Tag: murders

  • ಕೈ ಯುವ ಮುಖಂಡನ ಕೊಲೆ ಆರೋಪಿಗಳ ಮೇಲೆ ಪೊಲೀಸರ ಫೈರಿಂಗ್!

    ಕೈ ಯುವ ಮುಖಂಡನ ಕೊಲೆ ಆರೋಪಿಗಳ ಮೇಲೆ ಪೊಲೀಸರ ಫೈರಿಂಗ್!

    ಬೆಂಗಳೂರು: ಕಾಂಗ್ರೆಸ್ ಯುವ ಅಧ್ಯಕ್ಷನ ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ್ದಾರೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ದೊಡ್ಡಜಾಲ ಸಮೀಪ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದಾಗ ಈ ಘಟನೆ ನಡೆದಿದೆ.

    ಮನೋಜ್ ಅಲಿಯಾಸ್ ಕೆಂಚ ಮತ್ತು ಮಂಜೇಗೌಡ ಬಂಧಿತ ಆರೋಪಿಗಳು. ಚಿಕ್ಕಚಾಲ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಇವರನ್ನು ಖಚಿತ ಮಾಹಿತಿ ಮೇರೆಗೆ ವಿದ್ಯಾರಣ್ಯಪುರ ಹಾಗೂ ಯಲಹಂಕ ಪೊಲೀಸರು ಬುಧವಾರ ಬೆಳಗ್ಗೆ ಬಂಧಿಸಲು ಮುಂದಾಗಿದ್ದರು. ಈ ವೇಳೆ ಆರೋಪಿಗಳು ತಮ್ಮ ಬಳಿ ಇದ್ದ ಮಾರಕಾಸ್ತ್ರಗಳಿಂದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಾರೆ. ಆತ್ಮರಕ್ಷಣೆಗಾಗಿ ಯಲಹಂಕ ಪೊಲೀಸರು ಇಬ್ಬರು ಆರೋಪಿಗಳ ಮೇಲೆ ಫೈರಿಂಗ್ ನಡೆಸಿದ್ದಾರೆ.

    ಆರೋಪಿ ಮನೋಜ್ ಅಲಿಯಾಸ್ ಕೆಂಚನ ಕಾಲಿಗೆ ಗುಂಡು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಅಳ್ಳಾಲಸಂದ್ರದ ಕಾಂಗ್ರೆಸ್ ಯುವ ಅಧ್ಯಕ್ಷ ಅರುಣ್ ಕುಮಾರ್ ನನ್ನು ಕೊಲೆ ಪ್ರಕರಣದಲ್ಲಿ ಆರೋಪಿಗಳ ಹೆಸರು ಕೇಳಿ ಬಂದಿವೆ. ಅರುಣ್ ತಡರಾತ್ರಿ ಸಿನೆಮಾ ನೋಡಿಕೊಂಡು ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಘಟನೆ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಯುವ ಕಾಂಗ್ರೆಸ್ ಅಧ್ಯಕ್ಷನ ಬರ್ಬರ ಹತ್ಯೆ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಆಸ್ತಿ ನೀಡಲು ಒಪ್ಪದ್ದಕ್ಕೆ ಅಜ್ಜನ ಮರ್ಮಾಂಗ ಹಿಚುಕಿ ಕೊಲೆಗೈದ ಮೊಮ್ಮಕ್ಕಳು!

    ಆಸ್ತಿ ನೀಡಲು ಒಪ್ಪದ್ದಕ್ಕೆ ಅಜ್ಜನ ಮರ್ಮಾಂಗ ಹಿಚುಕಿ ಕೊಲೆಗೈದ ಮೊಮ್ಮಕ್ಕಳು!

    ಬಾಗಲಕೋಟೆ: ಆಸ್ತಿಗಾಗಿ ಮೊಮ್ಮಕ್ಕಳು ತಮ್ಮ ಅಜ್ಜನ ಮರ್ಮಾಂಗವನ್ನು ಹಿಚುಕಿ ಕೊಲೆ ಮಾಡಿದ ಅಮಾನವೀಯ ಘಟನೆ ಬಾದಾಮಿ ತಾಲೂಕಿನ ನೀರಲಕೇರಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ನೀರಲಕೇರಿ ಗ್ರಾಮದ ಯಲ್ಲಪ್ಪ ಪಟಾತ್ (85) ಮೃತ ಹಿರಿಯ ವ್ಯಕ್ತಿ. ಯಲ್ಲಪ್ಪ ಅವರ ಮೊಮ್ಮಕ್ಕಳಾದ ಬೀರಪ್ಪ ಪಟಾತ್, ಸೋಮವ್ವ ಕೋರಕೊಪ್ಪ ಕೊಲೆಗೈದ ಆರೋಪಿಗಳು.

    ನಡೆದಿದ್ದು ಏನು?
    ಮೃತ ಅಜ್ಜ ಯಲ್ಲಪ್ಪ ಅವರು ತಮ್ಮ ಪಾಲಿನ ಆಸ್ತಿಯನ್ನು ಮಗಳ ಹೆಸರಿಗೆ ವರ್ಗಾವಣೆ ಮಾಡಲು ಮುಂದಾಗಿದ್ದರು. ಇದಕ್ಕೆ ವಿರೋಧ ವ್ಯಕ್ತಪಡೆಸಿದ ಬೀರಪ್ಪ ಹಾಗೂ ಸೋಮವ್ವ ಆಸ್ತಿ ತಮಗೆ ಮಾತ್ರ ಸೇರಬೇಕೆಂದು ಯಲ್ಲಪ್ಪ ಅವರಿಗೆ ತಾಕೀತು ಮಾಡಿದ್ದರು. ಆದರೆ ಇದಕ್ಕೆ ಯಲ್ಲಪ್ಪ ಒಪ್ಪದೇ ಇದ್ದಾಗ
    ಜೂನ್ 17 ರಂದು ಕೊಲೆ ಮಾಡಿದ್ದಾರೆ.

    ಯಲ್ಲಪ್ಪ ಅವರ ಅಂತ್ಯಸಂಸ್ಕಾರ ಮಾಡಲು ಧಾರ್ಮಿಕ ವಿಧಿವಿಧಾನಕ್ಕೆ ಬೀರಪ್ಪ ಹಾಗೂ ಸೋಮವ್ವ ಮುಂದಾಗಿದ್ದರು. ಕೃತ್ಯದ ಮಾಹಿತಿ ಪಡೆದು ಗ್ರಾಮಕ್ಕೆ ಭೇಟಿ ನೀಡಿದ ಕೆರೂರು ಪೊಲೀಸರು ಶವವನ್ನು ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು, ಯಲ್ಲಪ್ಪ ಅವರ ಮರ್ಮಾಂಗಕ್ಕೆ ಬಲವಾಗಿ ಹೊಡೆದು ಕೊಲೆ ಮಾಡಲಾಗಿದೆ ಎನ್ನುವ ಮಾಹಿತಿ ಮರಣೋತ್ತರ ಪರೀಕ್ಷೆಯಲ್ಲಿ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಶಂಕೆಯ ಆಧಾರದಲ್ಲಿ ಬೀರಪ್ಪ ಪಟಾತ್ ಮತ್ತು ಸೋಮವ್ವ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬೆಳಕಿಗೆ ಬಂದಿದೆ. ಆರೋಪಿಗಳಾದ ಬೀರಪ್ಪ ಪಟಾತ್ ಹಾಗೂ ಸೋಮವ್ವ ಕೋರಕೊಪ್ಪರನ್ನು ಕೆರೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.