Tag: multiplex

  • ಮಹಾರಾಷ್ಟ್ರ ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ನೋಡೋರಿಗೆ ಗುಡ್ ನ್ಯೂಸ್ – ಕರ್ನಾಟಕದಲ್ಲೂ ಈ ನಿಯಮ ಜಾರಿಯಾಗುತ್ತಾ?

    ಮಹಾರಾಷ್ಟ್ರ ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ನೋಡೋರಿಗೆ ಗುಡ್ ನ್ಯೂಸ್ – ಕರ್ನಾಟಕದಲ್ಲೂ ಈ ನಿಯಮ ಜಾರಿಯಾಗುತ್ತಾ?

    ಮುಂಬೈ: ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ನೋಡುವವರು ಹೊರಗಿನ ಆಹಾರವನ್ನು ಕೊಂಡೊಯ್ಯುವಂತಿಲ್ಲ ಎನ್ನುವ ನಿಯಮಕ್ಕೆ ಮಹಾರಾಷ್ಟ್ರ ಸರ್ಕಾರ ಅಂತ್ಯ ಹಾಡಿದೆ.

    ಮಹಾರಾಷ್ಟ್ರದ ಸಿನಿಮಾ ಹಾಲ್, ಚಿತ್ರಮಂದಿರ, ಮಲ್ಟಿಪ್ಲೆಕ್ಸ್ ಗಳಲ್ಲಿ ಜನರು ಹೊರಗಿನ ಆಹಾರವನ್ನು ಕೊಂಡೊಯ್ಯಬಹುದು ಎಂದು ಸರ್ಕಾರ ಆದೇಶ ಹೊರಡಿಸಿದೆ. ಸದ್ಯ ಈ ಕುರಿತ ನಿಯಮಗಳನ್ನು ಶೀಘ್ರ ರಚಿಸುವುದಾಗಿ ತಿಳಿಸಿರುವ ಸರ್ಕಾರ ಈ ನಿಯಮಗಳನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

    ಸದ್ಯ ಸರ್ಕಾರದ ನಿರ್ಧಾರ ಕುರಿತು ಮಾಧ್ಯಮವೊಂದು ವರದಿ ಮಾಡಿದ್ದು, ವರದಿ ಅನ್ವಯ ಮಹಾರಾಷ್ಟ್ರದಲ್ಲಿ ನಡೆಯುತ್ತಿದ್ದ ಮೇಲ್ಮನೆ ಶಾಸಕಾಂಗ ಅಧಿವೇಶನದ ಸಭೆಯಲ್ಲಿ ಎನ್‍ಸಿಪಿ ವಿರೋಧ ಪಕ್ಷದ ನಾಯಕ ಧನಂಜಯ್ ಮುಂಡೆ ಪ್ರಶ್ನೆಗೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ರವಿಂದ್ರ ಚೌಹಾಣ್ ಶುಕ್ರವಾರದಂದು ಘೋಷಿಸಿದ್ದಾರೆ. ಅಲ್ಲದೇ ಒಂದೇ ತರಹದ ಆಹಾರಗಳಿಗೆ ಬೇರೆ ಬೇರೆ ಬೆಲೆಯನ್ನು ಮಲ್ಟಿಪ್ಲೆಕ್ಸ್ ಅಥವಾ ಹೊರಗಡೆ ಮಾರಾಟ ಮಾಡುವಂತಿಲ್ಲ ಎಂದು ಸಚಿವರು ತಿಳಿಸಿದ್ದಾಗಿ ವರದಿಯಲ್ಲಿ ಉಲ್ಲೇಖಿಸಿದೆ.

    ಕಳೆದ ತಿಂಗಳು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‍ಎಸ್) ಕಾರ್ಯಕರ್ತರು ಪುಣೆಯ ಚಿತ್ರಮಂದಿರದಲ್ಲಿ ಆಹಾರಗಳನ್ನು ದುಬಾರಿ ದರದಲ್ಲಿ ಮಾರಾಟ ನಡೆಸಲಾಗುತ್ತಿದೆ ಎಂದು ಚಿತ್ರಮಂದಿರದ ಮ್ಯಾನೇಜರ್‍ನನ್ನು ಥಳಿಸಿದ್ದರು. ಘಟನೆ ಕುರಿತು ಅಂದು ವಿವರಣೆ ನೀಡಿದ್ದ ಎಂಎನ್‍ಎಸ್ ಕಾರ್ಯಕರ್ತ ಕಿಶೋರ್ ಶಿಂಧೆ, ನಾವು ಚಿತ್ರಮಂದಿರದ ಮ್ಯಾನೇಜರ್ ಗೆ ಪತ್ರಿಕಾ ವರದಿಗಳನ್ನು ಓದಲು ಹೇಳಿದ್ದೆವು, ಆದರೆ ಆತ ತನಗೆ ಮರಾಠಿ ಓದಲು ಬರುವುದಿಲ್ಲ ಎಂದು ಹೇಳಿದ್ದ. ಅದ್ದರಿಂದ ಆತನೊಂದಿಗೆ ಎಂಎನ್‍ಎಸ್ ಸ್ಟೈಲ್ ನಲ್ಲಿ ವ್ಯವಹರಿಸಬೇಕಾಯ್ತು ಎಂದು ತಿಳಿಸಿದ್ದರು.

    ಈ ಘಟನೆಯ ಬಳಿಕ ಮಹಾರಾಷ್ಟ್ರ ಮಲ್ಟಿಪ್ಲೆಕ್ಸ್ ಮಾಲೀಕ ಸಂಘ ರಾಜಕೀಯ ಪಕ್ಷದ ಕಾರ್ಯಕರ್ತರು ಮಾಲೀಕರ ವಿರುದ್ಧ ನಡೆಸುತ್ತಿರುವ ದಾಳಿ ವಿರುದ್ಧ ತುರ್ತು ವಿಚಾರಣೆ ನಡೆಸಲು ಬಾಂಬೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಆದರೆ ಈ ಅರ್ಜಿಯನ್ನು ವಿಚಾರಣೆ ನಡೆಸಲು ನ್ಯಾಯಾಲಯ ನಿರಾಕರಿಸಿತ್ತು. ನ್ಯಾಯಾಲಯದ ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳಾದ ರಂಜಿತ್ ಮೋರೆ ಹಾಗೂ ಅನುಜಾ ಪ್ರಭುದೇಸಾಯಿ ಕೂಡ ಈ ವಿಷಯದ ಕುರಿತು ಯಾವುದೇ ನಿರ್ದೇಶನಗಳನ್ನು ನೀಡಲು ನಿರಾಕರಿಸಿದ್ದರು. ಅಲ್ಲದೇ ಯಾವುದೇ ದುಷ್ಕರ್ಮಿಗಳು ರೀತಿಯ ಹಿಂಸಾಚಾರ ನಡೆಸಿದರೆ ಮಾಲೀಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಬಹುದು ಎಂದು ಸೂಚಿಸಿದ್ದರು.

    ಈ ಘಟನೆಯ ಬೆನ್ನಲ್ಲೇ ಸದ್ಯ ಮಹಾರಾಷ್ಟ್ರ ಸರ್ಕಾರ ಮಲ್ಟಿಪ್ಲೆಕ್ಸ್ ಗಳಲ್ಲಿ ಹೊರಗಿನ ಆಹಾರ ತೆಗೆದುಕೊಂಡು ಹೋಗಲು ಅನುಮತಿ ನೀಡಿದೆ. ಅಲ್ಲದೇ ಈ ಕುರಿತು ನಿಯಮಾವಳಿ ರೂಪಿಸಲು ಸಿದ್ಧತೆ ನಡೆಸಿದೆ. ಸದ್ಯ ಮಹಾರಾಷ್ಟ್ರ ಸರ್ಕಾರದಂತೆ ಕರ್ನಾಟಕದಲ್ಲೂ ಸಿನಿಮಾ ಮಂದಿರ ಹಾಗೂ ಮಲ್ಟಿಪ್ಲೆಕ್ಸ್ ಗಳಲ್ಲಿ ಹೊರಗಿನ ಆಹಾರ ತೆಗೆದುಕೊಂಡು ಹೋಗಲು ಅನುಮತಿ ಲಭ್ಯವಾಗುತ್ತಾ ಎಂಬುವುದನ್ನು ಕಾದು ನೋಡಬೇಕಿದೆ.

  • ಯಾಕೆ ನಮಗೆ ಥಿಯೇಟರ್ ಕೊಡಲ್ಲ ನಾವು ನೋಡ್ತಿವಿ: ಮಲ್ಟಿಪ್ಲೆಕ್ಸ್ ಗಳ ವಿರುದ್ಧ ದುನಿಯಾ ವಿಜಿ ಆಕ್ರೋಶ

    ಯಾಕೆ ನಮಗೆ ಥಿಯೇಟರ್ ಕೊಡಲ್ಲ ನಾವು ನೋಡ್ತಿವಿ: ಮಲ್ಟಿಪ್ಲೆಕ್ಸ್ ಗಳ ವಿರುದ್ಧ ದುನಿಯಾ ವಿಜಿ ಆಕ್ರೋಶ

    ಬೆಂಗಳೂರು: ಮಾಸ್ತಿಗುಡಿ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಶುಕ್ರವಾರ ರಾಜ್ಯಾದ್ಯಂತ ತೆರೆಕಾಣುತ್ತಿರುವ `ಮಾಸ್ತಿಗುಡಿ’ ಚಿತ್ರಕ್ಕೆ ಮಲ್ಟಿಪ್ಲೆಕ್ಸ್ ಥಿಯೇಟರ್‍ಗಳಲ್ಲಿ ಸ್ಕ್ರೀನ್‍ಗಳ ಕೊರತೆ ಉಂಟಾಗಿದೆ.

    ಹೌದು, ಬಾಹುಬಲಿ-2 ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿರುವುದರಿಂದ ಮಲ್ಟಿಪ್ಲೆಕ್ಸ್ ಗಳಲ್ಲಿ ಮಾಸ್ತಿಗುಡಿ ಚಿತ್ರಕ್ಕೆ ಪ್ರದರ್ಶನದ ಅವಕಾಶದ ತೊಂದರೆಯಾಗುತ್ತಿದೆ. ಹೀಗಾಗಿ ಮಾಸ್ತಿಗುಡಿ ಚಿತ್ರದ ನಿರ್ದೇಶಕ ನಾಗಶೇಖರ್, ಚಿತ್ರದ ನಿರ್ಮಾಪಕ ಸುಂದರ್ ಪಿ.ಗೌಡ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಅವರಿಗೆ ಮನವಿ ಸಲ್ಲಿಸಿದ್ದಾರೆ.

    ಮಾಸ್ತಿಗುಡಿ ಚಿತ್ರದ ಪ್ರದರ್ಶನಕ್ಕೆ ಅವಕಾಶ ಕೊಡದೇ ಬಾಹುಬಲಿ-2 ಚಿತ್ರ ಪ್ರದರ್ಶನವನ್ನು ಮುಂದುವರೆಸುತ್ತಿರುವ ಥಿಯೇಟರ್‍ಗಳ ಮುಂದೆ ಗಲಾಟೆ ಮಾಡಲು ಚಿತ್ರತಂಡ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

    ದುನಿಯಾ ವಿಜಿ ಆಕ್ರೋಶ: ಇದು ಕೇವಲ ಮಾಸ್ತಿಗುಡಿ ಚಿತ್ರಕ್ಕೆ ಮಾತ್ರವಲ್ಲ ಕನ್ನಡ ಚಿತ್ರರಂಗಕ್ಕೆ ಆಗಿರುವ ಅನ್ಯಾಯ. ನಮ್ಮನ್ನ ನಂಬಿ ನಿರ್ಮಾಪರು, ವಿತರಕರು ಹಣ ಸುರಿದಿರುತ್ತಾರೆ. ಅವರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ. ನಮ್ಮ ಹೋರಾಟದಿಂದ ಮುಂದೆ ಬರುವ ಕನ್ನಡ ಸಿನಿಮಾಗಳಿಗೆ ಅನೂಕುಲವಾಗಬೇಕು. ಈ ಕಾರಣಕ್ಕಾಗಿ ವಿಭಿನ್ನ ರೀತಿಯಲ್ಲಿ ಪ್ರತಿಭಟಿಸಲು ನಾವುಗಳು ನಿರ್ಧರಿಸಿದ್ದೇವೆ. ಅದು ಹೇಗೆ ನಮಗೆ ಥಿಯೇಟರ್ ಕೊಡಲ್ಲ ನಾವು ನೋಡ್ತಿವಿ ಎಂದು ನಟ ದುನಿಯಾ ವಿಜಿ ಆಕ್ರೋಶ ವ್ಯಕ್ತಪಡಿಸಿದರು.

    ಚಿತ್ರದ ವಿತರಣಾ ಹಕ್ಕನ್ನ ಜಾಕ್ ಮಂಜುರವರು 10.80 ಕೋಟಿ ರೂ.ಗೆ ಖರೀದಿಸಿದ್ದಾರೆ. ಸಿನಿಮಾವನ್ನು 350 ಥಿಯೇಟರ್‍ಗಳಲ್ಲಿ ಸಿನಿಮಾವನ್ನ ರಿಲೀಸ್ ಮಾಡಲು ಯೋಚಿಸಿದ್ದಾರೆ. ಆದರೆ ಸದ್ಯ 50 ರಿಂದ 60 ಚಿತ್ರಮಂದಿರಗಳ ಸಮಸ್ಯೆ ಉಂಟಾಗಿದೆ. ಮಲ್ಟಿಪ್ಲೆಕ್ಸ್ ಗಳಲ್ಲಿ ಮಾಸ್ತಿಗುಡಿಗೆ ಪ್ರೈಮ್ ಟೈಮ್ ಸಿಗುತ್ತಿಲ್ಲ ಎಂದು ಚಿತ್ರ ತಂಡ ಆರೋಪಿಸಿದೆ. ಬಾಹುಬಲಿ-2 ಚಿತ್ರ ಬಿಡುಗಡೆ ವೇಳೆಯಲ್ಲಿ ಕನ್ನಡದ `ರಾಗಾ’ ಸಿನಿಮಾಗೆ ಅನ್ಯಾಯವಾಗಿತ್ತು.

    ಚಿತ್ರವು ನಾಗಶೇಖರ್ ನಿರ್ದೇಶನದಲ್ಲಿ ಮೂಡಿ ಬಂದಿದ್ದು, ಚಿತ್ರದಲ್ಲಿ ದುನಿಯಾ ವಿಜಯ್, ಅಮೂಲ್ಯ, ಕೃತಿ ಕರಬಂಧ, ಉದಯ್ ಹಾಗು ಅನಿಲ್ ಮುಂತಾದ ದೊಡ್ಡ ತಾರಾಗಣವನ್ನು ಹೊಂದಿದೆ. ಹಾಡುಗಳಿಗೆ ಸಾಧು ಕೋಕಿಲಾರವರ ಸಂಗೀತ ಸಂಯೋಜನೆಯಿದೆ.

    https://youtu.be/LDet4NyN2eA

     

  • ಮಲ್ಟಿಪ್ಲೆಕ್ಸ್ ಗಳಲ್ಲಿ ಇದೀಗ ಏಕರೂಪ ದರ- ಮನರಂಜನಾ ತೆರಿಗೆ ಸೇರಿ ಒಂದು ಟಿಕೆಟ್‍ಗೆ ಇಷ್ಟು ಬೆಲೆ

    ಮಲ್ಟಿಪ್ಲೆಕ್ಸ್ ಗಳಲ್ಲಿ ಇದೀಗ ಏಕರೂಪ ದರ- ಮನರಂಜನಾ ತೆರಿಗೆ ಸೇರಿ ಒಂದು ಟಿಕೆಟ್‍ಗೆ ಇಷ್ಟು ಬೆಲೆ

    ಬೆಂಗಳೂರು: ಮಲ್ಟಿಪ್ಲೆಕ್ಸ್ ಗಳ ಲೂಟಿಗೆ ಕೊನೆಗೂ ಕಡಿವಾಣ ಬಿದ್ದಿದೆ. ಸಿನಿಮಾ ಟಿಕೆಟ್‍ಗೆ ಸರ್ಕಾರ ಗರಿಷ್ಠ ಬೆಲೆ ನಿಗದಿಪಡಿಸಿದ್ದು, ಈ ಆದೇಶ ಮಂಗಳವಾರದಿಂದಲೇ ಜಾರಿಗೆ ಬಂದಿದ್ದರೂ ಮನರಂಜನಾ ತೆರಿಗೆ ಸೇರಿ ಟಿಕೆಟ್ ಬೆಲೆ ಎಷ್ಟಿರಲಿದೆ ಎಂಬ ಗೊಂದಲವಿತ್ತು. ಈಗ ಆ ಗೊಂದಲಕ್ಕೆ ಬ್ರೇಕ್ ಬಿದ್ದಿದೆ.

    ಸರ್ಕಾರದ ಆದೇಶಿಸಿರುವಂತೆ ಒಂದು ಟಿಕೆಟ್‍ಗೆ 200 ರೂ. ದರದ ಜೊತೆಗೆ 64 ರೂ. ಮನರಂಜನಾ ತೆರಿಗೆ ನಿಗದಿ ಮಾಡಲಾಗಿದೆ. ಬೆಂಗಳೂರಿನ ಬಿನ್ನಿಮಿಲ್ ಬಳಿ ಇರುವ ಇಟಿಎ ಮಾಲ್, ಮನರಂಜನಾ ತೆರಿಗೆ ವಿಧಿಸಿ ಟಿಕೆಟ್ ಮಾರಾಟ ಮಾಡ್ತಿದೆ. ಇಟಿಎ ಮಾಲ್‍ನಲ್ಲಿ ಸಿನಿಮಾದ ಒಂದು ಟಿಕೆಟ್‍ಗೆ 264 ರೂಪಾಯಿ ನಿಗದಿ ಮಾಡಲಾಗಿದೆ. ಬುಧವಾರದಂದು ಇದೇ ಮಾಲ್ ಒಂದು ಟಿಕೆಟ್‍ಗೆ 350 ರೂಪಾಯಿ ನಿಗದಿ ಮಾಡಿತ್ತು. ಅಲ್ಲದೆ ಇನ್ನೂ ಅನೇಕ ಮಾಲ್‍ಗಳಲ್ಲಿ ಗೋಲ್ಡ್ ಕ್ಲಾಸ್ ಹೊರತುಪಡಿಸಿ ಉಳಿದ ಟಿಕೆಟ್‍ಗೆ 264 ರೂ. ನಗದಿ ಮಾಡಲಾಗಿದೆ.

    ಮಲ್ಟಿಪ್ಲೆಕ್ಸ್ ಗಳಲ್ಲಿ ಗರಿಷ್ಟ ಟಿಕೆಟ್ ದರ 200 ರೂ. ಫಿಕ್ಸ್ ಆಗಿದ್ದು, ಮಂಗಳವಾರದಂದೇ ಅಧಿಕೃತ ಆದೇಶ ಜಾರಿಯಾಗಿದೆ. ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಇಲಾಖೆಯಿಂದ ಆದೇಶ ಪ್ರಕಟವಾಗಿದ್ದು, ಎಲ್ಲ ಭಾಷೆಯ ಚಿತ್ರಗಳಿಗೆ ಇದು ಅನ್ವಯವಾಗಲಿದೆ.

    ಆದೇಶದಲ್ಲಿ ಏನಿದೆ?
    ಮಲ್ಟಿಪ್ಲೆಕ್ಸ್ ಗಳಲ್ಲಿ ಕನ್ನಡ ಮತ್ತು ಪ್ರಾದೇಶಿಕ ಭಾಷೆಗಳ ಚಿತ್ರವನ್ನು ಒಂದು ಪರದೆಯಲ್ಲಿ ಮಧ್ಯಾಹ್ನ 1.30 ರಿಂದ ಸಂಜೆ 7.30 ರವರೆಗಿನ ಪ್ರಮುಖ ಅವಧಿಯಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಉಲ್ಲೇಖಿಸಲಾಗಿದೆ.

    ಐ-ಮ್ಯಾಕ್ಸ್, 4ಡಿಎಕ್ಸ್ ಚಿತ್ರಮಂದಿರಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ. ಜೊತೆಗೆ ಗೋಲ್ಡ್ ಕ್ಲಾಸ್ ಗೂ ಈ ಆದೇಶ ಅನ್ವಯವಾಗುವುದಿಲ್ಲ. ಆದರೆ ಪ್ರತಿ ಚಿತ್ರಮಂದಿರದಲ್ಲೂ ಗೋಲ್ಡ್ ಕ್ಲಾಸ್ ಶೇ.10 ರಷ್ಟು ಸೀಟುಗಳನ್ನು ಮೀರಬಾರದು ಎನ್ನುವ ಅಂಶ ಆದೇಶದಲ್ಲಿದೆ.

    ಸಿಎಂ ಸಿದ್ದರಾಮಯ್ಯ ಸೋಮವಾರ ಯಶವಂತಪುರದಲ್ಲಿರುವ ಒರಾಯನ್ ಮಾಲ್‍ನಲ್ಲಿ 1050 ರೂ. ನೀಡಿ ಬಾಹುಬಲಿ ಸಿನಿಮಾ ವೀಕ್ಷಿಸಿದ್ದರು. ಬಜೆಟ್ ನಲ್ಲಿ 200 ರೂ. ಗರಿಷ್ಟ ದರ ನಿಗದಿ ಪಡಿಸಿ 1050 ರೂ. ನೀಡಿ ಟಿಕೆಟ್ ಖರೀದಿ ಮಾಡಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಜನರು ಸಿದ್ದರಾಮಯ್ಯನವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಬಜೆಟ್ ನಲ್ಲಿ ನೀವೇ ಗರಿಷ್ಟ ದರ ಫಿಕ್ಸ್ ಮಾಡಿ ದುಬಾರಿ ಟಿಕೆಟ್ ನೀಡಿ ಸಿನಿಮಾ ವೀಕ್ಷಿಸಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದ್ದರು. ಜನರ ಮತ್ತು ಮಾಧ್ಯಮಗಳಿಂದ ಟೀಕೆ ಜಾಸ್ತಿಯಾಗುತ್ತಿದ್ದಂತೆ ಮಂಗಳವಾರ ಕನ್ನಡ ಮತ್ತು ಸಂಸ್ಕೃತಿ ಅಧಿಕೃತವಾಗಿ ಈ ಆದೇಶವನ್ನು ಪ್ರಕಟಿಸಿದೆ.

    ಇದನ್ನೂ ಓದಿ: 1050 ರೂ. ಕೊಟ್ಟು ಬಾಹುಬಲಿ ಚಿತ್ರ ವೀಕ್ಷಣೆ – ಸಿಎಂ ವಿರುದ್ಧ ವಿಜಯಪ್ರಸಾದ್ ಗರಂ

    ಏಪ್ರಿಲ್ 26 ರಂದು 2016ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಲ್ಟಿಪ್ಲೆಕ್ಸ್ ಗಳಲ್ಲಿ ಇನ್ಮುಂದೆ ಟಿಕೆಟ್ ದರ 200 ರೂ. ನಿಗದಿಪಡಿಸುವುದರ ಜೊತೆ ಮಲ್ಟಿಪ್ಲೆಕ್ಸ್ ಗಳಲ್ಲಿ ದಿನಕ್ಕೆ 2 ಶೋಗಳನ್ನು ಕನ್ನಡ ಚಿತ್ರ ಪ್ರದರ್ಶಿಸಲು ನಾಳೆ ಅಥವಾ ನಾಡಿದ್ದು ಸರ್ಕಾರಿ ಆದೇಶ ಮಾಡಲಾಗುವುದು. ಹಾಗೆಯೇ, ಪ್ರೈಮ್ ಸಮಯದಲ್ಲಿ ಕನ್ನಡ ಚಿತ್ರಗಳಿಗಾಗಿ ಎರಡು ಶೋಗಳನ್ನ ಮೀಸಲಿಡಬೇಕು ಎಂದು ಕೂಡ ಆದೇಶಿಸುವುದಾಗಿ ತಿಳಿಸಿದ್ದರು.

    ಸಿಎಂ ಈ ಹೇಳಿಕೆಯ ಬಳಿಕ ಕರ್ನಾಟಕ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾರಾ ಗೋವಿಂದು ಏ. 26ರಂದು ಫಿಲಂ ಚೇಂಬರ್ ನಲ್ಲಿ ಸುದ್ದಿಗೋಷ್ಠಿ ನಡೆಸಿ, ಬಜೆಟ್‍ನಲ್ಲಿ ಘೋಷಣೆಯಾಗಿರುವ ಮಲ್ಟಿಪ್ಲೆಕ್ಸ್ ನಲ್ಲಿ ಟಿಕೆಟ್ ದರ 200 ರೂ.ಗೆ ನಿಗದಿ ಪಡಿಸಿರುವ ಆದೇಶ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಮಂಗಳವಾರ ರಾತ್ರಿ ಸಹಿ ಮಾಡಿದ್ದಾರೆ. ಗುರುವಾರ ಈ ಪತ್ರ ವಾಣಿಜ್ಯ ಮಂಡಳಿಗೆ ತಲುಪಲಿದೆ. ಪತ್ರ ಬಂದ ತಕ್ಷಣವೇ ಏಕರೂಪ ದರ ಜಾರಿಯಾಗಲಿದೆ ಎಂದು ತಿಳಿಸಿದ್ದರು. ಆದರೆ ಇವರಿಬ್ಬರು ಹೇಳಿಕೆ ನೀಡಿದ್ದರೆ ವಿನಾಃ ಆದೇಶ ಮಾತ್ರ ಜಾರಿಯಾಗಿರಲಿಲ್ಲ.

    ದರ ಕಡಿಮೆಯಾಗಿದ್ದು ಯಾಕೆ?: 
    ಕರ್ನಾಟಕದಲ್ಲಿ ಮಲ್ಟಿಪ್ಲೆಕ್ಸ್ ಥಿಯೇಟರ್ ಮಾಲೀಕರು ಸಿನಿಮಾಗೆ ಹೆಚ್ಚು ದರದ ಟಿಕೆಟ್ ನಿಗದಿ ಮಾಡುವ ಕಾರಣ ಜನ ಥಿಯೇಟರ್ ಗಳಿಗೆ ಬರುತ್ತಿಲ್ಲ. ಒಂದೊಂದು ಮಾಲ್ ನಲ್ಲಿ ಬೇರೆ ಬೇರೆ ರೀತಿಯ ದರವಿದೆ. ಹೀಗಾಗಿ ಟಿಕೆಟ್ ದರವನ್ನು ಕಡಿಮೆ ಮಾಡಿ ಏಕರೂಪದ ದರವನ್ನು ತರಬೇಕು ಎಂದು ಆಗ್ರಹಿಸಿ ಜನ ಮತ್ತು ಸಿನಿಮಾ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಕಳೆದ ವರ್ಷ ಆಂದೋಲನವನ್ನು ನಡೆಸಿದ್ದರು. ತಮಿಳುನಾಡಿನಲ್ಲಿ ಗರಿಷ್ಠ 120 ರೂ. ಟಿಕೆಟ್, ಆಂಧ್ರಪ್ರದೇಶದಲ್ಲಿ ಗರಿಷ್ಠ 150 ರೂ. ನಿಗದಿಯಾಗಿರುವಾಗ ನಮ್ಮಲ್ಲಿ ಯಾಕೆ ದರವನ್ನು ನಿಗದಿ ಮಾಡಬಾರದು ಎಂದು ಸರ್ಕಾರವನ್ನು ಪ್ರಶ್ನಿಸಿದ್ದರು.

    ಒತ್ತಡ ಜಾಸ್ತಿ ಆಗುತ್ತಿದ್ದಂತೆ ಸರ್ಕಾರ ಈ ಸಮಸ್ಯೆಯ ಬಗ್ಗೆ ಅಧ್ಯಯನ ನಡೆಸಲು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಾಜೇಂದ್ರ ಸಿಂಗ್ ಬಾಬು ನೇತೃತ್ವದಲ್ಲಿ ಗಿರೀಶ್ ಕಾಸರವಳ್ಳಿ, ಭಾರತಿ ವಿಷ್ಣುವರ್ಧನ್, ರಾಘವೇಂದ್ರ ರಾಜ್‍ಕುಮಾರ್, ರಾಕ್‍ಲೈನ್ ವೆಂಕಟೇಶ್, ಭಾಷಾ, ಜಯಮಾಲ, ಥಾಮಸ್ ಡಿಸೋಜಾ, ಕೆ ವಿ ಚಂದ್ರಶೇಖರ್ ಮತ್ತು ಗಂಗಾಧರ್ ಮೊದಲಿಯಾರ್ ಅವರುಗಳನ್ನು ಒಳಗೊಂಡ 17 ಜನರ ಸದಸ್ಯರ ಸಮಿತಿಯೊಂದನ್ನು ರಚಿಸಿತ್ತು. ಈ ಸಮಿತಿ ಟಿಕೆಟ್ ದರಕ್ಕೆ ಗರಿಷ್ಠ ಮಿತಿಯನ್ನು ನಿಗದಿಪಡಿಸಬೇಕು ಹಾಗೂ ಪ್ರೈಮ್ ಟೈಂನಲ್ಲಿ ಪ್ರತಿ ಮಲ್ಟಿಪ್ಲೆಕ್ಸ್ ನಲ್ಲಿ ಎರಡು ಕನ್ನಡ ಸಿನೆಮಾಗಳನ್ನು ಕಡ್ಡಾಯವಾಗಿ ತೋರಿಸಲು ನಿಯಮ ಹೇರುವಂತೆ ಸರ್ಕಾರಕ್ಕೆ ವರದಿ ನೀಡಿತ್ತು. ಈ ವರದಿಯನ್ನು ಅನುಷ್ಠಾನಗೊಳಿಸಲು ಸರ್ಕಾರ ಈಗ ಮುಂದಾಗಿದೆ.

  • ಕೊನೆಗೂ ಕರ್ನಾಟಕದ ಮಲ್ಟಿಪ್ಲೆಕ್ಸ್ ಗಳಲ್ಲಿ 200 ರೂ. ಗರಿಷ್ಟ ಟಿಕೆಟ್ ದರ ಫಿಕ್ಸ್: ಆದೇಶದ ಪೂರ್ಣ ಪ್ರತಿ ಇಲ್ಲಿದೆ

    ಕೊನೆಗೂ ಕರ್ನಾಟಕದ ಮಲ್ಟಿಪ್ಲೆಕ್ಸ್ ಗಳಲ್ಲಿ 200 ರೂ. ಗರಿಷ್ಟ ಟಿಕೆಟ್ ದರ ಫಿಕ್ಸ್: ಆದೇಶದ ಪೂರ್ಣ ಪ್ರತಿ ಇಲ್ಲಿದೆ

    ಬೆಂಗಳೂರು: ಕರ್ನಾಟಕದ ಸಿನಿ ಅಭಿಮಾನಿಗಳಿಗೆ ಗುಡ್ ನ್ಯೂಸ್. ಕೊನೆಗೂ ಮಲ್ಟಿಪ್ಲೆಕ್ಸ್ ಗಳಲ್ಲಿ ಗರಿಷ್ಟ ಟಿಕೆಟ್ ದರ 200 ರೂ. ಫಿಕ್ಸ್ ಆಗಿದ್ದು, ಇಂದಿನಿಂದಲೇ ಅಧಿಕೃತ ಆದೇಶ ಜಾರಿಯಾಗಿದೆ. ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಇಲಾಖೆಯಿಂದ ಆದೇಶ ಪ್ರಕಟವಾಗಿದ್ದು, ಎಲ್ಲ ಭಾಷೆಯ ಚಿತ್ರಗಳಿಗೆ ಇದು ಅನ್ವಯವಾಗಲಿದೆ.

    ಆದೇಶದಲ್ಲಿ ಏನಿದೆ?
    ಮಲ್ಟಿಪ್ಲೆಕ್ಸ್ ಗಳ ಪ್ರಮುಖ ಅವಧಿಯಲ್ಲಿ ಕನ್ನಡ ಮತ್ತು ಪ್ರಾದೇಶಿಕ ಭಾಷೆಗಳ ಚಿತ್ರವನ್ನು ಒಂದು ಪರದೆಯಲ್ಲಿ ಮಧ್ಯಾಹ್ನ 1.30 ರಿಂದ ಸಂಜೆ 7.30 ರವರೆಗಿನ ಪ್ರಮುಖ ಅವಧಿಯಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಉಲ್ಲೇಖಿಸಲಾಗಿದೆ.

    ಐ-ಮ್ಯಾಕ್ಸ್, 4ಡಿಎಕ್ಸ್ ಚಿತ್ರಮಂದಿರಗಳಗೆ ಈ ಆದೇಶ ಅನ್ವಯವಾಗುವುದಿಲ್ಲ. ಜೊತೆಗೆ ಗೋಲ್ಡ್ ಕ್ಲಾಸ್ ಗೂ ಈ ಆದೇಶ ಅನ್ವಯವಾಗುವುದಿಲ್ಲ. ಆದರೆ ಪ್ರತಿ ಚಿತ್ರಮಂದಿರದಲ್ಲೂ ಗೋಲ್ಡ್ ಕ್ಲಾಸ್ ಶೇ.10 ರಷ್ಟು ಸೀಟುಗಳನ್ನು ಮೀರಬಾರದು ಎನ್ನುವ ಅಂಶ ಆದೇಶದಲ್ಲಿದೆ.

    ಸಿಎಂ ಸಿದ್ದರಾಮಯ್ಯ ಸೋಮವಾರ ಯಶವಂತಪುರದಲ್ಲಿರುವ ಒರಾಯನ್ ಮಾಲ್‍ನಲ್ಲಿ 1050 ರೂ. ನೀಡಿ ಬಾಹುಬಲಿ ಸಿನಿಮಾ ವೀಕ್ಷಿಸಿದ್ದರು. ಬಜೆಟ್ ನಲ್ಲಿ 200 ರೂ. ಗರಿಷ್ಟ ದರ ನಿಗದಿ ಪಡಿಸಿ 1050 ರೂ. ನೀಡಿ ಟಿಕೆಟ್ ಖರೀದಿ ಮಾಡಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಜನರು ಸಿದ್ದರಾಮಯ್ಯನವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಬಜೆಟ್ ನಲ್ಲಿ ನೀವೇ ಗರಿಷ್ಟ ದರ ಫಿಕ್ಸ್ ಮಾಡಿ ದುಬಾರಿ ಟಿಕೆಟ್ ನೀಡಿ ಸಿನಿಮಾ ವೀಕ್ಷಿಸಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದ್ದರು. ಜನರ ಮತ್ತು ಮಾಧ್ಯಮಗಳಿಂದ ಟೀಕೆ ಜಾಸ್ತಿಯಾಗುತ್ತಿದ್ದಂತೆ ಮಂಗಳವಾರ ಕನ್ನಡ ಮತ್ತು ಸಂಸ್ಕೃತಿ ಅಧಿಕೃತವಾಗಿ ಈ ಆದೇಶವನ್ನು ಪ್ರಕಟಿಸಿದೆ.

    ಏಪ್ರಿಲ್ 26 ರಂದು 2016ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಲ್ಟಿಪ್ಲೆಕ್ಸ್ ಗಳಲ್ಲಿ ಇನ್ಮುಂದೆ ಟಿಕೆಟ್ ದರ 200 ರೂ. ನಿಗದಿಪಡಿಸುವುದರ ಜೊತೆ ಮಲ್ಟಿಪ್ಲೆಕ್ಸ್ ಗಳಲ್ಲಿ ದಿನಕ್ಕೆ 2 ಶೋಗಳನ್ನು ಕನ್ನಡ ಚಿತ್ರ ಪ್ರದರ್ಶಿಸಲು ನಾಳೆ ಅಥವಾ ನಾಡಿದ್ದು ಸರ್ಕಾರಿ ಆದೇಶ ಮಾಡಲಾಗುವುದು. ಹಾಗೆಯೇ, ಪ್ರೈಮ್ ಸಮಯದಲ್ಲಿ ಕನ್ನಡ ಚಿತ್ರಗಳಿಗಾಗಿ ಎರಡು ಶೋಗಳನ್ನ ಮೀಸಲಿಡಬೇಕು ಎಂದು ಕೂಡ ಆದೇಶಿಸುವುದಾಗಿ ತಿಳಿಸಿದ್ದರು.

    ಸಿಎಂ ಈ ಹೇಳಿಕೆಯ ಬಳಿಕ ಕರ್ನಾಟಕ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾರಾ ಗೋವಿಂದು ಏ. 26ರಂದು ಫಿಲಂ ಚೇಂಬರ್ ನಲ್ಲಿ ಸುದ್ದಿಗೋಷ್ಠಿ ನಡೆಸಿ, ಬಜೆಟ್‍ನಲ್ಲಿ ಘೋಷಣೆಯಾಗಿರುವ ಮಲ್ಟಿಪ್ಲೆಕ್ಸ್ ನಲ್ಲಿ ಟಿಕೆಟ್ ದರ 200 ರೂ.ಗೆ ನಿಗದಿ ಪಡಿಸಿರುವ ಆದೇಶ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಮಂಗಳವಾರ ರಾತ್ರಿ ಸಹಿ ಮಾಡಿದ್ದಾರೆ. ಗುರುವಾರ ಈ ಪತ್ರ ವಾಣಿಜ್ಯ ಮಂಡಳಿಗೆ ತಲುಪಲಿದೆ. ಪತ್ರ ಬಂದ ತಕ್ಷಣವೇ ಏಕರೂಪ ದರ ಜಾರಿಯಾಗಲಿದೆ ಎಂದು ತಿಳಿಸಿದ್ದರು. ಆದರೆ ಇವರಿಬ್ಬರು ಹೇಳಿಕೆ ನೀಡಿದ್ದರೆ ವಿನಾಃ ಆದೇಶ ಮಾತ್ರ ಜಾರಿಯಾಗಿರಲಿಲ್ಲ.

    ದರ ಕಡಿಮೆಯಾಗಿದ್ದು ಯಾಕೆ?
    ಕರ್ನಾಟಕದಲ್ಲಿ ಮಲ್ಟಿಪ್ಲೆಕ್ಸ್ ಥಿಯೇಟರ್ ಮಾಲೀಕರು ಸಿನಿಮಾಗೆ ಹೆಚ್ಚು ದರದ ಟಿಕೆಟ್ ನಿಗದಿ ಮಾಡುವ ಕಾರಣ ಜನ ಥಿಯೇಟರ್ ಗಳಿಗೆ ಬರುತ್ತಿಲ್ಲ. ಒಂದೊಂದು ಮಾಲ್ ನಲ್ಲಿ ಬೇರೆ ಬೇರೆ ರೀತಿಯ ದರವಿದೆ. ಹೀಗಾಗಿ ಟಿಕೆಟ್ ದರವನ್ನು ಕಡಿಮೆ ಮಾಡಿ ಏಕರೂಪದ ದರವನ್ನು ತರಬೇಕು ಎಂದು ಆಗ್ರಹಿಸಿ ಜನ ಮತ್ತು ಸಿನಿಮಾ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಕಳೆದ ವರ್ಷ ಆಂದೋಲನವನ್ನು ನಡೆಸಿದ್ದರು. ತಮಿಳುನಾಡಿನಲ್ಲಿ ಗರಿಷ್ಠ 120 ರೂ. ಟಿಕೆಟ್, ಆಂಧ್ರಪ್ರದೇಶದಲ್ಲಿ ಗರಿಷ್ಠ 150 ರೂ. ನಿಗದಿಯಾಗಿರುವಾಗ ನಮ್ಮಲ್ಲಿ ಯಾಕೆ ದರವನ್ನು ನಿಗದಿ ಮಾಡಬಾರದು ಎಂದು ಸರ್ಕಾರವನ್ನು ಪ್ರಶ್ನಿಸಿದ್ದರು.

    ಒತ್ತಡ ಜಾಸ್ತಿ ಆಗುತ್ತಿದ್ದಂತೆ ಸರ್ಕಾರ ಈ ಸಮಸ್ಯೆಯ ಬಗ್ಗೆ ಅಧ್ಯಯನ ನಡೆಸಲು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಾಜೇಂದ್ರ ಸಿಂಗ್ ಬಾಬು ನೇತೃತ್ವದಲ್ಲಿ ಗಿರೀಶ್ ಕಾಸರವಳ್ಳಿ, ಭಾರತಿ ವಿಷ್ಣುವರ್ಧನ್, ರಾಘವೇಂದ್ರ ರಾಜ್‍ಕುಮಾರ್, ರಾಕ್‍ಲೈನ್ ವೆಂಕಟೇಶ್, ಭಾಷಾ, ಜಯಮಾಲ, ಥಾಮಸ್ ಡಿಸೋಜಾ, ಕೆ ವಿ ಚಂದ್ರಶೇಖರ್ ಮತ್ತು ಗಂಗಾಧರ್ ಮೊದಲಿಯಾರ್ ಅವರುಗಳನ್ನು ಒಳಗೊಂಡ 17 ಜನರ ಸದಸ್ಯರ ಸಮಿತಿಯೊಂದನ್ನು ರಚಿಸಿತ್ತು. ಈ ಸಮಿತಿ ಟಿಕೆಟ್ ದರಕ್ಕೆ ಗರಿಷ್ಠ ಮಿತಿಯನ್ನು ನಿಗದಿಪಡಿಸಬೇಕು ಹಾಗೂ ಪ್ರೈಮ್ ಟೈಂನಲ್ಲಿ ಪ್ರತಿ ಮಲ್ಟಿಪ್ಲೆಕ್ಸ್ ನಲ್ಲಿ ಎರಡು ಕನ್ನಡ ಸಿನೆಮಾಗಳನ್ನು ಕಡ್ಡಾಯವಾಗಿ ತೋರಿಸಲು ನಿಯಮ ಹೇರುವಂತೆ ಸರ್ಕಾರಕ್ಕೆ ವರದಿ ನೀಡಿತ್ತು. ಈ ವರದಿಯನ್ನು ಅನುಷ್ಠಾನಗೊಳಿಸಲು ಸರ್ಕಾರ ಈಗ ಮುಂದಾಗಿದೆ.

  • ವಿಶ್ವದ 2ನೇ ಅತೀದೊಡ್ಡ ಥಿಯೇಟರ್ ‘ಕಪಾಲಿ’ ಶೀಘ್ರದಲ್ಲೇ ನೆಲಸಮ!

    ವಿಶ್ವದ 2ನೇ ಅತೀದೊಡ್ಡ ಥಿಯೇಟರ್ ‘ಕಪಾಲಿ’ ಶೀಘ್ರದಲ್ಲೇ ನೆಲಸಮ!

    ಬೆಂಗಳೂರು: ಏಷ್ಯಾದ ಅತೀ ದೊಡ್ಡ ಥಿಯೇಟರ್, ವಿಶ್ವದ 2ನೇ ಅತೀದೊಡ್ಡ ಚಿತ್ರಮಂದಿರ ಅಂತ ಹೆಸರು ಮಾಡಿದ ಬೆಂಗಳೂರಿನ ಕಪಾಲಿ ಥಿಯೇಟರ್ ಈಗ ತನ್ನ ಕೊನೆ ದಿನಗಳನ್ನ ಎಣಿಸುತ್ತಿದೆ. ಸರಿ ಸುಮಾರು 50 ವರ್ಷಗಳು ಸಿನಿರಸಿಕರನ್ನ ರಂಜಿಸಿದ ಚಿತ್ರಮಂದಿರ ಶೀಘ್ರದಲ್ಲೇ ನೆಲಸಮವಾಗಲಿದೆ ಎಂದು ಹೇಳಲಾಗಿದೆ.

    ಹೌದು. ಬೆಂಗಳೂರಿನ ಪ್ರಸಿದ್ಧ ಕಪಾಲಿ ಥಿಯೇಟರ್ ಶೀಘ್ರವೇ ಬಂದ್ ಆಗಲಿದೆ. ಕಪಾಲಿ ಥಿಯೇಟರ್ ಇದ್ದ ಜಾಗದಲ್ಲಿ ಮಾಲ್ ನಿರ್ಮಾಣ ಮಾಡಲು ಮಾತುಕತೆ ನಡೆಯುತ್ತಿದೆ ಎಂದು ಚಿತ್ರಮಂದಿರದ ಮ್ಯಾನೇಜರ್ ಮಹೇಶ್ ತಿಳಿಸಿದ್ದಾರೆ.

    1968ರಲ್ಲಿ ಮೂರಾರ್ಜಿ ದೇಸಾಯಿ ಅವರಿಂದ ಉದ್ಘಾಟನೆಗೊಂಡಿದ್ದ ಕಪಾಲಿ ಥಿಯೇಟರ್ 1500 ಸೀಟ್ ಕೆಪಾಸಿಟಿ ಹೊಂದಿದ್ದು, ಏಷ್ಯಾದ ಅತಿದೊಡ್ಡ ಥಿಯೇಟರ್ ಎನಿಸಿಕೊಂಡಿತ್ತು. ಇಲ್ಲಿ ಪ್ರದರ್ಶನಗೊಂಡ ಮೊದಲ ಚಿತ್ರ ‘ದಿಸ್ ಇಸ್ ಸಿನೆರಮಾ’. ಡಾ. ರಾಜ್‍ಕುಮಾರ್ ಅಭಿನಯದ ಮಣ್ಣಿನ ಮಗ ಚಿತ್ರ ಕಪಾಲಿಯಲ್ಲಿ ಶತದಿನೋತ್ಸವ ಆಚರಿಸಿದ ಮೊದಲ ಚಿತ್ರವಾಗಿತ್ತು. ಪ್ರೇಮಲೋಕದ ಕ್ರೇಜಿಸ್ಟಾರ್ ರವಿಚಂದ್ರನ್‍ಗೆ ಈ ಥಿಯೇಟರ್ ತುಂಬಾನೆ ಲಕ್ಕಿ ಎನಿಸಿಕೊಂಡಿತ್ತು. ಭಾರತೀಯ ಚಿತ್ರರಂಗದ ಎವರ್‍ಗ್ರೀನ್ ಚಿತ್ರ `ಶೋಲೆ’ ಕಪಾಲಿಯಲ್ಲಿ 6 ತಿಂಗಳು ಯಶಸ್ವಿ ಪ್ರದರ್ಶನ ಕಂಡಿತ್ತು. ಸಿನೆರಮಾ ಎನ್ನುವ ಪ್ರೊಜೆಕ್ಷನ್ ಸಿಸ್ಟಮ್ (3 ಪ್ರೊಜೆಕ್ಟರ್‍ಗಳಿಂದ ಸಿನಿಮಾ ರನ್ ಆಗುವುದು) ಅಳವಡಿಸಿಕೊಂಡ ಮೊಟ್ಟ ಮೊದಲ ಚಿತ್ರಮಂದಿರವಾಗಿತ್ತು.

     

  • ಸ್ಯಾಂಡಲ್‍ವುಡ್ ಮಂದಿಗೆ ನಿನ್ನೆ ಸಿಹಿ, ಇಂದು ಕಹಿ ಸುದ್ದಿ: ಮಲ್ಟಿಪ್ಲೆಕ್ಸ್ ನಲ್ಲಿ ಟಿಕೆಟ್ ದರ ಕಡಿಮೆಯಾಗಿದ್ದು ಯಾಕೆ?

    ಸ್ಯಾಂಡಲ್‍ವುಡ್ ಮಂದಿಗೆ ನಿನ್ನೆ ಸಿಹಿ, ಇಂದು ಕಹಿ ಸುದ್ದಿ: ಮಲ್ಟಿಪ್ಲೆಕ್ಸ್ ನಲ್ಲಿ ಟಿಕೆಟ್ ದರ ಕಡಿಮೆಯಾಗಿದ್ದು ಯಾಕೆ?

    ಬೆಂಗಳೂರು: ಸ್ಯಾಂಡಲ್‍ವುಡ್‍ಗೆ ನಿನ್ನೆ ಸಿಹಿ, ಇಂದು ಕಹಿ ಸುದ್ದಿ ಸಿಕ್ಕಿದೆ. ರಾಜ್ಯ ಸರ್ಕಾರದ ವಿರುದ್ಧ ಮಲ್ಟಿಪ್ಲೆಕ್ಸ್ ಮಾಲೀಕರು ಗರಂ ಆಗಿದ್ದು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.

    ಮಲ್ಟಿಪ್ಲೆಕ್ಸ್ ಗಳ ಒಂದು ಸ್ಕ್ರೀನ್‍ನಲ್ಲಿ ಮಧ್ಯಾಹ್ನ 1:30 ರಿಂದ ಸಂಜೆ 7:30 ವರೆಗೆ ಕಡ್ಡಾಯ ಕನ್ನಡ ಸಿನಿಮಾ ಪ್ರದರ್ಶನವಾಗಬೇಕು. ಅಷ್ಟೇ ಅಲ್ಲದೇ ಗರಿಷ್ಠ 200 ರೂ. ಟಿಕೆಟ್ ನಿಗದಿ ಮಾಡಬೇಕೆಂಬ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್‍ನಲ್ಲಿ ಪ್ರಶ್ನಿಸಲು ಇಂಡಿಯನ್ ಮಲ್ಟಿಪ್ಲೆಕ್ಸ್ ಅಸೋಶಿಯೇಷನ್ ಮುಂದಾಗಿದೆ.

    ರಾಜ್ಯ ಸರ್ಕಾರದ ಬಜೆಟ್‍ನಲ್ಲಿ ಈ ವಿಚಾರ ಪ್ರಸ್ತಾಪವಾದ ಬಳಿಕ ಬುಧವಾರ ಸಂಜೆಯೇ ಮುಂಬೈನಲ್ಲಿ ಸಭೆ ನಡೆಸಿದ ಮಲ್ಟಿಪ್ಲೆಕ್ಸ್ ಮಾಲೀಕರು ಹೈಕೋರ್ಟ್‍ನಲ್ಲಿ ರಿಟ್ ಅರ್ಜಿ ಸಲ್ಲಿಸಿ ಕಾನೂನು ಸಮರ ನಡೆಸಲು ಮುಂದಾಗಿದ್ದಾರೆ.

    ದರ ಕಡಿಮೆಯಾಗಿದ್ದು ಯಾಕೆ?
    ಕರ್ನಾಟಕದಲ್ಲಿ ಮಲ್ಟಿಪ್ಲೆಕ್ಸ್ ಥಿಯೇಟರ್ ಮಾಲೀಕರು ಸಿನಿಮಾಗೆ ಹೆಚ್ಚು ದರದ ಟಿಕೆಟ್ ನಿಗದಿ ಮಾಡುವ ಕಾರಣ ಜನ ಥಿಯೇಟರ್‍ಗೆ ಬರುತ್ತಿಲ್ಲ. ಒಂದೊಂದು ಥಿಯೇಟರ್‍ನಲ್ಲಿ ಬೇರೆ ಬೇರೆ ರೀತಿಯ ದರವಿದೆ. ಹೀಗಾಗಿ ಟಿಕೆಟ್ ದರವನ್ನು ಕಡಿಮೆ ಮಾಡಿ ಏಕರೂಪದ ದರವನ್ನು ತರಬೇಕು ಎಂದು ಆಗ್ರಹಿಸಿ ಜನ ಮತ್ತು ಸಿನಿಮಾ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಕಳೆದ ವರ್ಷ ಆಂದೋಲನವನ್ನು ನಡೆಸಿದ್ದರು. ತಮಿಳುನಾಡಿನಲ್ಲಿ ಗರಿಷ್ಠ 120 ರೂ. ಟಿಕೆಟ್ ನಿಗದಿಯಾಗಿರುವಾಗ ನಮ್ಮಲ್ಲಿ ಯಾಕೆ ದರವನ್ನು ನಿಗದಿ ಮಾಡಬಾರದು ಎಂದು ಸರ್ಕಾರವನ್ನು ಪ್ರಶ್ನಿಸಿದ್ದರು.

    ಒತ್ತಡ ಜಾಸ್ತಿ ಆಗುತ್ತಿದ್ದಂತೆ ಸರ್ಕಾರ ಈ ಸಮಸ್ಯೆಯ ಬಗ್ಗೆ ಅಧ್ಯಯನ ನಡೆಸಲು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಾಜೇಂದ್ರ ಸಿಂಗ್ ಬಾಬು ನೇತೃತ್ವದಲ್ಲಿ ಗಿರೀಶ್ ಕಾಸರವಳ್ಳಿ, ಭಾರತಿ ವಿಷ್ಣುವರ್ಧನ್, ರಾಘವೇಂದ್ರ ರಾಜ್‍ಕುಮಾರ್, ರಾಕ್‍ಲೈನ್ ವೆಂಕಟೇಶ್, ಭಾಷಾ, ಜಯಮಾಲ, ಥಾಮಸ್ ಡಿಸೋಜಾ, ಕೆ ವಿ ಚಂದ್ರಶೇಖರ್ ಮತ್ತು ಗಂಗಾಧರ್ ಮೊದಲಿಯಾರ್ ಅವರುಗಳನ್ನು ಒಳಗೊಂಡ 17 ಜನರ ಸದಸ್ಯರ ಸಮಿತಿಯೊಂದನ್ನು ರಚಿಸಿತ್ತು. ಈ ಸಮಿತಿ ಟಿಕೆಟ್ ದರಕ್ಕೆ ಗರಿಷ್ಠ ಮಿತಿಯನ್ನು ನಿಗದಿಪಡಿಸಬೇಕು ಹಾಗೂ ಪ್ರೈಮ್ ಟೈಂನಲ್ಲಿ ಪ್ರತಿ ಮಲ್ಟಿಪ್ಲೆಕ್ಸ್ ನಲ್ಲಿ ಎರಡು ಕನ್ನಡ ಸಿನೆಮಾಗಳನ್ನು ಕಡ್ಡಾಯವಾಗಿ ತೋರಿಸಲು ನಿಯಮ ಹೇರುವಂತೆ ಸರ್ಕಾರಕ್ಕೆ ವರದಿ ನೀಡಿತ್ತು. ಈ ವರದಿಯನ್ನು ಅನುಷ್ಠಾನಗೊಳಿಸಲು ಸರ್ಕಾರ ಈಗ ಮುಂದಾಗಿದೆ.

    ಸರ್ಕಾರದ ನಿರ್ಧಾರವನ್ನು ಸ್ಯಾಂಡಲ್‍ವುಡ್ ಮಂದಿ ಮತ್ತು ಚಿತ್ರ ವೀಕ್ಷಕರು ಸ್ವಾಗತಿಸಿದ್ದಾರೆ.