Tag: Mumbai Indians

  • Divorce Rumours: ಪತ್ನಿ ನತಾಶಾಗೆ ವಿಚ್ಛೇದನ ನೀಡಿದ್ರೆ 70% ಕರಗಲಿದೆ ಪಾಂಡ್ಯ ಸಂಪತ್ತು!

    Divorce Rumours: ಪತ್ನಿ ನತಾಶಾಗೆ ವಿಚ್ಛೇದನ ನೀಡಿದ್ರೆ 70% ಕರಗಲಿದೆ ಪಾಂಡ್ಯ ಸಂಪತ್ತು!

    ಮುಂಬೈ: 2024ರ ಐಪಿಎಲ್‌ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ನಾಯಕ ಹಾರ್ದಿಕ್‌ ಪಾಂಡ್ಯ (Hardik Pandya) ಅವರು ಇಡೀ ತಂಡದ ಕಳಪೆ ಪ್ರದರ್ಶನದಿಂದ ಸೋಲಿನೊಂದಿಗೆ ಆವೃತ್ತಿಗೆ ವಿದಾಯ ಹೇಳಿದ್ದರು. ಇದೀಗ ವೈಯಕ್ತಿಕ ಜೀವನದಲ್ಲಿ ಬಿರುಗಾಳಿಯೇ ಎದ್ದಿದೆ. ಹಾರ್ದಿಕ್‌ ಪಾಂಡ್ಯ ತಮ್ಮ ಪತ್ನಿ ನತಾಶಾ ಸ್ಟಾಂಕೋವಿಕ್‌ಗೆ ವಿಚ್ಛೇದನ ನೀಡುವುದು ಬಹುತೇಕ ಖಚಿತವಾಗಿದೆ. ಅಧಿಕೃತ ಘೊಷಣೆಯೊಂದೇ ಬಾಕಿಯಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಹಾರ್ದಿಕ್‌ ಪಾಂಡ್ಯ ಅವರು ಪತ್ನಿಗೆ ವಿಚ್ಛೇದನ (Divorce) ನೀಡಿದ್ದೇ ಆದಲ್ಲಿ ಅವರ 70% ಆಸ್ತಿ ಪತ್ನಿ ನತಾಶಾಗೆ ಸೇರಲಿದೆ ಎಂದು ವರದಿಯಾಗಿದೆ.

    ಪಾಂಡ್ಯ ಮತ್ತು ನತಾಶಾ ದೀರ್ಘಕಾಲದಿಂದ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲ. ಇಬ್ಬರೂ ಕೊನೆಯದ್ದಾಗಿ ಫೆ.14ರಂದು ಇನ್‌ಸ್ಟಾದಲ್ಲಿ ಫೋಟೋವೊಂದನ್ನ ಹಂಚಿಕೊಂಡಿದ್ದರು. ಇದಾದ ನಂತರ ಇಬ್ಬರೂ ಅಂತರ ಕಾಯ್ದುಕೊಂಡಿದ್ದರು. ಕಳೆದ ಮಾರ್ಚ್‌ 4 ರಂದು ನತಾಶಾ ಅವರ ಹುಟ್ಟುಹಬ್ಬದ ದಿನವೂ ಪಾಂಡ್ಯ ಒಂದು ಸ್ಟೇಟಸ್‌ ಸಹ ಹಂಚಿಕೊಂಡಿರಲಿಲ್ಲ. ಜೊತೆಗೆ ಪಾಂಡ್ಯ ಅವರ ನಾಯಕತ್ವದಲ್ಲಿ ನಡೆದ ಯಾವುದೇ ಪಂದ್ಯ ನೋಡುವುದಕ್ಕೂ ನತಾಶಾ (Natasa Stankovic) ಸ್ಟೇಡಿಯಂಗಳಿಗೆ ಬರಲಿಲ್ಲ. ಸರ್ಬಿಯಾದ ಮಾಡೆಲ್‌ ಸಹ ಆಗಿದ್ದ ಸ್ಟಾಂಕೋವಿಕ್‌ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ʻಪಾಂಡ್ಯʼ ಉಮನಾಮ ತೆಗೆದುಹಾಕಿ ನತಾಶಾ ಸ್ಟಾಂಕೋವಿಕ್ ಎಂದು ಬದಲಾಯಿಸಿಕೊಂಡಿದ್ದಾರೆ. ಹೀಗಾಗಿ ಇವರಿಬ್ಬರ ವಿಚ್ಛೇದನ ಖಚಿತವಾಗಿದೆ ಎಂಬ ವದಂತಿಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ.

    70% ಆಸ್ತಿ ನತಾಶಾ ಪಾಲು:
    ವದಂತಿಗಳ ಪ್ರಕಾರ ಪಾಂಡ್ಯ ಅವರು ಪತ್ನಿಯಿಂದ ವಿಚ್ಛೇದನ ಪಡೆದರೆ ಜೀವನಾಂಶ ಕಾರಣದಿಂದ 70% ಆಸ್ತಿಯನ್ನು ನತಾಶಾಗೆ ನೀಡಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಹಾರ್ದಿಕ್‌ ಪಾಂಡ್ಯ ಒಟ್ಟಾರೆ 165 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ಮುಂಬೈನಲ್ಲಿ 30 ಕೋಟಿ ರೂ.ಗೆ ಅಪಾರ್ಟ್‌ಮೆಂಟ್ ಖರೀದಿಸಿದ್ದಾರೆ. ಇದರೊಂದಿಗೆ ಅವರು ವಡೋದರಾದಲ್ಲಿ ದುಬಾರಿ ಬೆಲೆಯ ವಿಲ್ಲಾ ಹೊಂದಿದ್ದಾರೆ. ವಿಚ್ಛೇದನ ಪಡೆದರೆ ಅವರು 70% ಆಸ್ತಿಯನ್ನು (70% Property) ಪತ್ನಿಗೆ ಬಿಟ್ಟುಕೊಡಬೇಕಾಗುತ್ತದೆ ಎಂದು ಹೇಳಲಾಗಿದೆ. ಆದ್ರೆ ಈ ಬಗ್ಗೆ ಹಾರ್ದಿಕ್ ಅಥವಾ ಅವರ ಪತ್ನಿ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.

    ಸೋಷಿಯಲ್‌ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ:
    ಹಾರ್ದಿಕ್‌ ಪಾಂಡ್ಯ ಅವರ ವಿಚ್ಛೇದಿತ ವಿಷಯ ಬೆಳಕಿಗೆ ಬರುತ್ತಿದ್ದಂತೆ ಎಕ್ಸ್‌ ಜಾಲತಾಣದಲ್ಲಿ ಪರ ವಿರೋಧಗಳು ಚರ್ಚೆಯಾಗುತ್ತಿವೆ. ಕೆಲವರು ಹಾರ್ದಿಕ್‌ ಪಾಂಡ್ಯ ಪರ ಬ್ಯಾಟ್‌ ಬೀಸಿದ್ದು, ಪುರುಷರಿಗಾಗಿ ನಮ್ಮ ಸಮಾಜದ ನಿಯಮಗಳು ಯಾವಾಗಲೂ ಕಠಿಣವಾಗಿರುತ್ತವೆ ಎಂದು ಹೇಳಿದ್ದಾರೆ. ಮತ್ತೊಬ್ಬರು ʻಹಾರ್ದಿಕ್‌ ಬ್ರೋ ನೀವು ಈಗಲೇ ಎಲ್ಲಾ ಆಸ್ತಿಯನ್ನು ನಿಮ್ಮ ತಾಯಿ ಹೆಸರಿಗೆ ವರ್ಗಾವಣೆ ಮಾಡಿಬಿಡಿʼ ಎಂಬ ಸಲಹೆಯನ್ನೂ ನೀಡಿದ್ದಾರೆ.

    ಹಾರ್ದಿಕ್ ಪಾಂಡ್ಯ ಅವರು 2020ರ ಜನವರಿ 20 ರಂದು ತಮ್ಮ ವಿಹಾರ ನೌಕೆಯಲ್ಲಿ ನತಾಶಾಗೆ ಪ್ರಪೋಸ್‌ ಮಾಡಿದ್ದರು. ಮೊದಲ ಮಗುವಿನ ನಂತರ ಪ್ರೇಮಿಗಳ ದಿನದಂದು ಉದಯಪುರದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

  • ಖಾಸಗಿ ಸಂಭಾಷಣೆ ಪ್ರಸಾರ ಮಾಡಿದ್ದಕ್ಕೆ ಐಪಿಎಲ್ ಪ್ರಸಾರಕರಿಗೆ ರೋಹಿತ್ ಶರ್ಮಾ ತರಾಟೆ

    ಖಾಸಗಿ ಸಂಭಾಷಣೆ ಪ್ರಸಾರ ಮಾಡಿದ್ದಕ್ಕೆ ಐಪಿಎಲ್ ಪ್ರಸಾರಕರಿಗೆ ರೋಹಿತ್ ಶರ್ಮಾ ತರಾಟೆ

    ಮುಂಬೈ: ಮುಂಬೈ ತಂಡದ ಮಾಜಿ ನಾಯಕ ರೋಹಿತ್‌ ಶರ್ಮಾ (Rohit Sharma) ಅವರು ಐಪಿಎಲ್‌ ಬ್ರಾಡ್‌ಕಾಸ್ಟರ್‌ ಸ್ಟಾರ್‌ ಸ್ಪೋರ್ಟ್ಸ್‌ (Star Sports) ವಿರುದ್ಧ ಕಿಡಿಕಾರಿದ್ದಾರೆ. ಖಾಸಗಿ ಸಂಭಾಷಣೆ ಪ್ರಸಾರ ಮಾಡಿ ಗೌಪ್ಯತೆ ಉಲ್ಲಂಘಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ.

    ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ರೋಹಿತ್‌ ಶರ್ಮಾ, ಕ್ರಿಕೆಟಿಗರ ಜೀವನವು ಎಷ್ಟು ಕಷ್ಟಕರವಾಗಿದೆಯೆಂದರೆ, ಈಗ ನಾವು ನಮ್ಮ ಸ್ನೇಹಿತರು ಮತ್ತು ಸಹೋದ್ಯೋಗಿಗಳೊಂದಿಗೆ, ತರಬೇತಿ ಅಥವಾ ಪಂದ್ಯದ ದಿನಗಳಲ್ಲಿ ಗೌಪ್ಯವಾಗಿ ನಡೆಸುವ ಪ್ರತಿಯೊಂದು ಸಂಭಾಷಣೆಯನ್ನು ಕ್ಯಾಮೆರಾಗಳು ರೆಕಾರ್ಡ್ ಮಾಡುತ್ತಿವೆ ಎಂದು ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: ಗ್ರೌಂಡ್‌ ಹೊರಗೂ ದಾಖಲೆ ಬರೆದ ನಾಕೌಟ್‌ ಕದನ – ಆರ್‌ಸಿಬಿಗೆ ಮುಂದಿರುವ ಕಠಿಣ ಸವಾಲುಗಳೇನು?

    ನನ್ನ ಸಂಭಾಷಣೆಯನ್ನು ರೆಕಾರ್ಡ್ ಮಾಡಬೇಡಿ ಎಂದು ಸ್ಟಾರ್ ಸ್ಪೋರ್ಟ್ಸ್‌ಗೆ ಕೇಳಿಕೊಂಡರೂ, ಅದನ್ನು ಪ್ರಸಾರದಲ್ಲಿ ಪ್ಲೇ ಮಾಡಲಾಗಿತ್ತು. ಅದು ಗೌಪ್ಯತೆಯ ಉಲ್ಲಂಘನೆಯಾಗಿದೆ. ಎಕ್ಸ್‌ಕ್ಲೂಸಿವ್‌ ಕಂಟೆಂಡ್‌ ಹಾಗೂ ಚಾನೆಲ್‌ನ್ನು ಎಂಗೇಜ್‌ ಆಗಿ ಇಡುವುದು ಮತ್ತು ವೀವ್ಸ್‌ಗೆ ಗಮನ ಕೇಂದ್ರೀಕರಿಸುವುದು ಒಂದು ದಿನ ಅಭಿಮಾನಿಗಳು, ಕ್ರಿಕೆಟಿಗರು ಮತ್ತು ಕ್ರಿಕೆಟ್ ನಡುವಿನ ನಂಬಿಕೆಯನ್ನು ಮುರಿಯುತ್ತದೆ ಎಂದು ಹೇಳಿದ್ದಾರೆ.

    ರೋಹಿತ್‌ ಶರ್ಮಾ ಈಚೆಗ ಕೆಕೆಆರ್‌ ತಂಡದ ಸದಸ್ಯರೊಂದಿಗೆ ಸಂವಾದ ನಡೆಸುವಾಗ ಹಿಂದೆ ಬಂದ ಕ್ಯಾಮೆರಾಮನ್‌ ತನ್ನನ್ನು ಸೆರೆಹಿಡಿಯುತ್ತಿರುವುದನ್ನು ಕಂಡು ದೂರದಿಂದಲೇ ಕೈಮುಗಿದ ಹಿಟ್‌ ಮ್ಯಾನ್‌, ದಯವಿಟ್ಟು ಮೈಕ್‌ ಆಫ್‌ ಮಾಡಿ ಎಂದು ಮನವಿ ಮಾಡಿದ್ದರು. ಆದರೂ ವೀಡಿಯೋ ಸೋ಼ಷಿಯಲ್‌ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇದರಿಂದ ಬೇಸರಗೊಂಡಿರುವ ರೋಹಿತ್‌ ಟ್ವೀಟ್‌ ಮಾಡಿ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: Photos Gallery: ಸಂಭ್ರಮದಲ್ಲಿ ಮಿಂದೆದ್ದ ಆರ್‌ಸಿಬಿ – ಭಾವುಕ ಕ್ಷಣಗಳು ಕ್ಯಾಮೆರಾ ಕಣ್ಣಿಗೆ ಸೆರೆ!

  • ಕೊನೆಯ ಪಂದ್ಯ ಗೆದ್ದರೂ ಲಕ್ನೋಗಿಲ್ಲ ಪ್ಲೇಆಫ್‌ ಅವಕಾಶ

    ಕೊನೆಯ ಪಂದ್ಯ ಗೆದ್ದರೂ ಲಕ್ನೋಗಿಲ್ಲ ಪ್ಲೇಆಫ್‌ ಅವಕಾಶ

    ಮುಂಬೈ: ವಾಂಖೇಡೆ ಮೈದಾನದಲ್ಲಿ ಶುಕ್ರವಾರ ನಡೆದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ (Mumbai Indians) ವಿರುದ್ಧ ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants) 18 ರನ್‌ಗಳ ಜಯ ಸಾಧಿಸಿದೆ. ಈ ಪಂದ್ಯವನ್ನು ಗೆದ್ದರೂ ನೆಟ್‌ ರನ್‌ ರೆಟ್‌ (Net Run Rate) ಕಡಿಮೆ ಇರುವ ಕಾರಣ ಲಕ್ನೋಗೆ ಪ್ಲೇಆಫ್‌ ಪ್ರವೇಶಿಸುವ ಅವಕಾಶ ತಪ್ಪಿದೆ.

    ಮೊದಲು ಬ್ಯಾಟ್‌ ಮಾಡಿದ ಲಕ್ನೋ 6 ವಿಕೆಟ್‌ ನಷ್ಟಕ್ಕೆ 214 ರನ್‌ ಗಳಿಸಿತು. ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಮುಂಬೈ 6 ವಿಕೆಟ್‌ ನಷ್ಟಕ್ಕೆ 196 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

     

     

    ಮುಂಬೈ ಪರ ರೋಹಿತ್‌ ಶರ್ಮಾ 68 ರನ್‌ (38 ಎಸೆತ, 10 ಬೌಂಡರಿ, 3 ಸಿಕ್ಸರ್‌) ಕೊನೆಯಲ್ಲಿ ನಮನ್‌ ಧಿರ್‌ ಔಟಾಗದೇ 62 ರನ್‌(28 ಎಸೆತ, 4 ಬೌಂಡರಿ, 5 ಸಿಕ್ಸರ್‌) ಹೊಡೆದರು.

    ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್‌ 6 ವಿಕೆಟ್‌ ನಷ್ಟಕ್ಕೆ 214 ರನ್‌ ಗಳಿಸಿತ್ತು. ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಗಿದ್ದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡಕ್ಕೆ ನಿಕೋಲಸ್‌ ಪೂರನ್‌ ಹಾಗೂ ಕೆ.ಎಲ್‌ ರಾಹುಲ್‌ ಬ್ಯಾಟಿಂಗ್‌ ಬಲ ತುಂಬಿದರು.

     

     

     

    ನಿಕೋಲಸ್‌ ಪೂರನ್‌ ಕೇವಲ 29 ಎಸೆತಗಳಲ್ಲಿ 75 ರನ್‌ (8 ಸಿಕ್ಸರ್‌, 5 ಬೌಂಡರಿ) ಚಚ್ಚಿದರು. ಇದರೊಂದಿಗೆ ಸುಧಾರಿತ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಕೆ.ಎಲ್‌ ರಾಹುಲ್‌ 41 ಎಸೆತಗಳಲ್ಲಿ 55 ರನ್‌ (3 ಸಿಕ್ಸರ್‌, 3 ಬೌಂಡರಿ) ಬಾರಿಸಿದರು. 4ನೇ ವಿಕೆಟ್‌ಗೆ ಸ್ಫೋಟಕ ಪ್ರದರ್ಶನ ನೀಡಿದ ಈ ಜೋಡಿ 44 ಎಸೆತಗಳಲ್ಲಿ ಬರೋಬ್ಬರಿ 109 ರನ್‌ಗಳ ಜೊತೆಯಾಟ ನೀಡಿತ್ತು.

    ಇದರೊಂದಿಗೆ ಮಾರ್ಕಸ್‌ ಸ್ಟೋಯ್ನಿಸ್‌ 28 ರನ್‌, ದೀಪಕ್‌ ಹೂಡ 11 ರನ್‌, ಆಯುಷ್‌ ಬದೋನಿ 22 ರನ್‌ ಹಾಗೂ ಕೃನಾಲ್‌ ಪಾಂಡ್ಯ 12 ರನ್‌ಗಳ ಕೊಡುಗೆ ನೀಡಿದ ಪರಿಣಾಮ ಲಕ್ನೋ ತಂಡ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

     

     

     

    ಲಕ್ನೀ ಸೂಪರ್‌ ಜೈಂಟ್ಸ್‌ ಪರ ಮಾರಕ ಬೌಲಿಂಗ್‌ ದಾಳಿ ನಡೆಸಿದ ನುವಾನ್ ತುಷಾರ ಹಾಗೂ ಪಿಯೂಷ್‌ ಚಾವ್ಲಾ ತಲಾ 3 ವಿಕೆಟ್‌ ಕಿತ್ತರು. ಚೆನ್ನೈ ತಂಡ 14 ಅಂಕ ಗಳಿಸಿದ್ದರೆ ಆರ್‌ಸಿಬಿ 12 ಅಂಕ ಗಳಿಸಿದೆ. ಹೀಗಿದ್ದರೂ ಈ ಎರಡು ತಂಡಗಳ ರನ್‌ ರೇಟ್‌ ಲಕ್ನೋ ಮತ್ತು ಡೆಲ್ಲಿ ತಂಡಕ್ಕಿಂತ ಉತ್ತಮವಾಗಿದೆ.

    ಪ್ಲೇ ಆಫ್‌ ಅವಕಾಶ ಯಾಕಿಲ್ಲ?
    ಈಗಾಗಲೇ ಕೋಲ್ಕತ್ತಾ 19 ಅಂಕ, ರಾಜಸ್ಥಾನ 16, ಹೈದರಾಬಾದ್‌ 15 ಅಂಕ ಗಳಿಸಿ ಈಗಾಗಲೇ ಪ್ಲೇ ಆಫ್‌ ಪ್ರವೇಶಿಸಿದೆ. ಶನಿವಾರ ಬೆಂಗಳೂರಿನಲ್ಲಿ ನಡೆಯುವ ಪಂದ್ಯದಲ್ಲಿ ಚೆನ್ನೈ (Chennai) ಗೆದ್ದರೆ ಸುಲಭವಾಗಿ ಪ್ಲೇ ಆಫ್‌ ಪ್ರವೇಶಿಸಲಿದೆ. ಆರ್‌ಸಿಬಿಗೂ (RCB) ಪ್ಲೇ ಆಫ್‌ಗೆ ಹೋಗುವ ಅವಕಾಶವಿದೆ. ಆರ್‌ಸಿಬಿ 18 ರನ್‌ನಿಂದ ಗೆಲ್ಲಬೇಕು ಅಥವಾ 11 ಎಸೆತ ಬಾಕಿ ಇರುವಂತೆ ಗೆದ್ದರೆ ಮಾತ್ರ ಪ್ಲೇ ಆಫ್‌ ಪ್ರವೇಶಿಸಲಿದೆ.

     

  • ಪ್ಲೇ-ಆಫ್‌ಗೆ ಎಂಟ್ರಿ ಕೊಟ್ಟ ಕೆಕೆಆರ್‌

    ಪ್ಲೇ-ಆಫ್‌ಗೆ ಎಂಟ್ರಿ ಕೊಟ್ಟ ಕೆಕೆಆರ್‌

    ಕೋಲ್ಕತ್ತಾ: ಎರಡು ಬಾರಿ ಚಾಂಪಿಯನ್‌ ಆಗಿರುವ ಕೋಲ್ಕತ್ತಾ ನೈಟ್‌ ರೈಡರ್ಸ್‌ 17ನೇ ಆವೃತ್ತಿಯ ಐಪಿಎಲ್‌ನಲ್ಲಿ ಅಧಿಕೃತವಾಗಿ ಪ್ಲೇ-ಆಫ್‌ಗೆ ಎಂಟ್ರಿ ಕೊಟ್ಟಿದೆ. ತವರಿನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಮುಂಬೈ ವಿರುದ್ಧ ಕೆಕೆಆರ್ 18 ರನ್‌ಗಳ ಜಯ ಸಾಧಿಸಿದೆ. 9 ಪಂದ್ಯಗಳ ಗೆಲುವಿನೊಂದಿಗೆ ಪಾಯಿಂಟ್‌ ಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿದೆ.

    ಮಳೆ ಪರಿಣಾಮವಾಗಿ ಮ್ಯಾಚ್‌ ತಡವಾಗಿ ಆರಂಭವಾಯಿತು. ಪಂದ್ಯಕ್ಕೂ ಮುನ್ನ ಮಳೆ ಬಂದ ಕಾರಣ ಇನ್ನಿಂಗ್ಸ್‌ ಅನ್ನು 16 ಓವರ್‌ಗಳಿಗೆ ನಿಗದಿಪಡಿಸಲಾಯಿತು. ಟಾಸ್‌ ಗೆದ್ದ ಮುಂಬೈ ಮೊದಲು ಬೌಲಿಂಗ್‌ ಆಯ್ದುಕೊಂಡಿತು.

    ಮೊದಲು ಬ್ಯಾಟ್‌ ಮಾಡಿದ ಕೋಲ್ಕತ್ತಾ 16 ಓವರ್‌ಗಳಿಗೆ 7 ವಿಕೆಟ್‌ ನಷ್ಟಕ್ಕೆ 157 ರನ್‌ ಗಳಿಸಿತು. 158 ರನ್‌ಗಳ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್‌ ತಂಡವನ್ನು ಕೋಲ್ಕತ್ತಾ ಬೌಲರ್ಸ್‌ ಕಟ್ಟಿಹಾಕಿದರು. 16 ಓವರ್‌ಗಳಲ್ಲಿ 8 ವಿಕೆಟ್‌ಗೆ 138 ರನ್‌ ಗಳಿಸಲಷ್ಟೇ ಸಾಧ್ಯವಾಗಿ ಸೋಲೊಪ್ಪಿಕೊಂಡಿತು.

    ಕೋಲ್ಕತ್ತಾ ಬ್ಯಾಟಿಂಗ್‌ನಲ್ಲಿ ಆರಂಭಿಕ ಆಘಾತ ಎದುರಿಸಿತು. ಓಪನರ್‌ ಜೋಡಿ ಸುನಿಲ್ ನರೈನ್ (0) ಮತ್ತು ಫಿಲಿಪ್ ಸಾಲ್ಟ್ (6) ಅವರನ್ನು ತಂಡ ಬೇಗನೆ ಕಳೆದುಕೊಂಡಿತು. ಆದರೆ ವೆಂಕಟೇಶ್ ಅಯ್ಯರ್ 21 ಎಸೆತಗಳಲ್ಲಿ 42 ರನ್‌ಗಳ ನಿರ್ಣಾಯಕ ಪಾತ್ರವನ್ನು ವಹಿಸಿದರು. ನಾಯಕ ಶ್ರೇಯಸ್‌ ಅಯ್ಯರ್‌ ಕೇವಲ 7 ರನ್‌ ಗಳಿಸಿ ಔಟಾದರು.

    ನಿತೀಶ್ ರಾಣಾ (33), ಆಂಡ್ರೆ ರಸೆಲ್ (24), ರಿಂಕು ಸಿಂಗ್‌ (20), ರಮಣ್‌ದೀಪ್‌ ಸಿಂಗ್‌ (17) ತಂಡದ ಪರವಾಗಿ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿ ಸವಾಲಿನ ಮೊತ್ತ ದಾಖಲಿಸಲು ನೆರವಾದರು. ಮುಂಬೈ ಪರ ಜಸ್ಪ್ರೀತ್ ಬುಮ್ರಾ, ಪಿಯೂಷ್ ಚಾವ್ಲಾ ತಲಾ 2 ಹಾಗೂ ನುವಾನ್ ತುಷಾರ, ಅಂಶುಲ್ ಕಾಂಬೋಜ್ ತಲಾ 1 ವಿಕೆಟ್‌ ಕಿತ್ತರು.

    ಕೋಲ್ಕತ್ತಾ ನೀಡಿದ 158 ರನ್‌ ಗುರಿ ಬೆನ್ನತ್ತಿದ ಮುಂಬೈ ತಂಡಕ್ಕೆ ಇಶಾನ್‌ ಕಿಶನ್‌ 22 ಎಸೆತಗಳಿಗೆ 40 ರನ್‌ ಗಳಿಸಿ ಭದ್ರಬುನಾದಿ ಹಾಕಿಕೊಟ್ಟರು. ಆದರೆ ಇತರೆ ಆಟಗಾರರು ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದರು. ರೋಹಿತ್‌ (19), ಸೂರ್ಯಕುಮಾರ್‌ ಯಾದವ್‌ (11) ಮಿಂಚಲಿಲ್ಲ. ತಿಲಕ್‌ ವರ್ಮಾ 17 ಎಸೆತಕ್ಕೆ 32 ರನ್‌ ಗಳಿಸಿ ಮುಂಬೈಗೆ ಗೆಲುವಿನ ಭರವಸೆ ಮೂಡಿಸಿದ್ದರು. ಆದರೆ ಯಾವೊಬ್ಬ ಬ್ಯಾಟರ್‌ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯದ ಕಾರಣ ಮುಂಬೈ ಸೋಲನುಭವಿಸಿತು.

    ಕೋಲ್ಕತ್ತಾ ಪರ ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಆಂಡ್ರೆ ರಸೆಲ್ ತಲಾ 2 ವಿಕೆಟ್‌ ಕಿತ್ತು ತಂಡದ ಗೆಲುವಿಗೆ ಆಸರೆಯಾದರು. ಸುನಿಲ್ ನರೈನ್ 1 ವಿಕೆಟ್‌ ಕಿತ್ತರು.

  • KKR vs MI ಹೈವೋಲ್ಟೇಜ್‌ ಕದನಕ್ಕೆ ಮಳೆ ಅಡ್ಡಿ – 5 ಓವರ್‌ಗಳ ಪಂದ್ಯ ನಡೆಸಲು ತಜ್ಞರ ಸಲಹೆ!

    KKR vs MI ಹೈವೋಲ್ಟೇಜ್‌ ಕದನಕ್ಕೆ ಮಳೆ ಅಡ್ಡಿ – 5 ಓವರ್‌ಗಳ ಪಂದ್ಯ ನಡೆಸಲು ತಜ್ಞರ ಸಲಹೆ!

    ಕೋಲ್ಕತ್ತ: ಇಲ್ಲಿನ ಈಡನ್‌ ಗಾರ್ಡನ್‌ನಲ್ಲಿ (Eden Gardens) ಆಯೋಜನೆಗೊಂಡಿರುವ ಮುಂಬೈ ಇಂಡಿಯನ್ಸ್‌ ಮತ್ತು ಕೋಲ್ಕತ್ತಾ ನೈಟ್‌ರೈಡರ್ಸ್‌ ನಡುವಿನ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ (Rain) ಅಡ್ಡಿಯಾಗಿದೆ.

    ಸುಮಾರು 40 ನಿಮಿಷಗಳ ಕಾಲ ಸುರಿದ ಭಾರೀ ಮಳೆಯಿಂದಾಗಿ ಮ್ಯಾಚ್‌ ತಡವಾಗಿ ಆರಂಭಿಸಲಾಗುತ್ತಿದೆ. 40 ನಿಮಿಷಗಳ ಬಳಿಕ ವರುಣ ಬಿಡುವು ನೀಡಿದ್ದು, ಸಿಬ್ಬಂದಿ ಮೈದಾನವನ್ನು ಹದಗೊಳಿಸುತ್ತಿದ್ದಾರೆ. ಇದನ್ನೂ ಓದಿ: ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ಪಂತ್‌ ಔಟ್‌; ಡೆಲ್ಲಿ ತಂಡಕ್ಕೆ ಹೊಸ ನಾಯಕ – ಬೆಂಗಳೂರು ಬಾಯ್ಸ್‌ ಕೈಹಿಡಿಯುತ್ತಾ ಲಕ್‌?

    ಸದ್ಯ ಭಾರೀ ಮಳೆ ಹಿನ್ನೆಲೆಯಲ್ಲಿ ಮೈದಾನವನ್ನು (Cricket Field) ಹದಗೊಳಿಸಲು ಸಿಬ್ಬಂದಿ ಕನಿಷ್ಠ ಒಂದು ಗಂಟೆ ಸಮಯ ಕೇಳಿದ್ದಾರೆ. ಸುಮಾರು 8:45ರ ವೇಳೆ ಪಿಚ್‌ ಕ್ಯೂರೇಟರ್‌ಗಳೊಂದಿಗೆ ಅಂಪೈರ್‌ಗಳು ಮತ್ತು ತಂಡದ ನಾಯಕರು ಪಿಚ್‌ ಪರಿಶೀಲಿಸಲಿದ್ದಾರೆ. ಇದರಿಂದ 9:30ರ ನಂತರ ಪಂದ್ಯ ಆರಂಭಗೊಳ್ಳುವ ನಿರೀಕ್ಷೆಯಿದ್ದು, 20 ಓವರ್‌ಗಳ ಪಂದ್ಯ ನಡೆಯುವುದು ಅನುಮಾನವಾಗಿದೆ. ಒಂದು ವೇಳೆ 10 ಗಂಟೆಯ ನಂತರ ಪಂದ್ಯ ಆರಂಭಗೊಂಡರೆ 5 ಅಥವಾ 10 ಓವರ್‌ಗಳಿಗೆ ಪಂದ್ಯ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

    ಪ್ರಾಥಮಿಕ ಮೂಲಗಳ ಪ್ರಕಾರ ಮೈದಾನ ಹದಗೊಳಿಸಲು ಕನಿಷ್ಠ 75 ನಿಮಿಷಗಳು ಬೇಕಾಗುತ್ತದೆ. ಆದ್ದರಿಂದ 5 ಓವರ್‌ಗಳ ಪಂದ್ಯ ಆರಂಭಿಸುವುದು ಸೂಕ್ತ ಎಂದು ಕ್ರಿಕೆಟ್‌ ತಜ್ಞರು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ರಿಷಭ್‌ ಸೇರಿದಂತೆ ಇಡೀ ಡೆಲ್ಲಿ ತಂಡಕ್ಕೆ ಭಾರೀ ದಂಡ – ಪಂತ್‌ ಒಂದು ಪಂದ್ಯದಿಂದ ಅಮಾನತು!

    ಸದ್ಯ 11 ಪಂದ್ಯಗಳ ಪೈಕಿ 8ರಲ್ಲಿ ಗೆಲುವು ಸಾಧಿಸಿರುವ ಕೋಲ್ಕತ್ತಾ ನೈಟ್‌ರೈಡರ್ಸ್‌ (KKR) ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಪ್ಲೇ ಆಫ್‌ಗೆ ಅಧಿಕೃತ ಪ್ರವೇಶ ಪಡೆಯಲು ಇನ್ನೊಂದು ಪಂದ್ಯ ಗೆಲ್ಲಬೇಕಿದೆ. ಆದ್ರೆ 12ರಲ್ಲಿ ಕೇವಲ 4 ಪಂದ್ಯ ಗೆದ್ದಿರುವ ಮುಂಬೈ 9ನೇ ಸ್ಥಾನದಲ್ಲಿದೆ.

  • ಸನ್‌ ರೈಸರ್ಸ್‌ ವಿರುದ್ಧ ಸೇಡು ತೀರಿಸಿಕೊಂಡ ಮುಂಬೈ; ತನ್ನನ್ನೇ ಹೊಗಳಿಕೊಂಡ ಪಾಂಡ್ಯ!

    ಸನ್‌ ರೈಸರ್ಸ್‌ ವಿರುದ್ಧ ಸೇಡು ತೀರಿಸಿಕೊಂಡ ಮುಂಬೈ; ತನ್ನನ್ನೇ ಹೊಗಳಿಕೊಂಡ ಪಾಂಡ್ಯ!

    ಮುಂಬೈ: ಸನ್‌ ರೈಸರ್ಸ್‌ ಹೈದರಾಬಾದ್‌ (SRH) ವಿರುದ್ಧ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಭರ್ಜರಿ ಗೆಲುವು ದಾಖಲಿಸುವ ಮೂಲಕ ತನ್ನ ಸೇಡು ತೀರಿಸಿಕೊಂಡಿತು. ಆದ್ರೆ ಪಂದ್ಯದ ಬಳಿಕ ಮಾತನಾಡಿದ ಹಾರ್ದಿಕ್‌ ಪಾಂಡ್ಯ (Hardik Pandya) ತಮ್ಮ ಬೌಲಿಂಗ್‌ ಪ್ರದರ್ಶನದ ಬಗ್ಗೆ ಹೊಗಳಿಕೊಂಡಿದ್ದಾರೆ.

    ಪಂದ್ಯದ ಬಳಿಕ ಪೋಸ್ಟ್‌ ಪ್ರೆಸೆಂಟೇಷನ್‌ನಲ್ಲಿ ಮಾತನಾಡಿದ ಪಾಂಡ್ಯ, ನಾವು ಉತ್ತಮ ಕ್ರಿಕೆಟ್‌ ಆಡುವತ್ತ ಗಮನ ಹರಿಸಲು ಬಯಸುತ್ತೇವೆ. ಈ ಪಂದ್ಯದಲ್ಲಿ 10-15 ರನ್‌ ಹೆಚ್ಚುವರಿ ನೀಡಿದ್ದೇವೆ ಅನ್ನಿಸುತ್ತೆ. ಆದ್ರೆ ಅದಕ್ಕೆ ಪ್ರತಿಯಾಗಿ ನಮ್ಮ ಬ್ಯಾಟರ್ಸ್‌ಗಳು ಅಬ್ಬರಿಸಿದ ರೀತಿ ಅತ್ಯುತ್ತಮವಾಗಿತ್ತು. ನನ್ನ ಬೌಲಿಂಗ್‌ (Bowling) ಕೂಡ ಉತ್ತಮವಾಗಿತ್ತು. ಪರಿಸ್ಥಿತಿಗೆ ತಕ್ಕಂತೆ ಬೌಲಿಂಗ್‌ ಮಾಡಿದೆ, ಇದು ತಂಡಕ್ಕೆ ಅನುಕೂಲವಾಯಿತು. ಇದೇ ವೇಳೆ ಮತ್ತೊಂದು ಹಾದಿಯಿಂದ ಪಿಯೂಷ್‌ ಚಾವ್ಲಾ (Piyush Chawla), ಸ್ಪಿನ್‌ ದಾಳಿಗೆ ಮುಂದಾದರು. ಅವರ ಬೌಲಿಂಗ್‌ ಸಹ ನಿಖರವಾಗಿತ್ತು ಎಂದು ಹೇಳಿದ್ದಾರೆ. ಹೈದರಾಬಾದ್‌ ವಿರುದ್ಧ ನಡೆದ ಪಂದ್ಯದಲ್ಲಿ 4 ಓವರ್‌ಗಳಲ್ಲಿ 31 ರನ್‌ ಬಿಟ್ಟುಕೊಟ್ಟ ಹಾರ್ದಿಕ್‌ ಪಾಂಡ್ಯ 3 ವಿಕೆಟ್‌ ಕಿತ್ತರು.

    ನಂತರ ಸೂರ್ಯಕುಮಾರ್‌ ಯಾದವ್‌ (Suryakumar Yadav) ಶತಕದ ಕುರಿತು ಮಾತನಾಡಿದ ಪಾಂಡ್ಯ, ನಿಜಕ್ಕೂ ಸೂರ್ಯ ಅವರ ಬ್ಯಾಟಿಂಗ್‌ ನಂಬಲು ಅಸಾಧ್ಯವಾಗಿತ್ತು. ಎದುರಾಳಿ ಬೌಲರ್‌ಗಳ ಮೇಲೆ ಹೆಚ್ಚು ಒತ್ತಡ ಹೇರಿದ್ದರು. ವಿಭಿನ್ನ ರೀತಿಯಲ್ಲಿ ಆಡುವ ಅವರ ಆಟದಿಂದ ತಂಡಕ್ಕೆ ಹೆಚ್ಚು ಅನುಕೂಲವಾಗಿದೆ. ಅವರು ನಮ್ಮ ತಂಡದಲ್ಲಿರೋದು ನಮ್ಮ ಅದೃಷ್ಟ ಎಂದು ಹಾಡಿಹೊಗಳಿದ್ದಾರೆ.

    ಸೇಡು ತೀರಿಸಿಕೊಂಡ ಪಾಂಡ್ಯ ಪಡೆ:
    ಇದೇ ಐಪಿಎಲ್‌ ಆವೃತ್ತಿಯ 8ನೇ ಪಂದ್ಯದಲ್ಲಿ ಹೈದರಾಬಾದ್‌ ತಂಡ ಮುಂಬೈ ವಿರುದ್ಧ ದಾಖಲೆಯ 277 ರನ್‌ ಚಚ್ಚಿತ್ತು. ಈ ಪಂದ್ಯದಲ್ಲಿ 246 ರನ್‌ಗಳನ್ನು ಸಿಡಿಸಿದ್ದ ಮುಂಬೈ 31 ರನ್‌ಗಳ ಅಂತರದಿಂದ ಸೋತಿತ್ತು. ಅಂದು ಹೈದರಾಬಾದ್‌ ತವರಿನಲ್ಲಿ ಸೋತಿದ್ದ ಮುಂಬೈ, ತನ್ನ ತವರು ಕ್ರೀಡಾಂಗಣದಲ್ಲಿ ಗೆದ್ದು ಸೇಡು ತೀರಿಸಿಕೊಂಡಿತು. ಇದನ್ನೂ ಓದಿ: T20 World Cup: ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಕ್ರಿಕೆಟಿಗರಿಗೆ ಲಕ್ಷ ಲಕ್ಷ ಬಹುಮಾನ ಘೋಷಿಸಿದ ಪಾಕ್‌!

    ಸೋಮವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಹೈದರಾಬಾದ್‌ 8 ವಿಕೆಟ್‌ ನಷ್ಟಕ್ಕೆ 20 ಓವರ್‌ಗಳಲ್ಲಿ 173 ರನ್‌ ಗಳಿಸಿತ್ತು. ಈ ಗುರಿ ಬೆನ್ನತ್ತಿದ ಮುಂಬೈ 17.2 ಓವರ್‌ಗಳಲ್ಲೇ 174 ರನ್‌ ಸಿಡಿಸಿ ಗೆಲುವು ದಾಖಲಿಸಿತ್ತು. ಇದನ್ನೂ ಓದಿ: ರಿಷಭ್‌ ಪಂತ್‌ ಮದುವೆಯಾಗ್ತೀರಾ? – ನೋ ಕಾಮೆಂಟ್ಸ್‌ ಎಂದು ಪಾಕ್‌ ಬೌಲರ್‌ ಹೊಗಳಿದ ಊರ್ವಶಿ ರೌಟೇಲಾ

    ಶತಕ ವೀರ ಸೂರ್ಯ:
    ಹೈದರಾಬಾದ್‌ ತಂಡದ ವಿರುದ್ಧ ಸ್ಫೋಟಕ ಇನ್ನಿಂಗ್ಸ್‌ ಕಟ್ಟಿದ ಸೂರ್ಯಕುಮಾರ್‌ ಯಾದವ್‌, ಸನ್‌ರೈಸರ್ಸ್‌ ಬೌಲರ್‌ಗಳನ್ನು ಚಚ್ಚಿ ಚಿಂದಿ ಮಾಡಿದರು. ಮೊದಲ 30 ಎಸೆತಗಳಲ್ಲಿ 50 ರನ್‌ ಬಾರಿಸಿದ್ದ ಸ್ಕೈ, ಮುಂದಿನ 21 ಎಸೆತಗಳಲ್ಲಿ 50 ರನ್‌ ಸಿಡಿಸುವ ಮೂಲಕ ಸ್ಫೋಟಕ ಶತಕ ದಾಖಲಿಸಿದರು. ಇದು ಸೂರ್ಯಕುಮಾರ್‌ ಅವರ 2ನೇ ಐಪಿಎಲ್‌ ಶತಕವೂ ಆಗಿದೆ. 200 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಸೂರ್ಯ ಒಟ್ಟು 51 ಎಸೆತಗಳಲ್ಲಿ 102 ರನ್‌ ಚಚ್ಚಿ ತಂಡವನ್ನು ಗೆಲ್ಲಿಸುವಲ್ಲಿ ಯಶಸ್ವಿಯಾದರು.

  • ಸೂರ್ಯ ಕುಮಾರ್‌ ಶತಕದ ನೆರವು – ಮುಂಬೈಗೆ ಭರ್ಜರಿ ಗೆಲುವು

    ಸೂರ್ಯ ಕುಮಾರ್‌ ಶತಕದ ನೆರವು – ಮುಂಬೈಗೆ ಭರ್ಜರಿ ಗೆಲುವು

    ಮುಂಬೈ: ಇಲ್ಲಿನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ 55ನೇ ಐಪಿಎಲ್‌ (IPL 2024) ಪಂದ್ಯದಲ್ಲಿ ಮುಂಬೈ (Mumbai Indians) ತಂಡ ಸನ್ ರೈಸರ್ಸ್ ಹೈದರಾಬಾದ್‌ (SunRisers Hyderabad) ತಂಡದ ವಿರುದ್ದ 7 ವಿಕೆಟ್‌ಗಳ ಜಯ ಗಳಿಸಿದೆ.

    ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ನಿಗದಿತ ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಎದುರಾಳಿ ತಂಡಕ್ಕೆ 174 ಗಳ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಮುಂಬೈ ತಂಡ 17.2 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 174 ರನ್‌ ಕಲೆಹಾಕಿ ಭರ್ಜರಿ ಜಯ ಗಳಿಸಿತು.

    ಸನ್ ರೈಸರ್ಸ್ ಹೈದರಾಬಾದ್‌ ನೀಡಿದ ಗುರಿ ಬೆನ್ನಟ್ಟಿದ ಮುಂಬೈ ತಂಡದ ಮೊತ್ತ ಕೇವಲ 32 ಇರುವಾಗಲೇ 3 ವಿಕೆಟ್‌ ಕಳೆದುಕೊಂಡು ಆರಂಭಿಕ ಆಘಾತ ಎದುರಿಸಿತು. ಇಶಾನ್ ಕಿಶನ್ 7 ಎಸೆತಗಳಲ್ಲಿ 9 ರನ್‌ಗಳಿಸಿ ಔಟಾದರು. ರೋಹಿತ್‌ ಶರ್ಮಾ 5 ಎಸೆತಗಳಲ್ಲಿ 4 ರನ್‌ ಗಳಿಸಿ ಪೆವಿಲಿಯನ್‌ಗೆ ಮರಳಿದರು. ನಮನ್ ಧೀರ್ 9 ಎಸೆತಗಳಲ್ಲಿ ತಂಡಕ್ಕೆ ಕೊಡುಗೆ ನೀಡದೆ ಮರಳಿದರು. ಬಳಿಕ ಸೂರ್ಯ ಕುಮಾರ್‌ 51 ಎಸೆತಗಳಲ್ಲಿ 6 ಸಿಕ್ಸರ್‌ 12 ಬೌಂಡರಿಗಳ ನೆರವಿನಿಂದ 102 ರನ್‌ ಹಾಗೂ ತಿಲಕ್‌ ವರ್ಮಾ 32 ಎಸೆತಗಳಲ್ಲಿ 37 ರನ್‌ ಗಳಿಸಿ ತಂಡವನ್ನು ಗೆಲುವಿನ ದಡ ತಲುಪಿಸಿದರು.

    ಸನ್‌ ರೈಸರ್ಸ್‌ ಪರ ಪ್ಯಾಟ್ ಕಮಿನ್ಸ್, ಮಾರ್ಕೊ ಜಾನ್ಸನ್, ಭುವನೇಶ್ವರ್‌ ಕುಮಾರ್‌ ತಲಾ ಒಂದೊಂದು ವಿಕೆಟ್‌ ಪಡೆದರು.

    ಸನ್ ರೈಸರ್ಸ್ ಪರ ಟ್ರಾವಿಸ್ ಹೆಡ್ 30 ಎಸೆತಗಳಲ್ಲಿ 1 ಸಿಕ್ಸರ್‌ 7 ಬೌಂಡರಿ ನೆರವಿನಿಂದ 48 ರನ್‌ ಗಳಿಸಿ ಅರ್ಧಶತಕ ವಂಚಿತರಾದರು. ಪ್ಯಾಟ್ ಕಮಿನ್ಸ್ 17 ಎಸೆತಗಳಲ್ಲಿ 35 ರನ್‌ ಗಳಿಸಿ ಔಟಾಗದೆ ಉಳಿದರು. ನಿತೀಶ್‌ ಕುಮಾರ್‌ ರೆಡ್ಡಿ 15 ಎಸೆತಗಳಲ್ಲಿ 20 ರನ್‌ ಗಳಿಸಿ ಔಟಾದರು. ಮಾರ್ಕೊ ಜಾನ್ಸನ್ 12 ಎಸೆತಗಳಲ್ಲಿ 17 ರನ್‌ ಕಲೆ ಹಾಕಿ ಪೆವಿಲಿಯನ್‌ಗೆ ಮರಳಿದರು.

    ಮುಂಬೈ ಪರ ಹಾರ್ದಿಕ್ ಪಾಂಡ್ಯ ಮತ್ತು ಪಿಯೂಷ್ ಚಾವ್ಲಾ ತಲಾ ಮೂರು ವಿಕೆಟ್ ಪಡೆದರು. ಅನ್ಶುಲ್ ಕಾಂಬೋಜ್ ಮತ್ತು ಜಸ್ಪ್ರೀತ್ ಬುಮ್ರಾ ತಲಾ ಒಂದು ವಿಕೆಟ್ ಪಡೆದರು. ಹಾರ್ದಿಕ್ ಪಾಂಡ್ಯ ಒಂದೇ ಓವರ್‌ನಲ್ಲಿ ಶಹಬಾಜ್ ಅಹ್ಮದ್ ಮತ್ತು ಮಾರ್ಕೊ ಜಾನ್ಸನ್ ಅವರ ವಿಕೆಟ್ ಪಡೆದು ಮಿಂಚಿದರು.

  • ಮುಂಬೈ ವಿರುದ್ಧ 24 ರನ್‌ಗಳ ಜಯ – ಎರಡನೇ ಸ್ಥಾನಕ್ಕೆ ಜಿಗಿದ ಕೋಲ್ಕತ್ತಾ

    ಮುಂಬೈ ವಿರುದ್ಧ 24 ರನ್‌ಗಳ ಜಯ – ಎರಡನೇ ಸ್ಥಾನಕ್ಕೆ ಜಿಗಿದ ಕೋಲ್ಕತ್ತಾ

    ಮುಂಬೈ: ವೆಂಕಟೇಶ್‌ ಅಯ್ಯರ್‌, ಮೈಕಲ್‌ ಸ್ಟಾರ್ಕ್‌ ಅವರ ಅತ್ಯುತ್ತಮ ಆಟದಿಂದ ಮುಂಬೈ ಇಂಡಿಯನ್ಸ್‌ (Mumbai Indians) ವಿರುದ್ಧ ಕೋಲ್ಕತ್ತಾ ನೈಟ್‌ ರೈಡರ್ಸ್‌ (Kolkata Knight Riders) 24 ರನ್‌ಗಳ ಜಯ ಸಾಧಿಸಿದೆ.

    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಕೋಲ್ಕತ್ತಾ 19.5 ಓವರ್‌ಗಳಲ್ಲಿ 169 ರನ್‌ ಗಳಿಗೆ ಆಲೌಟ್‌ ಆಯ್ತು. ಈ ಮೊತ್ತವನ್ನು ಬೆನ್ನಟ್ಟಿದ ಮುಂಬೈ 18.5 ಓವರ್‌ಗಳಲ್ಲಿ 145 ರನ್‌ಗಳಿಗೆ ಆಲೌಟ್‌ ಆಯ್ತು. ಈ ಗೆಲುವಿನೊಂದಿಗೆ ಕೋಲ್ಕತ್ತಾ 14 ಅಂಕಗಳಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದಿದೆ.

    ಮುಂಬೈ ಪರ ಸೂರ್ಯಕುಮಾರ್‌ ಯಾದವ್‌ (Surya Kumar Yadav) 56 ರನ್‌(35 ಎಸೆತ, 6 ಬೌಂಡರಿ, 2 ಸಿಕ್ಸರ್‌) ಟೀಮ್‌ ಡೇವಿಡ್‌ 24 ರನ್‌ (20 ಎಸೆತ, 1 ಬೌಂಡರಿ, 1 ಸಿಕ್ಸ್‌ ) ಹೊಡೆದು ಔಟಾದರು.

    ಕೋಲ್ಕತ್ತಾ ಪರ ಸ್ಟಾರ್ಕ್‌ 33 ರನ್‌ ನೀಡಿ 4 ವಿಕೆಟ್‌ ಪಡೆದರೆ ವರುಣ್‌ ಚಕ್ರವರ್ತಿ, ಸುನಿಲ್‌ ನರೈನ್‌, ರಸೆಲ್‌ ತಲಾ 2 ವಿಕೆಟ್‌ ಪಡೆದರು.  ಇದನ್ನೂ ಓದಿ: ಸುಬ್ರಹ್ಮಣ್ಯದಲ್ಲಿ ಸಿಡಿಲಿಗೆ ನವ ವಿವಾಹಿತ ಬಲಿ

    ಕೋಲ್ಕತ್ತಾ ಪರ ವೆಂಕಟೇಶ್‌ ಅಯ್ಯರ್‌ 70 ರನ್‌ (52 ಎಸೆತ, 6 ಬೌಂಡರಿ, 3 ಸಿಕ್ಸರ್‌), ಮನೀಷ್‌ ಪಾಂಡೆ 42 ರನ್‌(31 ಎಸೆತ, 2 ಬೌಂಡರಿ, 2 ಸಿಕ್ಸರ್‌) ಸಿಡಿಸಿ ಔಟಾದರು.

  • ಮುಂಬೈ ವಿರುದ್ಧ ರೋಚಕ ಜಯ – ಮೂರನೇ ಸ್ಥಾನಕ್ಕೆ ಜಿಗಿದ ಲಕ್ನೋ

    ಮುಂಬೈ ವಿರುದ್ಧ ರೋಚಕ ಜಯ – ಮೂರನೇ ಸ್ಥಾನಕ್ಕೆ ಜಿಗಿದ ಲಕ್ನೋ

    ಲಕ್ನೋ: ಮುಂಬೈ ಇಂಡಿಯನ್ಸ್‌ (Mumbai Indians) ವಿರುದ್ಧ ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants) ರೋಚಕ 4 ವಿಕೆಟ್‌ಗಳ ಜಯ ಸಾಧಿಸಿ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದಿದೆ.

    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮುಂಬೈ 7 ವಿಕೆಟ್‌ ನಷ್ಟಕ್ಕೆ 144 ರನ್‌ ಗಳಿಸಿತು. ಸುಲಭ ಸವಾಲನ್ನು ಬೆನ್ನಟ್ಟಿದ ಲಕ್ನೋ ಇನ್ನೂ 4 ಎಸೆತ ಬಾಕಿ ಇರುವಂತೆಯೇ 6 ವಿಕೆಟ್‌ ನಷ್ಟಕ್ಕೆ 145 ರನ್‌ ಹೊಡೆದು ಜಯಗಳಿಸಿತು.

    ಕೊನೆಯ 4 ಓವರ್‌ಗಳಲ್ಲಿ ಲಕ್ನೋ ತಂಡ ಗೆಲ್ಲಲು 23 ರನ್‌ ಬೇಕಿತ್ತು. 17 ಓವರ್‌ ಎಸೆದ ಬುಮ್ರಾ (Jasprit Bumrah) 1 ರನ್‌ ನೀಡುವ ಮೂಲಕ ಪಂದ್ಯಕ್ಕೆ ರೋಚಕ ತಿರುವು ನೀಡಿದರು.

    ಜೆರಾಲ್ಡ್ ಕೋಟ್ಜಿ 18ನೇ ಓವರ್‌ನಲ್ಲಿ 9 ರನ್‌ ನೀಡಿ ಟರ್ನರ್‌ ಅವರನ್ನು ಬೌಲ್ಡ್‌ ಮಾಡಿದರು. ಕೊನೆಯ 12 ಎಸೆತಗಳಲ್ಲಿ 13 ರನ್‌ ಬೇಕಿತ್ತು. ಹಾರ್ದಿಕ್‌ ಎಸೆದ ಮೊದಲ ಬಾಲಿಗೆ ಬದೌನಿ ರನೌಟ್‌ ಆದರು. ಈ ಓವರ್‌ನಲ್ಲಿ 10 ರನ್‌ ಬರುವ ಮೂಲಕ ಪಂದ್ಯ ಮುಂಬೈಯಿಂದ ಜಾರಿತು. ಕೊನೆಯ ಓವರ್‌ನ ಮೊದಲ ಎಡು ಎಸೆತಗಳಲ್ಲಿ ಪೂರನ್‌ 3 ರನ್‌ ಗಳಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು.

    ಲಕ್ನೋ ಪರ ಸ್ಟೊಯಿನೆಸ್‌ 62 ರನ್‌(45 ಎಸೆತ, 7 ಬೌಂಡರಿ, 2 ಸಿಕ್ಸ್‌), ಕೆಎಲ್‌ ರಾಹುಲ್‌ 28 ರನ್‌(22 ಎಸೆತ, 3 ಬೌಂಡರಿ, 1 ಸಿಕ್ಸರ್‌) ಸಿಡಿಸಿ ಔಟಾದರು. ಮುಂಬೈ ಪರ ಇಶನ್‌ ಕಿಶನ್‌ 32 ರನ್‌ (36 ಎಸೆತ, 3 ಬೌಂಡರಿ), ನೆಹಾಲ್ ವಧೇರಾ 46 ರನ್‌(41 ಎಸೆತ, 4 ಬೌಂಡರಿ, 2 ಸಿಕ್ಸರ್‌), ಟಿಮ್‌ ಡೇವಿಡ್‌ 35 ರನ್‌ ( 18 ಎಸೆತ, 3 ಬೌಂಡರಿ, 1 ಸಿಕ್ಸರ್‌) ಹೊಡೆದರು.

  • ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿಗೆ 10 ರನ್‌ಗಳ ಜಯ – ಮುಂಬೈ ಪ್ಲೇ ಆಫ್‌ ಹಾದಿ ಬಹುತೇಕ ಬಂದ್‌!

    ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿಗೆ 10 ರನ್‌ಗಳ ಜಯ – ಮುಂಬೈ ಪ್ಲೇ ಆಫ್‌ ಹಾದಿ ಬಹುತೇಕ ಬಂದ್‌!

    ನವದೆಹಲಿ: ಕೊನೆಯವರೆಗೂ ಜಿದ್ದಾ-ಜಿದ್ದಿಯಿಂದ ಕೂಡಿದ್ದ ಅಖಾಡದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಮುಂಬೈ ಇಂಡಿಯನ್ಸ್‌ ವಿರುದ್ಧ 10 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ವಾಂಖೆಡೆ ಮೈದಾನದಲ್ಲಿ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಂಡಿದೆ.

    ಇಲ್ಲಿನ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ 20 ಓವರ್‌ಗಳಲ್ಲಿ ಕೇವಲ 4 ವಿಕೆಟ್‌ ನಷ್ಟಕ್ಕೆ 257 ರನ್‌ ಬಾರಿಸಿತ್ತು. 258 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್‌ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 247 ರನ್‌ ಗಳಿಸಿ 10 ರನ್‌ಗಳ ವಿರೋಚಿತ ಸೋಲಿಗೆ ತುತ್ತಾಗಿದೆ.

    ಕೊನೇ ಓವರ್‌ನಲ್ಲಿ ಕೈತಪ್ಪಿದ ಗೆಲುವು:
    ಕೊನೇ ಓವರ್‌ನಲ್ಲಿ ಮುಂಬೈ ಗೆಲುವಿಗೆ 25 ರನ್‌ಗಳ ಅಗತ್ಯವಿತ್ತು. ಮುಕೇಶ್‌ ಕುಮಾರ್‌ ಬೌಲಿಂಗ್‌ ವೇಳೆ ತಿಲಕ್‌ ವರ್ಮಾ ಸ್ಟ್ರೈಕ್‌ನಲ್ಲಿದ್ದರು. ಮೊದಲ ಎಸೆತದಲ್ಲಿ 2 ರನ್‌ ಕದಿಯಲು ಯತ್ನಿಸಿ ತಿಲಕ್‌ ರನೌಟ್‌ಗೆ ತುತ್ತಾದರು. ಇದರೊಂದಿಗೆ ಮುಂಬೈ ತಂಡದ ಗೆಲುವಿನ ಕನಸೂ ಭಗ್ನವಾಯಿತು. ಕೊನೆಯವರೆಗೂ ಹೋರಾಡಿದ ಮುಂಬೈ 247 ರನ್‌ ಗಳಿಸಿತು.

    ಬೃಹತ್‌ ಮೊತ್ತದ ಚೇಸಿಂಗ್‌ ಆರಂಭಿಸಿದ ಮುಂಬೈ ಇಂಡಿಯನ್ಸ್‌ ಆರಂಭದಲ್ಲೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತು. ಮಾಜಿ ನಾಯಕ ರೋಹಿತ್‌ ಶರ್ಮಾ 8 ರನ್‌ಗಳಿಗೆ ವಿಕೆಟ್‌ ಕೈಚೆಲ್ಲಿದರು, ಈ ಬೆನ್ನಲ್ಲೇ 20 ರನ್‌ ಗಳಿಸಿ ಇಶಾನ್‌ ಕಿಶನ್‌ ಸಹ ಪೆವಿಲಿಯನ್‌ಗೆ ಮರಳಿದರು. ನಂತರ ಸ್ಪೋಟಕ ಬ್ಯಾಟಿಂಗ್‌ ಆರಂಭಿಸಿದ್ದ ಸೂರ್ಯಕುಮಾರ್‌ ಯಾದವ್‌ 13 ಎಸೆತಗಳಲ್ಲಿ 26 ರನ್‌ ಬಾರಿಸಿ ಔಟಾದರು. ಇದು ಮುಂಬೈ ತಂಡಕ್ಕೆ ಸೋಲಿನ ಭೀತಿ ಉಂಟುಮಾಡಿತ್ತು.

    ಮುಂಬೈ ಪರ ತಿಲಕ್‌ ವರ್ಮಾ 63 ರನ್‌ (32 ಎಸೆತ, 4 ಸಿಕ್ಸರ್‌, 4 ಬೌಂಡರಿ), ಹಾರ್ದಿಕ್‌ ಪಾಂಡ್ಯ 46 ರನ್‌ (24 ಎಸೆತ, 3 ಸಿಕ್ಸರ್‌, 4 ಬೌಂಡರಿ), ಟಿಮ್‌ ಡೇವಿಡ್‌ 37 ರನ್‌ (17 ಎಸೆತ, 3 ಸಿಕ್ಸರ್‌, 4 ಬೌಂಡರಿ), ಸೂರ್ಯಕುಮಾರ್‌ 26 ರನ್‌, ಇಶಾನ್‌ ಕಿಶನ್‌ 20 ರನ್‌, ಗಳಿಸಿದ್ದು ಬಿಟ್ಟರೆ ಉಳಿದ ಆಟಗಾರರು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯದ ಕಾರಣ ಮುಂಬೈ ವಿರೋಚಿತ ಸೋಲಿಗೆ ತುತ್ತಾಯಿತು. ಡೆಲ್ಲಿ ಕ್ಯಾಪಿಟಲ್ಸ್‌ ಪರ ಮುಕೇಶ್‌ ಕುಮಾರ್‌, ರಸಿಖ್‌ ಸಲಾಮ್‌ ತಲಾ 3 ವಿಕೆಟ್‌ ಕಿತ್ತರೆ, ಖಲೀಲ್‌ ಅಹ್ಮದ್‌ 2 ವಿಕೆಟ್‌ ಪಡೆದು ಮಿಂಚಿದರು.

    ಮೊದಲು ಬ್ಯಾಟಿಂಗ್‌ ಮಾಡಲಿಳಿದ ಡೆಲ್ಲಿ ಕ್ಯಾಪಿಟಲ್ಸ್‌ ಪರ ಆರಂಭಿಕರಾದ ಫ್ರೇಸರ್‌ ಮೆಕ್‌ಗಾರ್ಕ್‌ ಹಾಗೂ ಅಭಿಷೇಕ್ ಪೋರೆಲ್ ಆರಂಭದಿಂದಲೇ ಸ್ಪೋಟಕ ಇನ್ನಿಂಗ್ಸ್‌ ಕಟ್ಟಲು ಶುರು ಮಾಡಿದರು. ಮೊದಲ 2.4 ಓವರ್‌ಗಳಲ್ಲೇ ಡೆಲ್ಲಿ ತಂಡ 50 ರನ್‌ ಬಾರಿಸಿತ್ತು. ಆಸ್ಟ್ರೇಲಿಯಾ ಮೂಲದ ಯುವ ಸ್ಪೋಟಕ ಬ್ಯಾಟರ್ ಫ್ರೇಸರ್‌ ಮೆಗಾರ್ಕ್‌ ಮುಟ್ಟಿದ್ದೆಲ್ಲ ಚಿನ್ನ ಎನ್ನುವಂತಾಗಿದ್ದು. ಒಂದಾದಮೇಲೊಂದು ಎಸೆತಗಳು ಸಿಕ್ಸರ್‌, ಬೌಂಡರಿಯ ಹಾದಿಯನ್ನೇ ಹಿಡಿಯುತ್ತಿದ್ದವು. ಇದರೊಂದಿಗೆ ಮೆಕ್‌ಗಾರ್ಕ್ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಮಿಂಚಿದರು. ಇದರೊಂದಿಗೆ ಡೆಲ್ಲಿ ಪವರ್‌ ಪ್ಲೇ ನಲ್ಲಿ 92 ರನ್ ಕಲೆಹಾಕಿತ್ತು. ಇದು ಐಪಿಎಲ್‌ ಇತಿಹಾಸದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಪವರ್‌ ಪ್ಲೇನಲ್ಲಿ ಸಿಡಿಸಿದ ಗರಿಷ್ಠ ಸ್ಕೋರರ್‌ ಆಗಿತ್ತು.

    ಮೆಕ್‌ಗಾರ್ಕ್‌ ಹಾಗೂ ಅಭಿಷೇಕ್ ಮೊದಲ ವಿಕೆಟ್‌ಗೆ 7.3 ಓವರ್‌ಗಳಲ್ಲಿ ಬರೋಬ್ಬರಿ 114 ರನ್‌ ಸಿಡಿಸಿತ್ತು. ಮೆಕ್‌ಗಾರ್ಕ್‌ ಬಳಿಕ ಶಾಯ್‌ ಹೋಪ್‌, ರಿಷಭ್‌ ಪಂತ್‌, ಟ್ರಿಸ್ಟನ್‌ ಸ್ಟಬ್ಸ್‌ ಸಹ ಮುಂಬೈ ಬೌಲರ್‌ಗಳನ್ನು ಹಿಗ್ಗಾಮುಗ್ಗಾ ಜಾಡಿಸಿದರು. ಅಂತಿಮವಾಗಿ ಡೆಲ್ಲಿ ತಂಡ 20 ಓವರ್‌ಗಳಲ್ಲಿ 257 ರನ್‌ ಸಿಡಿಸಿತ್ತು.

    ಡೆಲ್ಲಿ ಪರ ಮೆಕ್‌ಗಾರ್ಕ್‌ 84 ರನ್‌ (27 ಎಸೆತ, 11 ಬೌಂಡರಿ, 6 ಸಿಕ್ಸರ್‌), ಟ್ರಿಸ್ಟನ್‌ ಸ್ಟಬ್ಸ್‌ 48 ರನ್‌ (25 ಎಸೆತ, 6 ಬೌಂಡರಿ, 2 ಸಿಕ್ಸರ್‌), ಶಾಯ್‌ಹೋಪ್‌ 41 ರನ್‌ (17 ಎಸೆತ, 5 ಸಿಕ್ಸರ್‌), ರಿಷಭ್‌ ಪಂತ್‌ 29 ರನ್‌, ಅಕ್ಷರ್‌ ಪಟೇಲ್‌ 11 ರನ್‌ ಗಳಿಸಿದರು.

    ಮುಂಬೈ ಇಂಡಿಯನ್ಸ್‌ ಪರ ಲ್ಯೂಕ್ ವುಡ್, ಜಸ್ಪ್ರೀತ್‌ ಬುಮ್ರಾ, ಪಿಯೂಷ್‌ ಚಾವ್ಲಾ, ಮೊಹಮ್ಮದ್‌ ನಬಿ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    ರನ್‌ ಏರಿದ್ದು ಹೇಗೆ?
    17 ಎಸೆತ – 50 ರನ್‌
    41 ಎಸೆತ – 100 ರನ್‌
    73 ಎಸೆತ – 150 ರನ್‌
    98 ಎಸೆತ – 200 ರನ್‌
    120 ಎಸೆತ – 257 ರನ್‌