Tag: Municipal Member

  • ಕ್ಷುಲಕ ವಿಚಾರಕ್ಕೆ ಯುವಕನಿಗೆ ಥಳಿಸಿದ ಬಿಜೆಪಿ ಪುರಸಭಾ ಸದಸ್ಯ, ಪತ್ನಿ

    ಕ್ಷುಲಕ ವಿಚಾರಕ್ಕೆ ಯುವಕನಿಗೆ ಥಳಿಸಿದ ಬಿಜೆಪಿ ಪುರಸಭಾ ಸದಸ್ಯ, ಪತ್ನಿ

    ತುಮಕೂರು: ಕ್ಷುಲ್ಲಕ ವಿಚಾರಕ್ಕೆ ಬಿಜೆಪಿ(BJP) ಪುರಸಭಾ ಸದಸ್ಯ ಹಾಗೂ ಆತನ ಪತ್ನಿ ಯುವಕನೊಬ್ಬನಿಗೆ ಥಳಿಸಿರುವ ಘಟನೆ ತುಮಕೂರು(Tumakuru) ಜಿಲ್ಲೆಯ ಗುಬ್ಬಿ ಪಟ್ಟಣದ ಸುಭಾಷ್ ನಗರದಲ್ಲಿ ನಡೆದಿದೆ.

    ನಗರದಲ್ಲಿ ಯುವಕರು ಗಣಪತಿ ವಿಸರ್ಜನೆ ಮಾಡಿ, ವಾಪಸ್ಸಾಗುತ್ತಿದ್ದ ವೇಳೆ ಕಾರ್ಪೋರೇಟರ್ ಕೃಷ್ಣಮೂರ್ತಿ ಹಾಗೂ ಆತನ ಪತ್ನಿ ಯುವಕನೊಬ್ಬನಿಗೆ ಥಳಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇದನ್ನೂ ಓದಿ: ಬೆಂಗಳೂರಿನ ಎಕೋಸ್ಪೇಸ್‍ನಲ್ಲಿ ಮುಳುಗಿದ 40 ಐಷಾರಾಮಿ ಕಾರುಗಳು!

    ಕಾರ್ಪೋರೇಟರ್ ಹಾಗೂ ಆತನ ಪತ್ನಿ ಯುವಕನಿಗೆ ಥಳಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: ಗಣೇಶ ವಿಸರ್ಜನೆಯಲ್ಲಿ ಗಲಾಟೆ- ಯುವಕನ ಕೊಲೆಯಲ್ಲಿ ಅಂತ್ಯ

    Live Tv
    [brid partner=56869869 player=32851 video=960834 autoplay=true]

  • ಮಹಿಳೆಗೆ ಗುಂಡಿಕ್ಕಿ ಕೊಲೆ ಮಾಡಿದ್ದ ಬಿಜೆಪಿ ಪುರಸಭೆ ಸದಸ್ಯ ಅರೆಸ್ಟ್

    ಮಹಿಳೆಗೆ ಗುಂಡಿಕ್ಕಿ ಕೊಲೆ ಮಾಡಿದ್ದ ಬಿಜೆಪಿ ಪುರಸಭೆ ಸದಸ್ಯ ಅರೆಸ್ಟ್

    ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದ್ದ ಮಹಿಳೆಯ ಶೂಟೌಟ್ ಪ್ರಕರಣವನ್ನು ಸಂಕೇಶ್ವರ ಪೊಲೀಸರು ಭೇದಿಸಿದ್ದು, ಶೂಟೌಟ್ ನಡೆಸಿ ಮಹಿಳೆಯನ್ನು ಕೊಲೆ ಮಾಡಿದ್ದ ಬಿಜೆಪಿ ಪುರಸಭೆ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ.

    ಸಂಕೇಶ್ವರ ವಾರ್ಡ್ ನಂಬರ್ 14ರ ಬಿಜೆಪಿ ಪುರಸಭೆ ಸದಸ್ಯ ಉಮೇಶ್ ಕಾಂಬಳೆ ಎಂಬಾತನನ್ನು ಸಂಕೇಶ್ವರ ಪೊಲೀಸರು ಬಂಧಿಸಿದ್ದಾರೆ. ಕಳೆದ ಜ.16ರಂದು ನಾಡ ಪಿಸ್ತೂಲ್‍ನಿಂದ ಶೈಲಾ ನಿರಂಜನ್ ಸುಭೇದಾರ್(56) ಮಹಿಳೆಯ ಎದೆಗೆ ಹಾಗೂ ಕೈಗೆ ಗುಂಡಿಕ್ಕಿ ಕೊಲೆ ಮಾಡಲಾಗಿತ್ತು.

    POLICE JEEP

    ಪ್ರಕರಣದ ಬೆನ್ನತ್ತಿದ್ದ ಸಂಕೇಶ್ವರ ಪಿಎಸ್‍ಐ ಗಣಪತಿ ಕೊಂಗನೊಳ್ಳಿ ಹಾಗೂ ಸಿಪಿಐ ರಮೇಶ್ ಛಾಯಾಗೋಳ, ಹವಾಲ್ದಾರ್ ಭೀಮಪ್ಪ ನಾಗನೂರೆ, ಬಸವರಾಜ ಕಪರಟ್ಟಿ ಅವರ ತಂಡ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಜನರಿಗೆ ತೊಂದ್ರೆ ಕೊಡೋದ್ರಿಂದ ಸರ್ಕಾರಕ್ಕೆ ಲಾಭವೂ, ಇಲ್ಲ ನಷ್ಟವೂ ಇಲ್ಲ: ಸುಧಾಕರ್

    ಲೇವಾದೇವಿ ವ್ಯವಹಾರ ಮಾಡುತ್ತಿದ್ದ ಮಹಿಳೆಯಿಂದ 25 ಲಕ್ಷ ರೂ. ಹಣವನ್ನು ಉಮೇಶ ಕಾಂಬಳೆ ಪಡೆದಿದ್ದ. ಬಡ್ಡಿ ಸಮೇತ ಹಣ ಹಿಂದಿರಿಗಿಸಲು ಮಹಿಳೆ ಪೀಡಿಸುತ್ತಿದ್ದ ಕಾರಣ ಮಹಾರಾಷ್ಟ್ರದ ಸಾಂಗ್ಲಿಯಿಂದ ಪಿಸ್ತೂಲ್‍ನ್ನು ತಂದು ಕೊಲೆ ಮಾಡಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಜ.31ರ ವರೆಗೆ ಟಫ್ ರೂಲ್ಸ್ ಜಾರಿ

    ಇನ್ನೂ ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದು, ಪೊಲೀಸರಿಂದ ಶೋಧ ಕಾರ್ಯ ಮುಂದುವರಿದಿದೆ. ಸಂಕೇಶ್ವರ ಪೊಲೀಸರ ಕಾರ್ಯಾಚರಣೆಗೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

  • ನಗರಸಭೆ ಸದಸ್ಯನ ಕೊಲೆ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್

    ನಗರಸಭೆ ಸದಸ್ಯನ ಕೊಲೆ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್

    – ಪ್ರಕರಣದ ಆರು ಮಂದಿ ಅರೆಸ್ಟ್

    ರಾಯಚೂರು: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದ ಇಬ್ಬರು ಕೊಲೆ ಆರೋಪಿಗಳ ಮೇಲೆ ರಾಯಚೂರು ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ. ಇದನ್ನೂ ಓದಿ: ರಾಯಚೂರಿನ ನಡುರಸ್ತೆಯಲ್ಲಿ ನಗರಸಭೆ ಸದಸ್ಯನ ಭೀಕರ ಕೊಲೆ

    ಸೋಮವಾರ ರಾತ್ರಿ 9 ಗಂಟೆಗೆ ರಾಯಚೂರಿನ ಜಾಕೀರ್ ಹುಸೇನ್ ವೃತ್ತದಲ್ಲಿ ನಗರಸಭೆ ಜೆಡಿಎಸ್ ಸದಸ್ಯ ಮಕ್ಬೂಲ್ ಕೊಲೆ ಮಾಡಲಾಗಿತ್ತು. ಇದೀಗ ಪ್ರಕರಣದ ಆರು ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಜ್ಜು ಅಲಿಯಾಸ್ ಅಜಮುದ್ದೀನ್, ರಿಯಾಜ್, ಮೊಹಮದ್ ಯಾಸಿನ್, ಅಪಸರ್, ಕಾಶಿನಾಥ್ ಮತ್ತು ನಗರಸಭೆ ಮಾಜಿ ಸದಸ್ಯ ಗೋರಾ ಮಾಸುಂ ಎಂದು ಗುರುತಿಸಲಾಗಿದೆ.

    ಕೊಲೆಗೆ ಬಳಸಿದ ಮಾರಕಾಸ್ತ್ರಗಳನ್ನ ವಶಪಡಿಸಿಕೊಳ್ಳುವ ವೇಳೆ ಅಜ್ಜು ಅಲಿಯಾಸ್ ಅಜಮುದ್ದೀನ್ ಮತ್ತು ರಿಯಾಜ್ ಅದೇ ಆಯುಧಗಳಿಂದ ಪೊಲೀಸರ ಮೇಲೆ ದಾಳಿಗೆ ಮುಂದಾಗಿದ್ದಾರೆ. ಈ ವೇಳೆ ಆರೋಪಿಗಳ ಕಾಲಿಗೆ ಗುಂಡು ಹಾರಿಸಲಾಗಿದೆ. ಈ ಘಟನೆಯಲ್ಲಿ ಪೊಲೀಸ್ ಪೇದೆಗಳಾದ ಯಲ್ಲಪ್ಪ, ಚಂದ್ರಕಾಂತ್‍ಗೆ ಗಾಯಗಳಾಗಿದ್ದು, ಗಾಯಾಳುಗಳನ್ನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಕೊಲೆ, ಕೊಲೆ ಬೆದರಿಕೆ ಸೇರಿ 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿರುವ ರೌಡಿಶೀಟರ್ ನಗರಸಭೆ ಮಾಜಿ ಸದಸ್ಯ ಗೋರಾ ಮಾಸುಂ ಪ್ರಮುಖ ಆರೋಪಿಯಾಗಿದ್ದಾನೆ. ರಿಯಾಜ್ ಹಾಗೂ ಅಜ್ಜು ಸಹ ರೌಡಿಶೀಟರ್‌ಗಳಾಗಿದ್ದು, ಹಲವಾರು ಪ್ರಕರಣಗಳನ್ನ ಎದುರಿಸುತ್ತಿದ್ದಾರೆ. ಮೊಹಮದ್ ಯಾಸಿನ್, ಅಪಸರ್ ಹಾಗೂ ಕಾಶಿನಾಥ್ ಸೇರಿ ಒಟ್ಟು ಆರು ಜನ ಆರೋಪಿಗಳು ಸೆರೆ ಸಿಕ್ಕಿದ್ದಾರೆ.

    ಏಳು ತಿಂಗಳ ಹಿಂದೆ ನಗರಸಭೆ ಸದಸ್ಯ ಮಕ್ಬೂಲ್ ಸಹೋದರನ ಕೊಲೆಯಾಗಿತ್ತು. ಆ ಪ್ರಕರಣದಲ್ಲಿ ಗೋರಾ ಮಾಸುಂ ಬಂಧನವಾಗಿರಲಿಲ್ಲ. ಹೀಗಾಗಿ ಗೋರಾ ಮಾಸುಂ ಪ್ರಮುಖ ಆರೋಪಿ ಅವನನ್ನ ಬಂಧಿಸುವಂತೆ ಮಕ್ಬೂಲ್ ಓಡಾಡುತ್ತಿದ್ದ. ಇದೇ ದ್ವೇಷಕ್ಕೆ ಈ ಆರು ಜನ ಮಕ್ಬೂಲ್‍ನನ್ನ ಕೊಲೆ ಮಾಡಿದ್ದಾರೆ. ಅಲ್ಲದೇ ಹಳೆ ವೈಷಮ್ಯ ಸಹ ಕೊಲೆ ಕಾರಣವಾಗಿದೆ ಅಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕಮ್ ತಿಳಿಸಿದ್ದಾರೆ.

  • ಚಿತ್ರದುರ್ಗದ ಜೆಡಿಎಸ್ ನಗರಸಭೆ ಸದಸ್ಯ ಗಡಿಪಾರು

    ಚಿತ್ರದುರ್ಗದ ಜೆಡಿಎಸ್ ನಗರಸಭೆ ಸದಸ್ಯ ಗಡಿಪಾರು

    ಚಿತ್ರದುರ್ಗ: ವಿವಿಧ ಕೇಸ್‍ಗಳಲ್ಲಿ ಭಾಗಿಯಾಗಿದ್ದ ಚಿತ್ರದುರ್ಗದ ಜೆಡಿಎಸ್ ನಗರಸಭೆ ಸದಸ್ಯ ಚಂದ್ರಶೇಖರ ಅಲಿಯಾಸ್ ಖೋಟಾನೋಟು ಚಂದ್ರನನ್ನು ಗಡಿಪಾರು ಮಾಡಲಾಗಿದೆ.

    ಚಿತ್ರದುರ್ಗದ ವಾರ್ಡ್ ಸಂಖ್ಯೆ 4ರ ಜೆಡಿಎಸ್ ಸದಸ್ಯನಾಗಿರುವ ಚಂದ್ರ ಖೋಟಾ ನೋಟು ಪ್ರಕರಣ ಸೇರಿದಂತೆ ಹಣ ದ್ವಿಗುಣಗೊಳಿಸುವ ಪ್ರಕರಣ ಹಾಗೂ ವಿವಿಧ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದನು. ಅಷ್ಟೇ ಅಲ್ಲದೆ ನಗರದಲ್ಲಿ ಅಶಾಂತಿ ನಿರ್ಮಾಣಕ್ಕೆ ಕಾರಣನಾಗಿದ್ದನು.

    ಹೀಗಾಗಿ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಮುನ್ನೆಚ್ಚರಿಕಾ ಕ್ರಮವಾಗಿ ಗಡಿಪಾರು ಮಾಡಲಾಗಿದೆ. ಮಾರ್ಚ್ 21 ರಿಂದ ಮೇ 21ರವರೆಗೆ 2 ತಿಂಗಳ ಕಾಲ ಜಿಲ್ಲೆಯಿಂದ ಗಡಿಪಾರುಗೊಳಿಸಲಾಗಿದೆ. ಚಿತ್ರದುರ್ಗ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಈ ಆದೇಶ ಹೊರಡಿಸಿದ್ದಾರೆ.

  • ನಾದಿನಿ ಜೊತೆ ಪುರಸಭೆ ಸದಸ್ಯ ಸರಸ ಸಲ್ಲಾಸ- ಪತ್ನಿಯ ಸಹೋದರಿಗೆ ಕಿಸ್ ಕೊಟ್ಟು ಸೆಲ್ಫಿ ಕ್ಲಿಕ್ಕಿಸಿದ

    ನಾದಿನಿ ಜೊತೆ ಪುರಸಭೆ ಸದಸ್ಯ ಸರಸ ಸಲ್ಲಾಸ- ಪತ್ನಿಯ ಸಹೋದರಿಗೆ ಕಿಸ್ ಕೊಟ್ಟು ಸೆಲ್ಫಿ ಕ್ಲಿಕ್ಕಿಸಿದ

    ಬಳ್ಳಾರಿ: ಶಾಸಕ ಪರಮೇಶ್ವರ್ ನಾಯ್ಕ ಬಲಗೈ ಬಂಟ, ಹಾಲಿ ಹಡಗಲಿ ಪುರಸಭೆಯ ಸದಸ್ಯನೊಬ್ಬ ಪತ್ನಿಯ ಸಹೋದರಿಗೆ ಕಿಸ್ ಕೊಟ್ಟು ಸೆಲ್ಫಿ ಕ್ಲಿಕ್ಕಿಸಿದ ಫೋಟೋ ಇದೀಗ ಎಲ್ಲೆಡೆ ವೈರಲ್ ಆಗಿದೆ.

    ಹಡಗಲಿ ಪುರಸಭೆಯ ಮಾಜಿ ಉಪಾಧ್ಯಕ್ಷ ಹಾಗೂ 15ನೇ ವಾರ್ಡ್ ಸದಸ್ಯನಾಗಿರುವ ಕೆ.ಎಸ್ ರೆಹಮಾನ್ ತನ್ನ ಪತ್ನಿಯ ಸಹೋದರಿಯ ಜೊತೆ ಸರಸ ಸಲ್ಲಾಪ ಮಾಡಿದ ಫೋಟೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ. ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ರೆಹಮಾನ್ ವಿವಾಹಿತೆಯಾಗಿರುವ ಪತ್ನಿಯ ಸಹೋದರಿಗೆ ಮೌತ್ ಕಿಸ್ ಕೊಟ್ಟು ಸೆಲ್ಫಿ ಕ್ಲಿಕ್ಕಿಸಿದ್ದಾರೆ.

    ಈ ಫೋಟೋ ಎಲ್ಲೆಡೆ ಹರಿದಾಡುತ್ತಿದ್ದಂತೆ ರೆಹಮಾನ್ ಪತ್ನಿಯ ಸಹೋದರಿಯ ಮನೆಯವರು ಥಳಿಸಲು ಮುಂದಾಗುತ್ತಿದ್ದಂತೆ ರೆಹಮಾನ್ ನನ್ನು ಪೊಲೀಸರು ಕರೆದೊಕೊಂಡು ಹೋಗಿದ್ದಾರೆ. ಈ ಪ್ರಕರಣದಲ್ಲಿ ಕೆಲವರು ರಾಜಿ ಪಂಚಾಯತಿ ಮಾಡಿಸಲು ಮುಂದಾಗಿದ್ದು, ಸದ್ಯ ಈ ಗಲಾಟೆ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಅಂಬೇಡ್ಕರ್ ಭವನದಲ್ಲಿ ಗುಂಡಿನ ಪಾರ್ಟಿ – ಗಲಾಟೆ ಮಧ್ಯೆ ಗನ್ ತೋರಿಸಿದ ಕೌನ್ಸಿಲರ್ ಬೆಂಬಲಿಗ

    ಅಂಬೇಡ್ಕರ್ ಭವನದಲ್ಲಿ ಗುಂಡಿನ ಪಾರ್ಟಿ – ಗಲಾಟೆ ಮಧ್ಯೆ ಗನ್ ತೋರಿಸಿದ ಕೌನ್ಸಿಲರ್ ಬೆಂಬಲಿಗ

    ಮಡಿಕೇರಿ: ನಾಮಕರಣ ನಡೆಯುತ್ತಿದ್ದ ಹಾಲ್‍ಗೆ ನುಗ್ಗಿ ಮಡಿಕೇರಿ ನಗರಸಭೆ ಕೌನ್ಸಿಲರ್ ಹಾಗೂ ಅವರ ಬೆಂಬಲಿಗರು ಗನ್ ತೋರಿಸಿ ದಾಂಧಲೆ ನಡೆಸಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

    ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ನಾಮಕರಣ ಸಮಾರಂಭವೊಂದು ನಡೆಯುತ್ತಿತ್ತು. ನಗರಸಭೆ ಕೌನ್ಸಿಲರ್ ವೀಣಾಕ್ಷಿ ಹಾಗೂ ಸಮಾರಂಭದಲ್ಲಿ ಮದ್ಯಪಾನ ಮಾಡುತ್ತಿದ್ದ ಹುಡುಗರ ನಡುವೆ ಘರ್ಷಣೆ ಏರ್ಪಟ್ಟಿದ್ದು, ಈ ಸಂದರ್ಭ ಅಲ್ಲಿಗೆ ಬಂದ ವೀಣಾಕ್ಷಿ ಬೆಂಬಲಿಗನೊಬ್ಬ ಗನ್ ತೋರಿಸಿ ಬೆದರಿಸಿದ್ದಾನೆ.

    ಸಮಾರಂಭದಲ್ಲಿ ಕಟ್ಟಡದ ಮೊದಲ ಅಂತಸ್ತಿನಲ್ಲಿ ಕುಳಿತು ಮದ್ಯಪಾನ ಮಾಡುತ್ತಿದ್ದ ಯುವಕರ ಗುಂಪೊಂದು ಅಲ್ಲಿಂದ ಗ್ಲಾಸ್ ಹಾಗೂ ಬಾಟಲಿಗಳನ್ನು ಕೆಳಕ್ಕೆ ಬೀಳಿಸಿದ್ದಾರೆ. ಅದೇ ಕಟ್ಟಡದಲ್ಲಿ ಅಂಗಡಿ ನಡೆಸುತ್ತಿರುವ ನಗರಸಭೆ ಸದಸ್ಯೆ ವೀಣಾಕ್ಷಿ ಇದನ್ನು ಪ್ರಶ್ನಿಸಿದಾಗ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

    ಈ ಸಂದರ್ಭ ವೀಣಾಕ್ಷಿ ಹಾಗೂ ಅದೇ ಬಡಾವಣೆಯ ಯುವಕರು ಹಾಲ್‍ಗೆ ನುಗ್ಗಿದ್ದು, ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಆಗ ಏಕಾ ಏಕಿ ಬಂದ ವೀಣಾಕ್ಷಿ ಬೆಂಬಲಿಗ ಎಂದು ಹೇಳಲಾಗುತ್ತಿರುವ ಯುವಕನೊಬ್ಬ ತನ್ನ ಕಾರ್‍ನಿಂದ ಬಂದೂಕು ತಂದು ಅಲ್ಲಿದ್ದವರನ್ನ ಬೆದರಿಸಿದ್ದಾನೆ.