Tag: Municipal Council Member

  • ಹಬ್ಬಕ್ಕೆ ಬಟ್ಟೆ ಕೊಂಡೊಯ್ಯುತ್ತಿದ್ದ ಪುರಸಭೆ ಸದಸ್ಯನ ತಡೆದು ಮಾರಕಾಸ್ತ್ರದಿಂದ ಹಲ್ಲೆ

    ಹಬ್ಬಕ್ಕೆ ಬಟ್ಟೆ ಕೊಂಡೊಯ್ಯುತ್ತಿದ್ದ ಪುರಸಭೆ ಸದಸ್ಯನ ತಡೆದು ಮಾರಕಾಸ್ತ್ರದಿಂದ ಹಲ್ಲೆ

    ಬಳ್ಳಾರಿ: ದೀಪಾವಳಿ ಹಬ್ಬಕ್ಕೆ ಬಟ್ಟೆ ಕೊಂಡೊಯ್ಯುತ್ತಿದ್ದ ಪುರಸಭೆ ಸದಸ್ಯನ (Municipal Council Member) ಬೈಕ್ ತಡೆದು ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ನಗರದ (Ballari) ಎಚ್‍ಎಲ್‍ಸಿ ಕಾಲುವೆ ಬಳಿ ನಡೆದಿದೆ.

    ನಾಗರಾಜ್ ನಾಯ್ಕ (32) ಹಲ್ಲೆಗೊಳಗಾದ ಪುರಸಭೆ ಸದಸ್ಯ. ಶಿವಕುಮಾರ್ ಎಂಬಾತ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ. ಒಂದು ವರ್ಷದಿಂದ ಮನೆ ಮುಂದೆ ಇರುವ ಚರಂಡಿ ವಿಚಾರವಾಗಿ ಇಬ್ಬರೂ ಗಲಾಟೆ ಮಾಡಿಕೊಂಡಿದ್ದರು. ಅದೇ ವಿಚಾರವಾಗಿ ಇಬ್ಬರಿಗೂ ಮತ್ತೆ ಗಲಾಟೆಯಾಗಿ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಹೋಟೆಲಿನಲ್ಲಿ‌ ನಾಲ್ವರು ಕಾಮುಕರಿಂದ ಗ್ಯಾಂಗ್‌ರೇಪ್‌ – ಸಹಾಯಕ್ಕಾಗಿ ಕಣ್ಣೀರಿಟ್ಟ ಸಂತ್ರಸ್ತೆ, ಐವರು ಅರೆಸ್ಟ್

    ನಾಗರಾಜ್‍ನ ತಲೆ, ಬೆನ್ನು ಹಾಗೂ ಕೈಗಳಿಗೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ಗಾಯಗೊಂಡ ಆತನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ವೇಳೆ ನಾಗರಾಜ್‍ನ ಸ್ನೇಹಿತ ಹಾಗೂ ಗ್ರಾಮಸ್ಥರು ತಪ್ಪಿಸಲು ಯತ್ನಿಸಿದ್ದಾರೆ. ಈ ವೇಳೆ ಆರೋಪಿ ಗ್ರಾಮಸ್ಥರ ಕಡೆಗೂ ಮಚ್ಚು ಬೀಸಿದ್ದಾನೆ. ಇದರಿಂದ ಹಲ್ಲೆ ತಡೆಯುವಲ್ಲಿ ಗ್ರಾಮಸ್ಥರು ವಿಫಲರಾಗಿದ್ದಾರೆ.

    ಈ ಸಂಬಂಧ ತೋರಣಗಲ್ಲು ಪೊಲೀಸ್‌ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಫೋಟೋ ಶೂಟ್ ವೇಳೆ ಕಿರಿಕ್ – ಯುವಕನ ಇರಿದು ಕೊಂದ ಕಿಡಿಗೇಡಿಗಳು

  • ಕಾಫಿನಾಡ ನಗರಸಭೆ ಅಧ್ಯಕ್ಷ, ಆಯುಕ್ತರ ಮೇಲೆ ಕೇಸ್ ದಾಖಲು

    ಕಾಫಿನಾಡ ನಗರಸಭೆ ಅಧ್ಯಕ್ಷ, ಆಯುಕ್ತರ ಮೇಲೆ ಕೇಸ್ ದಾಖಲು

    ಚಿಕ್ಕಮಗಳೂರು: ನಗರಸಭೆ ಸದಸ್ಯರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಹಿನ್ನೆಲೆ ನಗರಸಭೆ ಅಧ್ಯಕ್ಷರು ಹಾಗೂ ಆಯುಕ್ತರ ಮೇಲೆ ಪ್ರಕರಣ ದಾಖಲಾಗಿದೆ.

    ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಹಾಗೂ ಆಯುಕ್ತ ಬಸವರಾಜ್ ಮೇಲೆ ದೂರು ದಾಖಲಿಸಲಾಗಿದೆ. ನಗರಸಭೆ ಸದಸ್ಯ ಗೋಪಿ ಅವರನ್ನು ಜಿಲ್ಲೆಯ ನಗರಸಭೆಯ ಅಧಿಕೃತ ವಾಟ್ಸಾಪ್ ಗ್ರೂಪಿನಿಂದ ತೆಗೆದು ಹಾಕಲಾಗಿತ್ತು. ಆ ವಿಚಾರದ ಬಗ್ಗೆ ಹಾಗೂ ತಮ್ಮ ವಾರ್ಡಿನ ಕೆಲಸದ ನಿಮಿತ್ತ ಅಧ್ಯಕ್ಷರ ಬಳಿ ಚರ್ಚಿಸಲು ಹೋಗಿದ್ದರು. ಈ ವೇಳೆ ನಗರಸಭೆ ಆಯುಕ್ತ ಬಸವರಾಜ್ ಕೂಡ ಅಲ್ಲೇ ಇದ್ದರು. ಇದನ್ನೂ ಓದಿ: ಗೋಮಾಂಸವನ್ನು ಹಿಂದೂಗಳು, ಕ್ರಿಶ್ಚಿಯನ್ ಕೂಡ ತಿನ್ನುತ್ತಾರೆ: ಸಿದ್ದರಾಮಯ್ಯ

    ಈ ವೇಳೆ ಅಧ್ಯಕ್ಷರು ಗೋಪಿ ಅವರಿಗೆ ಏನು ಮಾಡಿಕೊಳ್ಳುತ್ತೀಯಾ ಮಾಡಿಕೋ ಎಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಆಗ ಅಲ್ಲೇ ಇದ್ದ ಆಯುಕ್ತ ಬಸವರಾಜ್ ಕೂಡಾ ನೀನು ಸಿಎಂಸಿ ಗ್ರೂಪಿನಲ್ಲಿ ಇರಲು ಲಾಯಕ್ಕಿಲ್ಲ. ಅದಕ್ಕೆ ತೆಗೆದು ಹಾಕಿದ್ದೇನೆ. ನಿನ್ನ ಕೈಯಲ್ಲಿ ಏನು ಮಾಡಲು ಸಾಧ್ಯ. ಏನು ಬೇಕಾದರು ಮಾಡಿಕೋ ಎಂದು ಅವರೂ ಕೂಡ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಇದನ್ನೂ ಓದಿ: ಮದುವೆ ದಿಬ್ಬಣದಲ್ಲಿ ಟ್ರ್ಯಾಕ್ಟರ್ ಚಾಲಕನಾದ ಶಾಸಕ ರೇಣುಕಾಚಾರ್ಯ

    POLICE JEEP

    ನಗರಸಭೆ ಸದಸ್ಯರ ದೂರಿನ ಅನ್ವಯ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಅಧ್ಯಕ್ಷ ವೇಣು ಹಾಗೂ ಆಯುಕ್ತ ಬಸವರಾಜ್ ವಿರುದ್ಧ ಕಲಂ 504, (ಉದ್ದೇಶಪೂರ್ವಕ ಅವಮಾನ) 506 (ವಂಚನೆ)ರ ಅಡಿ ಪ್ರಕರಣ ದಾಖಲಾಗಿದೆ.

  • ಮದ್ಯದಂಗಡಿ ಕಳವು ಪ್ರಕರಣದಲ್ಲಿ ಮಾಲೀಕನೇ ಕಳ್ಳ!

    ಮದ್ಯದಂಗಡಿ ಕಳವು ಪ್ರಕರಣದಲ್ಲಿ ಮಾಲೀಕನೇ ಕಳ್ಳ!

    -ನಗರಸಭೆ ಸದಸ್ಯ ಸೇರಿ 4 ಮಂದಿ ಬಂಧನ

    ಚಿಕ್ಕಬಳ್ಳಾಪುರ: ನಗರ ಹೊರವಲಯದ ಗೋಲ್ಡನ್ ಬಾರಿನಲ್ಲಿ ನಡೆದಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾರ್ ಮಾಲೀಕ ಹಾಗೂ ಅತನ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ.

    ಏಪ್ರಿಲ್ 30ರ ರಾತ್ರಿ ನಗರ ಹೊರವಲಯದ ಗೋಲ್ಡನ್ ಬಾರಿನ ಸಿಸಿಟಿವಿ ಒಡೆದು ಹಾಕಿ, ಬಾರಿನ ಹಿಂಭಾಗದ ಗೋಡೆಗೆ ಕಿಂಡಿ ಕೊರೆದು ಮದ್ಯ ಕಳವು ಮಾಡಲಾಗಿತ್ತು. ಈ ಸಂಬಂಧ ಮೇ 1ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರಿಗೆ ಬಾರ್ ಮಾಲೀಕ, ನಗರಸಭೆ ಸದಸ್ಯ ದೀಪಕ್ ಹಾಗೂ ಆತನ ಸಹಚರರೇ ಕಳ್ಳತನದ ರೂವಾರಿಗಳು ಎಂಬ ಅಂಶ ಬೆಳಕಿಗೆ ಬಂದಿದೆ.

    ಲಾಕ್‍ಡೌನ್ ಸಮಯದಲ್ಲಿ ಮೂಲ ಬೆಲೆಗಿಂತ ಹತ್ತು ಪಟ್ಟು ಹೆಚ್ಚಳಕ್ಕೆ ಅಕ್ರಮವಾಗಿ ಮದ್ಯ ಮಾರಾಟ ಮಾಡಿ ಹಣ ಗಳಿಸಲು ಮಾಲೀಕ, ಆತನ ಸಹಚರರು ಸಂಚು ರೂಪಿಸಿದ್ದರು. ಇದರಂತೆ ಬಾರ್ ಗೋಡೆಗೆ ಕಿಂಡಿ ಕೊರೆದು ಮದ್ಯ ಕಳವು ಮಾಡಿದ್ದರು. ತದನಂತರ ತಮ್ಮ ಬಾರ್ ಕಳ್ಳತನ ಆಗಿದೆ ಎಂದು ಕಥೆ ಕಟ್ಟಿ ಪೊಲೀಸರಿಗೆ ದೂರು ನೀಡಿದ್ದರು.

    ಪೊಲೀಸರು ಹಾಗೂ ಅಬಕಾರಿ ಇಲಾಖಾಧಿಕಾರಿಗಳಿಗೆ ಮಂಕು ಬೂದಿ ಎರಚಲು ಹೋದ ಮಾಲೀಕ ಈಗ ಜೈಲು ಸೇರುವಂತಾಗಿದೆ. ಲಾಕ್‍ಡೌನ್ ವೇಳೆ ಜಿಲ್ಲೆಯ 4 ಕಡೆ ಸಹ ಮದ್ಯದಂಗಡಿಗಳ ಕಳವು ಪ್ರಕರಣಗಳು ನಡೆದಿದೆ. ಈ ಪ್ರಕರಣ ಇದೀಗ ಬಾರ್ ಮಾಲೀಕರ ಮೇಲೆಯೇ ಅನುಮಾನ ಪಡುವಂತೆ ಮಾಡಿದೆ. ಪ್ರಕರಣಕ್ಕೆ ಸಂಬಧಿಸಿದಂತೆ ಬಂಧಿತರಿಂದ 07 ಕ್ರೇಟ್ ಮದ್ಯ, ನಗದು ಸೇರಿದಂತೆ ಕೃತ್ಯಕ್ಕೆ ಬಳಸಿದ್ದ ಆಟೋ, ಬೈಕ್ ವಶಕ್ಕೆ ಪಡೆಯಲಾಗಿದೆ.

  • ಅಕ್ರಮ ಮದ್ಯ ಮಾರಾಟ- ನಗರ ಸಭೆ ಜೆಡಿಎಸ್ ಸದಸ್ಯನ ಬಂಧನ

    ಅಕ್ರಮ ಮದ್ಯ ಮಾರಾಟ- ನಗರ ಸಭೆ ಜೆಡಿಎಸ್ ಸದಸ್ಯನ ಬಂಧನ

    ಮಂಡ್ಯ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಂಡ್ಯದ ನಗರಸಭೆ ಜೆಡಿಎಸ್ ಸದಸ್ಯ ಪೊಲೀಸ ಅತಿಥಿಯಾಗಿದ್ದು, ನಗರದ 12ನೇ ವಾರ್ಡ್‍ನ ನಗರ ಸಭೆಯ ಜೆಡಿಎಸ್ ಸದಸ್ಯ ಭರತೇಶ್ ಬಂಧಿತ ಆರೋಪಿಯಾಗಿದ್ದಾನೆ.

    ಮಂಡ್ಯ ತಾಲೂಕಿನ ಕೊಮ್ಮೇರಹಳ್ಳಿ ಗ್ರಾಮದ ಬಳಿ ಭರತೇಶ್ ಅಕ್ರಮ ಮದ್ಯ ಮಾರಾಟದ ಜೊತೆಗೆ ಜೂಜಾಟ ನಡೆಸುತ್ತಿದ್ದ ಎಂಬ ದೂರುಗಳು ಹಲವು ದಿನಗಳಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬರುತ್ತಿದ್ದವು. ಈ ಹಿನ್ನೆಲೆಯಲ್ಲಿ ಇಂದು ಎಎಸ್‍ಪಿ ಕೆ.ಪರಶುರಾಮ್ ಅವರ ಸೂಚನೆ ಮೇರಗೆ ಪೊಲೀಸರು ಕೊಮ್ಮೇರಹಳ್ಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

    ಪೊಲೀಸ್ ಪರಿಶೀಲನೆ ವೇಳೆ ಭರತೇಶ್ ಅಕ್ರಮ ಮದ್ಯ ಮಾರಟ ಮಾಡುತ್ತಿದ್ದು ಕಂಡುಬಂದಿದೆ. ಸ್ಥಳದಲ್ಲೇ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಸದ್ಯ ಭರತೇಶ್‍ನನ್ನು ನ್ಯಾಯಾಂಗ ವಶಕ್ಕೆ ನೀಡಿದ್ದಾರೆ. ಈ ಬಗ್ಗೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಉಡುಪಿ ಬಿಜೆಪಿ ಮುಖಂಡನಿಂದ ನಗರಸಭೆ ಅಧಿಕಾರಿಗೆ ಗೂಸಾ

    ಉಡುಪಿ ಬಿಜೆಪಿ ಮುಖಂಡನಿಂದ ನಗರಸಭೆ ಅಧಿಕಾರಿಗೆ ಗೂಸಾ

    ಉಡುಪಿ: ಬಿಜೆಪಿ ನಗರಸಭೆ ಸದಸ್ಯ ಯೋಗೀಶ್ ಸಾಲ್ಯಾನ್, ಕಿರಿಯ ಆರೋಗ್ಯ ನಿರೀಕ್ಷಕನ ಮೇಲೆ ಹಲ್ಲೆ ಮಾಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

    ನಗರಸಭೆ ಕಚೇರಿಯೊಳಗೇ ಈ ಘಟನೆ ನಡೆದಿದ್ದು, ಆರೋಗ್ಯ ನಿರೀಕ್ಷಕರ ಮುಖ, ಕಣ್ಣಿಗೆ ತೀವ್ರ ಗಾಯಗಳಾಗಿವೆ. ಹಲ್ಲೆಗೊಳಗಾದ ಆರೋಗ್ಯ ನಿರೀಕ್ಷರನ್ನು ಉಡುಪಿಯ ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ನಗರಸಭೆಯ ವಡಭಾಂಡೇಶ್ವರ ವಾರ್ಡ್ ನಲ್ಲಿ ನಿನ್ನೆ ರಾತ್ರಿ ಮರ ಬಿದ್ದಿದ್ದು, ಅದನ್ನು ತೆರವು ಗೊಳಿಸುವಂತೆ ವಾರ್ಡ್ ನ ಬಿಜೆಪಿಯ ಸದಸ್ಯ ಯೋಗೀಶ್ ಸಾಲ್ಯಾನ್ ಆರೋಗ್ಯ ನಿರೀಕ್ಷಕ ಪ್ರಸನ್ನ ರವರಿಗೆ ಫೋನ್ ಮೂಲಕ ತಿಳಿಸಿದ್ದರು. ಇಂದು ಬೆಳಿಗಿನವರೆಗೆ ಅದನ್ನ ತೆರವುಗೊಳಿಸದ ಕಾರಣ ಬೆಳಗ್ಗೆ ನಗರ ಸಭೆಯಲ್ಲಿದ್ದ ಪ್ರಸನ್ನರ ಕಚೇರಿಗೆ ಬಂದ ಯೋಗೀಶ್ ಈ ವಿಚಾರದ ಬಗ್ಗೆ ಪ್ರಶ್ನೆ ಕೇಳಿದ್ದಾರೆ.

    ರಸ್ತೆಯಲ್ಲಿ ಮರ, ಕಲ್ಲುಗಳಿದ್ದು ಸಂಚಾರಕ್ಕೆ ಸಮಸ್ಯೆಯಾಗಿದೆ ಎನ್ನುತ್ತಾ, ಏಕಾಏಕಿ ಮುಖಕ್ಕೆ ಪಂಚ್ ಕೊಟ್ಟಿದ್ದಾರೆ. ಕಡಗವಿದ್ದ ಕೈಯ್ಯಲ್ಲಿ ಹಲ್ಲೆ ಮಾಡಿರುವುದರಿಂದ ಅಧಿಕಾರಿ ಪ್ರಸನ್ನರ ಹಣೆ ಮತ್ತು ಬಲ ಕಣ್ಣಿಗೆ ಪೆಟ್ಟು ಬಿದ್ದಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ನಗರಸಭಾ ಸದಸ್ಯರು ಆಸ್ಪತ್ರೆಗೆ ಭೇಟಿ ನೀಡಿ ಅರೋಗ್ಯ ವಿಚಾರಿಸಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ ಭೇಟಿ ಕೊಟ್ಟು ಮಾಹಿತಿ ಪಡೆದುಕೊಂಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಮಟ್ಟಾರು ರತ್ನಾಕರ ಹೆಗ್ಡೆ, ನಮ್ಮ ಸದಸ್ಯನಿಂದ ತಪ್ಪಾಗಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ತಪ್ಪು ಸಾಬೀತಾದರೆ ನಮ್ಮ ಸದಸ್ಯನನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಸಂಜೆ ಕಚೇರಿಯಲ್ಲಿ ಸಭೆ ಕರೆಯಲಾಗಿದೆ. ಮಾಹಿತಿ ಪಡೆದುಕೊಂಡು ಶಿಸ್ತು ಕ್ರಮ ಕೈಗೊಳ್ಳುವುದಾಗಿ ಹೇಳಿದರು.

    ಬಿಜೆಪಿ ಸಂಸದರು, ಶಾಸಕರು ಹಾಗೂ ನಾಯಕರ ಅಸಭ್ಯ ಹಾಗೂ ಗೂಂಡಾ ವರ್ತನೆಗೆ ಬೇಸತ್ತು ಪ್ರಧಾನಿ ಮೋದಿ ಫುಲ್ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ವಾರ ನಡೆಯುವ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಎಲ್ಲ ಸಂಸದರು ಹಾಗೂ ನಾಯಕರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಅಧಿಕಾರಿಗಳ ಮೇಲೆ ಯಾವುದೇ ದರ್ಪ ತೋರಬೇಡಿ, ರೌಡಿಗಳಂತೆ ವರ್ತಿಸಬೇಡಿ. ಜನಪ್ರತಿನಿಧಿಗಳು ಶಿಸ್ತು ಕಾಪಾಡಿಕೊಳ್ಳುವ ಮೂಲಕ ಜನಸಾಮಾನ್ಯರಿಗೆ ಮಾದರಿಯಾಗಬೇಕು ಎಂದು ಸಲಹೆ ನೀಡುತ್ತಿದ್ದಾರೆ.

    ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಶಾಸಕ ಆಕಾಶ್ ವಿಜಯ್‍ವರ್ಗಿಯಾ ಕೆಳ ಹಂತದ ಅಧಿಕಾರಿ ಮೇಲೆ ಕ್ರಿಕೆಟ್ ಬ್ಯಾಟ್‍ನಿಂದ ಹಲ್ಲೆ ಮಾಡಿದ್ದಕ್ಕೆ ಪ್ರಧಾನಿ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ, ಯಾವ ನಾಯಕನ ಮಗನಾಗಿದ್ದರೂ ಪಕ್ಷದಿಂದ ಹೊರಗೆ ಹಾಕಿ ಎಂದು ಸೂಚಿಸಿದ್ದರು.