Tag: mufti

  • Exclusive:ಶಿವಣ್ಣ ‘ಭೈರತಿ ರಣಗಲ್’ ಸಿನಿಮಾದಲ್ಲಿ ಛಾಯಾ ಸಿಂಗ್ ನಟಿಸುತ್ತಾರಾ.? ನಟಿ ಸ್ಪಷ್ಟನೆ

    Exclusive:ಶಿವಣ್ಣ ‘ಭೈರತಿ ರಣಗಲ್’ ಸಿನಿಮಾದಲ್ಲಿ ಛಾಯಾ ಸಿಂಗ್ ನಟಿಸುತ್ತಾರಾ.? ನಟಿ ಸ್ಪಷ್ಟನೆ

    ಸ್ಯಾಂಡಲ್ವುಡ್ ಚಿಟ್ಟೆ ಛಾಯಾ ಸಿಂಗ್ (Chaya Singh) ಅವರು ಬಹುಭಾಷಾ ನಟಿಯಾಗಿ ಮಿಂಚ್ತಿದ್ದಾರೆ. ಪ್ರಸ್ತುತ ‘ಅಮೃತಧಾರೆ’ (Amruthadaare) ಸೀರಿಯಲ್ ನಾಯಕಿಯಾಗಿ ಕಿರುತೆರೆಯಲ್ಲಿ ಹೊಸ ಪರ್ವ ಆರಂಭಿಸಿದ್ದಾರೆ. ಈ ನಡುವೆ ‘ಭೈರತಿ ರಣಗಲ್’ (Bhairathi Rangal) ಚಿತ್ರದಲ್ಲಿ ಛಾಯಾ ಸಿಂಗ್ ನಟಿಸುತ್ತಾರಾ.? ಶಿವಣ್ಣ ಜೊತೆ ಮತ್ತೆ ಕಾಣಿಸಿಕೊಳ್ತಾರಾ ಎಂಬ ಅಭಿಮಾನಿಗಳ ಪ್ರಶ್ನೆಗೆ ನಟಿ ಛಾಯಾ ಸಿಂಗ್ ಪಬ್ಲಿಕ್ ಟಿವಿ ಡಿಜಿಟಲ್‌ಗೆ ಸ್ಪಷ್ಟನೆ ನೀಡಿದ್ದಾರೆ.

    2017ರಲ್ಲಿ ‘ಮಫ್ತಿ’ (Mufti) ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡಿತ್ತು. ನರ್ತನ್ ನಿರ್ದೇಶನದಲ್ಲಿ ಶಿವಣ್ಣ ಅಬ್ಬರಿಸಿದ್ದರು. ಇದೇ ಸಿನಿಮಾದಲ್ಲಿ ಶಿವಣ್ಣಗೆ ತಂಗಿಯಾಗಿ ಛಾಯಾ ಜೀವತುಂಬಿದ್ದರು. ತೆಲುಗು, ತಮಿಳು ಸಿನಿಮಾಗಳಲ್ಲಿ ಬ್ಯುಸಿಯಿದ್ದ ನಟಿ ಈ ಹಿಂದೆ ರೌಡಿ ಅಳಿಯ ಚಿತ್ರದಲ್ಲಿ ಶಿವಣ್ಣ ಜೊತೆ ನಟಿಸಿದ್ದರು. ಇದಾದ ನಂತರ 10 ವರ್ಷ ಕನ್ನಡ ಸಿನಿಮಾಗಳಿಂದ ದೂರವಿದ್ದರು. ಇದನ್ನೂ ಓದಿ:ಸುದೀಪ್ ನಟನೆಯ 46ನೇ ಸಿನಿಮಾ: ಇನ್ನಷ್ಟು, ಮತ್ತಷ್ಟು ಸುದ್ದಿ

    ಬಳಿಕ ಶಿವಣ್ಣ ಅವರ ಒತ್ತಾಯಕ್ಕೆ ಮಣಿದು 10 ವರ್ಷಗಳ ನಂತರ ಮಫ್ತಿ ಚಿತ್ರದಲ್ಲಿ ಶಿವರಾಜ್‌ಕುಮಾರ್ ಛಾಯಾ ಸಿಂಗ್ ಕೂಡ ಪ್ರಮುಖ ಪಾತ್ರ ಮಾಡ್ತಾರೆ. ಇದೀಗ ‘ಮಫ್ತಿ’ ಪ್ರೀಕ್ವೆಲ್ ಆಗಿರೋ ‘ಭೈರತಿ ರಣಗಲ್’ (Bharathi Rangal) ಸಿನಿಮಾಗೆ ಈಗ ಚಾಲನೆ ಸಿಕ್ಕಿದೆ. ಈ ಭಾಗದಲ್ಲೂ ನಟಿ ಛಾಯಾ ಸಿಂಗ್ ಆಕ್ಟ್ ಮಾಡ್ತಿದ್ದಾರೆ. ಈ ಕುರಿತು ನಟಿ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ್ದಾರೆ. ಶಿವಣ್ಣ ಜೊತೆ ಮತ್ತೆ ಸ್ಕ್ರೀನ್ ಶೇರ್ ಮಾಡೋದಾಗಿ ಖುಷಿಯಿಂದ ಹೇಳಿಕೊಂಡಿದ್ದಾರೆ.

    ‘ಭೈರತಿ ರಣಗಲ್’ ಚಿತ್ರದಲ್ಲಿ ಶಿವಣ್ಣಗೆ ಜೋಡಿಯಾಗಿ ರುಕ್ಮಿಣಿ ವಸಂತ್ ಕಾಣಿಸಿಕೊಳ್ತಿದ್ದಾರೆ. ಮುಂದಿನ ವಾರದಿಂದ ಶೂಟಿಂಗ್ ಶುರುವಾಗಲಿದೆ. ಛಾಯಾ ಸಿಂಗ್ ಅವರ ಭಾಗದ ಚಿತ್ರೀಕರಣ ಮುಂದಿನ ತಿಂಗಳು ಜುಲೈನಿಂದ ಶುರುವಾಗಲಿದೆ ಎಂದು ತಿಳಿಸಿದ್ದಾರೆ.‌

    ಶೃತಿ ರಿಪ್ಪನ್‌ಪೇಟೆ, ಪಬ್ಲಿಕ್‌ ಟಿವಿ ಡಿಜಿಟಲ್

  • Exclusive: ರಾಮ್ ಚರಣ್ ಜೊತೆ ‘ಮಫ್ತಿ’ ನಿರ್ದೇಶಕನ ಸಿನಿಮಾ? ನರ್ತನ್ ಸ್ಪಷ್ಟನೆ

    Exclusive: ರಾಮ್ ಚರಣ್ ಜೊತೆ ‘ಮಫ್ತಿ’ ನಿರ್ದೇಶಕನ ಸಿನಿಮಾ? ನರ್ತನ್ ಸ್ಪಷ್ಟನೆ

    ನ್ನಡದ ಹೆಸರಾಂತ ನಿರ್ದೇಶಕ ನರ್ತನ್ ‘ಮಫ್ತಿ’ (Mufti) ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುವ ಮೂಲಕ ಸೈ ಎನಿಸಿಕೊಂಡರು. ಸದ್ಯ ‘ಭೈರತಿ ರಣಗಲ್’ (Bhairathi Rangal) ಸಿನಿಮಾಗೆ ತಯಾರಿ ಮಾಡ್ತಿರುವ ಈ ಸಂದರ್ಭದಲ್ಲಿ ರಾಮ್ ಚರಣ್ ಜೊತೆ ಸಿನಿಮಾ ಮಾಡುವ ಬಗ್ಗೆ ನರ್ತನ್ ಪಬ್ಲಿಕ್ ಟಿವಿ ಡಿಜಿಟಲ್‌ಗೆ ಸ್ಪಷ್ಟನೆ ನೀಡಿದ್ದಾರೆ.

    2017ರಲ್ಲಿ ‘ಮಫ್ತಿ’ (Mufti) ಸಿನಿಮಾಗೆ ಶಿವರಾಜ್‌ಕುಮಾರ್ (Shivarajkumar) ನಿರ್ದೇಶನ ಮಾಡುವ ಮೂಲಕ ಬೆಳಕಿಗೆ ಬಂದ ಪ್ರತಿಭೆ ನರ್ತನ್. ಮೊದಲ ಸಿನಿಮಾದಲ್ಲೇ ತಾನೆಂತಹ ನಿರ್ದೇಶಕ ಎಂಬುದನ್ನ ಸಾಬೀತುಪಡಿಸಿದ್ದರು. ಮಫ್ತಿ ಚಿತ್ರ ಗಲ್ಲಾಪೆಟ್ಟಿಗೆ ಕೋಟಿ ಕೋಟಿ ಕಲೆಕ್ಷನ್ ಮಾಡುವ ಮೂಲಕ ಹಿಸ್ಟರಿ ಕ್ರಿಯೆಟ್ ಮಾಡ್ತು. ಶಿವಣ್ಣ, ಶ್ರೀಮುರಳಿ ನಟನೆ ಅದೆಷ್ಟರ ಮಟ್ಟಿಗೆ ಮೋಡಿ ಮಾಡಿತ್ತೋ ಅದೇ ತರಹ ನರ್ತನ್ ಕಥೆ, ಡೈರೆಕ್ಷನ್‌ಗೆ ಕೂಡ ಪ್ರೇಕ್ಷಕರು ಫುಲ್ ಮಾರ್ಕ್ಸ್ ಕೊಟ್ಟಿದ್ದರು. ಇದನ್ನೂ ಓದಿ:ರಸ್ತೆ ಅಪಘಾತ : ಕಿರುತೆರೆ ಖ್ಯಾತ ನಟಿ ವೈಭವಿ ಉಪಾಧ್ಯಾಯ ದುರ್ಮರಣ

    ‘ಮಫ್ತಿ’ ಸಿನಿಮಾದ ಪ್ರೀಕ್ವೇಲ್ ತೆರೆಗೆ ತರಲು ಸಿದ್ಧತೆ ನಡೆಯುತ್ತಿದೆ. ‘ಭೈರತಿ ರಣಗಲ್’ ಚಿತ್ರದ ಮೂಲಕ ಅಸಲಿ ಕಥೆಯನ್ನ ಬಿಚ್ಚಿಡಲು ನರ್ತನ್ ಸಿದ್ಧತೆ ಮಾಡಿದ್ದಾರೆ. ಈಗಾಗಲೇ ಚಿತ್ರದ ಪೋಸ್ಟರ್ ಕೂಡ ಹವಾ ಕ್ರಿಯೇಟ್ ಮಾಡಿದೆ. ‘ಭೈರತಿ ರಣಗಲ್’ ಸಿನಿಮಾ ಇದೇ ಮೇ 26ಕ್ಕೆ ಮುಹೂರ್ತ ಕೂಡ ಫಿಕ್ಸ್ ಆಗಿದೆ. ಜೂನ್ ಮೊದಲ ವಾರದಲ್ಲಿ ಈ ಸಿನಿಮಾದ ಚಿತ್ರೀಕರಣ ಶುರುವಾಗಲಿದೆ. ಹೀಗಿರುವಾಗ ರಾಮ್ ಚರಣ್ (Ramcharan) ಜೊತೆ ನರ್ತನ್ ಸಿನಿಮಾ ಮಾಡ್ತಾರೆ ಎಂಬ ಸುದ್ದಿ ಸಿಕ್ಕಾಪಟ್ಟೆ ಸೌಂಡ್ ಮಾಡಿತ್ತು. ಅಷ್ಟಕ್ಕೂ ಈ ವಿಚಾರ ನಿಜಾನಾ.? ಈ ಬಗ್ಗೆ ನಿರ್ದೇಶಕ ನರ್ತನ್ ಪಬ್ಲಿಕ್ ಟಿವಿ ಡಿಜಿಟಲ್‌ಗೆ ಸ್ಪಷ್ಟನೆ ನೀಡಿದ್ದಾರೆ.

    ನಟ ರಾಮ್ ಚರಣ್ ಅವರನ್ನ ಭೇಟಿಯಾಗಿ ಕಥೆ ಹೇಳಿರುವದು ನಿಜ, ಒಂದಿಷ್ಟು ಹಂತದ ಮಾತುಕತೆಯಾಗಿದೆ. ಆದರೆ ರಾಮ್ ಚರಣ್ ಜೊತೆ ಸಿನಿಮಾ ಮಾಡುವ ಬಗ್ಗೆ ಫೈನಲ್ ಆಗಿಲ್ಲ. ‘ಭೈರತಿ ರಣಗಲ್’ ಸಿನಿಮಾ ಮುಗಿಯುವವರೆಗೂ ಬೇರೆ ಪ್ರಾಜೆಕ್ಟ್ ಮಾಡೋದಕ್ಕೆ ಹೋಗಲ್ಲ. ಸದ್ಯ ನನ್ನ ಗಮನ ಏನೇ ಇದ್ದರೂ ಶಿವಣ್ಣ ಜೊತೆಗಿನ ಸಿನಿಮಾ ಅಂತಾ ನರ್ತನ್ (Narthan) ಸ್ಪಷ್ಟನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ರಾಮ್ ಚರಣ್ ಜೊತೆಗಿನ ಸಿನಿಮಾ ಅಂತಿಮ ಆಗಿದ್ದಲ್ಲಿ ಅಧಿಕೃತವಾಗಿ ತಿಳಿಸುವೆ ಎಂದು ಮಾತನಾಡಿದ್ದಾರೆ.

    ಶೃತಿ ನಾಗೇಶ್, ಪಬ್ಲಿಕ್‌ ಟಿವಿ ಡಿಜಿಟಲ್

  • ಡ್ರಗ್ಸ್ ಸೇವನೆ ದೂರು: ಶೂಟಿಂಗ್ ಸ್ಪಾಟ್ ಗೆ ಬರಲಿದ್ದಾರೆ ಪೊಲೀಸ್

    ಡ್ರಗ್ಸ್ ಸೇವನೆ ದೂರು: ಶೂಟಿಂಗ್ ಸ್ಪಾಟ್ ಗೆ ಬರಲಿದ್ದಾರೆ ಪೊಲೀಸ್

    ಸಿನಿಮಾ ರಂಗದಲ್ಲಿ ಡ್ರಗ್ಸ್ (Drugs) ಸೇವನೆ ಎಗ್ಗಿಲ್ಲದೇ ನಡೆಯುತ್ತಿದೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಚಿತ್ರೀಕರಣ ನಡೆಯುವ ಸ್ಥಳಕ್ಕೆ ಪೊಲೀಸರು (Police) ಮಫ್ತಿಯಲ್ಲಿ ಬರಲಿದ್ದಾರೆ ಎಂದು ಕೇರಳದ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಚಿತ್ರೀಕರಣ ಸ್ಥಳದಲ್ಲಿ ನಟರೂ ಸೇರಿದಂತೆ ಅನೇಕರು ಡ್ರಗ್ಸ್ ಸೇವನೆ ಮಾಡುತ್ತಿದ್ದಾರೆ ಎಂದು ಹಲವರು ಆರೋಪಿಸಿದ್ದರು.

    ಮೊನ್ನೆಯಷ್ಟೇ ಕೇರಳದ ಫಿಲ್ಮ್ ಚೇಂಬರ್ ಇಬ್ಬರು ನಟರ ಮೇಲೆ ಗುರುತರ ಆರೋಪ ಮಾಡಿತ್ತು. ಅವರಿಂದಾಗಿ ಚಿತ್ರೀಕರಣಕ್ಕೆ ತೊಂದರೆ ಆಗುತ್ತಿದೆ ಎಂದು ಹೇಳಿತ್ತು. ಅದಕ್ಕೆ ಕಾರಣ ಸದಾ ಅವರು ಅಮಲಿನ ಸ್ಥಿತಿಯಲ್ಲಿ ಇರುತ್ತಾರೆ ಎನ್ನುವುದು ನಿರ್ಮಾಪಕರ ಆರೋಪವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಇಂಥದ್ದೊಂದು ಕ್ರಮ ತಗೆದುಕೊಂಡಿದ್ದಾರೆ. ಶೂಟಿಂಗ್ ಸ್ಪಾಟ್ ಗೆ ಮಫ್ತಿಯಲ್ಲಿ ಪೊಲೀಸರು ಕಾವಲು ಕಾಯಲಿದ್ದಾರಂತೆ. ಇದನ್ನೂ ಓದಿ:ರಾಣಾ ದಗ್ಗುಭಾಟಿ ಪತ್ನಿ ಪ್ರೆಗ್ನೆಂಟ್? ಮಿಹಿಕಾ ಬಜಾಜ್ ಪ್ರತಿಕ್ರಿಯೆ

    ಕೇರಳ ಸಿನಿಮೋದ್ಯಮದಲ್ಲಿ ಡ್ರಗ್ಸ್ ಸೇವನೆ ವಿಪರೀತವಾಗಿದೆಯಂತೆ. ಹೀಗಾಗಿ ಸಿನಿಮಾ ರಂಗಕ್ಕೆ ಮಕ್ಕಳನ್ನು ಕಳುಹಿಸಲು ಭಯ ಆಗುತ್ತಿದೆ ಎಂದು ಮೊನ್ನೆಯಷ್ಟೇ ರಾಜಕಾರಣಿಯೊಬ್ಬರು ಮಾತನಾಡಿದ್ದರು. ಈ ಮಾತು ಕೂಡ ವೈರಲ್ ಆಗಿತ್ತು. ಈ ಮಾತಿನ ಬೆನ್ನಲ್ಲೇ ಸರಕಾರ ಕೂಡ ಎಚ್ಚೆತ್ತುಕೊಂಡಿತ್ತು. ಪೊಲೀಸರಿಗೆ ಬಿಸಿ ಮುಟ್ಟಿಸಿತ್ತು. ಹಾಗಾಗಿ ಡ್ರಗ್ಸ್ ವಿರುದ್ಧ ಪೊಲೀಸರು ತಿರುಗಿ ಬಿದ್ದಿದ್ದಾರೆ.

  • ಟಾಲಿವುಡ್ ಅಂಗಳಕ್ಕೆ ‘ಮಫ್ತಿ’ ಡೈರೆಕ್ಟರ್ ಕಾಲಿಡುವುದು ಪಕ್ಕಾ

    ಟಾಲಿವುಡ್ ಅಂಗಳಕ್ಕೆ ‘ಮಫ್ತಿ’ ಡೈರೆಕ್ಟರ್ ಕಾಲಿಡುವುದು ಪಕ್ಕಾ

    ಫ್ತಿ (Mufti) ಸಿನಿಮಾದ ನಂತರ ನರ್ತನ್ (Nartan) ಮೆಗಾ ಪ್ರಾಜೆಕ್ಟ್ ನಲ್ಲಿ ಕೆಲಸ ಮಾಡಲಿದ್ದಾರೆ ಎಂದು ಅನೇಕ ಬಾರಿ ಸುದ್ದಿ ಆಯಿತು. ಈ ಸಿನಿಮಾಗೆ ಯಶ್ ಹೀರೋ ಎಂದೂ ಹೇಳಲಾಯಿತು. ಈ ಚಿತ್ರಕ್ಕಾಗಿ ನರ್ತನ್ ಬರೋಬ್ಬರಿ ಎರಡೂವರೆ ವರ್ಷಗಳ ಕಾಲ ಕೆಲಸ ಮಾಡಿದ್ದಾರೆ ಎನ್ನುವ ಮಾತು ಕೇಳಿ ಬಂತು. ಆನಂತರ ಯಶ್ ಇವರ ಚಿತ್ರದಲ್ಲಿ ನಟಿಸುತ್ತಿಲ್ಲ ಎನ್ನುವ ಸುದ್ದಿ ಹೊರ ಬಿದ್ದಿತು.

    ಈ ನೋವಿನ ವಿಚಾರ ಆಚೆ ಬರುತ್ತಿದ್ದಂತೆಯೇ ನರ್ತನ್ ಮತ್ತೆ ಸದ್ದು ಮಾಡಿದರು. ಅದು ಮತ್ತೊಂದು ಮೆಗಾ ಸಿನಿಮಾದ ವಿಷಯಕ್ಕಾಗಿ. ತೆಲುಗಿನ ಖ್ಯಾತ ನಟ ರಾಮ್ ಚರಣ್ (Ram Charan) ಚಿತ್ರಕ್ಕೆ ನರ್ತನ್ ಆಕ್ಷನ್ ಕಟ್ ಹೇಳಲಿದ್ದಾರೆ ಎನ್ನುವ ವಿಷಯ ಗಾಂಧಿನಗರದ ಗಲ್ಲಿ ಗಲ್ಲಿಗಳಲ್ಲಿ ಕೇಳಿ ಬಂದಿತ್ತು. ಈ ವಿಷಯ ಕೂಡ ಸುಳ್ಳಾಗಲಿದೆ ಎನ್ನುವ ಆತಂಕ ಅವರ ಅಭಿಮಾನಿಗಳಲ್ಲಿತ್ತು. ಆದರೆ, ಅದು ನಿಜವಾಗಿದೆ. ಇದನ್ನೂ ಓದಿ: ಹಿಂದಿ ಚಿತ್ರರಂಗದಲ್ಲಿ ಸೌತ್‌ನಷ್ಟು ಶಿಸ್ತಿಲ್ಲ: ಕಾಜಲ್ ಅಗರ್‌ವಾಲ್

    ಹೌದು, ನರ್ತನ್ ಟಾಲಿವುಡ್ ಅಂಗಳಕ್ಕೆ ಕಾಲಿಡುತ್ತಿದ್ದಾರೆ. ಪ್ರಶಾಂತ್ ನೀಲ್, ಎ.ಹರ್ಷ ನಂತರ ಮತ್ತೋರ್ವ ನಿರ್ದೇಶಕ ಟಾಲಿವುಡ್ ಸ್ಟಾರ್ ನಟನಿಗೆ ಚಿತ್ರವೊಂದನ್ನು ಮಾಡುತ್ತಿದ್ದಾರೆ. ಇದು  ಪಕ್ಕಾ ಮಾಹಿತಿ ಎಂದು ಸ್ವತಃ ನರ್ತನ್ ಅವರೇ ಹಂಚಿಕೊಂಡಿದ್ದಾರೆ. ಆದರೆ, ಆ ಸಿನಿಮಾ ಯಾವಾಗ ಬರುತ್ತದೆ ಎಂದು ಮಾತ್ರ ಹೇಳಿಕೊಂಡಿಲ್ಲ.

    ಸದ್ಯ ಭೈರತಿ ರಣಗಲ್ (Bhairati Rangal) ಸಿನಿಮಾದ ಕೆಲಸದಲ್ಲಿ ನರ್ತನ್ ಬ್ಯುಸಿಯಾಗಿದ್ದಾರೆ. ಮೇ ತಿಂಗಳಲ್ಲಿ ಈ ಸಿನಿಮಾ ಸೆಟ್ಟೇರಲಿದೆ. ಶಿವರಾಜ್ ಕುಮಾರ್ (Shivraj Kumar) ಮತ್ತು ನರ್ತನ್ ಕಾಂಬಿನೇಷನ್ ನ ಎರಡನೇ ಸಿನಿಮಾ ಇದಾಗಲಿದೆ.  ಈ ಸಿನಿಮಾವನ್ನು ಸ್ವತಃ ಶಿವಣ್ಣ ಅವರೇ ತಮ್ಮ ಬ್ಯಾನರ್ ನಿಂದ ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದ ನಂತರ ರಾಮ್ ಚರಣ್ ಸಿನಿಮಾವನ್ನು ಕೈಗೆತ್ತಿಕೊಳ್ಳಲಿದ್ದಾರಂತೆ ನರ್ತನ್.

  • ‘ಭೈರತಿ ರಣಗಲ್’ ಪ್ಯಾನ್ ಇಂಡಿಯಾ ಸಿನಿಮಾ: ಮಾ.5ಕ್ಕೆ ಟೈಟಲ್ ಡಿಸೈನ್ ರಿಲೀಸ್

    ‘ಭೈರತಿ ರಣಗಲ್’ ಪ್ಯಾನ್ ಇಂಡಿಯಾ ಸಿನಿಮಾ: ಮಾ.5ಕ್ಕೆ ಟೈಟಲ್ ಡಿಸೈನ್ ರಿಲೀಸ್

    ಫ್ತಿ (Mufti,) ಸಿನಿಮಾದ ನಂತರ ನಿರ್ದೇಶಕ ನರ್ತನ್ (Narthan) ಹಾಗೂ ನಟ ಶಿವರಾಜ್ ಕುಮಾರ್ (Shivraj Kumar) ಮತ್ತೆ ಒಂದಾಗಿದ್ದು, ಈ ಬಾರಿ ಜೋಡಿಯು ಪ್ಯಾನ್ ಇಂಡಿಯಾ (Pan India) ಸಿನಿಮಾವನ್ನು ಮಾಡಲಿದೆ. ‘ಭೈರತಿ ರಣಗಲ್’ (Bhairati Rangal) ಹೆಸರಿನಲ್ಲಿ ಈ ಸಿನಿಮಾ ಹಲವು ಭಾಷೆಗಳಲ್ಲಿ ಮೂಡಿ ಬರುತ್ತಿದ್ದು, ಸಿನಿಮಾದ ಟೈಟಲ್ ಡಿಸೈನ್ ಅನ್ನು ಮಾರ್ಚ್ 5ರಂದು ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ.

    ಗೀತಾ ಪಿಕ್ಚರ್ಸ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಎರಡನೇ ಸಿನಿಮಾ ಇದಾಗಿದ್ದು,  ಶಿವರಾಜ್ ಕುಮಾರ್ ಮತ್ತು ನಿರ್ದೇಶಕ ನರ್ತನ್ ಈ ಸಿನಿಮಾದ ಮೂಲಕ ಮತ್ತೆ ಒಂದಾಗಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಐದು ವರ್ಷಗಳ ನಂತರ ಮಫ್ತಿ ಸಿನಿಮಾದ ಭೈರತಿ ರಣಗಲ್ ಪಾತ್ರದ ಹಿನ್ನೆಲೆಯನ್ನು ಈ ಚಿತ್ರದಲ್ಲಿ ಬಿಚ್ಚಿಡಲಿದ್ದಾರೆ. ಹಾಗಾಗಿ ಇದು ಮಫ್ತಿ ಸಿನಿಮಾದ ಸೀಕ್ವೆಲ್ ಅಲ್ಲ, ಪ್ರೀಕ್ವೆಲ್ ಸಿನಿಮಾ ಎನ್ನಲಾಗುತ್ತಿದೆ. ಭೈರತಿ ರಣಗಲ್ ನ ರೋಚಕ ಸಂಗತಿಗಳನ್ನು ಈ ಸಿನಿಮಾದಲ್ಲಿ ತೋರಿಸಲಿದ್ದಾರಂತೆ ನಿರ್ದೇಶಕರು. ಇದನ್ನೂ ಓದಿ: 150 ಕೋಟಿ ಮೌಲ್ಯದ ಹೊಸ ಮನೆಯನ್ನು ಪೋಷಕರಿಗೆ ಗಿಫ್ಟ್ ನೀಡಿದ ಧನುಷ್

    ಮಫ್ತಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹೊಸ ಸಂಚಲನ ಮೂಡಿಸಿದ್ದ ನಿರ್ದೇಶಕ ನರ್ತನ್, ಆ ನಂತರ ಯಶ್ ಗಾಗಿ ಅವರು ಸಿನಿಮಾ ಮಾಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಬರೋಬ್ಬರಿ ಎರಡ್ಮೂರು ವರ್ಷಗಳ ಕಾಲ ಯಶ್ ಹಿಂದೆ ಸುತ್ತಿದರು ನರ್ತನ್. ಒಂದು ವರ್ಷಕ್ಕೂ ಹೆಚ್ಚು ಕಾಲ ಕೂತು ಯಶ್ ಗಾಗಿ ಕಥೆ ಬರೆದರು. ಆನಂತರ ಆ ಸಿನಿಮಾ ಆಗಲಿಲ್ಲ. ನಾನಾ ಕಾರಣಗಳಿಂದಾಗಿ ಯಶ್ ಗಾಗಿ ನರ್ತನ್ ಸಿನಿಮಾ ಮಾಡುವುದಿಲ್ಲ ಎನ್ನುವ ವಿಷಯ ಹೊರಬಿತ್ತು.

    ಯಶ್ ಗಾಗಿ ಸಿನಿಮಾ ಆಗುವುದಿಲ್ಲ ಎಂದು ಗೊತ್ತಾಗುತ್ತಿದ್ದಂತೆಯೇ ತೆಲುಗು ನಟ ರಾಮ್ ಚರಣ್ ಗಾಗಿ ಮತ್ತೊಂದು ಕಥೆಯನ್ನು ಸಿದ್ದಮಾಡಿಕೊಂಡರಂತೆ ನರ್ತನ್. ಆ ಕಥೆಯನ್ನು ರಾಮ್ ಚರಣ್ ವರೆಗೂ ಮುಟ್ಟಿಸಿದರು ಎನ್ನುವ ಸುದ್ದಿಯಿದೆ. ಅದು ನಿಜವೋ, ಬರೀ ಗಾಳಿ ಸುದ್ದಿಯೋ ಅವರೇ ಹೇಳಬೇಕು. ಇತ್ತೀಚಿನ ದಿನಗಳಲ್ಲಿ ರಾಮ್ ಚರಣ್ ಕೂಡ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎಂದು ಹೇಳಲಾಗುತ್ತಿದೆ. ಪ್ರತಿಭಾವಂತ ನಿರ್ದೇಶಕನಿಗೆ ಹೀಗಾದಾಗ ಹತಾಸೆ ಆಗುವುದು ನಿಜ. ಹಾಗಂತ ನರ್ತನ್ ನನ್ನು ಕೈ ಬಿಡಲಿಲ್ಲ ಶಿವರಾಜ್ ಕುಮಾರ್.

    ಶಿವರಾಜ್ ಕುಮಾರ್ ವೃತ್ತಿ ಬದುಕಿನಲ್ಲಿ ಮಫ್ತಿ ಕೂಡ ಒಂದೊಳ್ಳೆ ಸಿನಿಮಾದ ಯಾದಿಯಲ್ಲಿದೆ. ಹಾಗಾಗಿ ತಮ್ಮದೇ ಬ್ಯಾನರ್ ಸಿನಿಮಾದಲ್ಲಿ ನರ್ತನ್ ಗೆ ಅವಕಾಶ ನೀಡಿದ್ದಾರೆ ಶಿವಣ್ಣ. ಈ ಸಿನಿಮಾಗೆ ‘ಭೈರತಿ ರಣಗಲ್’ ಎಂದು ಹೆಸರಿಟ್ಟಿದ್ದಾರೆ. ಮಫ್ತಿಯಲ್ಲಿ ಶಿವರಾಜ್ ಕುಮಾರ್ ಮಾಡಿದ್ದ ಪಾತ್ರದ ಹೆಸರು ಇದಾಗಿದೆ. ಈ ಸಿನಿಮಾ ಕುರಿತು ಗೀತಾ ಪಕ್ಚರ್ಸ್ ಹಲವು ಮಾಹಿತಿಗಳನ್ನು ಹಂಚಿಕೊಂಡಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶಿವಣ್ಣ ನಟನೆಯ ‘ಭೈರತಿ ರಣಗಲ್’ ಸಿನಿಮಾ ಸೀಕ್ವೆಲ್ ಅಲ್ಲ, ಪ್ರೀಕ್ವೆಲ್

    ಶಿವಣ್ಣ ನಟನೆಯ ‘ಭೈರತಿ ರಣಗಲ್’ ಸಿನಿಮಾ ಸೀಕ್ವೆಲ್ ಅಲ್ಲ, ಪ್ರೀಕ್ವೆಲ್

    ಗೀತಾ ಪಿಕ್ಚರ್ಸ್ ತನ್ನ ಎರಡನೇ ಸಿನಿಮಾ ಘೋಷಣೆ ಮಾಡಿದ್ದು, ಶಿವರಾಜ್ ಕುಮಾರ್ (Shivraj Kumar) ಮತ್ತು ನಿರ್ದೇಶಕ ನರ್ತನ್ (Narthan) ಈ ಸಿನಿಮಾದ ಮೂಲಕ ಮತ್ತೆ ಒಂದಾಗುತ್ತಿದ್ದಾರೆ. ಐದು ವರ್ಷಗಳ ನಂತರ ಮಫ್ತಿ (Mufti) ಸಿನಿಮಾದ ಭೈರತಿ ರಣಗಲ್ (Bhairati Rangal) ಪಾತ್ರದ ಹಿನ್ನೆಲೆಯನ್ನು ಈ ಚಿತ್ರದಲ್ಲಿ ಬಿಚ್ಚಿಡಲಿದ್ದಾರೆ. ಹಾಗಾಗಿ ಇದು ಮಫ್ತಿ ಸಿನಿಮಾದ ಸೀಕ್ವೆಲ್ ಅಲ್ಲ, ಪ್ರೀಕ್ವೆಲ್ ಸಿನಿಮಾ ಎನ್ನಲಾಗುತ್ತಿದೆ. ಭೈರತಿ ರಣಗಲ್ ನ ರೋಚಕ ಸಂಗತಿಗಳನ್ನು ಈ ಸಿನಿಮಾದಲ್ಲಿ ತೋರಿಸಲಿದ್ದಾರಂತೆ ನಿರ್ದೇಶಕರು.

    ಮಫ್ತಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹೊಸ ಸಂಚಲನ ಮೂಡಿಸಿದ್ದ ನಿರ್ದೇಶಕ ನರ್ತನ್, ಆ ನಂತರ ಯಶ್ ಗಾಗಿ ಅವರು ಸಿನಿಮಾ ಮಾಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಬರೋಬ್ಬರಿ ಎರಡ್ಮೂರು ವರ್ಷಗಳ ಕಾಲ ಯಶ್ ಹಿಂದೆ ಸುತ್ತಿದರು ನರ್ತನ್. ಒಂದು ವರ್ಷಕ್ಕೂ ಹೆಚ್ಚು ಕಾಲ ಕೂತು ಯಶ್ ಗಾಗಿ ಕಥೆ ಬರೆದರು. ಆನಂತರ ಆ ಸಿನಿಮಾ ಆಗಲಿಲ್ಲ. ನಾನಾ ಕಾರಣಗಳಿಂದಾಗಿ ಯಶ್ ಗಾಗಿ ನರ್ತನ್ ಸಿನಿಮಾ ಮಾಡುವುದಿಲ್ಲ ಎನ್ನುವ ವಿಷಯ ಹೊರಬಿತ್ತು.

    ಯಶ್ ಗಾಗಿ ಸಿನಿಮಾ ಆಗುವುದಿಲ್ಲ ಎಂದು ಗೊತ್ತಾಗುತ್ತಿದ್ದಂತೆಯೇ ತೆಲುಗು ನಟ ರಾಮ್ ಚರಣ್ ಗಾಗಿ ಮತ್ತೊಂದು ಕಥೆಯನ್ನು ಸಿದ್ದಮಾಡಿಕೊಂಡರಂತೆ ನರ್ತನ್. ಆ ಕಥೆಯನ್ನು ರಾಮ್ ಚರಣ್ ವರೆಗೂ ಮುಟ್ಟಿಸಿದರು ಎನ್ನುವ ಸುದ್ದಿಯಿದೆ. ಅದು ನಿಜವೋ, ಬರೀ ಗಾಳಿ ಸುದ್ದಿಯೋ ಅವರೇ ಹೇಳಬೇಕು. ಇತ್ತೀಚಿನ ದಿನಗಳಲ್ಲಿ ರಾಮ್ ಚರಣ್ ಕೂಡ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎಂದು ಹೇಳಲಾಗುತ್ತಿದೆ. ಪ್ರತಿಭಾವಂತ ನಿರ್ದೇಶಕನಿಗೆ ಹೀಗಾದಾಗ ಹತಾಶೆ ಆಗುವುದು ನಿಜ. ಹಾಗಂತ ನರ್ತನ್ ನನ್ನು ಕೈ ಬಿಡಲಿಲ್ಲ ಶಿವರಾಜ್ ಕುಮಾರ್.

    ಶಿವರಾಜ್ ಕುಮಾರ್ ವೃತ್ತಿ ಬದುಕಿನಲ್ಲಿ ಮಫ್ತಿ ಕೂಡ ಒಂದೊಳ್ಳೆ ಸಿನಿಮಾದ ಯಾದಿಯಲ್ಲಿದೆ. ಹಾಗಾಗಿ ತಮ್ಮದೇ ಬ್ಯಾನರ್ ಸಿನಿಮಾದಲ್ಲಿ ನರ್ತನ್ ಗೆ ಅವಕಾಶ ನೀಡಿದ್ದಾರೆ ಶಿವಣ್ಣ. ಈ ಸಿನಿಮಾಗೆ ‘ಭೈರತಿ ರಣಗಲ್’ ಎಂದು ಹೆಸರಿಟ್ಟಿದ್ದಾರೆ. ಮಫ್ತಿಯಲ್ಲಿ ಶಿವರಾಜ್ ಕುಮಾರ್ ಮಾಡಿದ್ದ ಪಾತ್ರದ ಹೆಸರು ಇದಾಗಿದೆ. ಈ ಸಿನಿಮಾ ಕುರಿತು ಗೀತಾ ಪಕ್ಚರ್ಸ್ ಹಲವು ಮಾಹಿತಿಗಳನ್ನು ಹಂಚಿಕೊಂಡಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಿರ್ದೇಶಕ ನರ್ತನ್ ಕೈ ಹಿಡಿದ ಶಿವರಾಜ್ ಕುಮಾರ್ : ಮತ್ತೆ ಬಂದ ಭೈರತಿ ರಣಗಲ್

    ನಿರ್ದೇಶಕ ನರ್ತನ್ ಕೈ ಹಿಡಿದ ಶಿವರಾಜ್ ಕುಮಾರ್ : ಮತ್ತೆ ಬಂದ ಭೈರತಿ ರಣಗಲ್

    ಫ್ತಿ (Mufti) ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹೊಸ ಸಂಚಲನ ಮೂಡಿಸಿದ್ದ ನಿರ್ದೇಶಕ ನರ್ತನ್ (Nartan), ಆ ನಂತರ ಯಶ್ ಗಾಗಿ ಅವರು ಸಿನಿಮಾ ಮಾಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಬರೋಬ್ಬರಿ ಎರಡ್ಮೂರು ವರ್ಷಗಳ ಕಾಲ ಯಶ್ ಹಿಂದೆ ಸುತ್ತಿದರು ನರ್ತನ್. ಒಂದು ವರ್ಷಕ್ಕೂ ಹೆಚ್ಚು ಕಾಲ ಕೂತು ಯಶ್ ಗಾಗಿ ಕಥೆ ಬರೆದರು. ಆನಂತರ ಆ ಸಿನಿಮಾ ಆಗಲಿಲ್ಲ. ನಾನಾ ಕಾರಣಗಳಿಂದಾಗಿ ಯಶ್ ಗಾಗಿ ನರ್ತನ್ ಸಿನಿಮಾ ಮಾಡುವುದಿಲ್ಲ ಎನ್ನುವ ವಿಷಯ ಹೊರಬಿತ್ತು.

    ಯಶ್ ಗಾಗಿ ಸಿನಿಮಾ ಆಗುವುದಿಲ್ಲ ಎಂದು ಗೊತ್ತಾಗುತ್ತಿದ್ದಂತೆಯೇ ತೆಲುಗು ನಟ ರಾಮ್ ಚರಣ್ ಗಾಗಿ ಮತ್ತೊಂದು ಕಥೆಯನ್ನು ಸಿದ್ದಮಾಡಿಕೊಂಡರಂತೆ ನರ್ತನ್. ಆ ಕಥೆಯನ್ನು ರಾಮ್ ಚರಣ್ ವರೆಗೂ ಮುಟ್ಟಿಸಿದರು ಎನ್ನುವ ಸುದ್ದಿಯಿದೆ. ಅದು ನಿಜವೋ, ಬರೀ ಗಾಳಿ ಸುದ್ದಿಯೋ ಅವರೇ ಹೇಳಬೇಕು. ಇತ್ತೀಚಿನ ದಿನಗಳಲ್ಲಿ ರಾಮ್ ಚರಣ್ ಕೂಡ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎಂದು ಹೇಳಲಾಗುತ್ತಿದೆ. ಪ್ರತಿಭಾವಂತ ನಿರ್ದೇಶಕನಿಗೆ ಹೀಗಾದಾಗ ಹತಾಸೆ ಆಗುವುದು ನಿಜ. ಹಾಗಂತ ನರ್ತನ್ ನನ್ನು ಕೈ ಬಿಡಲಿಲ್ಲ ಶಿವರಾಜ್ ಕುಮಾರ್. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ಜೊತೆ ಜೊತೆಯಲಿ’ ಶಿಲ್ಪಾ ಅಯ್ಯರ್

    ಶಿವರಾಜ್ ಕುಮಾರ್ (Shivraj Kumar) ವೃತ್ತಿ ಬದುಕಿನಲ್ಲಿ ಮಫ್ತಿ ಕೂಡ ಒಂದೊಳ್ಳೆ ಸಿನಿಮಾದ ಯಾದಿಯಲ್ಲಿದೆ. ಹಾಗಾಗಿ ತಮ್ಮದೇ ಬ್ಯಾನರ್ ಸಿನಿಮಾದಲ್ಲಿ ನರ್ತನ್ ಗೆ ಅವಕಾಶ ನೀಡಿದ್ದಾರೆ ಶಿವಣ್ಣ. ಈ ಸಿನಿಮಾಗೆ ‘ಭೈರತಿ ರಣಗಲ್’ (Bhairati Rangal) ಎಂದು ಹೆಸರಿಟ್ಟಿದ್ದಾರೆ. ಮಫ್ತಿಯಲ್ಲಿ ಶಿವರಾಜ್ ಕುಮಾರ್ ಮಾಡಿದ್ದ ಪಾತ್ರದ ಹೆಸರು ಇದಾಗಿದೆ. ಈ ಸಿನಿಮಾ ಕುರಿತು ಗೀತಾ ಪಕ್ಚರ್ಸ್ ಹಲವು ಮಾಹಿತಿಗಳನ್ನು ಹಂಚಿಕೊಂಡಿದೆ.

    ಶಿವರಾಜ್ ಕುಮಾರ್ ಮತ್ತು ನರ್ತನ್ ಕಾಂಬಿನೇಷನ್ ನಲ್ಲಿ ‘ಭೈರತಿ ರಣಗಲ್ ‘ ಸಿನಿಮಾ ಮೂಡಿ ಬರಲಿದ್ದು,  ಗೀತಾ ಶಿವರಾಜ್ ಕುಮಾರ್ ಈ ಸಿನಿಮಾದ ನಿರ್ಮಾಪಕರು. ಗೀತಾ ಪಿಕ್ಚರ್ಸ್ ಬ್ಯಾನರ್ ನಲ್ಲಿ ಮೂಡಿ ಬರಲಿರುವ ಎರಡನೇ ಸಿನಿಮಾ ಇದಾಗಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿನಿಮಾಗಿಂತ ಸುದ್ದಿಯಲ್ಲೇ ಉಳಿದು ಬಿಡ್ತಾರಾ ‘ಮಫ್ತಿ’ ಖ್ಯಾತಿಯ ನಿರ್ದೇಶಕ ನರ್ತನ್

    ಸಿನಿಮಾಗಿಂತ ಸುದ್ದಿಯಲ್ಲೇ ಉಳಿದು ಬಿಡ್ತಾರಾ ‘ಮಫ್ತಿ’ ಖ್ಯಾತಿಯ ನಿರ್ದೇಶಕ ನರ್ತನ್

    ಳೆದೊಂದು ವರ್ಷದಿಂದ ಮಫ್ತಿ (Mufti) ಖ್ಯಾತಿಯ ನಿರ್ದೇಶಕ ನರ್ತನ್ (Nartan) ಕೇವಲ ಸುದ್ದಿಯಾಗಿ ಮಾತ್ರ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಅವರು ತಮ್ಮ ಸಿನಿಮಾದ ಬಗ್ಗೆ ಯಾವುದೇ ಮಾಹಿತಿಯನ್ನೂ ಹಂಚಿಕೊಳ್ಳುತ್ತಿಲ್ಲ. ಹಾಗಾಗಿಯೇ ಸದಾ ಗಾಸಿಪ್ ಕಾಲಂನಲ್ಲೇ ಉಳಿದುಬಿಟ್ಟಿದ್ದಾರೆ. ಕೆಜಿಎಫ್ 2 (KGF 2) ಸಿನಿಮಾ ಮುಗಿಯುತ್ತಿದ್ದಂತೆಯೇ ಯಶ್ ಗಾಗಿ ಅವರು ಸಿನಿಮಾ ಮಾಡಲಿದ್ದಾರೆ ಎಂದು ಸುದ್ದಿ ಆಯಿತು. ನರ್ತನ್ ಆಗಲಿ, ಯಶ್ ಆಗಲಿ ಖಚಿತ ಪಡಿಸೇ ಇದ್ದರೂ, ಸುದ್ದಿಯಂತೂ ಭರ್ಜರಿ ಸೇಲ್ ಆಯಿತು.

    ಕೆಲ ತಿಂಗಳ ಹಿಂದೆಯಷ್ಟೇ ಯಶ್ ಗಾಗಿ ನರ್ತನ್ ಸಿನಿಮಾ ಮಾಡುತ್ತಿಲ್ಲ ಎನ್ನುವ ಸುದ್ದಿ ಹೊರ ಬಿತ್ತು. ನರ್ತನ್ ಮಾಡಿದ ಕಥೆ ಸದ್ಯಕ್ಕೆ ಯಶ್ (Yash) ಗೆ ಒಪ್ಪುತ್ತಿಲ್ಲ. ಹಾಗಾಗಿಯೇ ಕಥೆಯನ್ನು ಯಶ್ ತಿರಸ್ಕರಿಸಿದ್ದಾರೆ ಎಂದು ಗಾಂಧಿನಗರ ಮಾತನಾಡಿಕೊಂಡಿತು. ಈ ಕುರಿತಾಗಿಯೂ ಇಬ್ಬರೂ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಒಂದೂವರೆ ವರ್ಷದಿಂದ ಯಶ್ ಗಾಗಿಯೇ ಕಥೆ ಬರೆದುಕೊಂಡಿದ್ದ ನರ್ತನ್ ಮುಂದೇನು ಮಾಡುತ್ತಾರೆ ಎನ್ನುವ ಚರ್ಚೆ ಕೂಡ ಶುರುವಾಯಿತು. ಇದೀಗ ಮತ್ತೆ ನರ್ತನ್ ಸುದ್ದಿಯಾಗಿದ್ದಾರೆ. ಇವರ ಸಿನಿಮಾದಲ್ಲಿ ಯಶ್ ಗೆ ಬದಲಾಗಿ ಬೇರೆ ನಟರೊಬ್ಬರು ಇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಹಿಂದುತ್ವದಲ್ಲೇ ಬ್ರಾಹ್ಮಣತ್ವವಿದೆ; ಪಬ್ಲಿಸಿಟಿಗೋಸ್ಕರ ನಟ ಚೇತನ್ ವಿವಾದಿತ ಹೇಳಿಕೆ – ಪೇಜಾವರ ಶ್ರೀ

    ಯಶ್ ಜೊತೆ ನರ್ತನ್ ಸಿನಿಮಾಡುತ್ತಿಲ್ಲ ಎಂಬ ಸುದ್ದಿ ಹರಡುತ್ತಿದ್ದಂತೆಯೇ, ಇದೀಗ ಯಶ್ ಬದಲಾಗಿ ತೆಲುಗಿನ ರಾಮ್ ಚರಣ್ ತೇಜ ಅವರ ಹೆಸರು ಕೇಳಿ ಬರುತ್ತಿದೆ. ನರ್ತನ್ ಅವರ ಮುಂದಿನ ಸಿನಿಮಾದಲ್ಲಿ ರಾಮ್ ಚರಣ್ ತೇಜ (Ram Charan Teja) ಹೀರೋ ಆಗಿ ನಟಿಸಲಿದ್ದಾರೆ ಎನ್ನುವುದು ಲೆಟೆಸ್ಟ್ ನ್ಯೂಸ್. ದೊಡ್ಡಮಟ್ಟದಲ್ಲಂತೂ ಇದು ಸುದ್ದಿ ಆಗಿದೆ. ಆದರೆ, ಯಾವುದು ಸತ್ಯ, ಯಾವುದು ಸುಳ್ಳು ಎನ್ನುವುದನ್ನು ಅವರಿಬ್ಬರೇ ಹೇಳಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • 11 ವರ್ಷದ ಬಾಲಕನ ಮೇಲೆ ಮದರಸಾದ ಮುಫ್ತಿಯಿಂದ ಅತ್ಯಾಚಾರ ಆರೋಪ!

    11 ವರ್ಷದ ಬಾಲಕನ ಮೇಲೆ ಮದರಸಾದ ಮುಫ್ತಿಯಿಂದ ಅತ್ಯಾಚಾರ ಆರೋಪ!

    ಲಕ್ನೋ: 11 ವರ್ಷದ ಬಾಲಕನ ಮೇಲೆ ಮದರಸಾದ ಮುಫ್ತಿಯೊಬ್ಬ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಮಾವನ ತಾಲೂಕಿನಲ್ಲಿ ನಡೆದಿದೆ.

    ಸತ್ಲದ ನಿವಾಸಿಯಾದ ಮದರಸಾದ ಮುಫ್ತಿ ಅಬ್ದುಲ್ ಕಲಾಂ ಶಿಕ್ಷಣದ ಹೆಸರಿನಲ್ಲಿ ಮೂಲತಃ ಸಹರಾನ್‍ಪುರದ ಸಂತ್ರಸ್ತ ಬಾಲಕನಿಗೆ ದೌರ್ಜನ್ಯ ಎಸಗುತ್ತಿದ್ದರು ಎನ್ನಲಾಗಿದೆ. ಈದ್ ಹಬ್ಬದಂದು ಮನೆಗೆ ತೆರಳಿದ್ದ 11 ವರ್ಷದ ಬಾಲಕ ತನ್ನ ಕುಟುಂಬಸ್ಥರಿಗೆ 7 ತಿಂಗಳ ನಂತರ ನೋವಿನ ಬಗ್ಗೆ ಹೇಳಿಕೊಂಡಿದ್ದಾನೆ.

    ಈ ಕುರಿತು ಸಂತ್ರಸ್ತ ಬಾಲಕನ ತಂದೆ ಶನಿವಾರ ಪೊಲೀಸ್ ಠಾಣೆಗೆ ಆಗಮಿಸಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸದ್ಯ ಮುಫ್ತಿ ತಲೆಮರೆಸಿಕೊಂಡಿದ್ದಾನೆ.

    ಮುಫ್ತಿ, ಮೀರತ್‍ನ ಮಾವಾನಾದ ಇಕ್ರಮ್ ನಗರ ಫರೀದ್ ಕಾಲೋನಿಯಲ್ಲಿರುವ ಮದರಸಾದ ನಿರ್ದೇಶಕನಾಗಿದ್ದಾನೆ. ಅವನು ಮಕ್ಕಳಿಗೆ ತರಬೇತಿ ನೀಡುತ್ತಿದ್ದು, ಸುತ್ತಮುತ್ತಲಿನ ಪ್ರದೇಶದ ಜೊತೆಗೆ ಇತರ ಹಲವು ಜಿಲ್ಲೆಗಳ ಮಕ್ಕಳು ಸಹ ಈ ಮದರಸಾದಲ್ಲಿ ಉಳಿದುಕೊಂಡು ಶಿಕ್ಷಣ ಪಡೆಯುತ್ತಿದ್ದಾರೆ. ಇದರಲ್ಲಿ ಸಂತ್ರಸ್ತ ಬಾಲಕನೂ ಇದ್ದಾನೆ. ಬಾಲಕನು ಸುಮಾರು 7 ತಿಂಗಳ ಹಿಂದೆ ಮದರಸಾದಲ್ಲಿ ಓದಲು ಬಂದಿದ್ದರು ಎಂದು ತಿಳಿದು ಬಂದಿದೆ.

    ಈದ್ ಹಬ್ಬದಂದು ಸಂತ್ರಸ್ತ ಬಾಲಕ ಮನೆಗೆ ಹೋದಾಗ ಆರೋಪಿ ಮುಫ್ತಿಯ ಕೃತ್ಯವನ್ನು ತನ್ನ ಕುಟುಂಬದ ಸದಸ್ಯರಿಗೆ ತಿಳಿಸಿದ್ದಾನೆ. ಹಬ್ಬ ಮುಗಿದ ಬಳಿಕ ಶನಿವಾರ ಮಧ್ಯಾಹ್ನ ಬಾಲಕನನ್ನು ಮನೆಯವರು ಮದರಸಾಕ್ಕೆ ಕರೆದೊಯ್ದರು. ಆದರೆ ಈ ಆರೋಪ ಸುಳ್ಳು ಎನ್ನುತ್ತಿದ್ದಾರೆ ಮದರಸಾದವರು.

    police (1)

    ಕೊನೆಗೆ ಸಂಜೆಯ ವೇಳೆಗೆ ವಿಷಯ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ದೂರು ಸ್ವೀಕರಿಸಿದ ಪೊಲೀಸರು ಸಂತ್ರಸ್ತ ಬಾಲಕನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ. ಈ ಸಂಬಂಧ ಮುಫ್ತಿ ವಿರುದ್ಧ ಕೇಸ್ ದಾಖಲಾಗಿತ್ತು.