Tag: Mumbai Indias

  • WPL 2025 | ಮುಂಬೈಗೆ 2ನೇ ಬಾರಿ ಚಾಂಪಿಯನ್‌ ಕಿರೀಟ – ಫೈನಲ್‌ನಲ್ಲಿ ಡೆಲ್ಲಿಗೆ ಹ್ಯಾಟ್ರಿಕ್‌ ಸೋಲು

    WPL 2025 | ಮುಂಬೈಗೆ 2ನೇ ಬಾರಿ ಚಾಂಪಿಯನ್‌ ಕಿರೀಟ – ಫೈನಲ್‌ನಲ್ಲಿ ಡೆಲ್ಲಿಗೆ ಹ್ಯಾಟ್ರಿಕ್‌ ಸೋಲು

    ಮುಂಬೈ: ಮಹಿಳಾ ಪ್ರೀಮಿಯರ್‌ ಲೀಗ್‌ನ 3ನೇ ಆವೃತ್ತಿಯಲ್ಲಿ ಹರ್ಮನ್‌ ಪ್ರೀತ್‌ ಕೌರ್‌ (Harmanpreet Kaur) ನಾಯಕತ್ವದ ಮುಂಬೈ ಇಂಡಿಯನ್ಸ್‌ (Mumbai Indians) ತಂಡವು ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ವಿರುದ್ಧ ಫೈನಲ್‌ ಪಂದ್ಯದಲ್ಲಿ 8 ರನ್‌ಗಳ ರೋಚಕ ಜಯ ಸಾಧಿಸಿ 2ನೇ ಬಾರಿಗೆ ಚಾಂಪಿಯನ್‌ ಪಟ್ಟಕ್ಕೇರಿದೆ.

    ವಿಶೇಷವೆಂದ್ರೆ 2023ರ ಮೊದಲ ಆವೃತ್ತಿಯಲ್ಲಿ ಡೆಲ್ಲಿ ವಿರುದ್ಧವೇ ಜಯಿಸಿ ಮುಂಬೈ ಚಾಂಪಿಯನ್‌ ಆಗಿತ್ತು. ಇನ್ನೂ ಸತತ 3ನೇ ಬಾರಿ ಫೈನಲ್‌ನಲ್ಲಿ ಸೋತ ಡೆಲ್ಲಿ ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದೆ.

    ಟರ್ನಿಂಗ್‌ ಸಿಕ್ಕಿದ್ದೆಲ್ಲಿ?
    ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದ್ದ ಡೆಲ್ಲಿ ತಂಡಕ್ಕೆ ಜೆಮಿಮಾ ಆಸರೆಯಾಗಿದ್ದರು. ಆದ್ರೆ 11ನೇ ಓವರ್‌ನಲ್ಲಿ ಅಮೆಲಿಯಾ ಕೇರ್‌ ಬೌಲಿಂಗ್‌ಗೆ ಬ್ಯಾಕ್‌ ಟು ಬ್ಯಾಕ್‌ ಬೌಂಡರಿ ಸಿಡಿಸುತ್ತಿದ್ದ ಜೆಮಿಮಾ 4ನೇ ಎಸೆತದಲ್ಲಿ ಸುಲಭ ಕ್ಯಾಚ್‌ಗೆ ತುತ್ತಾದರು. ಅಲ್ಲದೇ 18ನೇ ಓವರ್‌ನಲ್ಲಿ ನಾಟ್‌ ಸ್ಕಿವರ್‌ ಬ್ರಂಟ್‌ ಬೌಲಿಂಗ್‌ಗೆ ಬಂದಾಗ 4ನೇ ಎಸೆತದಲ್ಲಿ ಸ್ಫೋಟಕ ಬ್ಯಾಟಿಂಗ್‌ ಮಾಡುತ್ತಿದ್ದ ಮಾರಿಜಾನ್ನೆ ಕಪ್‌, 5ನೇ ಎಸೆತದಲ್ಲಿ ಶಿಖಾ ಪಾಂಡೆ ಬ್ಯಾಕ್‌ ಟು ಬ್ಯಾಕ್‌ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ಗೆ ಮರಳಿದ್ರು. ಇದು ಮುಂಬೈ ತಂಡದ ಗೆಲುವಿನ ಹಾದಿಯನ್ನು ಸುಗಮಗೊಳಿಸಿತು.

    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮುಂಬೈ ನಾಯಕಿ ಹರ್ಮನ್‌ ಪ್ರೀತ್‌ ಕೌರ್‌ ಸ್ಫೋಟಕ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 149 ರನ್‌ ಬಾರಿಸಿತು. 150 ರನ್‌ಗಳ ಗುರಿ ಬೆನ್ನಟ್ಟಿದ ಡೆಲ್ಲಿ ತಂಡ ಅಗ್ರ ಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯದಿಂದ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 141 ರನ್‌ ಗಳಿಸಿ ವಿರೋಚಿತ ಸೋಲು ಕಂಡಿತು. ಮುಂಬೈ ಗೆಲುವಿನ ನಗೆ ಬೀರುತ್ತಿದ್ದಂತೆ ಫ್ರಾಂಚೈಸಿ ಮಾಲೀಕರಾದ ನೀತಾ ಅಂಬಾನಿ ನಾಯಕಿ ಹರ್ಮನ್‌ ಪ್ರೀತ್‌ ಅವರನ್ನ ಅಪ್ಪಿಕೊಂಡು ಸಂಭ್ರಮಿಸಿದರು.

    ಚೇಸಿಂಗ್‌ ಆರಂಭಿಸಿದ ಡೆಲ್ಲಿ ಮಹಿಳಾ ತಂಡ ಸ್ಫೋಟಕ ಆರಂಭ ಪಡೆಯುವ ಉತ್ಸಾಹದಲ್ಲಿ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಮಧ್ಯಮ ಕ್ರಮಾಂಕದಲ್ಲಿ ಜೆಮಿಮಾ ರೊಡ್ರಿಗ್ಸ್‌ ಹಾಗೂ ಮಾರಿಜಾನ್ನೆ ಕಪ್‌ ಇನ್ನಿಂಗ್ಸ್‌ ಕಟ್ಟುವ ಪ್ರಯತ್ನ ಮಾಡಿದರು. ಆದ್ರೆ ಜೆಮಿಮಾ 30 ರನ್‌, ಮಾರಿಜಾನ್ನೆ ಕಪ್‌ 40 ರನ್‌ (26 ಎಸೆತ, 2 ಸಿಕ್ಸರ್‌, 5 ಬೌಂಡರಿ) ಗಳಿಸಿ ಔಟಾಗುತ್ತಿದ್ದಂತೆ ಡೆಲ್ಲಿ ತಂಡದ ಗೆಲುವಿನ ಕಸನಸು ಭಗ್ನವಾಯಿತು. ಕೊನೆಯಲ್ಲಿ ನಿಕಿ ಪ್ರಯಾಸ್‌ 25 ರನ್‌ ರನ್‌ ಕೊಡುಗೆ ನೀಡಿದರು.

    ಮುಂಬೈ ಪರ ನಾಟ್‌ ಸ್ಕೀವರ್‌ ಬ್ರಂಟ್‌ 3 ವಿಕೆಟ್‌ ಕಿತ್ತರೆ, ಅಮೇಲಿಯಾ ಕೇರ್‌ 2 ವಿಕೆಟ್‌ ಹಾಗೂ ಶಭಮನ್‌ ಇಸ್ಮಾಯಿಲ್‌, ಹೇಳಿ ಮ್ಯಾಥ್ಯೂಸ್‌, ಸೈಕಾ ಇಶಾಕ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಇಂಡಿಯನ್ಸ್‌ ಮುಂಬೈ ಆರಂಭದಲ್ಲಿ ವಿಕೆಟ್‌ ಕಳೆದುಕೊಂಡಿತ್ತು. ಆದ್ರೆ 3ನೇ ವಿಕೆಟ್‌ಗೆ ಜೊತೆಯಾದ ನಟಾಲಿ ಸ್ಕಿವರ್‌ ಬ್ರಂಟ್‌ ಹಾಗೂ ನಾಯಕಿ ಹರ್ಮನ್‌ ಪ್ರೀತ್‌ ಕೌರ್‌ ಇನ್ನಿಂಗ್ಸ್‌ ಕಟ್ಟುವಲ್ಲಿ ಯಶಸ್ವಿಯಾದರು. 3ನೇ ವಿಕೆಟ್‌ಗೆ ಈ ಜೋರಿ 62 ಎಸೆತಗಳಲ್ಲಿ 89 ರನ್‌ಗಳ ಜೊತೆಯಾಟ ನೀಡಿತು. ಇದು ತಂಡದ ಮೊತ್ತ ಹೆಚ್ಚಿಸಲು ಸಹಕಾರಿಯಾಯ್ತು. ಹರ್ಮನ್‌ ಪ್ರೀತ್‌ 44 ಎಸೆತಗಳಲ್ಲಿ ಸ್ಫೋಟಕ 66 ರನ್‌ (2 ಸಿಕ್ಸರ್‌, 9 ಬೌಂಡರಿ) ಚಚ್ಚಿದ್ರೆ, ಬ್ರಂಟ್‌ 28 ಎಸೆತಗಳಲ್ಲಿ 30 ರನ್‌ ಕೊಡುಗೆ ನೀಡಿದರು. ಇನ್ನುಳಿದ ಆಟಗಾರ್ತಿಯರು ಅಲ್ಪ ಮೊತ್ತಕ್ಕೆ ಪೆವಿಲಿಯನ್‌ಗೆ ಮರಳಿದರು.

    ಡೆಲ್ಲಿ ಪರ ಮಾರಿಜಾನ್ನೆ ಕಪ್‌, ಜೆಸ್‌ ಜೊನಾಸೆನ್‌, ಶ್ರೀ ಚಾರಿಣಿ ತಲಾ 2 ವಿಕೆಟ್‌ ಕಿತ್ತರೆ, ಅನಬೆಲ್‌ 1 ವಿಕೆಟ್‌ ಪಡೆದರು.

  • IPL Retention | ರೋಹಿತ್‌, ಪಾಂಡ್ಯಗಿಂತಲೂ ಬುಮ್ರಾ ದುಬಾರಿ – ಮುಂಬೈನಲ್ಲಿ ವಿದೇಶಿ ಆಟಗಾರರಿಗೆ ಕೊಕ್‌

    IPL Retention | ರೋಹಿತ್‌, ಪಾಂಡ್ಯಗಿಂತಲೂ ಬುಮ್ರಾ ದುಬಾರಿ – ಮುಂಬೈನಲ್ಲಿ ವಿದೇಶಿ ಆಟಗಾರರಿಗೆ ಕೊಕ್‌

    ಮುಂಬೈ: ಭಾರೀ ಕುತೂಹಲ ಮೂಡಿಸಿದ್ದ ಐಪಿಎಲ್‌ ರೀಟೆನ್‌ (IPL Retention) ಆಟಗಾರರ ಪಟ್ಟಿ ಕೊನೆಗೂ ಹೊರಬಿದ್ದಿದೆ. ಮುಂಬೈ ಇಂಡಿಯನ್ಸ್‌ (Mumbai Indians) ನೀರಿಕ್ಷೆಯಂತೆ ಐವರು ಸ್ಟಾರ್‌ ಆಟಗಾರರನ್ನ ತನ್ನಲ್ಲೇ ಉಳಿಸಿಕೊಂಡಿದೆ.

    ರೀಟೆನ್‌ ಪಟ್ಟಿ ಬಿಡುಗಡೆಗೊಳಿಸಿರುವ ಮುಂಬೈ ಸ್ಟಾರ್‌ ಆಟಗಾರರಾದ ರೋಹಿತ್‌ ಶರ್ಮಾ, ಸೂರ್ಯಕುಮಾರ್‌ ಯಾದವ್‌, ಹಾರ್ದಿಕ್‌ ಪಾಂಡ್ಯ, ಹಾಗೂ ತಿಲಕ್‌ ವರ್ಮಾ ಅವರನ್ನ ರೀಟೆನ್‌ ಮಾಡಿಕೊಂಡಿದೆ. ಆದ್ರೆ ಮಾಜಿ ನಾಯಕ ರೋಹಿತ್‌ ಶರ್ಮಾ, ಹಾಲಿ ನಾಯಕ ಹಾರ್ದಿಕ್‌ ಪಾಂಡ್ಯ, ಸೂರ್ಯಕುಮಾರ್‌ ಅವರಿಗಿಂತಲೂ ವೇಗಿ ಜಸ್ಪ್ರೀತ್‌ ಬುಮ್ರಾರನ್ನ ತಂಡದಲ್ಲಿ ಉಳಿಸಿಕೊಂಡಿರುವುದು ವಿಶೇಷ. ಅಲ್ಲದೇ ಪ್ರತಿ ಫ್ರಾಂಚೈಸಿಗೆ 2 ಅನ್‌ಕ್ಯಾಪ್ಡ್‌ ಪ್ಲೇಯರ್‌ ಹಾಗೂ 5 ವಿದೇಶಿ ಆಟಗಾರರಿಗೆ ಅವಕಾಶವಿದ್ದರೂ ಮುಂಬೈ ದೇಶಿ ಆಟಗಾರರಿಗೆ ಮಣೆ ಹಾಕಿದೆ.

    ಯಾರಿಗೆ ಎಷ್ಟು ಮೊತ್ತ?
    * ಜಸ್ಪ್ರೀತ್‌ ಬುಮ್ರಾ – 18 ಕೋಟಿ ರೂ.
    * ಸೂರ್ಯಕುಮಾರ್‌ ಯಾದವ್‌ – 16.35 ಕೋಟಿ ರೂ.
    * ಹಾರ್ದಿಕ್‌ ಪಾಂಡ್ಯ – 16.35 ಕೋಟಿ ರೂ.
    * ರೋಹಿತ್‌ ಶರ್ಮಾ – 16.30 ಕೋಟಿ ರೂ.
    * ತಿಲಕ್‌ ವರ್ಮಾ – 8 ಕೋಟಿ ರೂ.

    ಮುಂದಿನ ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಮೆಗಾ ಹರಾಜು ನಡೆಸಲು ಬಿಸಿಸಿಐ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಉಳಿಸಿಕೊಳ್ಳಬಹುದಾದ ಆಟಗಾರರ ಪಟ್ಟಿಯನ್ನು ಎಲ್ಲಾ ಫ್ರಾಂಚೈಸಿಗಳು ಬಿಡುಗಡೆ ಮಾಡಿವೆ.

  • ಮಹಿ ಚಚ್ಚಿದ ಆ 3 ಸಿಕ್ಸರ್‌ ಪಾಂಡ್ಯಗೆ ಸಂಕಷ್ಟ ತಂದೊಡ್ಡಿತಾ?

    ಮಹಿ ಚಚ್ಚಿದ ಆ 3 ಸಿಕ್ಸರ್‌ ಪಾಂಡ್ಯಗೆ ಸಂಕಷ್ಟ ತಂದೊಡ್ಡಿತಾ?

    – ಹಾರ್ದಿಕ್‌ ಪಾಂಡ್ಯ ಮುಂದಿರುವ ಸವಾಲುಗಳೇನು?

    ನವದೆಹಲಿ: ಇತ್ತೀಚೆಗೆ ಮುಂಬೈ ಇಂಡಿಯನ್ಸ್‌ ವಿರುದ್ಧ ನಡೆದ ಪಂದ್ಯದಲ್ಲಿ ಸಿಎಸ್‌ಕೆ (MI vs CSK) ಬ್ಯಾಟರ್‌ ಎಂ.ಎಸ್‌ ಧೋನಿ, ಹಾರ್ದಿಕ್‌ ಪಾಂಡ್ಯ (Hardik Pandya) ಅವರ ಬೌಲಿಂಗ್‌ನಲ್ಲಿ ಹ್ಯಾಟ್ರಿಕ್‌ ಸಿಕ್ಸರ್‌ ಸಿಡಿಸಿದ್ದರು. ಆ ಓವರ್‌ ಮುಕ್ತಾಯದ ವೇಳೆಗೆ ಪಾಂಡ್ಯ 26 ರನ್‌ ಬಿಟ್ಟುಕೊಟ್ಟಿದ್ದರು. ಅಲ್ಲದೇ ಮುಂಬೈ ಇಂಡಿಯನ್ಸ್‌ 20 ರನ್‌ಗಳ ಅಂತರದಿಂದಲೂ ಸೋಲುವಂತಾಯ್ತು. ಮುಂಬೈ ಈ ಪಂದ್ಯ ಸೋತ ಬಳಿಕ ಹಾರ್ದಿಕ್‌ ಪಾಂಡ್ಯ ಅವರ ಕಳಪೆ ಬೌಲಿಂಗ್‌ ಬಗ್ಗೆ ಭಾರೀ ಚರ್ಚೆ ಹುಟ್ಟಿಕೊಂಡಿದೆ. ಅಲ್ಲದೇ ಇದು ಅವರ ವಿಶ್ವಕಪ್‌ ಕೆರಿಯರ್‌ ಮೇಲೂ ಪರಿಣಾಮ ಉಂಟುಮಾಡಿದೆ.

    ಮುಂಬರುವ ಟಿ20 ವಿಶ್ವಕಪ್‌ಗೆ (T20 World Cup) ಭಾರತ ತಂಡದಲ್ಲಿ ಸ್ಥಾನ ಗಿಟ್ಟಿಸಲು ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಎದುರು ನೋಡುತ್ತಿದ್ದಾರೆ. ಆದರೆ ಸದ್ಯ ನಡೆಯುತ್ತಿರುವ ಐಪಿಎಲ್‌ನಲ್ಲಿ (IPL 2024) ಪಾಂಡ್ಯ ಅವರ ಬೌಲಿಂಗ್‌ ಪ್ರದರ್ಶನದ ಮೇಲೆ ಅವರ ವಿಶ್ವಕಪ್‌ ಭವಿಷ್ಯ ಅಡಗಿದೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ ಬ್ಯಾಟಿಂಗ್‌ನಲ್ಲಿ ಅಬ್ಬರಿಸುತ್ತಿರುವ ಶಿವಂ ದುಬೆ, ಸ್ಪಿನ್ನರ್‌ ಯಜುವೇಂದ್ರ ಚಹಲ್‌ರನ್ನ ಆಯ್ಕೆ ಸಮಿತಿ ವಿಶ್ವಕಪ್‌ಗೆ ಪರಿಗಣಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

    ಕಳೆದ ವಾರ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ (Rohit Sharma), ಕೋಚ್‌ ರಾಹುಲ್‌ ದ್ರಾವಿಡ್‌ ಹಾಗೂ ಆಯ್ಕೆ ಸಮಿತಿ ಸದಸ್ಯರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಹಾರ್ದಿಕ್‌ ಬಗ್ಗೆಯೂ ಚರ್ಚೆಯಾಗಿದ್ದು, ಅವರು ಐಪಿಎಲ್‌ನಲ್ಲಿ ಉತ್ತಮವಾಗಿ ಬೌಲ್‌ ಮಾಡಿದರಷ್ಟೇ ವಿಶ್ವಕಪ್‌ಗೆ ಆಯ್ಕೆ ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ. ಸದ್ಯ ಐಪಿಎಲ್‌ನಲ್ಲಿ ಆಡಿರುವ 6 ಪಂದ್ಯಗಳ ಪೈಕಿ 4ರಲ್ಲಿ ಹಾರ್ದಿಕ್‌ 11 ಓವರ್‌ ಬೌಲ್‌ ಮಾಡಿದ್ದಾರೆ. ಆದರೆ 12ರ ಎಕಾನಮಿಯಲ್ಲಿ ರನ್‌ ಬಿಟ್ಟುಕೊಟ್ಟಿದ್ದು, ಕೇವಲ 3 ವಿಕೆಟ್‌ ಪಡೆದಿದ್ದಾರೆ. ಇನ್ನುಳಿದ ಪಂದ್ಯಗಳಲ್ಲಿ ಉತ್ತಮ ಬೌಲ್‌ ಮಾಡಿದರೆ ಅವರು ವಿಶ್ವಕಪ್‌ ತಂಡಕ್ಕೆ ಆಯ್ಕೆಯಾಗಬಹುದು ಎನ್ನಲಾಗುತ್ತಿದೆ.

    ಮತ್ತೊಂದೆಡೆ ಸಿಎಸ್‌ಕೆ ತಂಡದ ಪರ ಮಧ್ಯಮ ಕ್ರಮಾಂಕದ ಬ್ಯಾಟರ್‌ ಶಿವಂ ದುಬೆ ಬ್ಯಾಟಿಂಗ್‌ನಲ್ಲಿ ಮಿಂಚುತ್ತಿದ್ದಾರೆ. ಇದರೊಂದಿಗೆ ಪರ್ಪಲ್‌ ಕ್ಯಾಪ್‌ ರೇಸ್‌ನಲ್ಲಿರುವ ಆರ್‌ಆರ್‌ ಆಟಗಾರ ಯಜುವೇಂದ್ರ ಚಾಹಲ್‌ ಅವರ ಹೆಸರೂ ಸಹ ವಿಶ್ವಕಪ್‌ ತಂಡದಲ್ಲಿ ಕೇಳಿಬರುತ್ತಿದೆ. ಇದರಿಂದ ಹಾರ್ದಿಕ್‌ ಪಾಂಡ್ಯ ನಾಯಕತ್ವದ ಜೊತೆಗೆ ತಮ್ಮ ಆಲ್‌ರೌಂಡ್‌ ಪ್ರದರ್ಶನದಲ್ಲಿ ಯಾವ ರೀತಿ ಯಶಸ್ಸು ಕಂಡುಕೊಳ್ಳುತ್ತಾರೆ ಎಂದಬುದನ್ನು ಮುಂದೆ ಕಾದು ನೋಡಬೇಕಿದೆ.

    ಏಕದಿನ ವಿಶ್ವಕಪ್‌ನಿಂದಲೂ ಹೊರಗುಳಿದಿದ್ದ ಪಾಂಡ್ಯ:
    ಕಳೆದ ವರ್ಷ ಭಾರತದ ಆತಿಥ್ಯದಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ (ICC World Cup) ಟೂರ್ನಿಯ 17ನೇ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಸೆಣಸಾಟ ನಡೆಸಿದ್ದವು. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ 9ನೇ ಓವರ್ ನಲ್ಲಿ ಬೌಲಿಂಗ್ ಮಾಡುತ್ತಿದ್ದ ಪಾಂಡ್ಯ 3ನೇ ಎಸೆತ ಬೌಲಿಂಗ್ ಮಾಡಿದಾಗ ಕ್ರೀಸ್‌ನಲ್ಲಿದ್ದ ಲಿಟ್ಟನ್ ದಾಸ್ ಸ್ರೈಟ್‌ಡ್ರೈವ್‌ ಮಾಡಿದರು. ಆಗ ಪಾಂಡ್ಯ ಕಾಲಿನಿಂದ ಚೆಂಡನ್ನು ತಡೆಯಲು ಪ್ರಯತ್ನಿಸಿದಾಗ ಬ್ಯಾಲೆನ್ಸ್ ತಪ್ಪಿ ಕಾಲು ಉಳುಕಿಸಿಕೊಂಡರು. ತಕ್ಷಣವೇ ಫಿಸಿಯೋ ಥೆರಪಿಸ್ಟ್ ಬಂದು ಚಿಕಿತ್ಸೆ ನೀಡಿದರೂ ಮತ್ತೆ ಬೌಲಿಂಗ್ ಮಾಡಲು ಸಾಧ್ಯವಾಗಿಲ್ಲ. ಹಾಗಾಗಿ ಆಟದ ಮಧ್ಯದಲ್ಲೇ ಮೈದಾನ ತೊರೆಯಲು ನಿರ್ಧರಿಸಿದರು. ಬಳಿಕ ರೋಹಿತ್ ಶರ್ಮಾ ಜೊತೆ ಮಾತುಕತೆ ನಡೆದ ಕೊಹ್ಲಿ ಉಳಿದಿದ್ದ ಮೂರು ಎಸೆತಗಳನ್ನು ತಾವೇ ಎಸೆಯುವ ಮೂಲಕ ಬೌಲಿಂಗ್ ಪೂರ್ಣಗೊಳಿಸಿದರು. ಆ ಬಳಿಕ ವೃತ್ತಿಪರ ಕ್ರಿಕೆಟ್‌ನಿಂದ ದೀರ್ಘಕಾಲ ಹೊರಗುಳಿದಿದ್ದರು.