Tag: muslims

  • 50 ವರ್ಷಗಳಲ್ಲಿ ಫಸ್ಟ್ ಟೈಂ – ಮುಸ್ಲಿಮ್ ರಾಷ್ಟ್ರಗಳ ಶೃಂಗ ಸಭೆಗೆ ಭಾರತಕ್ಕೆ ಆಹ್ವಾನ

    50 ವರ್ಷಗಳಲ್ಲಿ ಫಸ್ಟ್ ಟೈಂ – ಮುಸ್ಲಿಮ್ ರಾಷ್ಟ್ರಗಳ ಶೃಂಗ ಸಭೆಗೆ ಭಾರತಕ್ಕೆ ಆಹ್ವಾನ

    ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಸ್ಲಿಮ್ ರಾಷ್ಟ್ರಗಳ ವಾರ್ಷಿಕ ಶೃಂಗ ಸಭೆಯಲ್ಲಿ ಇದೇ ಮೊದಲ ಬಾರಿಗೆ ಭಾರತ ಪಾಲ್ಗೊಳ್ಳುತ್ತಿದೆ. ಇಸ್ಲಾಮಿಕ್ ಸಹಕಾರ ಸಂಘ(ಒಐಸಿ) ಸ್ಥಾಪನೆಯಾಗಿ 50 ವರ್ಷಗಳ ನಂತರ ಭಾರತದ ವಿದೇಶಾಂಗ ಸಚಿವರೊಬ್ಬರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

    ಮಾರ್ಚ್ 1 ರಂದು ಅಬುಧಾಬಿಯಲ್ಲಿ ಒಐಸಿಯ ವಿದೇಶಾಂಗ ಸಚಿವರ ಸಮ್ಮೇಳನ ನಡೆಯಲಿದ್ದು, ಈ ಸಮ್ಮೇಳನದಲ್ಲಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.

     

    ಪುಲ್ವಾಮಾ ಘಟನೆಗೂ ನಡೆಯುವ ಒಂದು ತಿಂಗಳು ಮೊದಲೇ ಈ ಆಹ್ವಾನ ಒಐಸಿಯಿಂದ ಭಾರತಕ್ಕೆ ಬಂದಿತ್ತು. ಯುಎಇ ವಿದೇಶಾಂಗ ಸಚಿವ ಶೇಖ್ ಅಬ್ದುಲ್ಲಾ ಬಿನ್ ಜಯಾದ್ ಸ್ವುಷ್ಮಾ ಸ್ವರಾಜ್ ಅವರನ್ನು ವಿಶೇಷ ಆಹ್ವಾನಿತರಾಗಿ ಆಹ್ವಾನಿಸಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡುವಂತೆ ಕೇಳಿಕೊಂಡಿದ್ದರು. ಈ ಆಹ್ವಾನವನ್ನು ಭಾರತ ಸಂತೋಷದಿಂದ ಸ್ವೀಕರಿಸಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯ ತಿಳಿಸಿದೆ.

    ಭಾರತ ಈ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತ್ರ ಭಾಗಿಯಾಗಲಿದೆ. ಸದಸ್ಯರಾಗದ ಕಾರಣ ಒಐಸಿಯ ಅಧಿಕೃತ ಹೇಳಿಕೆಯಲ್ಲಿ ಭಾರತ ಭಾಗಿಯಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ.

    ಕಾಶ್ಮೀರ ವಿಚಾರದಲ್ಲಿ ಒಐಸಿ ಪಾಕಿಸ್ತಾನದ ಪರವಿದೆ. 2018ರಲ್ಲಿ ವಿಶ್ವಸಂಸ್ಥೆಯಲ್ಲಿ ಒಐಸಿ ಕಾಶ್ಮೀರದಲ್ಲಿ ಭಾರತ ಮಾನವ ಹಕ್ಕುಗಳ ಉಲ್ಲಂಘನೆ ಮಾಡುತ್ತಿದೆ. ಕಾಶ್ಮೀರಿ ನಿವಾಸಿಗಳ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ ಎಂದು ಒಐಸಿ ಆರೋಪಿಸಿತ್ತು. ಈ ಆರೋಪವನ್ನು ಭಾರತ ತಳ್ಳಿ ಹಾಕಿ, ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಈ ವಿಚಾರದಲ್ಲಿ ಯಾರೂ ಮೂಗು ತೂರಿಸುವ ಅಗತ್ಯವಿಲ್ಲ ಎಂದು ಹೇಳಿ ತಿರುಗೇಟು ನೀಡಿತ್ತು.

    ಸುಷ್ಮಾ ಸ್ವರಾಜ್ ಅವರು ತಮ್ಮ ಭಾಷಣದಲ್ಲಿ ಪಾಕಿಸ್ತಾನ ಹೇಗೆ ಉಗ್ರರಿಗೆ ಆಶ್ರಯ ನೀಡುತ್ತಿದೆ ಎನ್ನುವ ವಿಚಾರವನ್ನು ಪ್ರಸ್ತಾಪಿಸಿ, ಮುಸ್ಲಿಂ ರಾಷ್ಟ್ರಗಳು ಭಾರತಕ್ಕೆ ಬೆಂಬಲ ನೀಡಬೇಕೆಂದು ಮನವಿ ಮಾಡುವ ಸಾಧ್ಯತೆ ಇದೆ.

    1969 ರಲ್ಲಿ ಇಸ್ಲಾಮಿಕ್ ಸಹಕಾರ ಸಂಘ ಆರಂಭಗೊಂಡಿದ್ದು ಸೌದಿ ಆರೇಬಿಯಾದ ಜೆಡ್ಡಾದಲ್ಲಿ ಮುಖ್ಯ ಕಚೇರಿಯಿದೆ. ಒಟ್ಟು 57 ರಾಷ್ಟ್ರಗಳು ಈ ಸಂಘಟನೆಯ ಸದಸ್ಯರಾಗಿವೆ. ವಿಶ್ವ ಸಂಸ್ಥೆಯ ಬಳಿಕ ಎರಡನೇ ಅತಿ ಹೆಚ್ಚು ಸದಸ್ಯರನ್ನು ಹೊಂದಿದ ಸಂಘಟನೆ ಇದಾಗಿದೆ.

    ಮುಸ್ಲಿಮ್ ಸಮುದಾಯವನ್ನು ಹೆಚ್ಚಿರುವ ದೇಶಗಳಿಗೆ ಮಾತ್ರ ಈ ಸಂಘಟನೆಯ ಸದಸ್ಯ ಸ್ಥಾನವನ್ನು ನೀಡಲಾಗುತ್ತದೆ. ರಷ್ಯಾ, ಥೈಲ್ಯಾಂಡ್ ಸೇರಿದಂತೆ ಕೆಲವೊಂದು ರಾಷ್ಟ್ರಗಳನ್ನು ವೀಕ್ಷಕರನ್ನಾಗಿ ನೇಮಿಸಲಾಗುತ್ತದೆ. ಕಳೆದ ವರ್ಷ ನಡೆದ ಶೃಂಗದಲ್ಲಿ ಬಾಂಗ್ಲಾದೇಶ ಭಾರತವನ್ನು ವೀಕ್ಷಕರನ್ನಾಗಿ ಮಾಡಬೇಕು ಎನ್ನುವ ಪ್ರಸ್ತಾಪವನ್ನು ಇಟ್ಟಿತ್ತು. ಆದರೆ ಈ ಪ್ರಸ್ತಾಪವನ್ನು ಪಾಕಿಸ್ತಾನ ವಿರೋಧಿಸಿತ್ತು.

    ನರೇಂದ್ರ ಮೋದಿ ಸರ್ಕಾರ ಬಂದ ಬಳಿಕ ಬಾಂಗ್ಲಾದೇಶ ಅಲ್ಲದೇ ಒಐಸಿಯ ಹಲವು ಮುಸ್ಲಿಂ ರಾಷ್ಟ್ರಗಳ ಜೊತೆಗಿನ ಭಾರತದ ಸಂಬಂಧ ವೃದ್ಧಿಸಿದೆ. ಯುಎಇ, ಸೌದಿ ಆರೇಬಿಯಾ ಜೊತೆಗಿನ ವ್ಯಾಪಾರ ಸಂಬಂಧ ಮತ್ತಷ್ಟು ವೃದ್ಧಿಯಾಗಿದೆ. ಗ್ಯಾಸ್ ನಲ್ಲಿ ಶ್ರೀಮಂತವಾಗಿರುವ ಕತಾರ್ ಜೊತೆಗಿನ ವ್ಯವಹಾರ ವೃದ್ಧಿಸಿದೆ. ವಿಶ್ವಸಂಸ್ಥೆಯ ಭದ್ರತಾ  ಸಮಿತಿಯಲ್ಲಿ ಸಿಆರ್ ಪಿಎಫ್ ಯೋಧರ ಹತ್ಯೆಯನ್ನು ಖಂಡಿಸಿ ಪಾಕ್ ವಿರುದ್ಧ ನಿರ್ಣಯ ಕೈಗೊಳ್ಳುವಲ್ಲಿ ಕುವೈತ್ ಬಹಳ ಮುಖ್ಯ ಪಾತ್ರವಹಿಸಿತ್ತು. ತೈಲ ರಾಷ್ಟ್ರ ಇರಾನ್ ವ್ಯವಹಾರದಲ್ಲಿ ಪಾಲುದಾರನಾಗಿದೆ. ಹೀಗಾಗಿ ಹಲವು ಮುಸ್ಲಿಂ ರಾಷ್ಟ್ರಗಳು ಭಾರತವನ್ನು ಆಹ್ವಾನಿಸಬೇಕೆಂಬ ಒತ್ತಡ ಹಾಕಿದ ಹಿನ್ನೆಲೆಯಲ್ಲಿ ಒಐಸಿ ಮೊದಲ ಬಾರಿಗೆ ಭಾರತಕ್ಕೆ ಆಹ್ವಾನ ನೀಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಂಬನಿ ಮಿಡಿದ ಮುಸ್ಲಿಮರು

    ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಂಬನಿ ಮಿಡಿದ ಮುಸ್ಲಿಮರು

    ತುಮಕೂರು: ಸಿದ್ದಗಂಗಾ ಶ್ರೀಗಳು ಎಂದಾಕ್ಷಣ ಅವರೊಬ್ಬ ಸರ್ವ ಧರ್ಮ ಪ್ರಿಯರು, ಜಾತ್ಯಾತೀತ ಸ್ವಾಮೀಜಿ ಎಂಬ ಭಾವನೆ ಮೂಡುತ್ತದೆ. ಅಂತೆಯೇ ತುಮಕೂರು ನಗರದಾದ್ಯಂತ ಇಂದು ಅವರ ಅಗಲಿಕೆಗೆ ಮುಸ್ಲಿಮರು ಕೂಡ ಸಂತಾಪ ವ್ಯಕ್ತಪಡಿಸಿದ್ದು ಕಂಬನಿ ಮಿಡಿದಿದ್ದಾರೆ.

    ನಗರದ ಸಂತೆಪೇಟೆ ಹಾಗೂ ಮೇಲೆ ಪೇಟೆಗಳಲ್ಲಿ ಆಟೋ ಚಾಲಕರು, ತರಕಾರಿ ವ್ಯಾಪಾರಿಗಳೆಲ್ಲಾ ಒಟ್ಟಾಗಿ ಹಿಂದು ಸಂಪ್ರದಾಯದಂತೆ ಶಿವಕುಮಾರ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ನುಡಿ ನಮನ ಸಲ್ಲಿಸಿದ್ದಾರೆ. ಅಲ್ಲದೇ ಇಸ್ಲಾಂ ಧರ್ಮದ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಧರ್ಮಗಳ, ಕಡು-ಬಡ ನಿರ್ಗತಿಕ ಮಕ್ಕಳಿಗೆ ಆಶ್ರಯ ಕಲ್ಪಿಸಿ, ಉನ್ನತ ಸ್ಥಾನಕ್ಕೇರಲು ಸಹಕಾರಿಯಾದ ಸಿದ್ದಗಂಗಾ ಶ್ರೀಗಳಿಗೆ ಭಾರತ ಸರ್ಕಾರ, ಭಾರತ ರತ್ನ ಪುರಸ್ಕಾರ ನೀಡಿ ಗೌರವಿಸಬೇಕೆಂದು ಒತ್ತಾಯಿಸಿದ್ರು.

    ವಿವಿಧೆಡೆಗಳಿಂದ ಆಗಮಿಸಿರುವ ಶ್ರೀಗಳ ಭಕ್ತರಿಗಾಗಿ ಮುಸ್ಲಿಮರು ಸಿಹಿ ಖಾದ್ಯ ಹಾಗೂ ಉಪಹಾರ ವ್ಯವಸ್ಥೆ ಕೂಡ ಕಲ್ಪಿಸಿದ್ದಾರೆ.

    https://www.youtube.com/watch?v=ELiv_cSa5PM

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶ್ರೀರಾಮ, ಆಂಜನೇಯ ಆರಾಧನೆ-88 ಲಕ್ಷ ರಾಮಕೋಟಿ ಬರೆದಿದ್ದಾರೆ ಬಂಗಾರಪೇಟೆಯ ಪಾಚಾಸಾಬ್

    ಶ್ರೀರಾಮ, ಆಂಜನೇಯ ಆರಾಧನೆ-88 ಲಕ್ಷ ರಾಮಕೋಟಿ ಬರೆದಿದ್ದಾರೆ ಬಂಗಾರಪೇಟೆಯ ಪಾಚಾಸಾಬ್

    ಕೋಲಾರ: ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಹಿಂದೂ-ಮುಸಲ್ಮಾನರ ನಡುವೆ ಕಾನೂನು ಸಮರ ನಡೀತಿದೆ. ಜೊತೆಗೆ ರಾಮನನ್ನು ಮುಸ್ಲೀಮರು ದ್ವೇಷಿಸ್ತಾರೆ ಅನ್ನೋ ಟೀಕೆಯೂ ಇದೆ. ಆದ್ರೆ, ಕೋಲಾರದ ಪಬ್ಲಿಕ್ ಹೀರೋ ಪಾಚಾ ಸಾಬ್ ವಿರೋಧವೇ ಸರಿ. 88 ಲಕ್ಷ ರಾಮಕೋಟಿ ಬರೆದಿದ್ದಾರೆ.

    ಕೋಲಾರದ ಬಂಗಾರಪೇಟೆಯ ಮಾಗೊಂದಿ ಗ್ರಾಮದ 96 ವರ್ಷದ ಪಾಚಾಸಾಬ್ ಶ್ರೀರಾಮನ ಆರಾಧಕರಾಗಿದ್ದು, ಕೋಟಿ ಶ್ರೀರಾಮಕೋಟಿ ಬರೆದು ಭದ್ರಾಚಲಂ ದೇಗುಲಕ್ಕೆ ಅರ್ಪಿಸುವ ಕನಸು ಹೊತ್ತಿದ್ದಾರೆ. ಈಗಾಗಲೇ 88 ಲಕ್ಷ ರಾಮಕೋಟಿ ಬರೆದಿದ್ದು, ಶೀಘ್ರವೇ 12 ಲಕ್ಷ ರಾಮಕೋಟಿ ಬರೆಯುತ್ತೇನೆ ಅಂತಿದ್ದಾರೆ.

    1923ರಲ್ಲಿ ಬಡ ಕುಟುಂಬದಲ್ಲಿ ಜನಿಸಿರುವ ಪಾಚಾಸಾಬ್ ಅಂದಿನ ಕಾಲದಲ್ಲೇ 4ನೇ ತರಗತಿಯನ್ನ ಇಂಗ್ಲೀಷ್‍ನಲ್ಲಿ ಹಾಗೂ ಕನ್ನಡದಲ್ಲಿ 8ನೇ ತರಗತಿವರೆಗೆ ಓದಿ ಶಿಕ್ಷಕರಾಗಿದ್ದರು. 22 ವರ್ಷಗಳ ಹಿಂದೆ ಆಂಧ್ರ ಪ್ರದೇಶದ ಭದ್ರಾಚಲಂಗೆ ಸ್ನೇಹಿತನೊಂದಿಗೆ ಭೇಟಿ ನೀಡಿದ್ದಾಗ ಅಲ್ಲಿನ ಸಾಧು ಒಬ್ಬರ ಸಲಹೆಯಂತೆ ರಾಮಕೋಟಿಯನ್ನು ಪುಸ್ತಕ, ಆಲದ ಎಲೆ, ಎಕ್ಕದ ಎಲೆ, ತಾಮ್ರದ ಎಲೆ ಮೇಲೆ ಬರೆಯುತ್ತಿದ್ದಾರೆ.

    ಗ್ರಾಮದಲ್ಲಿ ಮಕ್ಕಳು, ದೊಡ್ಡವರು, ವೃದ್ಧರಿಗೆ ಗ್ರಹ ಸಂಬಂಧಿ ಕಾಯಿಲೆ ಇದ್ದಲ್ಲಿ ಉಚಿತವಾಗಿ ಮಂತ್ರ-ಚಿಕಿತ್ಸೆಯನ್ನೂ ನೀಡ್ತಿದ್ದಾರೆ ಅಂತ ಸ್ಥಳೀಯರಾದ ಸುಮಿತ್ರ ತಿಳಿಸಿದ್ದಾರೆ.

    ಸರ್ವಧರ್ಮ ಸಮನ್ವಯ ಸಾರುವುದೇ ಗುರಿ ಅನ್ನೋ ಪಾಚಾಸಾಬ್, ಗ್ರಾಮದಲ್ಲಿ ರಾಮಾಂಜನೇಯ ದೇವಾಲಯ ನಿರ್ಮಿಸುವ ಕನಸು ಹೊಂದಿದ್ದಾರೆ. ಈ ಇಳಿವಯಸ್ಸಿನಲ್ಲೂ ಶುಗರ್, ಬಿಪಿ ಸೇರಿದಂತೆ ಯಾವುದೇ ಕಾಯಿಲೆ ಇಲ್ಲ. ಚಟಗಳಿಲ್ಲ ಅಂತ ಖುಷಿಯಿಂದ ಹೇಳ್ತಿದ್ದಾರೆ.

    ಇಷ್ಟು ಮಾತ್ರವಲ್ಲದೇ ಕೆ.ಸಿ.ರೆಡ್ಡಿ ಅವಧಿಯಲ್ಲಿ ಮತ ಹಾಕುವುದು ಹೇಗೆ ಎಂಬುದನ್ನು ಜನತೆಗೆ ಕಲಿಸಿಕೊಟ್ಟಿದ್ದ ಇವರು ಸ್ವಾತಂತ್ರ್ಯ ಸಂಗ್ರಾಮದ ಹೊತ್ತಲ್ಲಿ ಗೋವಾ ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದನು ಸ್ಮರಿಸಿಕೊಳ್ತಾರೆ. ರಾಮ ಕೋಟಿ ಬರೆಯುವದರಿಂದ ನಾನು ಹೇಳಿದ ಮಾತು ನಡೆಯುತ್ತದೆ ಅನ್ನೋ ಪಾಚಾಸಾಬ್‍ರು ರಾಜಕೀಯವಾಗಿ ಭವಿಷ್ಯವನ್ನೂ ಹೇಳ್ತಾರೆ.

    https://www.youtube.com/watch?v=AZymGId6WcU

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • `ಮುಸಲ್ಮಾನರು ಕಲಿಯುಗದ ರಾಕ್ಷಸರು’: ರಾಘವಲು ಪ್ರಚೋದನಕಾರಿ ಭಾಷಣ

    `ಮುಸಲ್ಮಾನರು ಕಲಿಯುಗದ ರಾಕ್ಷಸರು’: ರಾಘವಲು ಪ್ರಚೋದನಕಾರಿ ಭಾಷಣ

    `ಕುರಾನ್ ಒಂದು ಧರ್ಮ ಗ್ರಂಥವೇ ಅಲ್ಲ, ಅದು ಇಸ್ಲಾಮಿಕ್ ಮ್ಯಾನಿಫೆಸ್ಟೋ’: ಮಂಜುನಾಥ ಸ್ವಾಮಿ

    ಉಡುಪಿ: ಮುಸಲ್ಮಾನರು, ಜಾತ್ಯಾತೀತರು ಕಲಿಯುಗದ ರಾಕ್ಷಸರು ಎಂದು ವಿಶ್ವ ಹಿಂದೂ ಪರಿಷತ್ತಿನ ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಘವಲು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.

    ನಗರದಲ್ಲಿ ನಡೆದ ರಾಮಮಂದಿರ ಜನಾಗ್ರಹ ಸಭೆಯಲ್ಲಿ ಮಾತನಾಡಿದ ಅವರು, ಮುಸಲ್ಮಾನರು ಹಿಂದೂಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಪ್ರತಿ ಯುಗದಲ್ಲಿಯೂ ರಾಕ್ಷಸರ ವಧೆಗೆ ದೇವರು ಅವತಾರವೆತ್ತಿ ಬಂದರು. ಕಲಿಯುಗದ ರಾಕ್ಷಸರು ಸಂಸತ್ ಹಾಗೂ ಕೋರ್ಟ್ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಮುಸಲ್ಮಾನರಿಗೆ ಪ್ರಗತಿಪರರು ಬೆಂಬಲ ನೀಡುತ್ತಿದ್ದಾರೆ. ರಾಮಮಂದಿರ ನಿರ್ಮಾಣವಾದರೆ ಸಮಾಜ ಒಗ್ಗೂಡುತ್ತದೆ ಎಂಬ ಭಯ ಅವರಿಗೆ ಇದೆ. ಈವರೆಗೆ ದೇಶದಲ್ಲಿ 33 ಸಾವಿರ ಮಂದಿರ ನಾಶವಾಗಿದೆ ಎಂದು ಹೇಳಿದರು.

    ಸಂಸತ್ತಿನಲ್ಲಿ ಜನಾಗ್ರಹ ಸಭೆಯ ಮನವಿ ಕೊಟ್ಟು ನಮ್ಮ ಅಭಿಪ್ರಾಯ ಸಲ್ಲಿಸದಿದ್ದರೆ ನಿಮ್ಮ ಸ್ಥಾನಕ್ಕೆ ಕುತ್ತು ಬರಬಹುದು ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ರಾಘವಲು ಎಚ್ಚರಿಕೆ ನೀಡಿದರು. ಅಲಹಾಬಾದ್ ಕುಂಭಮೇಳದಲ್ಲಿ ಸಂತರು ಹಲವು ಘೋಷಣೆಗಳನ್ನು ಮಾಡಲಿದ್ದಾರೆ. ಜನವರಿಯ ಸಂತರ ಘೋಷಣೆ ಕಾರ್ಯರೂಪಕ್ಕೆ ಬರಲಿದೆ ಎಂದರು.

    ಇದೇ ವೇಳೆ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಪ್ರಾಂತ ವಿಶೇಷ ಸಂಪರ್ಕ ಪ್ರಮುಖ ಮಂಜುನಾಥ ಸ್ವಾಮಿ, ಮಸೀದಿಗಳು ಉಗ್ರ ಚಟುವಟಿಕಾ ಕೇಂದ್ರವಾಗಿದೆ. ಮುಸಲ್ಮಾನರು ಸಾತ್ವಿಕರು ಎಂಬ ಭ್ರಮೆಯಿಂದ ಹೊರಗಡೆ ಬನ್ನಿ. ಈ ದೇಶದಲ್ಲಿ ಇಸ್ಲಾಮಿಕ್ ಟೆರರಿಸಂ ನಡೆಯುತ್ತಿದೆ. ಮುಸಲ್ಮಾನರು ಇಸ್ಲಾಮಿಕ್ ಉಗ್ರಗಾಮಿಗಳು ಎಂದು ವಿವಾದಾತ್ಮಕ ಹೇಳಿಕೆ ನೀಡಿದರು.

    ಜಗತ್ತಿನ ಅನೇಕ ದೇಶಗಳನ್ನು ಅವರು ಕೊಳ್ಳೆ ಹೊಡೆದರು. ಈಗ ಭಾರತವೇ ಅವರ ಟಾರ್ಗೆಟ್ ಆಗಿದೆ. ಇಸ್ಲಾಂ ಒಂದು ಧರ್ಮವೇ ಅಲ್ಲ. ಅದೊಂದು ಸಾಮ್ರಾಜ್ಯಶಾಹಿ ವಿಚಾರಧಾರೆ. ಕುರಾನ್ ಒಂದು ಧರ್ಮ ಗ್ರಂಥವೇ ಅಲ್ಲ- ಅದು ಇಸ್ಲಾಮಿಕ್ ಮ್ಯಾನಿಫೆಸ್ಟೋ ಎಂದು ಕಿಡಿಕಾರಿದರು.

    ನಮಾಜ್‍ಗೆ ಮಸೀದಿಗಳ ಅವಶ್ಯಕತೆಯಿಲ್ಲ ಅಂತ ಕೋರ್ಟ್ ಮುಂದೆ ನೀವು ಒಪ್ಪಿದ್ದೀರಿ. ಮತ್ಯಾಕೆ ನೀವು ಮಸೀದಿ ಕಟ್ಟುತ್ತೀರಾ? ರೈಲ್ವೇ ಸ್ಟೇಷನ್, ಶೌಚಾಲಯ, ಬಸ್ ಸ್ಟಾಂಡ್, ವಿಮಾನ ನಿಲ್ದಾಣ ಎಲ್ಲಾದರೂ ನಮಾಜ್ ಮಾಡುತ್ತೀರಿ. ಮುಸ್ಲಿಮರಿಗೆ ಮಸೀದಿ ಯಾಕೆ ಬೇಕು ಎಂದು ಉಗ್ರ ಭಾಷಣ ಮಾಡಿದರು.

    ರಾಮ ಮಂದಿರದ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಕೂಡ ನಮಗೆ ಬೇಕು. ಮಂದಿರ್ ಭೀ ಚಾಹಿಯೇ- ಮೋದೀ ಬೀ ಚಾಹಿಯೇ. ಅವರನ್ನು ಕೆಳಗಿಳಿಸುವ ದುಷ್ಟಶಕ್ತಿಗಳನ್ನು ಗಮನಿಸಿಕೊಳ್ಳಬೇಕು ಎಂದು ಮಂಜುನಾಥ್ ಸ್ವಾಮೀಜಿ ಜನಾಗ್ರಹ ಸಮಾವೇಶದಲ್ಲಿ ಕರೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಮುಸ್ಲಿಂ- ಬೌದ್ಧರ ನಡುವೆ ಹಿಂಸಾಚಾರ – ಶ್ರೀಲಂಕಾದಲ್ಲಿ 10 ದಿನ ತುರ್ತು ಪರಿಸ್ಥಿತಿ ಘೋಷಣೆ

    ಮುಸ್ಲಿಂ- ಬೌದ್ಧರ ನಡುವೆ ಹಿಂಸಾಚಾರ – ಶ್ರೀಲಂಕಾದಲ್ಲಿ 10 ದಿನ ತುರ್ತು ಪರಿಸ್ಥಿತಿ ಘೋಷಣೆ

    ಕೊಲೊಂಬೊ: ಕ್ಯಾಂಡಿ ಜಿಲ್ಲೆಯಲ್ಲಿ ಬೌದ್ಧರು ಮತ್ತು ಮುಸ್ಲಿಂ ಸಮುದಾಯದ ನಡುವೆ ಭಾರೀ ಪ್ರಮಾಣ ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ 10 ದಿನಗಳ ಕಾಲ ತುರ್ತು ಪರಿಸ್ಥಿತಿಯನ್ನು ಶ್ರೀಲಂಕಾ ಸರ್ಕಾರ ಘೋಷಿಸಿದೆ.

    ಮುಸ್ಲಿಮರು ಬಲವಂತವಾಗಿ ಮತಾಂತರ ಮಾಡುತ್ತಿದ್ದಾರೆ ಹಾಗೂ ಬೌದ್ಧರ ಪವಿತ್ರ ಸ್ಥಳಗಳನ್ನು ಧ್ವಂಸ ಮಾಡುತ್ತಿದ್ದಾರೆ ಎಂದು ಕೆಲ ಬೌದ್ಧ ಸಂಘಟನೆಗಳು ಈ ಹಿಂದೆ ಆರೋಪಿಸಿತ್ತು. ಈ ವಿಚಾರದ ಬಗ್ಗೆ ಒಂದು ಕಳೆದ ಒಂದು ವರ್ಷದಿಂದ ಎರಡು ಸಮುದಾಯಗಳ ನಡುವೆ ಘರ್ಷಣೆಗಳು ನಡೆಯುತಿತ್ತು.

    ಈ ನಡುವೆ ಮ್ಯಾನ್ಮಾರ್ ನ ರೋಹಿಂಗ್ಯಾ ಮುಸ್ಲಿಮರಿಗೆ ಶ್ರೀಲಂಕಾದಲ್ಲಿ ಆಶ್ರಯ ನೀಡಬಾರದು ಎಂದು ಬೌದ್ಧ ಧರ್ಮದವರು ಪ್ರತಿಭಟಿಸುತ್ತಿದ್ದರು. ಈ ವಿಚಾರದ ಬಗ್ಗೆ ನಡೆಯುತ್ತಿದ್ದ ಜಗಳ ಈಗ ತೀವ್ರ ಸ್ವರೂಪ ಪಡೆದು ಹಿಂಸಾಚಾರಕ್ಕೆ ತಿರುಗಿದೆ.

    ಹಿಸಾಂಚಾರದ ಹಿನ್ನೆಲೆಯಲ್ಲಿ ಶ್ರೀಲಂಕಾ ಸರ್ಕಾರ ಇಂದು ವಿಶೇಷ ಸಂಪುಟ ಸಭೆ ನಡೆಸಿ, ಕೋಮುಗಲಭೆ ತಡೆಯುವ ನಿಟ್ಟಿನಲ್ಲಿ 10 ದಿನಗಳ ಕಾಲ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ಅಷ್ಟೇ ಅಲ್ಲದೇ ಫೇಸ್‍ಬುಕ್ ಮೂಲಕ ಹಿಂಸೆಗೆ ಪ್ರಚೋದನೆ ನೀಡಿದವರ ವಿರುದ್ಧವೂ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸಂಪುಟ ಸಭೆ ನಿರ್ಧರಿಸಿದೆ.

    ಭಾರತ ಮತ್ತು ಶ್ರೀಲಂಕಾ ನಡುವೆ ಇಂದು ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಮೊದಲ ಟಿ20 ಪಂದ್ಯ ನಡೆಯುತ್ತಿದ್ದು, ಭಾರೀ ಪ್ರಮಾಣದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

     

  • ಗುಜರಾತ್‍ನ ಪೋರ್‌ಬಂದರ್ ನಲ್ಲಿ ಮುಸ್ಲಿಮರು ಬಿಜೆಪಿ ವಿರೋಧಿಸೋದು ಯಾಕೆ ಗೊತ್ತಾ?

    ಗುಜರಾತ್‍ನ ಪೋರ್‌ಬಂದರ್ ನಲ್ಲಿ ಮುಸ್ಲಿಮರು ಬಿಜೆಪಿ ವಿರೋಧಿಸೋದು ಯಾಕೆ ಗೊತ್ತಾ?

    ಗಾಂಧಿನಗರ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮುಸ್ಲಿಮ್ ಸಮುದಾಯ ಒಟ್ಟಾಗಿ ಬಿಜೆಪಿಯನ್ನು ಬೆಂಬಲಿಸಿತು. ಕಾರಣ ಕೇಂದ್ರ ಸರ್ಕಾರ ತ್ರಿವಳಿ ತಲಾಕ್ ಬಗ್ಗೆ ತೋರಿಸಿದ್ದ ಆಸಕ್ತಿ. ಸುಪ್ರೀಂಕೋರ್ಟ್ ನಲ್ಲಿ ತ್ರಿವಳಿ ತಲಾಕ್ ವಿರುದ್ಧ ಧ್ವನಿ ಎತ್ತಿದ ಕೇಂದ್ರ ಸರ್ಕಾರದ ನಡೆಯನ್ನು ಉತ್ತರ ಪ್ರದೇಶದ ಮಹಿಳೆಯರು ಶ್ಲಾಘಿಸಿದರು. ಹೀಗಾಗಿ ನಿರೀಕ್ಷೆ ಮೀರಿ ಅದ್ಭುತ ಗೆಲುವನ್ನು ಉತ್ತರಪ್ರದೇಶದಲ್ಲಿ ಬಿಜೆಪಿ ಸಾಧಿಸಿತ್ತು. ಆದ್ರೆ ಗುಜರಾತ್ ನಲ್ಲಿ ಇದೇ ತ್ರಿವಳಿ ತಲಾಕ್ ಬಿಜೆಪಿಗೆ ಮುಳುವಾಗು ಸಾಧ್ಯತೆ ಇದ್ಯಾ ಎನ್ನುವ ಪ್ರಶ್ನೆ ಎದ್ದಿದೆ.

    ಗುಜುರಾತ್‍ನ ಪೋರ್‌ಬಂದರ್ ಹೆಚ್ಚು ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ. ಈ ಹಿನ್ನೆಲೆ ಮುಸ್ಲಿಮ್ ಅಭಿಪ್ರಾಯಕ್ಕಾಗಿ ಕೆಲ ಯುವಕರು ಸೇರಿದಂತೆ ಮುಸ್ಲಿಮ್ ಮುಖಂಡರ ಜೊತೆ ಸುದ್ದಿ ಸಂಸ್ಥೆಯೊಂದು ಮಾತುಕತೆ ನಡೆಸಿದ್ದು, ಮಾತುಕತೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಮುಸ್ಲಿಮರು ಸಿಟ್ಟಾಗಿರುವುದು ಸ್ವಷ್ಟವಾಗಿದೆ. ಪೋರ್‍ಬಂದರ್ ನ ಮುಸ್ಲಿಮ್ ಸಮುದಾಯವು ಪ್ರಧಾನಿ ನರೇಂದ್ರ ಮೋದಿಯನ್ನು ನಂಬಲು ತಯಾರಿಲ್ಲ. ಮುಸ್ಲಿಮ್ ಧಾರ್ಮಿಕ ವ್ಯವಹಾರಗಳಲ್ಲಿ ಬಿಜೆಪಿ ಹಸ್ತಕ್ಷೇಪ ಮಾಡುತ್ತಿದೆ ಎನ್ನುವ ಗಂಭೀರ ಆರೋಪ ಮೋದಿ ಸರ್ಕಾರದ ಮೇಲಿದೆ. ಇತ್ತೀಚಿಗೆ ತೆಗೆದುಕೊಂಡ ತ್ರಿವಳಿ ತಲಾಕ್ ವಿರುದ್ಧ ತೆಗೆದುಕೊಂಡ ನಿರ್ಣಯದಿಂದ ಪೋರ್‍ಬಂದರ್ ಮುಸ್ಲಿಂ ಸಮುದಾಯ ಬೇಸರಗೊಂಡಿದೆ.

    ನರೇಂದ್ರ ಮೋದಿ ಅವರ ಡಿಜಿಟಲ್ ಇಂಡಿಯಾ ನಮಗೆ ಮೂಲ ಸೌಕರ್ಯಗಳನ್ನು ನೀಡುವುದಿಲ್ಲ. ಗುಜರಾತ್‍ನಲ್ಲಿ ವಾಸಿಸುತ್ತಿರುವ ಮುಸ್ಲಿಮ್ ಸಮುದಾಯದಲ್ಲಿ ಹೆಚ್ಚು ಅಶಿಕ್ಷಿತರಿದ್ದು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಬಡತನದಿಂದ ಸಾಮಾಜಿಕವಾಗಿ ಮುಸ್ಲಿಮರು ಹಿಂದುಳಿದಿದ್ದಾರೆ. ಆದ್ರೆ ಇದ್ಯಾವುದಕ್ಕೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನ ನೀಡುತ್ತಿಲ್ಲ ಎನ್ನುತ್ತಾರೆ ಸ್ಥಳೀಯರು.

    ಅಲ್ಲಿನ ಕೆಲ ಯುವಕರು ಕಾಂಗ್ರೆಸ್‍ನಿಂದ ಉತ್ತಮ ಕೆಲಸಗಳನ್ನು ನಿರೀಕ್ಷಿಸುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಪಟ್ಟ ಏರಲಿರುವ ರಾಹುಲ್ ಗಾಂಧಿ ಮೇಲೆ ಭರವಸೆ ವ್ಯಕ್ತಪಡಿಸುತ್ತಿದ್ದು ಮನಮೋಹನ್ ಸಿಂಗ್ ಆಡಳಿತವನ್ನು ಶ್ಲಾಘಿಸುತ್ತಿದ್ದಾರೆ.

    ಸೌರಾಷ್ಟ್ರದಲ್ಲೂ ಪರಿಸ್ಥಿತಿ ಭಿನ್ನವಾಗಿಲ್ಲ ಅಲ್ಲಿಯೂ ಮೋದಿ ಸರ್ಕಾರ ವಿರುದ್ಧ ಅಲೆ ಪ್ರಾರಂಭವಾಗಿದ್ದು, ಈಗೀನ ರಾಜ್ಯ ಸರ್ಕಾರದ ಅಭಿವೃದ್ಧಿ ಕೆಲಸಗಳ ಬಗ್ಗೆ ತೃಪ್ತಿದಾಯಕವಾಗಿಲ್ಲ. ಸಾಮಾನ್ಯ ಮುಸ್ಲಿಮ್ ಸಮುದಾಯದ ವ್ಯಕ್ತಿಯ ಪ್ರಕಾರ, ಹಿಂದುತ್ವ ಹಾಗೂ ಅನಕ್ಷರತೆ ಗುಜರಾತ್ ಮುಸ್ಲಿಂ ಸಮುದಾಯದ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆಯಂತೆ. ಮುಸ್ಲಿಮರು ಹೆಚ್ಚಿರುವ ಪ್ರದೇಶಗಳಲ್ಲಿ ಬಿಜೆಪಿಯ ಶಾಸಕರು ಸಂಸದರು, ಪುರಸಭೆ ಸದಸ್ಯರು ಆಯ್ಕೆಯಾಗಿದ್ದರೂ ಅಭಿವೃದ್ಧಿ ಕೆಲಸಗಳು ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ ಎಂದು ಜನ ದೂರುತ್ತಿದ್ದಾರೆ.

     

     ಪೋರ್‌ಬಂದರ್ ನ ಬಂದರಿನಲ್ಲಿ ವ್ಯವಹಾರ ಮಾಡುವ ವ್ಯಾಪಾರಸ್ಥರು ಮೂಲ ಸೌಲಭ್ಯಗಳಿಲ್ಲ ಎಂದು ದೂರಿಡುತ್ತಿದ್ದಾರೆ. ಗುಜರಾತ್ ಬೇರೆ ಪ್ರದೇಶಗಳಲ್ಲಿ ಗಲಭೆಗಳು ಆದಾಗ ಈ ಪ್ರದೇಶ ಶಾಂತವಾಗಿತ್ತು. ಕೀರ್ತಿ ದೇವಸ್ಥಾನದ ಪಕ್ಕದಲ್ಲಿರುವ ಈ ಪ್ರದೇಶ ಹಿಂದೂ ಮುಸ್ಲಿಮ್ ಏಕತೆಯ ಸಂಕೇತವಾಗಿತ್ತು ಎನ್ನುತ್ತಾರೆ ಸ್ಥಳೀಯರು. ಆದ್ರೆ ಏಕತೆಯ ನ್ಯಾಯ ಮುಸ್ಲಿಮರಿಗೆ ಸಿಗುತ್ತಿಲ್ಲ. ತಾರತಮ್ಯ ಮಾಡಲಾಗುತ್ತಿದೆ ಎಂದು ಬಂದರಿನಲ್ಲಿ ಕೆಲಸ ಮಾಡುವ ಮುಸ್ಲಿಂ ಸಮುದಾಯದ ಜನರು ಹೇಳುತ್ತಿದ್ದಾರೆ.

    ಇನ್ನೊಂದು ಪ್ರಮುಖ ಅಂಶ ಕೆಲವೇ ತಿಂಗಳ ಹಿಂದೆ ರಾಜಕೋಟ್‍ನ ಲೇಡಿ ಡಾನ್ ಎಂದು ಕರೆಸಿಕೊಳ್ಳುವ ಸೋಮು ದಂಗಾರ್ ಮುಸ್ಲಿಮರ ವಿರುದ್ಧ ನೀಡಿದ ವಿವಾದಾತ್ಮಕ ಹೇಳಿಕೆ ಬಗ್ಗೆ ಇವರಲ್ಲಿ ಅಸಮಾಧಾನವಿದೆ. ಅವರ ಕ್ರಮ ಕೈಗೊಳ್ಳದ ಹಿನ್ನಲೆ ಇವರು ಮತ್ತಷ್ಟು ಬಿಜೆಪಿ ಮೇಲೆ ಕೋಪಿಸಿಕೊಂಡಿದ್ದಾರೆ.

    ಬಹುತೇಕ ಮುಸ್ಲಿಮರ ಅಭಿಪ್ರಾಯದಂತೆ ಉತ್ತಮ ಶಿಕ್ಷಣ ಸೌಲಭ್ಯಗಳಿಲ್ಲ, ಇರುವ ಶಿಕ್ಷಣ ಕಳಪೆ ಗುಣಮಟ್ಟದಾಗಿದೆ, ಶಿಕ್ಷಣ ದಾರಿ ತಪ್ಪಿದ್ದು ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಉತ್ತಮ ಶಿಕ್ಷಣ ನೀಡುತ್ತಿಲ್ಲ, ಶಿಕ್ಷಣ ಖಾಸಗೀಕರಣಗೊಳ್ಳುತ್ತಿದ್ದು ಬಹುತೇಕ ಕಾಲೇಜುಗಳು ಬಿಜೆಪಿ ಶಾಸಕರ ಒಡೆತನ ಹೊಂದಿದ್ದು ಖಾಸಗೀಕರಣದ ಲಾಭವನ್ನು ಬಿಜೆಪಿ ಶಾಸಕರು ಪಡೆಯುತ್ತಿದ್ದಾರೆ ಎಂದು ಪೋರ್‌ಬಂದರ್ ಮುಸ್ಲಿಮರು ಆರೋಪಿಸುತ್ತಿದ್ದಾರೆ.

    ಸುಮಾರು 9% ರಷ್ಟು ಇರುವ ಮುಸ್ಲಿಮರು 25-30 ಸ್ಥಾನಗಳಲ್ಲಿ ನಿರ್ಣಾಯಕ ಪಾತ್ರವಹಿಸುತ್ತಾರೆ. ಈ ಬಾರಿ ಚುನಾವಣೆಯಲ್ಲಿ ಬಹುತೇಕರು ಕಾಂಗ್ರೆಸ್ ನ್ನು ಬೆಂಬಲಿಸಿದರೆ ಇನ್ನೂ ಕೆಲ ಮುಸ್ಲಿಮರು ಬಿಜೆಪಿ ಬೆಂಬಲಿಸುವ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಪೋರ್‌ಬಂದರ್ ನಲ್ಲಿ ಸುಮಾರು 15 ಸಾವಿರ ಮುಸ್ಲಿಮರು ಈಗಲೂ ಕಾಂಗ್ರೆಸ್ ನ ಅರ್ಜುನ್ ಮೊಧ್ವಾಡಿಯಾ ಅವರನ್ನೇ ಬೆಂಬಲಿಸುತ್ತಿದ್ದಾರೆ. ಬಿಜೆಪಿಯ ತಂತ್ರಗಾರಿಗೆ ಇಲ್ಲಿ ಪ್ರಭಾವ ಬೀರುವುದಿಲ್ಲ, ಸಬ್ ಕೀ ಸಾಥ್ ಸಬ್ ಕೀ ವಿಕಾಸ್ ಬಗ್ಗೆ ಮಾತನಾಡುವ ಸರ್ಕಾರ ಮುಸ್ಲಿಮ್ ಸಮುದಾಯದ ಶಮನಕ್ಕೆ ಪ್ರಯತ್ನಿಸುತ್ತಿದೆ ಎನ್ನುವುದು ಸ್ಥಳಿಯರ ವಾದ.

    ಕೇಂದ್ರದಲ್ಲಿ ಮೋದಿ ಸರ್ಕಾರ ಬಂದ ಮೇಲೆ ಗುಜರಾತ್ ಮುಸ್ಲಿಮರ ಹಜ್ ಕೋಟಾ 15 ಸಾವಿರಕ್ಕೆ ಏರಿಕೆಯಾಗಿದೆ. ಮುಸ್ಲಿಮ್ ಸಮುದಾಯದ ಪ್ರಯೋಜನಕ್ಕಾಗಿ ಹಲವು ಯೋಜನೆಗಳನ್ನು ಪ್ರಾರಂಭಿಸಲಾಗಿದೆ. ಆದ್ರೆ ಪರಿಸ್ಥಿತಿ ನೋಡಿದರೆ ಬಿಜೆಪಿ ಬಗೆಗೆ ಗ್ರಹಿಕೆ ಬದಲಾಗಲು ಇನ್ನೂ ಸಮಯ ತೆಗೆದುಕೊಳ್ಳುವಂತೆ ಕಾಣುತ್ತಿದೆ.

    ಬಿಜೆಪಿ ನಾಯಕರು ಹೇಳೋದು ಏನು?
    ಉತ್ತರ ಪ್ರದೇಶ ಚುನಾವಣೆಯಲ್ಲಿ ತ್ರಿವಳಿ ತಲಾಖ್ ಬಹುಮುಖ್ಯ ಪಾತ್ರವಹಿಸಿತ್ತು. ಮುಸ್ಲಿಮ್ ಮಹಿಳೆಯರು ಬಹಿರಂಗವಾಗಿ ಬಿಜೆಪಿ ವಿರುದ್ಧ ಮಾತನಾಡದೇ ಇದ್ದರೂ ಮತದಾನದ ವೇಳೆ ಬಿಜೆಪಿಯನ್ನು ಬೆಂಬಲಿಸಿದ್ದರು. ಈ ಕಾರಣಕ್ಕೆ ಮುಸ್ಲಿಮರು ಹೆಚ್ಚಿದ್ದ ಕ್ಷೇತ್ರಗಳಲ್ಲೂ ಬಿಜೆಪಿಯ ಶಾಸಕರು ಗೆಲುವು ಕಂಡಿದ್ದರು. ಹೀಗಾಗಿ ಗುಜರಾತ್ ನಲ್ಲಿ ಮುಸ್ಲಿಮ್ ಮಹಿಳೆಯರು ನಮ್ಮನ್ನು ಕೈ ಹಿಡಿಯುತ್ತಾರೆ ಎನ್ನುವ ಆಶಾಭಾವವನ್ನು ಬಿಜೆಪಿ ನಾಯಕರು ಇಟ್ಟುಕೊಂಡಿದ್ದಾರೆ. ಹೀಗಾಗಿ ಉತ್ತರಪ್ರದೇಶದಲ್ಲಿ ಆದಂತೆ ಗುಜರಾತ್ ನಲ್ಲೂ ತ್ರಿವಳಿ ತಲಾಖ್ ವಿಚಾರ ಬಿಜೆಪಿಯನ್ನು ಗೆಲ್ಲಿಸುತ್ತಾ ಎನ್ನುವ ಪ್ರಶ್ನೆಗೆ ಡಿಸೆಂಬರ್ 18ರಂದು ಉತ್ತರ ಸಿಗಲಿದೆ.

  • ಜಾಗತಿಕ ಸಮುದಾಯದ ಒತ್ತಡಕ್ಕೆ ಭಯಪಡಲ್ಲ: ಆಂಗ್ ಸಾನ್ ಸೂಕಿ

    ಜಾಗತಿಕ ಸಮುದಾಯದ ಒತ್ತಡಕ್ಕೆ ಭಯಪಡಲ್ಲ: ಆಂಗ್ ಸಾನ್ ಸೂಕಿ

    ನೇಪಿಡಾ: ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆ ಆಗುತ್ತಿರುವ ರೋಹಿಂಗ್ಯಾ ಮುಸ್ಲಿಮರ ಸಂಘರ್ಷದಲ್ಲಿ ಸ್ಪಷ್ಟವಾಗಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಆಂಗ್ ಸಾನ್ ಸೂಕಿ ಹೇಳಿದ್ದಾರೆ.

    ಮ್ಯಾನ್ಮಾರ್ ವಿದೇಶಾಂಗ ಸಚಿವೆ ಆಗಿರುವ ಆಂಗ್ ಸಾನ್ ಸೂಕಿ, ತಮ್ಮ ದೇಶದಲ್ಲಿ ನಡೆಯುತ್ತಿರುವ ರೋಹಿಂಗ್ಯಾ ಮುಸ್ಲಿಮ್ ಸಂಘರ್ಷದ ಕುರಿತು ಮೊದಲ ಬಾರಿಗೆ ದೇಶವನ್ನು ಉದ್ದೇಶಿಸಿ ಮಾತನಾಡುವ ಮೂಲಕ ಮೌನವನ್ನು ಮುರಿದಿದ್ದಾರೆ.

    ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಲವು ಟೀಕೆಗಳನ್ನು ಎದುರಿಸುತ್ತಿರುವ ಮ್ಯಾನ್ಮಾರ್, ದೇಶದ ಕಾನೂನು ಸುವ್ಯವಸ್ಥೆಯ ರಕ್ಷಣೆಗೆ ಹೆಚ್ಚಿನ ಒತ್ತನ್ನು ನೀಡುತ್ತದೆಯೇ ಹೊರತು ಜಾಗತಿಕ ಸಮುದಾಯದ ಒತ್ತಡಕ್ಕೆ ಭಯ ಪಡುವುದಿಲ್ಲ. ಇಲ್ಲಿನ ವಸ್ತು ಸ್ಥಿತಿಯನ್ನು ಕಣ್ಣಾರೆ ಕಂಡಾಗ ಮಾತ್ರ ಪರಿಸ್ಥಿತಿಯನ್ನು ಅರಿಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.

    ದೇಶದಲ್ಲಿ ಹಲವು ತಿಂಗಳುಗಳ ಕಾಲ ಶಾಂತಿ ಹಾಗೂ ಸುವ್ಯವಸ್ಥೆ ಸ್ಥಾಪನೆಯಾಗಿತ್ತು. ಆದರೆ ಆಗಸ್ಟ್ 25 ರಂದು 30 ಪೊಲೀಸ್ ಔಟ್‍ಪೋಸ್ಟ್ ಮೇಲೆ ಮುಸ್ಲಿಂ ಶಸ್ತ್ರಸಜ್ಜಿತ ಗುಂಪುಗಳು ದಾಳಿಯನ್ನು ನಡೆಸುವ ಮೂಲಕ ಅಶಾಂತಿಯನ್ನು ಸೃಷ್ಟಿಸಿತ್ತು. ಈ ದಾಳಿಯನ್ನು ನಡೆಸಿದ ಅರ್ಕನ್ ರೋಹಿಂಗ್ಯಾ ಮುಸ್ಲಿಮ್ ಸಂಘಟನೆಯನ್ನು ಭಯೋತ್ಪಾದನಾ ಸಂಘಟನೆ ಎಂದು ಘೋಷಿಸಲಾಗಿದೆ ಎಂದರು.

    ಮಾಧ್ಯಮಗಳು ಮತ್ತು ಅಂತರಾಷ್ಟ್ರೀಯ ಸಂಸ್ಥೆಗಳು ದೇಶದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯನ್ನು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಅಪಪ್ರಚಾರವನ್ನು ಮಾಡುತ್ತಿವೆ. ಬೇರೆ ಯಾವ ಭಾಗದಲ್ಲಿಯೂ ನಡೆಯದ ಘಟನೆಗಳು ಇಲ್ಲಿ ಮಾತ್ರ ಏಕೆ ನಡೆಯುತ್ತಿವೆ ಎಂಬುದನ್ನು ಅರ್ಥೈಸಿಕೊಳ್ಳಬೇಕು. 70 ವರ್ಷಗಳ ಅಂತಾರಾಷ್ಟ್ರೀಯ ಸಂಘರ್ಷದ ನಂತರ ಮ್ಯಾನ್ಮಾರ್ ನಲ್ಲಿ ಶಾಂತಿ ನೆಲೆಸಿದೆ. ಹಲವು ಮುಸ್ಲಿಮ್ ಕುಟುಂಬಗಳು ಇಂದಿಗೂ ಮ್ಯಾನ್ಯಾರ್ ಹಳ್ಳಿಗಳಲ್ಲಿ ಉಳಿದುಕೊಂಡಿವೆ ಎಂದು ಮಾಹಿತಿ ನೀಡಿದರು.

    ಮಾನವ ಹಕ್ಕುಗಳ ರಕ್ಷಣೆಗಾಗಿ ದೇಶದ ಎಲ್ಲ ಗಡಿ ಪ್ರದೇಶಗಳನ್ನು ಒಳಗೊಂಡಂತೆ ಪ್ರತ್ಯೇಕ ಸಮಿತಿಯೊಂದನ್ನು ನಮ್ಮ ಸರ್ಕಾರವು ರಚಿಸಿದೆ. ನಮ್ಮ ದೇಶದಲ್ಲಿ ನಾವು ಶಾಂತಿ ನೆಲೆಸುವುದನ್ನು ಬಯಸುತ್ತೇವೆ. ಅಲ್ಲದೆ ಎಲ್ಲಾ ರೀತಿಯ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಸಹ ಖಂಡಿಸುತ್ತೇವೆ ಎಂದರು.

    ದೇಶವನ್ನು ತೊರೆದಿರುವ 4 ಲಕ್ಷ ರೋಹಿಂಗ್ಯಾ ಮುಸ್ಲಿಮರು ಮತ್ತೆ ಮ್ಯಾನ್ಯಾರ್ ಗೆ ಬರಲು ಬಯಸಿದರೆ ವಾಪಸ್ ಕರೆತರಲು ಬೇಕಾದ ಕ್ರಮಗಳನ್ನು ಕೈಗೊಳ್ಳಲಾಗುವುದು. ರೋಹಿಂಗ್ಯಾ ಮುಸ್ಲಿಮರಲ್ಲಿ ಸಾಮರಸ್ಯವನ್ನು ತಂದು ದೇಶದಲ್ಲಿ ಮತ್ತೆ ಶಾಂತಿಯನ್ನು ಸ್ಥಾಪಿಸಲು ನಾವು ಮುಂದಾಗುತ್ತೇವೆ. ಈ ರೀತಿಯ ಸಂಘರ್ಷ ನಡೆಯಲು ಕಾರಣ ಏನೆಂಬುದನ್ನು ತಿಳಿಯಲು ನಾವು ರೋಹಿಂಗ್ಯಾರ ಜೊತೆ ಮಾತುಕತೆ ನಡೆಸುತ್ತೇವೆ ಎಂದರು.

    ಮ್ಯಾನ್ಯಾರ್ ಸೇನೆ ರೋಹಿಂಗ್ಯಾ ಮುಸ್ಲಿಮರು ನೆಲೆಸಿರುವ ಗ್ರಾಮಗಳಿಗೆ ತೆರಳಿ ಅವರಿಗೆ ಹಿಂಸೆ ನೀಡಿದ್ದು ಅಲ್ಲದೇ ಅವರನ್ನು ಅಲ್ಲಿಂದ ಓಡಿಸಿದ್ದಾರೆ ಎಂದು ವಿಶ್ವಸಂಸ್ಥೆ ಆರೋಪಿಸಿತ್ತು.

    ಇದನ್ನೂ ಓದಿ: ರೋಹಿಂಗ್ಯಾ ಮುಸ್ಲಿಮರಿಂದ ದೇಶದ ಭದ್ರತೆಗೆ ಅಪಾಯ- ಭಾರತ ಸರ್ಕಾರ

  • ತ್ರಿವಳಿ ತಲಾಖ್ ಪರ ವಾದಿಸಿದ್ದ ಸಿಬಲ್ ತೀರ್ಪಿಗೆ ಪ್ರತಿಕ್ರಿಯಿಸಿದ್ದು ಹೀಗೆ

    ತ್ರಿವಳಿ ತಲಾಖ್ ಪರ ವಾದಿಸಿದ್ದ ಸಿಬಲ್ ತೀರ್ಪಿಗೆ ಪ್ರತಿಕ್ರಿಯಿಸಿದ್ದು ಹೀಗೆ

    ನವದೆಹಲಿ: ತ್ರಿವಳಿ ತಲಾಖ್ ತೀರ್ಪನ್ನು ನಾವು ಸ್ವಾಗತಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ, ಅಖಿಲ ಭಾರತೀಯ ಮುಸ್ಲಿಮರ ವೈಯಕ್ತಿಕ ಕಾನೂನು ಮಂಡಳಿ(ಎಐಎಂಪಿಎಲ್ ಬಿ) ಪರವಾಗಿ ವಾದಿಸಿದ್ದ ಕಪಿಲ್ ಸಿಬಲ್ ಹೇಳಿದ್ದಾರೆ.

    ಎಐಸಿಸಿ ಟ್ವೀಟ್ ಮಾಡಿ, ಮಹಿಳೆಯರಿಗೆ ಸಮಾನ ಹಕ್ಕನ್ನು ಕಲ್ಪಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿದೆ.

    ಸಿಬಲ್ ವಾದ ಹೀಗಿತ್ತು:
    ತ್ರಿವಳಿ ತಲಾಖ್ 1,400 ವರ್ಷಗಳ ನಂಬಿಕೆಯ ವಿಷಯವಾಗಿದೆ. ಪ್ರವಾದಿ ಮೊಹಮ್ಮದ್ ಅವರ ಕಾಲಾವಧಿಯಲ್ಲೂ ಸಹ ತ್ರಿವಳಿ ತಲಾಖ್ ನ ಉಲ್ಲೇಖವಿದೆ ಎಂದು ಹೇಳಿದ್ದರು.

    ವಾದದ ನಡುವೆ ರಾಮನ ವಿಚಾರವನ್ನು ಪ್ರಸ್ತಾಪಿಸಿದ್ದ ಸಿಬಲ್, ತಲಾಖ್ ನಂಬಿಕೆಯ ಪ್ರಶ್ನೆಯಾಗಿದೆ. ಭಗವಾನ್ ರಾಮ ಅಯೋಧ್ಯೆಯಲ್ಲಿ ಹುಟ್ಟಿದ್ದ ಎಂಬುದು ನಂಬಿಕೆಯಾದರೆ.,ತ್ರಿವಳಿ ತಲಾಖ್ ಸಹ ಮುಸ್ಲಿಮರ ನಂಬಿಕೆ. ಇದರಲ್ಲಿ ಸಂವಿಧಾನ ನೈತಿಕತೆಯ ಪ್ರಶ್ನೆ ಉದ್ಭವಿಸುದಿಲ್ಲ ಎಂದು ಐವರು ನ್ಯಾಯಾಧೀಶರ ಮುಂದೆ ವಾದಿಸಿದ್ದರು.

    1,400 ವರ್ಷಗಳ ನಂಬಿಕೆಯ ವಿಷಯವನ್ನು ಹೇಗೆ ಇಸ್ಲಾಮ್ ನ ಭಾಗವಲ್ಲ ಎಂದು ಹೇಳಲು ನಾವ್ಯಾರು ಎಂದು ಅವರು ಪ್ರಶ್ನಿಸಿದ್ದರು.

    ಇದನ್ನೂ ಓದಿ: ಸ್ಪೀಡ್ ಪೋಸ್ಟ್ ನಲ್ಲಿ ತಲಾಖ್ ನೀಡಿದ್ದ ಪತಿ ವಿರುದ್ಧ ಗೆದ್ದು ಅನಿಷ್ಟ ಪದ್ದತಿಗೆ ಮುಕ್ತಿ ಹಾಡಿದ್ದು ಈ ಮಹಿಳೆ

  • ಕಲ್ಲಡ್ಕ ಪ್ರಭಾಕರ್ ಭಟ್‍ಗೆ ಇವತ್ತು ಕೊನೆಯ ದಿನ: ಮಂಗಳೂರು ಮುಸ್ಲಿಮ್ಸ್ ಪೇಜ್

    ಕಲ್ಲಡ್ಕ ಪ್ರಭಾಕರ್ ಭಟ್‍ಗೆ ಇವತ್ತು ಕೊನೆಯ ದಿನ: ಮಂಗಳೂರು ಮುಸ್ಲಿಮ್ಸ್ ಪೇಜ್

    ಮಂಗಳೂರು: “ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‍ಗೆ ಇಂದು ಕೊನೆಯ ದಿನ” ಎಂದು ಮಂಗಳೂರು ಮುಸ್ಲಿಮ್ ಹೆಸರಿನಲ್ಲಿರುವ ಫೇಸ್‍ಬುಕ್ ಪೇಜ್ ನಲ್ಲಿ ಸ್ಟೇಟಸ್ ಅಪ್‍ಡೇಟ್ ಆಗಿದೆ.

    ಭಯೋತ್ಪಾದಕ ಕಲ್ಲಡ್ಕ ಪ್ರಭಾಕರ ಭಟ್ಟ ಸತ್ತರೆ ಅವನಿಗೆ ರಾಷ್ಟ್ರ ಧ್ವಜ ಹಾಕಿ ಗೌರವಿಸುತ್ತಿರೋ ಇಲ್ಲಾ ಕೇಸರಿ ಧ್ವಜ ಹಾಕುತ್ತಿರೋ? ಇವತ್ತು ಅವನ ಕೊನೆಯ ದಿನ..ತೀರ್ಮಾನಿಸಿ ಎಂದು ಈ ಎಫ್‍ಬಿ ಪೇಜ್‍ನಲ್ಲಿ ಸ್ಟೇಟಸ್ ಹಾಕಲಾಗಿದೆ.

    ಈ ಪೇಜ್ ನಲ್ಲಿ ರಾಜ್ಯಸರ್ಕಾರ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದ್ದು, ಬಂಟ್ವಾಳದಲ್ಲಿ ಪ್ರತಿಭಟನೆ ಮುಂದಾದ ಸಂಘ ಪರಿವಾರದ ವ್ಯಕ್ತಿಗಳನ್ನು ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಲಾಗಿದೆ.

    ಪೋಸ್ಟ್ ನಲ್ಲಿ ಏನಿದೆ?
    ಕಲಾಯಿ ಅಸ್ರಫ್ ಅವರನ್ನು ಆರ್‍ಎಸ್‍ಎಸ್ ಸಂಘಪರಿವಾರದವರು ಭೀಕರವಾಗಿ ಕೊಲೆ ಮಾಡಿದನ್ನು ವಿರೋಧಿಸಿ ಮುಸ್ಲಿಮರು ಪ್ರತಿಭಟನೆ ನಡೆಸಲು ತಯಾರಾದಾಗ, ಇಲ್ಲಿ ನಿಷೇಧಾಜ್ಞೆ ಇದೆ ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಪ್ರತಿಭಟನೆಗೆ ಮುಂದಾದರೆ ಎಲ್ಲರನ್ನೂ ಬಂಧಿಸಿ ಜೈಲಿಗೆ ಕಳುಹಿಸುತ್ತೇವೆ ಎಂದು ಕಾಂಗ್ರೆಸ್ ಸರಕಾರದ ಪೋಲೀಸ್ ಇಲಾಖೆ ಹೇಳಿತ್ತು.

    ಈಗ ಏನು ಮಾಡುತ್ತಿದೆ? ಇಷ್ಟು ಸಂಖ್ಯೆಯಲ್ಲಿ ಸಂಘಪರಿವಾರ ದವರು ಪ್ರತಿಭಟನೆಗಾಗಿ ಬಿಸಿ ರೋಡ್ ಬಂದು ಸೇರಲು ಎಲ್ಲಾ ರೀತಿಯ ಸಹಕಾರ ಪೊಲೀಸ್ ಇಲಾಖೆ ಮಾಡುವಂತೆ ಮಾಡಿದ್ದು ಪ್ರಭಾಕರ ಭಟ್ಟನಾ ಇಲ್ಲ? ಉಸ್ತುವಾರಿ ಸಚಿವರಾ? ರಾಜ್ಯದ ಜನತೆಗೆ ಕಾಂಗ್ರೆಸ್ ಸರಕಾರ ಉತ್ತರಿಸಬೇಕು.

    ನಿಷೇಧಾಜ್ಞೆ ಯನ್ನು ಲೆಕ್ಕಿಸದೆ ಸರಕಾರಕ್ಕೆ ಕಾನೂನಿಗೆ ಸವಾಲೆಸೆದು ಪ್ರತಿಭಟನೆಗಾಗಿ ಅಲ್ಲಿ ಬಂದು ಸೇರಿದ ಪ್ರತಿಯೊಬ್ಬರ ಮೇಲೂ ಕೇಸು ದಾಖಲಿಸಿ ಜೈಲಿಗೆ ಕಳುಹಿಸುವ ಧೈರ್ಯ ಕಾಂಗ್ರೆಸ್ ಸರಕಾರಕ್ಕೆ ಇದೆಯಾ? ಕಾನೂನು ಕ್ರಮವೆಲ್ಲಾ ಮುಸ್ಲಿಮರ ಮೇಲೆ ಮಾತ್ರ ಪ್ರಯೋಗಿಸಲಿಕ್ಕಾಗಿ ಮಾತ್ರ ಇರುವುದಾ ಕಾಂಗ್ರೆಸ್ ನಾಯಕರೇ ಉತ್ತರಿಸಿ.

    ಈ ಪೋಸ್ಟಿಗೆ #ಅಕ್ರವಾಗಿ_ಪ್ರತಿಭಟನೆ_ನಡೆಸಿದ_ಸಂಘಪರಿವಾರದ_ಗೂಂಡಗಳ_ಮೇಲೆ_ಲಾಠಿ_ಬೀಸಲಾಗದ_ಪೋಲಿಸರೇನು_ಗಂಡಸರಲ್ಲವೇ ಎನ್ನುವ ಹ್ಯಾಶ್ ಟ್ಯಾಗ್ ಬಳಸಲಾಗಿದೆ. ಈ ಪೋಸ್ಟಿಗೆ ಸಾಕಷ್ಟು ಪರ ವಿರೋಧ ಪ್ರತಿಕ್ರಿಯೆಗಳು ಬಂದಿದೆ.