Tag: Muruga Shri

  • ಮುರುಘಾ ಶ್ರೀಗೆ ಸದ್ಯಕ್ಕಿಲ್ಲ ರಿಲೀಫ್‌ – ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

    ಮುರುಘಾ ಶ್ರೀಗೆ ಸದ್ಯಕ್ಕಿಲ್ಲ ರಿಲೀಫ್‌ – ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

    ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಪೋಕ್ಸೊ ಪ್ರಕರಣ ಎದುರಿಸುತ್ತಿರುವ ಮುರುಘಾ ಶ್ರೀಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜಿಲ್ಲಾ ನ್ಯಾಯಾಲಯ ಶುಕ್ರವಾರಕ್ಕೆ ಮುಂದೂಡಿದೆ.

    ನಾಳೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್‌ ಅವಕಾಶ ನೀಡಿದೆ. ಈ ಸಂಬಂಧ ಸರ್ಕಾರಿ ಅಭಿಯೋಜಕರಿಗೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಆ.30ರಂದು ಅರ್ಜಿ ಸಲ್ಲಿಸಲಾಗಿತ್ತು. ಇದನ್ನೂ ಓದಿ: ಸ್ವಾಮೀಜಿಗಳ ಲೈಂಗಿಕ ದೌರ್ಜನ ಆರೋಪದ ಕೇಸನ್ನು ಸಿಬಿಐಗೆ ಒಪ್ಪಿಸಿ: ಹಿಂದುಸ್ತಾನ್ ಜನತಾ ಪಕ್ಷ ಒತ್ತಾಯ

    ಕೋರ್ಟ್‌ ವಿಚಾರಣೆ ಕುರಿತು ಮಾತನಾಡಿದ ಬಾಲಕಿಯರ ಪರ ವಕೀಲ ಶ್ರೀನಿವಾಸ್, ಮುರುಘಾ ಶರಣರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಲಾಗಿದೆ. ನಾಳೆ ಸಂತ್ರಸ್ತ ಬಾಲಕಿಯರ ಪರ ತಕರಾರು ಅರ್ಜಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

    ಮುರುಘಾ ಶ್ರೀಗಳು ಯಾವ ಗ್ರೌಂಡ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೋ ಪರಿಶೀಲಿಸಿ ನಾಳೆ ತಕರಾರು ಅರ್ಜಿ ಸಲ್ಲಿಸಲಾಗುವುದು. ನೊಂದ ಬಾಲಕಿಯರ ಪರವಾಗಿ ಕಾನೂನು ಪ್ರಾಧಿಕಾರದ ವಕೀಲರು ವಕಾಲತ್ತು ಹಾಕಿದ್ದರು. ನಾವು ಕೂಡ ವಕಾಲತ್ತು ಹಾಕಿದ್ದೇವೆ. ಬಾಲಕಿಯರು ನಮ್ಮನ್ನು ಆಯ್ಕೆ ಮಾಡಿಕೊಂಡಿದ್ದಾರೆ. ನ್ಯಾಯಾಧೀಶರ ಮುಂದೆಯೇ ಬಾಲಕಿಯರು ನಮ್ಮನ್ನು ಅವರ ಪರ ವಕೀಲರಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಶರಣರ ಜಾಮೀನು ಅರ್ಜಿ ಬಗ್ಗೆ ಸಂತ್ರಸ್ತರಿಗೆ ಮತ್ತು ಪಿಪಿಗೆ ಇಂದು ನೋಟಿಸ್ ಬಂದಿತ್ತು. ಹಾಗಾಗಿ ಇಂದು ತಕರಾರು ಸಲ್ಲಿಸಲು ಅವಕಾಶ ಇರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಮುರುಘಾ ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿ ಗುರುವಾರ ವಿಚಾರಣೆ – ಮಠಕ್ಕೆ ಪೊಲೀಸ್ ಭದ್ರತೆ

    Live Tv
    [brid partner=56869869 player=32851 video=960834 autoplay=true]

  • ಮುರುಘಾ ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿ ಗುರುವಾರ ವಿಚಾರಣೆ – ಮಠಕ್ಕೆ ಪೊಲೀಸ್ ಭದ್ರತೆ

    ಮುರುಘಾ ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿ ಗುರುವಾರ ವಿಚಾರಣೆ – ಮಠಕ್ಕೆ ಪೊಲೀಸ್ ಭದ್ರತೆ

    ಚಿತ್ರದುರ್ಗ: ಮುರುಘಾ ಶ್ರೀಗಳ ಮೇಲೆ ದಾಖಲಾಗಿರುವ ಪೋಕ್ಸೋ ಕೇಸ್‍ನಿಂದ ಚಿತ್ರದುರ್ಗದ ಬೃಹನ್ಮಠದಲ್ಲಿ ಟೆನ್ಶನ್ ಮನೆ ಮಾಡಿದೆ.

    ಸಂತ್ರಸ್ತ ವಿದ್ಯಾರ್ಥಿನಿಯರು ನೀಡಿದ ಸಿಆರ್‌ಪಿಸಿ ಸೆಕ್ಷನ್‌ 164 ಹೇಳಿಕೆ ಆಧಾರದ ಮೇಲೆ ಪೊಲೀಸರು ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆ ಎಂಬ ಚರ್ಚೆಗಳು ನಡೆಯುತ್ತಿವೆ. ಸಿಆರ್‌ಪಿಸಿ ಸೆಕ್ಷನ್‌ 164 ಹೇಳಿಕೆ ಆಧರಿಸಿ ಶ್ರೀಗಳಿಗೆ ನಾಳೆ ಪೊಲೀಸರು ನೊಟೀಸ್ ಜಾರಿ ಮಾಡಬಹುದು ಎಂಬ ಮಾತು ಕೇಳಿಬರುತ್ತಿವೆ. ಜೊತೆಗೆ ಗುರುವಾರ ಚಿತ್ರದುರ್ಗದ ಕೋರ್ಟ್‍ನಲ್ಲಿ ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿ ಬೇರೆ ವಿಚಾರಣೆಗೆ ಬರಲಿದೆ. ಈ ಮಧ್ಯೆ, ಶ್ರೀಮಠದಲ್ಲೇ ಶರಣರು ಇದ್ದು ದೈನಂದಿನ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದನ್ನೂ ಓದಿ: ಜಡ್ಜ್ ಮುಂದೆ ಹೇಳಿಕೆ ದಾಖಲಿಸಿದ ಸಂತ್ರಸ್ತೆಯರು- ಶ್ರೀಗಳಿಗೆ ನೋಟಿಸ್ ಸಾಧ್ಯತೆ

    ಇಂದು ಹಲವು ನಾಯಕರು ಬಂದು ಶ್ರೀಗಳನ್ನು ಭೇಟಿ ಮಾಡಿ ತೆರಳಿದ್ದಾರೆ. ಪ್ರಕರಣದಲ್ಲಿ ಶ್ರೀಗಳು ಪಾರಾಗಿ ಬರಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಮಠಕ್ಕೆ ಪೊಲೀಸ್ ಕಣ್ಗಾವಲಿದೆ. ಈ ಮಧ್ಯೆ, ಮಠದ ಆಡಳಿತಾಧಿಕಾರಿ ಎಸ್‍.ಕೆ ಬಸವರಾಜನ್ ವಿರುದ್ಧ ಹಾಸ್ಟೆಲ್ ವಾರ್ಡನ್ ರಶ್ಮಿ ನೀಡಿರುವ ದೂರಿನ ಮೇಲೆ ತನಿಖೆ ಮುಂದುವರಿದಿದೆ. ಇಂದು ಮುರುಘಾ ಮಠದ ವಿದ್ಯಾರ್ಥಿನಿಯರ ಹಾಸ್ಟೆಲ್‍ಗೆ ತನಿಖಾಧಿಕಾರಿ ಡಿವೈಎಸ್ಪಿ ಅನಿಲ್ ಕುಮಾರ್, ಕಾನೂನು ಸೇವಾ ಪ್ರಾಧಿಕಾರದ ನ್ಯಾಯಾಧೀಶರು ಭೇಟಿ ನೀಡಿ ಸ್ಥಳ ಮಹಜರು ನಡೆಸಿದ್ರು. ಈ ವೇಳೆ ಜಿಲ್ಲಾ ಮಕ್ಕಳ ಹಕ್ಕು ರಕ್ಷಣಾ ಅಧಿಕಾರಿ ಲೋಕೇಶ್ವರಪ್ಪ ಉಪಸ್ಥಿತರಿದ್ರು. ಸದ್ಯ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿನಿಯರನ್ನು ಮಠದ ಹಾಸ್ಟೆಲ್‍ನಿಂದ ಗೂಳೇನಹಟ್ಟಿಯ ಮೊರಾರ್ಜಿ ಶಾಲೆಯ ಹಾಸ್ಟೆಲ್‍ಗೆ ಶಿಫ್ಟ್ ಮಾಡಲಾಗಿದೆ. ಈ ಪ್ರಕರಣ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮೇಲೆ ಪರಿಣಾಮ ಬೀರದಿರಲು ಈ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಗಣೇಶೋತ್ಸವವನ್ನು ಸ್ವಾಗತಿಸಲ್ಲ, ಹುಬ್ಬಳ್ಳಿ ಆಯುಕ್ತರ ವಿರುದ್ಧ ಕ್ರಿಮಿನಲ್ ಕೇಸ್‌ : ಅಂಜುಮನ್ ಸಂಸ್ಥೆ

    Live Tv
    [brid partner=56869869 player=32851 video=960834 autoplay=true]

  • ಅನಾವರಣವಾಗಿರುವ ಪುತ್ಥಳಿಗಳಿಗೆ ಕೆಲವರು ಅವಮಾನ ಮಾಡುತ್ತಿದ್ದಾರೆ: ಮುರುಘಾ ಶ್ರೀ

    ಅನಾವರಣವಾಗಿರುವ ಪುತ್ಥಳಿಗಳಿಗೆ ಕೆಲವರು ಅವಮಾನ ಮಾಡುತ್ತಿದ್ದಾರೆ: ಮುರುಘಾ ಶ್ರೀ

    ಬೀದರ್: ಅನಾವರಣವಾಗಿರುವ ಪುತ್ಥಳಿಗಳಿಗೆ ಕೆಲವರು ಅವಮಾನ ಮಾಡುತ್ತಿದ್ದಾರೆ ಎಂದು ಪೂಜ್ಯ ಶ್ರೀ ಡಾ. ಶಿವಮೂರ್ತಿ ಮುರುಘಾ ಶರಣರು ಬೇಸರ ವ್ಯಕ್ತಪಡಿಸಿದ್ದಾರೆ.

    ಕಿಡಿಗೇಡಿಗಳಿಂದ ಸಂಗೊಳ್ಳಿ ರಾಯಣ್ಣ, ಬಸವೇಶ್ವರ ಹಾಗೂ ಶಿವಾಜಿ ಮೂರ್ತಿಗೆ ಅವಮಾನ ವಿಚಾರವಾಗಿ ಬೀದರ್ ನಲ್ಲಿ ಬಸವ ತತ್ವ ಚಿಂತನಾ ಸಭೆಯಲ್ಲಿ ಮಾತನಾಡಿದ ಅವರು,  ಅನಾವರಣವಾಗಿರುವ ಪುತ್ಥಳಿಗಳಿಗೆ ಕೆಲವರು ಅವಮಾನ ಮಾಡುತ್ತಿದ್ದಾರೆ. ಒಂದು ಕಡೆ ಅನಾವರಣ ಮೊತ್ತೊಂದು ಕಡೆ ಅವಮಾನ ಎಂದರು. ಇದನ್ನೂ ಓದಿ: ಮತಾಂತರ ನಿಷೇಧ ಜೊತೆಗೆ ಪಕ್ಷಾಂತರ ನಿಷೇಧ ಕಾನೂನನ್ನೂ ಜಾರಿಗೆ ತರಲಿ: ಸಿ.ಎಂ ಇಬ್ರಾಹಿಂ

    ಸತ್ಪುರುಷರ ಮೂರ್ತಿಗಳಿಗೆ ಅವಮಾನ ಮಾಡಬೇಡಿ ಎಂದು ನಾನು ಕೇಳಿಕೊಳ್ಳುತ್ತೆನೆ. ಅವಮಾನ ಮಾಡೋದು ಅದು ಕಿಡಿಗೇಡಿತನ. ಭಾವನೆಗಳ ಜೊತೆಗೆ ಭಾವನಾತ್ಮಕ ಸಂಗತಿಗಳ ಜೊತೆ ನಾವು ಚೆಲ್ಲಾಟವಾಡಬಾರದು ಎಂದು ಪುಂಡರಿಗೆ ಶ್ರೀಗಳು ಎಚ್ಚರಿಕೆ ನೀಡಿದ್ದಾರೆ.

    ಶಿವಾಜಿ, ಸಂಗೊಳ್ಳಿ ರಾಯಣ್ಣ ಹಾಗೂ ಬಸವೇಶ್ವರ ಮೂರ್ತಿಗಳಿಗೆ ಅವಮಾನವಾಗಿದೆ. ಮುಂದೆ ಯಾರಿಗೆ ಅವಮಾನ ಆಗುತ್ತೋ ಗೋತ್ತಿಲ್ಲ. ಹೀಗಾಗಿ ಇಂಥಾ ಶಕ್ತಿಗಳಿಗೆ ಕೇಳಿಕೊಳ್ಳುತ್ತೆನೆ ಭಾವನೆಗಳ ಜೊತೆ ಚೆಲ್ಲಾಟ ಆಡಬೇಡಿ. ಹೋರಾಟ ಮಾಡೋಕೆ, ವಿಚಾರಗಳನ್ನು ಮಂಡನೆ ಮಾಡೋಕೆ ಸಂದರ್ಭಗಳು ಇವೆ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ಅವಶ್ಯಕತೆ ಏನಿದೆ?: ಎಚ್.ಡಿ ರೇವಣ್ಣ

    ಸತ್ಪುರುಷರ ಪುತ್ಥಳಿ ಅವಮಾನ ಮಾಡೋದು ತುಂಬಾ ಸಂಕೀರ್ಣವಾದ ವಿಚಾರ. ತುಂಬಾ ಭಾವೋದ್ರೇಕ ವಿಚಾರವಾಗಿದೆ. ಪ್ರಜ್ಞಾವಂತರು ಯಾರು ಭಾವೋದ್ರೇಕದ ಜೊತೆ ಚೆಲ್ಲಾಟವಾಡಬಾರದು. ಇಂತಹ ಸಮಯದಲ್ಲಿ ಸಾಮಾಜಿಕ ಸಾಮರಸ್ಯ ಕಾಪಾಡಬೇಕು ಎಂದು ನುಡಿದರು.