Tag: Murder sketch

  • ಕೊಲೆ ಸ್ಕೆಚ್‌ಗೆ ರಾಂಗ್ ಪರ್ಸನ್ ಚೂಸ್ ಮಾಡಿದ್ದಾರೆ: ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್

    ಕೊಲೆ ಸ್ಕೆಚ್‌ಗೆ ರಾಂಗ್ ಪರ್ಸನ್ ಚೂಸ್ ಮಾಡಿದ್ದಾರೆ: ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್

    ಮಂಗಳೂರು: ಕೆಲ ವಾರಗಳ ಹಿಂದೆ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸಹೋದರ ಉದ್ಯಮಿ ಗುಣರಂಜನ್ ಶೆಟ್ಟಿ ಹತ್ಯೆಗೆ ಸ್ಕೆಚ್ ಹಾಕಿದ್ದ ವಿಚಾರ ಭಾರೀ ಸುದ್ದಿಯಾಗಿತ್ತು. ಆದರೆ ಈ ಸ್ಕೆಚ್ ಯಾರು ಹಾಕಿದ್ದಾರೆ ಎಂಬುದು ಸ್ವತಃ ಗುಣರಂಜನ್ ಶೆಟ್ಟಿಗೂ ಗೊತ್ತಿರಲಿಲ್ಲ. ಹೀಗಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಗೃಹ ಸಚಿವರಿಗೆ, ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಗುಣರಂಜನ್ ಶೆಟ್ಟಿ ಮನವಿ ಮಾಡಿಕೊಂಡಿದ್ದರು. ಈ ಹಿನ್ನಲೆಯಲ್ಲಿ ರಾಜ್ಯ ಗೃಹ ಇಲಾಖೆ ಈ ಪ್ರಕರಣದ ತನಿಖೆಯನ್ನು ಮಂಗಳೂರು ಪೊಲೀಸರಿಗೆ ವಹಿಸಿದ್ದು, ಮಂಗಳೂರು ಪೊಲೀಸರು ಈ ದೂರಿನ ಬಗ್ಗೆ ಹೆಚ್ಚಿನ ವಿವರಣೆ ಪಡೆಯಲು ಗುಣರಂಜನ್ ಶೆಟ್ಟಿಗೆ ನೋಟಿಸ್ ನೀಡಿ ಕರೆಸಿಕೊಂಡಿದ್ದಾರೆ.

    ಪ್ರಾರಂಭದಲ್ಲಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದು, ಬಳಿಕ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಗುಣರಂಜನ್ ಶೆಟ್ಟಿಯಿಂದ ಹೆಚ್ಚಿನ ಮಾಹಿತಿ ಪಡೆದಿದ್ದಾರೆ. ವಿಚಾರಣೆ ಬಳಿಕ ಗುಣರಂಜನ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದು, ಈ ಸಂಚಿನ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗಬೇಕು. ಯಾರಾದರೂ ಹತ್ಯೆಗೆ ಸ್ಕೆಚ್ ಹಾಕಿದ್ದರೆ ಅವರು ರಾಂಗ್ ಪರ್ಸನ್ ಅನ್ನು ಚೂಸ್ ಮಾಡಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೊರೊನಾ ಸ್ಫೋಟ – ಬೆಂಗ್ಳೂರು, ಮೈಸೂರು, ದ.ಕ ಜಿಲ್ಲೆಗಳಲ್ಲಿ ಭಾರೀ ಏರಿಕೆ

    ಪ್ರಾರಂಭದಲ್ಲಿ ಮುತ್ತಪ್ಪ ರೈ ಸಂಬಂಧಿ ಮನ್ವಿತ್ ರೈ ಗುಣರಂಜನ್ ಶೆಟ್ಟಿ ಕೊಲೆಗೆ ಸ್ಕೆಚ್ ನಡೆಸಿದ್ದಾರೆ ಎಂಬ ವದಂತಿ ಹಬ್ಬಿತ್ತು. ಹೀಗಿದ್ದರೂ ಮನ್ವಿತ್ ರೈ ತಾನು ಉದ್ಯಮದ ವಿಚಾರವಾಗಿ ವಿದೇಶದಲ್ಲಿದ್ದು, ಈ ಹತ್ಯೆ ಸಂಚಿಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿಕೆ ನೀಡಿದ್ದರು. ಇಂದು ಪೊಲೀಸ್ ವಿಚಾರಣೆ ಸಂದರ್ಭದಲ್ಲಿಯೂ ಗುಣರಂಜನ್ ಶೆಟ್ಟಿ ಇಂತಹ ವಿಚಾರಕ್ಕೆ, ಇಂತಹ ನಿರ್ದಿಷ್ಟ ವ್ಯಕ್ತಿಗಳಿಂದ ಸಂಚು ನಡೆದಿದೆ ಎಂಬ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲವಾದರೂ ಪೊಲೀಸರು ಸಂಕ್ಷಿಪ್ತ ಮಾಹಿತಿ ಕಲೆ ಹಾಕುವ ಕಾರ್ಯ ಮಾಡಿದ್ದಾರೆ.

    ಈ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಪಿಟಿಷನ್ ತೆಗೆದುಕೊಂಡು ಯಾರನ್ನು ವಿಚಾರಣೆ ಮಾಡಬೇಕು ಅವರನ್ನು ವಿಚಾರಣೆ ನಡೆಸಿ, ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಅಗಲಿದ ಶ್ವಾನಕ್ಕೆ ಎಸ್‌ಪಿ ಕಚೇರಿ ಆವರಣದಲ್ಲೇ ಆಂತ್ಯಕ್ರಿಯೆ

    Live Tv

  • ಮುಖ್ಯಮಂತ್ರಿ ತೀರ್ಮಾನಕ್ಕೆ ಬದ್ಧ: ಎಸ್.ಆರ್ ವಿಶ್ವನಾಥ್

    ಮುಖ್ಯಮಂತ್ರಿ ತೀರ್ಮಾನಕ್ಕೆ ಬದ್ಧ: ಎಸ್.ಆರ್ ವಿಶ್ವನಾಥ್

    ಬೆಂಗಳೂರು: ಕೊಲೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹಾಗೂ ಗೃಹಸಚಿವರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದು ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ಹೇಳಿದರು.

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸರಿಯಾದ ರೀತಿಯಲ್ಲಿ ತನಿಖೆ ನಡೆಸುತ್ತೇವೆ. ಈ ಮೂಲಕ ಕೊಲೆ ಸಂಚಿನ ಹಿಂದೆ ಇರುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಪೊಲೀಸರು ಸರಿಯಾದ ರೀತಿಯಲ್ಲಿ ತನಿಖೆಯನ್ನು ಕೈಗೊಂಡಿದ್ದು, ಎಲ್ಲರಿಗೂ ನೋಟಿಸ್ ನೀಡುತ್ತಾರೆ. ನನಗೆ ನೋಟಿಸ್ ಬಂದಾಗ ನಾನು ತನಿಖೆಗೆ ಸಹಕರಿಸುವೆ ಎಂದರು.

    ಆಡಳಿತ ಪಕ್ಷದ ಶಾಸಕನ ವಿರುದ್ಧವೇ ಕೊಲೆ ಸಂಚು ನಡೆಸಿದ್ದರಿಂದ ಮುಖ್ಯಮಂತ್ರಿಗಳು ಕಠಿಣ ಕ್ರಮವನ್ನು ಕೈಗೊಳ್ಳುತ್ತಾರೆ ಎಂದು ನಾನು ನಂಬಿದ್ದೇನೆ. ವಿರೋಧ ಪಕ್ಷಗಳಿಂದಲೂ ಸಾಕಷ್ಟು ಬೆಂಬಲದ ಕರೆಗಳು ಬಂದಿವೆ. ಪಕ್ಷಭೇದ ಮರೆತು ತನಿಖೆ ಕೈಗೊಳ್ಳುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ನನ್ನ ಸೇವೆಯನ್ನು ಸಹಿಸಲಾಗದೆ ಕೊಲೆಗೆ ಸಂಚು: ಎಸ್.ಆರ್ ವಿಶ್ವನಾಥ್

    ದೂರಿನಲ್ಲಿ ಗೋಪಾಲಕೃಷ್ಣ ಹೆಸರನ್ನೊಂದೇ ಉಲ್ಲೇಖಿಸಿದ ಕುರಿತು ಮಾತನಾಡಿದ ಅವರು, ಕುಳ್ಳ ದೇವರಾಜು ಆಗಲಿ, ಗೋಪಾಲಕೃಷ್ಣ ಆಗಲಿ ಯಾರನ್ನು ಕ್ಷಮಿಸುವುದಿಲ್ಲ. ತಪ್ಪು ಮಾಡಿದವರನ್ನು ನಾನು ಎಂದಿಗೂ ಕ್ಷಮಿಸುವುದಿಲ್ಲ. ತಪ್ಪು ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಹಾಗೆ ಮಾಡುತ್ತೇನೆ. ಈ ಪ್ರಕರಣದಲ್ಲಿ ಇನ್ನು ಯಾರ್ಯಾರು ಶಾಮೀಲಾಗಿದ್ದಾರೆ ಎನ್ನುವುದು ಕೆಲವೇ ದಿನಗಳಲ್ಲಿ ತಿಳಿಯುತ್ತದೆ. ತನಿಖೆಯಿಂದಾಗಿ ಸಂಪೂರ್ಣ ಮಾಹಿತಿಯೂ ಬಹಿರಂಗವಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಇಂದು ಚರ್ಚೆ ನಡೆಸಲಿದ್ದೇನೆ ಎಂದರು.

    ಶಾಸಕ ಎಸ್.ಆರ್ ವಿಶ್ವನಾಥ್ ಕೊಲೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ವಿರುದ್ಧ ಬುಧವಾರ ಎಫ್‍ಐಆರ್ ದಾಖಲಾಗಿದೆ. ಕೊಲೆಗೆ ಸ್ಕೆಚ್ ಸಂಬಂಧ ಕುಳ್ಳ ದೇವರಾಜ್, ಧರ್ಮ, ಮಂಜು ಎಂಬ ಮೂವರನ್ನು ವಶಕ್ಕೆ ಪಡೆದು ಪೊಲೀಸರು ಬಿಟ್ಟುಕಳಿಸಿದ್ದಾರೆ. ಇದನ್ನೂ ಓದಿ:ಎಸ್.ಆರ್. ವಿಶ್ವನಾಥ್ ಕೊಲೆಗೆ ಸಂಚು ಪ್ರಕರಣ- ಗೋಪಾಲಕೃಷ್ಣ ವಿರುದ್ಧ ಎಫ್‍ಐಆರ್

  • ಎಸ್.ಆರ್. ವಿಶ್ವನಾಥ್ ಕೊಲೆಗೆ ಸಂಚು ಪ್ರಕರಣ- ಗೋಪಾಲಕೃಷ್ಣ ವಿರುದ್ಧ ಎಫ್‍ಐಆರ್

    ಎಸ್.ಆರ್. ವಿಶ್ವನಾಥ್ ಕೊಲೆಗೆ ಸಂಚು ಪ್ರಕರಣ- ಗೋಪಾಲಕೃಷ್ಣ ವಿರುದ್ಧ ಎಫ್‍ಐಆರ್

    – ಮೂವರನ್ನು ವಿಚಾರಿಸಿ ಕಳಿಸಿದ ಪೊಲೀಸರು

    ಬೆಂಗಳೂರು: ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ಕೊಲೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

    ಪ್ರಕರಣ ಸಂಬಂಧ ರಾಜಾನುಕುಂಟೆ ಪೊಲೀಸರು ಕೋರ್ಟ್ ಅನುಮತಿ ಪಡೆದು ಐಪಿಸಿ ಸೆಕ್ಷನ್ 120ಬಿ, 506 ಅಡಿಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ. ಕೊಲೆಗೆ ಸ್ಕೆಚ್ ಸಂಬಂಧ ಕುಳ್ಳ ದೇವರಾಜ್, ಧರ್ಮ, ಮಂಜು ಎಂಬ ಮೂವರನ್ನು ವಶಕ್ಕೆ ಪಡೆದು ಪೊಲೀಸರು ಬಿಟ್ಟುಕಳಿಸಿದ್ದಾರೆ. ಇದನ್ನೂ ಓದಿ: ನನ್ನ ಸೇವೆಯನ್ನು ಸಹಿಸಲಾಗದೆ ಕೊಲೆಗೆ ಸಂಚು: ಎಸ್.ಆರ್ ವಿಶ್ವನಾಥ್

    ಕುಳ್ಳ ದೇವರಾಜ್ ಕಡೆ ನಿಂತ್ರಾ ಪೊಲೀಸರು..?: ಹತ್ಯೆಗೆ ಸಂಚು ಕೇಸಲ್ಲಿ ಪೊಲೀಸರು ಕುಳ್ಳ ದೇವರಾಜ್ ಕಡೆ ನಿಂತ್ರಾ ಎಂಬ ಅನುಮಾನವೊಂದು ಎದ್ದು ಕಾಣುತ್ತಿದೆ. ಶಾಸಕರ ದೂರಿನಲ್ಲಿ ಗೋಪಾಲಕೃಷ್ಣ ಒಬ್ಬರೇ ಆರೋಪಿ. ಎಫ್‍ಐಆರ್ ಪ್ರತಿಯಲ್ಲಿ ಕೂಡ ಗೋಪಾಲಕೃಷ್ಣ ಒಬ್ಬರನ್ನೇ ಪೊಲೀಸರು ಆರೋಪಿಯನ್ನಾಗಿ ಮಾಡಿದ್ದಾರೆ. ದೂರಿನಲ್ಲಿ ಕುಳ್ಳ ದೇವರಾಜ್ ಹೆಸರು ಸೂಚಿಸಿದ್ದರೂ ಎಫ್‍ಐಆರ್‍ನಲ್ಲಿ ಹೆಸರಿಲ್ಲ. ಹೀಗಾಗಿ ಶಾಸಕ ಎಸ್.ಆರ್.ವಿಶ್ವನಾಥ್ ಒತ್ತಡಕ್ಕೆ ಪೊಲೀಸರು ಮಣಿದ್ರಾ ಎಂಬ ಸಂಶಯ ಹುಟ್ಟಿಕೊಂಡಿದೆ.  ಇದನ್ನೂ ಓದಿ: ಶಾಸಕ ವಿಶ್ವನಾಥ್ ಹತ್ಯೆಗೆ ಸ್ಕೆಚ್‌ – ಸುಪಾರಿ ಕೊಡ್ತಿರೋ ವೀಡಿಯೋ, ಆಡಿಯೋ ವೈರಲ್‌

    ನೋಟಿಸ್ ಜಾರಿ: ಇತ್ತ ಪ್ರಕರಣ ಸಂಬಂಧ ರಾಜಾನುಕುಂಟೆ ಪೊಲೀಸರು ಶಾಸಕ ಎಸ್.ಆರ್.ವಿಶ್ವನಾಥ್‍ಗೆ ನೋಟಿಸ್ ನೀಡಿದ್ದಾರೆ. ದೂರಿನ ಜೊತೆ ಯಾವುದೇ ದಾಖಲೆಗಳನ್ನ ನೀಡದ ಹಿನ್ನೆಲೆಯಲ್ಲಿ ಘಟನೆಗೆ ಸಂಬಂಧಪಟ್ಟ ದಾಖಲೆ ನೀಡುವಂತೆ ನೋಟಿಸ್ ನೀಡಿದ್ದಾರೆ. ಅಲ್ಲದೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ, ಕುಳ್ಳ ದೇವರಾಜ್, ಕಾಂತ, ಧರ್ಮ, ಮಂಜ ಹಾಗೂ ಸಹಚರಿಗೆ ಸೇರಿದಂತೆ ಒಟ್ಟು 10ಕ್ಕೂ ಹೆಚ್ಚು ಮಂದಿಗೆ ರಾಜಾನುಕುಂಟೆ ಪೊಲೀಸರು ನೋಟಿಸ್ ನೀಡಿದ್ದಾರೆ.

    ತನಿಖಾಧಿಕಾರಿ ದೊಡ್ಡಬಳ್ಳಾಪುರ ಇನ್ಸ್ ಪೆಕ್ಟರ್ ನವೀನ್ ಮುಂದೆ ತ್ವರಿತವಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‍ನಲ್ಲಿ ಉಲ್ಲೇಖ ಮಾಡಲಾಗಿದೆ.

  • ತನ್ನ ಕೊಲೆಗೆ ಸ್ಕೆಚ್ ಹಾಕಿದ್ದ ಪತ್ನಿಗೆ ಅರೆಸ್ಟ್ ಭಾಗ್ಯ ಕರುಣಿಸಿದ ಪತಿ!

    ತನ್ನ ಕೊಲೆಗೆ ಸ್ಕೆಚ್ ಹಾಕಿದ್ದ ಪತ್ನಿಗೆ ಅರೆಸ್ಟ್ ಭಾಗ್ಯ ಕರುಣಿಸಿದ ಪತಿ!

    ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರ ಈಗ ಪೊಲೀಸರ ಅತಿಥಿಯಾಗಿದ್ದಾರೆ.

    ಪತ್ನಿ ಶೈಲಜಾ ಹಾಗೂ ಪ್ರಿಯಕರ ಆನಂದ್ ಬಂಧಿತ ಆರೋಪಿಗಳು. ಪತಿ ಪ್ರಸನ್ನ ಕುಮಾರ್ ಅವರ ದೂರಿನ ಹಿನ್ನೆಲೆಯಲ್ಲಿ ಜ್ಞಾನಭಾರತಿ ಪೊಲೀಸರು ಈಗ ಇಬ್ಬರನ್ನೂ ಬಂಧಿಸಿದ್ದಾರೆ.

    ಏನಿದು ಪ್ರಕರಣ?
    ಆರೋಪಿ ಶೈಲಜಾ ಪ್ರಸನ್ನಕುಮಾರ್ ಎಂಬುವರನ್ನು ಮದುವೆಯಾಗಿದ್ದರೂ ಕಳೆದ 5 ವರ್ಷಗಳಿಂದ ಆನಂದ್ ಎಂಬಾತನ ಜೊತೆ ಅನೈತಿಕ ಸಂಬಂಧವನ್ನು ಹೊಂದಿದ್ದಳು. ಈ ಅನೈತಿಕ ಸಂಬಂಧದ ಬಗ್ಗೆ ಪ್ರಶ್ನೆ ಮಾಡಿದ ಪತಿ ಪ್ರಸನ್ನ ಕುಮಾರ್ ಪ್ರಶ್ನೆ ಮಾಡಿದ್ದರು.

    ಪತಿ ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆ ಎಂದು ತಿಳಿದ ಶೈಲಜಾ, ಪ್ರಸನ್ನ ಕುಮಾರ್ ಮುಗಿಸಲು ಪ್ರಿಯಕರನ ಜೊತೆ ಸೇರಿ ಊಟದಲ್ಲಿ ನಿದ್ದೆ ಮಾತ್ರೆ ಹಾಕಿ ಕೊಲ್ಲುವ ಸಂಚು ರೂಪಿಸಿದ್ದಳು. ಆದರೆ ಅವರ ಪ್ಲಾನ್ ಯಶಸ್ವಿ ಆಗದ ಕಾರಣ ಬೇರೆ ರೀತಿಯಲ್ಲಿ ಕೊಲೆ ಮಾಡಲು ಸ್ಕೆಚ್ ಹಾಕಿದ್ದಳು.

    ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡುವ ಸಂಚು ಪತ್ನಿಯ ಫೋನ್ ನಲ್ಲಿ ರೆಕಾರ್ಡ್ ಆಗಿತ್ತು. ಈ ಆಡಿಯೋವನ್ನು ಪತ್ನಿಗೆ ತಿಳಿಯದಂತೆ ಪತಿ ಪಡೆದುಕೊಂಡು ಪೋಲಿಸರಿಗೆ ದೂರು ನೀಡಿದ್ದಾರೆ. ಜ್ಞಾನಭಾರತಿಯ ಪೊಲೀಸರು ಪತಿ ನೀಡಿದ ಮೊಬೈಲ್ ಆಡಿಯೋ ರೆಕಾರ್ಡ್ ಆಧಾರದ ಮೇಲೆ ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.