Tag: mudhola dog

  • ಬಾಗಲಕೋಟೆ ಜಿಲ್ಲೆಗೆ ಮತ್ತೊಂದು ಹೆಮ್ಮೆ- ಮೋದಿಯ SPG ಭದ್ರತಾ ತಂಡಕ್ಕೆ ಮುಧೋಳ ಶ್ವಾನ ಸೇರ್ಪಡೆ

    ಬಾಗಲಕೋಟೆ ಜಿಲ್ಲೆಗೆ ಮತ್ತೊಂದು ಹೆಮ್ಮೆ- ಮೋದಿಯ SPG ಭದ್ರತಾ ತಂಡಕ್ಕೆ ಮುಧೋಳ ಶ್ವಾನ ಸೇರ್ಪಡೆ

    ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿಯವರ ವಿಶೇಷ ಭದ್ರತಾ ದಳ (ಎಸ್‍ಪಿಜಿ) ತಂಡಕ್ಕೆ ಬಾಗಲಕೋಟೆಯ ಮುಧೋಳ ಶ್ವಾನ ಸೇರ್ಪಡೆಗೊಂಡಿದೆ. ಇದು ಜಿಲ್ಲೆಗೆ ಮತ್ತೊಂದು ಹೆಮ್ಮೆಯ ಗರಿಯಾಗಿದೆ.

    ಹೌದು. 2 ತಿಂಗಳ ಎರಡು ಗಂಡು ಮುಧೋಳ ಶ್ವಾನಗಳನ್ನ ಎಸ್‍ಪಿಜಿ ಪಡೆಯ ಅಧಿಕಾರಿಗಳು ಕೊಂಡು ಹೋಗಿದ್ದಾರೆ. ಇವುಗಳನ್ನು ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ತಿಮ್ಮಾಪುರ ಬಳಿ ಇರುವ ಮುಧೋಳ ಶ್ವಾನ ಸಂಶೋಧನಾ ಕೇಂದ್ರದಿಂದ ಹಸ್ತಾಂತರ ಮಾಡಲಾಗಿದೆ.

    ಏಪ್ರಿಲ್ 25 ರಂದು ಎರಡು ಶ್ವಾನ ಹಸ್ತಾಂತರಿಸಲಾಗಿದೆ. ಪ್ರಧಾನಿ ಎಸ್‍ಪಿಜಿ ಭದ್ರತಾ ಪಡೆಯಿಂದ ವೆಟರ್ನರಿ ವೈದ್ಯ ಡಾ. ಬಿ.ಎಂ ಪಂಚಬುದ್ದೆ ಹಾಗೂ ಇಬ್ಬರು ಶ್ವಾನ ತರಬೇತುದಾರರು ಮುಧೋಳ ಶ್ವಾನ ಸಂವರ್ಧನಾ ಕೇಂದ್ರಕ್ಕೆ ಬಂದಿದ್ದರು. ಧಾರವಾಡ ಹಾಗೂ ಬಾಗಲಕೋಟೆ ಎಸ್‍ಪಿ, ಜಿಲ್ಲಾಡಳಿತ ಸಂಪರ್ಕದ ಮೂಲಕ ಅಧಿಕಾರಿಗಳು ಬಂದಿದ್ದರು. ಇದನ್ನೂ ಓದಿ: ಸಿದ್ದರಾಮಯ್ಯ- ಶ್ರೀರಾಮುಲು ಒಳ ಒಪ್ಪಂದ ನನಗೆ ಗೊತ್ತಿಲ್ಲ: ಡಿ.ಕೆ ಶಿವಕುಮಾರ್

    ಸಂವರ್ಧನಾ ಕೇಂದ್ರದಲ್ಲಿ ಒಂದು ತಾಸು ಶ್ವಾನಗಳ ಪರೀಕ್ಷೆ ನಡೆಸಿದರು. ಆರೋಗ್ಯ, ಶ್ವಾನಗಳ ಲಕ್ಷಣ, ಓಟ, ಸಮಯಪ್ರಜ್ಞೆ, ಬುದ್ಧಿ ಹಾಗೂ ಚಾಕಚಕ್ಯತೆ ಬಗ್ಗೆ ತಿಳಿದುಕೊಂಡರು. ಬಳಿಕ ಶ್ವಾನಗಳನ್ನು ಕರೆದುಕೊಂಡು ಹೋಗಿದ್ದಾರೆ. ಎಸ್‍ಪಿಜಿ ಭದ್ರತಾ ಪಡೆಯಲ್ಲಿ ತರಬೇತಿ ನೀಡಿ ಬಳಿಕ ಅವುಗಳನ್ನು ಭದ್ರತೆಗೆ ಸೇರಿಸಿಕೊಳ್ಳಲಾಗುತ್ತದೆ.

    ಭದ್ರತಾ ದೃಷ್ಟಿಯಿಂದ ಇಷ್ಟು ದಿನ ಗೌಪ್ಯವಾಗಿದ್ದ ವಿಚಾರ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಹಿಂದೊಮ್ಮೆ ಮನ್ ಕಿ ಬಾತ್ ನಲ್ಲೂ ಮುಧೋಳ ಶ್ವಾನದ ಬಗ್ಗೆ ಮೋದಿ ಮಾತಾಡಿದ್ದರು. ಈಗಾಗಲೇ ಭಾರತೀಯ ಸೇನೆ, ಸಿಆರ್‍ಪಿಎಫ್, ಐಡಿಬಿಪಿ, ವಾಯುಸೇನೆಯಲ್ಲೂ ಮುಧೋಳ ಶ್ವಾನಗಳಿವೆ ಎಂದು ಶ್ವಾನ ಸಂಶೋಧನಾ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಸುಶಾಂತ್ ಹಂಡಗೆ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚುನಾವಣೆಯಲ್ಲಿ ನಾಯಿ ಅಲ್ಲ, ಜನ ಮತ ಹಾಕೋದು- ಪ್ರಧಾನಿ ವಿರುದ್ಧ ಪ್ರಕಾಶ್ ರೈ ಕೆಂಡಾಮಂಡಲ

    ಚುನಾವಣೆಯಲ್ಲಿ ನಾಯಿ ಅಲ್ಲ, ಜನ ಮತ ಹಾಕೋದು- ಪ್ರಧಾನಿ ವಿರುದ್ಧ ಪ್ರಕಾಶ್ ರೈ ಕೆಂಡಾಮಂಡಲ

    ಗದಗ: ಬಿಜೆಪಿ ವಿರೋಧ ಮಾಡುವವರು ಮುಧೋಳ ನಾಯಿ ನೋಡಿ ಕಲಿಯಿರಿ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಬಹುಭಾಷಾ ನಟ ಪ್ರಕಾಶ್ ರೈ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ರು.

    ಗದಗ ನಗರದಲ್ಲಿ ಖಾಸಗಿ ಹೋಟೆಲ್ ನಲ್ಲಿ ನಡೆದ ಸಂವಾದ ಕಾರ್ಯಕ್ರಮದ ನಂತರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಪ್ರಕಾಶ್ ರೈ, ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ರು. ಮೋದಿ ಮುಧೋಳ ನಾಯಿ ಬಗ್ಗೆ ಮಾತಾಡ್ತಾರೆ. ಬಿಜೆಪಿ ವಿರೋಧಿಗಳು ಮುಧೋಳ ನಾಯಿ ನೋಡಿ ಕಲಿಬೇಕು ಅಂತಾರೆ. ಇನ್ನು ಸೈನ್ಯದಲ್ಲಿ ಮುಧೋಳ ನಾಯಿಗೆ ಕೆಲಸ ಕೊಡ್ತಾರಂತೆ. ಆದ್ರೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ನಾಯಿ ಮತ ಹಾಕಲ್ಲ. ಜನ ಮತ ಹಾಕ್ತಾರೆ ಅಂತ ಕಿಡಿಕಾರಿದ್ರು.

    ಇಲ್ಲಿನ ನಾಯಿಗಳು ಜನರ ಪ್ರೀತಿ, ಊಟಕ್ಕಾಗಿ ಮನೆ ಕಾಯುತ್ತವೆ. ಆದ್ರೆ ಮತ ಹಾಕೋದು ರೈತರು, ಯುವಕರು. ಹೀಗಾಗಿ ನಮ್ಮ ಗತಿ ನಾಯಿ ಪಾಡು ಆಗಲು ಬಿಡಲ್ಲ ಅಂತ ಮೋದಿ ವಿರುದ್ಧ ಗರಂ ಆದ್ರು.

    ಪ್ರಧಾನಿ ಸ್ಥಾನಕ್ಕೆ ಗೌರವ ಕೊಡಿ. ನಾವು ಮನುಷ್ಯರು ಆದ್ರೆ ಪ್ರಧಾನಿಗಳ ದೃಷ್ಠಿಯಲ್ಲಿ ನಾವು ನಾಯಿಗಿಂತ ಕಡೆಯಾದ್ವಾ ಅಂತ ಪ್ರಶ್ನಿಸಿದ್ರು. ಪ್ರಧಾನಿ ಮೋದಿ ಅವರಿಗೆ ಅಭಿವೃದ್ಧಿ ಅನ್ನೋದು ಬರಿ ಸುಳ್ಳು. ಇನ್ನು ಇದೇ ವೇಳೆ ಪ್ರಧಾನಿ ಮೋದಿ ಅವರ ಮಹದಾಯಿ ಹೇಳಿಕೆ ಹಾಗೂ ಅನಂತಕುಮಾರ್ ಹೆಗ್ಡೆ ಅವರ ಸಂವಿಧಾನ ಬದಲಾವಣೆ ಹೇಳಿಕೆಗೆ ನಟ ಪ್ರಕಾಶ್ ರೈ ಕಿಡಿಕಾರಿದ್ರು.

    ಇದಕ್ಕೂ ಮೊದಲು ಬಹುಭಾಷಾ ನಟ ಪ್ರಕಾಶ್ ರೈ ಗದಗ ನಗರದ ತೋಂಟದಾರ್ಯ ಮಠಕ್ಕೆ ಭೇಟಿ ನೀಡಿದ್ದರು. ಮಠಕ್ಕೆ ಭೇಟಿ ನೀಡಿ ವಾಪಾಸ್ ಹೊರಡೋ ವೇಳೆ ಆವರಣದಲ್ಲಿಯೇ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ರೈಗೆ ಮುತ್ತಿಗೆ ಹಾಕಿ ಘೇರಾವ್ ಹಾಕಿ ಕಪ್ಪು ಬಟ್ಟೆ ಪ್ರದರ್ಶನ ಮಾಡಿದ್ರು.