Tag: muslims

  • ಭಾರತದಲ್ಲಿ ಮುಸ್ಲಿಮರ ಮೇಲಿನ ಹಿಂಸಾಚಾರ ನೋಡಿ ಬೇಸರವಾಗಿದೆ: ಸೂಪರ್‌ ಮಾಡೆಲ್‌ ಪದ್ಮಾ ಲಕ್ಷ್ಮೀ

    ಭಾರತದಲ್ಲಿ ಮುಸ್ಲಿಮರ ಮೇಲಿನ ಹಿಂಸಾಚಾರ ನೋಡಿ ಬೇಸರವಾಗಿದೆ: ಸೂಪರ್‌ ಮಾಡೆಲ್‌ ಪದ್ಮಾ ಲಕ್ಷ್ಮೀ

    ಮುಂಬೈ: ಭಾರತದಲ್ಲಿ ಮುಸ್ಲಿಮರ ಮೇಲೆ ನಡೆಯುತ್ತಿರುವ ಹಿಂಸಾಚಾರ ನೋಡಿ ಬೇಸರವಾಯಿತು ಎಂದು ಭಾರತ ಮೂಲದ ಅಮೆರಿಕ ಸೂಪರ್‌ ಮಾಡೆಲ್‌ ಹಾಗೂ ಲೇಖಕಿ ಪದ್ಮಾ ಲಕ್ಷ್ಮೀ ಬೇಸರ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಟ್ವೀಟ್‌ ಮಾಡಿರುವ ಅವರು, ಭಾರತದಲ್ಲಿ ಅಥವಾ ಬೇರೆಲ್ಲಿಯೂ ಹಿಂದೂ ಧರ್ಮಕ್ಕೆ ಯಾವುದೇ ಬೆದರಿಕೆ ಇಲ್ಲ. ಈ ಪ್ರಾಚೀನ ಮತ್ತು ವಿಶಾಲವಾದ ಭೂಮಿಯಲ್ಲಿ ಎಲ್ಲಾ ಧರ್ಮಗಳ ಜನರು ಶಾಂತಿಯುತವಾಗಿ ಬದುಕಲು ಸಾಧ್ಯವಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಹಲಾಲ್‌ ಮಾಂಸ, ಮಸೀದಿಗಳಲ್ಲಿ ಧ್ವನಿವರ್ಧಕ ಏಕೆ ನಿಷೇಧಿಸಬೇಕು: ಒಮರ್‌ ಅಬ್ದುಲ್ಲಾ ಪ್ರಶ್ನೆ

    ದೇಶದಲ್ಲಿ ವ್ಯಾಪಕ ಮುಸ್ಲಿಂ ವಿರೋಧಿ ವಾಕ್ಚಾತುರ್ಯವಿದೆ. ಹಿಂದೂಗಳು ಈ ಭಯ ಉತ್ತೇಜಕ ಮತ್ತು ಪ್ರಚಾರಕ್ಕೆ ಬಲಿಯಾಗುವುದಿಲ್ಲ ಎಂದು ಹೇಳಿದ್ದಾರೆ.

    ವ್ಯಾಪಕವಾದ ಮುಸ್ಲಿಂ ವಿರೋಧಿ ವಾಕ್ಚಾತುರ್ಯವು ಜನರನ್ನು ವಿಷಪೂರಿತಗೊಳಿಸುತ್ತದೆ. ಈ ಪ್ರಚಾರವು ಅಪಾಯಕಾರಿ ಮತ್ತು ಹಾನಿಕಾರಕ. ನೀವು ಯಾರನ್ನಾದರೂ ತುಚ್ಛವಾಗಿ ಕಂಡರೆ ದಬ್ಬಾಳಿಕೆಗೆ ದಾರಿ ಮಾಡಿಕೊಟ್ಟಂತೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದೇವಾಲಯಗಳನ್ನು ಧ್ವಂಸಗೊಳಿಸಿ ಶಾಂತಿಯನ್ನು ಕದಡುತ್ತಿದೆ: ಕಾಂಗ್ರೆಸ್ ವಿರುದ್ಧವೇ ಮುಸ್ಲಿಮರಿಂದ ದೂರು

    ಹಿಂದೂಗಳೇ, ಈ ಭಯ ಹುಟ್ಟಿಸುವವರಿಗೆ ಮಣಿಯಬೇಡಿ. ಭಾರತದಲ್ಲಿ ಅಥವಾ ಬೇರೆಲ್ಲಿಯೂ ಹಿಂದೂ ಧರ್ಮಕ್ಕೆ ಯಾವುದೇ ಅಪಾಯವಿಲ್ಲ. ನಿಜವಾದ ಆಧ್ಯಾತ್ಮಿಕತೆಯು ಯಾವುದೇ ರೀತಿಯ ದ್ವೇಷವನ್ನು ಬಿತ್ತುವುದಿಲ್ಲ ಎಂದಿದ್ದಾರೆ.

  • ಮುಸ್ಲಿಮರನ್ನು ಕಂಡಾಕ್ಷಣ ಪಾಕಿಸ್ತಾನದವರು, ಉಗ್ರಗಾಮಿಗಳು ಎನ್ನುವುದು ಸರಿಯಲ್ಲ: ಮಾಜಿ‌ ಸಚಿವ ಈಶ್ವರಪ್ಪ

    ಮುಸ್ಲಿಮರನ್ನು ಕಂಡಾಕ್ಷಣ ಪಾಕಿಸ್ತಾನದವರು, ಉಗ್ರಗಾಮಿಗಳು ಎನ್ನುವುದು ಸರಿಯಲ್ಲ: ಮಾಜಿ‌ ಸಚಿವ ಈಶ್ವರಪ್ಪ

    ಶಿವಮೊಗ್ಗ: ಮುಸ್ಲಿಮರನ್ನು ಕಂಡ ಕೂಡಲೇ ಅವರು ಪಾಕಿಸ್ತಾನದವರು, ಉಗ್ರಗಾಮಿಗಳು ಎನ್ನುವುದು ಸರಿಯಲ್ಲ. ಆ ಭಾವನೆ ದೂರ ತಳ್ಳಿ. ಅವರನ್ನು ನಮ್ಮತ್ತ ಸೆಳೆಯುವಂತಹ ಪ್ರಯತ್ನ ಮಾಡಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

    ಬಿಜೆಪಿ ಕಚೇರಿಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ದೇಶದ ಎಲ್ಲಾ ಮುಸ್ಲಿಮರು ರಾಷ್ಟ್ರ ದ್ರೋಹಿಗಳಲ್ಲ. ಹಿಂದೂ, ಮುಸಲ್ಮಾನರನ್ನು ಕಾಂಗ್ರೆಸ್ ಬೇರೆ ಬೇರೆ ಮಾಡುತ್ತಿದೆ. ಮತ್ತೆ ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳುತ್ತಾರೆ. ಕಾಂಗ್ರೆಸ್​ ನಾಯಕರು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಇಂದು ಹಿಜಬ್, ನಾಳೆ ಸಂವಿಧಾನವೇ ಬೇಡ ಅಂತಾರೆ ಈ ಮಾನಸಿಕತೆಗೆ ಕಾಂಗ್ರೆಸ್ ಕೈಜೋಡಿಸಬಾರದು: ಸಿ.ಟಿ.ರವಿ

    ಹುಬ್ಬಳ್ಳಿಯಲ್ಲಿನ ಘಟನೆಗೆ ಕಾರಣನಾದ ಮಾಸ್ಟರ್​ ಮೈಂಡ್​ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದೆ. ಜನರನ್ನು ಸೇರಿಸಿದ್ದು ಹೌದು. ಆದರೆ ಕಲ್ಲು ಹೊಡೆಸಿದ್ದು ನಾನಲ್ಲ ಎಂದು ಹೇಳುತ್ತಿದ್ದಾನೆ. 2 ಸಾವಿರ ಜನರನ್ನು ಹೇಗೆ ಸೇರಿಸಿದ? ಅವನಿಗೆ ಸ್ಫೂರ್ತಿ ಯಾರು? ಈ ಘಟನೆಯಿಂದ ಎಲ್ಲಾ ಮುಸ್ಲಿಮರನ್ನು ಅನುಮಾನದಿಂದ ನೋಡುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ನಿರ್ದೋಷಿಯಾಗಿ ಹೊರಬರುತ್ತೇನೆ
    ಇದೇ ವೇಳೆ ನಗರದ ಬೋವಿ ಸಮುದಾಯ ಭವನದಲ್ಲಿ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಭೇಟಿ ನೀಡಿದರು. ಈ ವೇಳೆ ಮಾತನಾಡಿ, ಸಂತೋಷ್ ಪಾಟೀಲ್ ಪ್ರಕರಣದಲ್ಲಿ‌ ನನ್ನದು ಒಂದೇ ಒಂದು ಪರ್ಸೆಂಟ್ ತಪ್ಪಿದ್ದರೆ ನನಗ ಶಿಕ್ಷೆಯಾಗಲಿ. ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ‌ ನಾನು ನಿರ್ದೋಷಿಯಾಗಿ ಹೊರ ಬರುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಬುಲ್ಡೋಜರ್ ಕಾನೂನು ಜಾರಿ ಬಗ್ಗೆ ಸಿಎಂ ಜೊತೆ ಚರ್ಚೆ: ಆರ್.ಅಶೋಕ್

    ಪ್ರಕರಣ ಕುರಿತು ತ‌ನಿಖೆ ನಡೆಯುತ್ತಿದ್ದು, ತನಿಖಾಧಿಕಾರಿಗಳು ಎಲ್ಲಾ ರೀತಿಯಲ್ಲೂ ತನಿಖೆ ನಡೆಸುತ್ತಿದ್ದಾರೆ. ನಾನು ನಿರ್ದೋಷಿಯಾಗಿ ಹೊರ ಬರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • ಹಿಜಬ್ ಹೋರಾಟಗಾರ್ತಿಯರು ಸೆಕೆಂಡ್ ಪಿಯುಸಿ ಪರೀಕ್ಷೆ ಬರೆಯೋದು ಡೌಟ್

    ಹಿಜಬ್ ಹೋರಾಟಗಾರ್ತಿಯರು ಸೆಕೆಂಡ್ ಪಿಯುಸಿ ಪರೀಕ್ಷೆ ಬರೆಯೋದು ಡೌಟ್

    ಉಡುಪಿ: ರಾಜ್ಯಾದ್ಯಂತ ಶುಕ್ರವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದೆ. ಹಿಜಬ್ ಹೋರಾಟದ ವಿಚಾರಕ್ಕೆ ನಾಳೆ ಆರಂಭವಾಗಲಿರುವ ಪರೀಕ್ಷೆಗಳು ಭಾರೀ ನಿರೀಕ್ಷೆಗೆ ಕಾರಣವಾಗಿದೆ. ಶೈಕ್ಷಣಿಕ ಜೀವನದ ಮಹತ್ವದ ಘಟ್ಟ ಆಗಿರುವುದರಿಂದ ಮುಸಲ್ಮಾನ ವಿದ್ಯಾರ್ಥಿನಿಯರು ಹಿಜಬ್ ತೆಗೆದು ಕ್ಲಾಸಿಗೆ ಬಂದು ಪರೀಕ್ಷೆ ಬರೆಯುತ್ತಾರಾ ಎಂಬುದು ಕುತೂಹಲದ ಪ್ರಶ್ನೆ.

    ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ ಆಗುತ್ತಿದೆ. ಎಲ್ಲಾ ಜಿಲ್ಲೆಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ಸಿದ್ಧತೆಗಳನ್ನು ನಡೆಸುತ್ತಿದೆ. ಈ ನಡುವೆ ಹಿಜಬ್ ಹೋರಾಟಗಾರ್ತಿಯರು ಪರೀಕ್ಷೆ ಬರೆಯುತ್ತಾರಾ? ಹೈ ಕೋರ್ಟ್ ತೀರ್ಪಿನಂತೆ ಹಿಜಬ್ ತೆಗೆದು ಪರೀಕ್ಷೆಗೆ ಹಾಜರಾಗುತ್ತಾರೆ ಎಂಬ ಕುತೂಹಲಗಳು ಇವೆ. ಉಡುಪಿಯ ಆರು ಜನ ಹಿಜಬ್ ಹೋರಾಟಗಾರ್ತಿಯರ ಪೈಕಿ ನಾಲ್ವರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು. ಕಾಮರ್ಸ್ ವಿಭಾಗದ ಪರೀಕ್ಷೆಗಳು ನಾಳೆ ನಡೆಯಲಿದ್ದು ನಾಲ್ವರ ಪೈಕಿ ಇಬ್ಬರಿಗೆ ಪರೀಕ್ಷೆ ಇದೆ. ಇದನ್ನೂ ಓದಿ: ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ಮುಸ್ಕಾನ್ ಸೆಮಿಸ್ಟರ್ ಪರೀಕ್ಷೆಗೆ ಗೈರು

    ಉಡುಪಿ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಕ್ಕಿಗಾಗಿ ಡಿಸೆಂಬರ್ ಕಡೆಯ ವಾರದಿಂದ ಬಹಿರಂಗ ಹೋರಾಟ ನಡೆಸಿದ್ದರು. ಹೈಕೋರ್ಟ್ ತ್ರಿಸದಸ್ಯ ಪೀಠದಿಂದ ಹಿಜಬ್ ಗೆ ಅವಕಾಶ ಇಲ್ಲ ಎಂಬ ಮಹತ್ವದ ತೀರ್ಪು ಹೊರಬಿದ್ದಿತ್ತು. ಆನಂತರ ಆರು ವಿದ್ಯಾರ್ಥಿಗಳು ತರಗತಿಗೆ ಪೂರ್ವಭಾವಿ ಪರೀಕ್ಷೆಗಳಿಗೆ ಹಾಜರಾಗಿರಲಿಲ್ಲ. ಆರರ ಪೈಕಿ ಇಬ್ಬರು ಪ್ರಥಮ ಪಿಯು ಪರೀಕ್ಷೆಗೆ ಬಂದಿರಲಿಲ್ಲ. ಹೀಗಾಗಿ ನಾಳೆಯಿಂದ ಆರಂಭವಾಗುವ ದ್ವಿತೀಯ ಪಿಯುಸಿ ಪರೀಕ್ಷೆಗೂ ನಾಲ್ವರು ವಿದ್ಯಾರ್ಥಿಗಳು ಬರುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ.

  • ಕಲ್ಲು ಹೊಡೆಯುವ ಸಂಸ್ಕೃತಿ ಮುಸ್ಲಿಮರಲ್ಲಷ್ಟೇ ಇದೆ: ಪ್ರತಾಪ್‌ ಸಿಂಹ

    ಕಲ್ಲು ಹೊಡೆಯುವ ಸಂಸ್ಕೃತಿ ಮುಸ್ಲಿಮರಲ್ಲಷ್ಟೇ ಇದೆ: ಪ್ರತಾಪ್‌ ಸಿಂಹ

    ಮೈಸೂರು: ಹಿಂದೂಗಳ ಧಾರ್ಮಿಕ ಮೆರವಣಿಗೆಯಲ್ಲಿ ಮುಸ್ಲಿಮರು ಯಾಕೆ ಕಲ್ಲು ಹೊಡೆಯುತ್ತಾರೆ? ಮುಸ್ಲಿಮರ ಮೆರವಣಿಗೆ ಮೇಲೆ ಯಾವತ್ತಾದರೂ ಹಿಂದೂಗಳು ಕಲ್ಲು ಹೊಡೆದಿದ್ದಾರಾ? ಹನುಮನ ಮೆರವಣಿಗೆ, ರಾಮನ ಮೆರವಣಿಗೆ ಮೇಲೆ ಮುಸ್ಲಿಮರು ಯಾಕೆ ಪದೇ ಪದೇ ಕಲ್ಲು ಹೊಡೆಯುತ್ತಾರೆ? ಕಲ್ಲು ಹೊಡೆಯುವ ಸಂಸ್ಕೃತಿ ಮುಸ್ಲಿಮರಲ್ಲಿದೆ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.

    ಹಿಂದೂಗಳ ಯಾತ್ರೆಯನ್ನು ಸೈತಾನರ ಯಾತ್ರೆ ರೀತಿ ಮುಸ್ಲಿಮರು ನೋಡುತ್ತಾರೆ. ಅನ್ಯ ಧರ್ಮದವರನ್ನು ಸೈತಾನರ ರೀತಿ ನೋಡುವ ಮುಸ್ಲಿಮರ ಮನಃಸ್ಥಿತಿ ಬದಲಾಗಬೇಕು. ನೆಲೆ ಕೇಳಿ ಕೊಂಡು ಹಿಂದೂ ರಾಷ್ಟ್ರಕ್ಕೆ ಬಂದವರು ಮುಸ್ಲಿಮರು. ಇಲ್ಲಿನ ಮುಸ್ಲಿಮರಲ್ಲಿ ಇರುವುದು ಹಿಂದೂ ಡಿಎನ್‌ಎ. ಮತಾಂತರದಿಂದ ಮುಸ್ಲಿಮರಾದ ನೀವು ಏನೋ ಅರಬ್ ಡಿಎನ್‌ಎ ಬಂದಿದೆ ಎನ್ನುವ ರೀತಿ ವರ್ತಿಸಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ನಿರ್ಮಲಾ ಸೀತಾರಾಮನ್ ಹಣದುಬ್ಬರದ ಬಗ್ಗೆ ಅರ್ಥಹೀನ ಮಾತನಾಡಿದ್ದಾರೆ: ದಿನೇಶ್ ಗುಂಡೂರಾವ್

    ಕಲ್ಲು ಎಸೆದರೆ ಬುಲ್ಡೋಜರ್ ನಿಮ್ಮ ಮನೆ ಮುಂದೆ ಬರುತ್ತದೆ. ಕ್ರಿಯೆಗೆ ಪ್ರತಿಕ್ರಿಯೆಗೆ ಇರುತ್ತದೆ. ಸಮಾಜ ಬಾಹಿರ ಚಟುವಟಿಕೆಗೆ ಕೈ ಹಾಕುವವರ ಮೇಲೆ ಕ್ರಮ ಆಗಲೇ ಬೇಕು. ಭೂಗತ ಪಾತಕಿ ದಾವುದ್ ಇಬ್ರಾಹಿಂ ಕೂಡ ನಿಮ್ಮವನು ಎಂದು ನಿಮಗೆ ಅನ್ನಿಸಿ ಬಿಡುತ್ತೆ. ಕರ್ನಾಟಕದಲ್ಲಿ ಕೂಡಾ ಬುಲ್ಡೋಜರ್ ಬೀದಿಗೆ ಇಳಿಯುತ್ತವೆ. ಬುಲ್ಡೋಜರ್ ರಸ್ತೆಗೆ ಇಳಿಯಬಾರದು ಎಂದರೆ, ಪುಂಡ ಮುಸ್ಲಿಮರು ಗೌರವಯುತವಾಗಿ ಇರಿ ಎಂದು ಎಚ್ಚರಿಸಿದರು.

    ಇದೇ ವೇಳೆ ಮೈಸೂರು ದೇವರಾಜ ಮಾರುಕಟ್ಟೆ ಉಳಿಸುವ ವಿಚಾರದಲ್ಲಿ ರಾಜವಂಶಸ್ಥ ಯದುವೀರ್ ಧ್ವನಿ ಎತ್ತಿದ ವಿಚಾರವಾಗಿ ಮಾತನಾಡಿದ ಪ್ರತಾಪ್ ಸಿಂಹ, ಮೈಸೂರು ಮಹಾರಾಜರ ಋಣದಲ್ಲಿ ನಾವಿದ್ದೇವೆ. ಇದು ರಾಜಕಾರಣಿಗಳು ಕಟ್ಟಿದ ಊರಲ್ಲ. ಇಲ್ಲಿನ ಅಭಿವೃದ್ಧಿ ಕಾರ್ಯಗಳ ವಿಚಾರದಲ್ಲಿ ಯದುವಂಶದವರ ಅಭಿಪ್ರಾಯ ಕೇಳುತ್ತೇವೆ ಎಂದರು.

    ಶಿಥಿಲ ವ್ಯವಸ್ಥೆಯಲ್ಲಿ ಮಾರುಕಟ್ಟೆ ಕಟ್ಟಡವಿದೆ. ಅದಕ್ಕಾಗಿ ಅದನ್ನು ಪುನರ್ ನಿರ್ಮಾಣ ಮಾಡಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಯದುವಂಶದವರಿಗೆ ಸಂಪೂರ್ಣ ಮಾಹಿತಿ ನೀಡಿ, ಅವರಿಗೆ ವಾಸ್ತವ ಸ್ಥಿತಿ ಅರ್ಥ ಮಾಡಿಸುತ್ತೇವೆ. ಅವರು ನೀಡುವ ಸಲಹೆಗಳನ್ನು ಗೌರವಿಸಿ, ಈ ಕಾರ್ಯ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದರು.

    ಅದಾನಿ-ಅಂಬಾನಿ ಸಂಪತ್ತು ಹೆಚ್ಚಾದ ಬಗ್ಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನಿಗೆ ತಿರುಗೇಟು ನೀಡಿದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ಯಾವ ಆಲುಗೆಡ್ಡೆ ಜೋಳ ಬೆಳೆದು ಹಣ ಮಾಡಿದರು? ನೀವು ಇವತ್ತು ಶ್ರಿಮಂತರಾಗಿಲ್ಲವಾ? 30-40 ವರ್ಷದ ಹಿಂದೆ ನೀವು ಹೇಗಿದ್ದರೋ ಇಂದು ಕೂಡಾ ಹಾಗೆಯೇ ಇದ್ದೀರಾ? ನಿಮ್ಮ ಜೊತೆ ಇರುವ ಕೆಜೆ ಜಾರ್ಜ್, ಎಂಬಿ ಪಾಟೀಲ್, ಡಿಕೆ ಶಿವಕುಮಾರ್ 40 ವರ್ಷದ ಹಿಂದೆ ಏನಾಗಿದ್ದರು ಹೇಳಿ? ಇವತ್ತು ಎಷ್ಟು ಶ್ರಿಮಂತರಾಗಿದ್ದಾರೆ. ಉದ್ಯಮಿಗಳ ಶ್ರೀಮಂತಿಕೆ ಬಗ್ಗೆ ಮಾತನಾಡುವ ನೀವು, ರಾಜಕಾರಣಿಗಳ ಶ್ರೀಮಂತಿಕೆ ಬಗ್ಗೆ ಏಕೆ ಮಾತನಾಡುವುದಿಲ್ಲ ಎಂದು ಪ್ರಶ್ನಿಸಿ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ದಿಂಗಾಲೇಶ್ವರ ಶ್ರೀಗಳಿಗೆ ತಲೆ ಸರಿ ಇಲ್ಲ: ರೇಣುಕಾಚಾರ್ಯ ವ್ಯಂಗ್ಯ

    Siddaramaiah

    ಅದಾನಿ-ಅಂಬಾನಿನಾ ಹುಟ್ಟಿಸಿದ್ದು ಮೋದಿನಾ? ಮೋದಿ ಪ್ರಧಾನ ಮಂತ್ರಿ ಆಗುವುದಕ್ಕೂ ಮುಂಚೆ ಅವರು ಶ್ರೀಮಂತರಾಗಿರಲಿಲ್ಲವಾ? ಮಾತೆತ್ತಿದರೆ ಅದಾನಿ-ಅಂಬಾನಿ ಅಂತೀರಾ. ಎಷ್ಟೋ ಶ್ರೀಮಂತ ಉದ್ಯಮಿಗಳು ಹುಟ್ಟಿದ್ದು ಯಾರ ಕಾಲದಲ್ಲಿ? ಆಸ್ತಿ ಮೌಲ್ಯ ಹೆಚ್ಚಾದಂತೆ ಶ್ರೀಮಂತಿಕೆ ಹೆಚ್ಚಾಗುತ್ತದೆ. ಅದಕ್ಕೆ ಮೋದಿ ಕಾರಣ ಎಂದರೆ ಏನು ಅರ್ಥ? ಮೋದಿಯನ್ನು ಚರ್ಚೆಗೆ ಕರೆಯುತ್ತೀರಾ? ದೇಶಕ್ಕೆ ಒಬ್ಬರೇ ಮೋದಿ. ಇಂತಹ ಚರ್ಚೆಗಳಿಗೆ ಅವರು ಏಕೆ ಬೇಕು ಎಂದು ಟಾಂಗ್ ನೀಡಿದರು.

  • ಬಡ ಮುಸ್ಲಿಮರ ಮೇಲೆ ಬಿಜೆಪಿ ಸಮರ ಸಾರಿದೆ: ಓವೈಸಿ ಕಿಡಿ

    ಬಡ ಮುಸ್ಲಿಮರ ಮೇಲೆ ಬಿಜೆಪಿ ಸಮರ ಸಾರಿದೆ: ಓವೈಸಿ ಕಿಡಿ

    ನವದೆಹಲಿ: ದೆಹಲಿಯಲ್ಲಿ ಮನೆಗಳನ್ನು ಧ್ವಂಸಗೊಳಿಸುವ ಮೂಲಕ ಬಿಜೆಪಿ ಬಡವರ ವಿರುದ್ಧ ಸಮರ ಸಾರಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಕಿಡಿಕಾರಿದ್ದಾರೆ.

    ಈ ಕುರಿತು ಟ್ವೀಟ್‌ ಮಾಡಿರುವ ಅವರು, ಬಿಜೆಪಿ ಬಡವರ ವಿರುದ್ಧ ಸಮರ ಸಾರಿದೆ. ಅತಿಕ್ರಮಣದ ಹೆಸರಿನಲ್ಲಿ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಂತೆಯೇ ದೆಹಲಿಯಲ್ಲಿ ಮನೆಗಳನ್ನು ನಾಶಪಡಿಸಲು ಹೊರಟಿದೆ. ಯಾವುದೇ ನೋಟಿಸ್ ಇಲ್ಲ, ನ್ಯಾಯಾಲಯಕ್ಕೆ ಹೋಗಲು ಅವಕಾಶವಿಲ್ಲ. ಬದುಕಲು ಧೈರ್ಯಮಾಡಿದ ಬಡ ಮುಸ್ಲಿಮರನ್ನು ಶಿಕ್ಷಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಬುಲ್ಡೋಜರ್‌ ಕಾರ್ಯಾಚರಣೆಗೆ ಸುಪ್ರೀಂ ಬ್ರೇಕ್‌

    ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಸಂಶಯಾಸ್ಪದ ಪಾತ್ರವನ್ನು ಸ್ಪಷ್ಟಪಡಿಸಬೇಕು. ಇದರಲ್ಲಿ ದೆಹಲಿಯ ಲೋಕೋಪಯೋಗಿ ಪಾತ್ರದ ಬಗ್ಗೆಯೂ ತಿಳಿಸಬೇಕು. ಇಂತಹ ದ್ರೋಹ ಮತ್ತು ಹೇಡಿತನಕ್ಕಾಗಿ ಜಹಿಂಗೀರ್‌ಪುರಿಯ ಜನರು ಎಎಪಿಗೆ ಮತ ಹಾಕಿದ್ದಾರೆಯೇ? ಪೊಲೀಸರು ನಮ್ಮ ನಿಯಂತ್ರಣದಲ್ಲಿಲ್ಲ ಎಂದು ಅವರು ಆಗಾಗ್ಗೆ ಹೇಳುವುದು ಇಲ್ಲಿ ಕೆಲಸಕ್ಕೆ ಬರುವುದಿಲ್ಲ ಎಂದು ಕೇಜ್ರಿವಾಲ್‌ ವಿರುದ್ಧವೂ ಗುಡುಗಿದ್ದಾರೆ.

    ಉತ್ತರ ದೆಹಲಿ ಮುನ್ಸಿಪಲ್‌ ಕಾರ್ಪೊರೇಷನ್‌ ತೆರವು ಕಾರ್ಯಾಚರಣೆಗೆ ಪೊಲೀಸ್‌ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಕಾರ ಕೋರಿರುವ ಪತ್ರವನ್ನು ಓವೈಸಿ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಜೆಸಿಬಿ ಘರ್ಜನೆ- ಜಹಾಂಗೀರ್‌ಪುರಿಯಲ್ಲಿ ಅಕ್ರಮ ಆಸ್ತಿಗಳ ಧ್ವಂಸ

    ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಬಿಜೆಪಿ ನೇತೃತ್ವದ ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ನಡೆಸಿದ ಕಾರ್ಯಾಚರಣೆಗೆ ಓವೈಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದರೂ ಕ್ಯಾರೆ ಎನ್ನದೇ ಬುಲ್ಡೋಜರ್‌ಗಳು ಕಾರ್ಯಾಚರಣೆ ನಡೆಸಿವೆ.

  • ಮುಸ್ಲಿಮ್ ಮೆಕ್ಯಾನಿಕ್ ರಿಪೇರಿ ಮಾಡದಿದ್ರೆ ಗಾಡಿ ಓಡ್ತವಾ?: ಶಾಸಕ ಪುಟ್ಟರಂಗಶೆಟ್ಟಿ

    ಮುಸ್ಲಿಮ್ ಮೆಕ್ಯಾನಿಕ್ ರಿಪೇರಿ ಮಾಡದಿದ್ರೆ ಗಾಡಿ ಓಡ್ತವಾ?: ಶಾಸಕ ಪುಟ್ಟರಂಗಶೆಟ್ಟಿ

    ಚಾಮರಾಜನಗರ:  ಮುಸ್ಲಿಮ್ ಮೆಕ್ಯಾನಿಕ್ ರಿಪೇರಿ ಮಾಡದಿದ್ದರೆ ಗಾಡಿ ಓಡ್ತವಾ, ಗಾಡಿ ಕೆಟ್ಟರೆ ಅವರೇ ತಾನೇ ಓಡಿ ಬರೋದು. ಅವರೇನು ನಿನ್ನೆ ಮೊನ್ನೆ ಬಂದು ಸೇರ್ಕೊಂಡಿದಾರಾ? ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಮುಸ್ಲಿಮರದ್ದೂ ಪಾತ್ರ ಇದೆ. ಆರ್‍ಎಸ್‍ಎಸ್ ಹೋರಾಟದಲ್ಲಿ ಭಾಗವಹಿಸಿರಲಿಲ್ಲ ಅಂತಾ ಮಾಜಿ ಸಚಿವ, ಶಾಸಕ ಪುಟ್ಟರಂಗಶೆಟ್ಟಿ ತಿಳಿಸಿದರು.

    ರಾಜ್ಯದಲ್ಲಿ ಭುಗಿಲೆದ್ದಿರುವ ಧರ್ಮ ಸಮರ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಮಾಂಸಾಹಾರ ತಿನ್ನೋರು ಮಾಂಸ ತಿನ್ನಲಿ, ತರಕಾರಿ ತಿನ್ನೋರು ತಿನ್ನಲಿ. ಇನ್ನೊಬ್ಬರ ಮೇಲೆ ಒತ್ತಡ ಹೇರೋಕೆ ನಾವ್ಯಾರು? ಇದೆಲ್ಲ ಬಿಜೆಪಿಯ ಬಂಡವಾಳವಾಗಿದೆ. ಬಿಜೆಪಿಯ ಒಂದೊಂದು ಮುಖವಾಡ ಈಗ ಬಯಲಾಗುತ್ತಿದೆ. ಆರ್‌ಎಸ್‌ಎಸ್‌ ಸೇರಿದಂತೆ ಇತರ ಹಿಂದೂ ಸಂಘಟನೆಗಳೆಲ್ಲ ನಿಜವಾದ ಸಂಘಟನೆಗಳಲ್ಲ. ವೋಟಿಗಾಗಿ ಬಿಜೆಪಿ ಹುಟ್ಟು ಹಾಕಿರುವ ಸಂಘಟನೆಗಳು ಇವೆಲ್ಲಾ ಎಂದರು. ಇದನ್ನೂ ಓದಿ: ಈ ನಡುವೆ ಸರ್ಕಾರಗಳು ನ್ಯಾಯಾಂಗವನ್ನು ನಿಂದಿಸುವ ಪ್ರವೃತ್ತಿ ಆರಂಭಿಸಿವೆ: ಸಿಜೆಐ ಆಕ್ರೋಶ

    ಸಿದ್ದು ಮುಂದಿನ ಸಿಎಂ ಆಗುತ್ತಾರಾ? ಎನ್ನುವ ಚರ್ಚೆಗೆ ಪ್ರತಿಕ್ರಿಯಿಸಿ, ಅದೆಲ್ಲ ನಂಗೊತ್ತಿಲ್ಲ, ಅದು ವರಿಷ್ಠರಿಗೆ ಬಿಟ್ಟ ವಿಚಾರ. ಕಾಂಗ್ರೆಸ್‍ನಲ್ಲಿ ಯಾವುದೇ ಬಣಗಳಿಲ್ಲ. ಬಿಜೆಪಿಯಲ್ಲಿ 16 ಬಣ ಇವೆ. ಕಾಂಗ್ರೆಸ್‍ನಲ್ಲಿ ಹಂಗೆಲ್ಲ ಇಲ್ಲ. ಯಡಿಯೂರಪ್ಪ ಒಂದು ದಿಕ್ಕು, ಈಶ್ವರಪ್ಪ ಮತ್ತೊಂದು ದಿಕ್ಕು ಇಲ್ವಾ? ಚುನಾವಣೆ ಬಂದಾಗ ಒಗ್ಗಟ್ಟಾಗೋದು ಸಾಮಾನ್ಯ. ಅವರಲ್ಲಿ ಇರುವಷ್ಟು ಭಿನ್ನಮತ ನಮ್ಮಲ್ಲಿ ಇಲ್ಲ. ಬಿಜೆಪಿಯಲ್ಲಿ ಎಲ್ಲರೂ ಮುಸ್ಲಿಮ್‌ರನ್ನ ವಿರೋಧಿಸುತ್ತಿಲ್ಲ. ಸಚಿವ ಡಾ. ಸುಧಾಕರ್ ನೋಡಿ ಹೇಗೆ ತೇಲಿಸಿ ಮಾತನಾಡುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.  ಇದನ್ನೂ ಓದಿ: ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಸ್ಥಾನ, ಯಾವುದೇ ಭಾಷೆಯನ್ನು ಹೇರಲು ಹೊರಟರೆ ಸಹಿಸಲು ಸಾಧ್ಯ ಇಲ್ಲ: ಸಿದ್ದರಾಮಯ್ಯ

  • ಕರ್ನಾಟಕ ಹಿಜಬ್‌ ಗಲಾಟೆಯಿಂದ ನೊಂದಿದ್ದೆ: ಗೋರಖನಾಥ ದೇವಾಲಯದ ದಾಳಿಕೋರ

    ಕರ್ನಾಟಕ ಹಿಜಬ್‌ ಗಲಾಟೆಯಿಂದ ನೊಂದಿದ್ದೆ: ಗೋರಖನಾಥ ದೇವಾಲಯದ ದಾಳಿಕೋರ

    – ಐಸಿಸ್‌ ಉಗ್ರರಿಗೆ ನೇಪಾಳದಿಂದ ಹಣ ರವಾನೆ
    – ಭಾರತ ಮುಸ್ಲಿಮ್‌ ರಾಷ್ಟ್ರವಾಗಬೇಕು
    – ತನಿಖೆಯ ವೇಳೆ ತಪ್ಪೊಪ್ಪಿಕೊಂಡ ಅಬ್ಬಾಸಿ

    ಲಕ್ನೋ: ಸಿಎಎ, ಎನ್‌ಆರ್‌ಸಿ ಮತ್ತು ಮತ್ತು ಕರ್ನಾಟಕ ಹಿಜಬ್‌ ವಿವಾದದಿಂದ ನಾನು ನೊಂದಿದ್ದೆ ಎಂದು ಉತ್ತರ ಪ್ರದೇಶದ ಗೋರಖಪುರದ ಗೋರಖನಾಥ ದೇವಾಲಯದ ಮೇಲೆ ದಾಳಿ ನಡೆಸಿದ್ದ ಐಐಟಿ ಪದವೀಧರ ಅಹ್ಮದ್ ಮುರ್ತಾಜಾ ಅಬ್ಬಾಸಿ ಹೇಳಿದ್ದಾನೆ.

    ಆರೋಪಿಯನ್ನು ಲಕ್ನೋದ ಭಯೋತ್ಪಾದನಾ ನಿಗ್ರಹ ದಳದ ಪ್ರಧಾನ ಕಚೇರಿಗೆ ಕರೆತಂದ ಬಳಿಕ ವಿಚಾರಣೆ ನಡೆಸಲಾಗಿದೆ. ಈ ವೇಳೆ ಆತ ತನ್ನ ಕೃತ್ಯದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ.

    ವಿಚಾರಣೆಯ ವೇಳೆ ಆರೋಪಿ ಮುರ್ತಾಜಾ ಹಲವು ವಿಚಾರಗಳನ್ನು ಬಹಿರಂಗಪಡಿಸಿದ್ದು, ಗೋರಖನಾಥ ದೇವಾಲಯದ ಸಂಕೀರ್ಣದ ಹೊರಗೆ ಪೊಲೀಸರ ಮೇಲೆ ಹಲ್ಲೆ ನಡೆಸಿದ ಕಾರಣವನ್ನು ತಿಳಿಸಿದ್ದಾನೆ.

    ಮುಸ್ಲಿಮರ ವಿರುದ್ಧ ಸರ್ಕಾರ ಸಿಎಎ ಮತ್ತು ಎನ್‌ಆರ್‌ಸಿಯನ್ನು ಜಾರಿಗೆ ತಂದಿದೆ. ಕರ್ನಾಟಕದಲ್ಲಿ ಹಿಜಬ್‌ ಧರಿಸಲು ಸಹ ನಿರ್ಬಂಧ ಹೇರಲಾಗಿದೆ. ಈ ಎಲ್ಲ ವಿಚಾರಗಳಿಂದ ನಾನು ನೊಂದಿದ್ದೆ. ಹೀಗಾಗಿ ಪ್ರತೀಕಾರ ತೀರಿಸಲು ಇದು ಸರಿಯಾದ ಸಮಯ ಎಂದು ಭಾವಿಸಿದ್ದೆ ಎಂದು ಹೇಳಿದ್ದಾನೆ.

    ಭಾರತವನ್ನು ಮುಸ್ಲಿಂ ರಾಷ್ಟ್ರವನ್ನಾಗಿ ಮಾಡುವ ಆಸೆಯನ್ನು ಆತ ಹೊಂದಿದ್ದ ವಿಚಾರ ತನಿಖೆಯ ವೇಳೆ ತಿಳಿದು ಬಂದಿದೆ. ತನಿಖಾಧಿಕಾರಿಗಳು ಆತನ ಪಾಸ್‌ಪೋರ್ಟ್‌ ವಶಕ್ಕೆ ಪಡೆದಿದ್ದಾರೆ. 6 ತಿಂಗಳ ಹಿಂದೆ ಆತ ದುಬೈಗೆ ತೆರಳಿದ್ದ. ಮುಂಬೈನಲ್ಲಿ ನೆಲೆಸಿದ್ದ ಅಬ್ಬಾಸಿ ಪ್ರಸಿದ್ಧ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ. ಇದನ್ನೂ ಓದಿ: ಯೋಗಿಗೆ ಬೆದರಿಕೆ ಹಾಕಿದ್ದ ಎಸ್‍ಪಿ ಶಾಸಕನ ಪೆಟ್ರೋಲ್ ಬಂಕ್ ಧ್ವಂಸ

    ಮೊಬೈಲ್‌ ವಶಪಡಿಸಿಕೊಂಡಿದ್ದು ಈ ವೇಳೆ ಒಂದು ಧರ್ಮದ ವಿರುದ್ಧ ದ್ವೇಷ ಸಾರುವ ವಾಟ್ಸಪ್‌ ಗ್ರೂಪಿನ ಸದಸ್ಯನಾಗಿರುವುದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಈ ಗ್ರೂಪಿನ ಸದಸ್ಯರನ್ನು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ.

    ನೇಪಾಳಕ್ಕೆ ಭೇಟಿ ನೀಡಿದ್ದ ಅಬ್ಬಾಸಿ ಅಲ್ಲಿನ ಬ್ಯಾಂಕ್‌ನಿಂದ ಸಿರಿಯಾದಲ್ಲಿರುವ ಐಸಿಸ್‌ ಉಗ್ರರಿಗೆ ಹಣವನ್ನು ಕಳುಹಿಸಿದ್ದ. ಅದಕ್ಕಾಗಿ ಪೇಪಾಲ್‌ ಅಪ್ಲಿಕೇಶನ್‌ ಬಳಸಿದ್ದ. ಐಸಿಸ್‌ ಉಗ್ರರ ಜೊತೆ ತನ್ನ ಆಪ್ತ ಅಬ್ದುಲ್‌ ರೆಹಮಾನ್‌ ಜೊತೆ ವೀಡಿಯೋ ಕಾನ್ಫರೆನ್ಸ್‌ನಲ್ಲೂ ಮಾತನಾಡಿದ್ದಾನೆ ಎಂದು ವರದಿ ತಿಳಿಸಿದೆ. ಇದನ್ನೂ ಓದಿ: ಮನೆ ಮುಂದೆ ಬುಲ್ಡೋಜರ್ ಪ್ರತ್ಯಕ್ಷ – ಪರಾರಿಯಾಗಿದ್ದ ಯುಪಿ ರೇಪ್ ಆರೋಪಿ ಶರಣು

    ಕೆಲ ದಿನಗಳ ಹಿಂದೆ ಅಬ್ಬಾಸಿ ಕೆನಡಾ ವೀಸಾ ಪಡೆದಿದ್ದ. ಶೀಘ್ರವೇ ಕೆನಡಾಗೆ ಅಬ್ಬಾಸಿ ತೆರಳುವವನಿದ್ದ. ಆತನ ಕೃತ್ಯದ ಬಗ್ಗೆ ನಮಗೆ ಏನು ಗೊತ್ತಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮಗ ಮಾನಸಿನ ಅಸ್ವಸ್ಥತೆಯಿಂದ ಬಳಲುತ್ತಿದ್ದಾನೆ ಎಂದು ಅಬ್ಬಾಸಿ ತಂದೆ ಹೇಳಿದ್ದಾರೆ.

  • ರಂಜಾನ್ ತಿಂಗಳಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ ಆಂಧ್ರ ಸರ್ಕಾರದಿಂದ ವಿಶೇಷ ಆದ್ಯತೆ

    ರಂಜಾನ್ ತಿಂಗಳಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ ಆಂಧ್ರ ಸರ್ಕಾರದಿಂದ ವಿಶೇಷ ಆದ್ಯತೆ

    ಹೈದರಾಬಾದ್: ರಂಜಾನ್ ತಿಂಗಳಲ್ಲಿ ಸರ್ಕಾರಿ ನೌಕರರು ಸೇರಿದಂತೆ ಶಿಕ್ಷಕರು ಒಂದು ಗಂಟೆ ಮುಂಚಿತವಾಗಿ ಕಚೇರಿಯಿಂದ ತೆರಳಲು ಆಂಧ್ರ ಪ್ರದೇಶ ಸರ್ಕಾರ ಅವಕಾಶ ಕಲ್ಪಿಸಿಕೊಟ್ಟಿದೆ.

    ರಂಜಾನ್ ತಿಂಗಳಲ್ಲಿ ಮುಸ್ಲಿಮರು ಉಪವಾಸ ಮಾಡುವ ಸಲುವಾಗಿ ಅನುಕೂಲ ಆಗುವ ರೀತಿಯಲ್ಲಿ ಸರ್ಕಾರಿ ನೌಕರರು, ಶಿಕ್ಷಕರು, ಶಾಲಾ-ಕಾಲೇಜ್‍ನಲ್ಲಿರುವ ಮುಸ್ಲಿಂ ವಿದ್ಯಾರ್ಥಿಗಳಿಗೆ ಸಂಜೆ ಒಂದು ಗಂಟೆ ಮುಂಚಿತವಾಗಿ ಮನೆಗೆ ತೆರಳಲು ಅವಕಾಶ ನೀಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಮುಸ್ಲಿಮರಿಗೆ ಏಪ್ರಿಲ್ 3 ರಿಂದ ಮೇ 4ರ ವರೆಗೆ ಅನುಕೂಲ ಆಗುವಂತೆ ಒಂದು ಗಂಟೆ ಮುಂಚಿತವಾಗಿ ಮನೆಗೆ ತೆರಳಲು ಆದೇಶಿಸಲಾಗಿದೆ. ಇದನ್ನೂ ಓದಿ: ಆಂಧ್ರಪ್ರದೇಶದ ಎಲ್ಲಾ ಸಚಿವರು ರಾಜೀನಾಮೆ

    ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ತಿಂಗಳಲ್ಲಿ ಉಪವಾಸ ಮಾಡುತ್ತಾರೆ. ಸೂರ್ಯ ಮುಳುಗುವ ಮುಂಚೆ ಮತ್ತು ಸೂರ್ಯ ಉದಯಿಸುವ ಮುನ್ನ ಆಹಾರವನ್ನು ಸೇವಿಸುವ ಪದ್ಧತಿ ಇರುವುದರಿಂದ ಅವರ ಅನುಕೂಲಕ್ಕಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಇದನ್ನೂ ಓದಿ: ಯೋಗಿಗೆ ಬೆದರಿಕೆ ಹಾಕಿದ್ದ ಎಸ್‍ಪಿ ಶಾಸಕನ ಪೆಟ್ರೋಲ್ ಬಂಕ್ ಧ್ವಂಸ

  • ಹಲಾಲ್‌ ಆಯ್ತು ಈಗ ಮುಸ್ಲಿಮರು ಕೆತ್ತನೆ ಮಾಡಿದ ವಿಗ್ರಹ ಪ್ರತಿಷ್ಠಾಪಿಸದಂತೆ ಅಭಿಯಾನ

    ಹಲಾಲ್‌ ಆಯ್ತು ಈಗ ಮುಸ್ಲಿಮರು ಕೆತ್ತನೆ ಮಾಡಿದ ವಿಗ್ರಹ ಪ್ರತಿಷ್ಠಾಪಿಸದಂತೆ ಅಭಿಯಾನ

    ಮಂಡ್ಯ: ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮ್‌ ವ್ಯಾಪಾರಿಗಳಿಗೆ ನಿರ್ಬಂಧ, ಹಲಾಲ್‌ಗೆ ಪ್ರತಿಯಾಗಿ ಜಟ್ಕಾ ಕಟ್‌ ಅಭಿಯಾನದ ಬಳಿಕ ಈಗ ಮುಸ್ಲಿಮರು ಕೆತ್ತನೆ ಮಾಡಿದ ವಿಗ್ರಹಗಳನ್ನು ಪ್ರತಿಷ್ಠಾಪಿಸದಂತೆ ಅಭಿಯಾನ ಆರಂಭವಾಗಿದೆ.

    ಈ ವಿಚಾರ ಸಂಬಂಧ ಮೇಲುಕೋಟೆಯಲ್ಲಿ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ಸ್ಥಾನಿಕ ಶ್ರೀನಿವಾಸನ್ ಪ್ರತಿಕ್ರಿಯಿಸಿ, ಮುಸ್ಲಿಮರು ದೇವರ ವಿಗ್ರಹಗಳನ್ನ ಕೆತ್ತನೆ ಮಾಡುವುದು ಸರಿಯಲ್ಲ. ಅದನ್ನು ಶಾಸ್ತ್ರವು ಕೂಡ ಒಪ್ಪುವುದಿಲ್ಲ. ಹೀಗಾಗಿ ಮುಂದೆ ಮುಸ್ಲಿಮರು ಕೆತ್ತನೆ ಮಾಡಿದ ವಿಗ್ರಹವನ್ನ ಯಾವ ದೇವಾಲಯದಲ್ಲಿಯೂ ಪ್ರತಿಷ್ಠಾಪನೆ ಮಾಡದಂತೆ ಅಭಿಯಾನ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಾವಿನಹಣ್ಣಿನ ಮಾರ್ಕೆಟ್ ನಮ್ಮದಾಗಬೇಕು – ಹಾಸನದಲ್ಲಿ ಹೊಸ ಅಭಿಯಾನ

    ಹಿಂದಿನಿಂದಲೂ ಊರಿನ ಯಜಮಾನರ ಮಾರ್ಗದರ್ಶನದಲ್ಲಿ ಮೂರ್ತಿ ಕೆತ್ತನೆಯಾಗುತ್ತಾ ಬಂದಿದೆ. ಶಾಸ್ರ್ತ ಪ್ರಕಾರವಾಗಿ ವಿಶ್ವಕರ್ಮ ಜನಾಂಗದವರೇ ಮೂರ್ತಿಯನ್ನು ಕೆತ್ತನೆ ಮಾಡಬೇಕು. ಈ ಕಾರಣದಿಂದ ಮುಸ್ಲಿಮರು ಕೆತ್ತನೆ ಮಾಡಿದ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡದಂತೆ ರಾಜ್ಯಾದ್ಯಂತ ಪ್ರವಾಸ ಮಾಡಿ, ದೇಗುಲದ ಅರ್ಚಕರಲ್ಲಿ ಮನವಿ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಮಂಡ್ಯ ವಿದ್ಯಾರ್ಥಿನಿಗೆ ನಗದು ಬಹುಮಾನ – ಹಲಾಲ್ ವಿರುದ್ಧ ಅಭಿಯಾನ: ಎರಡಕ್ಕೂ ನಂಟೇನು?

    ಹಲಾಲ್‌ ವಿರುದ್ಧದ ಅಭಿಯಾನದ ಸಂದರ್ಭದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ, ಕುವೆಂಪು ಕೊಟ್ಟ ಸಂದೇಶವನ್ನು ವಿಎಚ್‌ಪಿ, ಭಜರಂಗದಳದವರು ಧೂಳೀಪಟ ಮಾಡಲು ಹೋಗುತ್ತಿದ್ದಾರೆ. ಮುಸ್ಲಿಮರು ವಿಗ್ರಹಗಳನ್ನು ಕೆತ್ತುತ್ತಿದ್ದಾರೆ. ಅದನ್ನು ಏನ್‌ ಮಾಡ್ತೀರಿ ಎಂದು ಖಾರವಾಗಿ ಪ್ರಶ್ನಿಸಿದ್ದರು.

  • ಹೀಗೆ ಮಾಡಿದ್ರೆ ಮುಂದಿನ ಜನಾಂಗಕ್ಕೆ ಕಾಂಗ್ರೆಸ್ ಇದೆಯೋ ಇಲ್ಲವೋ ಗೊತ್ತಾಗುವುದಿಲ್ಲ: ಮುರುಗೇಶ್ ನಿರಾಣಿ

    ಹೀಗೆ ಮಾಡಿದ್ರೆ ಮುಂದಿನ ಜನಾಂಗಕ್ಕೆ ಕಾಂಗ್ರೆಸ್ ಇದೆಯೋ ಇಲ್ಲವೋ ಗೊತ್ತಾಗುವುದಿಲ್ಲ: ಮುರುಗೇಶ್ ನಿರಾಣಿ

    ಬೆಳಗಾವಿ: ಕಾಂಗ್ರೆಸ್ ಹೀಗೆ ಮಾಡಿದರೆ ಮುಂದಿನ ಜನಾಂಗಕ್ಕೆ ಕಾಂಗ್ರೆಸ್ ಇದೆಯೋ, ಇಲ್ಲವೋ ಗೊತ್ತಾಗುವುದಿಲ್ಲ ಎಂದು ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ.

    ಮುಸ್ಲಿಮರ ಆರ್ಥಿಕ ಬಹಿಷ್ಕಾರ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಇದರಲ್ಲಿ ಭಾಗವಹಿಸಿಲ್ಲ. ಈ ವಿಚಾರದ ಬಗ್ಗೆ ಚರ್ಚೆ ಆಗಿ ನಮ್ಮ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ. ಹಿಂದೂ ಸಂಘಟನೆಗಳು ಆರ್ಥಿಕ ಬಹಿಷ್ಕಾರ ಮಾಡುತ್ತಿರುವ ಬಗ್ಗೆ ಮಾಧ್ಯಮದಲ್ಲಿ ನೋಡಿರುವೆ. ನೂರರಷ್ಟು ಶಾಂತಿ ಕಾಪಾಡುವ ಕೆಲಸ ಮಾಡಬೇಕು. ಆ ನಿಟ್ಟಿನಲ್ಲಿ ನಮ್ಮ ಗೃಹ ಸಚಿವರು ಸಶಕ್ತರಾಗಿದ್ದಾರೆ ಎಂದರು. ಇದನ್ನೂ ಓದಿ:  ಮಂತ್ರಿ ಆಗ್ಲಿ, ಎಂಎಲ್‍ಎ ಆಗ್ಲಿ, ನಮ್ಮ ತಾತನ ಆಸ್ತಿಯಲ್ಲ; ಮುರುಗೇಶ್ ನಿರಾಣಿ

    ಹಿಜಬ್, ಹಲಾಲ್ ವಿಚಾರ ಮುಂದಿಟ್ಟು ಬೆಲೆ ಏರಿಕೆ ಬಗ್ಗೆ ಮಾತನಾಡುತ್ತಿಲ್ಲ ಎಂಬ ಕಾಂಗ್ರೆಸ್ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‍ನವರ ಆರೋಪ ಸತ್ಯಕ್ಕೆ ದೂರವಾದದ್ದು, ಅವರದ್ದು ಬರೀ ಆಪಾದನೆ ಮಾಡುವ ಕೆಲಸವಷ್ಟೇ. ಇದರ ಜೊತೆಗೆ ಕೆಲವೊಂದು ಪಬ್ಲಿಕ್‍ಗೆ ತೊಂದರೆ ಆಗುವ ಜಾಗ ಇರುತ್ತವೆ. ಕೆಲವು ಕಡೆ ಸ್ಕೂಲ್, ಕಾಲೇಜು, ಆಸ್ಪತ್ರೆಗಳು ಇರುತ್ತವೆ. ಇಲ್ಲಿ ಹಿಂದೂಗಳು ಭಜನೆ ಮಾಡುವುದು, ಮುಸ್ಲಿಮರು ಮೈಕ್ ಹಚ್ಚುವುದು ಆಗಬಾರದು. ಎಲ್ಲಿ ತೊಂದರೆ ಆಗುವುದಿಲ್ಲ, ಅಲ್ಲಿ ಹಚ್ಚಿಕೊಳ್ಳಲು ಕೋರ್ಟ್ ಅವಕಾಶ ಮಾಡಿಕೊಟ್ಟಿದೆ. ಅಲ್ಲಿ ಯಾವುದೇ ರೀತಿ ತೊಂದರೆ ಆಗುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ವಿವಾದಿತ ಸಮಾಧಿಯನ್ನ ಶಾಂತಿಯುತವಾಗಿ ಸ್ಥಳಾಂತರಿಸಿದ ಕ್ರೈಸ್ತ ಸಮುದಾಯ

    ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಪಕ್ಷದಲ್ಲಿ ಇರುವಷ್ಟು ಸೀಟ್ ಲೋಕಸಭೆಯಲ್ಲಿ ಬಂದಿಲ್ಲ. ಇದೇ ಮಾಡಿಕೊಂಡು ಹೋದರೆ ಲೆಕ್ಕ ಇಲ್ಲದಂತೆ ಆಗುತ್ತದೆ. ಯುಪಿಎ ಚುನಾವಣೆಯಲ್ಲಿ 400 ಸೀಟ್‍ನಲ್ಲಿ ಕಾಂಗ್ರೆಸ್‍ಗೆ ನಾಲ್ಕು ಸೀಟ್ ಬರಲಿಲ್ಲ. ಹೀಗೆ ಹೋದರೆ ಮುಂದಿನ ಜನಾಂಗಕ್ಕೆ ಕಾಂಗ್ರೆಸ್ ಇದೆಯೋ ಇಲ್ಲವೋ ಗೊತ್ತಾಗುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.