Tag: Muslims Women

  • ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ: ಯತ್ನಾಳ್‌ ಘೋಷಣೆ

    ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ: ಯತ್ನಾಳ್‌ ಘೋಷಣೆ

    – ಕೊಪ್ಪಳದಲ್ಲಿ ಕೊಲೆಯಾದ ಗವಿ ನಾಯಕನ ಮನೆಗೆ ಶಾಸಕ ಭೇಟಿ

    ಕೊಪ್ಪಳ: ಮುಸ್ಲಿಂ ಯುವತಿಯರನ್ನ (Muslim Girls) ಮದ್ವೆಯಾದ್ರೆ 5 ಲಕ್ಷ ರೂ. ಕೊಡುವ ಅಭಿಯಾನ ಆರಂಭಿಸುತ್ತೇವೆ. ಈ ಮೂಲಕ ಹಿಂದೂಗಳನ್ನ ಕೊಲೆ ಮಾಡುವ ಮನಸ್ಥಿತಿಯುಳ್ಳ ಮುಸ್ಲಿಮರಿಗೆ ಉತ್ತರ ನೀಡಬೇಕಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ (Basangouda Patil Yatnal) ಹೇಳಿದ್ದಾರೆ.

    ಕೊಪ್ಪಳ ನಗರದ (Koppala City) ಕುರುಬರ ಓಣಿಯಲ್ಲಿನ ಕೊಲೆಯಾದ ಗವಿಸಿದ್ದಪ್ಪ ಮನೆಗೆ ಭೇಟಿ ನೀಡಿದ ನಂತರ ಮಾಧ್ಯಮ ಗಳೊಂದಿಗೆ ಅವರು ಮಾತನಾಡಿದರು.

    ಮಸೀದಿ ಮುಂದೆಯೇ ಗವಿಸಿದ್ದಪ್ಪ ನಾಯಕ ಕೊಲೆಯಾಗಿದೆ. ಕೊಲೆ ಮಾಡುವಾಗ ತಡೆಯುವ ಕೆಲಸ ಅಲ್ಲಿದ್ದವರು ಮಾಡಿಲ್ಲ. ಕೊಲೆ ಮಾಡಿದ ಆರೋಪಿ ರೀಲ್ಸ್‌ನಲ್ಲಿ ಮಚ್ಚು ತೋರಿಸಿದ್ದಾನೆ. ಈಗ ಪೊಲೀಸರು ನಾಲ್ಕು ಜನರನ್ನು ಬಂಧಿಸಿದ್ದಾರೆ. ಆ ಹುಡುಗಿಯನ್ನೂ ಅರೆಸ್ಟ್‌ ಮಾಡಬೇಕು. ಮಚ್ಚು ಹಿಡಿದು ಓಡಾಡುವವರಿಗೆ ಸರ್ಕಾರ ಬೆಂಬಲ ನೀಡುತ್ತದೆ. ಲವ್ ಜಿಹಾದ್ ಮಾಡಿದಾಗ ಸರ್ಕಾರ ಅಲ್ಪಸಂಖ್ಯಾತರಿಗೆ ರಕ್ಷಣೆ ಕೊಡುತ್ತದೆ. ಸರ್ಕಾರ ಮುಸ್ಲಿಂರಿಗೆ ಮಾತ್ರ ರಕ್ಷಣೆ ನೀಡುತ್ತದೆ. ಈ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ. ಅಧಿವೇಶನದಲ್ಲಿ ಈ ಕುರಿತು ಪ್ರಶ್ನಿಸುತ್ತೇನೆ. ಆ.11ರ ಪ್ರತಿಭಟನೆಗೆ ಎಲ್ಲರೂ ಸಹಕರಿಸಬೇಕು. ಇದೇ ನೆಪದಲ್ಲಿ ಗಣೇಶ ಹಬ್ಬಕ್ಕೆ ಅಡ್ಡಿ ಪಡಿಸಬಾರದು ಎಂದು ಆಗ್ರಹಿಸಿದರು.

    ಮುಸ್ಲಿಮರು ಅಪರಾಧಿಗಳಲ್ಲ ಎಂದು ಬಿಂಬಿಸದಂತೆ ಪೊಲೀಸರಿಗೆ ಒತ್ತಡವಿದೆ. ಡ್ರಗ್ಸ್ ಗಾಂಜಾದ ಬಗ್ಗೆ ಗೃಹ ಸಚಿವರು ಉಡೊ ಮಾತನಾಡುತ್ತಾರೆ. ಸದ್ಯ ರಾಜ್ಯದಲ್ಲಿ ಸಾಬರ ಸರ್ಕಾವಿದೆ. ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಏನಾದರೂ ತೊಂದರೆಯಾದ್ರೆ ಮಾತ್ರ ಪ್ರತಿಕ್ರಿಯಿಸುತ್ತಾರೆ. ಜಿಲ್ಲಾ ಉಸ್ತುವಾರಿ ಸಚಿವರು ಕೇವಲ ಸಾಂತ್ವಾನ ಹೇಳಿದ್ರೆ ಸಾಲದು. ಕುಟುಂಬದ ನೆರವಿಗೆ ಬರಬೇಕು ಎಂದು ವಾಗ್ದಾಳಿ ಮಾಡಿದರು.

  • ಮುಸ್ಲಿಂ ವಿದ್ಯಾವಂತರ‍್ಯಾರೂ ನಾಲ್ಕು ಮದುವೆಯಾಗಲ್ಲ – ನಿತಿನ್ ಗಡ್ಕರಿ

    ಮುಸ್ಲಿಂ ವಿದ್ಯಾವಂತರ‍್ಯಾರೂ ನಾಲ್ಕು ಮದುವೆಯಾಗಲ್ಲ – ನಿತಿನ್ ಗಡ್ಕರಿ

    ದಿಸ್ಪುರ್: ವಿಶ್ವದಲ್ಲಿ ಎರಡು ನಾಗರಿಕ ಸಂಹಿತೆಯನ್ನು (UCC) ಹೊಂದಿರುವ ಮುಸ್ಲಿಂ ರಾಷ್ಟ್ರ (Muslims Nations) ಯಾವುದೂ ಇಲ್ಲ. ಮುಸ್ಲಿಂ ಸಮುದಾಯದಲ್ಲಿರುವ (Muslims Community) ಪ್ರಗತಿಪರ ಹಾಗೂ ವಿದ್ಯಾವಂತರ‍್ಯಾರೂ ನಾಲ್ಕು ಬಾರಿ ಮದುವೆಯಾಗುವುದಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಸ್ಪಷ್ಟನೆ ನೀಡಿದ್ದಾರೆ.

    ಖಾಸಗಿ ವಾಹಿನಿಯೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ, `ಮುಸ್ಲಿಂ ಪುರುಷರು 3-4 ಮದುವೆಯಾಗುವ (Marriage) ವ್ಯವಸ್ಥೆ ಬದಲಿಸಿ ಮಹಿಳೆಯರಿಗೆ (Muslims Women) ನ್ಯಾಯ ಒದಗಿಸಬೇಕು’ ಎನ್ನುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು. ಇದೇ ವೇಳೆ ಏಕರೂಪ ನಾಗರಿಕ ಸಂಹಿತೆ (UCC) ಕುರಿತ ಪ್ರಶ್ನೆಗೆ ಉತ್ತರಿಸಿ, ನಾಲ್ವರು ಪತ್ನಿಯರನ್ನ ಹೊಂದುವುದು ಅಸ್ವಾಭಾವಿಕ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಪುರುಷರು 3-4 ಮದುವೆಯಾಗುವ ವ್ಯವಸ್ಥೆ ಬದಲಿಸಿ ಮಹಿಳೆಯರಿಗೆ ನ್ಯಾಯ ಒದಗಿಸಬೇಕು: ಹಿಮಂತ ಶರ್ಮಾ

    ಎರಡು ನಾಗರಿಕ ಸಂಹಿತೆ ಹೊಂದಿದ ಮುಸ್ಲಿಂ ರಾಷ್ಟ್ರ ಯಾವುದಾದರೂ ಇದೆಯೇ? ಒಬ್ಬ ಪುರುಷ ಓರ್ವ ಮಹಿಳೆಯನ್ನು ಮದುವೆಯಾದರೆ ಅದು ಸಹಜ. ಆದ್ರೆ ಒಬ್ಬ ಪುರುಷ ನಾಲ್ವರು ಮಹಿಳೆಯರನ್ನ ಮದುವೆಯಾದ್ರೆ ಅದು ಅಸಹಜ. ಮುಸ್ಲಿಂ ಸಮುದಾಯದಲ್ಲಿರುವ ಪ್ರಗತಿಪರ ಹಾಗೂ ವಿದ್ಯಾವಂತರ‍್ಯಾರೂ ನಾಲ್ಕು ಬಾರಿ ಮದುವೆಯಾಗುವುದಿಲ್ಲ. ಹಾಗೆಯೇ ಏಕರೂಪ ನಾಗರಿಕ ಸಂಹಿತೆ ಯಾವುದೇ ಒಂದು ಧರ್ಮಕ್ಕೆ ವಿರುದ್ಧವಾಗಿಲ್ಲ. ಅದು ರಾಷ್ಟ್ರದ ಅಭಿವೃದ್ಧಿಗಾಗಿ ಇದೆ. ಆದ್ದರಿಂದ ಸಂಹಿತೆಯನ್ನು ರಾಜಕೀಯ ದೃಷ್ಟಿಕೋನದಿಂದ ನೋಡದೇ ಈ ದೇಶದ ಬಡವರಿಗೆ ಪ್ರಯೋಜನ ನೀಡುತ್ತದೆ ಎಂಬುದನ್ನು ನೋಡಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಬೆಳಗಾವಿ ಗಡಿ ವಿವಾದ: ಅಮಿತ್ ಶಾ ಭೇಟಿಯಾದ ಮಹಾರಾಷ್ಟ್ರ ಸಂಸದರು – ರಾಜ್ಯ ಸಂಸದರ ದಿವ್ಯ ಮೌನ

    Live Tv
    [brid partner=56869869 player=32851 video=960834 autoplay=true]

  • ವೃದ್ಧೆಯನ್ನು ಕೊಂದು, ಕಬೋರ್ಡ್‌ನಲ್ಲಿ ಸುತ್ತಿಟ್ಟು ಅನ್ಯಕೋಮಿನ ಮಹಿಳೆ ಎಸ್ಕೇಪ್

    ವೃದ್ಧೆಯನ್ನು ಕೊಂದು, ಕಬೋರ್ಡ್‌ನಲ್ಲಿ ಸುತ್ತಿಟ್ಟು ಅನ್ಯಕೋಮಿನ ಮಹಿಳೆ ಎಸ್ಕೇಪ್

    ಆನೇಕಲ್: ದೆಹಲಿಯ ಶ್ರದ್ಧಾವಾಕರ್ (Shraddha Walker) ಹತ್ಯೆ ಪ್ರಕರಣದ ಮಾದರಿಯಲ್ಲೇ ಅನ್ಯಕೋಮಿನ ಮಹಿಳೆಯೊಬ್ಬರು ವೃದ್ಧೆಯನ್ನು ಕೊಂದು, ಮೃತದೇಹವನ್ನು ಕಬೋರ್ಡ್‌ನಲ್ಲಿ ಸುತ್ತಿಟ್ಟಿದ್ದ ಘಟನೆ ಬೆಂಗಳೂರು (Bengaluru) ಹೊರಹೊಲಯದ ಆನೇಕಲ್ ತಾಲೂಕಿನ ನೆರಳೂರು ಗ್ರಾಮದಲ್ಲಿ ನಡೆದಿದೆ.

    ಕೊಲೆಯ (Murder) ಆರೋಪಿಯನ್ನು ನೆರಳೂರು ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಪಾಯಲ್ ಖಾನ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ರೆಡ್ಡಿ ಮೊಮ್ಮಗಳ ನಾಮಕರಣಕ್ಕೆ ರಾಮುಲು ಗೈರು- ಮುರಿದು ಬಿತ್ತಾ ದಶಕಗಳ ಗೆಳೆತನದ ನಂಟು..?

    ಪಾಯಲ್ ಖಾನ್ ತನ್ನ ಕೆಳಮನೆಯಲ್ಲಿ ಬಾಡಿಗೆಗೆ ವಾಸವಿದ್ದ ವೃದ್ಧೆಯನ್ನು ಕೊಂದು ಎಸ್ಕೇಪ್ ಆಗಿದ್ದಾಳೆ. ಕಳೆದ ಮೂರು ದಿನಗಳ ಹಿಂದೆ ಈ ಮಹಿಳೆ ಅಜ್ಜಿಯನ್ನು ಮನೆಗೆ ಕರೆದಿದ್ದಳು. ಅನಂತರ ಎಷ್ಟು ಹುಡುಕಿದರೂ ಸಿಗಲೇ ಇಲ್ಲ. ಕೊಲೆ ಮಾಡಿ ಒಂದು ದಿನದ ನಂತರ ಮುಸ್ಲಿಂ ಮಹಿಳೆ (Muslim Women) ಎಸ್ಕೇಪ್ ಆಗಿದ್ದಳು. ಇದರಿಂದ ಅನುಮಾನಗೊಂಡ ಅಜ್ಜಿ ಮನೆಯವರು ಆಕೆಯ ಮನೆಬೀಗ ತೆಗೆಸಿ ನೋಡಿದ್ದಾರೆ. ಮನೆಯಲ್ಲಾ ಹುಡುಕಾಡಿದಾಗ ಅಜ್ಜಿಯ ಮೃತದೇಹವನ್ನು ಪ್ಯಾಕ್ ಮಾಡಿ ಕಬೋರ್ಡ್‌ನಲ್ಲಿ ಇಟ್ಟಿದ್ದನ್ನು ಕಂಡು ದಂಗಾಗಿದ್ದಾರೆ. ಬಳಿಕ ಅತ್ತಿಬೆಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ತುಮಕೂರು ಜಿಲ್ಲೆಯ ಶಿರಾ ಮೂಲತದ ವೃದ್ಧೆ ಪಾರ್ವತಮ್ಮ ಕಳೆದ 9 ತಿಂಗಳ ಹಿಂದೆ ನೆರಳೂರಿಗೆ ಬಾಡಿಗೆಗೆ ಬಂದಿದ್ದರು. ಶುಕ್ರವಾರ ಪಾರ್ವತಮ್ಮ ಅವರ ಸೊಸೆ ಜ್ಯೋತಿ ಮಕ್ಕಳನ್ನು ಟ್ಯೂಷನ್ನಿಂದ ಕರೆದುಕೊಂಡು ಬರಲು ಹೊರಗೆ ಹೋಗಿದ್ದಾರೆ. ಈ ವೇಳೆ ಅಜ್ಜಿಯನ್ನು ಮನೆಗೆ ಕರೆದುಕೊಂಡು ಹೋದ ಮಹಿಳೆ ಕೃತ್ಯ ಎಸಗಿದ್ದಾಳೆ. ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದನ್ನೂ ಓದಿ: ಕ್ಷೌರಿಕನ ಮಗ 250ನೇ ಏಕದಿನ ಆಟಗಾರನಾಗಿ ಟೀಂ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದೇ ರೋಚಕ

    ಆರೋಪಿ ಮಹಿಳೆ ಪಾಯಲ್ ಖಾನ್ 8 ತಿಂಗಳ ಹಿಂದೆಯಷ್ಟೇ ನೆರಳೂರಿನಲ್ಲಿ ಮನೆ ಬಾಡಿಗೆ ಪಡೆದಿದ್ದರು. ತನ್ನ ಅಣ್ಣನಿಗೆ ಅಪಘಾತವಾಗಿದೆ ಎಂದು ಹೇಳಿ ಮುಸ್ಲಿಂ ಮಹಿಳೆ ಒಬ್ಬಳೇ ವಾಸವಾಗಿದ್ದಳು. ಕಳೆದ ತಿಂಗಳೂ ಬಾಡಿಗೆ ಕೊಟ್ಟಿರಲಿಲ್ಲ. ಆದ್ರೆ ಅಜ್ಜಿ ಕೊಲೆಯಾಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಮನೆ ಮಾಲೀಕ ಅಂಬರೀಶ್ ಹೇಳಿದ್ದಾರೆ.

    ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಬೆಂಗಳೂರು ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ಕಳೆದ ಮೂರು ದಿನಗಳಿಂದ ಮೃತ ಅಜ್ಜಿ ಪಾರ್ವತಮ್ಮ ನಾಪತ್ತೆಯಾಗಿದ್ದರು. ಈ ಬಗ್ಗೆ ಅತ್ತಿಬೆಲೆ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಂಟ್ ದಾಖಲಾಗಿತ್ತು. ನಿನ್ನೆಯಿಂದ ಮುಸ್ಲಿಂ ಮಹಿಳೆ ಪಾಯಲ್ ಖಾನ್ ನಾಪತ್ತೆಯಾದ ಹಿನ್ನೆಲೆಯಲ್ಲಿ ಮನೆ ಪರಿಶೀಲಿಸಿದಾಗ ಕಬೋರ್ಡ್ನಲ್ಲಿ ವೃದ್ಧೆಯ ಮೃತದೇಹ ಪತ್ತೆಯಾಗಿದೆ ಎಂದು ಹೇಳಿದ್ದಾರೆ.

    ಕೈ ಕಾಲು ಕಟ್ಟಿದ ಸ್ಥಿತಿಯಲ್ಲಿ ವೃದ್ಧೆಯ ಮೃತದೇಹ ಪತ್ತೆಯಾಗಿದೆ. ಮಾರಕಾಸ್ತçಗಳಿಂದ ತಲೆ ಹೊಡೆದು ಹತ್ಯೆ ಮಾಡಲಾಗಿದೆ. ಅಜ್ಜಿಯ ಮೈಮೇಲಿದ್ದ 70 ಗ್ರಾಂ ಚಿನ್ನ ಸಹ ನಾಪತ್ತೆಯಾಗಿದೆ. ಆರೋಪಿ ಮಹಿಳೆ ಪತ್ತೆಗಾಗಿ ಎರಡು ಪೊಲೀಸ್ ತಂಡ ರಚಿಸಲಾಗಿದೆ, ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]