Tag: Mumbai Airport

  • ಮುಂಬೈಯಲ್ಲಿ ರನ್‌ವೇಯಿಂದ ಜಾರಿದ ಏರ್ ಇಂಡಿಯಾ ವಿಮಾನ – ತಪ್ಪಿದ ಭಾರೀ ಅವಘಡ

    ಮುಂಬೈಯಲ್ಲಿ ರನ್‌ವೇಯಿಂದ ಜಾರಿದ ಏರ್ ಇಂಡಿಯಾ ವಿಮಾನ – ತಪ್ಪಿದ ಭಾರೀ ಅವಘಡ

    – ಕೊಚ್ಚಿಯಿಂದ ಮುಂಬೈಗೆ ಆಗಮಿಸಿದ್ದ ವಿಮಾನ

    ಮುಂಬೈ: ಕೊಚ್ಚಿಯಿಂದ ಮುಂಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಭಾರೀ ಮಳೆಯಿಂದಾಗಿ ರನ್‌ವೇನಲ್ಲಿ ಜಾರಿ ಪಕ್ಕದ ಜಮೀನಿಗೆ ಹೋಗಿದ್ದು, ಬಳಿಕ ಪೈಲಟ್‌ನ ಚಾಣಕ್ಷ್ಯತನದಿಂದ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ ಘಟನೆ ಮುಂಬೈ ವಿಮಾನ ನಿಲ್ದಾಣದಲ್ಲಿ ಸಂಭವಿಸಿದೆ.

    ಸೋಮವಾರ ಬೆಳಗ್ಗೆ 7:43ರ ಸುಮಾರಿಗೆ ಕೊಚ್ಚಿಯಿಂದ AI2744 ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆಗಿತ್ತು. ಅಲ್ಲಿಂದ ಹೊರಟು ಬೆಳಗ್ಗೆ 9:27ಕ್ಕೆ ಮುಂಬೈ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವಾಗ ಭಾರೀ ಮಳೆಯಿಂದಾಗಿ ವಿಮಾನವು ರನ್‌ವೇಯಿಂದ ಜರಿದು ಪಕ್ಕದ ಜಮೀನಿಗೆ ಹೋಗಿತ್ತು. ಬಳಿಕ ಪೈಲಟ್‌ನ ಚಾಣಕ್ಷ್ಯತನದಿಂದ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ.ಇದನ್ನೂ ಓದಿ: ಕನಕಪುರದ 250ಕ್ಕೂ ಹೆಚ್ಚು ಹಳ್ಳಿಗಳಿಗೆ ಕಾವೇರಿ ಕುಡಿಯುವ ನೀರು ಪೂರೈಕೆ: ಡಿಕೆಶಿ

    VT-TYA ನೋಂದಣಿಯ ಏರ್‌ಬಸ್ A320ne ವಿಮಾನವನ್ನು ಲ್ಯಾಂಡಿಂಗ್ ವೇಳೆ ಟರ್ಮಿನಲ್‌ಗೆ ಸಂಪರ್ಕಿಸಲಾಗಿದ್ದು, ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ಕೆಳಗಿಳಿದಿದ್ದಾರೆ. ಯಾವುದೇ ಅವಘಡ ಸಂಭವಿಸಿಲ್ಲ. ಇನ್ನೂ ವಿಮಾನವು ರನ್‌ವೇಯಿಂದ ಜರಿದು ಪಕ್ಕಕ್ಕೆ ಹೋಗಿದ್ದರಿಂದ ನಿಲ್ದಾಣದ ಪ್ರಾಥಮಿಕ ರನ್‌ವೇ 09/27 ಹಾಗೂ ವಿಮಾನದ 3 ಟೈರ್‌ಗಳು ಸ್ಫೋಟಗೊಂಡು ಸಣ್ಣಪುಟ್ಟ ಹಾನಿಯಾಗಿದೆ. ಹೀಗಾಗಿ ಯಾವುದೇ ಅಡಚಣೆಯಿಲ್ಲದೇ ವಿಮಾನಗಳ ಹಾರಾಟಕ್ಕಾಗಿ ಎರಡನೇ ರನ್‌ವೇಯನ್ನು ಬಳಸಲಾಯಿತು.

    ಮುಂಬೈ ವಿಮಾನ ನಿಲ್ದಾಣವು ಎರಡು ಛೇದಿಸುವ ರನ್‌ವೇಗಳನ್ನು ಹೊಂದಿದ್ದು, ಒಂದು ಸಮಯದಲ್ಲಿ ಒಂದು ವಿಮಾನ ಮಾತ್ರ ಕಾರ್ಯನಿರ್ವಹಿಸಬಹುದು. ಜೊತೆಗೆ ಈ ವಿಮಾನ ನಿಲ್ದಾಣವು ವಿಶ್ವದ ಅತ್ಯಂತ ಜನದಟ್ಟಣೆಯಿಂದ ಕೂಡಿರುವ ಒಂದೇ ರನ್‌ವೇ ಕಾರ್ಯಾಚರಣೆ ಮಾಡುವ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ.

    ಮುಂಬೈನಲ್ಲಿ ನಿರಂತರ ಮಳೆಯಾಗುತ್ತಿರುವುದು ಈ ಅವಘಡಕ್ಕೆ ಕಾರಣವಾಗಿದೆ. ಸೋಮವಾರ ಬೆಳಿಗ್ಗೆ, ಮುಂಬೈ ಉಪನಗರಗಳಲ್ಲಿ 115 ಮಿ.ಮೀ ಮಳೆಯಾಗಿದ್ದರೆ, ಕೊಲಾಬಾದಲ್ಲಿ ಕೇವಲ 11 ಮಿ.ಮೀ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.ಇದನ್ನೂ ಓದಿ: ಇನ್ಮುಂದೆ ಉಪ್ಪಿ ʻನೆಕ್ಸ್ಟ್‌ ಲೆವೆಲ್‌ʼ – ಸದ್ದಿಲ್ಲದೇ ಸೆಟ್ಟೇರುತ್ತಿದೆ ಹೊಸ ಸಿನಿಮಾ

  • ಮುಂಬೈ ಏರ್‌ಪೋರ್ಟ್‌ನಲ್ಲಿ ಆಕಾಸ ಏರ್ ವಿಮಾನಕ್ಕೆ ಟ್ರಕ್‌ ಡಿಕ್ಕಿ

    ಮುಂಬೈ ಏರ್‌ಪೋರ್ಟ್‌ನಲ್ಲಿ ಆಕಾಸ ಏರ್ ವಿಮಾನಕ್ಕೆ ಟ್ರಕ್‌ ಡಿಕ್ಕಿ

    ಮುಂಬೈ: ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Mumbai Airport) ಆಕಾಸ ಏರ್ ವಿಮಾನಕ್ಕೆ‌ (Akasa Air Plane) ಸರಕು ಸಾಗಾಣಿಕೆಯ ಟ್ರಕ್‌ (Truck) ಡಿಕ್ಕಿ ಹೊಡೆದಿದೆ.

    ವಿಮಾನವನ್ನು ನಿಲ್ದಾಣದಲ್ಲಿ ನಿಲ್ಲಿಸಿದ್ದ ವೇಳೆ ಟ್ರಕ್‌ ಹಿಂಭಾಗದ ರೆಕ್ಕೆಗಳಿಗೆ ಡಿಕ್ಕಿಯಾಗಿದೆ. ವಿಮಾನವನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಈ ಘಟನೆಗೆ ಕಾರಣನಾದ ವ್ಯಕ್ತಿಯ ವಿರುದ್ಧ ತನಿಖೆ ನಡೆಸುತ್ತಿದ್ದೇವೆ ಎಂದು ಆಕಾಸ ಏರ್‌ ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ಫ್ಯುಯೆಲ್ ಸ್ವಿಚ್ ನಿರ್ವಹಿಸುವಾಗ ಜಾಗ್ರತೆ – ಪೈಲಟ್‍ಗಳಿಗೆ ಆದೇಶಿಸಿದ ಇತಿಹಾದ್ ಏರ್‌ಲೈನ್ಸ್‌

    ವಿಮಾನಕ್ಕೆ ಆಗಿರುವ ಹಾನಿಯ ಪ್ರಮಾಣ ಮತ್ತು ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ವಿಮಾನಯಾನ ಸಂಸ್ಥೆ ಮತ್ತು ವಿಮಾನ ನಿಲ್ದಾಣದ ಸರಕು ಸಾಗಾಟ ನಿರ್ವಹಣಾ ಕಂಪನಿ ಜಂಟಿ ತನಿಖೆ ನಡೆಸುತ್ತಿವೆ. ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಕೇಸ್‌ | ರಾಹುಲ್, ಸೋನಿಯಾ ವಿರುದ್ಧದ ಆರೋಪ ಪರಿಗಣನೆ ಕುರಿತು ತೀರ್ಪು ಕಾಯ್ದಿರಿಸಿದ ದೆಹಲಿ ಕೋರ್ಟ್‌

  • ಮಹಾರಾಷ್ಟ್ರದಲ್ಲಿ ಭಾರೀ ಮಳೆಗೆ ಪ್ರವಾಹ ಪರಿಸ್ಥಿತಿ; ಪುಣೆಯಲ್ಲಿ 6 ಮಂದಿ ಬಲಿ

    ಮಹಾರಾಷ್ಟ್ರದಲ್ಲಿ ಭಾರೀ ಮಳೆಗೆ ಪ್ರವಾಹ ಪರಿಸ್ಥಿತಿ; ಪುಣೆಯಲ್ಲಿ 6 ಮಂದಿ ಬಲಿ

    ಮುಂಬೈ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮುಂಬೈ, ಪುಣೆ ಸೇರಿದಂತೆ ನಗರದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮಹಾಮಳೆಗೆ ಪುಣೆಯಲ್ಲಿ 6 ಮಂದಿ ಬಲಿಯಾಗಿದ್ದಾರೆ.

    ವಿದ್ಯುತ್‌ ಅವಘಡದಿಂದ ಮೂವರು, ಥಾಣೆಯ ಬಾರ್ವಿ ಅಣೆಕಟ್ಟೆಗೆ ಬಿದ್ದು ಇಬ್ಬರು ಮುಳುಗಿ ಸಾವಿಗೀಡಾಗಿದ್ದಾರೆ. ಭಾರೀ ಮಳೆಯಿಂದಾಗಿ ಮುಂಬೈ ಮತ್ತು ಪಾಲ್ಘರ್‌ಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

    ಮುಂಬೈನ ಸಾಂತಾಕ್ರೂಜ್‌ನಲ್ಲಿರುವ ವೀಕ್ಷಣಾಲಯವು ಈ ತಿಂಗಳಿನಲ್ಲಿ ಇದುವರೆಗೆ 1,500 ಮಿಮೀ ಮಳೆಯನ್ನು ದಾಖಲಿಸಿದೆ. ನಗರದ ಇತಿಹಾಸದಲ್ಲೇ 2ನೇ ಬಾರಿಗೆ ಅತಿ ಹೆಚ್ಚು ಮಳೆಯಾದಂತಾಗಿದೆ. ಕಳೆದ ಜುಲೈನಲ್ಲಿ ನಗರದಲ್ಲಿ 1,771 ಮಿಮೀ ನಷ್ಟು ಮಳೆಯಾಗಿತ್ತು.

    ಕುಂಡಲಿಕಾ ಮತ್ತು ಅಂಬಾ ಸೇರಿದಂತೆ ರಾಜ್ಯದ ನಾಲ್ಕು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ನದಿ ತೀರದಲ್ಲಿ ವಾಸವಾಗಿರುವ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

    ನಗರದ ಹಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋಗಳು ಮತ್ತು ಫೋಟೋಗಳು ಹರಿದಾಡುತ್ತಿವೆ. ಜುಹು ಕಡಲತೀರದ ಉದ್ದಕ್ಕೂ ಅಲೆಗಳ ಅಬ್ಬರ ಜೋರಾಗಿದೆ. ಕರಾವಳಿಯಿಂದ ದೂರವಿರಲು ಜನರಿಗೆ ಎಚ್ಚರಿಸಲಾಗಿದೆ.

  • ಒಂದೇ ರನ್‌ವೇಯಲ್ಲಿ ಲ್ಯಾಂಡಿಂಗ್‌, ಟೇಕಾಫ್‌- ಮುಂಬೈಯಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿತು ದುರಂತ

    ಒಂದೇ ರನ್‌ವೇಯಲ್ಲಿ ಲ್ಯಾಂಡಿಂಗ್‌, ಟೇಕಾಫ್‌- ಮುಂಬೈಯಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿತು ದುರಂತ

    ಮುಂಬೈ: ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Mumbai Airport) ಸ್ವಲ್ಪ ಹೆಚ್ಚು ಕಡಿಮೆಯಾಗಿದ್ದರೂ ದೊಡ್ಡ ದುರಂತ ಸಂಭವಿಸುವ ಸಾಧ್ಯತೆ ಇತ್ತು. ಶನಿವಾರ ಸಂಜೆ ಒಂದೇ ರನ್‌ವೇಯಲ್ಲಿ (Runway) ಏರ್‌ ಇಂಡಿಯಾ (Air India) ವಿಮಾನ ಟೇಕಾಫ್‌ ಆದರೆ ಇಂಡಿಗೋ (IndiGo) ವಿಮಾನ ಲ್ಯಾಂಡಿಂಗ್‌ ಆಗಿದೆ.

    ಏರ್‌ ಇಂಡಿಯಾ ವಿಮಾನ ತಿರುವನಂತಪುರಂಗೆ ಟೇಕಾಫ್‌ ಆಗುತ್ತಿತ್ತು. ಈ ಸಂದರ್ಭದಲ್ಲಿ ಇಂದೋರ್‌ನಿಂದ ಆಗಮಿಸಿದ ಇಂಡಿಗೋ ವಿಮಾನಕ್ಕೆ ತಪ್ಪಾಗಿ ರನ್‌ವೇಯಲ್ಲಿ ಲ್ಯಾಂಡಿಂಗ್‌ ಮಾಡಲು ಅನುಮತಿ ಸಿಕ್ಕಿದೆ.


    ಅನುಮತಿ ಸಿಕ್ಕಿದ ಕಾರಣ ಪೈಲಟ್‌ ರನ್‌ವೇಯಲ್ಲಿ ಟಚ್‌ಡೌನ್‌ ಆಗುತ್ತಿದ್ದಾಗ ಏರ್‌ ಇಂಡಿಯಾ ಜಸ್ಟ್‌ ಟೇಕಾಫ್‌ ಆಗಿತ್ತು. ಒಂದು ವೇಳೆ ಏರ್‌ ಇಂಡಿಯಾ ಟೇಕಾಫ್‌ ಕೆಲ ಸೆಕೆಂಡ್‌ ವಿಳಂಬವಾಗಿದ್ದರೆ ಹಿಂದಿನಿಂದ ಏರ್‌ ಇಂಡಿಯಾ ವಿಮಾನ ಡಿಕ್ಕಿ ಹೊಡೆಯುವ ಸಾಧ್ಯತೆ ಇತ್ತು.

    ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ನಾಗರಿಕ ವಿಮಾನಯಾನ ನಿರ್ದೇಶನಾಲಯ ತನಿಖೆಗೆ ಆದೇಶಿಸಿದೆ. ಇಂಡಿಗೋ ವಿಮಾನಕ್ಕೆ ಲ್ಯಾಂಡಿಂಗ್‌ ಮಾಡಲು ಅನುಮತಿ ನೀಡಿದ್ದ ಎಟಿಸಿ ಸಿಬ್ಬಂದಿಯನ್ನು ತನಿಖೆ ಮುಗಿಯುವರೆಗೂ ಕೆಲಸದಿಂದ ತೆಗೆಯಲಾಗಿದೆ.

  • ಮುಂಬೈ ತಾಜ್‌ ಹೋಟೆಲ್‌, ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ – ಉತ್ತರ ಪ್ರದೇಶದಲ್ಲಿ ಲೊಕೇಶನ್‌ ಪತ್ತೆ!

    ಮುಂಬೈ ತಾಜ್‌ ಹೋಟೆಲ್‌, ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ – ಉತ್ತರ ಪ್ರದೇಶದಲ್ಲಿ ಲೊಕೇಶನ್‌ ಪತ್ತೆ!

    ಮುಂಬೈ: ಇಲ್ಲಿನ ತಾಜ್‌ ಹೋಟೆಲ್‌ ಮತ್ತು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇರಿಸಲಾಗಿದೆ (Bomb Threat) ಎಂದು ಮುಂಬೈ ಪೊಲೀಸ್‌ ಕಂಟ್ರೋಲ್‌ ರೂಮ್‌ಗೆ ಬೆದರಿಕೆ ಕರೆ ಬಂದಿದೆ.

    ಬೆದರಿಕೆ ಕರೆ ಬಂದ ಹಿನ್ನೆಲೆ ಬಾಂಬ್‌ ಪತ್ತೆ ಮತ್ತು ನಿಷ್ಕ್ರಿಯ ದಳ, ಶ್ವಾನ ದಳದೊಂದಿಗೆ ಪೊಲೀಸರು (Mumbai Police) ಸ್ಥಳಕ್ಕೆ ದೌಡಾಯಿಸಿ ತೀವ್ರ ತಪಾಸಣೆ ನಡೆಸಿದ್ದಾರೆ. ಈ ವೇಳೆ ಅನುಮಾನಾಸ್ಪದವಾದ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ. ದೂರವಾಣಿ ಕರೆಯ ಲೊಕೇಶನ್‌ ಉತ್ತರ ಪ್ರದೇಶದಲ್ಲಿ (Uttar Pradesh) ಪತ್ತೆಯಾಗಿದೆ ಎಂದಿರುವ ಪೊಲೀಸರು ಕಿಡಿಗೇಡಿಗಳಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ. ಇದನ್ನೂ ಓದಿ: ಬಿಹಾರದಲ್ಲಿ ರಾಹುಲ್‌ ಪ್ರಚಾರದ ವೇಳೆ ಕುಸಿದ ವೇದಿಕೆ

    ಇತ್ತೀಚೆಗಷ್ಟೇ ದೆಹಲಿಯ ಸುಮಾರು 130 ಶಾಲೆಗಳಿಗೆ ಬಾಂಬ್‌ ಬೆದರಿಕೆ ಬಂದಿತ್ತು. ಇದಾದ ಎರಡು ದಿನಗಳ ನಂತರ ಜೈಪುರದ ಶಾಲೆಗಳಿಗೂ ಬಾಂಬ್‌ ಬೆದರಿಕೆಯ ಇಮೇಲ್‌ ಬಂದಿತ್ತು. ಸದ್ಯ ಮುಂಬೈ ತಾಜ್‌ ಹೋಟೆಲ್‌ನಲ್ಲಿ (Taj Hotel) ಬಾಂಬ್‌ ಇರಿಸಿರುವುದಾಗಿ ಬೆದರಿಕೆ ಕರೆ ಬಂದಿರುವುದು 2008ರಲ್ಲಿ ನಡೆದ ಮುಂಬೈ ದಾಳಿಯನ್ನೇ ನೆನಪಿಸಿದೆ. ಇದನ್ನೂ ಓದಿ: ಪ್ರಣಾಳಿಕೆ ಭರವಸೆಯಿಂದಾಗುವ ಆರ್ಥಿಕ ಲಾಭ ಅಭ್ಯರ್ಥಿಯ ಭ್ರಷ್ಟಾಚಾರವಲ್ಲ – ಜಮೀರ್‌ಗೆ ಸುಪ್ರೀಂ ರಿಲೀಫ್

    ನೆನಪಿದೆಯಾ ಆ ಕರಾಳ ದಿನ..?
    2008ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ ಭಯೋತ್ಪಾದಕರು ಪ್ರವೇಶಿಸಿದ್ದರು. 60 ಗಂಟೆಗಳಿಗೂ ಹೆಚ್ಚು ಕಾಲ ಮುತ್ತಿಗೆ ಹಾಕಿ, ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನ ನಡೆಸಿ 166 ಜನರನ್ನು ಹತ್ಯೆಗೈದಿದ್ದರು. 300ಕ್ಕೂ ಹೆಚ್ಚು ಜನರನ್ನ ಗಾಯಗೊಳಿಸಿದ್ದರು. ಛತ್ರಪತಿ ಶಿವಾಜಿ ಟರ್ಮಿನಸ್ ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್‌ಗಳಲ್ಲಿ ದಾಳಿ ನಡೆಸಲಾಗಿತ್ತು. ಇದನ್ನೂ ಓದಿ: ಕೇಜ್ರಿವಾಲ್‌ಗೆ ಕ್ಯಾನ್ಸರ್ ಗಂಭೀರ ಹಂತದಲ್ಲಿಯೇ?- ಜಾಮೀನು ವಿಸ್ತರಣೆ ಅರ್ಜಿಯ ಕುರಿತು ಅತಿಶಿ ಹೇಳಿದ್ದೇನು? 

  • ಎಮಿರೇಟ್ಸ್ ವಿಮಾನಕ್ಕೆ‌ ಸಿಲುಕಿ 40 ರಾಜಹಂಸ ಹಕ್ಕಿಗಳು ಸಾವು

    ಎಮಿರೇಟ್ಸ್ ವಿಮಾನಕ್ಕೆ‌ ಸಿಲುಕಿ 40 ರಾಜಹಂಸ ಹಕ್ಕಿಗಳು ಸಾವು

    ಮುಂಬೈ: ಎಮಿರೇಟ್ಸ್‌ ವಿಮಾನಕ್ಕೆ (Emirates Aircraft) ಡಿಕ್ಕಿ ಹೊಡೆದು 40 ರಾಜಹಂಸ (Flamingos) ಹಕ್ಕಿಗಳು ಮುಂಬೈನ ಉಪನಗರವಾದ ಘಾಟ್‌ಕೋಪರ್‌ನಲ್ಲಿ ಸಾವಿಗೀಡಾಗಿವೆ. ಮೃತ ಹಕ್ಕಿಗಳು ವಿವಿಧ ಪ್ರದೇಶಗಳಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

    ಮುಂಬೈ ವಿಮಾನ ನಿಲ್ದಾಣದಲ್ಲಿ (Mumbai Airport) ಇಳಿಯುವ ಕೆಲವೇ ಕ್ಷಣಗಳ ಮೊದಲು ವಿಮಾನವು ಹಕ್ಕಿ ಹಿಂಡುಗಳಿಗೆ ಡಿಕ್ಕಿ ಹೊಡೆದಿದೆ ಎಂದು ವರದಿ ತಿಳಿಸಿದೆ. ದುಬೈಗೆ ತೆರಳಬೇಕಿದ್ದ ವಿಮಾನವು ನಿನ್ನೆ (ಸೋಮವಾರ) ರದ್ದುಗೊಂಡಿದೆ. ಇದನ್ನೂ ಓದಿ: ಅಮಿತ್‌ ಶಾ ಇನ್ನೂ ಪ್ರಧಾನಿಯಾಗಿಲ್ಲ ಆಗಲೇ ದುರಹಂಕಾರಿಯಾಗಿದ್ದಾರೆ: ಕೇಜ್ರಿವಾಲ್ ವಾಗ್ದಾಳಿ

    ಘಾಟ್ಕೋಪರ್ ಪ್ರದೇಶದಲ್ಲಿ ಸತ್ತು ಬಿದ್ದಿದ್ದ ಪಕ್ಷಿಗಳ ಬಗ್ಗೆ ಸ್ಥಳೀಯ ನಿವಾಸಿಗಳು, ವನ್ಯಜೀವಿ ತಂಡಕ್ಕೆ ಮಾಹಿತಿ ನೀಡಿದ್ದಾರೆ. ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಪಕ್ಷಿಗಳ ಅವಶೇಷಗಳನ್ನು ವಶಪಡಿಸಿಕೊಂಡಿದ್ದಾರೆ.

    ಪಕ್ಷಿಗಳ ಮೃತದೇಹಗಳು ಬಿದ್ದಿದ್ದ ಪ್ರದೇಶಗಳಿಗೆ ತೆರಳಿ ಅಧಿಕಾರಿಗಳು ಅವಶೇಷಗಳನ್ನು ವಶಕ್ಕೆ ಪಡೆದಿದ್ದಾರೆ. ರೆಕ್ಕೆಗಳು, ಉಗುರು, ಕೊಕ್ಕುಗಳ ಮುರಿದ ತುಂಡುಗಳು ಅಲ್ಲಲ್ಲಿ ಬಿದ್ದಿದ್ದವು. ಇದನ್ನೂ ಓದಿ: ಸಂಸದ ಜಯಂತ್ ಸಿನ್ಹಾಗೆ ಬಿಜೆಪಿಯಿಂದ ಶೋಕಾಸ್ ನೋಟಿಸ್ ಜಾರಿ

    ಹಕ್ಕಿಗಳ ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ರೆಸ್ಕಿಂಕ್ ಅಸೋಸಿಯೇಷನ್ ಫಾರ್ ವೈಲ್ಡ್ಲೈಫ್ ವೆಲ್ಫೇರ್ (RAWW) ಸಂಸ್ಥಾಪಕ ಪವನ್ ಶರ್ಮಾ ಹೇಳಿದ್ದಾರೆ.

  • ಮುಂಬೈನಲ್ಲಿ ಲ್ಯಾಂಡ್‌ ಆಯ್ತು ಫ್ರಾನ್ಸ್‌ ವಶದಲ್ಲಿದ್ದ 303 ಭಾರತೀಯರಿದ್ದ ವಿಮಾನ

    ಮುಂಬೈನಲ್ಲಿ ಲ್ಯಾಂಡ್‌ ಆಯ್ತು ಫ್ರಾನ್ಸ್‌ ವಶದಲ್ಲಿದ್ದ 303 ಭಾರತೀಯರಿದ್ದ ವಿಮಾನ

    ಮುಂಬೈ: ಶಂಕಿತ ಮಾನವ ಕಳ್ಳಸಾಗಣೆ ಆರೋಪದ ಮೇಲೆ ಫ್ರಾನ್ಸ್‌ (France) ವಶದಲ್ಲಿದ್ದ 303 ಭಾರತೀಯ ಪ್ರಯಾಣಿಕರಿದ್ದ A-340 ವಿಮಾನವು ಮಂಗಳವಾರ ಮುಂಜಾನೆ ಮುಂಬೈಗೆ ಬಂದಿಳಿಯಿತು.

    ವಿಮಾನವು ದುಬೈನಿಂದ ನಿಕರಾಗುವಾಗೆ ಹೋಗುತ್ತಿತ್ತು. ಆದರೆ ಕಳೆದ ವಾರ ಫ್ರಾನ್ಸ್‌ನ ವ್ಯಾಟ್ರಿ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಇದನ್ನೂ ಓದಿ: ಮಾನವ ಕಳ್ಳಸಾಗಾಣಿಕೆ ಶಂಕೆ – ಫ್ರಾನ್ಸ್‌ನಲ್ಲಿ 300 ಕ್ಕೂ ಹೆಚ್ಚು ಭಾರತೀಯರಿದ್ದ ವಿಮಾನ ವಶಕ್ಕೆ

    ಫ್ರಾನ್ಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು, ಭಾರತೀಯ ಪ್ರಯಾಣಿಕರಿಗೆ ನೀಡಿದ ಆತಿಥ್ಯ ಮತ್ತು ಯಾವುದೇ ತೊಂದರೆಯಾಗದಂತೆ ಮನೆಗೆ ಹಿಂತಿರುಗಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಫ್ರೆಂಚ್ ಸರ್ಕಾರ ಮತ್ತು ವಾಟ್ರಿ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದೆ.

    ರಾಯಭಾರ ಕಚೇರಿ ತಂಡದೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದು ಮತ್ತು ನಾಗರಿಕರ ಸುರಕ್ಷಿತ ವಾಪಸ್‌ ಆಗಲು ಫ್ರೆಂಚ್ ಅಧಿಕಾರಿಗಳು ನೀಡಿದ ಸಹಕಾರವನ್ನು ರಾಯಭಾರ ಕಚೇರಿ ಶ್ಲಾಘಿಸಿದೆ. ಇದನ್ನೂ ಓದಿ: ಪಾಕ್‍ನಲ್ಲಿ 2024ರ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮೊದಲ ಹಿಂದೂ ಯುವತಿ

    ಭಾರತೀಯ ಪ್ರಯಾಣಿಕರು ವಾಪಸ್‌ ಆಗಲು ಉತ್ತಮ ಆತಿಥ್ಯದೊಂದಿಗೆ ಸಹಕರಿಸಿದ ಫ್ರೆಂಚ್‌ ಸರ್ಕಾರ ಮತ್ತು ವಾಟ್ರಿ ವಿಮಾನ ನಿಲ್ದಾಣಕ್ಕೆ ಧನ್ಯವಾದಗಳು. ರಾಯಭಾರ ತಂಡದೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದಕ್ಕಾಗಿ, ಪ್ರಯಾಣಿಕರ ಯೋಗಕ್ಷೇಮ ನೋಡಿಕೊಂಡಿದ್ದಕ್ಕಾಗಿ ಕೃತಜ್ಞತೆಗಳು ಎಂದು ಫ್ರಾನ್ಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದೆ.

    ಮಾನವ ಕಳ್ಳಸಾಗಣೆ ಶಂಕೆಯಲ್ಲಿ ನಿಕರಾಗುವಾಗೆ ತೆರಳುತ್ತಿದ್ದ ವಿಮಾನವನ್ನು ಫ್ರಾನ್ಸ್‌ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ನಂತರ ವಿಮಾನ ಪ್ರಯಾಣವನ್ನು ಪುನರಾರಂಭಿಸಲು ಅನುಮತಿ ನೀಡಿದ್ದರು.

  • ಬಿಟ್‌ಕಾಯಿನ್‌ ರೂಪದಲ್ಲಿ 8 ಕೋಟಿ ಕೊಡದಿದ್ರೆ ಮುಂಬೈ ಏರ್ಪೋರ್ಟ್‌ ಬ್ಲಾಸ್ಟ್‌ – ಬೆದರಿಕೆ

    ಬಿಟ್‌ಕಾಯಿನ್‌ ರೂಪದಲ್ಲಿ 8 ಕೋಟಿ ಕೊಡದಿದ್ರೆ ಮುಂಬೈ ಏರ್ಪೋರ್ಟ್‌ ಬ್ಲಾಸ್ಟ್‌ – ಬೆದರಿಕೆ

    ಮುಂಬೈ: ಬಿಟ್‌ಕಾಯಿನ್‌ (ಕ್ರಿಪ್ಟೋಕರೆನ್ಸಿ) (Bitcoin) ರೂಪದಲ್ಲಿ 10 ಲಕ್ಷ ಡಾಲರ್‌ (8.33 ಕೋಟಿ ರೂ.) ಪಾವತಿಸದಿದ್ದರೇ ಮುಂಬೈ ವಿಮಾನ ನಿಲ್ದಾಣದ ಟರ್ಮಿನಲ್‌ 2 ಅನ್ನು ಸ್ಫೋಟಿಸುವುದಾಗಿ ಮುಂಬೈ ಪೊಲೀಸರಿಗೆ ಇಮೇಲ್ ಬೆದರಿಕೆ ನೀಡಲಾಗಿದೆ.

    ಇ-ಮೇಲ್‌ ಬೆದರಿಕೆ ಕಳುಹಿಸಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಮುಂಬೈ ಪೊಲೀಸರು (Mumbai Police) ಪ್ರಕರಣ ದಾಖಲಿಸಿದ್ದಾರೆ. ಗುರುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಮುಂಬೈ ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್‌ಗೆ (MIAL) ID–quaidacasrol@gmail.com-ನಿಂದ ಬೆದರಿಕೆ ಇಮೇಲ್ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ವಿರುದ್ಧ ಹೇಳಿಕೆ- ಕೇಂದ್ರ ಚುನಾವಣಾ ಆಯೋಗದಿಂದ ರಾಹುಲ್ ಗಾಂಧಿಗೆ ನೋಟಿಸ್

    ನಿಮ್ಮ ವಿಮಾನ ನಿಲ್ದಾಣಕ್ಕೆ ಇದು ಕೊನೆಯ ಎಚ್ಚರಿಕೆಯಾಗಿದೆ. 10 ಲಕ್ಷ ಡಾಲರ್‌ (Million Dollars) ಅನ್ನು ಬಿಟ್‌ಕಾಯಿನ್‌ ರೂಪದಲ್ಲಿ ಪಾವತಿಸದೇ ಇದ್ದರೇ 48 ಗಂಟೆಗಳ ಒಳಗೆ ವಿಮಾನ ನಿಲ್ದಾಣದ ಟರ್ಮಿನಲ್ 2 (Mumbai Airport Terminal 2 )ಅನ್ನು ಬಾಂಬ್‌ ಹಾಕಿ ಉಡಾಯಿಸುತ್ತೇವೆ. 24 ಗಂಟೆಗಳ ನಂತರ ಮತ್ತೊಂದು ಎಚ್ಚರಿಕೆ ನೀಡಲಾಗುವುದು ಎಂದು ಇಮೇಲ್‌ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಅಮೆರಿಕದಲ್ಲಿ ಭಾರತದ ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ

    ಬೆದರಿಕೆಯ ಇಮೇಲ್‌ ಬರುತ್ತಿದ್ದಂತೆ ಮುಂಬೈ ಪೊಲೀಸರು (Mumbai Police) ಫುಲ್‌ ಅಲರ್ಟ್‌ ಆಗಿದ್ದಾರೆ. ಇಮೇಲ್‌ ಕಳುಹಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಸೂಕ್ಷ್ಮವಾಗಿ ತನಿಖೆಯನ್ನು ಮುಂದುವರಿಸಿದ್ದಾರೆ.

    \

    ಈ ಹಿಂದೆ ಸೆಪ್ಟೆಂಬರ್‌ 5 ರಂದು ಮುಂಬೈ ಪೊಲೀಸ್‌ ಕಂಟ್ರೋಲ್‌ ರೂಮ್‌ಗೆ ಬೆದರಿಕೆ ಕರೆ ಬಂದಿತ್ತು. ಈ ಸಂಬಂಧ ಕಾಮತಿಪುರದಲ್ಲಿ ವ್ಯಕ್ತಿಯೊಬ್ಬನನ್ನ ಬಂಧಿಸಲಾಗಿತ್ತು. ಇದನ್ನೂ ಓದಿ: ನೌಕಾಪಡೆ 8 ಮಾಜಿ ಸಿಬ್ಬಂದಿಯ ಮರಣದಂಡನೆಗೆ ವಿರೋಧ – ಭಾರತದ ಮನವಿ ಸ್ವೀಕರಿಸಿದ ಕತಾರ್

  • ಮುಂಬೈ ವಿಮಾನ ನಿಲ್ದಾಣದಲ್ಲಿ ಖಾಸಗಿ ಜೆಟ್ ಪತನ

    ಮುಂಬೈ ವಿಮಾನ ನಿಲ್ದಾಣದಲ್ಲಿ ಖಾಸಗಿ ಜೆಟ್ ಪತನ

    ಮುಂಬೈ: ಮುಂಬೈ ವಿಮಾನ ನಿಲ್ದಾಣದಲ್ಲಿ (Mumbai Airport) ಗುರುವಾರ ಭಾರೀ ಮಳೆಯ ನಡುವೆ ಖಾಸಗಿ ವಿಮಾನವೊಂದು (Private Jet Crash) ಲ್ಯಾಂಡ್ ಆಗಲು ಯತ್ನಿಸುತ್ತಿದ್ದಾಗ ಪತನಗೊಂಡಿದೆ.

    ವಿಮಾನದಲ್ಲಿ ಆರು ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿ ಸೇರಿ 8 ಮಂದಿ ಇದ್ದರು. ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತುರ್ತು ಸೇವೆಗಳು ತಿಳಿಸಿವೆ. ಅವರಿಗೆ ಯಾವ ಪ್ರಮಾಣದಲ್ಲಿ ಗಾಯಗಳಾಗಿವೆ ಎಂಬ ಬಗ್ಗೆ ತಿಳಿದಿಲ್ಲ. ಯಾವುದೇ ಪ್ರಾಣಹಾನಿಯಾಗಿಲ್ಲ. ಇದನ್ನೂ ಓದಿ: ದೆಹಲಿಯಲ್ಲಿ ಶಿವಮೊಗ್ಗ ಮೂಲದ ಐಸಿಸ್ ಉಗ್ರನ ಬಂಧನ

    ಅವಘಡದಿಂದ ರನ್‌ವೇಯಲ್ಲಿ ಉಂಟಾಗಿದ್ದ ಅವಶೇಷಗಳನ್ನು ತೆರವುಗೊಳಿಸಲಾಗಿದೆ. ಕಾರ್ಯಾಚರಣೆ ಪುನರಾರಂಭಿಸಲಾಗಿದೆ. ಮಳೆಯಿಂದಾಗಿ ಜಾರುವಂತಾಗಿದ್ದ ರನ್‌ವೇ 27ರ ಬಳಿ ಈ ಘಟನೆ ನಡೆದಿದೆ. ವಿಮಾನವು ನೆಲಕ್ಕೆ ಅಪ್ಪಳಿಸುತ್ತಿರುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಖಾಸಗಿ ಜೆಟ್‌ ಪತನಗೊಂಡ ವೇಳೆ ರನ್‌ವೇಯನ್ನು ಕೆಲವು ನಿಮಿಷಗಳ ಕಾಲ ಮುಚ್ಚಲಾಯಿತು. ಈ ಸಮಯದಲ್ಲಿ ಡೆಹ್ರಾಡೂನ್‌ನಿಂದ ಬರುತ್ತಿದ್ದ ವಿಮಾನ – UK865 ಅನ್ನು ಗೋವಾದ ಮೋಪಾ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು ಎಂದು ವಿಸ್ತಾರಾ ಏರ್‌ಲೈನ್ಸ್ ತಿಳಿಸಿದೆ. ಇದನ್ನೂ ಓದಿ: ಪಾಕ್‌ ಜೊತೆ ಭಾರತೀಯ ಸೇನೆಯ ಮಾಹಿತಿ ಹಂಚಿಕೊಳ್ಳುತ್ತಿದ್ದ ಯೋಧ ಅರೆಸ್ಟ್‌

    ವಿಮಾನವು ಲಿಯರ್‌ಜೆಟ್ 45 ಆಗಿದೆ. ಕೆನಡಾ ಮೂಲದ ಬೊಂಬಾರ್ಡಿಯರ್ ಏವಿಯೇಷನ್‌ನ ವಿಭಾಗವು ತಯಾರಿಸಿದ ಒಂಬತ್ತು ಆಸನಗಳ ಸೂಪರ್-ಲೈಟ್ ಬಿಸಿನೆಸ್ ಜೆಟ್ ಇದಾಗಿದೆ. ಇದು ಬೆಂಗಳೂರು ಮೂಲದ ವಿಎಸ್‌ಆರ್ ವೆಂಚರ್ಸ್‌ಗೆ ನೋಂದಾಯಿಸಲ್ಪಟ್ಟಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಮಾಹಿತಿ ನೀಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲಗೇಜ್‍ಗೆ ಹೆಚ್ಚುವರಿ ಹಣ ಪಾವತಿಸಿ ಎಂದಿದ್ದಕ್ಕೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಅಂತ ಏರ್‌ಪೋರ್ಟ್‌ನಲ್ಲಿ ಮಹಿಳೆ ಡ್ರಾಮಾ

    ಲಗೇಜ್‍ಗೆ ಹೆಚ್ಚುವರಿ ಹಣ ಪಾವತಿಸಿ ಎಂದಿದ್ದಕ್ಕೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಅಂತ ಏರ್‌ಪೋರ್ಟ್‌ನಲ್ಲಿ ಮಹಿಳೆ ಡ್ರಾಮಾ

    ಮುಂಬೈ: ಹೆಚ್ಚುವರಿ ಲಗೇಜ್‍ಗೆ ಹಣ ಪಾವತಿಸುವಂತೆ ಕೇಳಿದ್ದಕ್ಕೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಅಂತ ಮಹಿಳೆಯೊಬ್ಬಳು ಹೈಡ್ರಾಮಾ ಮಾಡಿದ ಘಟನೆ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  (Mumbai Airport) ನಡೆದಿದೆ.

    ಹೆಚ್ಚುವರಿ ಲಗೇಜ್ ತಂದಿದ್ದ ಮಹಿಳೆಗೆ ಏರ್‌ಪೋರ್ಟ್ ಸಿಬ್ಬಂದಿ ಹಣ ನೀಡುವಂತೆ ಸೂಚಿಸಿದ್ದಾರೆ. ಈ ವೇಳೆ ಜಗಳಕ್ಕಿಳಿದ ಮಹಿಳೆಯೊಬ್ಬಳು ತನ್ನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದು ಬೆದರಿಸಿದ್ದಾಳೆ. ಕೂಡಲೆ ಸ್ಥಳಕ್ಕೆ ಬಂದ ಭದ್ರತಾ ಸಿಬ್ಬಂದಿ ಮತ್ತು ಬಾಂಬ್ ನಿಷ್ಕ್ರಿಯ ದಳ ಬ್ಯಾಗ್‍ಗಳನ್ನು ಪರಿಶೀಲಿಸಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ. ಇದರಿಂದ ವಿಮಾನ ನಿಲ್ದಾಣದಲ್ಲಿ ಕೆಲವು ಗಂಟೆಗಳ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಇದನ್ನೂ ಓದಿ: ಬೇಕಂತಲೇ ಹೆಣ್ಮಕ್ಕಳ ಮೈ ಮುಟ್ಟುತ್ತಿದ್ದ, ಹಿಂಬಾಲಿಸುತ್ತಿದ್ದ – ಬ್ರಿಜ್‌ ಭೂಷಣ್‌ ವಿರುದ್ಧ 10 ಕಂಪ್ಲೇಂಟ್‌, 2 FIR

    ಮಹಿಳೆಯ ವಿರುದ್ಧ ಜೀವ ಮತ್ತು ಇತರರ ಸುರಕ್ಷತೆಗೆ ಧಕ್ಕೆ ಆರೋಪದ ಮೇಲೆ ಎಫ್‍ಐಆರ್ (FIR) ದಾಖಲಿಸಲಾಗಿದೆ. ಕೋರ್ಟ್ ಮುಂದೆ ಹಾಜರುಪಡಿಸಿ ಮಹಿಳೆಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಸಹರ್ ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಗುರುತನ್ನು ಪೊಲೀಸರು ಬಿಡುಗಡೆ ಮಾಡಿಲ್ಲ.

    ಘಟನೆ ಹಿನ್ನೆಲೆ: ಮಹಿಳೆಯು ತನ್ನ ತಾಯಿಯನ್ನು ಭೇಟಿಯಾಗಲು ಮೇ 29 ರಂದು ಕೊಲ್ಕತ್ತಾಕ್ಕೆ (Kolkata) ಹೊರಟಿದ್ದಳು. 5:30 ರ ವೇಳೆ ಚೆಕ್ ಇನ್ ಆಗಲು ಚೆಕ್ ಇನ್ ಕೌಂಟರ್ ತಲುಪಿದ್ದಳು. ವಿಮಾನಯಾನ ನಿಯಮಗಳು ದೇಶೀಯ ಪ್ರಯಾಣಕ್ಕಾಗಿ ಗರಿಷ್ಠ 15 ಕೆಜಿಯ ಒಂದೇ ಬ್ಯಾಗ್ ಅನುಮತಿಸುತ್ತದೆ. ಆದರೆ ಮಹಿಳೆ ಎರಡು ಬ್ಯಾಗ್‍ಗಳನ್ನು ಹೊಂದಿದ್ದಳು ಮತ್ತು ಅದರ ತೂಕ 22.05 ಕೆಜಿ ಇತ್ತು.

    ಲಗೇಜ್ ತೂಕ ಹೆಚ್ಚಿದ್ದ ಹಿನ್ನಲೆ ಹಚ್ಚುವರಿ ಬ್ಯಾಗ್‍ಗೆ ಹಣ ಪಾವತಿಸುವಂತೆ ಕೌಂಟರ್‌ನಲ್ಲಿದ್ದ ಸಿಬ್ಬಂದಿ ಮನವಿ ಮಾಡಿದ್ದಾರೆ. ಇದಕ್ಕೆ ನಿರಾಕರಿಸಿದ ಮಹಿಳೆ ಸಿಬ್ಬಂದಿ ಜೊತೆಗೆ ಜಗಳಕ್ಕಿಳಿದು ಕೂಗಾಡಲು ಆರಂಭಿಸಿದ್ದಾಳೆ ಕಡೆಗೆ ತನ್ನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದು ಕೂಗಿ ಹೇಳಿದ್ದಾಳೆ. ಮಹಿಳೆಯ ವರ್ತನೆಯಿಂದ ಆತಂಕಕ್ಕೆ ಒಳಗಾದ ಸಿಬ್ಬಂದಿ ಭದ್ರತಾ ಪಡೆಗಳ ನೆರವು ಪಡೆದಿದ್ದಾರೆ. ಇದನ್ನೂ ಓದಿ: ಮುಂಬೈ ದಾಳಿ ರೂವಾರಿ ರಾಣಾ ಹಸ್ತಾಂತರಕ್ಕೆ ರಿಟ್ ಸವಾಲು