Tag: Municipal office

  • ಗದಗ | ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ನಗರಸಭೆಗೆ ಸಾರ್ವಜನಿಕರಿಂದ ಮುತ್ತಿಗೆ

    ಗದಗ | ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ನಗರಸಭೆಗೆ ಸಾರ್ವಜನಿಕರಿಂದ ಮುತ್ತಿಗೆ

    – ಖಾಲಿ ಕೊಡಗಳನ್ನು ಹಿಡಿದು ನಗರಸಭೆ ಎದುರು ಪ್ರತಿಭಟನೆ

    ಗದಗ: ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಸಾರ್ವಜನಿಕರು ನಗರಸಭೆಗೆ ಮುತ್ತಿಗೆ ಹಾಕಿ, ಆಕ್ರೋಶ ವ್ಯಕ್ತಪಡಿಸಿದ ಘಟನೆ ಗದಗನಲ್ಲಿ (Gadag) ನಡೆದಿದೆ.

    ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರುಡಗಿ ನೇತೃತ್ವದಲ್ಲಿ ನಗರದ ಮಹಾತ್ಮ ಗಾಂಧಿ ವೃತ್ತದಿಂದ ನಗರಸಭೆ ಕಚೇರಿವರೆಗೆ ಖಾಲಿ ಕೊಡ ಹಿಡಿದು ಪ್ರತಿಭಟನಾ ರ‍್ಯಾಲಿ ನಡೆಯಿತು. ಬಳಿಕ ಪ್ರತಿಭಟನಾಕಾರರು ನಗರಸಭೆ ಕಚೇರಿ ಆವರಣದೊಳಗೆ ನುಗ್ಗಲು ಯತ್ನಿಸಿದರು. ಇದನ್ನೂ ಓದಿ: ಇ-ಖಾತೆದಾರರಿಗೆ ಬಿಗ್ ಶಾಕ್ – ಬಿಬಿಎಂಪಿಯಿಂದ ಶೋಕಾಸ್ ನೋಟಿಸ್ ಜಾರಿ

    ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತವಾಗಿ ಗೇಟ್‌ಗೆ ಬೀಗ ಹಾಕಿ, ಮುಂದೆ ಬ್ಯಾರಿಕೇಡ್ ಇಟ್ಟು ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು. ಸ್ಥಳದಲ್ಲಿ 3 ಜನ ಡಿವೈಎಸ್ಪಿ, 4 ಜನ ಸಿಪಿಐ, 10 ಜನ ಪಿಎಸ್‌ಐ, 15 ಎಎಸ್‌ಐ ಸೇರಿದಂತೆ ನೂರಾರು ಜನ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿತ್ತು. ಪ್ರತಿಭಟನಾಕಾರರು ಒಳಹೋಗದಂತೆ ಪೊಲೀಸರು ತಡೆದರು. ಈ ವೇಳೆ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.

    ನಂತರ ನಗರಸಭೆ ಕಚೇರಿ ಗೇಟ್ ಮುಂದೆ ಖಾಲಿ ಕೊಡಗಳೊಂದಿಗೆ ಕುಳಿತು ಪ್ರತಿಭಟನೆ ಮುಂದುವರಿಸಿದರು. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ್ ಹಾಗೂ ಸಂಬಂಧಿಸಿ ಅಧಿಕಾರಿಗಳು ಆಗಮಿಸಿ ಪರಸ್ಥಿತಿ ತಿಳಿಗೊಳಿಸಲು ಯತ್ನಿಸಿದರು. ಇದನ್ನೂ ಓದಿ: ಮಿಗ್-21 ಯುದ್ಧ ವಿಮಾನದ 62 ವರ್ಷಗಳ ಸೇವೆಗೆ ವಿದಾಯ – ಸೆ. 19ರಂದು ಬೀಳ್ಕೊಡುಗೆ ಸಮಾರಂಭ

    ಕಳೆದ 50 ವರ್ಷಗಳಿಂದ ಗದಗ-ಬೆಟಗೇರಿ ಅವಳಿ ನಗರದಲ್ಲಿ ನೀರಿನ ಸಮಸ್ಯೆ ಮುಂದುವರಿದಿದ್ದು, ನಗರಸಭೆ ಸದಸ್ಯರು ವಾರ್ಡಿನ ಸಾರ್ವಜನಿಕರಿಂದ ನಿತ್ಯ ಪೇಚಾಟ ಅನುಭವಿಸುವಂತಾಗಿದೆ. ಇದಕ್ಕೆ ಪರಿಹಾರವೇ ಇಲ್ಲದಂತಾಗಿದೆ ಎಂದು ಜಿಲ್ಲಾಧಿಕಾರಿಗಳೊಂದಿಗೆ ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಅಹಮದಾಬಾದ್ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ – ಪೊಲೀಸರು, ಬಾಂಬ್ ನಿಷ್ಕ್ರಿಯ ದಳದಿಂದ ಶೋಧ

    ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಸಭೆ ನಡೆಸಿ ಚರ್ಚಿಸೋಣ. 5 ಜನ ಮುಖಂಡರು ಸಭೆಗೆ ಬನ್ನಿ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು. ಇದಕ್ಕೆ ಪ್ರತಿಭಟನಾಕಾರರು 5 ಜನ ಆಗುವುದಿಲ್ಲ, ಎಲ್ಲ ಸದಸ್ಯರನ್ನು ಸಭೆ ಕರೆಯಿರಿ ಎಂದು ಪಟ್ಟುಹಿಡಿದರು.

    ಕಳೆದ 50 ವರ್ಷದಿಂದ ಅವಳಿ ನಗರಕ್ಕೆ ನೀರು ಪೂರೈಕೆ ಆಗುತ್ತಿಲ್ಲ. ಮಳೆಗಾಲದಲ್ಲೂ ನೀರು ಪೂರೈಕೆ ಮಾಡದ ಶಾಸಕರು, ಸಚಿವರು ನಮಗೆ ಬೇಡ. ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್, ನಗರಸಭೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

  • ನಗರಸಭೆ ಕಚೇರಿಯಲ್ಲೇ ಕೈ ಕೈ ಮಿಲಾಯಿಸಿದ ಸದಸ್ಯರು

    ನಗರಸಭೆ ಕಚೇರಿಯಲ್ಲೇ ಕೈ ಕೈ ಮಿಲಾಯಿಸಿದ ಸದಸ್ಯರು

    ಗದಗ: ನಗರಸಭೆ ಕಚೇರಿಯಲ್ಲೇ (Municipal Office) ಸದಸ್ಯರು ಕೈ ಕೈ ಮಿಲಾಯಿಸಿರುವ ಘಟನೆ ಗದಗ (Gadag) ಜಿಲ್ಲೆಯ ಬೆಟಗೇರಿ (Betageri) ನಗರ ಸಭೆಯಲ್ಲಿ ನಡೆದಿದೆ.

    ಕಾಂಗ್ರೆಸ್ ಸದಸ್ಯ ಜೈನುಲಾದ್ದಿನ್ ನಮಾಜಿ ಹಾಗೂ ಬಿಜೆಪಿ ಸದಸ್ಯೆ ವಿಜಯಲಕ್ಷ್ಮಿ ದಿಂಡೂರ ಪತಿ ಶಶಿಧರ್ ನಡುವೆ ಜಗಳ ಏರ್ಪಟ್ಟಿದೆ. ಶಶಿಧರ್ ಅವರು ಸಚಿವ ಹೆಚ್‌ಕೆ ಪಾಟೀಲ್‌ಗೆ ಏಕವಚನದಲ್ಲಿ ಮಾತನಾಡಿದ್ದಾಗಿ ಆರೋಪಿಸಲಾಗಿದ್ದು, ಈ ಹಿನ್ನೆಲೆ ಜಗಳ ಪ್ರಾರಂಭವಾಗಿದೆ. ಇದನ್ನೂ ಓದಿ: ಅಘೋಷಿತ ಲೋಡ್ ಶೆಡ್ಡಿಂಗ್, ಅಕ್ಕಪಕ್ಕದ ರಾಜ್ಯದಿಂದ ವಿದ್ಯುತ್ ಖರೀದಿಸಿ ಕೊಡಲಿ: ಬಿವೈ ರಾಘವೇಂದ್ರ ಒತ್ತಾಯ

    ಗದಗ ನಗರಸಭೆ ಆಯುಕ್ತರ ಕಚೇರಿಯಲ್ಲಿ ಸಾರ್ವಜನಿಕರ ಎದುರಲ್ಲೇ ಸದಸ್ಯರು ಜಗಳವಾಡಿದ್ದು, ಅಲ್ಲೇ ಇದ್ದ ಅಧಿಕಾರಿಗಳು ಹಾಗೂ ಇತರ ಸದಸ್ಯರು ಜಗಳ ಬಿಡಿಸಿ ಸಮಾಧಾನ ಮಾಡಿದ್ದಾರೆ. ಸರ್ಕಾರಿ ಕಚೇರಿಯಲ್ಲಿ ಜನಪ್ರತಿನಿಧಿಗಳು ಬೇಜವಾಬ್ದಾರಿ ತೋರಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಇದನ್ನೂ ಓದಿ: Emergency Alert Test- ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಮಪತ್ರ ಸಲ್ಲಿಸುವ ವೇಳೆ ಕಪಿರಾಯನ ಎಂಟ್ರಿ- ಚಹಾ ನೀಡಿ ಸತ್ಕರಿಸಿದ ಸಿಬ್ಬಂದಿ

    ನಾಮಪತ್ರ ಸಲ್ಲಿಸುವ ವೇಳೆ ಕಪಿರಾಯನ ಎಂಟ್ರಿ- ಚಹಾ ನೀಡಿ ಸತ್ಕರಿಸಿದ ಸಿಬ್ಬಂದಿ

    ಗದಗ: ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ನಾಮಪತ್ರ ಸಲ್ಲಿಸುವ ವೇಳೆ ಪುರಸಭೆ ಕಚೇರಿಗೆ ಕೋತಿ ಎಂಟ್ರಿ ಕೊಟ್ಟಿದೆ.

    ಪಟ್ಟಣದಲ್ಲಿ ಪುರಸಭೆ ಚುನಾವಣೆ ಹಿನ್ನೆಲೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಈ ವೇಳೆ ಮಂಗವೊಂದು ಪುರಸಭೆ ಕಚೇರಿಗೆ ನುಗ್ಗಿ ಟೇಬಲ್ ಮೇಲೆ ಕುಳಿತು ಚೇಷ್ಟೆ ಮಾಡಿದೆ. ಅಲ್ಲದೆ ಅಧಿಕಾರಿಗಳ ಕೈ ಎಳೆದು, ಮೊಬೈಲ್ ಹಿಡಿದು ಟೇಬಲ್ ಮೇಲೆ ಕುಳಿತು, ಕಚೇರಿಯಲ್ಲಿ ಸುಮಾರು ಅರ್ಧ ಗಂಟೆ ಕಾಲ ತನ್ನ ದರ್ಬಾರ್ ನಡೆಸಿದೆ.

    ಹೊರಗಡೆ ಪೊಲೀಸರ ಕಂಗಾವಲಿನಲ್ಲೇ ಚುನಾವಣೆ ಕಚೇರಿಗೆ ಕೋತಿ ನುಗ್ಗಿ ತನ್ನ ತುಂಟಾಟ ನಡೆಸಿದೆ. ನಂತರ ತುಂಟ ಕಪಿರಾಯನಿಗೆ ಚುನಾವಣಾ ಸಿಬ್ಬಂದಿ ಚಹಾ ಕುಡಿಸಿ ಕಳುಹಿಸಿದ್ದಾರೆ. ಈ ದೃಶ್ಯವನ್ನು ಸಿಬ್ಬಂದಿ ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ.