Tag: Mukesh Sahani

  • ಮೂವರು ಶಾಸಕರು ಬಿಜೆಪಿಗೆ ಸೇರ್ಪಡೆ – ಸಚಿವ ಮುಖೇಶ್ ನಾಮಫಲಕ ನಾಪತ್ತೆ

    ಮೂವರು ಶಾಸಕರು ಬಿಜೆಪಿಗೆ ಸೇರ್ಪಡೆ – ಸಚಿವ ಮುಖೇಶ್ ನಾಮಫಲಕ ನಾಪತ್ತೆ

    ಪಾಟ್ನಾ: ಬಿಜೆಪಿ ಪಕ್ಷಕ್ಕೆ ಮೂರು ಶಾಸಕರು ಹೊಸದಾಗಿ ಸೇರ್ಪಡೆಯಾಗಿದ್ದ ಬೆನ್ನಲ್ಲೇ ಬಿಹಾರದ ಸಚಿವರೊಬ್ಬರ ಮನೆಯ ಹೊರಗಡೆಯಿದ್ದ ನಾಮಫಲಕ ನಾಪತ್ತೆಯಾಗಿದೆ. ಈ ಸುದ್ದಿ ಬಿಹಾರದಲ್ಲಿ ಸಂಚಲನ ಮೂಡಿಸಿದೆ.

    ವಿಕಾಸಶೀಲ್ ಇನ್ಸಾನ್ ಪಕ್ಷದ ಮುಖ್ಯಸ್ಥರಾಗಿರುವ ಬಿಹಾರ ಸಚಿವ ಮುಖೇಶ್ ಸಹಾನಿ ಅವರ ಮನೆ ಮುಂದೆ ಇದ್ದ ಅವರ ನಾಮಫಲಕ ನಾಪತ್ತೆಯಾಗಿದೆ. ಅದರಲ್ಲಿಯೂ ಈ ಸುದ್ದಿಯಲ್ಲಿರುವ ವಿಶೇಷತೆ ಎಂದರೆ 3 ಶಾಸಕರು ಬಿಜೆಪಿ ಪಕ್ಷಕ್ಕೆ ಸೇರಿದ ಬಳಿಕ ಮುಖೇಶ್ ಮನೆಯಲ್ಲಿ ಈ ಅಚ್ಚರಿ ಘಟನೆ ನಡೆದಿದ್ದು, ಬಿಹಾರದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಮಾಜಿ ಸಿಎಂ ಸಿದ್ದರಾಮಯ್ಯ ನಾಡಿನ ಮಠಾಧೀಶರ ಕ್ಷಮೆ ಕೇಳಬೇಕು: ಅಭಿನವ ಮಂಜುನಾಥ ಶ್ರೀ

    ಮುಖೇಶ್ ಅವರ ಪಕ್ಷ ಬಿಹಾರದಲ್ಲಿ ಬಿಜೆಪಿ ಮತ್ತು ಸಿಎಂ ನಿತೀಶ್ ಕುಮಾರ್ ಅವರ ಜನತಾ ದಳ(ಯುನೈಟೆಡ್)ದ ಮೈತ್ರಿಕೂಟದಲ್ಲಿತ್ತು. ಆದರೆ ಬಿಹಾರದ ಬಿಜೆಪಿ ಮುಖ್ಯಸ್ಥ ಮತ್ತು ಸಂಸದ ಸಂಜಯ್ ಜೈಸ್ವಾಲ್ ಅವರು, ಬಿಹಾರದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಅಲಯನ್ಸ್ ಅಥವಾ ಎನ್‍ಡಿಎ ಜೊತೆ ಇನ್ನು ಮುಂದೆ ಮೈತ್ರಿ ನಡೆಸುವುದಿಲ್ಲವೆಂದು ಹೇಳಿಕೆ ಕೊಟ್ಟರು. ಈ ಹೇಳಿಕೆ ಕೊಟ್ಟ ಒಂದು ದಿನದ ನಂತರ ಮುಖೇಶ್ ಅವರ ನಾಮಫಲಕ ಕಾಣಿಯಾಗಿದೆ.

    ಮುಖೇಶ್ ಅವರ ಪಕ್ಷ ಕಳೆದ ಚುನಾವಣೆಯಲ್ಲಿ ಭಾರೀ ಹಿನ್ನೆಡೆಯಾದ ಪರಿಣಾಮ ಅವರ ಪಕ್ಷದಲ್ಲಿದ್ದ ಮೂವರು ಶಾಸಕರು ಬುಧವಾರ ಬಿಜೆಪಿಗೆ ಸೇರಿದರು. ಈ ಹಿನ್ನೆಲೆ ಮುಖೇಶ್ ಅವರು, ಬಿಹಾರ ಬಿಜೆಪಿ ಪಕ್ಷಗಳು ಮೊದಲಿನಿಂದಲೂ ಅವರನ್ನು ಒಡೆಯುವ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಕಾಶಿ ದೇವಸ್ಥಾನ, ಜ್ಞಾನವಾಪಿ ಮಸೀದಿ ಭೂ ವಿವಾದ – ಮಾ 29 ರಿಂದ ನಿತ್ಯ ವಿಚಾರಣೆ

    ರಾಜು ಸಿಂಗ್, ಮಿಶ್ರಿ ಲಾಲ್ ಯಾದವ್ ಮತ್ತು ಸ್ವರ್ಣ ಸಿಂಗ್ ಈ ಮೂವರು ಶಾಸಕರು ಮುಖೇಶ್ ಅವರ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರಿದರು. ಈ ವೇಳೆ ಬಿಜೆಪಿ ಪಕ್ಷವು ಮುಖೇಶ್ ಅವರಿಗೆ ಬಿಹಾರ ಕ್ಯಾಬಿನೆಟ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತಿದೆ. ಆದರೆ ಗುರುವಾರ ಮುಖೇಶ್ ಅವರು ರಾಜೀನಾಮೆ ನೀಡುವುದನ್ನು ನಿರಾಕರಿಸಿದ್ದರು.

  • ವಿಐಪಿ ಪಕ್ಷದ ಮೂವರು ಶಾಸಕರು ಬಿಜೆಪಿ ಸೇರ್ಪಡೆ

    ವಿಐಪಿ ಪಕ್ಷದ ಮೂವರು ಶಾಸಕರು ಬಿಜೆಪಿ ಸೇರ್ಪಡೆ

    ಪಾಟ್ನಾ: ವಿಕಾಸಶೀಲ್ ಇನ್ಸಾನ್ ಪಾರ್ಟಿ(ವಿಐಪಿ)ಯ ಮೂವರು ಶಾಸಕರು ಬುಧವಾರ ಪಕ್ಷವನ್ನು ತೊರೆದು ಮುಖೇಶ್ ಸಹಾನಿ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

    ವಿಐಪಿಯು ಬಿಜೆಪಿ, ಜನತಾ ದಳ ಯುನೈಟೆಡ್ (ಜೆಡಿಯು) ಮತ್ತು ಹಿಂದೂಸ್ತಾನ್ ಅವಾಮಿ ಮೋರ್ಚಾ (ಎಚ್‍ಎಎಂ) ವನ್ನು ಒಳಗೊಂಡಿರುವ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‍ಡಿಎ) ಮಿತ್ರ ಪಕ್ಷವಾಗಿದ್ದು, ಇದೀಗ ವಿಐಪಿ ತೊರೆದು ರಾಜು ಸಿಂಗ್, ಮಿಶ್ರಿ ಲಾಲ್ ಯಾದವ್ ಮತ್ತು ಸ್ವರ್ಣ ಸಿಂಗ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇದನ್ನೂ ಓದಿ: ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಪುನಾರಂಭಿಸಿ: ಸೋನಿಯಾ ಗಾಂಧಿ

    ಈ ಮೂವರು ಶಾಸಕರು ವಿಐಪಿ ಪಕ್ಷವನ್ನು ತೊರೆದು ಬಿಜೆಪಿ ಸೇರ್ಪಡೆಗೊಂಡಿರುವುದರಿಂದ ವಿಧಾನಸಭೆಯಲ್ಲಿ 77 ಶಾಸಕರನ್ನು ಹೊಂದಿರುವ ಅತಿದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದರೆ, 75 ಶಾಸಕರನ್ನು ಹೊಂದಿರುವ ಮೂಲಕ ಆರ್‍ಜೆಡಿಯು ಎರಡನೇ ಸ್ಥಾನಕ್ಕೀಳಿದಿದೆ. ಜೆಡಿಯು 45, ಕಾಂಗ್ರೆಸ್ 19 ಮತ್ತು ಎಡಪಕ್ಷಗಳು 15 ಶಾಸಕರನ್ನು ಹೊಂದಿದೆ.

    ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮುಖೇಶ್ ಸಹಾನಿ ನೇತೃತ್ವದ ವಿಐಪಿ ಪಕ್ಷವು ಬಿಜೆಪಿ ವಿರುದ್ಧ 57 ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಏಪ್ರಿಲ್ 12 ರಂದು ನಡೆಯಲಿರುವ ಬೋಚಾಹಾ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿಯ ಬೇಬಿ ಕುಮಾರಿ ವಿರುದ್ಧ ಗೀತಾ ದೇವಿ ಎಂಬ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದಾರೆ. ಇದನ್ನೂ ಓದಿ: ಮೋಹಿನಿಯಾಟ್ಟಂ ನೃತ್ಯಕ್ಕೆ ಅರ್ಧದಲ್ಲೇ ತಡೆ – ಕೇರಳ ಜಡ್ಜ್‌ ಪಾಷಾ ವಿರುದ್ಧ ಖ್ಯಾತ ಕಲಾವಿದೆ ಆಕ್ರೋಶ

    ಸದ್ಯ ಮುಖೇಶ್ ಸಹಾನಿ ಎಂಎಲ್‍ಸಿ ಆಗಿದ್ದು, ಜುಲೈನಲ್ಲಿ ಅವರ ಅವಧಿ ಮುಕ್ತಾಯವಾಗಲಿದೆ. ಅಲ್ಲದೇ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರದ ಎನ್‍ಡಿಎ ಸರ್ಕಾರದಲ್ಲಿ ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವರಾಗಿದ್ದಾರೆ.