Tag: Mullayanagiri Peak

  • ಪಶ್ಚಿಮ ಘಟ್ಟ ತಪ್ಪಲಿನಲ್ಲಿ ಕಾಡ್ಗಿಚ್ಚು – ಡ್ರೋನ್ ಕಣ್ಗಾವಲಿಗೆ ಮುಂದಾದ ಅರಣ್ಯ ಇಲಾಖೆ

    ಪಶ್ಚಿಮ ಘಟ್ಟ ತಪ್ಪಲಿನಲ್ಲಿ ಕಾಡ್ಗಿಚ್ಚು – ಡ್ರೋನ್ ಕಣ್ಗಾವಲಿಗೆ ಮುಂದಾದ ಅರಣ್ಯ ಇಲಾಖೆ

    ಚಿಕ್ಕಮಗಳೂರು: ಮುಳ್ಳಯ್ಯನಗಿರಿ (Mullayanagiri) ತಪ್ಪಲಿನಲ್ಲಿ ಕಾಣಿಸಿಕೊಳ್ಳುತ್ತಿರುವ ಕಾಡ್ಗಿಚ್ಚಿನಿಂದ ಚಂದ್ರದ್ರೋಣ (Chandra Drona) ಪರ್ವತಗಳ ಸಾಲಿನ ರಕ್ಷಣೆ ಮಾಡಲು ಅರಣ್ಯ ಇಲಾಖೆ ಪಣ ತೊಟ್ಟಿದ್ದು, ಡ್ರೋನ್‌ಗಳ ಮೊರೆ ಹೋಗಿದ್ದಾರೆ.

    ಮುಳ್ಳಯ್ಯನಗಿರಿ, ದತ್ತಪೀಠದ ಗುಡ್ಡಗಳಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಕಾಡನ್ನ ರಕ್ಷಿಸಲು ಡ್ರೋನ್ ಕಣ್ಗಾವಲಿಗೆ ಇಲಾಖೆ ಮುಂದಾಗಿದೆ. ಇದನ್ನೂ ಓದಿ: ಖರ್ಜೂರದೊಳಗೆ ಇಟ್ಟು ಸಾಗಿಸುತ್ತಿದ್ದ 172 ಗ್ರಾಂ ಚಿನ್ನ ಏರ್‌ಪೋರ್ಟ್‌ನಲ್ಲಿ ವಶಕ್ಕೆ

    ನಿತ್ಯ ಸಾವಿರಾರು ಜನ ಪ್ರವಾಸಿಗರು ಬಂದು ಹೋಗುವ ಪಶ್ಚಿಮ ಘಟ್ಟಗಳ ತಪ್ಪಲುಗಳಲ್ಲಿ ಡ್ರೋನ್ ಕಣ್ಗಾವಲಿನಿಂದ ಬೆಂಕಿ ಹಾಕುವವರು ಸ್ಥಳಿಯರೋ, ಪ್ರವಾಸಿಗರೋ ಅಥವಾ ನಿಜಕ್ಕೂ ಕಾಡ್ಗಿಚ್ಚೋ ಎಂಬುದನ್ನು ಗುರುತಿಸಲು ಸಹಕಾರಿಯಾಗುತ್ತದೆ. ಇದರಿಂದ ನಿತ್ಯ ಸುಟ್ಟು ಕರಕಲಾಗ್ತಿರೋ ಕಾಡಿನ ರಕ್ಷಣೆಗೆ ಅರಣ್ಯ ಅಧಿಕಾರಿಗಳು ಮುಂದಾಗಿದ್ದಾರೆ. ಇದನ್ನೂ ಓದಿ: ಮಡಿಕೇರಿಯ ಇಗ್ಗುತಪ್ಪ, ನಾಲಾಡಿ ಬೆಟ್ಟದಲ್ಲಿ ಕಾಡ್ಗಿಚ್ಚು – 20 ಎಕ್ರೆಗೆ ಬೆಂಕಿ

    ಗುಡ್ಡದ ತುದಿಯಲ್ಲಿ ಬೆಂಕಿ ಬಿದ್ದರೆ ನಂದಿಸುವುದು ಕಷ್ಟವಾಗಿರುವುದರಿಂದ ಅಗ್ನಿಶಾಮಕ ವಾಹನ ಹೋಗದ ಕಡೆ ಅಧಿಕಾರಿಗಳೇ ಸೊಪ್ಪಿನಿಂದ ಕಾಡನ್ನ ರಕ್ಷಿಸಬೇಕು. ಇದೀಗ ಸ್ಥಳಿಯರು ಹಾಗೂ ಪ್ರವಾಸಿಗರ ಮೇಲೆ ಹದ್ದಿನ ಕಣ್ಣಿಡಲು ಅರಣ್ಯಾಧಿಕಾರಿಗಳು ಡ್ರೋನ್ ಮೊರೆ ಹೋಗಿದ್ದಾರೆ.

    ಮಂಗಳವಾರ ಹೊರನಾಡು ಸಮೀಪದ ಮಾವಿನಹೊಳ-ಬಲಿಗೆ ಗುಡ್ಡದಲ್ಲಿ ಕಾಣಿಸಿಕೊಂಡ ಕಾಡ್ಗಿಚ್ಚಿನ ಪರಿಣಾಮ ಹತ್ತಾರು ಎಕ್ರೆ ಅರಣ್ಯ ಬೆಂಕಿಗಾಹುತಿಯಾಗಿತ್ತು. ಇದನ್ನೂ ಓದಿ: ಆಹಾರ ಪ್ರಿಯರಿಗೆ ಶಾಕ್‌ – ಇಡ್ಲಿ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್‌ನಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ

  • ಮುಳ್ಳಯ್ಯನಗಿರಿಯಲ್ಲಿ ಜನಜಾತ್ರೆ- ಫುಲ್ ಟ್ರಾಫಿಕ್, ಪೊಲೀಸರ ಜೊತೆ ಪ್ರವಾಸಿಗರ ವಾಗ್ವಾದ

    ಮುಳ್ಳಯ್ಯನಗಿರಿಯಲ್ಲಿ ಜನಜಾತ್ರೆ- ಫುಲ್ ಟ್ರಾಫಿಕ್, ಪೊಲೀಸರ ಜೊತೆ ಪ್ರವಾಸಿಗರ ವಾಗ್ವಾದ

    ಚಿಕ್ಕಮಗಳೂರು: ರಾಜ್ಯದ ಸುಪ್ರಸಿದ್ಧ ಪ್ರವಾಸಿ ತಾಣ ತಾಲೂಕಿನ ಮುಳ್ಳಯ್ಯನಗಿರಿಗೆ ಇಂದು ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿದ್ದು, ಕೈಮರ ಚೆಕ್ ಪೋಸ್ಟ್ ಬಳಿ ಭಾರೀ ಸಂಖ್ಯೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

    ಗೌರಿ-ಗಣೇಶ ಹಬ್ಬ ಹಾಗೂ ವಾರಾಂತ್ಯದ ಹಿನ್ನೆಲೆ ತಾಲೂಕಿನ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರ ಭಾಗಕ್ಕೆ ಇಂದು ಸಾವಿರಾರು ಪ್ರವಾಸಿಗರು ಭೇಟಿ ನೀಡಿದ್ದರು. ಏಕಕಾಲಕ್ಕೆ ಭಾರೀ ವಾಹನಗಳು ಬಂದ ಹಿನ್ನೆಲೆ ಮುಳ್ಳಯ್ಯನಗಿರಿ, ಚಿಕ್ಕಮಗಳೂರು ಹಾಗೂ ತರೀಕೆರೆ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ಕೈಮರ ಚೆಕ್ ಪೋಸ್ಟ್ ಬಳಿ ಸುಮಾರು ಒಂದು ಗಂಟೆ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದನ್ನೂ ಓದಿ: ಆರೋಗ್ಯ ಕವಚ ಸೇವೆಯಡಿ 120 ಅಂಬುಲೆನ್ಸ್ ಸೇರ್ಪಡೆ – ಸಿಎಂ ಲೋಕಾರ್ಪಣೆ

    ಈ ವೇಳೆ ವಾಹನಗಳನ್ನ ನಿಯಂತ್ರಿಸುವಾಗ ಪೊಲೀಸರು, ಚೆಕ್ ಪೋಸ್ಟ್ ಸಿಬ್ಬಂದಿ ಹಾಗೂ ಪ್ರವಾಸಿಗರ ಮಧ್ಯೆ ಮಾತಿನ ಚಕಮಕಿ ಕೂಡ ನಡೆಯಿತು. ಕೇವಲ ಮುಳ್ಳಯ್ಯನಗಿರಿ ಭಾಗಕ್ಕೆ ಒಂದೇ ತಿಂಗಳಲ್ಲಿ 85 ಸಾವಿರಕ್ಕೂ ಅಧಿಕ ಜನ ಬಂದ ಹಿನ್ನೆಲೆ ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಗಿರಿ ಭಾಗಕ್ಕೆ ಪ್ರವಾಸಿಗರಿಗೆ ಮಿತಿ ಹೇರಿತ್ತು. ದಿನಕ್ಕೆ ಕೇವಲ 300 ವಾಹನ 1,200 ಪ್ರವಾಸಿಗರಗಷ್ಟೆ ಅವಕಾಶ ನೀಡಿತ್ತು. ಬೆಳಗ್ಗೆ 6-9ಕ್ಕೆ 150 ಗಾಡಿ, 600 ಪ್ರವಾಸಿಗರು, ಮಧ್ಯಾಹ್ನ 2-4ಕ್ಕೆ 150 ವಾಹನಗಳು 600 ಜನ. ದಿನಕ್ಕೆ ಕೇವಲ 300 ಗಾಡಿ, 1,200 ಪ್ರವಾಸಿಗರಷ್ಟೆ ಅವಕಾಶ ನೀಡಿತ್ತು. ಆದರೆ ಇಂದು ಭಾರೀ ಸಂಖ್ಯೆಯಲ್ಲಿ ಟ್ರಾಫಿಕ್ ಜಾಮ್ ಆದ ಹಿನ್ನೆಲೆ ಚೆಕ್ ಪೋಸ್ಟ್ ಸಿಬ್ಬಂದಿ 250ಕ್ಕೂ ಹೆಚ್ಚು ವಾನಗಳನ್ನ ಗಿರಿಗೆ ಕಳಿಸಿ ಮತ್ತೆ ನಿರ್ಬಂಧಿಸಿತ್ತು.

    ಪ್ರವಾಸಿ ವಾಹನಗಳು ಹೇಳದೆ-ಕೇಳದೆ ಮುನ್ನುಗ್ಗಿದವು. ಪ್ರಶ್ನಿಸಿದ ಪೊಲೀಸರ ಜೊತೆ ಪ್ರವಾಸಿಗರು ವಾಗ್ಯುದ್ಧಕ್ಕೆ ಇಳಿದಿದ್ದರು. ಬಳಿಕ ಪೊಲೀಸರ ಕಟ್ಟುನಿಟ್ಟಿನ ಸೂಚನೆ ಹಿನ್ನೆಲೆ ಎಲ್ಲರೂ ಸುಮ್ಮನಾದರು. ವಾಹನಗಳನ್ನು ಗಿರಿ ಭಾಗಕ್ಕೆ ಕಳಿಸಿ ಟ್ರಾಫಿಕ್ ಜಾಮ್ ನಿಯಂತ್ರಿಸಿದರು. ನಂತರ ಬಂದ ವಾಹನಗಳನ್ನು ಪೊಲೀಸರು ರಸ್ತೆ ಬದಿ ಸಾಲುಗಟ್ಟಿ ನಿಲ್ಲಿಸಿದ್ದರು. ತಡವಾಗಿ ಬಂದ ಪ್ರವಾಸಿಗರು ಮಧ್ಯಾಹ್ನ 2 ಗಂಟೆವರೆಗೂ ಕಾಯಬೇಕೆಂದು ಕೆಲವರು ಬೇರೆ-ಬೇರೆ ಭಾಗಕ್ಕೆ ಹೊರಟರು. ಇನ್ನೂ ಕೆಲವರು ಬೇರೆ ಕಡೆ ಹೋದರೆ ಮತ್ತೆ ಗಿರಿ ಭಾಗಕ್ಕೆ ಹೋಗಲು ಆಗುತ್ತೋ, ಇಲ್ಲವೋ ಎಂದು ರಸ್ತೆ ಬದಿ ಗಾಡಿ ಹಾಕಿ ಟೈಂ ಪಾಸ್ ಮಾಡಲು ಮುಂದಾದರು.

  • ಮುಳ್ಳಯ್ಯನಗಿರಿಗೆ ಲಿಮಿಟೆಡ್ ಟೂರಿಸ್ಟ್- ದಿನಕ್ಕೆ 300 ಗಾಡಿ, 1,200 ಪ್ರವಾಸಿಗರಿಗಷ್ಟೇ ಅವಕಾಶ

    ಮುಳ್ಳಯ್ಯನಗಿರಿಗೆ ಲಿಮಿಟೆಡ್ ಟೂರಿಸ್ಟ್- ದಿನಕ್ಕೆ 300 ಗಾಡಿ, 1,200 ಪ್ರವಾಸಿಗರಿಗಷ್ಟೇ ಅವಕಾಶ

    ಚಿಕ್ಕಮಗಳೂರು: ಕಾಫಿನಾಡ ಮುಳ್ಳಯ್ಯನಗಿರಿ ಭಾಗಕ್ಕೆ ಬರುವ ಪ್ರವಾಸಿಗರು ಪಕ್ಕಾ ಪ್ಲ್ಯಾನ್ ಮಾಡಿಕೊಂಡು ಬರಬೇಕು. ಇಲ್ಲವಾದರೆ, ತಾಲೂಕಿನ ಕೈಮರ ಚೆಕ್‍ಪೋಸ್ಟ್ ಬಳಿ ಗಂಟೆಗಟ್ಟಲೇ ಕಾಯಬೇಕಾದ ಸ್ಥಿತಿ ನಿರ್ಮಾಣವಾಗಲಿದೆ. ಬೆಳ್ಳಂಬೆಳಗ್ಗೆ ಮೊದಲು ಬರುವ 150 ಗಾಡಿ, 600 ಪ್ರವಾಸಿಗರಷ್ಟೆ ಪಾಸ್ ಆಗುತ್ತಾರೆ. ಲೇಟಾಗಿ ಬಂದವರು ಚೆಕ್‍ಪೋಸ್ಟ್ ಬಳಿ ಲಾಕ್ ಆಗಬೇಕಾಗುತ್ತೆ. ಯಾಕೆಂದರೆ, ತಾಲೂಕಿನ ಮುಳ್ಳಯ್ಯನಗಿರಿ ಭಾಗಕ್ಕೆ ದಿನಕ್ಕೆ 300 ವಾಹನಗಳು ಹಾಗೂ 1,200 ಪ್ರವಾಸಿಗರನ್ನಷ್ಟೆ ಬಿಡಬೇಕೆಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

    ಇಂದಿನಿಂದಲೇ ಈ ಆದೇಶ ಜಾರಿಗೆ ಬಂದಿದ್ದು, ಪ್ರವಾಸಿಗರು ಪಕ್ಕಾ ಪ್ಲ್ಯಾನ್ ಮಾಡಿಕೊಂಡು ಬರಬೇಕಾಗಿದೆ. ಬೆಳಗ್ಗೆ 6-9 ಗಂಟೆವರೆಗೆ 150 ಗಾಡಿಗಳು, 600 ಜನ. ಮಧ್ಯಾಹ್ನ 2-4 ಗಂಟೆಯವರೆಗೆ 150 ಗಾಡಿ, 600 ಪ್ರವಾಸಿಗರಿಗೆ ಮಾತ್ರ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ಎರಡು ಬೈಕ್‍ಗಳನ್ನು ಒಂದು ಕಾರು ಎಂದು ಪರಿಗಣಿಸಿ ದಿನಕ್ಕೆ 300 ವಾಹನ, 1,200 ಪ್ರವಾಸಿಗರನ್ನು ಮಾತ್ರ ಬಿಡಬೇಕು ಎಂದು ಚೆಕ್‍ಪೋಸ್ಟ್ ಸಿಬ್ಬಂದಿಗೆ ಸೂಚಿಸಿದೆ.

    ಇಂದು ಕೂಡ ತಡವಾಗಿ ಬಂದ ಪ್ರವಾಸಿಗರನ್ನ ರಸ್ತೆ ಮಧ್ಯೆಯೇ ಅಡ್ಡಗಟ್ಟಿದ ಪೊಲೀಸರು, ಮಧ್ಯಾಹ್ನ ಬನ್ನಿ ಎಂದು ತಡೆದು ವಾಪಸ್ ಕಳಿಸಿದರು. ಆದ್ದರಿಂದ ಮುಳ್ಳಯ್ಯನಗಿರಿ ಮಾರ್ಗದ ಕೈಮರ ಚೆಕ್‍ಪೋಸ್ಟ್ ಬಳಿ ತಡವಾಗಿ ಬಂದ ಪ್ರವಾಸಿ ವಾಹನಗಳು ಅಲ್ಲಲ್ಲೇ ನಿಂತು ಮಧ್ಯಾಹ್ನವಾಗೋದನ್ನೇ ಕಾಯುತ್ತಿದ್ದರು. ತಡವಾಗಿ ಬಂದ ಪ್ರವಾಸಿಗರು ದೂರದಿಂದ ಬಂದಿದ್ದೇವೆ. ಮಧ್ಯಾಹ್ನದವರೆಗೂ ಸುಮ್ಮನೆ ಕಾಯುವುದು ಹೇಗೆಂದು ಜಿಲ್ಲಾಡಳಿತದ ತಕ್ಷಣದ ನಿರ್ಧಾರದ ವಿರುದ್ಧ ಅಸಮಾಧಾನವನ್ನೂ ಹೊರಹಾಕಿದರು.

    ಕೆಲವರು ಮಧ್ಯಾಹ್ನದವರೆಗೆ ಇಲ್ಲಿ ನಿಂತು ಏನು ಮಾಡುವುದು ಎಂದು ಕಲ್ಲತ್ತಿಗರಿ, ಕೆಮ್ಮಣ್ಣುಗುಂಡಿ, ಅಯ್ಯನಕೆರೆ ಸೇರಿದಂತೆ ಸುತ್ತಮುತ್ತಲಿನ ಬೇರೆ ಪ್ರವಾಸಿ ತಾಣಗಳತ್ತ ಮುಖಮಾಡಿದರು. ಆದರೆ ಕೆಲವರು ನಾವು ಬೇರೆ ಕಡೆ ಹೋಗಿ ಬರುವುದು ಸ್ವಲ್ಪ ತಡವಾದರೂ ಮಧ್ಯಾಹ್ನ ಕೂಡ ಹೋಗಲಾಗುವುದಿಲ್ಲ. ಹಾಗಾಗಿ ಎಲ್ಲೂ ಹೋಗುವುದು ಬೇಡವೆಂದು ನಿಂತಲ್ಲೇ ನಿಂತು ಮಧ್ಯಾಹ್ನವಾಗೋದನ್ನ ಕಾಯುತ್ತಿದ್ದರು.

    ಕೇವಲ ಮುಳ್ಳಯ್ಯನಗಿರಿಗಷ್ಟೇ ಅಲ್ಲದೆ ಜಿಲ್ಲೆಯ ಇತರೆ ಪ್ರವಾಸಿ ತಾಣಗಳಿಗೂ ಪ್ರವಾಸಿ ತಾಣದ ವಿಸ್ತೀರ್ಣದ ಆಧಾರದ ಮೇಲೆ ಪ್ರವಾಸಿಗರನ್ನ ನಿರ್ಬಂಧಿಸಲಾಗಿದೆ. ರಾಜ್ಯಾದ್ಯಂತ ಕೊರೊನಾ ಎರಡನೇ ಅಲೆ ಕಡಿಮೆಯಾದರೂ ಜಿಲ್ಲೆಯಲ್ಲಿ ಆಗಿರಲಿಲ್ಲ. ಕಳೆದ ಎರಡು ತಿಂಗಳಿಂದ ಜಿಲ್ಲೆಯಲ್ಲಿ ಪ್ರತಿ ದಿನ ನೂರರ ಸಮೀಪವೇ ಕೇಸ್‍ಗಳು ಪತ್ತೆಯಾಗುತ್ತಿದ್ದವು. ಈ ಮಧ್ಯೆ ಜಿಲ್ಲೆಗೆ ಬರುವ ಪ್ರವಾಸಿಗರನ್ನು ಕಂಡ ಜಿಲ್ಲೆಯ ಜನ ಕೂಡ ಆತಂಕಕ್ಕೀಡಾಗಿದ್ದರು. ಮಳೆ, ಶೀತದ ವಾತಾವರಣ. ಪ್ರವಾಸಿಗರಿಂದ ಕೊರೊನಾ ಹೆಚ್ಚಾದರೆ ಮತ್ತಷ್ಟು ಸಮಸ್ಯೆಯಾಗುತ್ತೆ. ಹಾಗಾಗಿ, ಕೂಡಲೇ ಜಿಲ್ಲೆಗೆ ಪ್ರವಾಸಿಗರನ್ನ ನಿಷೇಧಿಸಬೇಕೆಂದು ಜಿಲ್ಲಾದ್ಯಂತ ಜನ ಕೂಡ ಒತ್ತಾಯಿಸಿದ್ದರು. ಈಗ ಜಿಲ್ಲಾಡಳಿತದ ಪ್ರವಾಸಿಗರ ಮೇಲೆ ಹೇರಿರುವ ನಿರ್ಬಂಧವನ್ನ ಜಿಲ್ಲೆಯ ಜನ ಕೂಡ ಸ್ವಾಗಿತಿಸಿದ್ದಾರೆ.

  • 1023 ಕಾರು, 425 ಬೈಕ್, 46 ಮಿನಿ ಬಸ್- ಮುಳ್ಳಯ್ಯನಗಿರಿಯಲ್ಲಿ ಫುಲ್ ಟ್ರಾಫಿಕ್ ಜಾಮ್

    1023 ಕಾರು, 425 ಬೈಕ್, 46 ಮಿನಿ ಬಸ್- ಮುಳ್ಳಯ್ಯನಗಿರಿಯಲ್ಲಿ ಫುಲ್ ಟ್ರಾಫಿಕ್ ಜಾಮ್

    ಚಿಕ್ಕಮಗಳೂರು: ವೀಕೆಂಡ್ ಹಿನ್ನೆಲೆ ಇಂದು ತಾಲೂಕಿನ ಮುಳ್ಳಯ್ಯನಗಿರಿ ಭಾಗಕ್ಕೆ ಸಾವಿರಾರು ಪ್ರವಾಸಿಗರು ಭೇಟಿ ನೀಡಿದ್ದ ಪರಿಣಾಮ ಫುಲ್ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕೇವಲ ಮುಳ್ಳಯ್ಯನಗಿರಿಗಷ್ಟೇ ಸುಮಾರು ಆರು ಸಾವಿರಕ್ಕಿಂತ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದರು.

    1023 ಕಾರು, 425 ಬೈಕ್, 46 ಟಿಟಿ-ಮಿನಿ ಬಸ್‍ನಲ್ಲಿ ಸಾವಿರಾರು ಜನ ಮುಳ್ಳಯ್ಯಗಿರಿ ಭಾಗಕ್ಕೆ ಭೇಟಿ ನೀಡಿದ್ದರು. ಭಾರೀ ವಾಹನಗಳಿದ್ದ ಪರಿಣಾಮ ಮುಳ್ಳಯ್ಯನಗಿರಿಯಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮುಳ್ಳಯ್ಯನಗಿರಿ ಭಾಗದಲ್ಲಿ ಇಡೀ ದಿನ ಆಗಾಗ್ಗೆ ಭಾರೀ ಮಳೆ ಸುರಿದಿದೆ. ಸಾವಿರಾರು ಪ್ರವಾಸಿಗರು ಮಳೆಯಲ್ಲಿ ಮಿಂದು ಪ್ರಕೃತಿ ಸೌಂದರ್ಯವನ್ನ ಸವಿದಿದ್ದಾರೆ.

    ಕೊರೊನಾ ಲಾಕ್‍ಡೌನ್ ಇದ್ದ ಕಾರಣ ಜಿಲ್ಲೆಯ ಪ್ರವಾಸಿ ತಾಣಗಳು, ದೇವಸ್ಥಾನಗಳು ಕಳೆದ ಎರಡ್ಮೂರು ತಿಂಗಳಿಂದ ಬಂದ್ ಆಗಿದ್ದವು. ಪ್ರವಾಸಿ ತಾಣಗಳಿಗೆ ನಿಷೇಧವಿದ್ದರೂ ದಿನನಿತ್ಯ ನೂರಾರು ಪ್ರವಾಸಿಗರು ಬಂದು, ಕೈಮರಾ ಚೆಕ್‍ಪೋಸ್ಟ್ ಸಿಬ್ಬಂದಿಗಳು ಬಿಡದಿದ್ದಾಗ ವಾಪಸ್ ಹೋಗುತ್ತಿದ್ದರು. ಹೊರ ಜಿಲ್ಲೆಗಳಿಂದಲೂ ಬಂದ ಪ್ರವಾಸಿಗರು ಗಿರಿಭಾಗದ ಬಾಗಿಲಿಗೆ ಬಂದು ಹಿಂದಿರುಗಿದ್ದರು. ಮುಳ್ಳಯ್ಯನಗಿರಿಯಲ್ಲಿ ಇಂದಿನ ಪ್ರವಾಸಿಗರನ್ನು ಕಂಡರೆ ಪ್ರವಾಸಿ ತಾಣಗಳು ಓಪನ್ ಆಗುವುದನ್ನೇ ಚಾತಕ ಪಕ್ಷಿಗಳಂತೆ ಪಕ್ಷಿಗಳಂತೆ ಕಾಯುತ್ತಿದ್ದರಾ ಎಂಬ ಅನುಮಾನ ವ್ಯಕ್ತವಾಗಿದೆ.

    ಅನ್‍ಲಾಕ್ ಬಳಿಕ ಜಿಲ್ಲೆಯ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರ, ಗಾಳಿಕೆರೆ, ದೇವರಮನೆ ಗುಡ್ಡ ಭಾಗ ಸೇರಿದಂತೆ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಾದ ಹೊರನಾಡು ಅನ್ನಪೂರ್ಣೇಶ್ವರಿ, ಶೃಂಗೇರಿ ಶಾರದಾಂಬೆ ಹಾಗೂ ಕಳಸ ಕಳಸೇಶ್ವರ ಸ್ವಾಮಿ ದೇಗುಲಕ್ಕೂ ಪ್ರವಾಸಿಗರು ಹಾಗೂ ಭಕ್ತರು ದಾಂಗುಡಿ ಇಡುತ್ತಿದ್ದಾರೆ. ಜಿಲ್ಲೆಗೆ ಈ ರೀತಿ ಭಾರೀ ಪ್ರಮಾಣದಲ್ಲಿ ಪ್ರವಾಸಿಗರು ಆಗಮಿಸುತ್ತಿರೋದು ಜನರನ್ನ ಆತಂಕಕ್ಕೆ ದೂಡಿದೆ.

    ಕಳೆದೊಂದು ವಾರದಿಂದಲೂ ಜಿಲ್ಲೆಗೆ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಇನ್ನು ವೀಕೆಂಡ್ ಹಿನ್ನೆಲೆ ಗಿರಿ ಭಾಗದ ಬಹುತೇಕ ಹೋಮ್ ಸ್ಟೇ, ರೆಸಾರ್ಟ್‍ಗಳು ಸಂಪೂರ್ಣ ಬುಕ್ ಆಗಿವೆ. ರೂಮ್ ನೀಡುವಂತೆ ಪ್ರವಾಸಿಗರು ಹೋಂ ಸ್ಟೇ, ರೆಸಾರ್ಟ್ ಮಾಲೀಕರಿಗೆ ಮೇಲಿಂದ ಮೇಲೆ ಫೋನ್ ಮಾಡುತ್ತಿದ್ದಾರೆ. ಹೀಗೆ ಎಗ್ಗಿಲ್ಲದೆ ಬರುತ್ತಿರುವ ಪ್ರವಾಸಿಗರನ್ನ ಕಂಡು ಜಿಲ್ಲೆಯ ಜನ ಕೊರೊನಾ ಮತ್ತೆ ಹೆಚ್ಚಾಗುತ್ತಾ ಎಂಬ ಆತಂಕದಲ್ಲಿ ಬದುಕುತ್ತಿದ್ದಾರೆ.

  • ಹೊಸ ವರ್ಷ ಸಂಭ್ರಮಾಚರಣೆ – ಮುಳ್ಳಯ್ಯನಗಿರಿಯಲ್ಲಿ ಟ್ರಾಫಿಕ್ ಜಾಮ್

    ಹೊಸ ವರ್ಷ ಸಂಭ್ರಮಾಚರಣೆ – ಮುಳ್ಳಯ್ಯನಗಿರಿಯಲ್ಲಿ ಟ್ರಾಫಿಕ್ ಜಾಮ್

    ಚಿಕ್ಕಮಗಳೂರು: ಹೊಸ ವರ್ಷ ಆಚರಣೆಗೆ ಕಾಫಿನಾಡು ಚಿಕ್ಕಮಗಳೂರು ತುಂಬಿ ತುಳುಕಿದ್ದು, ಭಾರೀ ವಾಹನಗಳಿಂದ ರಾಜ್ಯದ ಎತ್ತರದ ಶಿಖರ ಮುಳ್ಳಯ್ಯನಗಿರಿಯಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿ, ಪ್ರವಾಸಿಗರು ಪರದಾಡುವಂತಾಗಿದೆ.

    ಕಳೆದ ರಾತ್ರಿ ಹೋಂ ಸ್ಟೇ, ರೆಸಾರ್ಟ್‍ಗಲ್ಲಿ ವಾಸ್ತವ್ಯ ಮಾಡಿದ್ದ ಸಾವಿರಾರು ಪ್ರವಾಸಿಗರು ಇಂದು ಪ್ರಕೃತಿ ಸೌಂದರ್ಯ ಸವಿಯಲು ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠಕ್ಕೆ ಆಗಮಿಸಿದ್ದರು. ಪರಿಣಾಮ ಮಾರ್ಗ ಮಧ್ಯೆ ಅಲ್ಲಲ್ಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು. ಪ್ರವಾಸಿಗರೇ ವಾಹನಗಳಿಂದ ಕೆಳಗಿಳಿದು ಟ್ರಾಫಿಕ್ ಪೊಲೀಸ್ ಕೆಲಸ ಮಾಡಿ ವಾಹನಗಳನ್ನು ನಿಯಂತ್ರಿಸಿದ್ದು ಸಾಮಾನ್ಯವಾಗಿತ್ತು.

    ರಾಜ್ಯ-ಹೊರರಾಜ್ಯಗಳಿಂದ ಬಂದಿದ್ದ ಸಾವಿರಾರು ಪ್ರವಾಸಿಗರು ಮುಗಿಲೆತ್ತರದ ಬೆಟ್ಟಗುಡ್ಡಗಳ ಮಧ್ಯೆ ನಿಂತು 2019ಕ್ಕೆ ಗುಡ್ ಬೈ ಹೇಳಿ, 2020ಕ್ಕೆ ಸ್ವಾಗತ ಕೋರಿದರು. ಗಿರಿಭಾಗದಲ್ಲಿ ಎಲ್ಲಿ ನೋಡಿದರು ಬೈಕು-ಕಾರುಗಳದ್ದೇ ಕಾರುಬಾರಾಗಿತ್ತು. ಇವತ್ತು ಒಂದೇ ದಿನ ಕಾರು, ಬೈಕ್, ಟೆಂಪೋ ಎಲ್ಲಾ ಸೇರಿ ಮೂರರಿಂದ ನಾಲ್ಕು ಸಾವಿರ ಬರೀ ವಾಹನಗಳೇ ಮುಳ್ಳಯ್ಯನಗಿರಿ ಜಮಾಯಿಸಿವೆ. ಸುಮಾರು 30 ರಿಂದ 40 ಸಾವಿರ ಪ್ರವಾಸಿಗರು ಕಾಫಿನಾಡ ಪ್ರಕೃತಿಗೆ ಸೌಂದರ್ಯಕ್ಕೆ ಶರಣಾಗತರಾಗಿದ್ದಾರೆ.

    ಟ್ರಾಫಿಕ್ ನಡುವೆ ಹರಸಾಹಸ ಪಟ್ಕೊಂಡು ಗಿರಿಯ ತುದಿಗೆ ಹೋದಾಗ ಪ್ರವಾಸಿಗರ ಸಂತೋಷಕ್ಕೆ ಪಾರವೇ ಇರಲಿಲ್ಲ. ಸುತ್ತಲು ಹಸಿರ ರಾಶಿ. ಕಣ್ಣಿನ ದೃಷ್ಠಿ ಮುಗಿದ್ರು ಮುಗಿಯದ ಪ್ರಕೃತಿ ಸಂಪತ್ತು. ಮುಗಿಲೆತ್ತರದ ಬೆಟ್ಟಗುಡ್ಡಗಳ ಸಾಲು. ನಿಮಿಷಕ್ಕೊಮ್ಮೆ ಕಣ್ಣೆದುರಿಗೆ ಬಂದು ಮಾಯವಾಗೋ ಮಾಯಾವಿ ಮಂಜು. ಮೈಮರೆತು ನಿಂತ್ರೆ ನಾವು ಕಿಡ್ನ್ಯಾಪ್ ಆಗ್ತೀವೇನೀ ಎಂದು ಭಯವಾಗುವಂತೆ ಬೀಸೋ ಗಾಳಿ. ಸೆಲ್ಫಿಗೆ ಫೋಸೋ ಕೊಟ್ಟು ನಿಲ್ಲುವಷ್ಟರಲ್ಲಿ ತಬ್ಬಿಕೊಂಡು ಹಾಗೋ ಗಾಳಿಯ ಕಂಡು ಪ್ರವಾಸಿಗರು ಪುಳಕಿತರಾಗಿದ್ದಾರೆ. ಗಿರಿಯ ತುದಿಗೆ ಬಂದು ಪ್ರಕೃತಿ ಸೌಂದರ್ಯದಲ್ಲಿ ಸವಿಯುಷ್ಟರಲ್ಲಿ ಮುಳ್ಳಯ್ಯನ ಸ್ವಾಮಿಯ ದರ್ಶನ ಮಾಡಬೇಕು. ಆಗ ಮತ್ತೊಂದು ಗುಡ್ಡ ಹತ್ತಬೇಕು. ಆದರೆ ಎಷ್ಟೇ ಆಯಸವಾಗಿದ್ರು ಇಲ್ಲಿನ ಗಾಳಿ ಮೈ-ಮನವನ್ನು ತಿಳಿಗೊಳಿಸೋದ್ರಿಂದ ಪ್ರವಾಸಿಗರು ಸಂತೋಷದಿಂದಲೇ ಬೆಟ್ಟ ಹತ್ತಿ ದೇವರ ದರ್ಶನ ಪಡೆದರು.

    ಮುಳ್ಳಯ್ಯನಗಿರಿ ಇನ್ನು ಹತ್ತಾರು ಕಿ.ಮೀ. ಇರೋವಾಗ್ಲೇ ಟ್ರಾಫಿಕ್ ಜಾಮ್‍ನಿಂದ ನಿಂತಿದ್ದ ಗಾಡಿಗಳು ನೋಡುಗರಿಗೆ ಇರುವೆಯಂತೆ ಭಾಸವಾಗುತ್ತಿತ್ತು. ದೂರದ ಊರುಗಳಿಂದ ಬಂದಿದ್ದ ಪ್ರವಾಸಿಗರು ಕೂಡ ಇಲ್ಲಿನ ಸೌಲಭ್ಯ ನೋಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪಾರ್ಕಿಂಗ್ ಇಲ್ಲ, ಪ್ಲಾಸ್ಟಿಕ್ ಕಡಿಮೆಯಾಗಿದ್ರು ಇನ್ನೂ ಇದೆ. ಎರಡೆರಡು ಕಡೆ ಹಣ ಕಟ್ಟಿಸಿಕೊಳ್ಳುತ್ತಾರೆ. ಆದರೆ ಪ್ರವಾಸಿಗರಿಗೆ ಯಾವುದೇ ಮೂಲಭೂತ ಸೌಲಭ್ಯ ಕಲ್ಪಿಸಿಲ್ಲ. ಇಂತಹಾ ಸೌಂದರ್ಯವನ್ನು ಎಲ್ಲರೂ ಸೇರಿ ಉಳಿಸಬೇಕು. ಇದನ್ನು ಮತ್ತೆ ಸೃಷ್ಠಿಸಲು ಅಸಾಧ್ಯ. ಹಾಗಾಗಿ ಸ್ಥಳೀಯರು, ಪ್ರವಾಸಿಗರು ಹಾಗೂ ಸರ್ಕಾರ ಮೂವರು ಸೇರಿ ಈ ಸೌಂದರ್ಯವನ್ನು ರಕ್ಷಣೆ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.