Tag: Murli Manohar Joshi

  • ಮನೆಯಲ್ಲೇ ಮತದಾನ ಮಾಡಿದ ಅನ್ಸಾರಿ, ಮನಮೋಹನ್‌ ಸಿಂಗ್‌, ಜೋಶಿ

    ಮನೆಯಲ್ಲೇ ಮತದಾನ ಮಾಡಿದ ಅನ್ಸಾರಿ, ಮನಮೋಹನ್‌ ಸಿಂಗ್‌, ಜೋಶಿ

    ನವದೆಹಲಿ: ಮಾಜಿ ಉಪರಾಷ್ಟ್ರಪತಿ ಹಮೀದ್‌ ಅನ್ಸಾರಿ (Mohammad Hamid Ansari), ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌(Dr Manmohan Singh), ಮಾಜಿ ಕೇಂದ್ರ ಸಚಿವ ಮುರಳಿ ಮನೋಹರ್‌ ಜೋಶಿ (Dr Murli Manohar Joshi) ಮತದಾನ ಮಾಡಿದ್ದಾರೆ.

    ದೆಹಲಿ ಸಂಸದೀಯ ಕ್ಷೇತ್ರದ (New Delhi Parliamentary Constituency) ಸದಸ್ಯರಾಗಿರುವ ಇವರು ಮನೆಯಲ್ಲೇ ಮತದಾನದ ಸೌಲಭ್ಯವನ್ನು ಪಡೆದರು. ಇದನ್ನೂ ಓದಿ: ಪೆನ್‌ಡ್ರೈವ್ ಪ್ರಕರಣದಲ್ಲಿ ಅನೇಕರು ಭಾಗಿಯಾಗಿದ್ದಾರೆ – ಕೊನೆಗೂ ಮೌನ ಮುರಿದ ದೊಡ್ಡಗೌಡರು

    ಮತ ಪ್ರಮಾಣವನ್ನು ಏರಿಕೆ ಮಾಡುವ ದೃಷ್ಟಿಯಿಂದ ಚುನಾವಣಾ ಆಯೋಗ 85 ವರ್ಷ ಮೇಲ್ಪಟ್ಟವರ ನಿವಾಸಕ್ಕೆ ಚುನಾವಣಾ ಸಿಬ್ಬಂದಿಯನ್ನು ಕಳುಹಿಹಿಸಿ ಮತವನ್ನು ಸಂಗ್ರಹಿಸುತ್ತದೆ.

    ದೆಹಲಿಯಲ್ಲಿ ಒಟ್ಟು 7 ಲೋಕಸಭಾ ಕ್ಷೇತ್ರಗಳಿದ್ದು ಮೇ 25 ರಂದು ಮತದಾನ ನಡೆಯಲಿದೆ.

  • ರಾಮಮಂದಿರ ಉದ್ಘಾಟನೆಗೆ ಬರಬೇಡಿ – ಅಡ್ವಾಣಿ, ಜೋಶಿಯಲ್ಲಿ ಮನವಿ – ಬರಲಿರುವ VIP ಗಣ್ಯರು ಯಾರು?

    ರಾಮಮಂದಿರ ಉದ್ಘಾಟನೆಗೆ ಬರಬೇಡಿ – ಅಡ್ವಾಣಿ, ಜೋಶಿಯಲ್ಲಿ ಮನವಿ – ಬರಲಿರುವ VIP ಗಣ್ಯರು ಯಾರು?

    – 4,000 ಸಂತರು, 2,200 ಅತಿಥಿಗಳಿಗೆ ಆಹ್ವಾನ
    – ಮುಕೇಶ್ ಅಂಬಾನಿ, ಅಮಿತಾಬ್ ಬಚ್ಚನ್, ರಜನಿಕಾಂತ್‌ಗೂ ಆಹ್ವಾನ
    – ಅತಿಥಿಗಳ ವಾಸ್ತವ್ಯಕ್ಕೆ 600 ಕೊಠಡಿಗಳ ವ್ಯವಸ್ಥೆ

    ಲಕ್ನೋ (ಅಯೋಧ್ಯೆ): ಅಯೋಧ್ಯೆಯಲ್ಲಿ ರಾಮಮಂದಿರ (Ayodhya Ram Mandir) ಉದ್ಘಾಟನೆಗೆ ದಿನಗಳು ಹತ್ತಿರವಾಗುತ್ತಿದ್ದಂತೆ ಮಹತ್ವದ ಬೆಳವಣಿಗೆಗಳು ಕಂಡುಬರುತ್ತಿವೆ. ಈ ಮಧ್ಯೆ ಉದ್ಘಾಟನಾ ಸಮಾರಂಭಕ್ಕೆ ಬರಬೇಡಿ ಎಂದು ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಬಿಜೆಪಿಯ ಹಿರಿಯ ನಾಯಕರಾದ ಲಾಲ್ ಕೃಷ್ಣ ಅಡ್ವಾಣಿ (LK Advani) ಹಾಗೂ ಮುರಳಿ ಮನೋಹರ್ ಜೋಶಿ (Murli Manohar Joshi) ಅವರಿಗೆ ಮನವಿ ಮಾಡಿದ್ದಾರೆ.

    ಈ ಕುರಿತು ಸ್ಪಷ್ಟನೆ ನೀಡಿರುವ ಚಂಪತ್ ರೈ, ಆರೋಗ್ಯ ಮತ್ತು ವಯೋಸಹಜ ಕಾರಣಗಳಿಂದಾಗಿ ಮುರಳಿ ಮನೋಹರ್ ಜೋಶಿ ಮತ್ತು ಲಾಲ್ ಕೃಷ್ಣ ಅಡ್ವಾಣಿ ಅವರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ. ಇಬ್ಬರೂ ಹಿರಿಯರು, ಅವರ ವಯಸ್ಸನ್ನು ಪರಿಗಣಿಸಿ ಉದ್ಘಾಟನಾ ಸಮಾರಂಭಕ್ಕೆ ಬಾರದಂತೆ ಮನವಿ ಮಾಡಿದ್ದೇವೆ. ಅದಕ್ಕೆ ಅವರೂ ಸಮ್ಮತಿ ಸೂಚಿಸಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀರಾಮ ಮಂದಿರ ಉದ್ಘಾಟನೆಗೆ 2,500 ಸಂತರಿಗೆ ಆಹ್ವಾನ – ದಂಡ, ಚನ್ವಾರ್, ಛತ್ರ, ಪಾದುಕೆ ತರದಂತೆ ಮನವಿ

    ಮುಂದುವರಿದು ಮಾತನಾಡಿ, 2024ರ ಜನವರಿ 15ರ ಒಳಗೆ ಧಾರ್ಮಿಕ ಕಾರ್ಯಕ್ರಮಕ್ಕೆ ಸಂಬಂಧಿಸಿದ ಸಿದ್ಧತೆಗಳು ಪೂರ್ಣಗೊಳ್ಳಲಿವೆ. `ಪ್ರಾಣ ಪ್ರತಿಷ್ಠೆ’ (Pran Pratishtha) ಪೂಜೆಯು ಜನವರಿ 16 ರಂದು ಪ್ರಾರಂಭವಾಗಿ ಜ.22ರ ವರೆಗೆ ನಡೆಯಲಿದೆ. ಸುಮಾರು 150 ಸಂತರು ಮತ್ತು ಋಷಿಮುನಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಂತಶ್ರೇಷ್ಠ ಶಂಕರಾಚಾರ್ಯ ತತ್ವಶಾಸ್ತ್ರ ಪರಂಪರೆಯ 6 ಸಂತರು ಭಾಗವಹಿಸಲಿದ್ದಾರೆ. ಅಷ್ಟುಮಾತ್ರವಲ್ಲದೇ ಸಮಾರಂಭಕ್ಕೆ ಸುಮಾರು 4,000 ಸಂತರು, 2,200 ಅತಿಥಿಗಳನ್ನು ಆಹ್ವಾನಿಸಲಾಗಿದೆ. ಕಾಶಿ ವಿಶ್ವನಾಥ, ವೈಷ್ಣೋದೇವಿಯಂತಹ (Vaishnodevi) ಪ್ರಮುಖ ದೇವಾಲಯಗಳ ಮುಖ್ಯಸ್ಥರು ಮತ್ತು ಧಾರ್ಮಿಕ ಮತ್ತು ಸಾಂವಿಧಾನಿಕ ಸಂಸ್ಥೆಗಳ ಪ್ರತಿನಿಧಿಗಳನ್ನೂ ಆಹ್ವಾನಿಸಲಾಗಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ರಾಮ ಮಂದಿರ ಉದ್ಘಾಟನೆಗೆ ದಿನಗಣನೆ- ಅಂತಿಮ ಹಂತದಲ್ಲಿ ತಯಾರಿ, ವಿಶೇಷ ಸಾರಿಗೆ ವ್ಯವಸ್ಥೆ

    ಅಲ್ಲದೇ, ಆಧ್ಯಾತ್ಮಿಕ ಗುರು ದಲೈಲಾಮಾ, ಕೇರಳದ ಮಾತಾ ಅಮೃತಾನಂದಮಯಿ, ಯೋಗ ಗುರು ಬಾಬಾ ರಾಮ್‌ದೇವ್, ನಟರಾದ ರಜನಿಕಾಂತ್, ಅಮಿತಾಬ್ ಬಚ್ಚನ್, ಮಾಧುರಿ ದೀಕ್ಷಿತ್, ಅರುಣ್ ಗೋವಿಲ್, ಚಲನಚಿತ್ರ ನಿರ್ದೇಶಕ ಮಧುರ್ ಭಂಡಾರ್‌ಕರ್, ಪ್ರಮುಖ ಉದ್ಯಮಿಗಳಾದ ಮುಕೇಶ್ ಅಂಬಾನಿ, ಅನಿಲ್ ಅಂಬಾನಿ, ಖ್ಯಾತ ಚಿತ್ರಕಲಾವಿದ ವಾಸುದೇವ್ ಕಾಮತ್, ಇಸ್ರೋದ ನಿರ್ದೇಶಕ ನೀಲೇಶ್ ದೇಸಾಯಿ ಸೇರಿದಂತೆ ಹಲವು ಖ್ಯಾತ ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಅತಿಥಿಗಳ ವಾಸ್ತವ್ಯಕ್ಕೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ವಿವಿಧ ಮಠಗಳು, ದೇವಸ್ಥಾನಗಳು ಮತ್ತು ಮನೆಗಳು ಸೇರಿದಂತೆ 600 ಕೊಠಡಿಗಳ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    ಪಟ್ಟಾಭಿಷೇಕದ ನಂತರ ಜನವರಿ 24 ರಿಂದ ಉತ್ತರ ಭಾರತದ ಸಂಪ್ರದಾಯದಂತೆ 48 ದಿನಗಳ ಕಾಲ ಮಹಾಮಂಡಲ ಪೂಜೆ ನಡೆಯಲಿದೆ. ಇದೇ ವೇಳೆ ಜನವರಿ 23 ರಿಂದ ಶ್ರೀಸಾಮಾನ್ಯರು ಶ್ರೀರಾಮನ ದರ್ಶನ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚಿನ್ನ ಲೇಪಿತ ಅಮೃತಶಿಲೆಯ ಸಿಂಹಾಸನದ ಮೇಲೆ ತಲೆ ಎತ್ತಲಿದೆ ಶ್ರೀರಾಮನ ಮೂರ್ತಿ

  • ಬಾಬ್ರಿ ಮಸೀದಿ ವಿವಾದ: ಅಡ್ವಾಣಿ ಸೇರಿ ಹಲವು ನಾಯಕರನ್ನು ಖುಲಾಸೆಗೊಳಿಸಿದ್ದ ಅರ್ಜಿ ಆ.1ಕ್ಕೆ ವಿಚಾರಣೆ

    ಬಾಬ್ರಿ ಮಸೀದಿ ವಿವಾದ: ಅಡ್ವಾಣಿ ಸೇರಿ ಹಲವು ನಾಯಕರನ್ನು ಖುಲಾಸೆಗೊಳಿಸಿದ್ದ ಅರ್ಜಿ ಆ.1ಕ್ಕೆ ವಿಚಾರಣೆ

    ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಸೇರಿದಂತೆ ಹಲವು ನಾಯಕರನ್ನು ಖುಲಾಸೆಗೊಳಿಸಿ ಲಕ್ನೋ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು. ಆದರೆ ಈ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಯ ಅರ್ಜಿ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಆಗಸ್ಟ್ 1ರಂದು ನಡೆಸಲಿದೆ.

    ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ಬಿಜೆಪಿ ನಾಯಕರಾದ ಮುರುಳಿ ಮನೋಹರ್ ಜೋಶಿ, ಉಮಾ ಭಾರತಿ ಮತ್ತು ಇತರ ಹಲವು ನಾಯಕರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆಗೊಳಿಸಿತ್ತು. ಇದನ್ನೂ ಓದಿ: ಬಾಬ್ರಿ ಮಸೀದಿ ಧ್ವಂಸ ಆಕಸ್ಮಿಕ ಘಟನೆ – ಎಲ್ಲ ಆರೋಪಿಗಳು ಖುಲಾಸೆ

    ಆಗಸ್ಟ್ 1ರಂದು ಮೇಲ್ಮನವಿ ವಿಚಾರಣೆಗೆ ನಿಗದಿಪಡಿಸುವಂತೆ ನ್ಯಾಯಮೂರ್ತಿ ದಿನೇಶ್ ಕುಮಾರ್ ಸಿಂಗ್ ಅವರ ನೇತೃತ್ವದ ಏಕಸದಸ್ಯ ಪೀಠವು ಆರಂಭದಲ್ಲಿ ಆದೇಶ ಮಾಡಿತ್ತು. ಆಗಸ್ಟ್ 1ರಂದು ಈ ಮೇಲ್ಮನವಿಯನ್ನು ಮೊದಲ 10 ಪ್ರಕರಣಗಳಲ್ಲಿ ಒಂದಾಗಿ ಪಟ್ಟಿ ಮಾಡಿ ಎಂದು ನ್ಯಾಯಾಲಯ ನಿರ್ದೇಶಿಸಿತ್ತು.

    ಬಾಬ್ರಿ ಮಸೀದಿಯನ್ನು ಧ್ವಂಸ ಮಾಡಲು ಪಿತೂರಿ ನಡೆಸಲಾಗಿತ್ತು ಎಂದು ತೋರಿಸಲು ಯಾವುದೇ ದಾಖಲೆಗಳು ಇಲ್ಲ ಎಂದು ಸಿಬಿಐ ವಿಶೇಷ ನ್ಯಾಯಾಲಯವು 2020ರಲ್ಲಿ ನೀಡಿದ್ದ ತೀರ್ಪನ್ನು ಅಯೋಧ್ಯೆಯ ನಿವಾಸಿಗಳಾದ ಹಾಜಿ ಮಹಬೂಬ್ ಅಹಮದ್ ಮತ್ತು ಸಯ್ಯದ್ ಅಖ್ಲಾಖ್ ಅಹಮದ್ ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬಾಬ್ರಿ ಮಸೀದಿ ಇತ್ತು, ಮುಂದೆಯೂ ಇರಲಿದೆ: ಭೂಮಿ ಪೂಜೆಗೂ ಮುನ್ನ ಓವೈಸಿ ಟ್ವೀಟ್

    ತಾವು ಐತಿಹಾಸಿಕ ಧಾರ್ಮಿಕ ಸ್ಥಳವಾದ ಬಾಬ್ರಿ ಮಸೀದಿ ಧ್ವಂಸದ ಸಂತ್ರಸ್ತರಾಗಿದ್ದು, ಆ ಘಟನೆಗೆ ಸಾಕ್ಷಿಗಳಾಗಿದ್ದೇವೆ. ಆ ಸಂದರ್ಭದಲ್ಲಿ ನಡೆದ ದೊಂಬಿ ಗಲಭೆಗಳಿಂದ ಆರ್ಥಿಕವಾಗಿ ಸಾಕಷ್ಟು ನಷ್ಟ ಅನುಭವಿಸಿದ್ದೇವೆ ಎಂದು ಅರ್ಜಿದಾರರು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

    2021ರಲ್ಲೇ ಪರಿಷ್ಕರಣಾ ಮನವಿ ಸಲ್ಲಿಸಲಾಗಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಸಯ್ಯದ್ ಫರ್ಮಾನ್ ಅಲಿ ನಖ್ವಿ ಅವರು ಪೀಠಕ್ಕೆ ತಿಳಿಸಿದರು. ಸಿಆರ್‌ಪಿಸಿ ಸೆಕ್ಷನ್ 372ಗೆ ತಿದ್ದುಪಡಿಯಾಗಿರುವುದರಿಂದ ಅರ್ಜಿಯನ್ನು ಮೇಲ್ಮನವಿಯಾಗಿ ಪರಿಗಣಿಸುವಂತೆ ಕೋರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಬಾಬ್ರಿ ಮಸೀದಿ ಧ್ವಂಸ ಕೇಸ್‌, ಸೆ.30ಕ್ಕೆ ಅಂತಿಮ ತೀರ್ಪು – 32 ಆರೋಪಿಗಳು ಹೆಸರು ಇಲ್ಲಿದೆ

    ಬಾಬ್ರಿ ಮಸೀದಿ ಧ್ವಂಸ ಕೇಸ್‌, ಸೆ.30ಕ್ಕೆ ಅಂತಿಮ ತೀರ್ಪು – 32 ಆರೋಪಿಗಳು ಹೆಸರು ಇಲ್ಲಿದೆ

    ಲಕ್ನೋ: 28ವರ್ಷಗಳ ಹಳೆಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಮುಕ್ತಾಯಗೊಂಡಿದ್ದು ಸೆ.30ರಂದು ಅಂತಿಮ ತೀರ್ಪು ಪ್ರಕಟಿಸುವುದಾಗಿ ಸಿಬಿಐ ವಿಶೇಷ ಕೋರ್ಟ್ ತಿಳಿಸಿದೆ.

    ತೀರ್ಪು ನೀಡುವ ದಿನ ಎಲ್ಲ ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ನ್ಯಾ.ಸುರೇಂದ್ರ ಕುಮಾರ್ ಯಾದವ್‌ ಸೂಚಿಸಿದ್ದಾರೆ.

    ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್, ಉಮಾಭಾರತಿ ಸೇರಿದಂತೆ 32 ಮಂದಿ ಆರೋಪಿಗಳಿದ್ದಾರೆ.

     

     

    351 ಸಾಕ್ಷಿ ಹಾಗೂ 600 ದಾಖಲಾತಿ ಸಾಕ್ಷ್ಯಗಳನ್ನು ನ್ಯಾಯಾಲಯದ ಮುಂದೆ ಸಿಬಿಐ ಹಾಜರುಪಡಿಸಿತ್ತು. ಸೆಪ್ಟೆಂಬರ್‌ 1ರಂದು ವಾದ ಮತ್ತು ಪ್ರತಿವಾದ ಮುಗಿದಿದ್ದು, ವಿಶೇಷ ನ್ಯಾಯಾಧೀಶರು ತೀರ್ಪು ಬರೆಯುತ್ತಿದ್ದಾರೆ ಎಂದು ಸಿಬಿಐ ಪರ ವಕೀಲ ಲಲಿತ್‌ ಸಿಂಗ್‌ ತಿಳಿಸಿದ್ದಾರೆ.

    2017ರ ಏಪ್ರಿಲ್‌ 19 ಎಂದು ಪ್ರತಿನಿತ್ಯ ವಿಚಾರಣೆ ನಡೆಸಿ 2 ವರ್ಷದ ಒಳಗಡೆ ತೀರ್ಪು ಪ್ರಕಟಿಸುವಂತೆ ಸಿಬಿಐ ವಿಶೇಷ ಕೋರ್ಟ್‌ಗೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು.

    ಬಾಬ್ರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಎರಡು ಪ್ರಕರಣ ದಾಖಲಾಗಿತ್ತು. ಲಕ್ನೋ ಸಿಬಿಐ ನ್ಯಾಯಾಲಯದಲ್ಲಿ ಕರಸೇವಕರ ವಿರುದ್ಧದ ಪ್ರಕರಣದ ವಿಚಾರಣೆ ನಡೆಯುತ್ತಿದ್ದರೆ 8 ವಿಐಪಿಗಳ ವಿರುದ್ಧ ರಾಯಬರೇಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. 2017ರ ಏಪ್ರಿಲ್‌ನಲ್ಲಿ ರಾಯಬರೇಲಿ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಯನ್ನು ಲಕ್ನೋ ಸಿಬಿಐ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್‌ ವರ್ಗಾಯಿಸಿತ್ತು.

    32 ಮಂದಿಆರೋಪಿಗಳು ಯಾರು?
    ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಸುಧೀರ್ ಕಕ್ಕರ್, ಸತೀಶ್ ಪ್ರಧಾನ್, ರಾಮ್ ಚಂದ್ರ ಖತ್ರಿ, ಸಂತೋಷ್ ದುಬೆ, ಓಂ ಪ್ರಕಾಶ್ ಪಾಂಡೆ, ಕಲ್ಯಾಣ್ ಸಿಂಗ್, ಉಮಾ ಭಾರತಿ, ರಾಮ್ ವಿಲಾಸ್ ವೇದಾಂತಿ, ವಿನಯ್ ಕಟಿಯಾರ್, ಪ್ರಕಾಶ್ ಶರ್ನಾ, ಗಾಂಧಿ ಸಿಂಗ್ ಕಮಲೇಶ್ ತ್ರಿಪಾಠಿ, ಬ್ರಿಜ್ ಭೂಷಣ್ ಸಿಂಗ್, ರಾಮ್ಜಿ ಗುಪ್ತಾ, ಮಹಂತ್ ನೃತ್ಯ ಗೋಪಾಲ್ ದಾಸ್, ಚಂಪತ್ ರಾಯ್, ಸಾಕ್ಷಿ ಮಹಾರಾಜ್, ವಿನಯ್ ಕುಮಾರ್ ರೈ, ನವೀನ್ ಭಾಯ್ ಶುಕ್ಲಾ, ಧರ್ಮದಾಸ್, ಜೈ ಭಗವಾನ್ ಗೋಯೆಲ್, ಅಮರನಾಥ್ ಗೋಯೆಲ್, ಸಾಧ್ವಿ ರಿತಂಬರ, ಪವನ್‌ ಪಾಂಡೆ, ವಿಜಯ್‌ ಬಹದ್ದೂರ್‌ ಸಿಂಗ್‌, ಆರ್‌ಎಂ ಶ್ರೀವತ್ಸ, ಧರ್ಮೇಂದ್ರ ಸಿಂಗ್ ಗುಜ್ಜರ್.

  • ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಹೆಸರಿಲ್ಲ

    ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಹೆಸರಿಲ್ಲ

    ನವದೆಹಲಿ: ಉತ್ತರ ಪ್ರದೇಶದ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದ್ದು, ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಶಿ ಅವರಿಗೆ ಸ್ಥಾನ ನೀಡಿಲ್ಲ.

    ಉತ್ತರ ಪ್ರದೇಶದಲ್ಲಿ ಲೋಕಸಭಾ ಚುನಾವಣೆಗಾಗಿ ಪ್ರಚಾರ ಮಾಡಲು ಬಿಜೆಪಿಯು 40 ಜನ ತಾರಾ ಪ್ರಚಾರಕರನ್ನು ಆಯ್ಕೆ ಮಾಡಿದೆ. ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಉಪಾಧ್ಯಕ್ಷೆ ಉಮಾ ಭಾರತಿ, ಗೃಹಸಚಿವ ರಾಜನಾಥ್ ಸಿಂಗ್, ಸಚಿವರಾದ ನಿತಿನ್ ಗಡ್ಕರಿ, ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್ ಸ್ಥಾನ ಪಡೆದಿದ್ದಾರೆ. ಈಗ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಜೋಶಿ ಮತ್ತು ಅಡ್ವಾಣಿಯವರಿಗೆ ಸ್ಥಾನ ನೀಡಿಲ್ಲ.

    ಬಿಜೆಪಿ ಹೈಕಮಾಂಡ್ 75 ವರ್ಷಕ್ಕಿಂತ ಹೆಚ್ಚು ವಯಸ್ಸಾದ ನಾಯಕರನ್ನು ರಾಷ್ಟ್ರೀಯ ಚುನಾವಣೆಗೆ ನಿಲ್ಲದಂತೆ ಸೂಚಿಸಿದೆ. ಈ ಬಗ್ಗೆ ಕಾನ್ಪುರ ಜನತೆಗೆ ಪತ್ರ ಬರೆದಿರುವ ಮುರಳಿ ಮನೋಹರ್ ಜೋಶಿ ಅವರು, ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಲಾಲ್ ಅವರು ನನ್ನನ್ನು ಭೇಟಿ ಮಾಡಿ, ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸದಿರುವಂತೆ ಸೂಚಿಸಿದ್ದಾರೆ. ಕಾನ್ಪುರ ಮಾತ್ರವಲ್ಲ ಬೇರೆ ಯಾವುದೇ ಕ್ಷೇತ್ರದಿಂದಲೂ ಸ್ಪರ್ಧೆ ಮಾಡಬಾರದು ಎಂದು ಹೇಳಿದ್ದಾರೆ. ಆದರಿಂದ ನಾನು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದು ತಿಳಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದ ಮೇಲೆ 75 ವರ್ಷ ಮೇಲ್ಪಟ್ಟ ಬಿಜೆಪಿ ನಾಯಕರಿಗೆ ಮಾರ್ಗದರ್ಶಕ ಮಂಡಳಿಯಲ್ಲಿ ಸ್ಥಾನ ನೀಡಲಾಗಿತ್ತು. ಅಟಲ್ ಬಿಹಾರಿ ವಾಜಪೇಯಿ, ಅಡ್ವಾಣಿ, ಮುರಳಿ ಮನೋಹರ್ ಜೋಷಿ ಈ ಮಾರ್ಗದರ್ಶನ ಮಂಡಳಿಯಲ್ಲಿ ಸ್ಥಾನ ಪಡೆದಿದ್ದರು.

    91 ವರ್ಷದ ಅಡ್ವಾಣಿ ಅವರು ಗುಜರಾತ್‍ನ ಗಾಂಧಿನಗರ ಕ್ಷೇತ್ರದಿಂದ ಸ್ಪರ್ಧಿಸಿ 5 ಬಾರಿ ಸಂಸತ್ ಪ್ರವೇಶಿಸಿದ್ದರು. 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರ ವಹಿಸಿಕೊಂಡ ಬಳಿಕ ಅಡ್ವಾಣಿ ಅವರನ್ನು ಕಡೆಗಣಿಸಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಸಂಸತ್ ಸದಸ್ಯರಾಗಿ ಅಡ್ವಾಣಿ ಅವರು ಕಳೆದ ಐದು ವರ್ಷಗಳಲ್ಲಿ ಶೇ.92 ರಷ್ಟು ಹಾಜರಾತಿಯನ್ನು ಹೊಂದಿದ್ದಾರೆ. ಆದರೆ ಕೇವಲ 365 ಪದಗಳನ್ನು ಮಾತ್ರವೇ ಸಂಸತ್‍ನಲ್ಲಿ ಮಾತನಾಡಿದ್ದಾರೆ. ಈ ಬಾರಿ ಗಾಂಧಿನಗರ ಕ್ಷೇತ್ರದಿಂದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಣಕ್ಕೆ ಇಳಿದಿದ್ದಾರೆ.

    1991ರಿಂದಲೂ ಗುಜರಾತ್‍ನ ಗಾಂಧಿನಗರದಿಂದ ಅಡ್ವಾಣಿ ಸತತ 5 ಬಾರಿ ಆಯ್ಕೆಯಾಗಿದ್ದರು. ಅಲ್ಲದೇ 2014ರ ವರೆಗೂ ಕೂಡ ಅಧಿಕ ಮತಗಳಿಂದ ಜಯಗಳಿಸಿದ ಸ್ಥಾನದಲ್ಲಿ ಅಡ್ವಾಣಿ ಮೊದಲಿಗರು. ವಿಶೇಷ ಏನೆಂದರೆ 1998ರಲ್ಲಿ 2.77 ಲಕ್ಷ ಮತಗಳಿಂದ ಗೆಲುವು ಪಡೆದಿದ್ದರು. ಕಳೆದ 2014ರ ಲೋಕಸಭಾ ಚುನಾವಣೆಯಲ್ಲಿ 7,73,539 ಮತ ಪಡೆದಿದ್ದರು. ಅಲ್ಲದೇ ಎದುರಾಳಿ ಕಾಂಗ್ರೆಸ್ ಪಕ್ಷದ ಈಶ್ವರಭಾಯಿ ಪಟೇಲ್ ಕೇವಲ 2,90,419 ಮತಗಳನ್ನು ಮಾತ್ರ ಪಡೆದಿದ್ದರು. ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಅಮಿತ್ ಶಾ ಗಾಂಧೀನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸರ್ಕೇಜ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿದ್ದರು.

  • ಬಾಬರಿ ಮಸೀದಿ ಧ್ವಂಸ ಪ್ರಕರಣ – ಅಡ್ವಾಣಿ, ಉಮಾಭಾರತಿ ಸೇರಿ 12 ಮಂದಿಗೆ ಜಾಮೀನು

    ಬಾಬರಿ ಮಸೀದಿ ಧ್ವಂಸ ಪ್ರಕರಣ – ಅಡ್ವಾಣಿ, ಉಮಾಭಾರತಿ ಸೇರಿ 12 ಮಂದಿಗೆ ಜಾಮೀನು

    ಲಖನೌ: ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರಾದ ಲಾಲ್ ಕೃಷ್ಣ ಅಡ್ವಾಣಿ, ಕೇಂದ್ರ ಸಚಿವೆ ಉಮಾಭಾರತಿ ಹಾಗೂ ಮುರಳಿ ಮನೋಹರ ಜೋಷಿ ಸೇರಿದಂತೆ ಪ್ರಕರಣದ 12 ಆರೋಪಿಗಳಿಗೆ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.

    ಉತ್ತರ ಪ್ರದೇಶದ ಲಖನೌನಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ನ್ಯಾಯಮೂರ್ತಿ ಎಸ್ ಕೆ ಯಾದವ್ ನೇತೃತ್ವದಲ್ಲಿ ವಿಚಾರಣೆ ನಡೆಯಿತು. ಈ ಹಿಂದಿನ ವಿಚಾರಣೆಯಲ್ಲಿ ಆರೋಪಿಗಳು ಖುದ್ದಾಗಿ ಹಾಜರಾಗಬೇಕು. ಇಲ್ಲದಿದ್ದರೆ ಯಾವುದೇ ರೀತಿಯ ಮನವಿ ಮತ್ತು ಅರ್ಜಿಗಳನ್ನು ಸ್ಪೀಕರಿಸುವುದಿಲ್ಲ ಎಂದು ನ್ಯಾಯಮೂರ್ತಿ ಎಸ್.ಕೆ. ಯಾದವ್ ಸ್ಪಷ್ಟಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಎಲ್ಲ ಆರೋಪಿಗಳು ಇಂದು ವಿಚಾರಣೆಗೆ ಖುದ್ದು ಹಾಜರಾಗಿ, ಜಾಮೀನು ಅರ್ಜಿ ಸಲ್ಲಿಸಿದ್ದರು.

    ಬಾಬರಿ ಮಸೀದಿ ಧ್ವಂಸಕ್ಕೆ ಸಂಚು ರೂಪಿಸಿದ್ದರು ಎಂಬ ಆರೋಪದ ಮೇಲೆ ಕಳೆದ ಏಪ್ರಿಲ್ 19ರಂದು ಪ್ರಕರಣ ದಾಖಲಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಪ್ರಕರಣದ ತನಿಖೆಯನ್ನು ಲಖನೌನಲ್ಲಿ ನಡೆಸಿ 2 ವರ್ಷದಲ್ಲಿ ತೀರ್ಪು ನೀಡುವಂತೆ ಆದೇಶ ನೀಡಿತ್ತು.