Tag: mutt

  • ಹಾವೇರಿಯಲ್ಲಿ ಧಾರಾಕಾರ ಮಳೆ – ನಡು ನೀರಿನಲ್ಲಿ ಸಿಲುಕಿದ್ದ 30 ಭಕ್ತರ ರಕ್ಷಣೆ

    ಹಾವೇರಿಯಲ್ಲಿ ಧಾರಾಕಾರ ಮಳೆ – ನಡು ನೀರಿನಲ್ಲಿ ಸಿಲುಕಿದ್ದ 30 ಭಕ್ತರ ರಕ್ಷಣೆ

    ಹಾವೇರಿ: ಧಾರಾಕಾರ ಮಳೆ (Rain) ಸುರಿದ ಪರಿಣಾಮ ನಡು ನೀರಿನಲ್ಲಿ ಸಿಲುಕಿದ್ದ 30 ಭಕ್ತರನ್ನು ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಹಾವೇರಿ (Haveri) ಜಿಲ್ಲೆ ಸವಣೂರು (Savanur) ತಾಲೂಕಿನ ಬರದೂರು ಗ್ರಾಮದ ಬಳಿ ನಡೆದಿದೆ.

    ಪಂಡರಾಪುರಕ್ಕೆ ತೆರಳುತ್ತಿದ್ದ ಹಾನಗಲ್ ತಾಲೂಕಿನ ಅಲ್ಲಾಪುರ ಗ್ರಾಮದ 30 ಭಕ್ತರು ಭಾನುವಾರ ತಡರಾತ್ರಿ ಬರದೂರಿನ ಹೊರವಲಯದಲ್ಲಿರುವ ರಾಮಲಿಂಗ ಮಠದಲ್ಲಿ ವಾಸ್ತವ್ಯ ಹೂಡಿದ್ದರು. ತಡರಾತ್ರಿ ಭಾರೀ ಮಳೆ ಸುರಿದ ಪರಿಣಾಮ ಮಠ ಜಲಾವೃತಗೊಂಡು ಭಕ್ತರು ನೀರಿನಲ್ಲಿ ಸಿಲುಕಿಕೊಂಡಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆ ಅವಾಂತರ – ಎಲ್ಲಿ ಏನಾಗಿದೆ?

    ಸ್ಥಳಕ್ಕೆ ಹಾವೇರಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅಧಿಕಾರಿಗಳು ಭೇಟಿ ನೀಡಿ ಭಕ್ತರನ್ನು ರಕ್ಷಿಸಿದ್ದಾರೆ. ಭಾರಿ ಪ್ರಮಾಣದ ನೀರಿನಿಂದ ಗ್ರಾಮಸ್ಥರಿಗೆ ದಿಕ್ಕು ತೋಚದಂತಾಗಿದೆ. ಇದನ್ನೂ ಓದಿ: ಧಾರವಾಡ| ಮಳೆಗೆ ತುಂಬಿ ಹರಿಯುತ್ತಿರುವ ಹಳ್ಳಗಳು

  • ನಮ್ಮ ಮಠಾಧಿಪತಿಗಳ ಕೈಗೆ ಆಯುಧ ಕೊಡ್ಬೇಕು: ದಿಂಗಾಲೇಶ್ವರ ಸ್ವಾಮೀಜಿ

    ನಮ್ಮ ಮಠಾಧಿಪತಿಗಳ ಕೈಗೆ ಆಯುಧ ಕೊಡ್ಬೇಕು: ದಿಂಗಾಲೇಶ್ವರ ಸ್ವಾಮೀಜಿ

    ಹುಬ್ಬಳ್ಳಿ: ಜಗದೀಶ್ ಶೆಟ್ಟರ್ (Jagadeesh Shettar Birthday) ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ದಿಂಗಾಲೇಶ್ವರ ಸ್ವಾಮೀಜಿ (Dingaleshwara Swamiji) ಪ್ರಚೋದಾನಾಕಾರಿ ಭಾಷಣವನ್ನು ಮಾಡಿದ್ದಾರೆ.

    ನಮ್ಮ ಸಮಾಜದ ನಾಯಕರು, ಮಠಾಧೀಪತಿಗಳ ಕೈಯಲ್ಲಿ ಆಯುಧ ಕೊಡಬೇಕು. ಆಯುಧ ಕೊಟ್ಟು ಮಠ ಮಾನ್ಯಗಳು, ಗಣ್ಯರ ರಕ್ಷಣೆ ಮಾಡಬೇಕು ಎಂದು ಪುರಾಣದ ಮಾತು ಉಲ್ಲೇಖಿಸಿ ಆಯುಧ ಕೊಡಬೇಕು ಎಂದು ಸ್ವಾಮೀಜಿ ಹೇಳಿದ್ದು, ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

    ದೇವಿ ಕಡೆ ಸ್ವತಂತ್ರ ಆಯುಧ ಇರಲಿಲ್ಲ. ಎಲ್ಲರೂ ಒಂದು ಆಯುಧ ಕೊಟ್ಟಿರುವ ಕಾರಣಕ್ಕೆ ದುಷ್ಟರ ಸಂಹಾರ ಮಾಡಿದಳು. ಇದನ್ನು ಹೇಳೋಕೆ ಕಾರಣ, ನಮ್ಮ ನಾಯಕರುಗಳಿಗೆ ಒಬ್ಬೊಬ್ಬರು ಆಯುಧ ಕೊಡಬೇಕು. ಸಮಾಜದಲ್ಲಿ ಬಲಿಷ್ಠ ಆಗುವ ವ್ಯಕ್ತಿಗಳಿಗೆ ತೊಂದರೆ ಕೊಡುವ ಕೆಲಸ ಈ ನಾಡಿನಲ್ಲಿದೆ. ಮಠಾಧಿಪತಿಗಳಿಗೂ ಇದು ತಪ್ಪಿಲ್ಲ. ಮಠಾಧಿಪತಿಗಳನ್ನು ತೇಜೋವಧೆ ಮಾಡುವ ಕೆಲಸ ನಡೆಯುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆ- ದೆಹಲಿಗೆ ಹೊರಟ ಫೈರ್‌ ಬ್ರ್ಯಾಂಡ್ ಲೀಡರ್ಸ್

    ನಮ್ಮ ಮಠಗಳನ್ನ (Mutt) ನಾಶ ಮಾಡುವುದರ ಜೊತೆಗೆ ಎರಡನೇ ಹಂತದ ನಾಯಕರನ್ನು ರಾಜಕೀಯವಾಗಿ ನಾಶ ಮಾಡುವ ವ್ಯವಸ್ಥೆ ಇದೆ. ಹುಟ್ಟುಹಬ್ಬದಲ್ಲಿ ಇದನ್ನು ಹೇಳಬೇಕೋ ಬೇಡವೋ, ಆದರೆ ನಮ್ಮ ಭಾವನೆ ಹೇಳುತ್ತೇನೆ. ಯಾರ ಅಧಃಪತನವನ್ನೂ ನಾವು ಸಹಿಸಬಾರದು. ಮಠಾಧೀಪತಿಗಳು, ರಾಜಕೀಯ ನಾಯಕರು ಸಮಾಜಕ್ಕೆ ಆಧಾರಸ್ತಂಭವಿದ್ದಂತೆ. ಲಿಂಗಾಯತ ನಾಯಕರು ಕಂಬ ಗಟ್ಟಿಯಾಗಿರಬೇಕು ಎಲ್ಲರೂ ಎಚ್ಚೆತ್ತುಕೊಳ್ಳೋ ಕಾಲ ಬಂದಿದೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.

  • ಹಾಲಶ್ರೀ ಮಠಕ್ಕೆ 54 ಲಕ್ಷ ಹಣ ತಂದಿಟ್ಟ ಮೈಸೂರಿನ ವಕೀಲ

    ಹಾಲಶ್ರೀ ಮಠಕ್ಕೆ 54 ಲಕ್ಷ ಹಣ ತಂದಿಟ್ಟ ಮೈಸೂರಿನ ವಕೀಲ

    ಬೆಂಗಳೂರು: ಉದ್ಯಮಿಗೆ ವಂಚನೆ ಪ್ರಕರಣದಲ್ಲಿ (Fraud Case) ಅಭಿನವ ಹಾಲಶ್ರೀ (Abhinava Halashree) ಸ್ವಾಮೀಜಿ ಅರೆಸ್ಟ್ ಬೆನ್ನಲ್ಲೇ, ಮೈಸೂರಿನ (Mysuru) ವಕೀಲರೊಬ್ಬರು (Lawyer) ಹಿರೇಹಡಗಲಿಯ ಮಠಕ್ಕೆ (Mutt) 56 ಲಕ್ಷ ರೂ. ಹಣ ತಂದಿಟ್ಟಿದ್ದಾರೆ. ಈ ಹಣದ ಮೂಲ ಯಾವುದು? ಎಲ್ಲಿಂದ ಬಂತು ಎನ್ನುವ ಬಗ್ಗೆ ವಕೀಲ ಪ್ರಣವ್ ಪ್ರಸಾದ್ ಡಿಸಿಪಿಯವರಿಗೆ (DCP) ಪತ್ರ ಬರೆದಿದ್ದಾರೆ.

    ಇಷ್ಟು ಮಾತ್ರವಲ್ಲದೇ ಹಣದ ಕುರಿತು ಪ್ರಣವ್ ಪ್ರಸಾದ್ ವಿಡಿಯೋ ಮೂಲಕ ಮಾಹಿತಿ ನೀಡಿದ್ದಾರೆ. ಡಿಸಿಪಿಯವರಿಗೆ ಪ್ರಣವ್ ಪ್ರಸಾದ್ ಬರೆದ ಪತ್ರದಲ್ಲಿ (Letter) ಮಠಕ್ಕೆ ಹಣ ಬಂದ ಬಗ್ಗೆ ಉಲ್ಲೇಖವಾಗಿದ್ದು, ಪತ್ರದಲ್ಲಿನ ಸಂಪೂರ್ಣ ಸಾರಾಂಶ ಇಲ್ಲಿದೆ. ಇದನ್ನೂ ಓದಿ: ಕಾಂತರಾಜು ವರದಿ ಸರ್ಕಾರ ಸ್ವೀಕಾರ ಮಾಡುತ್ತದೆ: ಶಿವರಾಜ್ ತಂಗಡಗಿ

    ಪತ್ರದಲ್ಲಿ ಏನಿದೆ?
    ಪ್ರಣವ್ ಪುಸಾದ್ 53 ವರ್ಷ, ಆದ ನಾನು ಮೈಸೂರಿನನಲ್ಲಿ ನೆಲೆಸಿದ್ದು ವಕೀಲ ವೃತ್ತಿ ಮಾಡಿಕೊಂಡಿರುತ್ತೇನೆ. ಚೈತ್ರ ಕುಂದಾಪುರ ಪಕರಣದಲ್ಲಿ ಸುದ್ದಿಯಲ್ಲಿರುವ ಅಭಿನವ ಹಾಲಶ್ರೀ ಸ್ವಾಮಿಜಿಗಳು ನನಗೂ ಮತ್ತು ನನ್ನ ಕುಟುಂಬಸ್ಥರಿಗೂ ಪರಿಚಯವಿದ್ದು, ಕಳೆದ ಎಂಟು ತಿಂಗಳಿನಿಂದ ನಮ್ಮ ಒಡನಾಟದಲ್ಲಿ ಇದ್ದರು. ಇದನ್ನೂ ಓದಿ: ಅವೈಜ್ಞಾನಿಕ ವಾರಬಂದಿ ಪದ್ಧತಿ ರದ್ದು ಮಾಡಿ ರೈತರ ಹಿತ ಕಾಪಾಡಬೇಕು: ರಾಜೂ ಗೌಡ

    ಇವರು ನಮ್ಮ ಮನೆಗೆ ಬರುವುದು, ಆಶೀರ್ವಚನ ನೀಡುವುದು, ಪ್ರಸಾದ ಸ್ವೀಕರಿಸುವುದು ಮಾಡುತ್ತಾ ಬಂದಿದ್ದರು. ಹೀಗಾಗಿ ಇವರ ಬಗ್ಗೆ ನನಗೆ ವಿಶ್ವಾಸ ಹಾಗೂ ಗೌರವ ಇತ್ತು. ಇವರು ನಿಜವಾದ ಧರ್ಮಭೀರು ಸ್ವಾಮೀಜಿ ಎಂದು ನಾವು ಇದುವರೆಗೆ ನಂಬಿದ್ದೆವು. ಆದರೆ, ಮಾಧ್ಯಮಗಳಲ್ಲಿ ವರದಿಯಾದ ವಿಚಾರ ನೋಡಿ ನಮಗೆ ಆಘಾತವಾಯಿತು. ಇದಕ್ಕೂ ಮುನ್ನ ಕೆಲ ದಿನಗಳ ಹಿಂದೆ ಸದಾ ಸ್ವಾಮೀಜಿಯ ಜೊತೆಗೆ ನಮ್ಮ ಮನೆಗೆ ಬರುತ್ತಿದ್ದ ಚಾಲಕ ರಾಜು ಎಂಬಾತ ನಾಲ್ಕು ದಿನಗಳ ಹಿಂದೆ ನಮ್ಮ ಕಚೇರಿಗೆ ಬಂದಿದ್ದ. ಅಂದು ಅವನು ಒಂದು ಬ್ಯಾಗನ್ನು ಬಿಟ್ಟು ಹೋಗಿದ್ದ. ಯಾವುದೋ ಲಗೇಜ್ ಇರಬೇಕೆಂದು ನಾವು ಸುಮ್ಮನಾಗಿದ್ದೆವು. ಇದನ್ನೂ ಓದಿ: ಶಿವಕುಮಾರ್ ಒಬ್ಬ ನೀರಿನ ಕಳ್ಳ, ಆಯೋಗ್ಯ: ಈಶ್ವರಪ್ಪ ಕಿಡಿ

    ಅದಾದ ನಂತರ ಕರೆ ಮಾಡಿದ ಚಾಲಕ ರಾಜು, ಆ ಬ್ಯಾಗನ್ನು ಮೈಸೂರಿನ ಯಾರಿಗೋ ಕೊಡಲು ಹೇಳಿದ್ದರು. ಜೊತೆಗೆ ವಕೀಲರಿಗೆ ಒಂದಷ್ಟು ಬ್ಯಾಗ್ ತಲುಪಿಸಲು ಹೇಳಿದ್ದರು. ಆದರೆ ಆ ವಕೀಲರು ನನಗೆ ಸಿಗದ ಕಾರಣ ಆ ಬ್ಯಾಗನ್ನು ನಿಮ್ಮ ಕಚೇರಿಯಲ್ಲಿ ಇಟ್ಟಿದ್ದೇನೆ ಎಂದರು. ಕೂಡಲೇ ಅವನನ್ನು ಗದರಿಸಿ ಆ ಬ್ಯಾಗನ್ನು ತೆಗೆದುಕೊಂಡು ಹೋಗಲು ಸೂಚನೆ ಕೊಟ್ಟೆ. ಅದಾದ ನಂತರ ಆ ಬ್ಯಾಗ್‌ನಿಂದ ನಾಲ್ಕು ಲಕ್ಷ ಹಣವನ್ನು ತೆಗೆದುಕೊಂಡು ಹೋಗುತ್ತಿದ್ದೇನೆ. ಉಳಿದ ಹಣವನ್ನು ದಯಮಾಡಿ ನಮ್ಮ ಮಠದ ಪೂಜಾರಿ ಹಾಲಸ್ವಾಮಿಯವರಿಗೆ ತಲುಪಿಸಿ ಎಂದು ಸ್ವಾಮೀಜಿಯವರು ಹೇಳಿದ್ದಾರೆ ಎಂದು ಹೇಳಿದ. ಆ ಬ್ಯಾಗನ್ನು ತೆಗೆದುಕೊಂಡು ಹೋಗಲು ಅವರಿಗೆ ಹಲವು ಬಾರಿ ಹೇಳಿದ. ಮೂರ್ನಾಲ್ಕು ದಿನವಾದರೂ ಅವರು ಯಾರು ಈ ಕಡೆ ತಲೆಹಾಕಲಿಲ್ಲ. ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಒಗ್ಗಟ್ಟು, ಸರ್ವಪಕ್ಷ ಸಂಸದರ ಬೆಂಬಲ: ಡಿಕೆಶಿ

    ಸ್ವಾಮೀಜಿ ಹೇಳಿದಂತೆ ಮಠದಲ್ಲಿ ಹಾಲಸ್ವಾಮಿ ಎಮಬವರಿಗೆ ಈ ಹಣವನ್ನು ಇಂದು ಬೆಳಗ್ಗೆ ತಲುಪಿಸಿ ಬಂದಿರುತ್ತೇನೆ. ಈ ಸ್ವಾಮೀಜಿಯವರ ವ್ಯವಹಾರಗಳಿಗೂ ನಮ್ಮ ಕುಟುಂಬಕ್ಕೂ ಯಾವುದೇ ಸಂಬಂಧ ಇರುವುದಿಲ್ಲ. ತಮ್ಮ ಗಮನಕ್ಕೆ ಈ ವಿಚಾರಗಳನ್ನು ತರುತ್ತಿದ್ದು, ಈ ವಿಚಾರಗಳು ಮುಂದಿನ ತನಿಖೆಗೆ ಅನುಕೂಲವಾಗುವುದು ಎಂಬ ಉದ್ದೇಶದಿಂದ ಹಂಚಿಕೊಳ್ಳುತ್ತಿದ್ದೇನೆ. ನನಗೆ ಜೀವ ಭಯವಿದ್ದು ರಕ್ಷಣೆ ನೀಡಬೇಕೆಂದು ಡಿಸಿಪಿಯವರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕಾವೇರಿ ವಿಚಾರವಾಗಿ CWMA ಆದೇಶಕ್ಕೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಮಠ’ ಚಿತ್ರ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಬಂಧನ

    ‘ಮಠ’ ಚಿತ್ರ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಬಂಧನ

    ಠ, ಎದ್ದೇಳು ಮಂಜುನಾಥ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿರುವ ಪ್ರತಿಭಾವಂತ ನಿರ್ದೇಶಕ ಗುರುಪ್ರಸಾದ್ (Guruprasad) ಅವರನ್ನು ಗಿರಿನಗರ (Girinagar) ಪೊಲೀಸರು ಬಂಧಿಸಿದ್ದಾರೆ. ಚೆಕ್ ಬೌನ್ಸ್ (Check Bounce) ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನವಾಗಿದ್ದು (Arrest), ನಂತರ ಅವರನ್ನು ನ್ಯಾಯಾಲಯಕ್ಕೆ ಕರೆದೊಯ್ಯಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

    ತಮ್ಮೊಂದಿಗೆ ಕೆಲಸ ಮಾಡುತ್ತಿದ್ದ ಶ್ರೀನಿವಾಸ್ ಎನ್ನುವವರಿಂದ ಗುರು ಪ್ರಸಾದ್ 30 ಲಕ್ಷ ರೂಪಾಯಿಯನ್ನು ಸಾಲವಾಗಿ ಪಡೆದುಕೊಂಡಿದ್ದರು. ಸಿನಿಮಾ ಮಾಡುವುದಾಗಿ ಸಾಲ ಪಡೆದಿದ್ದ ಗುರುಪ್ರಸಾದ್, ನಂತರ ಹಣ ಕೊಡದೇ ವಂಚಿಸಿದ್ದರು. ಹಣ ಕೇಳುವುದಕ್ಕೆ ಹೋದವರ ಮೇಲೆಯೇ ಸುಳ್ಳು ಕೇಸ್ ಅನ್ನು ಕೂಡ ದಾಖಲಿಸಿದ್ದರು. ಹಾಗಾಗಿ ಶ್ರೀನಿವಾಸ್ ಅವರು ಗುರುಪ್ರಸಾದ್ ಮೇಲೆ ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದರು. ಇದನ್ನೂ ಓದಿ: ಬಿಗ್ ಬಾಸ್ ಸ್ಪರ್ಧಿಗಳ ಸಮಾಗಮ: ವೈಷ್ಣವಿ ಜೊತೆ ದಿವ್ಯಾ- ಅರವಿಂದ್ ಕೆ.ಪಿ ಜೋಡಿ

    ಶ್ರೀನಿವಾಸ್ ದೂರು ನೀಡಿದ ಹಿನ್ನೆಲೆಯಲ್ಲಿ ಕೋರ್ಟ್ ನಿಂದ ಎನ್.ಬಿ ಡಬ್ಲ್ಯು ಜಾರಿ ಆಗಿತ್ತು. ಎನ್.ಐ ಆಕ್ಟ್ ಅಡಿ ಗುರುಪ್ರಸಾದ್ ವಿರುದ್ದ ಚೆಕ್ ಬೌನ್ಸ್ ಕೇಸ್ ನಲ್ಲಿ ವಾರೆಂಟ್ ಜಾರಿ ಆಗಿತ್ತು. ಹಾಗಾಗಿ ಗಿರಿನಗರ ಪೊಲೀಸರು ಗುರುಪ್ರಸಾದ್ ಅವರನ್ನು ಬಂಧಿಸಿ,  ಮೆಡಿಕಲ್ ಟೆಸ್ಟ್ ನಂತರ ಕೋರ್ಟ್ ಮುಂದೆ ಹಾಜರು ಪಡಿಸಲು ಕರೆದುಕೊಂಡು ಹೋಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಜೆಟ್ ಬಳಿಕವೂ ಮಠ ಮಂದಿರಗಳಿಗೆ ಯಡಿಯೂರಪ್ಪ ಭರ್ಜರಿ ಗಿಫ್ಟ್ – ತವರು ಜಿಲ್ಲೆಗೆ ಭರಪೂರ ಕೊಡುಗೆ

    ಬಜೆಟ್ ಬಳಿಕವೂ ಮಠ ಮಂದಿರಗಳಿಗೆ ಯಡಿಯೂರಪ್ಪ ಭರ್ಜರಿ ಗಿಫ್ಟ್ – ತವರು ಜಿಲ್ಲೆಗೆ ಭರಪೂರ ಕೊಡುಗೆ

    – 436 ದೇಗುಲ ಮಠಗಳಿಗೆ 80 ಕೋಟಿ 25 ಲಕ್ಷ ಹಂಚಿಕೆ
    – ಯಾವ ಮಠಕ್ಕೆ ಎಷ್ಟು ಅನುದಾನ?

    ಬೆಂಗಳೂರು: ಬಜೆಟ್ ಬಳಿಕ ಸಿಎಂ ಬಿ.ಎಸ್.ಯಡಿಯೂರಪ್ಪ ಮಠ, ಮಂದಿರಗಳಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ತವರು ಜಿಲ್ಲೆ ಶಿವಮೊಗ್ಗಕ್ಕೆ ಭರಪೂರ ಕೊಡುಗೆ ನೀಡಿದ್ದಾರೆ. ಈ ಮೂಲಕ ಮೀಸಲಾತಿ ಕೇಳಿದ ಸಮುದಾಯಗಳ ಸಮಾಧಾನಕ್ಕೆ ಸಿಎಂ ಮುಂದಾಗಿದ್ದಾರೆ ಅನ್ನೋ ಚರ್ಚೆಗಳು ರಾಜಕೀಯ ಅಂಗಳದಲ್ಲಿ ಚರ್ಚೆ ಆರಂಭಗೊಂಡಿವೆ. 436 ದೇಗುಲ ಮಠಗಳಿಗೆ 80 ಕೋಟಿ 25 ಲಕ್ಷ ಹಂಚಿಕೆ ಮಾಡಲಾಗಿದೆ.

    ಉಪಚುನಾವಣೆಯ ಘೋಷಣೆಯಾದ ಬೆಳಗಾವಿ ಜಿಲ್ಲೆಗೆ 7 ಕೋಟಿ 78 ಲಕ್ಷ ಹಂಚಿಕೆ ಮಾಡಲಾಗಿದೆ. ಗೋಕಾಕ್ ನಗರ ಹಿಂದೂ ಕ್ಷತ್ರೀಯ ಸಭಾದ ಸಭಾಭವನ ನಿರ್ಮಾಣಕ್ಕೆ 1 ಕೋಟಿ, ಉಪಚುನಾವಣೆ ಇರುವ ಬಸವಕಲ್ಯಾಣದ ಹಾವಗಿಲಿಂಗೇಶ್ವರ ಹಿರೇಮಠಕ್ಕೆ 10 ಲಕ್ಷ ರೂ. ಅನುದಾನ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆ 146 ಮಠ, ಮಂದಿರಗಳಿಗೆ 15 ಕೋಟಿ 33 ಲಕ್ಷ ಹಂಚಿಕೆ ಮಾಡಿದ್ರೆ, ಸ್ವಕ್ಷೇತ್ರ ಶಿಕಾರಿಪುರಕ್ಕೆ 2 ಕೋಟಿ 50 ಲಕ್ಷ ರೂ. ನೀಡಲಾಗಿದೆ. ಆದ್ರೆ ಕಾಂಗ್ರೆಸ್ ನ ಸಂಗಮೇಶ್ವರ್ ಪ್ರತಿನಿಧಿಸುವ ಭದ್ರಾವತಿಗೆ ಯಾವುದೇ ಅನುದಾನ ನೀಡಿಲ್ಲ.

    ಹಾಸನಕ್ಕೆ 2 ಕೋಟಿ 31 ಲಕ್ಷ ರೂ. ನೀಡಿದ್ರೆ, ಮಾಜಿ ಸಚಿವರ ಹೆಚ್.ಡಿ.ರೇವಣ್ಣ ಕ್ಷೇತ್ರಕ್ಕೆ ಹೊಳೆನರಸೀಪುರ ಕ್ಷೇತ್ರಕ್ಕೆ ಅನುದಾನ ಶೂನ್ಯ. ಬಾಗಲಕೋಟೆ ಜಿಲ್ಲೆಗೆ 1 ಕೋಟಿ 5 ಲಕ್ಷ ನೀಡಲಾಗಿದ್ದು, ಆದ್ರೆ ಸಿದ್ದರಾಮಯ್ಯ ಕ್ಷೇತ್ರಕ್ಕೆ ಕೇವಲ 5 ಲಕ್ಷ ರೂ. ನೀಡಲಾಗಿದೆ.

    ದಾವಣಗೆರೆ ಜಿಲ್ಲೆಗೆ 2 ಕೋಟಿ 89 ಲಕ್ಷ ನೀಡಲಾಗಿದ್ದು, ಅದರಲ್ಲಿ ಆಪ್ತ ರೇಣುಕಾಚಾರ್ಯ ಹೊನ್ನಾಳಿ ಕ್ಷೇತ್ರವೊಂದಕ್ಕೆ 2 ಕೋಟಿ 64 ರೂ. ಅನುದಾನ ನೀಡಿದ್ದಾರೆ. ಹೊನ್ನಾಳಿಯ ಹಿರೇಕಲ್ಮಠಕ್ಕೆ ಬರೋಬ್ಬರಿ 1 ಕೋಟಿ ರೂ. ನೀಡಿದ್ದಾರೆ. ವಿಜಯಪುರ ಜಿಲ್ಲೆಗೆ 2 ಕೋಟಿ 2 ಲಕ್ಷ ರೂ. ನೀಡಲಾಗಿದ್ದು, ಅದರಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಕ್ಷೇತ್ರಕ್ಕೆ 1 ಕೋಟಿ ಮೀಸಲಿರಿಸಲಾಗಿದೆ. ಮಾಜಿ ಸಿಎಂ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಪ್ರತಿನಿಧಿಸುವ ಕ್ಷೇತ್ರಕ್ಕೆ 1 ಕೋಟಿ ರೂ. ನೀಡಲಾಗಿದೆ.

    ಕುಣಿಗಲ್ ನಲ್ಲಿರುವ ರಂಭಾಪುರಿ ಶಾಖಾಮಠಕ್ಕೆ 1 ಕೋಟಿ, ನೊಣವಿನಕೆರೆ ಕ್ಷೇತ್ರಕ್ಕೆ 50 ಲಕ್ಷ ರೂ. ನೀಡಲಾಗಿದೆ. ಬೆಂಗಳೂರಿನ ನಿಡುಮಾಮಿಡಿ ಮಠಕ್ಕೆ 25 ಲಕ್ಷ ರೂ. ನೀಡಲಾಗಿದೆ.

  • ಶೃಂಗೇರಿ ಮಠದಲ್ಲಿ ಆಯೋಜಿಸಿದ್ದ ‘ಹೊರೆಕಾಣಿಕೆ’ ಕಾರ್ಯಕ್ರಮ ರದ್ದು

    ಶೃಂಗೇರಿ ಮಠದಲ್ಲಿ ಆಯೋಜಿಸಿದ್ದ ‘ಹೊರೆಕಾಣಿಕೆ’ ಕಾರ್ಯಕ್ರಮ ರದ್ದು

    ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜನತಾ ಕರ್ಫ್ಯೂಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಶೃಂಗೇರಿ ಮಠದಲ್ಲಿ ಆಯೋಜನೆಗೊಂಡಿದ್ದ ಮಠದ ಹಿರಿಯ ಗುರುಗಳಾದ ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರ 70ನೇ ದಿವ್ಯ ಸಪ್ತತಿ ಮಹೋತ್ಸವ ಹಾಗೂ ಹೊರೆಕಾಣಿಕೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

    ಪ್ರಧಾನಿ ಮೋದಿ ದೇಶದ ಜನರಲ್ಲಿ ಭಾನುವಾರ ಬೆಳಗ್ಗೆ 7ರಿಂದ ರಾತ್ರಿ 9 ಗಂಟೆವರೆಗೂ ಯಾರೂ ಮನೆ ಬಿಟ್ಟು ಬರಬೇಡಿ. ಕೊರೊನಾ ವೈರಸ್ ವಿರುದ್ಧ ಸಂಘಟಿತರಾಗಿ ಹೋರಾಡೋಣ ಎಂದು ಜನತಾ ಕರ್ಫ್ಯೂಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮಠದ ಆಡಳಿತಾಧಿಕಾರಿ ಗೌರಿ ಶಂಕರ್ ಮಠದ ಆವರಣದಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮಗಳನ್ನು ಮುಂದೂಡಿದ್ದಾರೆ.

    ಕೊರೊನಾ ವೈರಸ್ ಹತೋಟಿಗೆ ಬಾರದ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದನ್ವಯ ಮೂರು ದಿನಗಳ ಕಾಲ ಶೃಂಗೇರಿ ಮಠ ಕೂಡ ಬಂದ್ ಆಗಿರಲಿದೆ. ಶಾರದಾಂಬೆಗೆ ಪೂಜಾ ಕೈಂಕರ್ಯಗಳು ಎಂದಿನಂತೆಯೇ ನಡೆಯಲಿದ್ದು, ಶಾರದಾಂಬೆ ದರ್ಶನಕ್ಕೆ ಯಾವುದೇ ತೊಂದರೆ ಇರುವುದಿಲ್ಲ. ಆದರೆ ಮಠದಲ್ಲಿ ಅನ್ನದಾಸೋಹ ಹಾಗೂ ಭಕ್ತರು ಉಳಿಯಲು ರೂಂಗಳ ಸೌಲಭ್ಯ ಇರುವುದಿಲ್ಲ.

    ಸೋಮವಾರದವರೆಗೂ ಮಠದಲ್ಲಿ ಅನ್ನದಾಸೋಹ ಹಾಗೂ ರೂಂಗಳ ಸೌಲಭ್ಯ ಇರುವುದಿಲ್ಲ. ಸೋಮವಾರದ ನಂತರ ಸರ್ಕಾರದ ಆದೇಶದ ಮೇಲೆ ಮುಂದಿನ ನಿರ್ಧಾರ ಮಾಡಲಾಗುವುದು ಎಂದು ಮಠದ ಆಡಳಿತಾಧಿಕಾರಿ ತಿಳಿಸಿದ್ದಾರೆ. ಸದ್ಯಕ್ಕೆ ಮುಂದೂಡಿರುವ ಹೊರೆಕಾಣಿಕೆ ಹಾಗೂ ದಿವ್ಯ ಸಪ್ತತಿ ಮಹೋತ್ಸವ ಕಾರ್ಯಕ್ರಮವನ್ನು ನಡೆಸುವ ಮುನ್ನ ಮುಂಚಿತವಾಗಿ ಭಕ್ತರಿಗೆ ತಿಳಿಸುವುದಾಗಿ ಮನವಿ ಮಾಡಿಕೊಂಡಿದ್ದಾರೆ.

  • ಮಾತೆ ಮಾಣಿಕೇಶ್ವರಿ ಲಿಂಗೈಕ್ಯ- ಮಠದ ಆಸ್ತಿಯ ಮೇಲೆ ಟ್ರಸ್ಟಿ ಕಣ್ಣು?

    ಮಾತೆ ಮಾಣಿಕೇಶ್ವರಿ ಲಿಂಗೈಕ್ಯ- ಮಠದ ಆಸ್ತಿಯ ಮೇಲೆ ಟ್ರಸ್ಟಿ ಕಣ್ಣು?

    ಕಲಬುರಗಿ: ಸೇಡಂ ತಾಲೂಕಿನ ಯಾನಾಗುಂದಿಯ ಮಾತೆ ಮಾಣಿಕೇಶ್ವರಿ ಲಿಂಗೈಕರಾಗುತ್ತಿದ್ದಂತೆ ಕೋಟಿ ಕೋಟಿಯ ಆಸ್ತಿಯ ಮೇಲೆ ಹಲವರು ಕಣ್ಣು ಬಿದ್ದಿದೆ. ಹೀಗಾಗಿ ಇದೀಗ ಮಠದ ಆಡಳಿತ ಮಂಡಳಿ ಸದಸ್ಯರ ವಿರುದ್ಧ ಮಠದ ಭಕ್ತರು ಸಮರ ಸಾರಲು ಮುಂದಾಗಿದ್ದಾರೆ.

    ಅಮ್ಮನವರು ಜೀವಿತಾವಧಿಯಲ್ಲಿ ಸಾಮಾಜಿಕ ಕಾರ್ಯಕ್ಕೆ ಅಂತ “ರೂಪ ರಹಿತಾ ಅಂಹಿಸಾ ಯೋಗೇಶ್ವರ ವೀರ ಧರ್ಮಜಾ ಮಾತಾ ಮಾಣಿಕೇಶ್ವರಿ ಟ್ರಸ್ಟ್ ಯಾನಾಗುಂದಿ” ಹುಟ್ಟಿಹಾಕಿದ್ದು, ಆ ಟ್ರಸ್ಟ್ ಅಡಿ ಯಾನಾಗುಂದಿಯಲ್ಲಿ 254 ಎಕರೆ ಜಮೀನು ಸೇರಿದಂತೆ, ಕಲಬುರಗಿ, ಬೀದರ್, ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಆಂಧ್ರ-ತೆಲಂಗಾಣದಲ್ಲಿ ಕೋಟ್ಯಂತರ ರೂಪಾಯಿ ಆಸ್ತಿ ಹೊಂದಿದೆ. ಈ ಆಸ್ತಿಯ ಮೇಲೆ ಇದೀಗ ಇಲ್ಲಿನ ಆಡಳಿತ ಮಂಡಳಿ ಸದಸ್ಯರು ಕಣ್ಣಿಟ್ಟಿದ್ದಾರೆ.

    ಆಡಳಿತ ಮಂಡಳಿಯ ಕಾರ್ಯದರ್ಶಿ ಶಿವಯ್ಯ ಸ್ವಾಮಿ, ತನ್ನ ಆಧಾರ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿದ್ದು, ಮಾತೆ ಮಾಣಿಕೇಶ್ವರಿಯ ಪುತ್ರ ಅಂತ ದಾಖಲಾತಿ ಸಿದ್ಧಪಡಿಸಿದ್ದಾರೆ. ಈ ಮೂಲಕ ಮಠದ ಆಸ್ತಿ ಕಬಳಿಸಲು ಹೊಂಚು ಹಾಕಿದ್ದಾರೆ ಅಂತ ಮಾತೆ ಮಾಣಿಕೇಶ್ವರಿ ಅವರ ಪರಮ ಭಕ್ತ ಹಾಗೂ ಹಿಂದಿನಿಂದ ಆಡಳಿತ ಮಂಡಳಿ ಸದಸ್ಯರ ವಿರುದ್ಧ ಕಾನೂನು ಹೋರಾಟ ನಡೆಸುತ್ತಿರುವ ಶಿವಕುಮಾರ್ ಎಂಬವರು ಗಂಭೀರ ಆರೋಪ ಮಾಡಿದ್ದಾರೆ.

    ಈ ಹಿಂದೆ ಸಹ ಆಡಳಿತ ಮಂಡಳಿ ಸದಸ್ಯರು ಅಮ್ಮನವರನ್ನು ಗೃಹಬಂಧನದಲ್ಲಿಟ್ಟಿದ್ದಾರೆ ಎಂದು ಶಿವಕುಮಾರ್ ಕಲಬುರಗಿ ಹೈಕೋರ್ಟ್ ಪೀಠಕ್ಕೆ ಹೆಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿ ಟ್ರಸ್ಟ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ನಂತರ ಅಮ್ಮನವರನ್ನು ಭಕ್ತರ ದರ್ಶನಕ್ಕೆ ಟ್ರಸ್ಟ್ ಸದಸ್ಯರು ಮುಂದಾಗಿದ್ದರು. ಇದೀಗ ಮತ್ತೆ ಟ್ರಸ್ಟಿ ವಿರುದ್ಧ ಆಸ್ತಿ ಕಬಳಿಕೆಯ ಆರೋಪವನ್ನು ಕೇಳಿ ಬಂದಿರುವುದು ಅಪಾರ ಭಕ್ತರಲ್ಲಿ ಚಿಂತೆಗೀಡಾಗಿದೆ.

    ಮಠದ ಪೀಠಾಧಿಪತಿ ಮತ್ತು ಮುಂದಿನ ಆಡಳಿತ ವ್ಯವಸ್ಥೆ ಬಗ್ಗೆ ಟ್ರಸ್ಟ್ ಕಾರ್ಯದರ್ಶಿ ಶಿವಯ್ಯ ಸ್ವಾಮಿ ಅವರನ್ನು ಕೇಳಿದ್ರೆ, ಇಲ್ಲಿ ನಾವೆಲ್ಲ ಸೇವಕಾರಾಗಿ ಬಂದಿದ್ದೇವೆ. ಸದ್ಯ ಯಾರೂ ಪೀಠದಲ್ಲಿ ಮುಂದುವರಿಯಲ್ಲ. ಆದರೆ ಟ್ರಸ್ಟ್ ಅಡಿಯಲ್ಲಿಯೇ ಎಲ್ಲ ನಡೆಸುವುದಾಗಿ ಹೇಳುತ್ತಿದ್ದಾರೆ. ಇಡೀ ವಿಶ್ವಕ್ಕೆ ದೀಪ ಬೆಳೆಗಿಸಿದ ಮಾತೆ ಮಾಣಿಕೇಶ್ವರಿ ಅಮ್ಮನವರ ಮಠದಲ್ಲಿ ಇದೀಗ ಆಸ್ತಿಯ ಕಲಹ ಆರಂಭವಾಗಿದೆ. ಈ ಮೂಲಕ ಯಾನಾಗುಂದಿ ಟ್ರಸ್ಟ್ ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಇದೀಗ ಮತ್ತೆ ದೃಢಪಟ್ಟಿದೆ.

  • ರಾಯರ ಸನ್ನಿಧಿಯಲ್ಲಿ ಹಾಡು ಹೇಳಿ ಭಾವುಕರಾದ ಪುನೀತ್

    ರಾಯರ ಸನ್ನಿಧಿಯಲ್ಲಿ ಹಾಡು ಹೇಳಿ ಭಾವುಕರಾದ ಪುನೀತ್

    ರಾಯಚೂರು: ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ವರ್ಧಂತಿ ಉತ್ಸವ ಹಿನ್ನೆಲೆಯಲ್ಲಿ ಮಂತ್ರಾಲಯದ ಶ್ರೀ ಮಠಕ್ಕೆ ಆಗಮಿಸಿ ನಟ ಪುನೀತ್ ರಾಜ್‍ಕುಮಾರ್ ರಾಯರ ದರ್ಶನ ಪಡೆದು ಪುನೀತರಾದರು.

    ಕಳೆದ ಏಳು ದಿನಗಳಿಂದ ನಡೆಯುತ್ತಿರುವ ಗುರು ವೈಭವೋತ್ಸವದ ಕೊನೆಯ ದಿನದ ಸಮಾರಂಭದಲ್ಲಿ ಪುನೀತ್ ರಾಜ್‍ಕುಮಾರ್ ಅವರನ್ನ ಸನ್ಮಾನಿಸಲಾಯಿತು. ಸನ್ಮಾನಕ್ಕೂ ಮುನ್ನ ವೇದಿಕೆಯಲ್ಲಿ ಕುಳಿತಿದ್ದ ಪುನೀತ್ ರಾಜ್‍ಕುಮಾರ್ ತಮ್ಮ ಹಳೆಯ ನೆನಪುಗಳನ್ನು ನೆನಪಿಸಿಕೊಂಡು ಭಾವುಕರಾದರು.

    ವೇದಿಕೆ ಮೇಲೆ ರಾಯರ ಹಾಡು ಹೇಳಿದ ಪುನೀತ್ ರಾಯರಿಗೆ ತಮ್ಮ ಭಕ್ತಿ ಸಮರ್ಪಿಸಿದರು. ಆರಾಧನಾ ವೇಳೆ ಮಂತ್ರಾಲಯಕ್ಕೆ ಆಗಮಿಸಿ ಮೂರು ಹಾಡುಗಳನ್ನ ಹಾಡುವುದಾಗಿ ಹೇಳಿದರು.

    ಡಾ.ರಾಜಕುಮಾರ್ ಅವರಿಗೆ ಮಂತ್ರಾಲಯದೊಂದಿಗೆ ಇದ್ದ ಅವಿನಾಭಾವ ಸಂಬಂಧದ ಬಗ್ಗೆ ಹೇಳಿದರು. ಭಾಗ್ಯವಂತರು ಚಿತ್ರವನ್ನ ಮಂತ್ರಾಲಯದಲ್ಲಿ ಚಿತ್ರಿಕರಿಸಿದ್ದನ್ನ ನೆನಪು ಮಾಡಿಕೊಂಡರು. ಮಂತ್ರಾಲಯಕ್ಕೆ ಹೆಚ್ಚು ಬಾರಿ ಬರದಿದ್ದರೂ ಇಲ್ಲಿನ ನೆನಪುಗಳು ಹಾಗೇ ಇವೆ ಅಂತ ಪುನೀತ್ ಹೇಳಿದರು.

  • ಉತ್ತರಾಧಿಕಾರ ವಿವಾದ – ಸಿಎಂ ಮಧ್ಯಸ್ಥಿಕೆಗೆ ದಿಂಗಾಲೇಶ್ವರ ಬೆಂಬಲಿಗರ ಒತ್ತಾಯ

    ಉತ್ತರಾಧಿಕಾರ ವಿವಾದ – ಸಿಎಂ ಮಧ್ಯಸ್ಥಿಕೆಗೆ ದಿಂಗಾಲೇಶ್ವರ ಬೆಂಬಲಿಗರ ಒತ್ತಾಯ

    ಹುಬ್ಬಳ್ಳಿ: ಉತ್ತರ ಕರ್ನಾಟಕದ ಹೆಮ್ಮೆಯ ಮಠದಲ್ಲಿ ಒಂದಾಗಿರುವ ಮೂರು ಸಾವಿರ ಮಠದ ಉತ್ತರಾಧಿಕಾರ ವಿವಾದ ಮುಗಿಯದ ಅಧ್ಯಾಯದಂತಾಗಿದ್ದು, ದಿನದಿಂದ ದಿನಕ್ಕೆ ಒಂದಿಲ್ಲೊಂದು ರೀತಿಯಲ್ಲಿ ಗೊಂದಲಗಳು ಸೃಷ್ಟಿಯಾಗುತ್ತಲೆ ಇದೆ.

    ಒಂದು ಕಡೆ ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ನಾನೇ ಉತ್ತರಾಧಿಕಾರ ಎಂದು ಹೇಳುತ್ತಿದ್ದಾರೆ. ಮತ್ತೊಂದು ಕಡೆಯಲ್ಲಿ ಘಟಪ್ರಭಾದ ಮಲ್ಲಿಕಾರ್ಜುನ ಸ್ವಾಮೀಜಿ ನಾನು ಶ್ರೀ ಮಠದ ಉತ್ತರಾಧಿಕಾರ ಎಂದು ಹೇಳುತ್ತಿದ್ದಾರೆ. ಅಲ್ಲದೇ ಮೂಜಗು ಅವರು ಉತ್ತರಾಧಿಕಾರದ ಕುರಿತು ಯಾವುದೇ ಸ್ಪಷ್ಟನೆ ನೀಡದಿರುವುದು ಗೊಂದಲಕ್ಕೆ ಕಾರಣವಾಗಿದ್ದು, ದಿಂಗಾಲೇಶ್ವರ ಬೆಂಬಲಿಗರು ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸಿ ದಿಂಗಾಲೇಶ್ವರ ಸ್ವಾಮೀಜಿಯವರನ್ನು ಶ್ರೀ ಮಠದ ಉತ್ತರಾಧಿಕಾರ ಎಂದು ಘೋಷಣೆ ಮಾಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಸೋಶಿಯಲ್ ವಾರ್ ನಡೆಸಿದ್ದಾರೆ. ಇದನ್ನೂ ಓದಿ: ಸತ್ಯ ಮುಚ್ಚಿ ಹಾಕುವ ಯತ್ನ ನಡೀತಿದೆ: ದಿಂಗಾಲೇಶ್ವರ ಸ್ವಾಮೀಜಿ

    ದಿಂಗಾಲೇಶ್ವರ ಸ್ವಾಮೀಜಿಯವರ ಸತ್ಯ ದರ್ಶನ ಯಾವುದೇ ಪ್ರಭಾವ ಬೀರಿಲ್ಲ ಎಂಬುವಂತ ಮಾಹಿತಿ ಬಲ್ಲ ಮೂಲಗಳಿಂದ ತಿಳಿದು ಬರುತ್ತಿರುವ ಬೆನ್ನಲ್ಲೇ ಸೋಶಿಯಲ್ ವಾರ್ ಪ್ರಾರಂಭಗೊಂಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಒಟ್ಟಿನಲ್ಲಿ ಮೂರುಸಾವಿರ ಮಠದ ವಿವಾದ ಕೋರ್ಟ್ ಮೆಟ್ಟಿಲೇರಿದೆ. ಇದನ್ನೂ ಓದಿ: ನನ್ನ ಮೇಲಿನ ಆರೋಪ ಸಾಬೀತು ಮಾಡ್ಲಿ, ಮಠದ ಗದ್ದುಗೆ ಎದುರೇ ಪ್ರಾಣ ಬಿಡ್ತೇನೆ: ದಿಂಗಾಲೇಶ್ವರ ಶ್ರೀ

  • ದಿಢೀರ್ ಬೆಲೆ ಕುಸಿತ- ಮಠಗಳಿಗೆ ರೈತರಿಂದ 300 ಮೂಟೆ ಉಚಿತ ಎಲೆಕೋಸು ರವಾನೆ

    ದಿಢೀರ್ ಬೆಲೆ ಕುಸಿತ- ಮಠಗಳಿಗೆ ರೈತರಿಂದ 300 ಮೂಟೆ ಉಚಿತ ಎಲೆಕೋಸು ರವಾನೆ

    – 30, 40 ಸಾವಿರ ಖರ್ಚು ಮಾಡಿ ಬೆಳೆದಿದ್ದ ರೈತರು
    – 40 ಮಂದಿ ರೈತರಿಂದ ಕೂಲಿಯಿಲ್ಲದೆ ಉಚಿತ ಕಟಾವು

    ನೆಲಮಂಗಲ: ದೇಶದ ಬೆನ್ನಲುಬು ರೈತ ಎನ್ನುತ್ತಾರೆ. ಆದರೆ ರೈತರು ಬೆಳೆದ 300 ಚೀಲ ಕೋಸಿಗೆ ಬೆಂಬಲ ಬೆಲೆಯಿಲ್ಲದೆ ಎಲೆಕೋಸನ್ನು ಮಠ ಮಂದಿರಗಳಿಗೆ ಉಚಿತವಾಗಿ ನೀಡಿದ್ದಾನೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕೆರೆಕತ್ತಿಗನೂರಿನ ರೈತ ಬಾಬು ಮತ್ತು ವಾಸು ಬೆಳೆದ ಎಲೆಕೋಸನ್ನು ಉಚಿತವಾಗಿ ಮಠ-ಮಂದಿರಗಳಿಗೆ ನೀಡುವ ಮೂಲಕ ಸಾರ್ಥಕ ಕಾರ್ಯಕ್ಕೆ ಮುಂದಾಗಿದ್ದಾರೆ. 30 ರಿಂದ 40 ಸಾವಿರ ಖರ್ಚು ಮಾಡಿ ಬೆಳೆದ ಎಲೆಕೋಸಿಗೆ ಬೆಲೆಯಿಲ್ಲಾದಂತಾಗಿದೆ. ಎಲೆಕೋಸಿಗೆ ಮಾರುಕಟ್ಟೆಯಲ್ಲಿ ಚೀಲಕ್ಕೆ 70 ರಿಂದ 80 ರೂಪಾಯಿ. ಈ ಹಿನ್ನೆಲೆಯಲ್ಲಿ ರೈತರ ತಂಡ ಮನಸ್ಸು ಮಾಡಿ, ತುಮಕೂರಿನ ಸಿದ್ದಗಂಗಾ ಮಠ, ಆದಿಚುಂಚನಗಿರಿ ಮಠ, ಯಡಿಯೂರು, ಧರ್ಮಸ್ಥಳಕ್ಕೆ ರವಾನೆ ಮಾಡಿ ಸಾರ್ಥಕತೆ ಮೆರೆದಿದ್ದಾರೆ.

    ಕೆರೆಕತ್ತಿಗನೂರು ರೈತರ ತಂಡ 300 ಚೀಲ ಎಲೆಕೋಸನ್ನು ಉಚಿತವಾಗಿ ನೀಡಿದ್ದಾರೆ. ಅಲ್ಲದೇ ಎಲೆಕೋಸನ್ನು ಕಟಾವು ಮಾಡಲು ಗ್ರಾಮದ 40 ಮಂದಿ ರೈತರು ಕೂಲಿಯಿಲ್ಲದೇ ಉಚಿತವಾಗಿ ಕೆಲಸ ನಿರ್ವಹಿಸಿದ್ದಾರೆ. ಸ್ಥಳೀಯ ಲಾರಿ ಮಾಲೀಕರೊಬ್ಬರು ಈ ಎಲೆಕೋಸನ್ನು ಸಾಗಿಸುವ ಹೊಣೆ ಹೊತ್ತು ಎಲ್ಲ ಮಠಗಳಿಗೆ ರವಾನೆ ಮಾಡುತ್ತಿದ್ದಾರೆ.

    ಅರ್ಧ ಎಕರೆಯಲ್ಲಿ ಮಗುವಿನಂತೆ ಹಾರೈಕೆ ಮಾಡಿರುವ ಎಲೆಕೋಸಿನ ಬೆಳೆ ಅನ್ನದಾತ ವಾಸು ಮತ್ತು ಕುಟುಂಬಕ್ಕೆ ಕೈ ಸುಡುವಂತೆ ಮಾಡಿದೆ. ರೈತ ಬೆಳೆದ ಬೆಳೆಗೆ ಬೆಂಬಲ ಬೆಲೆ ಸಿಗದೆ ರೈತನ ಬದುಕು ದುಸ್ತಾರವಾಗುತ್ತದೆ. ಬೆಳೆದ ತರಕಾರಿಗಳಿಗೂ ಬೆಂಬಲ ಘೋಷಿಸಿ ಎಂದು ಎಲೆಕೋಸು ಬೆಳೆದ ಬಾಬು ಒತ್ತಾಯಿಸಿದ್ದಾರೆ. ಕೃಷಿ ಇಲಾಖೆ ಆಯಾ ಕಾಲಕ್ಕೆ ತಕ್ಕ ಬೆಳೆ ಬೆಳೆಯಲು ಸೂಕ್ತ ಮಾರ್ಗದರ್ಶನ ನೀಡಬೇಕೆಂದು ರೈತರು ಒತ್ತಾಯಿಸಿದ್ದಾರೆ.