Tag: Muslim woman

  • 10 ಮುಸ್ಲಿಂ ಯುವತಿಯರನ್ನು ಕರೆತಂದು ಹಿಂದೂ ಯುವಕರು ಮದುವೆಯಾಗಿ: ಬಿಜೆಪಿ ಮಾಜಿ ಶಾಸಕ ವಿವಾದಾತ್ಮಕ ಹೇಳಿಕೆ

    10 ಮುಸ್ಲಿಂ ಯುವತಿಯರನ್ನು ಕರೆತಂದು ಹಿಂದೂ ಯುವಕರು ಮದುವೆಯಾಗಿ: ಬಿಜೆಪಿ ಮಾಜಿ ಶಾಸಕ ವಿವಾದಾತ್ಮಕ ಹೇಳಿಕೆ

    ಲಕ್ನೋ: ಹಿಂದೂ ಯುವಕರು ಕನಿಷ್ಠ 10 ಮುಸ್ಲಿಂ ಯುವತಿಯರನ್ನು ಕರೆದುಕೊಂಡು ಬಂದು ಮದುವೆಯಾಗಿ ಎಂದು ಬಿಜೆಪಿ ಮಾಜಿ ಶಾಸಕ ರಾಘವೇಂದ್ರ ಪ್ರತಾಪ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಮುಸ್ಲಿಂ ಯುವತಿಯರೊಂದಿಗೆ ಓಡಿಹೋದ ಯಾವುದೇ ಹಿಂದೂ ಯುವಕರಿಗೆ ಉದ್ಯೋಗ ವ್ಯವಸ್ಥೆ ಮಾಡಲಾಗುವುದು. ರಾಜ್ಯದಲ್ಲಿ ಹಿಂದೂಗಳು ಯಾವುದೇ ಭಯವಿಲ್ಲದೆ ಏನು ಬೇಕಾದರೂ ಮಾಡಬಹುದು ಎಂದು ಉತ್ತರ ಪ್ರದೇಶದ ಮಾಜಿ ಶಾಸಕ ನಾಲಿಗೆ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: ಅತ್ಯಾಚಾರ ಕೇಸ್‌ – ಸ್ವಯಂ ಘೋಷಿತ ದೇವಮಾನವ ಅಸರಾಂಗೆ ಮಧ್ಯಂತರ ಜಾಮೀನು

    ಸಿದ್ಧಾರ್ಥನಗರ ಜಿಲ್ಲೆಯ ದುಮಾರಿಯಾಗಂಜ್‌ನ ಮಾಜಿ ಬಿಜೆಪಿ ಶಾಸಕ ರಾಘವೇಂದ್ರ ಪ್ರತಾಪ್ ಸಿಂಗ್, ಕ್ಷೇತ್ರದ ಧಂಖರ್‌ಪುರ ಗ್ರಾಮಕ್ಕೆ ಹೋಗಿದ್ದರು. ಅಲ್ಲಿ ಇಬ್ಬರು ಹಿಂದೂ ಮಹಿಳೆಯರನ್ನು ಮುಸ್ಲಿಂ ಪುರುಷರೊಂದಿಗೆ ಬಲವಂತವಾಗಿ ಮದುವೆಯಾಗಿಸಿ ಮತಾಂತರಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಮಾಜಿ ಶಾಸಕ ಹೇಳಿಕೆ ನೀಡಿದ್ದಾರೆ.

    ಮುಸ್ಲಿಂ ಹುಡುಗಿಯೊಂದಿಗೆ ಓಡಿಹೋದ ಯಾವುದೇ ಹಿಂದೂವಿನ ಮದುವೆಯನ್ನು ನಾನು ಮುಂದೆ ನಿಂತು ಮಾಡಿಸುತ್ತೇನೆ. ಅವರಿಗೆ ಉದ್ಯೋಗ ವ್ಯವಸ್ಥೆಯನ್ನೂ ಮಾಡುತ್ತೇನೆ ಎಂದು ಸಿಂಗ್‌ ತಿಳಿಸಿದ್ದಾರೆ.

    ಈಗ ಅಖಿಲೇಶ್‌ ಯಾದವ್‌ ಅವರ ಆಡಳಿತ ಇಲ್ಲ. ಭಯಪಡುವ ಅಗತ್ಯವಿಲ್ಲ. ನಾವು ನಿಮ್ಮೊಂದಿಗಿದ್ದೇವೆ. ಮುಸ್ಲಿಂ ಹುಡುಗರು ಇಬ್ಬರು ಹಿಂದೂ ಹುಡುಗಿಯರನ್ನು ಮದುವೆಯಾಗಿರುವ ವಿಚಾರ ಅಲ್ಲಿಗೆ ನಿಲ್ಲುವುದಿಲ್ಲ. ಹಿಂದೂ ಯುವಕರು ಕನಿಷ್ಠ 10 ಮುಸ್ಲಿಂ ಹುಡುಗಿಯರನ್ನು ಕರೆತಂದು ಮದುವೆಯಾಗಬೇಕು. ಉಳಿದದ್ದನ್ನು ನಾನು ನೋಡಿಕೊಳ್ಳುತ್ತೇನೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: 25 ರಿಂದ 35 ಲಕ್ಷಕ್ಕೆ ಸರ್ಕಾರಿ ಹುದ್ದೆ ಮಾರಾಟ: ತನಿಖೆ ನಡೆಸಲು ತ.ನಾಡು ಪೊಲೀಸರಿಗೆ ಇಡಿ ಪತ್ರ

    ದುಮಾರಿಯಾಗಂಜ್ ಪ್ರದೇಶವನ್ನು ಮಿನಿ ಪಾಕಿಸ್ತಾನ ಎಂದು ಕರೆಯಲಾಗುತ್ತಿತ್ತು. ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾದಾಗಿನಿಂದ, ಇಲ್ಲಿನ ಜನರ ಭಯಕ್ಕೆ ಕಡಿವಾಣ ಬಿದ್ದಿದೆ. ಇಲ್ಲದಿದ್ದರೆ, ಹಿಂದೂಗಳು ಭಯದಿಂದ ವಾಸಿಸುತ್ತಿದ್ದ ಹಲವಾರು ಹಳ್ಳಿಗಳಿದ್ದವು. ಅವರ ಹೆಣ್ಣುಮಕ್ಕಳು ಮತ್ತು ಸೊಸೆಯಂದಿರು ಸುರಕ್ಷಿತವಾಗಿರಲಿಲ್ಲ. ಧಂಖರ್‌ಪುರ ಗ್ರಾಮದಲ್ಲಿ ಮುಸ್ಲಿಂ ಬಹುಸಂಖ್ಯಾತರಿದ್ದು, ಒಂದು ವಾರದಲ್ಲಿ ಇಬ್ಬರು ಹಿಂದೂಗಳನ್ನು ಆಮಿಷವೊಡ್ಡಿ ಇಸ್ಲಾಂಗೆ ಮತಾಂತರಗೊಳಿಸಲಾಯಿತು ಎಂದು ಆರೋಪಿಸಿದ್ದಾರೆ.

    ಬಿಜೆಪಿ ಮಾಜಿ ಶಾಸಕನ ಹೇಳಿಕೆಗಳನ್ನು ಸಮಾಜವಾದಿ ಪಕ್ಷ ಖಂಡಿಸಿದೆ. ಕೋಮು ಸಾಮರಸ್ಯವನ್ನು ಕದಡಲು ಪದೇ ಪದೇ ಪ್ರಯತ್ನಗಳು ನಡೆಯುತ್ತಿವೆ. ಮುಸ್ಲಿಮರನ್ನು ನಿರಂತರವಾಗಿ ಅವಮಾನಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದೆ.

  • Video Viral | ಬೈಕ್‌ನಲ್ಲಿ ಹೋಗ್ತಿದ್ದ ಹಿಂದೂ ಯುವಕ, ಅನ್ಯಕೋಮಿನ ಯುವತಿ ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ

    Video Viral | ಬೈಕ್‌ನಲ್ಲಿ ಹೋಗ್ತಿದ್ದ ಹಿಂದೂ ಯುವಕ, ಅನ್ಯಕೋಮಿನ ಯುವತಿ ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ

    ರಾಮನಗರ: ಬೈಕ್‌ನಲ್ಲಿ ಹೋಗ್ತಿದ್ದ ಯುವಕ, ಯುವತಿ ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ಮೆರೆದಿರೋ ಘಟನೆ ರಾಮನಗರ ಹೊರವಲಯದ ಬೆಂಗಳೂರು-ಮೈಸೂರು ಹಳೇ ಹೆದ್ದಾರಿಯಲ್ಲಿ ನಡೆದಿದೆ.

    ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಬೈಕ್‌ನಲ್ಲಿ ಹೋಗ್ತಿದ್ದ ಹಿನ್ನೆಲೆ ಮತ್ತೊಂದು ಬೈಕ್‌ನಲ್ಲಿ ಬಂದ ಇಬ್ಬರು ಮುಸ್ಲಿಂ ಯುವಕರು ಬೈಕ್ ಅಡ್ಡಗಟ್ಟಿ ಬೆದರಿಕೆ ಹಾಕಿದ್ದಾರೆ. ಇದನ್ನೂ ಓದಿ: ದೈವ ನುಡಿದಂತೆ 3 ದಿನದಲ್ಲಿ ಸಿಕ್ಕಿಬಿದ್ದ ಕಳ್ಳ – ಉಡುಪಿಯಲ್ಲಿ ಕೊರಗಜ್ಜನ ಪವಾಡ

    ಮುಸ್ಲಿಂ ಯುವತಿಯನ್ನ ಯಾಕೆ ಬೈಕ್ ನಲ್ಲಿ ಕರೆದುಕೊಂಡು ಹೋಗ್ತಿದಿಯಾ ಎಂದು ಯುವಕನಿಗೆ ಅವಾಜ್ ಹಾಕಿ, ಹಿಂದೂ ಯುವಕನ ಜೊತೆ ಸುತ್ತಾಡ್ತಿದ್ದೀಯಾ, ನಿಮ್ಮ ತಂದೆಗೆ ಪೋನ್ ಮಾಡು ಎಂದು ಯುವತಿಗೂ ಬೆದರಿಕೆ ಹಾಕಿದ್ದಾರೆ. ಇದನ್ನೂ ಓದಿ: Exclusive | ಮತ್ತೊಂದು ಭಂಡಾಟ ಬಯಲು – ಸಿಬ್ಬಂದಿ, ಸಮಯಾವಕಾಶದ ಕೊರತೆ ಅಂದ್ರೂ ಡೋಂಟ್ ಕೇರ್ ಅಂದಿದ್ದ ಸರ್ಕಾರ

    ಮೊಬೈಲ್‌ನಲ್ಲಿ ವೀಡಿಯೋ ಮಾಡಿ ನೈತಿಕ ಪೊಲೀಸ್ ಗಿರಿ ಮೆರೆದಿರೋ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ರಾಮನಗರ ಗ್ರಾಮಾಂತರ ಪೊಲೀಸರು ವೀಡಿಯೋ ಆಧರಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: 55ರ ಆಂಟಿ ಜೊತೆಗೆ ಯುವಕ ಲವ್ವಿಡವ್ವಿ; ಲವರ್‌ಗಾಗಿ ಆಕೆಯ ಗಂಡನನ್ನೇ ಕೊಂದು ಸುಟ್ಟುಹಾಕಿದ್ದ ಮೂವರು ಅರೆಸ್ಟ್‌

  • ಹಾನಗಲ್ ಗ್ಯಾಂಗ್‌ರೇಪ್ ಕೇಸ್ – 58 ದಿನಗಳ ನಂತ್ರ 873 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

    ಹಾನಗಲ್ ಗ್ಯಾಂಗ್‌ರೇಪ್ ಕೇಸ್ – 58 ದಿನಗಳ ನಂತ್ರ 873 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

    ಹಾವೇರಿ: ರಾಜ್ಯಾದ್ಯಾಂತ ಸದ್ದುಮಾಡಿದ್ದ ಹಾನಗಲ್ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾನಗಲ್ ಪೊಲೀಸರು (Hanagal Police) 873 ಪುಟಗಳ ದೋಷಾರೋಪ ಪಟ್ಟಿಯನ್ನು ಜೆಎಮ್‌ಎಫ್‌ಸಿ ಹಾನಗಲ್ ಕೋರ್ಟ್‌ಗೆ (JMFC Hanagal Court) ಸಲ್ಲಿಕೆ ಮಾಡಿದ್ದಾರೆ.

    ಗ್ಯಾಂಗರೇಪ್ ಘಟನೆ ನಡೆದು 58 ದಿನಗಳ ಬಳಿಕ ಚಾರ್ಜ್ ಶೀಟ್ (ChargSheet) ಸಲ್ಲಿಕೆಯಾಗಿದೆ. ಕಳೆದ ಜನವರಿ 8 ರಂದು ಹಾನಗಲ್ ಬಳಿ ಗ್ಯಾಂಗ್ ರೇಪ್ ಪ್ರಕರಣ ನಡೆದಿತ್ತು. ಶಿರಸಿ ಮೂಲದ 26 ವರ್ಷದ ಮುಸ್ಲಿಂ ಮಹಿಳೆ ಮೇಲೆ ಗ್ಯಾಂಗ್ ರೇಪ್ ನಡೆದಿತ್ತು.

    ಒಟ್ಟು 19 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದ 7 ಪ್ರಮುಖ ಆರೋಪಿಗಳು ಸೇರಿದಂತೆ ಒಟ್ಟು 19 ಆರೋಪಿಗಳ ಹೆಸರನ್ನೂ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಗುರುತು ಪತ್ತೆ ಪರೇಡ್ ವೇಳೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದ 7 ಪ್ರಮುಖ ಆರೋಪಿಗಳನ್ನು ಸಂತ್ರಸ್ತೆ ಗುರುತಿಸಿದ್ದರು. 7 ಪ್ರಮುಖ ಆರೋಪಿಗಳಾದ ಅಫ್ತಾಬ್, ಚಂದನ್‌ಕಟ್ಟಿ, ಮದರ್ ಸಾಬ್ ಮಂಡಕ್ಕಿ, ಸಮೀವುಲ್ಲಾ ಲಾಲಾನವರ, ಶೋಯಿಬ್ ನಿಯಾಜ್ ಅಹ್ಮದ್ ಮುಲ್ಲಾ, ಮಹಮದ್ ಸಾದೀಕ್ ಅಗಸಿಮನಿ, ತೌಷಿಪ್ ಕಾಟಲಾ ರಿಯಾಜ್ ಸಾವಿಕೇರಿ ಇವರನ್ನು ಪ್ರಮುಖ ಆರೋಪಿಗಳೆಂದು ಗುರುತಿಸಲಾಗಿದೆ. ಇದನ್ನೂ ಓದಿ: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ; ಎರಡು ಸ್ಥಳದಲ್ಲಿ ಸಾಮೂಹಿಕವಾಗಿ ರೇಪ್ ಮಾಡಿದ್ದಾರೆ: ಸಂತ್ರಸ್ತೆ ಸಂಬಂಧಿ

    ವಿಧಿವಿಜ್ಞಾನ ಪ್ರಯೋಗಾಲಯ ವರದಿ ಹಾಗೂ ಡಿಎನ್‌ಎ ಮಾದರಿ, ಕೂದಲು, ಆರೋಪಿಗಳ ರಕ್ತದ ಮಾದರಿ ಸೇರಿದಂತೆ ಘಟನೆ ವೇಳೆ ಸಿಕ್ಕ ಬಟ್ಟೆಗಳು, ಸಿಸಿಟಿವಿ ದ್ಯಶ್ಯಾವಳಿ, ಕೃತ್ಯಕ್ಕೆ ಬಳಸಿದ್ದ ಬೈಕ್, ಕಾರ್ ಸೇರಿದಂತೆ ಎಲ್ಲದರ ಬಗ್ಗೆಯೂ ಸಂಪೂರ್ಣ ಮಾಹಿತಿಯನ್ನು ಚಾರ್ಜ್ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯ ತಜ್ಞರು, ವೈದ್ಯರು, ಪೊಲೀಸರು, ಕೆಲವು ಸ್ಥಳೀಯರು ಸೇರಿದಂತೆ 87 ಸಾಕ್ಷಿಗಳ ವಿಚಾರಣೆಯನ್ನೂ ದೋಷಾರೋಪ ಪಟ್ಟಿಯಲ್ಲಿ ದಾಖಲಿಸಲಾಗಿದೆ. ಇದನ್ನೂ ಓದಿ: ಕಾಲಿಗೆ ಬಿದ್ದು ಬೇಡಿಕೊಂಡರೂ ಬಿಡದೇ ಅತ್ಯಾಚಾರ ಮಾಡಿದ್ರು – ಘಟನೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಸಂತ್ರಸ್ತೆ

  • ಪುರುಷರು ಕೆಲಸ ಮಾಡೋ ಬ್ಯೂಟಿ ಪಾರ್ಲರ್‌ಗಳಿಗೆ ಮುಸ್ಲಿಂ ಮಹಿಳೆಯರು ಹೋಗ್ಬಾರ್ದು: ಮುಫ್ತಿ ಅಸದ್ ಕಾಸ್ಮಿ

    ಪುರುಷರು ಕೆಲಸ ಮಾಡೋ ಬ್ಯೂಟಿ ಪಾರ್ಲರ್‌ಗಳಿಗೆ ಮುಸ್ಲಿಂ ಮಹಿಳೆಯರು ಹೋಗ್ಬಾರ್ದು: ಮುಫ್ತಿ ಅಸದ್ ಕಾಸ್ಮಿ

    ಲಕ್ನೋ: ಶುಕ್ರವಾರ ಉತ್ತರ ಪ್ರದೇಶದ (Uttar Pradesh) ಸಹರಾನ್‌ಪುರ (Saharanpur) ಜಿಲ್ಲೆಯ ಧರ್ಮಗುರುವೊಬ್ಬರು, ಪುರುಷರು ಕೆಲಸ ಮಾಡುವ ಬ್ಯೂಟಿ ಪಾರ್ಲರ್‌ಗಳಿಗೆ (Beauty Parlour) ಮುಸ್ಲಿಂ ಮಹಿಳೆಯರು (Muslim Women) ಹೋಗುವುದನ್ನು ತಪ್ಪಿಸಬೇಕು ಎಂದು ಹೇಳಿದ್ದಾರೆ. ಅಂತಹ ಪಾರ್ಲರ್‌ಗಳಲ್ಲಿ ಮಹಿಳೆಯರು ತಮ್ಮ ಮೇಕಪ್ ಮಾಡಿಕೊಳ್ಳುವುದು ‘ನಿಷಿದ್ಧ’ ಮತ್ತು ‘ಕಾನೂನುಬಾಹಿರ’ ಎಂದು ಕರೆದಿದ್ದಾರೆ.

    ಮುಫ್ತಿ ಅಸದ್ ಕಾಸ್ಮಿ (Mufti Asad Kasmi) ಅವರು ಈ ಹೇಳಿಕೆಗಳನ್ನು ನೀಡಿದ್ದು, ಮುಸ್ಲಿಂ ಮಹಿಳೆಯರು ಪುರುಷರು ಕೆಲಸ ಮಾಡುವ ಬ್ಯೂಟಿ ಪಾರ್ಲರ್‌ಗಳಿಗೆ ಭೇಟಿ ನೀಡುವುದನ್ನು ತಡೆಯಬೇಕು. ಬದಲಿಗೆ ಮಹಿಳೆಯರು ಮಾತ್ರ ಕೆಲಸ ಮಾಡುವ ಸಲೂನ್‌ಗಳನ್ನು ಆರಿಸಿಕೊಳ್ಳಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಐವರು ಲಷ್ಕರ್ ಭಯೋತ್ಪಾದಕರ ಹತ್ಯೆ

    ಕಳೆದ ತಿಂಗಳು, ಕಾನ್ಪುರದ ಮಹಿಳೆಯೊಬ್ಬರು ಐಬ್ರೋಸ್ ಮಾಡಿಸಿದ್ದಕ್ಕಾಗಿ ಆಕೆಯ ಪತಿ ಸೌದಿ ಅರೇಬಿಯಾದಿಂದ ಫೋನ್ ಮಾಡಿ ತ್ರಿವಳಿ ತಲಾಖ್ ನೀಡಿದ್ದಾರೆ. ಆಕೆಯ ಪತಿ ಸೌದಿಯಿಂದ ವೀಡಿಯೊ ಕಾಲ್ ಮಾಡಿ ಮಾತನಾಡುವ ಸಂದರ್ಭ ಪತ್ನಿ ಐಬ್ರೋಸ್ ಮಾಡಿಸಿರುವುದನ್ನು ಗಮನಿಸಿದ್ದಾರೆ. ಈ ಕುರಿತು ಆಕೆಯನ್ನು ಪತಿ ಪ್ರಶ್ನಿಸಿದ್ದು, ಆಕೆಯ ವಿವರಣೆಯಿಂದ ಅಸಮಾಧಾನಗೊಂಡು ವೀಡಿಯೋ ಕಾಲ್‌ನಲ್ಲಿಯೇ ತ್ರಿವಳಿ ತಲಾಖ್ ನೀಡಿದ್ದಾರೆ. ಇದನ್ನೂ ಓದಿ:  ಮಹಿಳೆಯಿಂದ ಬ್ಲ್ಯಾಕ್‌ಮೇಲ್ – ಎಂಪಿ ದೇವೇಂದ್ರಪ್ಪ ಪುತ್ರನಿಂದ ದೂರು, ಎಫ್‌ಐಆರ್ ದಾಖಲು

  • ರಾಜ್ಯದಲ್ಲಿ ಬಲವಂತದ ಮತಾಂತರ ಹಾವಳಿ – ವಿವಾಹಿತನನ್ನು ಮತಾಂತರಗೊಳಿಸಿದ ಮುಸ್ಲಿಂ ನಾರಿ

    ರಾಜ್ಯದಲ್ಲಿ ಬಲವಂತದ ಮತಾಂತರ ಹಾವಳಿ – ವಿವಾಹಿತನನ್ನು ಮತಾಂತರಗೊಳಿಸಿದ ಮುಸ್ಲಿಂ ನಾರಿ

    – ಮುಸ್ಲಿಂ ಲೇಡಿ ಲವ್ ಜಿಹಾದ್‍ಗೆ ಹಿಂದೂ ಪುರುಷ..?
    – ಶರಣಪ್ಪ ಈಗ ಸುಮೇರ್ ಉಜೆನ್

    ಯಾದಗಿರಿ: ರಾಜ್ಯದಲ್ಲಿ ಬಲವಂತ ಮತಾಂತರ ಕಾಯ್ದೆ ಜಾರಿಯಲ್ಲಿದೆ. ಯಾವುದೇ ಒಬ್ಬ ವ್ಯಕ್ತಿಯನ್ನ ಬಲವಂತವಾಗಿ ಮತಾಂತರ ಮಾಡುವಂತಿಲ್ಲ. ಆದರೆ ಇಲ್ಲಿ ಮದುವೆಯಾಗಿದ್ದ ವ್ಯಕ್ತಿನ್ನು ಮಹಿಳೆಯೊಬ್ಬಳು ತನ್ನ ಮೋಹದ ಬಲೆಗೆ ಬೀಳಿಸಿಕೊಂಡು ಆತನನ್ನು ಬಲವಂತವಾಗಿ ಮತಾಂತರಗೊಳಿಸಿದ್ದಾಳೆ.

    ಮೂಲತಃ ಯಾದಗಿರಿ (Yadagiri) ಜಿಲ್ಲೆಯ ಮಹಿಳೆ ಅಂಬಿಕಾ, ಕಲಬುರಗಿ (Kalburgi) ಮೂಲಕ ಶರಣಪ್ಪನ ಜೊತೆ ಕಳೆದ 4 ವರ್ಷಗಳ ಹಿಂದೆ ಮದುವೆಯಾಗಿದ್ದರು. ಶರಣಪ್ಪ ಕಲಬುರಗಿಯಲ್ಲಿ ಖಾಸಗಿ ಡಯಾಗ್ನೆಸಿಟ್‍ನಲ್ಲಿ ಕೆಲಸ ಮಾಡಿಕೊಂಡಿದ್ದ. ಇಬ್ಬರ ಸಂಸಾರ ಚೆನ್ನಾಗಿಯೇ ಇತ್ತು. ಆದರೆ ಶರಣಪ್ಪನಿಗೆ ತಾನು ಕೆಲಸ ಮಾಡುತ್ತಿದ್ದ ಡಯಾಗ್ನೆಸಿಟ್‍ನಲ್ಲಿ ಸುಮೈರಾ ಆಫ್ರಿನ್ ಎಂಬ ಮುಸ್ಲಿಂ ಮಹಿಳೆ ಪರಿಚಯವಾಗಿದೆ. ಇಬ್ಬರ ಪರಿಚಯ ಸ್ನೇಹವಾಗಿ ಪರಿವರ್ತನೆಯಾಗಿತ್ತು, ಹೀಗಿರುವಾಗ ಇಬ್ಬರ ನಡುವಿನ ಸಲುಗೆ ತುಂಬಾ ಹೆಚ್ಚಾಯಿತು. ನಂತರ ಈ ಸಲುಗೆಯಿಂದ ಅಫ್ರೀನಾ ಶರಣಪ್ಪನನ್ನು ಒತ್ತಾಯವಾಗಿ ಮದುವೆಯಾಗಿದಳು.

    ಸುಮೈರಾ ಅಫ್ರೀನ್ ಮೊದಲೇ ವಿವಾಹವಾಗಿದ್ದಳು. ಆಕೆಗೆ ಈಗಾಗಲೇ ಮೂವರು ಮಕ್ಕಳಿದ್ದಾರೆ. ಒಂದೇ ಕಡೆ ಕೆಲಸ ಮಾಡುತ್ತಿದ್ದ ಶರಣಪ್ಪ ಹಾಗೂ ಅಫ್ರೀನ್ ನಡುವೆ ಏನಾದರೂ ಪ್ರೀತಿ, ಪ್ರೇಮ ಶುರುವಾಗಿತ್ತಾ? ಶರಣಪ್ಪ ಸಲುಗೆ ಬೆಳೆಸಿಕೊಂಡಿದ್ದ ಅಫ್ರೀನ್ ಮದುವೆ ಹೆಸರಿನಲ್ಲಿ ಕಿರುಕುಳ ನೀಡಿ ಆತನನ್ನು ಮದುವೆಯಾಗಿ ಬಲವಂತವಾಗಿ ಮತಾಂತರ ಮಾಡಿಸಿದ್ರಾ ಎಂಬ ಅನುಮಾನಗಳು ಶುರುವಾಗಿದೆ. ಇದನ್ನೂ ಓದಿ: ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲೂ ಅಕ್ರಮ?

    ಅಫ್ರೀನ್‍ಳನ್ನು ಮದುವೆಯಾದ ಬಳಿಕ ಶರಣಪ್ಪ ಮಾನಸಿಕವಾಗಿ ಕುಗ್ಗಿ ಹೋಗಿದ್ದ. ಮದುವೆ ಬಳಿಕ ಶರಣಪ್ಪ ಸುಮೈರ್ ಉಜೆನ್ ಹೆಸರಿನಲ್ಲಿ ನ್ಯಾಯಾಲಯದಲ್ಲಿ ಅಫಿಡವಿಟ್‌ ಮಾಡಿಸಿಕೊಂಡಿದ್ದಾನೆ. ಅಷ್ಟೇ ಅಲ್ಲದೇ ಅಫ್ರೀನ್ ನಮ್ಮ ವಿರುದ್ಧವೇ ಹೆಬಿಯಸ್ ಕಾರ್ಪಸ್ ಪ್ರಕರಣ ದಾಖಲಿಸಿದ್ದು, ನಮಗೆ ಜೀವ ಬೇದರಿಕೆ ಹಾಕಿದ್ದಾಳೆ ಎಂದು ನೊಂದ ಮಹಿಳೆ ಅಂಬಿಕಾ ಆರೋಪಿಸಿದ್ದಾರೆ. ಇದನ್ನೂ ಓದಿ: ಮಂಗಳೂರಿನ ಆಟೋದಲ್ಲಿ ಕುಕ್ಕರ್ ಸ್ಫೋಟ – ನಟ್‌, ಬೋಲ್ಟ್‌, ಬ್ಯಾಟರಿ ಪತ್ತೆ

    ಮದುವೆಗೂ ಮುನ್ನವೇ ಶರಣಪ್ಪ ಇಸ್ಲಾಂ ಧರ್ಮ ಸ್ವೀಕರಿಸಿದ್ದನಾ ಎನ್ನುವುದಕ್ಕೆ ಉರ್ದುಭಾಷೆ ಕಲಿಯುವ ಪುಸ್ತಕ ದೊರೆತಿದ್ದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಇದೊಂದು ಬಲವಂತದ ಮತಾಂತರವಾಗಿದ್ದು, ಅಫ್ರೀನ್‍ಳನ್ನು ಪೊಲೀಸರು ಕೂಡಲೇ ಬಂಧಿಸಿ ಆಕೆಯ ಹಿಂದೆ ಇರುವ ಜಾಲವನ್ನು ಪತ್ತೆ ಮಾಡಿ ಬಲವಂತದ ಮತಾಂತರವನ್ನು ತಡೆಯಬೇಕು ಎಂದ ಶ್ರೀರಾಮ ಸೇನೆ ಅಧ್ಯಕ್ಷ ವಿಜಯಕುಮಾರ್ ಪಾಟೀಲ್ ಒತ್ತಾಯಿಸಿದ್ದಾರೆ.

    ಸರ್ಕಾರ ಬಲವಂತದ ಮತಾಂತರ ನಿಷೇಧಕ್ಕೆ ಎಷ್ಟೆಲ್ಲಾ ಕ್ರಮ ಕೈಗೊಂಡರೂ ಜೀವ ಬೆದರಿಕೆಗೆ ಅಲ್ಲಲ್ಲಿ ಇನ್ನು ಬಲವಂತದ ಮತಾಂತರ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಮತ್ತೊಂದು ಕಡೆ ಲವ್ ಜಿಹಾದ್ ಹೆಸರಿನಲ್ಲೂ ಮತಾಂತರ ನಡೆಯುತ್ತಿವೆ. ಇನ್ನಾದರೂ ಸರ್ಕಾರ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಬಲವಂತದ ಮತಾಂತರ ಮಾಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಜಾರಿದ್ರಿಂದ ದುಡ್ಡು ಕೆಳಗೆ ಬಿತ್ತು- ಸಿದ್ದರಾಮಯ್ಯರ ಕ್ಷಮೆ ಕೋರಿದ ಮುಸ್ಲಿಂ ಮಹಿಳೆ

    ಜಾರಿದ್ರಿಂದ ದುಡ್ಡು ಕೆಳಗೆ ಬಿತ್ತು- ಸಿದ್ದರಾಮಯ್ಯರ ಕ್ಷಮೆ ಕೋರಿದ ಮುಸ್ಲಿಂ ಮಹಿಳೆ

    ಬಾಗಲಕೋಟೆ: ಕೆರೂರು ಘರ್ಷಣೆ ಗಾಯಾಳುಗಳಿಗೆ ಸಾಂತ್ವನ ಹೇಳಿ, ಪರಿಹಾರವಾಗಿ ಕೊಟ್ಟಿದ್ದ 2 ಲಕ್ಷ ರೂ. ಹಣವನ್ನು ಮುಸ್ಲಿಂ ಮಹಿಳೆ ಸಿದ್ದರಾಮಯ್ಯರ ಕಾರಿನ ಮೇಲೆ ಎಸೆದಿದ್ದರು. ಆದರೆ ದುಡ್ಡು ಎಸೆದ ಮಹಿಳೆಯ ಸಹೋದರಿ ದಿಢೀರ್ ಯೂಟರ್ನ್ ಹೊಡೆದಿದ್ದು, ಸಿದ್ದರಾಮಯ್ಯ ಅವರಿಗೆ ಕ್ಷಮೆ ಕೋರಿದ್ದಾರೆ.

    ದುಡ್ಡು ಎಸೆದ ಮಹಿಳೆ ರಜ್ಮಾ ಹಾಗೂ ಆಕೆಯ ಸಹೋದರಿ ಬಿಸ್ಮಿಲ್ಲಾ ಸಿದ್ದರಾಮಯ್ಯ ಅವರಿಗೆ ಕ್ಷಮೆ ಕೋರಿದ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: 75 ವರ್ಷಗಳ ಬಳಿಕ ಪಾಕ್‍ನಲ್ಲಿರುವ ಪೂರ್ವಜರ ಮನೆಗೆ ಭೇಟಿ ನೀಡಿದ ಭಾರತೀಯ ಮಹಿಳೆ

    ದುಡ್ಡು ಎಸೆದ ಮಹಿಳೆಯ ಸಹೋದರಿ ಬಿಸ್ಮಿಲ್ಲಾ, ಸಿದ್ದರಾಮಯ್ಯ ಅವರಿಗೆ ಕ್ಷಮೆ ಕೋರಿದ್ದಾರೆ. ನೀವು ನಮ್ಮ ಸಲುವಾಗಿ ಬಂದಿದ್ರೀ ಸರ್. ವೈಯಕ್ತಿಕ ಹಣ ಕೊಟ್ಟಿದ್ರಿ, ಆದ್ರೆ ನಾನು ನಮಗೆ ದುಡ್ಡು ಬೇಡ, ನ್ಯಾಯ ಬೇಕು ಎಂದು ನಿಮ್ಮ ಕಾರ್ ಬಳಿ ಬಂದೆವು. ಈ ವೇಳೆ ನಿಮ್ಮ ಕಾರು ಮುಂದೆ ಹೋದ ಪರಿಣಾಮ ನಮ್ಮ ಸಹೋದರಿ ಜಾರಿದ್ರಿಂದ ದುಡ್ಡು ಕೆಳಗೆ ಬಿದ್ದಿತು ಎಂದು ಹೇಳಿದ್ದಾರೆ.

    ಬಿಸ್ಮಿಲ್ಲಾ ಮಹಿಳೆ ಕೆರೂರು ಘರ್ಷಣೆಯಲ್ಲಿ ಗಾಯಗೊಂಡ ನಾಲ್ವರು ಸಹೋದರರ ಪೈಕಿ, ಮಹಮ್ಮದ್ ಹನೀಫ್ ಪತ್ನಿ. ಇದನ್ನೂ ಓದಿ: ದೇವಸ್ಥಾನದ ಆವರಣದಲ್ಲಿ ಮಾಂಸ ಎಸೆದ ದುಷ್ಕರ್ಮಿಗಳು- 3 ಮಾಂಸದ ಅಂಗಡಿಗಳಿಗೆ ಬೆಂಕಿ

    ಏನಿದು ಘಟನೆ?
    ಕೆರೂರು ಗಲಭೆ ನಂತರ ನಡೆದ ಹಲ್ಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಗಾಯಾಳುಗಳನ್ನು ಭೇಟಿ ಮಾಡಿ, ಗಾಯಾಳುಗಳಿಗೆ ಸಾಂತ್ವನ ಪರಿಹಾರ ನೀಡಲು ಮಾಜಿ ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದರು. ಈ ವೇಳೆ ಮುಸ್ಲಿಂ ಮಹಿಳೆ ನಮಗೆ ನ್ಯಾಯ ಬೇಕು. ದುಡ್ಡು ಬೇಡ ಎಂದು ಹೇಳಿದ್ದರೂ ಸಿದ್ದರಾಮಯ್ಯ ಬಲವಂತವಾಗಿ ದುಡ್ಡು ನೀಡಿದ್ದರು. ಅಲ್ಲಿಂದ ಮರಳಿ ಹಣವನ್ನು ವಾಪಸ್ ಕೊಡಲು ಕಾರು ಹಿಂಬಾಲಿಸಿದ ಮಹಿಳೆಯರನ್ನು ಸಿದ್ದರಾಮಯ್ಯ ಸಮಾಧಾನ ಮಾಡುವ ಪ್ರಯತ್ನ ಮಾಡಿದ್ದರು. ಆದರೆ ಮಹಿಳೆಯರು ಸಮಾಧಾನಕ್ಕೆ ಬಗ್ಗಲಿಲ್ಲ. ಆದರೆ ಇಲ್ಲಿಗೆ ಸುಮ್ಮನಾಗದ ಮಹಿಳೆ ರಾಜ್ಮ ಅವರು ಕಾರಿನ ಹಿಂದೆ ಹೋಗಿ ಹಣವನ್ನು ಬಿಸಾಕಿದ್ದಳು.

    ಅಂದು ರಜ್ಮಾ ಹೇಳಿದ್ದೇನು?
    ಇಲ್ಲಿಯವರೆಗೂ ಯಾರು ಬಂದಿಲ್ಲ. ಈಗ ಸಿದ್ದರಾಮಯ್ಯ ಬಂದಿದ್ದಾರೆ. ಆದರೆ ವೋಟ್ ಕೇಳಬೇಕಾದ್ರೆ ಇವರಿಗೆ ಯಾವುದೇ ಜಾತಿ ಅಡ್ಡ ಬರುವುದಿಲ್ಲ. ನಿಮಗೆ ಕೈ ಮುಗಿತ್ತೀನಿ ವೋಟ್ ಹಾಕಿ ಎಂದು ಕೇಳಿಕೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ನಮ್ಗೆ ನ್ಯಾಯ ಬೇಕು, ದುಡ್ಡು ಬೇಡ – ಸಿದ್ದು ಕೊಟ್ಟ 2 ಲಕ್ಷ ರೂ. ಎಸೆದ ಮುಸ್ಲಿಂ ಮಹಿಳೆ

    ನಮ್ಗೆ ನ್ಯಾಯ ಬೇಕು, ದುಡ್ಡು ಬೇಡ – ಸಿದ್ದು ಕೊಟ್ಟ 2 ಲಕ್ಷ ರೂ. ಎಸೆದ ಮುಸ್ಲಿಂ ಮಹಿಳೆ

    ಬಾಗಲಕೋಟೆ: ಕೆರೂರು ಘರ್ಷಣೆ ಗಾಯಾಳುಗಳಿಗೆ ಸಾಂತ್ವನ ಪರಿಹಾರ ನೀಡಲು ಮಾಜಿ ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದರು. ಈ ವೇಳೆ ಮುಸ್ಲಿಂ ಮಹಿಳೆ ನಮಗೆ ನ್ಯಾಯ ಬೇಕು. ದುಡ್ಡು ಬೇಡ ಎಂದು ಹೇಳಿ 2 ಲಕ್ಷ ರೂ. ಹಣವನ್ನು ಎಸೆದಿದ್ದಾರೆ.

    ಕೆರೂರು ಗಲಭೆ ನಂತರ ನಡೆದ ಹಲ್ಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಗಾಯಾಳುಗಳನ್ನು ಭೇಟಿ ಮಾಡಲು ಸಿದ್ದರಾಮಯ್ಯ ಅವರು ಬಾಗಲಕೋಟೆ ಬಳಿಯ ಆಶೀರ್ವಾದ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದರು. ಗಾಯಾಳುಗಳಿಗೆ 2 ಲಕ್ಷ ರೂ. ಕೊಟ್ಟು ಬರುತ್ತಿದ್ದರು. ಈ ವೇಳೆ ಗಾಯಾಳುಗಳ ಕುಟುಂಬ ನಮಗೆ ಹಣ ಬೇಡ. ನ್ಯಾಯ ಬೇಕು. ನಮಗೆ ಹಣ ಬೇಡ ಶಾಂತಿ ಬೇಕು, ಎಂದು ಮನವಿ ಮಾಡಿದ್ದಾಳೆ. ಇದನ್ನೂ ಓದಿ: ಪ್ರೀತಿಸುವಂತೆ ವಿವಾಹಿತೆಗೆ ಬ್ಲಾಕ್ ಮೇಲ್ – ಮನನೊಂದ ಗೃಹಿಣಿ ನೇಣಿಗೆ ಶರಣು 

    ಅಲ್ಲಿಂದ ಮರಳಿ ಹಣವನ್ನು ವಾಪಸ್ ಕೊಡಲು ಕಾರು ಹಿಂಬಾಲಿಸಿದ ಮಹಿಳೆಯರನ್ನು ಸಿದ್ದರಾಮಯ್ಯ ಸಮಾಧಾನ ಮಾಡುವ ಪ್ರಯತ್ನ ಮಾಡಿದ್ದಾರೆ. ಆದರೆ ಮಹಿಳೆಯರು ಸಮಾಧಾನಕ್ಕೆ ಬಗ್ಗಲಿಲ್ಲ. ಆದರೆ ಇಲ್ಲಿಗೆ ಸುಮ್ಮನಾಗದ ಮಹಿಳೆ ರಾಜ್ಮ ಅವರು ಕಾರಿನ ಹಿಂದೆ ಹೋಗಿ ಹಣವನ್ನು ಬಿಸಾಕಿದ್ದಾಳೆ.

    ರಾಜ್ಮ ಹೇಳಿದ್ದೇನು?
    ಇಲ್ಲಿಯವರೆಗೂ ಯಾರು ಬಂದಿಲ್ಲ. ಈಗ ಸಿದ್ದರಾಮಯ್ಯ ಬಂದಿದ್ದಾರೆ. ಆದರೆ ವೋಟ್ ಕೇಳಬೇಕಾದ್ರೆ ಇವರಿಗೆ ಯಾವುದೇ ಜಾತಿ ಅಡ್ಡ ಬರುವುದಿಲ್ಲ. ನಿಮಗೆ ಕೈ ಮುಗಿತ್ತೀನಿ ವೋಟ್ ಹಾಕಿ ಎಂದು ಕೇಳಿಕೊಳ್ಳುತ್ತಾರೆ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಸರ್ಕಾರಿ ಶಾಲಾ-ಕಾಲೇಜುಗಳ ಆಸ್ತಿ ರಕ್ಷಣೆಗೆ ಶಿಕ್ಷಣ ಇಲಾಖೆಯಿಂದ ವಿಶೇಷ ಅಭಿಯಾನ 

    ನಾವು ವೋಟ್ ಹಾಕಿದ್ರೆ ತಾನೇ ಅವರು ಅಧಿಕಾರಕ್ಕೆ ಬರುತ್ತಾರೆ. ನಮಗೂ ನ್ಯಾಯ ಬೇಕು, ಹಿಂದೂಗಳಿಗೂ ನ್ಯಾಯ ಬೇಕು. ಎಲ್ಲರೂ ಒಂದೇ ತಾಯಿ ಮಕ್ಕಳ ರೀತಿ ನಡೆದುಕೊಳ್ಳಬೇಕು ಎಂದು ಹೇಳಿದರು.

    ನನಗೆ ಹೊಟ್ಟೆ ಹಸಿದಿದೆ ಎಂದು ಭಿಕ್ಷೆ ಬೇಡುದ್ರೆ ಹೊಟ್ಟೆ ತುಂಬ ರೊಟ್ಟಿ ಕೊಡುತ್ತಾರೆ. ಯಾರಾದ್ರೂ ಬಡಿತರೆ ಎಂದರೆ ಯಾರು ಯಾರಿಗೂ ಸಹಾಯ ಮಾಡುವುದಿಲ್ಲ. ನಮಗೆ ಆ ಕಷ್ಟ ಗೊತ್ತಿದೆ. ನಾವು ನಮ್ಮ ಮಕ್ಕಳ ಮುಖ ನೋಡಿ 8-10 ದಿನವಾಗಿದೆ ಎಂದು ತಮ್ಮ ಅಳಾಲನ್ನು ಹೇಳಿಕೊಂಡರು.

    ನಮಗೆ ಆದ ಘಟನೆ ಯಾವ ಅಣ್ಣ-ತಮ್ಮ, ಹಿಂದೂ-ಮುಸ್ಲಿಮರಿಗೂ ಆಗಬಾರದು. ಇದಕ್ಕೆ ಕಾರಣವಾದರಿಗೆ ಮಾತ್ರ ಶಿಕ್ಷೆಯಾಗಬೇಕು ಎಂದು ಮನವಿ ಮಾಡಿದರು. ಹೌದು, ಪರಿಹಾರ ಕೊಟ್ಟಿದ್ದಾರೆ. ಇಂದು ಕೊಡುತ್ತಾರೆ. ಆದರೆ ನನ್ನ ಗಂಡ ಒಂದು ವರ್ಷಗಳ ಕಾಲ ಬೆಡ್ ರೆಸ್ಟ್ ತೆಗೆದುಕೊಳ್ಳಬೇಕು. ಅಳುವವರು ಒಂದು ದಿನ ಅಳುತ್ತಾರೆ. ದಿನ ಯಾರು ಅಳುವುದಿಲ್ಲ. ಹೊಟ್ಟೆಗೆ ಬೇಕು ಎಂದರೆ ಹಿಂದೂಗಳು ನಮಗೆ ಊಟ ಕೊಡುತ್ತಾರೆ. ಮುಸ್ಲಿಂ ಸಹ ನಮಗೆ ಊಟ ಕೊಡುತ್ತಾರೆ. ಹೊಟ್ಟೆ ಹಸಿದಿದೆ ಎಂದರೆ ಯಾರು ಸುಮ್ಮನೆ ಕುಳಿತು ಕೊಳ್ಳುವುದಿಲ್ಲ ಎಂದರು.

    ನಮಗೆ ಯಾರ ಪರಿಹಾರವೂ ಬೇಡ. ಈ ರೀತಿಯ ಗಲಭೆಗಳು ಮತ್ತೆ ನಡೆಯದಂತೆ ನೋಡಿಕೊಳ್ಳಬೇಕು. ನಮಗೆ ಬಂದ ಪರಿಸ್ಥಿತಿ ಯಾವ ಹಿಂದೂ, ಮುಸ್ಲಿಮರಿಗೂ ಬರಬಾರದು ಎಂದು ವಿನಂತಿ ಮಾಡಿಕೊಂಡರು. ಒಂದು ವೇಳೆ ಈ ಘಟನೆಯಲ್ಲಿ ನಮ್ಮದು ತಪ್ಪು ಎಂದು ತಿಳಿದುಬಂದ್ರೆ, ಕುಟುಂಬ ಸಮೇತ ನಾವು ಪೊಲೀಸರಿಗೆ ಶರಣಾಗುತ್ತೇವೆ ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಒಡಿಶಾ ನಗರಸಭೆ ಅಧ್ಯಕ್ಷರಾಗಿ ಆಯ್ಕೆಯಾದ ಮೊದಲ ಮುಸ್ಲಿಂ ಮಹಿಳೆ

    ಒಡಿಶಾ ನಗರಸಭೆ ಅಧ್ಯಕ್ಷರಾಗಿ ಆಯ್ಕೆಯಾದ ಮೊದಲ ಮುಸ್ಲಿಂ ಮಹಿಳೆ

    ಭುವನೇಶ್ವರ್: ಒಡಿಶಾ ನಗರಸಭೆಗೆ ಮೊದಲ ಮುಸ್ಲಿಂ ಮಹಿಳಾ ಅಧ್ಯಕ್ಷರಾಗಿ ಗುಲ್ಮಕಿ ದಲ್ವಾಜಿ ಹಬೀಬ್ ಅವರು ಚುನಾಯಿತರಾಗಿ ಇತಿಹಾಸ ನಿರ್ಮಿಸಿದ್ದಾರೆ.

    ಭದ್ರಕ್ ನಗರಸಭೆಯ 108 ವಾರ್ಡ್‍ಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಇದೀಗ ಮುಸ್ಲಿಂ ಸಮುದಾಯದವರಾದ ಗುಲ್ಮಕಿ ದಲ್ವಾಜಿ ಹಬೀಬ್ ಅವರು ಮೊದಲ ಅಧ್ಯಕ್ಷರಾಗಿ ಆಗಿ ಆಯ್ಕೆಯಾಗಿದ್ದಾರೆ.

    ಗುಲ್ಮಕಿ ಅವರು ವ್ಯಾಪಾರ ಆಡಳಿತ ಪಧವೀಧರರಾಗಿದ್ದಾರೆ. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗುಲ್ಮಕಿ ಅವರು ಬಿಜೆಡಿಯ ಸಸ್ಮಿತಾ ಮಿಶ್ರಾ ಅವರನ್ನು 3,256 ಮತಗಳಿಂದ ಸೋಲಿಸಿದ್ದರು. ಪತಿ ಬಿಜೆಡಿ ನಾಯಕರಾಗಿದ್ದರೂ ರಾಜಕೀಯಕ್ಕೆ ಹೊಸಬರಾದ ಗುಲ್ಮಕಿ ಅವರು ಸ್ಥಳೀಯ ಜನರ ಪ್ರೋತ್ಸಾಹದ ನಂತರ ನಾಮಪತ್ರ ಸಲ್ಲಿಸಿದ್ದರು. ಇದನ್ನೂ ಓದಿ: ಬ್ಯಾಂಕ್, ಎಟಿಎಂ ಬಾಗಿಲಿನಲ್ಲಿ ಮಲ ವಿಸರ್ಜನೆ ಮಾಡಿ ವಿಕೃತಿ

    ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಆರಂಭದಲ್ಲಿ ನಾನು ಹೆದರುತ್ತಿದ್ದೆ. ಆದರೆ ಕ್ರಮೇಣ ಎಲ್ಲಾ ಸಮುದಾಯಗಳ ಜನರು ನನ್ನಂತಹ ವಿದ್ಯಾವಂತ ಮಹಿಳೆಯ ಮೇಲೆ ನಂಬಿಕೆ ಇಟ್ಟು ನನ್ನನ್ನು ಬೆಂಬಲಿಸಲು ಮುಂದೆ ಬಂದರು ಎಂದು ಹೇಳಿದರು.

    ಒಡಿಶಾ ಕರಾವಳಿಯಲ್ಲಿರುವ ಭದ್ರಕ್ ಪಟ್ಟಣವು ಎಲ್ಲಾ ಸಮುದಾಯಗಳ ಜನರನ್ನು ಹೊಂದಿದೆ. ಹಿಂದೂಗಳು ಶೇ.59.72, ಮುಸ್ಲಿಮರು ಶೇ.39.56, ಕ್ರೈಸ್ತರು ಶೇ.0.12, ಸಿಖ್ಖರು, ಬೌದ್ಧರು ಮತ್ತು ಜೈನರು ಶೇ 0.02 ಜನಸಂಖ್ಯೆಯಿದೆ. ಇದನ್ನೂ ಓದಿ: ಜೈಲಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕೈದಿ

    ನಗರಸಭೆ ಹೇಗೆ ನಡೆಸುತ್ತೀರಿ ಎಂದು ಪ್ರಶ್ನಿಸಿದಾಗ ಪ್ರತಿಕ್ರಿಯಿಸಿದ ಅವರು, ನಾನು ಉತ್ತಮ ರಾಜಕಾರಣಿಯಾಗಬಹುದು ಅಂತ ನಾನು ಭಾವಿಸುತ್ತೇನೆ. ನನ್ನ ಚಿಕ್ಕಪ್ಪ, ಚಿಕ್ಕಮ್ಮ ಮತ್ತು ಕುಟುಂಬದ ಇತರರು ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ನನ್ನ ತಾಯಿಯ ಚಿಕ್ಕಪ್ಪ ಕೌನ್ಸಿಲರ್ ಆಗಿದ್ದರು. ನನ್ನ ತಾಯಿಯ ಚಿಕ್ಕಮ್ಮ ಅನೇಕ ವರ್ಷಗಳ ಹಿಂದೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

  • ಆ್ಯಪ್‍ನಲ್ಲಿ ಮಹಿಳೆಯರ ಮಾರಾಟ – ಬೆಂಗಳೂರಿನ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ವಶಕ್ಕೆ

    ಆ್ಯಪ್‍ನಲ್ಲಿ ಮಹಿಳೆಯರ ಮಾರಾಟ – ಬೆಂಗಳೂರಿನ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ವಶಕ್ಕೆ

    ಮುಂಬೈ: ಬುಲ್ಲಿ ಬೈ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಬೆಂಗಳೂರಿನ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಬುಲ್ಲಿ ಬೈ ಹೆಸರಿನಲ್ಲಿದ್ದ ಆ್ಯಪ್ ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿ, ಅವರನ್ನು ಅಶ್ಲೀಲವಾಗಿ ಚಿತ್ರಿಸಿ ಹರಾಜು ಹಾಕಲಾಗುತ್ತಿತ್ತು. ಅದಕ್ಕೆ ಈ ಆ್ಯಪ್ ವಿರುದ್ಧ ಎಲ್ಲ ಕಡೆಯಿಂದ ತೀವ್ರ ವಿರೋಧ ವ್ಯಕ್ತವಾದ ಬಳಿಕ ಕೇಂದ್ರ ಸರ್ಕಾರ ಆ್ಯಪ್ ಅನ್ನು ನಿಷೇಧಿಸಿತ್ತು. ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ಬೆಂಗಳೂರಿನ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: 33 ವರ್ಷದ ನಂತರ ಹುಟ್ಟೂರಿನ ನಕ್ಷೆ ಬಿಡಿಸಿ ತಾಯಿ ಮಡಿಲು ಸೇರಿದ ಮಗ!

    ಪೊಲೀಸರು ಇಲ್ಲಿಯವರೆಗೂ ವಶಕ್ಕೆ ಪಡೆದುಕೊಂಡಿರುವ ಶಂಕಿತ ವ್ಯಕ್ತಿಯ ವಯಸ್ಸನ್ನು ಹೊರತುಪಡಿಸಿ, ಆ ವ್ಯಕ್ತಿಯ ಯಾವ ಗುರುತನ್ನು ಬಹಿರಂಗಪಡಿಸಿಲ್ಲ. ಪೊಲೀಸರು ಈ ಅಪರಿಚಿತ ಆರೋಪಿಗಳ ವಿರುದ್ಧ ಐಪಿಸಿ ಮತ್ತು ಐಟಿ ಕಾಯ್ದೆಗೆ ಸಂಬಂಧಿಸಿದಂತೆ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

    ಕಳೆದ ವರ್ಷ ಸುಲ್ಲಿ ಡೀಲ್ಸ್ ಹೆಸರಿನಲ್ಲಿ ಇದೇ ರೀತಿ ಮುಸ್ಲಿಂ ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರನ್ನು ಗುರಿಯಾಗಿಸಿ ಅವರನ್ನು ಹರಾಜಿಗೆ ಇಡುವ ರೀತಿ ಬಿಂಬಿಸುವ ವೆಬ್ ಪೋರ್ಟಲ್ ಕಾಣಿಸಿಕೊಂಡಿತ್ತು. ಮಹಿಳೆಯರ ಸಾಮಾಜಿಕ ಜಾಲತಾಣದಲ್ಲಿರುವ ಫೋಟೋವನ್ನು ಡೌನ್‍ಲೋಡ್ ಮಾಡಿ ಆ್ಯಪ್‍ನಲ್ಲಿ ಬಳಕೆ ಮಾಡಲಾಗಿತ್ತು. ಇದನ್ನೂ ಓದಿ: ಸಣ್ಣ ವಯಸ್ಸಿನಿಂದಲೇ ಸೇವಾ ಮನೋಭಾವವನ್ನು ಬೆಳೆಸಬೇಕು: ಎಂ.ವೆಂಕಯ್ಯ ನಾಯ್ಡು

  • ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿ, ಮನವಿ ಮಾಡ್ಕೊಂಡ ಮುಸ್ಲಿಂ ಮಹಿಳೆ

    ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿ, ಮನವಿ ಮಾಡ್ಕೊಂಡ ಮುಸ್ಲಿಂ ಮಹಿಳೆ

    ಹೈದರಾಬಾದ್: ಮುಸ್ಲಿಂ ಮಹಿಳೆಯೊಬ್ಬರು ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ. ತಾಹೇರಾ ಟ್ರಸ್ಟ್‍ನ ಸಂಘಟಕರಾಗಿರುವ ಜಹರಾ ಬೇಗಂ, ರಾಮ ಮಂದಿರ ನಿರ್ಮಾಣಕ್ಕೆ ಮುಸ್ಲಿಂ ಸಮುದಾಯದ ಇತರರಿಗೂ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಧನ ಸಹಾಯ ಮಾಡಬೇಕಾಗಿ ಮನವಿ ಮಾಡಿದ್ದಾರೆ.

    ಮುಸ್ಲಿಮರು ಸೇರಿದಂತೆ ಇತರ ಎಲ್ಲಾ ಧರ್ಮದವರು, ವಿನಾಯಕ ಚತುರ್ಥಿ, ದಸರಾ, ರಾಮ ನವಮಿ ಹಬ್ಬದ ಪೂಜೆಗಳಿಗೆ ಹೇಗೆ ಹಿಂದೂ ಸಹೋದರ-ಸಹೋದರಿಯರಿಗೆ ಧನ ಸಹಾಯ ಮಾಡುತ್ತಿವೋ ಅದೇ ಮಾದರಿ ಶ್ರೀ ರಾಮ ದೇವಾಲಯ ನಿರ್ಮಾಣಕ್ಕೆ ಕೂಡ ದೇಣಿಗೆ ನೀಡೋಣ ಎಂದು ಕರೆ ನೀಡಿದ್ದಾರೆ. ಇದು ಭಾರತದ ಸಂಸ್ಕøತಿ, ಸಂಪ್ರದಾಯ ಮತ್ತು ಭಾರತವು ವೈವಿಧ್ಯತೆಯಲ್ಲಿ ಏಕತೆಯನ್ನು ತೋರಿಸುತ್ತಿದೆ.

    ನಿಧಿ ಸಂಗ್ರಹಣಾ ಕಾರ್ಯಕ್ರಮದ ಸಂದರ್ಭದಲ್ಲಿ ಜಹರಾ ಬೇಗಂ, ನಿಧಿ ಸಂಗ್ರಹದ ಮೂಲಕ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಸಹಾಯ ಮಾಡಬೇಕೆಂದು ಮುಸ್ಲಿಂ ಸಮುದಾಯದವರಿಗೆ ಮನವಿ ಮಾಡಿದರು. ಅಲ್ಲದೆ ತಮ್ಮ ಕೈಲಾದಷ್ಟು ಧನ ಸಹಾಯ ಮಾಡಬಹುದು. ಅದು ಹತ್ತು ರೂಪಾಯಿಯಂತಹ ಸಣ್ಣ ಮೊತ್ತ ಆಗಿದ್ದರೂ ಸಹ ನೀಡಬಹುದು ಎಂದು ತಿಳಿಸಿದರು.

    ಕಳೆದ ಹತ್ತು ವರ್ಷಗಳಿಂದ ಹಳ್ಳಿಗಳಲ್ಲಿ ಕೆಲಸ ಮಾಡುವ ವೇಳೆ ಹಲವಾರು ಹಿಂದೂಗಳು ಮಸೀದಿ ನಿರ್ಮಾಣಕ್ಕೆ, ಈದ್ಗಾ ಮತ್ತು ಮುಸ್ಲಿಂ ಸಮುದಾಯದ ಸ್ಮಶಾನ ನಿರ್ಮಾಕ್ಕಾಗಿ ತಮ್ಮ ಭೂಮಿಗಳನ್ನು ದಾನ ಮಾಡಿರುವುದನ್ನು ನೋಡಿದ್ದೇನೆ. ಮುಸ್ಲಿಮೇತರರು ಕೂಡ ತಮ್ಮ ಇಚ್ಛೆ ಪ್ರಕಾರ ಹೆಚ್ಚಿನ ಪ್ರಮಾಣದ ಕೃಷಿ ಭೂಮಿಯನ್ನು ಮುಸ್ಲಿಮರಿಗೆ ದಾನ ಮಾಡಿದ್ದಾರೆ. ಜೊತೆಗೆ ಮಸೀದಿ, ಈದ್ಗಾ, ಸ್ಮಶಾನ ನಿರ್ಮಾಣಕ್ಕೆ ಧನ ಸಹಾಯವನ್ನು ಕೂಡ ಮಾಡಿದ್ದಾರೆ ಎಂದು ಹೇಳಿದರು.