Tag: mutt

  • ಶ್ರೀಗಳು ಇಲ್ಲದ ರಾತ್ರಿ ಕಳೆದ ಮಠದ ಮಕ್ಕಳು- ಒಬ್ಬರಿಗೆ ಒಬ್ಬರು ಆಸರೆಯಾಗಿ ಮಲಗಿದ್ರು

    ಶ್ರೀಗಳು ಇಲ್ಲದ ರಾತ್ರಿ ಕಳೆದ ಮಠದ ಮಕ್ಕಳು- ಒಬ್ಬರಿಗೆ ಒಬ್ಬರು ಆಸರೆಯಾಗಿ ಮಲಗಿದ್ರು

    ತುಮಕೂರು: ಸಿದ್ದಗಂಗಾ ಶ್ರೀ ಶಿವೈಕ್ಯಗೊಂಡ ಹಿನ್ನಲೆಯಲ್ಲಿ ಮಠದ ಮಕ್ಕಳು ಶ್ರೀಗಳು ಇಲ್ಲದ ರಾತ್ರಿಯನ್ನು ಕಳೆದಿದ್ದಾರೆ. ಒಬ್ಬರಿಗೆ ಒಬ್ಬರು ಆಸರೆಯಾಗಿ ಮಲಗಿರುವ ದೃಶ್ಯ ಮನಕಲುಕುವಂತೆ ಇತ್ತು.

    ಸೋಮವಾರ ಶ್ರೀಗಳು ಶಿವೈಕ್ಯ ವಿಚಾರ ತಿಳಿದು ಮಕ್ಕಳು ಭಾವುಕರಾಗಿದ್ದರು. ಸಿದ್ದಗಂಗಾ ಮಠದಲ್ಲೇ ಮಕ್ಕಳು ರಾತ್ರಿಯನ್ನು ಕಳೆದಿದ್ದಾರೆ. ಅಲ್ಲದೇ ಮಠದಲ್ಲೇ ಸಾವಿರಾರು ಭಕ್ತರು ಮಲಗಿದ್ದರು. ಬೇರೆ ಬೇರೆ ಜಿಲ್ಲೆಗಳಿಂದ ಶ್ರೀಗಳ ದರ್ಶನಕ್ಕೆ ಬಂದ ಭಕ್ತರು ಹೊಸ ಮಠದ ಆವರಣ ಸೇರಿದಂತೆ ಹಲವೆಡೆ ಮಲಗಿದ್ದರು.

    ಸಿದ್ದಗಂಗಾ ಮಠದ ವಿದ್ಯಾರ್ಥಿಗಳು ಹಾಸ್ಟೆಲ್ ಆವರಣದೊಳಗೆ ಸಾಮೂಹಿಕ ಪ್ರಾರ್ಥನೆ ನಡೆಸಿದ್ದಾರೆ. ಪ್ರಾಣಿಗಳನ್ನು ಅತಿಯಾಗಿ ಪ್ರೀತಿಸುತ್ತಿದ್ದ ಶ್ರೀಗಳು ಮಠದ ಆವರಣದಲ್ಲಿ ಅನೇಕ ಬೀದಿನಾಯಿಗಳಿಗೆ ಖುದ್ದು ಆಹಾರ ನೀಡುತ್ತಿದ್ದರು. ಇಂದು ವಿದ್ಯಾರ್ಥಿಗಳ ಪ್ರಾರ್ಥನೆಯ ಸಮಯದಲ್ಲಿ ಶಾಲಾ ಅವರಣದಲ್ಲಿ ನಾಯಿಯೊಂದು ಮಲಗಿದ್ದ ದೃಶ್ಯ ಕಂಡುಬಂತು.

    ಪ್ರತಿದಿನ ಬೆಳಗ್ಗೆ ಶಿವಕುಮಾರ ಸ್ವಾಮಿಜಿಗಳೇ ಮಕ್ಕಳಿಗೆ ಪ್ರಾರ್ಥನೆ ಹೇಳಿಕೊಡುತ್ತಿದ್ದರು. ಆದರೆ ಈಗ ಅವರ ಅಗಲಿಕೆಯಿಂದಾಗಿ ಮಕ್ಕಳು ಗೋಸಲ ಸಿದ್ದೇಶ್ವರ ವೇದಿಕೆ ಮುಂದೆ ಪ್ರಾರ್ಥನೆ ಮಾಡುತ್ತಿದ್ದಾರೆ. ಶಾಲಾ ಮಕ್ಕಳು ಶ್ರೀಗಳನ್ನು ನೆನೆದು ಬೆಳಗಿನ ಪ್ರಾರ್ಥನೆ ಸಲ್ಲಿಸಿದ್ದಾರೆ. ಸೋಮವಾರ ಶಿವಕುಮಾರ ಸ್ವಾಮೀಜಿ ಶಿವೈಕ್ಯರಾದ ವಿಷಯ ತಿಳಿದು ಮಠದ ಮಕ್ಕಳು ಬಿಕ್ಕಳಿಸಿ ಸುಡುಬಿಸಿಲಿನಲ್ಲಿಯೇ ನಿಂತು ಅಳುತ್ತಿದ್ದರು.

    ಶ್ರೀಗಳು ತಮ್ಮ ಸಾವಿನಲ್ಲೂ ಮಾನವೀಯತೆ ಮೆರೆದಿದ್ದಾರೆ. ತಾವು ಮೃತಪಟ್ಟರೆ ಮಕ್ಕಳು ಮಧ್ಯಾಹ್ನದ ಭೋಜನವನ್ನು ಸ್ವೀಕರಿಸಿದ ಬಳಿಕವಷ್ಟೇ ಘೋಷಣೆ ಮಾಡಬೇಕು. ಯಾಕಂದ್ರೆ ಅವರು ಹಸಿವಿನಿಂದ ಇರುವುದು ತಮಗೆ ಇಷ್ಟವಿಲ್ಲ ಎಂದು ಮಠದ ಸಿಬ್ಬಂದಿ ಬಳಿ ತಮ್ಮ ಕೊನೆಯ ಆಸೆಯನ್ನು ಹೇಳಿಕೊಂಡಿದ್ದರು. ಹಾಗಾಗಿ ಸೋಮವಾರ ಶ್ರೀಗಳು ಬೆಳಗ್ಗೆ 11.44ಕ್ಕೆ ಶಿವೈಕ್ಯರಾದ್ರೂ ಮಠದ ಸಿಬ್ಬಂದಿ, ಮಕ್ಕಳು ಊಟ ಮಾಡಿದ ಮೇಲೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಅಂದರೆ ಸುಮಾರು ಮಧ್ಯಾಹ್ನ 1.56ಕ್ಕೆ ವೈದ್ಯರು ಶ್ರೀಗಳು ಸಾವಿನ ವಿಚಾರವನ್ನು ಘೋಷಣೆ ಮಾಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿದ್ದಗಂಗಾ ಮಠದ ದಾಸೋಹ ಒಂದು ಪವಾಡ – ಒಲೆಯ ಬೆಂಕಿ ಒಂದು ದಿನವೂ ಆರಿಲ್ಲ

    ಸಿದ್ದಗಂಗಾ ಮಠದ ದಾಸೋಹ ಒಂದು ಪವಾಡ – ಒಲೆಯ ಬೆಂಕಿ ಒಂದು ದಿನವೂ ಆರಿಲ್ಲ

    ಸಿದ್ದಗಂಗಾ ಮಠದ ಅಡುಗೆಮನೆಯ ಒಲೆಯ ಬೆಂಕಿ ಒಂದು ದಿನವೂ ಆರಿಲ್ಲ. ಅದು ಎಂದಿಗೂ ಆರಿಲ್ಲ. ಆರುವುದು ಇಲ್ಲ. ಯಾಕೆಂದ್ದರೆ ಅದು ಬರಿಯ ಒಣಸೌದೆಯ ಉರಿಯಲ್ಲ, ಮಹಾ ತಪಸ್ವಿಗಳ ಸತ್ಸಂಕಲ್ಪದ ನಿತ್ಯ ಜ್ಯೋತಿ.

    ಸಿದ್ದಗಂಗಾ ಮಠದ ದಾಸೋಹ ಶ್ರೀ ಅಟವಿ ಸ್ವಾಮಿಗಳ ಕಾಲದಿಂದಲೂ ನಡೆದುಕೊಂಡು ಬಂದಿದೆ. ಶಿವಕುಮಾರ ಸ್ವಾಮೀಜಿಗಳ ಕಾಲಕ್ಕೆ ದಾಸೋಹ ಸೇವೆ ಲೋಕಸೋಜಿಗದ ಮಹಾಮನೆಯಾಗಿ ಬದಲಾಗಿದೆ. ದಾಸೋಹದ ಅಡಿಗೆಯ ಮನೆಯ ಒಲೆಯ ಉಜ್ವಲವಾಗಿ ಉರಿಯುತ್ತಿದೆ ಹಸಿದ ಹೊಟ್ಟೆಯ ತಣಿಸಲು. ಪವಾಡ ಎಂದರೆನು ಅಂದ್ರೆ ಸಿದ್ಧಗಂಗಾ ಮಠದ ದಾಸೋಹ ದೃಶ್ಯವನ್ನು ತೋರಿಸಿಬಿಡುವಷ್ಟು ಮಟ್ಟಿಗೆ ಇದೆ. ಅನ್ನದೇವರ ಬಿಟ್ಟು ಇನ್ನು ದೇವರಿಲ್ಲ ಅನ್ನುವ ಅನುಭವವಾಣಿಯ ಸತ್ಯವನ್ನು ಕಂಡುಕೊಂಡ ಶ್ರೀಗಳು ದಾಸೋಹಸೇವೆಯನ್ನು ದೇವರ ಸೇವೆ ಅಂತಾ ಭಾವಿಸಿದ್ರು.

    ಪ್ರತಿ ನಿತ್ಯ ದಾಸೋಹಕ್ಕೆ (ಬೆಳಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟ) 40 ಕ್ವಿಂಟಾಲ್ ಅಕ್ಕಿ, 20 ಕ್ವಿಂಟಾಲ್ ರಾಗಿ, ಸುಮಾರು 10 ಕ್ವಿಂಟಾಲ್ ಕಾಳು ಬೇಳೆ, ಇವುಗಳ ಪ್ರಮಾಣಕ್ಕೆ ಅನುಗುಣವಾಗಿ ಸಾಂಬಾರುಪುಡಿ, ತೆಂಗಿನಕಾಯಿ, ಈರುಳ್ಳಿ, ಎಣ್ಣೆ ಹಾಲು, ಬೆಲ್ಲ ಸಕ್ಕರೆ, ಹೀಗೆ ನೂರಾರು ಕೆಜಿ ಲೆಕ್ಕದಲ್ಲಿ ಪದಾರ್ಥಗಳು ಬೇಕಾಗುತ್ತದೆ. ಇದನ್ನೂ ಓದಿ: ಶಿವೈಕ್ಯದಲ್ಲಿಯೂ ಮಾನವೀಯತೆ ಮೆರೆದ ನಡೆದಾಡುವ ದೇವರು!

    ಮಠದ ದಾಸೋಹ ಕೇಂದ್ರ ಅಕ್ಷಯ ಪಾತ್ರೆಯಾಗಿ ಸೋಜಿಗವಾಗಿ ಬದಲಾಗಿದೆ. ಆದ್ರೆ ಆರಂಭದಲ್ಲಿ ಸಾಕಷ್ಟು ಕಷ್ಟಪಟ್ಟು ಸ್ವಾಮೀಜಿ ದಾಸೋಹ ಕೇಂದ್ರದ ಅಭಿವೃದ್ಧಿಗೆ ಕಟಿಬದ್ಧರಾಗಿ ನಿಂತಿದ್ದಾರೆ. ಸಿದ್ದಗಂಗಾದ ಮಠದಲ್ಲಿ ನಿತ್ಯ ಎಂಟುಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಇಲ್ಲಿ ನಿತ್ಯ ದಾಸೋಹ, ಜೊತೆಗೆ ಯಾತ್ರಿಕರಿಗೂ ಅನ್ನದಾನ.  ಇದನ್ನೂ ಓದಿ: ಸಿದ್ದಗಂಗಾ ಶ್ರೀಗಳ 111 ಸಾಧನೆಗಳು ಹಾಗೂ ವೈಶಿಷ್ಟಗಳು

    ಸಿದ್ದಗಂಗಾ ಮಠದ ದಾಸೋಹದ ಮನೆಗೆ ಭಕ್ತರು ಸ್ವಯಂ ಇಚ್ಛೆಯಿಂದ ಬಂದು ತಮ್ಮ ಪಾಲಿನ ಅಳಿಲು ಸೇವೆ ಸಲ್ಲಿಸುವುದು ನಿಜಕ್ಕೂ ಊಹೆಗೂ ನಿಲುಕದ ಸೇವೆ. ಬಡರೈತರು ಸಹ ತಾವು ಬೆಳೆದಿದ್ದರಲ್ಲಿ ಮೊದಲ ಪಾಲು ದಾಸೋಹದ ಕೊಪ್ಪರಿಗಾಗಿ ಮೀಸಲಿಡುತ್ತಾರೆ. ಕಾಣಿಕೆಯಂತೆ ಸಮರ್ಪಿಸುತ್ತಾರೆ. ಶ್ರೀಮಠದ ಹಿಂದಿರುವ ಕಟ್ಟಿಗೆ ರಾಶಿ ತಾನು ಉರಿದು ಸಹಸ್ರಾರು ಮಕ್ಕಳಿಗೆ ಪ್ರಸಾದ ಅಣಿಮಾಡಿ ಪ್ರಸನ್ನತೆ ನೀಡುತ್ತದೆ. ಸಾಮೂಹಿಕ ಭೋಜನ ಅನ್ನುವುದೇ ಒಂದು ಭಾವಪೂರ್ಣ ಸೇತುವೆ.

    https://www.youtube.com/watch?v=2lK_EgaS96U

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶ್ರೀಗಳ ಆರೋಗ್ಯ ವಿಚಾರಿಸಿದ್ರು ಯದುವೀರ್ ಒಡೆಯರ್

    ಶ್ರೀಗಳ ಆರೋಗ್ಯ ವಿಚಾರಿಸಿದ್ರು ಯದುವೀರ್ ಒಡೆಯರ್

    ತುಮಕೂರು: ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದರಿಂದ ಕಾಯಕಯೋಗಿ ಸಿದ್ದಗಂಗಾ ಶ್ರೀಗಳನ್ನು ಇಂದು ಬೆಳಗಿನ ಜಾವ ಮಠಕ್ಕೆ ಶಿಫ್ಟ್ ಮಾಡಲಾಗಿದೆ. ಮೈಸೂರಿನ ಮಹರಾಜ ಯದುವೀರ್ ಒಡೆಯರ್ ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯವನ್ನು ವಿಚಾರಿಸಿದ್ದಾರೆ.

    ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಯದುವೀರ್ ಒಡೆಯರ್, ನಾನು ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದೆ. ಹಾಗೇ ಶ್ರೀಗಳನ್ನು ನೋಡಲು ಬಂದಿದ್ದೇನೆ. ಶ್ರೀಗಳು ಆರೋಗ್ಯವಾಗಿದ್ದಾರೆ. ಅವರು ಬೇಗ ಚೇತರಿಸಿಕೊಳ್ಳಲಿ ಅಂತ ಚಾಮುಂಡೇಶ್ವರಿ ತಾಯಿಯಲ್ಲಿ ಪ್ರಾರ್ಥನೆ ಮಾಡ್ತೇನೆ. ಶ್ರೀಗಳು ವಿಶ್ರಾಂತಿಯಲ್ಲಿದ್ದರಿಂದ ಅವರನ್ನು ಎಚ್ಚರಿಸಲು ಹೋಗಲಿಲ್ಲ. ಅವರ ಜೊತೆ ಮಾತನಾಡುವ ಅವಕಾಶ ಸಿಗಲಿಲ್ಲ. ಹಾಗಾಗಿ ನಾನು ಅವರ ಆಶೀರ್ವಾದ ಪಡೆದುಕೊಂಡು, ಅವರನ್ನು ನೋಡಿಕೊಂಡು ಬಂದೆ” ಎಂದು ಹೇಳಿದರು.

    ಸ್ವಾಮೀಜಿಗಳ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಏರುಪೇರು ಬಂದಿಲ್ಲ. ರಾತ್ರಿಯಿಂದ ಮಠಕ್ಕೆ ಹೋಗುವಂತೆ ಸ್ವಾಮೀಜಿಗಳು ಸೂಚನೆ ನೀಡುತ್ತಿದ್ದರು. ಇಂದು ಅಥವಾ ನಾಳೆ ಶಿಫ್ಟ್ ಮಾಡಬೇಕಂತ ಮಠದ ಹಿರಿಯರು ಹಾಗೂ ಎಸ್‍ಪಿ ಸೇರಿ ಸಭೆ ನಡೆಸಿ ನಿರ್ಧಾರ ಮಾಡಿದ್ದೇವು. ಆದರೆ ರಾತ್ರಿಯಿಂದ ಸ್ವಾಮೀಜಿಗಳು ಮಠಕ್ಕೆ ಹೋಗಬೇಕೆಂದು ಚಡಪಡಿಸುತ್ತಿದ್ದರು. ಆದ್ದರಿಂದ ಬೆಳಗಿನ ಜಾವ ಈ ರೀತಿ ನಿರ್ಧಾರ ತೆಗೆದುಕೊಂಡು ಶಿಫ್ಟ್ ಮಾಡಲಾಗಿದೆ ಎಂದು ಕಿರಿಯ ಶ್ರೀಗಳು ತಿಳಿಸಿದ್ದಾರೆ.

    ಶ್ರೀಗಳು ಆಸ್ಪತ್ರೆಯಿಂದ ಮಠಕ್ಕೆ ಹೋಗುವ ಹಂಬಲ ವ್ಯಕ್ತಪಡಿಸಿದ್ದರು. ಹಾಗಾಗಿ ಶ್ರೀಗಳನ್ನು ಮಠಕ್ಕೆ ಶಿಫ್ಟ್ ಮಾಡಿದ್ದೇವೆ. ಆಸ್ಪತ್ರೆಯಲ್ಲಿ ನೀಡುತ್ತಿದ್ದ ಚಿಕಿತ್ಸೆ ಮಠದಲ್ಲೇ ಮುಂದುವರೆಸಿದ್ದೇವೆ. ನಿಶ್ಯಕ್ತಿ ಮತ್ತು ಉಸಿರಾಟದ ತೊಂದರೆ ಹೊರತುಪಡಿಸಿದರೆ ಬೇರೆ ಎಲ್ಲಾ ಪ್ಯಾರಾಮೀಟರ್ಸ್ ಸರಿಯಾಗಿದೆ. ಶ್ವಾಸಕೋಶದ ಸೋಂಕು ಕಡಿಮೆಯಾಗಿದೆ. ಆಪರೇಷನ್ ಮಾಡಿದ ಗಾಯ ವಾಸಿಯಾಗಿದೆ. ಭಕ್ತಾದಿಗಳು ಆತಂಕಪಡುವ ಅವಶ್ಯ ಇಲ್ಲ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಪಬ್ಲಿಕ್ ಟಿವಿಗೆ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಠಕ್ಕೆ ಸಿದ್ದಗಂಗಾ ಶ್ರೀಗಳು ವಾಪಸ್ – ಬೆಳಗಿನ ಜಾವ ನಡೆದಾಡುವ ದೇವರು ಶಿಫ್ಟ್

    ಮಠಕ್ಕೆ ಸಿದ್ದಗಂಗಾ ಶ್ರೀಗಳು ವಾಪಸ್ – ಬೆಳಗಿನ ಜಾವ ನಡೆದಾಡುವ ದೇವರು ಶಿಫ್ಟ್

    ತುಮಕೂರು: ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದರಿಂದ ಕಾಯಕಯೋಗಿ ಸಿದ್ದಗಂಗಾ ಶ್ರೀಗಳನ್ನು ಇಂದು ಬೆಳಗಿನ ಜಾವ ಮಠಕ್ಕೆ ಶಿಫ್ಟ್ ಮಾಡಲಾಗಿದೆ.

    ಸ್ವಾಮೀಜಿಗಳ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಏರುಪೇರು ಬಂದಿಲ್ಲ. ರಾತ್ರಿಯಿಂದ ಮಠಕ್ಕೆ ಹೋಗುವಂತೆ ಸ್ವಾಮೀಜಿಗಳು ಸೂಚನೆ ನೀಡುತ್ತಿದ್ದರು. ಇಂದು ಅಥವಾ ನಾಳೆ ಶಿಫ್ಟ್ ಮಾಡಬೇಕಂತ ಮಠದ ಹಿರಿಯರು ಹಾಗೂ ಎಸ್‍ಪಿ ಸೇರಿ ಸಭೆ ನಡೆಸಿ ನಿರ್ಧಾರ ಮಾಡಿದ್ದೇವು. ಆದರೆ ರಾತ್ರಿಯಿಂದ ಸ್ವಾಮೀಜಿಗಳು ಮಠಕ್ಕೆ ಹೋಗಬೇಕೆಂದು ಚಡಪಡಿಸುತ್ತಿದ್ದರು. ಆದ್ದರಿಂದ ಬೆಳಗಿನ ಜಾವ ಈ ರೀತಿ ನಿರ್ಧಾರ ತೆಗೆದುಕೊಂಡು ಶಿಫ್ಟ್ ಮಾಡಲಾಗಿದೆ ಎಂದು ಕಿರಿಯ ಶ್ರೀಗಳು ತಿಳಿಸಿದ್ದಾರೆ.

    ಶ್ರೀಗಳು ಆಸ್ಪತ್ರೆಯಿಂದ ಮಠಕ್ಕೆ ಹೋಗುವ ಹಂಬಲ ವ್ಯಕ್ತಪಡಿಸಿದ್ದರು. ಹಾಗಾಗಿ ಶ್ರೀಗಳನ್ನು ಮಠಕ್ಕೆ ಶಿಫ್ಟ್ ಮಾಡಿದ್ದೇವೆ. ಆಸ್ಪತ್ರೆಯಲ್ಲಿ ನೀಡುತ್ತಿದ್ದ ಚಿಕಿತ್ಸೆ ಮಠದಲ್ಲೇ ಮುಂದುವರಿಸಿದ್ದೇವೆ. ನಿಶ್ಯಕ್ತಿ ಮತ್ತು ಉಸಿರಾಟದ ತೊಂದರೆ ಹೊರತುಪಡಿಸಿದರೆ ಬೇರೆ ಎಲ್ಲಾ ಪ್ಯಾರಾಮೀಟರ್ಸ್ ಸರಿಯಾಗಿದೆ. ಶ್ವಾಸಕೋಶದ ಸೋಂಕು ಕಡಿಮೆಯಾಗಿದೆ. ಆಪರೇಷನ್ ಮಾಡಿದ ಗಾಯ ವಾಸಿಯಾಗಿದೆ. ಭಕ್ತಾದಿಗಳು ಆತಂಕಪಡುವ ಅವಶ್ಯ ಇಲ್ಲ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಪಬ್ಲಿಕ್ ಟಿವಿಗೆ ಹೇಳಿದ್ದಾರೆ.

    ಇತ್ತ ಶ್ರೀಮಠದಲ್ಲಿ ವಿದ್ಯಾರ್ಥಿಗಳು ಜಮಾವಣೆಯಾಗಿದ್ದು, ಶ್ರೀಗಳ ದರ್ಶನ ಪಡೆಯುವ ಕಾತರ ವ್ಯಕ್ತಪಡಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಂಧನ ಭೀತಿಯಲ್ಲಿ ದಿಗಂಬರೇಶ್ವರ ಮಠದ ಪೀಠಾಧಿಪತಿ ಕಲ್ಲಿನಾಥ ಸ್ವಾಮೀಜಿ

    ಬಂಧನ ಭೀತಿಯಲ್ಲಿ ದಿಗಂಬರೇಶ್ವರ ಮಠದ ಪೀಠಾಧಿಪತಿ ಕಲ್ಲಿನಾಥ ಸ್ವಾಮೀಜಿ

    ವಿಜಯಪುರ: ಜಿಲ್ಲೆಯ ಕೋಲಾರ ಪಟ್ಟಣದಲ್ಲಿರುವ ದಿಗಂಬರೇಶ್ವರ ಮಠದ ಪೀಠಾಧಿಪತಿ ಕಲ್ಲಿನಾಥ ಸ್ವಾಮೀಜಿ ಅವರಿಗೆ ಬಂಧನದ ಭೀತಿ ಎದುರಾಗಿದೆ.

    ಕೋಲಾರದವರಾದ ಸುವರ್ಣ ಶಿರಾನಿ ಎಂಬವರ ಮಗ ಬಸವರಾಜು ಕಳೆದ ತಿಂಗಳು 20ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಮಗನ ಸಾವಿಗೆ ಸಂಬಂಧಿಸಿದಂತೆ ಕೋಲ್ಹಾರದ ದಿಗಂಬರೇಶ್ವರ ಮಠದ ಕಲ್ಲಪ್ಪಯ್ಯ ಅಲಿಯಾಸ್ ಕಲ್ಲಿನಾಥ ಸ್ವಾಮೀಜಿ, ಸಹೋದರ ಸಂಕಪ್ಪಯ್ಯ ಮತ್ತು ರವಿಂದ್ರ ಶಿರಾನಿ ಕಿರುಕುಳ ಕಾರಣ ಎಂದು ಕೋಲ್ಹಾರ ಪೊಲೀಸ್ ಠಾಣೆಯಲ್ಲಿ ಡಿಸೆಂಬರ್ 22 ರಂದು ಸುವರ್ಣ ಶಿರಾನಿ ದೂರು ದಾಖಲಿಸಿದ್ದರು.

                                   ರವಿಂದ್ರ ಶಿರಾನಿ

    ಪೊಲೀಸರು ಆರೋಪಿಗಳು ಪಟ್ಟಣದಲ್ಲೆ ಓಡಾಡಿದರು ಬಂಧಿಸಿರಲಿಲ್ಲ. ನಂತರ ಸ್ವಾಮೀಜಿ ಸೇರಿದಂತೆ ಆರೋಪಿಗಳು ಜಿಲ್ಲಾ ಸೆಷನ್ಸ್ ಕೋರ್ಟ್‍ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಸ್ವಾಮೀಜಿಯ ಅರ್ಜಿ ವಜಾಗೊಳಿಸಿ ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಕೋರ್ಟ್ ಆದೇಶ ನೀಡಿದೆ.

                                                                                        ಸಂಕಪ್ಪಯ್ಯ

    ಇದರಿಂದ ಬಂಧನದ ಭೀತಿಯಿಂದ ಕಲ್ಲಿನಾಥ ಸ್ವಾಮೀಜಿ ಮಠದಿಂದ ಕಾಲ್ಕಿತ್ತಿದ್ದಾರೆ. ದೂರು ದಾಖಲಾಗಿ 20 ದಿನಗಳಾದರೂ ಬಂಧಿಸದ ಕೋಲಾರ ಠಾಣೆ ಪೊಲೀಸರ ವಿರುದ್ಧ ಬಸವರಾಜು ತಾಯಿ ಸುವರ್ಣ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಖಾವಿ ತೊಟ್ಟು ಮಹಿಳೆಯರ ಜೊತೆ ಸರಸ – ಐವರ ಜೊತೆ ಮಠದಲ್ಲೇ ಪಲ್ಲಂಗದಾಟ!

    ಖಾವಿ ತೊಟ್ಟು ಮಹಿಳೆಯರ ಜೊತೆ ಸರಸ – ಐವರ ಜೊತೆ ಮಠದಲ್ಲೇ ಪಲ್ಲಂಗದಾಟ!

    – ಮಹದೇವಿ ಸ್ವಾಮಿಯ ಕಾಮ ಪುರಾಣ

    ಚಾಮರಾಜನಗರ: ಸುಳ್ವಾಡಿ ಮಾರಮ್ಮನ ಪ್ರಸಾದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಲೂರು ಮಠದ ಇಮ್ಮಡಿ ಮಹದೇವ ಶ್ರೀಗಳ ಲೀಲೆ ಬಗೆದಷ್ಟು ಬಯಲಾಗುತ್ತಿದೆ.

    ಖಾವಿ ತೊಟ್ಟು ಸ್ವಾಮೀಜಿ ಮಹಿಳೆಯರ ಜೊತೆ ಪಲ್ಲಂಗ ಹಂಚಿಕೊಂಡಿದ್ದಾರೆ. ಇಮ್ಮಡಿ ಮಹದೇವಸ್ವಾಮಿಗೆ 5 ಜನ ಮಹಿಳೆಯರ ಜೊತೆ ಸಂಪರ್ಕವಿದ್ದು, ಮಠದ ಆವರಣದಲ್ಲಿ ಸರಸ ಸಲ್ಲಾಪ ಮಾಡುತ್ತಿದ್ದರು ಎನ್ನುವ ಮಾತು ಈಗ ಕೇಳಿ ಬಂದಿದೆ.

    ಮಹದೇವ ಸ್ವಾಮೀಜಿ ಮಲೆಮಹದೇಶ್ವರ ಬೆಟ್ಟದ ತಪ್ಪಲಿನ ತೋಟದ ಮನೆಯೊಂದರಲ್ಲಿ ಮಹಿಳೆಯರ ಜೊತೆ ಸರಸವಾಡುತ್ತಿದ್ದನು. ಮಹಿಳೆಯರ ಸಹವಾಸದಿಂದ ಈ ಇಮ್ಮಡಿ ಸ್ವಾಮೀಜಿ ಮಠಕ್ಕೆ ಕೆಟ್ಟ ಹೆಸರು ತಂದಿದ್ದಾರೆ. ಇಮ್ಮಡಿ ಮಹದೇವಸ್ವಾಮಿ ಓರ್ವ ಶಿಕ್ಷಕಿ ಸೇರಿದಂತೆ ಐದು ಮಂದಿ ಜೊತೆ ಹಾಸಿಗೆ ಹಂಚಿಕೊಂಡಿದ್ದಾರೆ. ಸುಂದರ ಮಹಿಳೆಯರು ಹಾಗೂ ಮಹಿಳಾ ಭಕ್ತರನ್ನು ಹಾಸಿಗೆಗೆ ಕರೆಯುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆಸ್ಪತ್ರೆಯಿಂದ ಸಿದ್ದಗಂಗಾ ಶ್ರೀಗಳ ಡಿಸ್ಚಾರ್ಜ್ – ಮಠ ತಲುಪಿದ ಸ್ವಾಮೀಜಿ

    ಆಸ್ಪತ್ರೆಯಿಂದ ಸಿದ್ದಗಂಗಾ ಶ್ರೀಗಳ ಡಿಸ್ಚಾರ್ಜ್ – ಮಠ ತಲುಪಿದ ಸ್ವಾಮೀಜಿ

    ಬೆಂಗಳೂರು: ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಕಳೆದ 13 ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದ ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳು ಗುಣಮುಖರಾಗಿ ಇಂದು ಶ್ರೀಮಠಕ್ಕೆ ವಾಪಸ್ಸಾಗಿದ್ದಾರೆ.

    ಆಸ್ಪತ್ರೆಯಲ್ಲಿಯೇ ಶ್ರೀಗಳಿಗೆ ಇನ್ನೂ ಕೆಲದಿನಗಳ ವಿಶ್ರಾಂತಿ ಅವಶ್ಯಕತೆ ಇದ್ದರೂ ಶ್ರಿಗಳು ಮಠ ಹಾಗೂ ವಿದ್ಯಾರ್ಥಿಗಳನ್ನು ನೋಡುವ ಹಂಬಲ ವ್ಯಕ್ತಪಡಿಸಿದ್ದರು. ಹಾಗಾಗಿ ತುರ್ತಾಗಿ ಶ್ರೀಮಠಕ್ಕೆ ಕರೆದುಕೊಂಡು ಬರಲಾಗಿದೆ. ಈ ಹಿನ್ನೆಲೆ ಶ್ರೀಮಠದಲ್ಲಿ ಭಕ್ತರಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಮಠದಲ್ಲಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದರು. ಎಸ್‍ಪಿ ದಿವ್ಯಾ ಗೋಪಿನಾಥ್ ಮಠಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು.

    ಸಿದ್ದಗಂಗಾ ಶ್ರೀ ಸ್ವಾಮೀಜಿ ಕರೆದುಕೊಂಡು ಬರಲು ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಸ್ವಾಮೀಜಿಯನ್ನು ಕರೆದುಕೊಂಡು ಬರಲು ಎರಡು ಅಂಬುಲೆನ್ಸ್ ಗಳನ್ನು ಸಿದ್ಧತೆ ಮಾಡಲಾಗಿತ್ತು. ಚೆನ್ನೈನ ರೇಲಾ ಆಸ್ಪತ್ರೆಯಿಂದ ಸಿದ್ದಗಂಗಾ ಶ್ರೀಗಳು ಸುಮಾರು 12 ಗಂಟೆಗೆ ಹೊರಟು ಪೊಲೀಸರ ಬಿಗಿ ಭದ್ರತೆಯೊಂದಿಗೆ ಹಾಗೂ ಜೀರೋ ಟ್ರಾಫಿಕ್ ಮುಖಾಂತರ ವಿಮಾನ ನಿಲ್ದಾಣ ತಲುಪಿದ್ದರು.

    ಶ್ರೀಗಳ ಜೊತೆಗೆ ಇಬ್ಬರು ವೈದ್ಯರು ಹಾಗೂ ಶ್ರೀಗಳ ಆಪ್ತರೊಬ್ಬರು ಏರ್ ಆಂಬುಲೆನ್ಸ್ ನಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳಸಿದ್ದರು. 52 ನಿಮಿಷಕ್ಕೆ ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಏರ್ ಅಂಬುಲೆನ್ಸ್ ತಲುಪಿ, ಅಲ್ಲಿಂದ ರಸ್ತೆ ಮೂಲಕ ತುಮಕೂರಿಗೆ ಶ್ರೀಗಳನ್ನು ಕರೆ ತರಲಾಯಿತು.

    ಸ್ವಾಮೀಜಿಗೆ ಶಸ್ತ್ರಚಿಕಿತ್ಸೆ ಮಾಡಿದ ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಅವರು ಮೊದಲಿನ ತರ ಊಟ, ಪೂಜೆ ಮಾಡುತ್ತಾರೆ. ಆದ್ದರಿಂದ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದೇವೆ. ಅವರು ರಿಕವರಿ ಆಗಿರುವುದು ಪವಾಡ. ಇದು ಯಾವುದೇ ರೆಕಾರ್ಡ್ ಅಲ್ಲ. ನಮ್ಮ ಕೆಲಸ ನಾವು ಮಾಡಿದ್ದೇವೆ. ಅವರಿಗೆ ಚಿಕಿತ್ಸೆ ನೀಡಿರುವುದು ಖುಷಿ ಇದೆ. ಸದ್ಯಕ್ಕೆ ಅವರು ವಿಶ್ರಾಂತಿ ಪಡೆಯಬೇಕಿದೆ ಎಂದು ಡಾ. ಮೊಹಮ್ಮದ್ ರೇಲಾ ಅವರು ತಿಳಿಸಿದ್ದಾರೆ.

  • ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ದುರಂತಕ್ಕೆ ಹೊಸ ತಿರುವು..!

    ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ದುರಂತಕ್ಕೆ ಹೊಸ ತಿರುವು..!

    ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಕಿಚ್ಚುಗತ್ತು ಮಾರಮ್ಮ ವಿಷ ಪ್ರಸಾದ ದುರಂತಕ್ಕೆ ಹೊಸ ತಿರುವು ಸಿಕ್ಕಿದೆ.

    ದೇವಸ್ಥಾನಕ್ಕೆ ವರ್ಷಕ್ಕೆ ಬರೋಬ್ಬರೀ 80 ಲಕ್ಷ ರೂಪಾಯಿ ಆದಾಯ ಇತ್ತು. 1.5 ಕೋಟಿ ರೂಪಾಯಿ ವೆಚ್ಚದಲ್ಲಿ ದೇವಸ್ಥಾನದಲ್ಲಿ ಗೋಪುರ ನಿರ್ಮಾಣಕ್ಕೆ ಸಿದ್ಧತೆ ಮಾಡಲಾಗಿತ್ತು. ಈ ವಿಚಾರದಲ್ಲಿ ಸ್ವಾಮೀಜಿ ಮತ್ತು ದೇವಸ್ಥಾನದ ಟ್ರಸ್ಟಿಗಳ ನಡುವೆ ಭಿನ್ನಾಭಿಪ್ರಾಯ ಇತ್ತು. ದುರಂತದ ದಿನ ನಡೆದಿದ್ದ ಗುದ್ದಲಿ ಪೂಜೆಯಲ್ಲಿ ಸ್ವಾಮೀಜಿ ಭಾಗಿಯಾಗಿದ್ದರು ಎಂದು ಮೈಸೂರಿನ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಹೇಳಿದ್ದಾರೆ.

    ಗೋಪುರ ಗುದ್ದಲಿ ಪೂಜೆಗೆ ಕಿರಿಯ ಸ್ವಾಮೀಜಿ ಪಟ್ಟದ ಇಮ್ಮಡಿ ಮಹಾದೇವಸ್ವಾಮಿ ಬಂದಿರಲಿಲ್ಲ. ಸಾಲೂರು ಮಠದ ಕಿರಿಯ ಸ್ವಾಮೀಜಿ ಚಿನ್ನಪ್ಪಿ ದೇವಸ್ಥಾನದ ಪ್ರತಿಯೊಂದು ಕಾರ್ಯಕ್ರಮಕ್ಕೂ ಬರುತ್ತಿದ್ದರು. ಆದ್ರೆ ಅಂದು ಅವರು ಬಂದಿರಲಿಲ್ಲ. ಹೀಗಾಗಿ ಹಿರಿಯ ಸ್ವಾಮೀಜಿ ಗುರುಸ್ವಾಮಿ ನೇತೃತ್ವದಲ್ಲಿ ಪೂಜೆ ನಡೆದಿತ್ತು. ಆದರೆ ಪೂಜೆ ನಡೆದ ಬಳಿಕ ಹಿರಿಯ ಸ್ವಾಮೀಜಿಯೂ ಪ್ರಸಾದ ಸ್ವೀಕರಿಸಿದೆ ಹೋಗಿದ್ದರು ಎಂದು ತಿಳಿದುಬಂದಿದೆ.

    ಇಮ್ಮಡಿ ಮಹಾದೇವಸ್ವಾಮಿ ಮತ್ತು ಸಾಲೂರು ಮಠದ ಕಿರಿಯ ಸ್ವಾಮೀಜಿ ಬೇರೆ ಬೇರೆಯಾಗಿದ್ದು, ಆದರೆ ಸಾಲೂರು ಮಠಕ್ಕೂ ಈ ದೇವಾಲಕ್ಕೂ ಯಾವುದೇ ಸಂಬಂಧ ಇಲ್ಲ. ಇಮ್ಮಡಿ ಮಹಾದೇವಸ್ವಾಮಿ ದೋಣಿಕೆರೆ ಮಠದವರಾಗಿದ್ದಾರೆ. ಈ ದೋಣಿಕೆರೆ ಮಠಕ್ಕೂ ಮಾರಮ್ಮ ದೇವಾಲಯಕ್ಕೂ ಸಂಬಂಧ ಇದೆ. ಈ ಹಿಂದೆ ದೋಣಿಕೆರೆ ಮಠದ ಅರ್ಚಕರು ಮಾರಮ್ಮನ ಪೂಜೆ ಮಾಡುತ್ತಿದ್ದರು. ಆದರೆ 50 ವರ್ಷಗಳ ಹಿಂದೆ ನಾವು ಪೂಜೆ ಮಾಡಲ್ಲ ಎಂದು ಹೊರಟು ಹೋಗಿರುತ್ತಾರೆ. ಬಳಿಕ ಸ್ಥಳೀಯರು, ಚಿನ್ನಪ್ಪಿ ಹಾಗೂ ಇತರರು ಸೇರಿ ಒಂದು ಟ್ರಸ್ಟ್ ಮಾಡಿ ಅವರೇ ಪೂಜೆ ಮಾಡಿಕೊಂಡು ಬರುತ್ತಿದ್ದರು.

    ಹೀಗೆ ಪೂಜೆ ಮಾಡಲು ಶುರು ಮಾಡಿದಾಗ ದೇವಾಲಯಕ್ಕೆ ಆದಾಯ ಹೆಚ್ಚಾಗಿತ್ತು. ನಂತರ ಮತ್ತೆ ದೋಣಿಕೆರೆ ಅರ್ಚಕರು ಬಂದು ನಾವೇ ಪೂಜೆ ಮಾಡುತ್ತೇವೆ ಬಿಟ್ಟುಕೊಡಿ ಎಂದು ಕೇಳಿದ್ದರು. ಆಗ ಸ್ಥಳೀಯರು ಇಲ್ಲ ನಾವೇ ಪೂಜೆ ಮಾಡುತ್ತಿದ್ದೇವೆ. ನೀವು ಒಂದು ವಾರಕ್ಕೆ ಬಂದು ಪೂಜೆ ಮಾಡಿ ಅಂತ ಹೇಳಿದ್ದರು. ಈ ವಿಚಾರಕ್ಕೆ ಆಗಾಗ ಮಾತುಕತೆ ನಡೆಯುತ್ತಿತ್ತು ಎಂದು ಇಲ್ಲಿನ ಜನರು ಹೇಳುತ್ತಿದ್ದಾರೆ.

    ಗುರುಸ್ವಾಮಿ ಸ್ಪಷ್ಟನೆ:
    ದೇವಾಲಯದಲ್ಲಿ ಕಟ್ಟಡ ಕಟ್ಟುತ್ತಿದ್ದೇವೆ ನೀವು ಬನ್ನಿ ಎಂದು ಕರೆದಿದ್ದರು. ಅಂದು ಶುಕ್ರವಾರ ಆಗಿದ್ದರಿಂದ ನಮ್ಮ ಮಠದಲ್ಲೂ ಭಕ್ತರು ಹೆಚ್ಚಾಗಿದ್ದರು. ಕೊನೆಗೆ ಪೂಜೆ ಮುಗಿಸಿ ಮಾರಮ್ಮನ ದೇವಾಲಯಕ್ಕೆ ಹೋಗಿದ್ದೆ. ಆದರೆ ನಾನು ಹೋಗುವಷ್ಟರಲ್ಲಿ ಪೂಜೆ ಮುಗಿದಿತ್ತು. ಮತ್ತೆ ನಾನು ಕೂಡ ಪೂಜೆ ಮಾಡಿಸಿದೆ. ಬಳಿಕ ದೇವಾಲಯ ಕಂಟ್ರಾಕ್ಟರ್ ಸದಸ್ಯರ ಬಳಿ ಹೋಗಿ, ನೀವೇ ದೇವಸ್ಥಾನವನ್ನು ನಿರ್ಮಿಸಿ ಬೇರೆ ಯಾರಿಗೂ ವಹಿಸಬೇಡಿ ಎಂದು ಹೇಳಿ ನಾನು ಮಠಕ್ಕೆ ಬಂದೆ ಎಂದು ಹೇಳಿದ್ದಾರೆ.

    ನಾನು ಯಾವ ದೇವಾಸ್ಥಾನಕ್ಕೂ ಹೋದರು ಪ್ರಸಾದ ಸ್ವೀಕರಿಸುವುದಿಲ್ಲ. ನಾವೇ ಬೇರೆ ಮಾಡಿಕೊಳ್ಳುತ್ತೇವೆ. ಇಲ್ಲ ನಮಗೆ ಅಂತ ಬೇರೆ ಮನೆಯಲ್ಲಿ ಪ್ರಸಾದ ಮಾಡಿಸಿದ್ದರೆ ಅಲ್ಲಿ ಹೋಗಿ ತಿನ್ನುತ್ತೇವೆ. ಆದ್ದರಿಂದ ಅಂದಿನ ದಿನ ಕೂಡ ನಾನು ದೇವಾಲಯದಲ್ಲಿ ಪ್ರಸಾದ ತಿಂದಿಲ್ಲ. ದೇವಸ್ಥಾನಕ್ಕೆ ನಮಗೂ ಗುರು-ಶಿಷ್ಯರ ಸಂಬಂಧ ಇದ್ದಂತೆ. ನಾನು ಪೂಜೆಗೆ ಹೋಗಿ ವಾಪಸ್ ಮಠಕ್ಕೆ ಬಂದೆ ಎಂದು ಗುರುಸ್ವಾಮಿ ಸ್ಪಷ್ಟನೆ ಕೊಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ವಿಡಿಯೋ: ಗಲಾಟೆ ಮಾಡಬಾರದು? ಅಂದಿದ್ದು ಯಾರಿಗೆ ಚಾಲೆಂಜಿಂಗ್ ಸ್ಟಾರ್?

    ವಿಡಿಯೋ: ಗಲಾಟೆ ಮಾಡಬಾರದು? ಅಂದಿದ್ದು ಯಾರಿಗೆ ಚಾಲೆಂಜಿಂಗ್ ಸ್ಟಾರ್?

    ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಇಂದು ನಡೆದ ಶರಣ ಸಂಸ್ಕೃತಿ ಉತ್ಸವದ ಜಾಗೃತಿ ನಡಿಗೆಗೆ ರಾಕ್‍ಲೈನ್ ವೆಂಕಟೇಶ್ ಹಾಗೂ ದರ್ಶನ್ ಚಾಲನೆ ನೀಡಿದ್ದಾರೆ. ಮುರುಘಾಮಠದ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಸೌಹಾರ್ದ ನಡಿಗೆ ಪಾರಿವಾಳ ಹಾರಿಬಿಡುವ ಮೂಲಕ ಜಾಥಾಕ್ಕೆ ಚಾಲನೆ ನೀಡಿದ್ದಾರೆ.

    ಮುರುಘಾಮಠಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಗಮಿಸಿದರು. ದರ್ಶನ್ ಮಠಕ್ಕೆ ಬರುತ್ತಿದ್ದಂತೆ ಮಠದ ಆನೆ ಬಗ್ಗೆ ವಿಚಾರಿಸಿದ್ದಾರೆ. ಅಲ್ಲದೇ ಆನೆಯ ಆರೋಗ್ಯದ ಬಗ್ಗೆಯೂ ವಿಚಾರಿಸಿ ತಿಂಡಿ ಏನು ಕೊಟ್ಟಿದ್ದೀರಿ ಎಂದು ಮಾವುತರಿಗೆ ಕೇಳಿದ್ದಾರೆ. ಅಷ್ಟೇ ಅಲ್ಲದೇ ಆನೆಯ ದಂತವನ್ನು ಕೈಯಿಂದ ಮುಟ್ಟಿ ನೋಡಿ ಚೆನ್ನಾಗಿದೆ ಹೇಳಿದರು. ಈ ವೇಳೆ ದರ್ಶನ್ ಅಭಿಮಾನಿಯೊಬ್ಬರ ಮೇಲೆ ಗರಂ ಆದರು. ಗಲಾಟೆ ಮಾಡಬಾರದು ಆವಾಗಿನಿಂದ ನಿನ್ನದೇ ಗಲಾಟೆ ಎಂದು ಹೇಳಿ ಖಡಕ್ ವಾರ್ನಿಂಗ್ ಕೊಟ್ಟರು.

    ನಗರದ ಗಾಂಧಿ ವೃತ್ತದಿಂದ ಮುರುಘಾ ಮಠದವರೆಗೆ ಜಾಥಾ ಆರಂಭವಾಗಿದ್ದು, ದರ್ಶನ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಚಾಲನೆ ನೀಡಿದರು. ಸದ್ಯ ದರ್ಶನ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದು, ಅಭಿಮಾನಿಗಳನ್ನು ಚದುರಿಸಲು ಪೊಲೀಸರಿಂದ ಹರಸಾಹಸಪಟ್ಟರು. ದರ್ಶನ್ ಹಾಗೂ ರಾಕ್‍ಲೈನ್ ವೆಂಕಟೇಶ್ ಅವರಿಗೆ ಡಾ. ಶಿವಮೂರ್ತಿ ಮುರುಘಾ ಶರಣರು ಸಾಥ್ ನೀಡಿದ್ದಾರೆ.

    ಶರಣ ಸಂಸ್ಕೃತಿ ಉತ್ಸವದ ಜಾಗೃತಿ ನಡಿಗೆಗೆ ಚಾಲನೆ ನೀಡುವ ಮುನ್ನ ಮಾತನಾಡಿದ ರಾಕ್‍ಲೈನ್ ವೆಂಕಟೇಶ್ ಅವರು, ದಸರಾ ಆಚರಣೆ ಮಾಡಲು ಬಂದಿದ್ದೇವೆ, ದಸರಾ ಹಬ್ಬ ಮಾಡೋಣ. ಹಬ್ಬ ಆಚರಿಸಲು ನಮ್ಮನ್ನು ಮುರುಘಾ ಶರಣರು ಕರೆಸಿದ್ದಾರೆ. ಹೀಗಾಗಿ ಚಿತ್ರದ ಬಗ್ಗೆ ಮಾತನಾಡುವುದು ಬೇಡ ವೀರ ಮದಕರಿ ಚಿತ್ರದ ಬಗ್ಗೆ ಮಾತನಾಡಲು ಪ್ರತ್ಯೇಕ ವೇದಿಕೆ ಸೃಷ್ಟಿಸುತ್ತೇವೆ. ಈಗ ಚಿತ್ರದುರ್ಗ ಹಾಗು ಚಿತ್ರದ ಬಗ್ಗೆ ಮಾತನಾಡುವುದು ಸರಿಯಲ್ಲ ಅಂತಾ ತಿಳಿಸಿದ್ರು.

    ಇದೇ ವೇಳೆ ರಾಕ್‍ಲೈನ್ ವೆಂಕಟೇಶ್ ಅವರು ಮಾಧ್ಯಮಗಳ ಮುಂದೆ ಮಾತನಾಡದೇ ದರ್ಶನ್ ಅವರು ಕೂಡ ದಸರಾ ಹಬ್ಬದ ಶುಭಾಶಯ ತಿಳಿಸಿ ಅಲ್ಲಿಂದ ಹೊರಟು ಹೋದರು. ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ನಟರಾದ ದೊಡ್ಡಣ್ಣ, ಶ್ರೀನಿವಾಸ ಮೂರ್ತಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ- ಮಠದತ್ತ ಭಕ್ತರ ದಂಡು

    ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ- ಮಠದತ್ತ ಭಕ್ತರ ದಂಡು

    ಉಡುಪಿ: ನಾಡಿನಾದ್ಯಂತ ಕೃಷ್ಣ ಭಕ್ತರು ಸಂಭ್ರಮದಲ್ಲಿದ್ದಾರೆ. ಯಾಕಂದ್ರೆ ಇಂದು ಕೃಷ್ಣ ಜನ್ಮಾಷ್ಟಮಿ. ಎಲ್ಲೆಡೆ ಕೃಷ್ಣ ನಾಮ ಜಪ ನಡೆಯುತ್ತಿದೆ. ಕಡೆಗೋಲು ಕೃಷ್ಣನ ನಾಡು ಉಡುಪಿಯಲ್ಲಿ ಮುರಾರಿಯ ಆರಾಧನೆ ಶುರುವಾಗಿದೆ.

    ಕೃಷ್ಣನ ನಾಡು ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ ಶುರುವಾಗಿದೆ. ಮುಂಜಾನೆಯಿಂದಲೇ ಕೃಷ್ಣಮಠಕ್ಕೆ ಭಕ್ತರು ಭೇಟಿಕೊಟ್ಟು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಕೆ ಮಾಡುತ್ತಿದ್ದಾರೆ. ಕೃಷ್ಣಮಠವನ್ನು ಹೂವಿನಿಂದ ಅಲಂಕಾರ ಮಾಡಲಾಗಿದೆ. ಜಪ ತಪ, ಭಜನೆ ನಡೆಯುತ್ತಿದೆ. ಇಂದು ದಿನಪೂರ್ತಿ ಉಪವಾಸವಿರುವ ಕೃಷ್ಣಭಕ್ತರು, ರಾತ್ರಿ 11.45 ಕ್ಕೆ ಕೃಷ್ಣನಿಗೆ ಅಘ್ರ್ಯ ಸಲ್ಲಿಕೆ ಮಾಡುತ್ತಾರೆ. ಈ ಮೂಲಕ ಶ್ರೀಕೃಷ್ಣನ ಜನ್ಮವಾಗುತ್ತದೆ.

    ನಾಳೆ ಉಡುಪಿಯಲ್ಲಿ ಕೃಷ್ಣ ಲೀಲೋತ್ಸವ ಕಾರ್ಯಕ್ರಮ ನಡೆಯುತ್ತದೆ. ಬೆಳಗ್ಗೆಯಿಂದಲೇ ಅನ್ನದಾಸೋಹ ನಡೆಯುತ್ತದೆ. ಮಠಕ್ಕೆ ಬರುವ ಭಕ್ತರಿಗೆ ವಿತರಿಸಲು ಎರಡು ಲಕ್ಷ ಲಡ್ಡು, 1 ಲಕ್ಷ ಚಕ್ಕುಲಿ ಪಾಕಶಾಲೆಯಲ್ಲಿ ಸಿದ್ಧಗೊಂಡಿದೆ. ಉಡುಪಿಯ ಸುತ್ತಮುತ್ತಲ ಶಾಲೆಗಳಿಗೆ ವಿತರಿಸಲು ಪ್ರಸಾದ ರೆಡಿಯಾಗಿದೆ.

    ಕೃಷ್ಣಭಕ್ತ ರಜನಿಕಾಂತ್ ತಂತ್ರಿ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಇಂದು ಕೃಷ್ಣನ ದರ್ಶನ ಮಾಡುವುದು ಪುಣ್ಯದ ಕೆಲಸ. ಅಷ್ಟಮಿಯ ದಿನ ತಪ್ಪದೆ ಎಲ್ಲಿದ್ದರು ಉಡುಪಿ ಮಠಕ್ಕೆ ಬಂದು ದೇವರ ದರ್ಶನದ ಮಾಡುತ್ತೇನೆ. ಈ ಬಾರಿ ಸರಳವಾಗಿ ಹಬ್ಬ ಆಚರಿಸಲು ಸ್ವಾಮೀಜಿ ಕರೆ ನೀಡಿದ್ದಾರೆ. ಇದೊಂದು ಉತ್ತಮ ನಡೆ ಎಂದು ಶ್ಲಾಘಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv