Tag: Muslim woman

  • ನನಗೆ ತಲಾಕ್ ಬೇಡ ಗಂಡ ಬೇಕು – ಡಿಸಿ ಕಚೇರಿ ಎದುರು ಉಪವಾಸ ಕುಳಿತ ಮಹಿಳೆ

    ನನಗೆ ತಲಾಕ್ ಬೇಡ ಗಂಡ ಬೇಕು – ಡಿಸಿ ಕಚೇರಿ ಎದುರು ಉಪವಾಸ ಕುಳಿತ ಮಹಿಳೆ

    ಶಿವಮೊಗ್ಗ: ಪತಿ ತಲಾಕ್ ನೀಡಿರುವುದನ್ನು ವಿರೋಧಿಸಿ ಇದೀಗ ಆತನ ಪತ್ನಿ ಹಾಗು ಮಗಳು ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

    ಕೇಂದ್ರ ಸರ್ಕಾರ ತ್ರಿವಳಿ ತಲಾಕ್ ರದ್ದುಗೊಳಿಸಿ ನೂತನ ಕಾಯ್ದೆ ಜಾರಿಗೆ ತಂದಿದ್ದರೂ ಶಿವಮೊಗ್ಗದಲ್ಲಿ ವಾಟ್ಸಾಪ್ ಮೂಲಕ ಪತಿ ಮಹಾಶಯನೋರ್ವ ಪತ್ನಿಗೆ ಮೂರು ಬಾರಿ ತಲಾಕ್ ಎಂದು ಹೇಳುವ ಮೂಲಕ ವಿಚ್ಛೇದನ ನೀಡಿದ್ದಾನೆ.

    ನಗರದ ಟ್ಯಾಂಕ್ ಮೊಹಲ್ಲಾ ನಿವಾಸಿ ಮುಸ್ತಫಾ ಬೇಗ್ ಹಾಗು ಆಯಿಷಾ ಕಳೆದ 21 ವರ್ಷಗಳ ಹಿಂದೆ ಪರಸ್ವರ ಪ್ರೀತಿಸಿ ವಿವಾಹವಾಗಿದ್ದರು. ದುಬೈನಲ್ಲಿ ಕೆಲಸ ಮಾಡಿಕೊಂಡಿದ್ದ ಮುಸ್ತಫಾ ಬೇಗ್ ತನ್ನ ಪತ್ನಿಯನ್ನು ಶಿವಮೊಗ್ಗದಲ್ಲಿಯೇ ಉಳಿಸಿದ್ದ. ಆದರೆ ಒಂದು ತಿಂಗಳ ಹಿಂದೆ ಇದ್ದಕಿದ್ದಂತೆ ದುಬೈನಲ್ಲಿಯೇ ಕುಳಿತು ಪತ್ನಿ ಆಯಿಷಾಗೆ ವಾಟ್ಸಾಪ್ ನಲ್ಲಿಯೇ ತಲಾಕ್ ನೀಡಿ ಕೈ ತೊಳೆದುಕೊಂಡಿದ್ದಾನೆ.

    ಪತ್ನಿ ಆಯಿಷಾ ಮಾತ್ರ ನನಗೆ ತಲಾಕ್ ಬೇಡ ಪತಿಯೇ ಬೇಕು ನಾನು ಆತನ ಜೊತೆಯೇ ಸಂಸಾರ ನಡೆಸಬೇಕು. ನನಗೆ ಜೀವನ ಸಾಗಿಸುವುದೇ ಕಷ್ಟಕರವಾಗಿದೆ ನನಗೆ ನ್ಯಾಯ ಕೊಡಿಸಿ ಎಂದು ಜಿಲ್ಲಾಧಿಕಾರಿ ಕಚೇರಿ ಎದುರು ತಾಯಿ ಮಗಳು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

    ಧರಣಿ ಸ್ಥಳಕ್ಕೆ ಆಗಮಿಸಿ ನೊಂದ ಮಹಿಳೆಯ ಮನವಿ ಆಲಿಸಿದ ಅಪರ ಜಿಲ್ಲಾಧಿಕಾರಿ ಅನುರಾಧ ಅವರು ನಿಮಗೆ ಕಾನೂನಿನಡಿಯಲ್ಲಿ ನ್ಯಾಯ ಕೊಡಿಸುತ್ತೇನೆ. ಉಪವಾಸ ಸತ್ಯಾಗ್ರಹ ಕೈಬಿಡಿ ಎಂದು ತಿಳಿಸಿದರೂ ನನಗೆ ನ್ಯಾಯ ಸಿಗುವವರೆಗು ಉಪವಾಸ ಸತ್ಯಾಗ್ರಹ ಕೈಬಿಡುವುದಿಲ್ಲ ಎಂದು ಮಹಿಳೆ ಪಟ್ಟು ಹಿಡಿದು ಪ್ರತಿಭಟಿಸುತ್ತಿದ್ದಾರೆ.

  • ಬಹುಮತ ಇಲ್ಲದಿದ್ದರೂ ರಾಜ್ಯ ಸಭೆಯಲ್ಲಿ ತ್ರಿವಳಿ ತಲಾಖ್ ಬಿಲ್ ಕೊನೆಗೂ ಪಾಸ್

    ಬಹುಮತ ಇಲ್ಲದಿದ್ದರೂ ರಾಜ್ಯ ಸಭೆಯಲ್ಲಿ ತ್ರಿವಳಿ ತಲಾಖ್ ಬಿಲ್ ಕೊನೆಗೂ ಪಾಸ್

    ನವದೆಹಲಿ: ಎರಡು ಬಾರಿ ವಿಫಲವಾಗಿದ್ದ ತಲಾಖ್ ಮಸೂದೆ ಈ ಬಾರಿ ರಾಜ್ಯಸಭೆಯಲ್ಲಿ ಪಾಸ್ ಆಗಿದೆ. ಸದನದಲ್ಲಿ ಮೋದಿ ಸರ್ಕಾರಕ್ಕೆ ಬಹುಮತ ಇಲ್ಲದಿದ್ದರೂ ಕೂಡ ಮಸೂದೆಯ ಪರ 99 ಮತಗಳು ಬಂದಿದ್ದರೆ, ವಿರೋಧವಾಗಿ 84 ಮತಗಳು ಸಿಕ್ಕಿದೆ. ಪಾಸ್ ಆದ ಬೆನ್ನಲ್ಲೇ ಕೇಂದ್ರ ಸರ್ಕಾರ ಇದು ಐತಿಹಾಸಿಕ ಎಂದು ಬಣ್ಣಿಸಿದೆ.

    ಇಂದು ಸಚಿವ ರವಿಶಂಕರ್ ಪ್ರಸಾದ್ ತಲಾಖ್ ಮಸೂದೆಯನ್ನ ರಾಜ್ಯಸಭೆಯಲ್ಲಿ ಮಂಡಿಸಿದರು. ಈ ಮಸೂದೆ ಮುಸ್ಲಿಂ ಮಹಿಳೆಯರಿಗೆ ನ್ಯಾಯ ಒದಗಿಸಲು ಹೊರತು ಯಾವುದೇ ರಾಜಕೀಯ ದುರುದ್ದೇಶಕ್ಕೆ ಎಂದು ಈ ವೇಳೆ ಪ್ರತಿಪಾದಿಸಿದರು. ಇದರಲ್ಲಿ ವೋಟ್ ಬ್ಯಾಂಕ್ ಉದ್ದೇಶ ಇಲ್ಲ. ಇದು ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಕಾನೂನು ಆಗಿದೆ ಎಂದರು.

    ಮಸೂದೆಯನ್ನು ಮಂಡನೆಯನ್ನು ಖಂಡಿಸಿ ಎನ್‍ಡಿಎ ಮಿತ್ರಪಕ್ಷ ಜೆಡಿಯು ಸದಸ್ಯರು ಸಭಾತ್ಯಾಗ ಮಾಡಿದರು. ಮತ್ತೊಂದೆಡೆ ಕಾಂಗ್ರೆಸ್, ಎನ್‍ಸಿಪಿ ಕೂಡ ಮಸೂದೆಯನ್ನು ವಿರೋಧಿಸಿತ್ತು. ಇದರೊಂದಿಗೆ ಎಐಎಡಿಎಂಕೆ ಸದಸ್ಯರು ಕೂಡ ಸಭಾತ್ಯಾಗ ಮಾಡಿದರು. ರಾಜ್ಯಸಭೆಯಲ್ಲಿ ಸದ್ಯ 241 ಸದಸ್ಯರಿದ್ದಾರೆ. ಜೆಡಿಯು, ಅಣ್ಣಾಡಿಎಂಕೆ, ಟಿಆರ್‍ಎಸ್ ಸದಸ್ಯರು ಸದನದಿಂದ ನಡೆದ ಪರಿಣಾಮ ಸದನದ ಸದಸ್ಯರ ಸಂಖ್ಯೆ 213ಕ್ಕೆ ಇಳಿದಿತ್ತು. ಮಸೂದೆ 99 ಮತ್ತು 84 ಮತಗಳ ಅಂತರದಲ್ಲಿ ಅಂಗೀಕರವಾಯಿತು. ಬಿಜೆಡಿ ಮಸೂದೆ ಪರ ಮತ ಹಾಕಿತ್ತು. ತ್ರಿವಳಿ ತಲಾಖ್ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕರವಾದ ಹಿನ್ನೆಲೆಯಲ್ಲಿ ಮಸೂದೆಯನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಲಾಗುತ್ತಿದೆ.

    ಕಾಂಗ್ರೆಸ್ ಪಕ್ಷದ ಐವರು, ಸಮಾಜವಾದಿ ಪಕ್ಷದ 6 ಮಂದಿ, ಮಾಯಾವತಿ ಅವರ ಬಹುಜನ ಸಮಾಜವಾದಿ ಪಕ್ಷದಿಂದ 4 ಮಂದಿ, ತೃಣಮೂಲ ಕಾಂಗ್ರೆಸ್ ಪಕ್ಷದ ಇಬ್ಬರು, ಲಾಲು ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳ ಮತ್ತು ಎಂಕೆ ಸ್ಟಾಲಿನ್ ನಾಯಕತ್ವದ ಡಿಎಂಕೆ ಪಕ್ಷದಿಂದ ತಲಾ ಒಬ್ಬರು ಸದನಕ್ಕೆ ಗೈರಾಗಿದ್ದರು.

    ಇದಕ್ಕೂ ಮುನ್ನ ಸದನದಲ್ಲಿ ಮಸೂದೆಯನ್ನು ಸಲಹಾ ಸಮಿತಿಗೆ ನೀಡಬೇಕೆಂದು ವಿರೋಧ ಪಕ್ಷಗಳು ಆಗ್ರಹಿಸಿದ ಹಿನ್ನೆಲೆಯಲ್ಲಿ ಸಭಾಪತಿ ವೆಂಕಯ್ಯ ನಾಯ್ಡು ಅವರು ಇದನ್ನು ಮತಕ್ಕೆ ಹಾಕಿದ್ದರು. ಆದರೆ ಇದರ ಪರವಾಗಿ 84 ಹಾಗೂ ವಿರುದ್ಧವಾಗಿ 100 ಮತಗಳು ಬಂದ ಹಿನ್ನೆಲೆಯಲ್ಲಿ ಸಮಿತಿಗೆ ನೀಡುವ ಪ್ರಸ್ತಾಪವನ್ನು ತಿರಸ್ಕರಿಸಲಾಗಿತ್ತು.

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೊದಲಿಗೆ ಡಿಸೆಂಬರ್ 2017 ರಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಿತ್ತು. ಆದರೆ ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಿದ್ದ 2 ಸಂದರ್ಭದಲ್ಲೂ ಕಾಯ್ದೆ ರಾಜ್ಯ ಸಭೆಯಲ್ಲಿ ಪಾಸ್ ಆಗಲು ವಿಫಲವಾಗಿತ್ತು. ಆದರೆ 2019ರ ಲೋಕಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ಮತ್ತೆ ಅಧಿಕಾರ ಪಡೆದ ಎನ್‍ಡಿಎ ಸರ್ಕಾರ ಈ ಬಾರಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಪಾಸ್ ಮಾಡಲು ಯಶಸ್ವಿಯಾಗಿದೆ.

    ಮಸೂದೆಯಲ್ಲಿ ಏನಿದೆ?:
    2018ರ ಪರಿಷ್ಕೃತ ಮಸೂದೆ ಪ್ರಕಾರ ತ್ರಿವಳಿ ತಲಾಖ್ ಕಾನೂನು ಬಾಹಿರ ಮತ್ತು ಜಾಮೀನು ರಹಿತ ಕ್ರಿಮಿನಲ್ ಅಪರಾಧವಾಗಲಿದೆ. ತಲಾಖ್ ನೀಡುವ ಮುಸ್ಲಿಂ ಪುರುಷರಿಗೆ ಮೂರು ವರ್ಷ ಜೈಲು ಶಿಕ್ಷೆಯ ಪ್ರಸ್ತಾವ ಈ ಮಸೂದೆಯಲ್ಲಿದೆ.

  • ಗೋವು ರಕ್ಷಣೆ ನಿರತ ಮುಸ್ಲಿಂ ಮಹಿಳೆಗೆ ಜೀವ ಬೆದರಿಕೆ! ರಕ್ಷಣೆಗೆ ಪ್ರಧಾನಿಗೆ ಮನವಿ

    ಗೋವು ರಕ್ಷಣೆ ನಿರತ ಮುಸ್ಲಿಂ ಮಹಿಳೆಗೆ ಜೀವ ಬೆದರಿಕೆ! ರಕ್ಷಣೆಗೆ ಪ್ರಧಾನಿಗೆ ಮನವಿ

    ಭೋಪಾಲ್: ಗೋವುಗಳ ಸಂರಕ್ಷಣೆಯಲ್ಲಿ ನಿರತರಾಗಿರುವ ಮುಸ್ಲಿಂ ಮಹಿಳೆಯೊಬ್ಬರಿಗೆ ಸಂಬಂಧಿಕರೇ ಜೀವ ಬೆದರಿಕೆ ಹಾಕಿರುವ ಘಟನೆ ಮಧ್ಯಪ್ರದೇಶದಲ್ಲಿ ನೀಮುಚ್ ಜಿಲ್ಲೆಯಲ್ಲಿ ನಡೆದಿದೆ.

    ಮಧ್ಯಪ್ರದೇಶದ ರಾಷ್ಟ್ರೀಯ ಗೋವು ರಕ್ಷಾ ವಾಹಿಣಿ ಅಧ್ಯಕ್ಷೆ ಮೆಹ್ರುನ್ನೀಸಾ ಖಾನ್ ಜೀವ ಬೆದರಿಕೆಗೆ ಒಳಗಾದ ಮಹಿಳೆ. ಸದ್ಯ ಅವರು ತಮಗೆ ರಕ್ಷಣೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

    ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಮೆಹ್ರುನ್ನೀಸಾ ಅವರು, ನಾನು ಗೋವುಗಳ ಸಂರಕ್ಷಣೆ ಮಾಡುತ್ತಿರುವೆ. ಹೀಗಾಗಿ ತಮ್ಮ ಪ್ರತಿಷ್ಠೆಗೆ ದಕ್ಕೆ ಉಂಟಾಗುತ್ತಿದೆ ಎಂದು ಸಂಬಂಧಿಕರು ಅನೇಕ ಬಾರಿ ಥಳಿಸಿದ್ದಾರೆ. ಅಷ್ಟೇ ಅಲ್ಲದೇ ಜೀವ ಬೆದರಿಕೆ ಕೂಡಾ ಹಾಕಿದ್ದಾರೆ ಎಂದು ಅಳಲು ತೊಡಿಕೊಂಡರು. ಇದನ್ನು ಓದಿ: ಆನ್‍ಲೈನ್ ನಲ್ಲಿ ನಿಮಗೆ ಬೇಕಾದ ತಳಿಯ ಹಸುಗಳನ್ನು ಖರೀದಿಸಿ!- ಏನಿದರ ವಿಶೇಷತೆ?

    ಗೋವುಗಳ ರಕ್ಷಣೆಗೆ ಸೇರಿದಾಗಿನಿಂದ ಹಾಗೂ ತ್ರಿವಳಿ ತಲಾಖ್ ವಿರುದ್ಧ ಧ್ವನಿ ಎತ್ತಿದ್ದರಿಂದ ನನ್ನ ತಾಯಿ, ಮಗಳು ಭಾರೀ ವಿರೋಧ ವ್ಯಕ್ತಪಡಿಸಿದರು. ಅಷ್ಟೇ ಅಲ್ಲದೇ ಸಂಬಂಧಿಕರು ನನಗೆ ಥಳಿಸಿದ್ದು, ಜೀವ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಮೂರು ತಿಂಗಳ ಹಿಂದೆಯೇ ಪೊಲೀಸರ ಸಹಾಯವನ್ನು ಕೇಳಿದ್ದೆ. ಸದ್ಯ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದರಿಂದ ರಕ್ಷಣೆ ನೀಡುವಂತೆ ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿರುವೆ ಎಂದು ಅವರು ಹೇಳಿದರು.

    ನೀಮುಚ್ ನಗರದಿಂದ 500 ಮೀ. ದೂರದಲ್ಲಿ ಗೋಶಾಲೆ ನಡೆಸಲಾಗುತ್ತಿದೆ. ಗೋವುಗಳ ರಕ್ಷಣೆ ನಮ್ಮ ಗೌರವಕ್ಕೆ ದಕ್ಕೆ ತರುತ್ತದೆ. ಹೀಗಾಗಿ ಈ ಕಾರ್ಯವನ್ನು ಕೈಬಿಡುವಂತೆ ಸಂಬಂಧಿಕರು ಒತ್ತಾಯಿಸುತ್ತಿದ್ದಾರೆ. ಆದರೆ ಪ್ರಾಣಿಗಳ ರಕ್ಷಣೆ ನಮ್ಮ ಗೌರವಕ್ಕೆ ಹೇಗೆ ಧಕ್ಕೆ ತರುತ್ತದೆ ಎನ್ನುವುದೇ ನನಗೆ ಅರ್ಥವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.