗ ಮುಧೋಳದಲ್ಲಿ ನಡೆದಿದೆ.

    ಸಿಎಂ ಯಡಿಯೂರಪ್ಪ ಅವರು ಮುಧೋಳ ಮಾರ್ಗವಾಗಿ ಬಾಗಲಕೋಟೆಗೆ ತೆರಳುತ್ತಿದ್ದರು. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಮುಧೋಳ ಹಾಗೂ ಸುತ್ತಮುತ್ತಲಿನ ನೆರೆ ಸಂತ್ರಸ್ತರು, ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಇದರಿಂದಾಗಿ ಮುಧೋಳದ ಪ್ರವಾಸಿ ಮಂದಿರಕ್ಕೆ ತೆರಳಿದ ಸಿಎಂ, ಪ್ರತಿಭಟನಾಕಾರರ ಅಹವಾಲು ಸ್ವೀಕರಿಸಿದರು.

    ಪ್ರತಿಭಟನಾಕಾರರನ್ನು ಉದ್ದೇಶಿಸಿ ಸಿಎಂ ಮಾತನಾಡುವಾಗ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ನೆರೆ ಸಂತ್ರಸ್ತರು ಘೋಷಣೆ ಕೂಗಲು ಆರಂಭಿಸಿದರು. ಈ ಮಧ್ಯೆ ರೈತರೊಬ್ಬರು ಪದೇ ಪದೇ ತಮ್ಮ ಸಮಸ್ಯೆ ಹೇಳಲು ಮುಂದಾದರು. ಈ ಎಲ್ಲ ಬೆಳವಣಿಗೆಯು ಸಿಎಂ ಯಡಿಯೂರಪ್ಪ ಅವರಿಗೆ ಕಿರಿಕಿರಿ ಉಂಟಾಯಿತು.

    ಏಕಾಏಕಿ ರೈತರೊಬ್ಬರ ವಿರುದ್ಧ ಸಿಡಿಮಿಡಿಗೊಂಡ ಸಿಎಂ, ‘ನಾನು ಮಾತನಾಡೋವರೆಗೂ ಸುಮ್ಮನೆ ಇರು. ಇಲ್ಲಾ ತಗೋ ಮೈಕ್ ನೀನೇ ಮಾತನಾಡು’ ಎಂದು ಗುಡುಗಿದರು. ಅಷ್ಟಾದರೂ ಪ್ರತಿಭಟನಾಕಾರರ ಗದ್ದಲ ಮುಂದುವರಿಯಿತು. ಆಗ ಸಿಎಂ ತಾಳ್ಮೆಯಿಂದ ಮಾತನಾಡಿ, ರಾಜ್ಯದ ಅಭಿವೃದ್ಧಿ ಕಾರ್ಯಗಳು ನಿಂತರೂ ಪರವಾಗಿಲ್ಲ. ಕೇಂದ್ರ ಸರ್ಕಾರದ ಜೊತೆಗೆ ಮಾತನಾಡಿ ಹೆಚ್ಚಿನ ಅನುದಾನವನ್ನು ತಂದು ನೆರೆ ಪೀಡಿತ ಪ್ರದೇಶಗಳ ಜನರಿಗೆ ಪರಿಹಾರ ನೀಡುತ್ತೇವೆ ಎಂದು ಭರವಸೆ ನೀಡಿದರು.

    ಪ್ರವಾಹದಿಂದ ರೈತರಿಗೆ ಬಾರಿ ನಷ್ಟವಾಗಿದೆ. ಮನೆ ಹಾಗೂ ಸಾಕಷ್ಟು ಬೆಳೆ ನಾಶವಾಗಿವೆ. ನಾವು ಕೊಡುವ ಪರಿಹಾರ ಯಾವುದಕ್ಕೂ ಸಾಲುವುದಿಲ್ಲ. ಹೆಚ್ಚುವರಿ ಪರಿಹಾರ ಕೊಡುವುದಕ್ಕಾಗಿ ಕೇಂದ್ರ ಸರ್ಕಾರದ ಜೊತೆ ಮಾತಾಡುತ್ತೇನೆ. ವಾಸ ಮಾಡಲು ಯೋಗ್ಯವಿರದ ಮನೆಗಳ ನಿರ್ಮಾಣಕ್ಕೆ ಐದು ಲಕ್ಷ ರೂ. ಪರಿಹಾರ ನೀಡುತ್ತೇವೆ. ಈಗಾಗಲೇ ಸಂತ್ರಸ್ತರಿಗೆ ತಾತ್ಕಾಲಿಕವಾಗಿ ಹತ್ತು ಸಾವಿರ ರೂ. ಪರಿಹಾರ ಕೊಡಲಾಗಿದೆ ಎಂದು ತಿಳಿಸಿದರು.