Tag: Municipal Corporation Election

  • ಕಲಬುರಗಿ ಸೇರಿ ಮೂರು ಪಾಲಿಕೆಗಳಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ: ಕಟೀಲ್

    ಕಲಬುರಗಿ ಸೇರಿ ಮೂರು ಪಾಲಿಕೆಗಳಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ: ಕಟೀಲ್

    ಕಲಬುರಗಿ: ಸೆಪ್ಟಂಬರ್ 3ರಂದು ನಡೆಯಲಿರುವ ರಾಜ್ಯದ ಮೂರು ಮಹಾನಗರಪಾಲಿಕೆಗಳ ಚುನಾವಣೆಯಲ್ಲಿ ಆಡಳಿತರೂಢ ನಮ್ಮ ಪಕ್ಷ ಅಧಿಕಾರ ಚುಕ್ಕಾ ಹಿಡಿಯಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ.

    ಕಲಬುರಗಿ, ಬೆಳಗಾವಿ, ಹುಬ್ಬಳಿ-ಧಾರವಾಡ ಈ ಮೂರು ಮಹಾನಗರ ಪಾಲಿಕೆಗಳು ಬಿಜೆಪಿ ತೆಕ್ಕೆಗೆ ಬರಲಿದೆ. ಒಳ್ಳೆಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಮೂಲಕ ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅವರು ಅದರಲ್ಲೂ ಕಲಬುರಗಿಯಲ್ಲಿ ದಕ್ಷಿಣ ಮತ್ತು ಉತ್ತರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪಾಲಿಕೆಯ ಅತೀ ಹೆಚ್ಚು ವಾರ್ಡ್ ಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುವ ಭರವಸೆ ವ್ಯಕ್ತಪಡಿಸಿದರು.

    ಈಗಾಗಲೇ ನಮ್ಮ ಪಕ್ಷವು ಇಂದು ಮೊದಲ ಪಟ್ಟಿ ಬಿಡುಗಡೆ ಮಾಡಲಿದ್ದು, ನಾಳೆ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತದೆ. ರಾಜ್ಯದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಅನುದಾನ ಕೊಟ್ಟಿದೆ. ಹೀಗಾಗಿ ಜನರು ಬಿಜೆಪಿಗೆ ಆಶೀರ್ವಾದ ಮಾಡುತ್ತಾರೆ. ಬೊಮ್ಮಾಯಿ ನೇತೃತ್ವದ ಸರ್ಕಾರ ಅವಧಿ ಪೂರ್ಣ ಮಾಡಲ್ಲ ಎನ್ನುವ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಕಟೀಲ್ ಅವರು, ಸಿದ್ದರಾಮಯ್ಯನವರು ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಇರೋದು ಕನ್ಫರ್ಮ್ ಆಗಿದೆ. ಹಾಗಾಗಿ ಸಿದ್ದರಾಮಯ್ಯ ಜೋತಿಷ್ಯ ಹೇಳೋದಕ್ಕೆ ಮುಂದಾಗಿದ್ದಾರೆ ಎಂದು ವ್ಯಂಗ್ಯ ಮಾಡಿದರು. ಇದನ್ನೂ ಓದಿ: ನಮ್ಮ ಸೈನಿಕರ ಮೇಲೆ ದಾಳಿಯಾದ ಮರು ಕ್ಷಣವೇ ಪ್ರತಿದಾಳಿ – ಅಮೆರಿಕ ಅಧ್ಯಕ್ಷ ಬೈಡನ್ ಎಚ್ಚರಿಕೆ

    ಇತ್ತ ಈಗಾಗಲೇ ಅತೃಪ್ತ ಬಿಜೆಪಿ ಕಾರ್ಯಕರ್ತರು ಪಕ್ಷ ತೊರೆಯುತ್ತಿದ್ದಾರೆ. ಇಂದು ಬಿಜೆಪಿ ಮಾಜಿ ಪಾಲಿಕೆ ಸದಸ್ಯ ಬಸವರಾಜ ನಾಶಿ ಅವರು ಕಾಂಗ್ರೆಸ್ ಸೇರುವ ಮೂಲಕ ಪಕ್ಷಾಂತರ ಪರ್ವಕ್ಕೆ ಚಾಲನೆ ನೀಡಿದಂತಾಗಿದೆ. ಟಿಕೆಟ್ ಸಿಗದ ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿರುವ ಬಗ್ಗೆ ಸುಳಿವು ಲಭ್ಯವಾಗಿದೆ. ಇದನ್ನೂ ಓದಿ: ಇಡಿ ಬುಲಾವ್ -ದೆಹಲಿಗೆ ತೆರಳಿದ ಜಮೀರ್ ಅಹ್ಮದ್ ಖಾನ್!

     

  • ಮಂಗಳೂರು ಕಾಂಗ್ರೆಸ್ಸಿನಲ್ಲಿ ಭಿನ್ನಮತ ಸ್ಫೋಟ- ಪಾಲಿಕೆ ಟಿಕೆಟ್‍ಗಾಗಿ ಮಾರಾಮಾರಿ

    ಮಂಗಳೂರು ಕಾಂಗ್ರೆಸ್ಸಿನಲ್ಲಿ ಭಿನ್ನಮತ ಸ್ಫೋಟ- ಪಾಲಿಕೆ ಟಿಕೆಟ್‍ಗಾಗಿ ಮಾರಾಮಾರಿ

    – ರಮಾನಾಥ ರೈ, ಖಾದರ್ ಮುಂದೆಯೇ ಡಿಶುಂ ಡಿಶುಂ
    – ಮೊಯಿದ್ದೀನ್ ಬಾವಾ ಮೇಲೂ ಹಲ್ಲೆ
    – ಬಿಜೆಪಿ ಸೇರಿದ ಕಾಂಗ್ರೆಸ್ ಕಾರ್ಪೊರೇಟರ್

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ಸಿನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಟಿಕೆಟ್ ವಿಚಾರಕ್ಕೆ ಕಾರ್ಯಕರ್ತರ ಮಧ್ಯೆ ಮಾರಾಮಾರಿಯಾಗಿದೆ.

    ಮಂಗಳೂರು ಪಾಲಿಕೆ ಚುನಾವಣೆಯು ನವೆಂವರ್ 12ರಂದು ನಡೆಯಲಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡರು ನಗರದ ಖಾಸಗಿ ಹೋಟೆಲ್‍ನಲ್ಲಿ ಬುಧವಾರ ರಾತ್ರಿ ಸುದ್ದಿಗೋಷ್ಠಿ ನಡೆಸಿ ಅಧಿಕೃತ ಅಭ್ಯರ್ಥಿಗಳ ಹೆಸರು ಘೋಷಿಸಿದರು. ಈ ವಿಚಾರವಾಗಿ ನಗರದಲ್ಲಿ ಹೈಡ್ರಾಮಾ ನಡೆದಿದೆ.

    ಮಾಜಿ ಮೇಯರ್ ಗುಲ್ಜಾರ್ ಬಾನು ಈ ಹಿಂದೆ ಸುರತ್ಕಲ್ ವಾರ್ಡ್ ನಿಂದ ಸ್ಪರ್ಧಿಸಿ ಸೋತಿದ್ದರು. ಆದರೂ ಈ ಬಾರಿ ಟಿಕೆಟ್ ನೀಡುವುದಾಗಿ ಮಾಜಿ ಶಾಸಕ ಮೊಯಿದ್ದೀನ್ ಬಾವ ಭರವಸೆ ಕೊಟ್ಟಿದ್ದರು. ಬುಧವಾರ ಬಿಡುಗಡೆಯಾದ ಅಭ್ಯರ್ಥಿಗಳ ಪಟ್ಟಿಯಲ್ಲಿ ಸುರತ್ಕಲ್ ವಾರ್ಡ್ ಟಿಕೆಟ್ ಬೇರೆಯವರ ಪಾಲಾಗಿದ್ದು ಗುಲ್ಜಾರ್ ಬಾನು ಅಸಮಾಧಾನಕ್ಕೆ ಕಾರಣವಾಯಿತು.

    ಸುದ್ದಿಗೋಷ್ಠಿ ವೇಳೆ ಗಲಾಟೆ ಆರಂಭವಾಗಿದ್ದರಿಂದ ಮಾಜಿ ಶಾಸಕ ಮೊದಿನ್ ಬಾವಾ ಸಭಾಂಗಣದಿಂದ ಹೊರಗೆ ಬಂದರು. ಆಗ ಪಾಲಿಕೆ ಟಿಕೆಟ್ ಕೈತಪ್ಪಿದ್ದಕ್ಕೆ ಗುಲ್ಜಾರ್ ಬಾನು, ಮೊದಿನ್ ಬಾವಾ ವಿರುದ್ಧ ಕಿಡಿಕಾರಿದರು. ಇದರಿಂದಾಗಿ ನಾಯಕರ ಬೆಂಬಲಿಗರ ಮಧ್ಯೆ ಮಾತಿನ ಚಕಮಕಿ ಉಂಟಾಗಿ, ಮಾತಿಗೆ ಮಾತು ಬೆಳೆದು ಪರಸ್ಪರ ಕೈ ಕೈ ಮಿಲಾಯಿಸಿದ್ದಾರೆ.

    ಈ ಮಧ್ಯೆ ಮಾಜಿ ಮೇಯರ್ ಗುಲ್ಜಾರ್ ಬಾನು ಪುತ್ರ ಅಜೀಂ, ಮೊಯ್ದಿನ್ ಬಾವಾ ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆ. ಇದರಿಂದರಾಗಿ ಗಲಾಟೆ ಮತ್ತಷ್ಟು ಜೋರಾಯಿತು. ತಕ್ಷಣವೇ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮಧ್ಯ ಪ್ರವೇಶಿಸಿ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋಗದಂತೆ ತಡೆದರು.

    ಮಾಜಿ ಸಚಿವರಾದ ರಮಾನಾಥ ರೈ, ಯು.ಟಿ.ಖಾದರ್, ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಉಸ್ತುವಾರಿ ವಿ.ಆರ್.ಸುದರ್ಶನ್ ಇದ್ದಾಗಲೇ ಘಟನೆ ನಡೆದಿದೆ. ಇತ್ತ ಈ ಬಾರಿ ಟಿಕೆಟ್ ವಂಚಿತರಾದ ಕಾಂಗ್ರೆಸ್ಸಿನ ಹಾಲಿ ಕಾರ್ಪೊರೇಟ್ ಆಶಾ ಡಿಸಿಲ್ವಾ ಬಿಜೆಪಿ ಸೇರಿದ್ದಾರೆ. ಬಿಜೆಪಿಯಿಂದ ವೆಲೆನ್ಸಿಯಾ ವಾರ್ಡಿನಲ್ಲಿ ಆಶಾ ಡಿಸಿಲ್ವಾಗೆ ಟಿಕೆಟ್ ಕನ್ಫರ್ಮ್ ಆಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇದೇ ವೇಳೆ ಮಾಜಿ ಶಾಸಕ ಜೆ.ಆರ್.ಲೋಬೋ ಅರಿಂದಾಗಿ ತಮ್ಮವರಿಗೆ ಟಿಕೆಟ್ ತಪ್ಪಿದೆಯೆಂದು ಕಾಂಗ್ರೆಸ್ಸಿನ ಕೆಲವು ಕಾರ್ಯಕರ್ತರು ಪಕ್ಷಕ್ಕೆ ರಾಜೀನಾಮೆ ನೀಡಿರುವ ಪ್ರಸಂಗವೂ ರಾತ್ರಿ ನಡೆಯಿತು.

  • ಎಂ.ಬಿ.ಪಾಟೀಲ್ ತಂತ್ರಕ್ಕೆ ತಲೆ ಕೆಳಗಾಯಿತು ಶಾಸಕ ಯತ್ನಾಳ್ ಯೋಜನೆ

    ಎಂ.ಬಿ.ಪಾಟೀಲ್ ತಂತ್ರಕ್ಕೆ ತಲೆ ಕೆಳಗಾಯಿತು ಶಾಸಕ ಯತ್ನಾಳ್ ಯೋಜನೆ

    ವಿಜಯಪುರ: ಉಪಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿಜೆಪಿ ಬಂಡಾಯ ಅಭ್ಯರ್ಥಿಗೆ ಬೆಂಬಲ ನೀಡುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯೋಜನೆಯನ್ನು ಮಾಜಿ ಸಚಿವ ಎಂ.ಬಿ.ಪಾಟೀಲ್ ತಲೆ ಕೆಳಗಾಗಿಸಿದ್ದಾರೆ.

    ಇಂದು ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಇದರಲ್ಲಿ ಮೇಯರ್ ಸ್ಥಾನ ಕಾಂಗ್ರೆಸ್ ಅಭ್ಯರ್ಥಿ ಶ್ರೀದೇವಿ ಲೋಗಾಂವಿ ಅವರ ಪಾಲಾಗಿದೆ. ಇತ್ತ ಉಪಮೇಯರ್ ಸ್ಥಾನಕ್ಕೆ ಬಿಜೆಪಿ ಬಂಡಾಯ ಅಭ್ಯರ್ಥಿ ಗೋಪಾಲ್ ಘಟಕಾಂಬಳೆ ಸ್ಪರ್ಧಿಸಿದ್ದರು. ಹೀಗಾಗಿ ಎಂ.ಬಿ.ಪಾಟೀಲ್ ಸಲಹೆಯಂತೆ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಬಿಜೆಪಿ ಬಂಡಾಯ ಅಭ್ಯರ್ಥಿಗೆ ಬೆಂಬಲ ನೀಡಿ ಆಯ್ಕೆ ಮಾಡಿದ್ದಾರೆ.

    ಬಿಜೆಪಿ ಬಂಡಾಯ ಅಭ್ಯರ್ಥಿಯ ಗೆಲುವಿನಿಂದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳಗೆ ತೀವ್ರ ಮುಖಭಂಗ ಉಂಟಾಗಿದೆ. ಮೇಯರ್ ಶ್ರೀದೇವಿ ಲೋಗಾಂವಿ 20 ಮತ ಗಳಿಸಿ ಜಯ ಸಾಧಿಸಿದ್ದರೇ, ಗೋಪಾಲ್ ಘಟಕಾಂಬಳೆ 26 ಮತಗಳ ಮೂಲಕ ಗೆಲುವಿನ ನಗೆ ಬೀರಿದರು.

    ಇತ್ತ ಬಿಜೆಪಿ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಸಂತೋಷ್ ಚವ್ಹಾಣ್ 4 ಮತಗಳ ಅಂತರದಿಂದ ಸೋಲಬೇಕಾಯಿತು. ಮೇಯರ್-ಉಪಮೇಯರ್ ಆಯ್ಕೆಯಲ್ಲಿ ನಗರ ಶಾಸಕ ಬಸನಗೌಡ ಪಾಟೀಲ್, ನಾಗಠಾಣ ಶಾಸಕ ದೇವಾನಂದ ಚವ್ಹಾಣ್, ತಲಾ ಒಬ್ಬರಂತೆ ಸಂಸದ ಹಾಗೂ ವಿಧಾನ ಪರಿಷತ್ ಸದಸ್ಯರು ಮತ ಚಲಾಯಿಸಬಹುದಾಗಿದೆ. ಆದರೆ ಸಂಸದ ರಮೇಶ ಜಿಗಜಿಣಗಿ, ವಿಧಾನ ಪರಿಷತ್ ಸದಸ್ಯ ಅರುಣ ಶಾಪೂರ್, ಪಕ್ಷೇತರ ಕಾರ್ಪೊರೇಟರ್ ರವಿ ಲೋಣಿ ಚುನಾವಣೆಯಿಂದ ದೂರ ಉಳಿದಿದ್ದರು. ಇದರ ಲಾಭವನ್ನು ಕಾಂಗ್ರೆಸ್ ಪಡೆದುಕೊಂಡಿದೆ ಎನ್ನಲಾಗಿದೆ. ಬೆಳಗಾವಿಯ ಪ್ರಾದೇಶಿಕ ಆಯುಕ್ತರಾದ ಪಿ.ಎ.ಮೇಘನ್ನವರ್ ಚುನಾವಣೆಯನ್ನು ನಡೆಸಿಕೊಟ್ಟರು.