Tag: Municipal Corporation of Delhi

  • ಐದನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಓರ್ವ ಬಂಧನ

    ಐದನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಓರ್ವ ಬಂಧನ

    ನವದೆಹಲಿ: ಮುನ್ಸಿಪಲ್ ಕಾರ್ಪೊರೇಷನ್ (Municipal Corporation of Delhi) ನಡೆಸುತ್ತಿದ್ದ ಶಾಲೆಯ (School) ಐದನೇ ತರಗತಿ ವಿದ್ಯಾರ್ಥಿನಿಯ ಮೇಲೆ ಶಾಲಾ ಸಿಬ್ಬಂದಿಯಿಂದ ಸಾಮೂಹಿಕ ಅತ್ಯಾಚಾರ (Gang-rape) ನಡೆದ ಘಟನೆ ದೆಹಲಿಯಲ್ಲಿ ನಡೆದಿದೆ.

    ಆರೋಪಿ ಶಾಲಾ ಸಹಾಯಕ ಅಜಯ್‍ನನ್ನು ಪೊಲೀಸರು ಬಂಧಿಸಿದ್ದಾರೆ. ಹಾಗೂ ಆತನ ಮೂವರು ಸಹಚರರ ಬಂಧನಕ್ಕೆ ಬಲೆ ಬೀಸಿದ್ದಾರೆ. ಘಟನೆ ಮಾ.14 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ನಂತರ ಬಾಲಕಿ ಶಾಲೆಗೆ ಹೋಗುವುದನ್ನು ನಿಲ್ಲಿಸಿದ್ದಳು. ಪರೀಕ್ಷೆಗೆ (exams) ಸಹ ಹಾಜರಾಗಿರಲಿಲ್ಲ. ಇದನ್ನೂ ಓದಿ: ಇಂದಿನಿಂದ ರಂಜಾನ್ ಉಪವಾಸ ಆಚರಣೆ – ಪ್ರಧಾನಿ ಮೋದಿ ವಿಶ್

    ಶಿಕ್ಷಕರು ಆಕೆಯ ಸಹೋದರನನ್ನು ಸಂಪರ್ಕಿಸಿ ಅಂತಿಮ ಪರೀಕ್ಷೆಗೆ ಹಾಜರಾಗದ ಬಗ್ಗೆ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಬಗ್ಗೆ ಆಕೆಯ ಸಹೋದರ ಶಿಕ್ಷಕರಿಗೆ ಮಾಹಿತಿ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

     

    ತಕ್ಷಣದ ಕ್ರಮ ಕೈಗೊಳ್ಳದಿರುವ ಕಾರಣ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ತರಗತಿ ಶಿಕ್ಷಕರಿಗೆ ಶೋಕಾಸ್ ನೋಟಿಸ್ (Notice) ಜಾರಿ ಮಾಡಲಾಗಿದೆ.

    ಉತ್ತರ ಪ್ರದೇಶದ (Uttar Pradesh) ಜೌನ್‍ಪುರ  (Jaunpur) ಮೂಲದ ಆರೋಪಿ ಕಳೆದ ಹತ್ತು ವರ್ಷಗಳಿಂದ ಮುನ್ಸಿಪಲ್ ಕಾರ್ಪೊರೇಷನ್ ಶಾಲೆಯಲ್ಲಿ ಸಹಾಯಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂದು ಪೊಲೀಸರು (Police) ತಿಳಿಸಿದ್ದಾರೆ.

    ಆರೋಪಿಗಳು ಬಾಲಕಿಯನ್ನು ಶಾಲೆಯಿಂದ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಮಾದಕ ವಸ್ತು ನೀಡಿ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಭದ್ರತಾ ಕಾರಣಕ್ಕೆ TikTok ಬ್ಯಾನ್ ಮಾಡಿದ ಬ್ರಿಟಿಷ್ ಸಂಸತ್ತು

  • ಕಾಂಗ್ರೆಸ್‍ನಂತೆ ಅಳಬೇಡಿ, ಧೈರ್ಯವಿದ್ರೆ ನಮ್ಮೊಂದಿಗೆ ಹೋರಾಡಿ: ಬಿಜೆಪಿಗೆ ದೆಹಲಿ ಡಿಸಿಎಂ ಸವಾಲು

    ಕಾಂಗ್ರೆಸ್‍ನಂತೆ ಅಳಬೇಡಿ, ಧೈರ್ಯವಿದ್ರೆ ನಮ್ಮೊಂದಿಗೆ ಹೋರಾಡಿ: ಬಿಜೆಪಿಗೆ ದೆಹಲಿ ಡಿಸಿಎಂ ಸವಾಲು

    ನವದೆಹಲಿ: ಕಾಂಗ್ರೆಸ್‍ನಂತೆಯೇ ಅಳುವುದನ್ನು ನಿಲ್ಲಿಸಿ. ನಿಮಗೆ ಧೈರ್ಯವಿದ್ದರೇ ಓಡಿಹೋಗದೆ ನಮ್ಮೊಂದಿಗೆ ಹೋರಾಡಿ ಎಂದು ಬಿಜೆಪಿಗೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸವಾಲು ಹಾಕಿದ್ದಾರೆ.

    ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ (ಎಂಸಿಡಿ) ಚುನಾವಣೆಯ ವಿಳಂಬದ ಬಗ್ಗೆ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಅವರು, ಎಂಸಿಡಿ ಚುನಾವಣೆಗೆ ಸ್ಪರ್ಧಿಸಿ, ನಮ್ಮೊಂದಿಗೆ ಹೋರಾಡಿ. ನೀವು 10 ಸ್ಥಾನಗಳನ್ನು ಗಳಿಸಲು ಸಾಧ್ಯವಾದರೆ ಅದು ನಿಮ್ಮ ದೊಡ್ಡ ಸಾಧನೆಯಾಗಲಿದೆ ಎಂದು ವ್ಯಂಗ್ಯವಾಡಿದ್ದಾರೆ.

    ಇದಕ್ಕೂ ಮುನ್ನ ಮಾತನಾಡಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ದೆಹಲಿಯಲ್ಲಿ ಮುನ್ಸಿಪಲ್ ಕಾರ್ಪೊರೇಷನ್‌ ಚುನಾವಣೆಗಳನ್ನು ಮುಂದೂಡಿದ ಬಗ್ಗೆ ನಿರಾಶೆ ವ್ಯಕ್ತಪಡಿಸಿದರು. ಕೇಂದ್ರವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‍ಗೆ ಹೀನಾಯ ಸೋಲು – ಬಿಜೆಪಿಗಿಂತಲೂ, ಕಾಂಗ್ರೆಸ್‍ಗೆ ಡೇಂಜರ್ ಆ ಪಕ್ಷ!

    ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು, ದೆಹಲಿ ಸರ್ಕಾರವು ಎಂಸಿಡಿ ಉದ್ಯೋಗಿಗಳಿಗೆ 13,000 ಕೋಟಿ ರೂ.ಗಳನ್ನು ವಂಚಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿತ್ತು. ಇದನ್ನೂ ಓದಿ: ರೈತರ ಬೇಡಿಕೆ ಈಡೇರಿಸದಿದ್ದರೆ ಆಗುತ್ತೆ ಹಿಂಸಾಚಾರ: ಮೇಘಾಲಯ ರಾಜ್ಯಪಾಲ ಎಚ್ಚರಿಕೆ

    ರಾಜ್ಯ ಚುನಾವಣಾ ಆಯುಕ್ತ ಎಸ್.ಕೆ. ಶ್ರೀವಾಸ್ತವ ಅವರು, ಕೇಂದ್ರ ಸರ್ಕಾರವು ಚುನಾವಣಾ ಆಯೋಗವು ಕಾನೂನುಬದ್ಧವಾಗಿ ಪರಿಶೀಲಿಸಬೇಕಾದ ಕೆಲವು ವಿಷಯಗಳನ್ನು ಪ್ರಸ್ತಾಪಿಸಿದ ನಂತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ (ಎಂಸಿಡಿ) ಚುನಾವಣಾ ದಿನಾಂಕಗಳ ಘೋಷಣೆಯನ್ನು ಕೇಂದ್ರವು ಮುಂದೂಡಿದೆ ಎಂದು ಮಾಹಿತಿ ನೀಡಿದ್ದರು.