Tag: mutt

  • ಸುರ್ದೀಘ 3 ಗಂಟೆಗಳ ಕಾಲ ವಿನಯ್ ಗುರೂಜಿ ಜೊತೆ ಬಿಎಸ್‍ವೈ ಮಾತುಕತೆ

    ಸುರ್ದೀಘ 3 ಗಂಟೆಗಳ ಕಾಲ ವಿನಯ್ ಗುರೂಜಿ ಜೊತೆ ಬಿಎಸ್‍ವೈ ಮಾತುಕತೆ

    ಚಿಕ್ಕಮಗಳೂರು: ನಡೆದಾಡುವ ದೈವ ಎಂದೇ ಖ್ಯಾತಿಯಾಗಿರುವ ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಸ್ವರ್ಣ ಪೀಠಿಕೇಶ್ವರಿ ಮಠದ ಅವಧೂತ ವಿನಯ್ ಗುರೂಜಿಯವರನ್ನ ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

    ಇಂದು ಬೆಳಗ್ಗೆ ಸುಮಾರು 10.30ಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಬೈಂದೂರು ಶಾಸಕ ಪ್ರಭಾಕರ್ ಶೆಟ್ಟಿ ಜೊತೆ ಯಡಿಯೂರಪ್ಪ ಆಗಮಿಸಿದ್ದಾರೆ. ಬಳಿಕ ಮಠದ ಒಳಗೆ ಹೋಗಿ ಸುಮಾರು 12.30ರ ತನಕ ಮೂರು ಗಂಟೆಗಳ ಕಾಲ ಮೂವರು ಸುರ್ದೀಘವಾಗಿ ಮಾತುಕತೆಯನ್ನು ನಡೆಸಿದ್ದಾರೆ. ನಂತರ ಅವರ ಆಶೀರ್ವಾದ ಪಡೆದುಕೊಂಡು ಹೋಗಿದ್ದಾರೆ. ಆದರೆ ಯಾವುದರ ಬಗ್ಗೆ ಮಾತನಾಡಿದ್ದಾರೆ ಎಂಬುದರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.

    ವಿನಯ್ ಗುರೂಜಿ ನಡೆದಾಡುವ ದೈವ ಎಂದೇ ಖ್ಯಾತಿಯಾಗಿದ್ದು, ಇತ್ತೀಚೆಗೆ ರಾಜಕಾರಣಿಗಳ ಭೇಟಿಯಿಂದ ಗುರೂಜಿ ಸಾಕಷ್ಟು ಸುದ್ದಿಯಾಗಿದ್ದರು. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಗುರೂಜಿಯ ಪಾದಪೂಜೆ ನಡೆಸಿದ್ದರು. ಅಷ್ಟೇ ಅಲ್ಲದೇ ಸ್ಪೀಕರ್ ರಮೇಶ್ ಕುಮಾರ್ ಗುರೂಜಿಗೆ ಆರತಿ ಬೆಳಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಂದಿರ, ಆಶ್ರಮ, ಮಠಗಳ ಲೆಕ್ಕಾಚಾರದಲ್ಲಿ ಬಿಜೆಪಿ- 29 ಲಕ್ಷ ಕಾರ್ಯಕರ್ತರ ಟೀಂ ರೆಡಿ

    ಮಂದಿರ, ಆಶ್ರಮ, ಮಠಗಳ ಲೆಕ್ಕಾಚಾರದಲ್ಲಿ ಬಿಜೆಪಿ- 29 ಲಕ್ಷ ಕಾರ್ಯಕರ್ತರ ಟೀಂ ರೆಡಿ

    ನವದೆಹಲಿ: ಲೋಕಸಭಾ ಚುನಾವಣೆಗೆ ಪಕ್ಷಗಳು ಸಜ್ಜಾಗುತ್ತಿದ್ದು, ಗೆಲುವು ಸಾಧಿಸುವುದು ಹೇಗೆ ಎಂಬುದರ ಬಗ್ಗೆ ರಾಜಕೀಯ ತಂತ್ರಗಳನ್ನು ರೂಪಿಸುತ್ತಿವೆ. ಕಾಂಗ್ರೆಸ್ ಹೈಕಮಾಂಡ್ ಸಹ ಸಭೆಯ ಮೇಲೆ ಸಭೆಗಳನ್ನು ನಡೆಸುತ್ತಿದ್ದರೆ, ಇತ್ತ ಬಿಜೆಪಿ ದೇಶದಲ್ಲಿಯ ಮಂದಿರ, ಮಠ, ಆಶ್ರಮಗಳಿಗೆ ಸಂಬಂಧಪಟ್ಟ ಅಂಕಿ ಅಂಶಗಳನ್ನು ಸಂಗ್ರಹಿಸುತ್ತಿದೆ ಎಂದು ವರದಿಯಾಗಿದೆ.

    2019ರ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವ ಉದ್ದೇಶದಿಂದ ಸಕಲ ತಯಾರಿಗಳನ್ನು ಮಾಡಿಕೊಳ್ಳಲು ಬಿಜೆಪಿ ಕಚೇರಿಯಲ್ಲಿ ಸಭೆಗಳು ನಡೆಯುತ್ತಿವೆ. ಹಿಂದೂ ವೋಟ್ ಗಳನ್ನು ಕೇಂದ್ರೀಕರಿಸಿರುವ ಬಿಜೆಪಿ ಚುನಾವಣೆ ಸಮಯದಲ್ಲಿ ಮತಗಳ ವಿಭಜನೆಗೊಳ್ಳದಂತೆ ಎಚ್ಚರಿಕೆ ವಹಿಸುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಕೇಂದ್ರ ಕಚೇರಿಯಲ್ಲಿ ಇದೇ ತಿಂಗಳು ಸಭೆ ನಡೆಯಲಿವೆ ಎನ್ನಲಾಗುತ್ತಿದೆ. ಸಭೆಗೂ ಮುನ್ನ ಬಿಜೆಪಿ ನಾಯಕರು ತಮ್ಮ ರಾಜ್ಯದಲ್ಲಿ ಬರುವ ಪ್ರಸಿದ್ಧ ಮಠ, ದೇವಾಲಯ, ಆಶ್ರಮ ಸೇರಿದಂತೆ ಇತರೆ ಧಾರ್ಮಿಕ ಕೇಂದ್ರಗಳ ಅಂಕಿ ಅಂಶಗಳನ್ನು ಸಂಗ್ರಹಿಸುತ್ತಿದೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.

    ರಣತಂತ್ರವೇನು?:
    ಎಲ್ಲ ಧಾರ್ಮಿಕ ಕೇಂದ್ರಗಳ ಅಂಕಿ ಅಂಶಗಳು ದೊರೆತ ಮೇಲೆ ಸ್ಥಳಕ್ಕನುಗುಣವಾಗಿ ವಿಭಾಗಿಸುವುದು. ಬೂತ್ ಗಳಿಗೆ ಅನುಗುಣವಾಗಿ ಧಾರ್ಮಿಕ ಕೇಂದ್ರಗಳ ವಿಂಗಡನೆ ಬಳಿಕ ಅಲ್ಲಿಯ ಅರ್ಚಕ ಅಥವಾ ಪ್ರಧಾನ ವ್ಯವಸ್ಥಾಪಕ ಅಥವಾ ಆಡಳಿತ ಮಂಡಳಿ ಮುಖಂಡರ ಫೋನ್ ನಂಬರ್ ಕಲೆ ಹಾಕುವುದು. ಎಲ್ಲ ಧಾರ್ಮಿಕ ಕೇಂದ್ರಗಳ ಪ್ರಮುಖರ ಫೋನ್ ನಂಬರ್ ಸಂಗ್ರಹಿಸಿದ ಬಳಿಕ ಎಲ್ಲರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರಲು ಬಿಜೆಪಿ ಈಗಾಗಲೇ 29 ಲಕ್ಷ ಕಾರ್ಯಕರ್ತರನ್ನ ನೇಮಿಸಿದೆ. ಈ ಎಲ್ಲ ಕಾರ್ಯಕರ್ತರು ತಮ್ಮ ವ್ಯಾಪ್ತಿಗೆ ಒಳಪಡುವ ಧಾರ್ಮಿಕ ಕೇಂದ್ರಗಳ ಪ್ರಮುಖರೊಂದಿಗೆ ಸಂಪರ್ಕದಲ್ಲಿರುತ್ತಾರೆ. ಇದೇ ಆಗಸ್ಟ್ 16ರಿಂದ 25ರವರೆಗೆ ಹಂತ ಹಂತವಾಗಿ ಎಲ್ಲ ಕಾರ್ಯಕರ್ತರೊಂದಿಗೆ ಬಿಜೆಪಿ ಹಿರಿಯ ನಾಯಕರು ಬೈಟಕ್ (ಸಭೆ) ನಡೆಸಲಿದ್ದಾರೆ ಎಂದು ಹೇಳಲಾಗಿದೆ.

    ಈ ಬೈಟಕ್ ನಲ್ಲಿ ಎಲ್ಲ ಕಾರ್ಯಕರ್ತರು ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದರ ಬಗ್ಗೆ ಮಾಹಿತಿ ನೀಡಲಾಗುವುದು. ಎಲ್ಲ ಕಾರ್ಯಕರ್ತರನ್ನು ಬೂತ್ ಮಟ್ಟ, ತಾಲೂಕು, ಜಿಲ್ಲಾವಾರು ರೀತಿಯಲ್ಲಿ ವಿಂಗಡಿಸಲಾಗುತ್ತದೆ. ಹೀಗೆ ವಿಂಗಡನೆಯಾದ ತಂಡಗಳಿಗೆ ಪಕ್ಷವೇ ವಿವಿಧ ಕೋಡ್‍ಗಳನ್ನು ನೀಡಲಿದೆ. ಕೋಡ್ ಗಳಿಗೆ ಕಾರ್ಯಕರ್ತರು ತಮ್ಮ ಪಕ್ಷದ ಪರವಾಗಿ ಪ್ರಚಾರ ಕೈಗೊಳ್ಳಲಿದ್ದಾರೆ.

  • ಶಿರೂರು ಮೂಲ ಮಠದಲ್ಲಿ ನೈವೇದ್ಯ ಪೂಜೆ ಆರಂಭ!

    ಶಿರೂರು ಮೂಲ ಮಠದಲ್ಲಿ ನೈವೇದ್ಯ ಪೂಜೆ ಆರಂಭ!

    ಉಡುಪಿ: ಜಿಲ್ಲೆಯ ಶಿರೂರು ಮೂಲ ಮಠದಲ್ಲಿ ನೈವೇದ್ಯ ಪೂಜೆ ಆರಂಭವಾಗಿದೆ. ಶಿರೂರು ಲಕ್ಷ್ಮೀವರ ತೀರ್ಥಶೀಗಳು ವೃಂದಾವನಸ್ಥರಾದ ಹಿನ್ನೆಲೆಯಲ್ಲಿ ಎಲ್ಲಾ ಪೂಜಾ ಕೈಂಕರ್ಯಗಳನ್ನು ನಿಲ್ಲಿಸಲಾಗಿತ್ತು.

    ಹಿರಿಯಡ್ಕ ಸಮೀಪದ ಮೂಲ ಮಠದಲ್ಲಿ ಇಂದಿನಿಂದ ದೈನಂದಿನ ಪೂಜೆ ಆರಂಭವಾಗಿದೆ. ಮುಖ್ಯ ಪ್ರಾಣ ಮತ್ತು ಮೂಲ ದೇವರಿಗೆ ನೈವೇದ್ಯ ಇಟ್ಟು ಪೂಜೆ ಮಾಡಲಾಗಿದೆ. ಸ್ಚಾಮೀಜಿ ಇದ್ದಾಗ ಪ್ರತಿದಿನ 4 ಸೇರು ಅಕ್ಕಿಯ ನೈವೇದ್ಯ ದೇವರಿಗೆ ಅರ್ಪಣೆಯಾಗುತ್ತಿತ್ತು. ಮೂರು ಹೊತ್ತು ಪೂಜೆ ನಡೆಯುತ್ತಿತ್ತು.

    ಸ್ವಾಮೀಜಿಯ ಸಾವಿನ ನಂತರ ಕಳೆದ 7 ದಿನಗಳ ಕಾಲ ಕೇವಲ ಆರತಿಯನ್ನು ಎತ್ತಿ ದೇವರಿಗೆ ಪೂಜೆ ಆಗುತ್ತಿತ್ತು. ದೇವರಿಗೆ ನೈವೇದ್ಯ ಸಹಿತ ಎಲ್ಲಾ ಪೂಜೆಗಳು ಇಂದಿನಿಂದ ಶುರುವಾಗಿದೆ. ಆದರೆ ಶಿರೂರು ಮೂಲ ಮಠದ ಅರ್ಚಕರು, ಮಠದ ಸಿಬ್ಬಂದಿಗಳಿಗೆ ಮಾತ್ರ ಮಠದೊಳಗೆ ಪ್ರವೇಶ ನೀಡಲಾಗಿದೆ.

    ಮೂಲ ಮಠದ ಸುತ್ತಲೂ ಪೊಲೀಸ್ ಭದ್ರತೆಯಿದೆ. ಉಡುಪಿಯಲ್ಲಿರುವ ಶಿರೂರು ಮಠದಲ್ಲೂ ನೈವೇದ್ಯ ಸಹಿತ ಪೂಜೆ ಇಂದಿನಿಂದ ಶುರುವಾಗಿದೆ.

  • ಕೃಷ್ಣ ಮಠದ ಆರು ಮಠಾಧೀಶರಿಗೆ ಬಿಗ್ ರಿಲೀಫ್

    ಕೃಷ್ಣ ಮಠದ ಆರು ಮಠಾಧೀಶರಿಗೆ ಬಿಗ್ ರಿಲೀಫ್

    ಉಡುಪಿ: ಶಿರೂರು ಲಕ್ಷ್ಮೀವರ ತೀರ್ಥರು ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಹಾಕಿದ್ದ ಕೇವಿಯಟ್ ಅನೂರ್ಜಿತವಾಗಿದೆ. ಈ ಮೂಲಕ ಏಳು ಮಠದ ಯತಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ.

    ಉಡುಪಿ ಕೃಷ್ಣಮಠದ ಗರ್ಭಗುಡಿಯಲ್ಲಿರುವ ಪಟ್ಟದ ದೇವರನ್ನು ವಾಪಾಸ್ ಕೊಡಿಸಬೇಕು, ನನ್ನ ವಾದವನ್ನೂ ಕೋರ್ಟ್ ಆಲಿಸಬೇಕು ಅಂತ ಸಲ್ಲಿಸಿದ್ದ ಕೇವಿಯಟ್ ಅರ್ಜಿ ಬಿದ್ದು ಹೋಗಿದೆ. ಜುಲೈ 4 ರಂದು ಉಡುಪಿ ಸಿವಿಲ್ ನ್ಯಾಯಾಲಯದಲ್ಲಿ ಕೇವಿಯಟ್ ಅರ್ಜಿ ಸಲ್ಲಿಕೆಯಾಗಿತ್ತು. ಜುಲೈ 19 ರಂದು ಸ್ವಾಮೀಜಿ ನಿಧನ ಹಿನ್ನೆಲೆಯಲ್ಲಿ ಕೇವಿಯಟ್ ಅನೂರ್ಜಿತವಾಗಿದೆ.

    ಕೇವಿಯಟ್‍ಗೆ 90 ದಿನಗಳ ಕಾಲಾವಕಾಶ ಇರುತ್ತದೆ. ಕೇವಿಯಟ್ ಸಲ್ಲಿಸಿದವರು ಮರಣ ಹೊಂದಿದರೆ ಅದು ಅನೂರ್ಜಿತವಾಗುತ್ತದೆ ಎಂಬುದು ಕಾನೂನು. ಶಿಷ್ಯ ಸ್ವೀಕಾರಕ್ಕಾಗಿ ಯಾರೂ ಒತ್ತಾಯ ಮಾಡುವಂತಿಲ್ಲ. ಉಳಿದ ಏಳು ಮಠಾಧೀಶರು ಕೋರ್ಟ್ ಮೆಟ್ಟಿಲೇರಿದರೆ ಆ ಸಂದರ್ಭ ನನ್ನ ವಾದವನ್ನೂ ಕೇಳಬೇಕು ಎಂದು ನಮೂದಿಸಲಾಗಿತ್ತು.

    ಪಟ್ಟದ ದೇವರನ್ನು ವಾಪಾಸ್ ಕೊಡದಿದ್ದರೆ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಶಿರೂರು ಸ್ವಾಮೀಜಿ ಹೇಳಿದ್ದರು. ಇತರೆ ಆರು ಮಠಾಧೀಶರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಲು ಶಿರೂರು ಶ್ರೀ ಸಜ್ಜಾಗಿದ್ದರು. ಆದರೆ ಕಳೆದ ಗುರುವಾರ ಸ್ವಾಮೀಜಿ ನಿಗೂಢವಾಗಿ ಸಾವನ್ನಪ್ಪಿದ್ದರು. ಸದ್ಯ ಪಟ್ಟದ ದೇವರ ವಿಗ್ರಹ ಈಗ ಕೃಷ್ಣಮಠದಲ್ಲಿದ್ದು, ಪರ್ಯಾಯ ಸ್ವಾಮೀಜಿ ದಿನಂಪ್ರತಿ ಪೂಜೆ ಮಾಡುತ್ತಿದ್ದಾರೆ.

  • ಉಡುಪಿ ರಥಬೀದಿ ಸ್ತಬ್ಧ: ಶಾಲಾ-ಕಾಲೇಜು, ಅಂಗಡಿ ಮುಂಗಟ್ಟು ಬಂದ್

    ಉಡುಪಿ ರಥಬೀದಿ ಸ್ತಬ್ಧ: ಶಾಲಾ-ಕಾಲೇಜು, ಅಂಗಡಿ ಮುಂಗಟ್ಟು ಬಂದ್

    ಉಡುಪಿ: ಶಿರೂರು ಮಠಾಧೀಶ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ವಿಧಿವಶರಾದ ಹಿನ್ನೆಲೆಯಲ್ಲಿ ಇಂದು ಉಡುಪಿಯ ರಥಬೀದಿ ಸ್ತಬ್ಧವಾಗಿದೆ.

    ನಗರದ ಎಲ್ಲ ಶಾಲಾ- ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದ್ದು, ಶಾಲಾ-ಕಾಲೇಜು ಸೇರಿದಂತೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಶಿರೂರು ಸ್ವಾಮೀಜಿಗಾಗಿ ಶೋಕಾಚರಣೆ ಮಾಡುತ್ತಿದ್ದಾರೆ.

    ಗೌರವಾರ್ಥವಾಗಿ ವ್ಯಾಪಾರ ವಹಿವಾಟು ಬಂದ್ ಮಾಡಿದ್ದಾರೆ. ಈ ಮೂಲಕ ಶಿರೂರು ಸ್ವಾಮೀಜಿಗಳ ಅಸಹಜ ಸಾವಿಗೆ ಉಡುಪಿ ಜನತೆ ಕಂಬನಿ ಮಿಡಿಯುತ್ತಿದ್ದಾರೆ. ಈಗಾಗಲೇ ಮಠದ ಮುಂದೆ ಅಪಾರ ಭಕ್ತರು ನೆರೆದಿದ್ದಾರೆ.

    ಶ್ರೀಗಳ ಅಂತ್ಯ ಸಂಸ್ಕಾರಕ್ಕೆ ಹತ್ತಿಯ ಬುಟ್ಟಿ ಸಿದ್ಧತೆ ಮಾಡಲಾಗುತ್ತಿದೆ. ಇದಕ್ಕಾಗಿ ಸಾಂಪ್ರದಾಯಿಕ ಬುಟ್ಟಿ ತಂದಿದ್ದು, ಭಕ್ತರು ಹತ್ತಿಯನ್ನು ಬುಟ್ಟಿಯಲ್ಲಿ ಹಾಕುತ್ತಿದ್ದಾರೆ. ಬಳಿಕ ಮಠದ ಭಕ್ತರು ಬುಟ್ಟಿಯಲ್ಲಿ ಮೃತ ಶರೀರ ಹೊರಲಿದ್ದಾರೆ. ಇಂದು ಸಂಜೆ ಸ್ವಾಮೀಜಿಗಳ ಅಂತ್ಯಕ್ರಿಯೆ ನೇರವೇರಲಿದೆ.

    ಉಡುಪಿ ಮಠದ ಸಂಪ್ರದಾಯದಂತೆ ಸಂಸ್ಕಾರ ಮಾಡಲಾಗುತ್ತಿದೆ. ಆದ್ದರಿಂದ ಶ್ರೀಗಳ ಶರೀರವನ್ನು ಮೊದಲು ಕೃಷ್ಣಮಠಕ್ಕೆ ಕೊಂಡೊಯ್ಯಲಾಗುತ್ತದೆ. ಬಳಿಕ ಮಠದ ಮಧ್ವ ಸರೋವರದಲ್ಲಿ ಸ್ನಾನ ಮಾಡಿಸಿ ಶ್ರೀ ಕೃಷ್ಣ ದೇವರ ದರ್ಶನವನ್ನು ಮಾಡಿಸಲಾಗುತ್ತದೆ.

    ನಂತರ ಶಿರೂರು ಸ್ವಾಮೀಜಿಯ ಮೂಲಮಠವಾದ ಕಾಪುವಿನ ಹಿರಿಯಡ್ಕದಕ್ಕೆ ಮೃತದೇವನ್ನು ಕೊಂಡೊಯ್ದು ಮಣ್ಣಿನಡಿ ಹೂಳುವ ಮೂಲಕ ಸಂಸ್ಕಾರ ಮಾಡಲಾಗುತ್ತದೆ. ಅಂತ್ಯ ಸಂಸ್ಕಾರ ಮಾಡುವಾಗ ಪೂಜಾ ಸಾಮಾಗ್ರಿಗಳನ್ನು ಅವರ ಶರೀರದ ಜೊತೆ ಇರಿಸಿ ಬೃಂದಾವನ ನಿರ್ಮಿಸಲಾಗುತ್ತದೆ. ಜೊತೆಗೆ ಉಪ್ಪು, ಹತ್ತಿ, ಕಾಳುಮೆಣಸು ಮತ್ತು ಕರ್ಪೂರಗಳನ್ನು ತುಂಬಿಸಿ ಸಮಾಧಿ ಮಾಡಲಾಗುತ್ತದೆ.

    55 ವರ್ಷದ ಶಿರೂರು ಸ್ವಾಮೀಜಿಗಳಿಗೆ ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಬುಧವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಬೆಳಗ್ಗೆ 8.30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.

  • “ಬಾರ್ ಹಠಾವ್, ಮಠ ಬಚಾವ್”- ತೋಂಟದಾರ್ಯ ಶ್ರೀ ಗಳಿಂದ ಜಾಥಾ

    “ಬಾರ್ ಹಠಾವ್, ಮಠ ಬಚಾವ್”- ತೋಂಟದಾರ್ಯ ಶ್ರೀ ಗಳಿಂದ ಜಾಥಾ

    ಗದಗ : ಧಾರ್ಮಿಕ ಕೇಂದ್ರಗಳ ಸುತ್ತಮುತ್ತಲಿನ ಬಾರ್ ಮತ್ತು ರೆಸ್ಟೋರೆಂಟ್‍ ಗಳನ್ನ ತೆರವುಗೊಳಿಸುವಂತೆ ತೋಂಟದಾರ್ಯ ಶ್ರೀಗಳ ನೇತೃತ್ವದಲ್ಲಿ ಜಾಥಾ ನಡೆಸಲಾಗಿದೆ.

    ಮಠದ ಆವರಣದಿಂದ ಆರಂಭವಾದ ಜಾತ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆಯಿತು. ಜಾಥಾ ವೇಳೆ ಮಾತನಾಡಿದ ಶ್ರೀಗಳು ಮಠ ಹಾಗೂ ಧಾರ್ಮಿಕ ಕೇಂದ್ರಗಳ ಸುತ್ತ-ಮುತ್ತ ಬಾರ್ ಮತ್ತು ರೆಸ್ಟೋರೆಂಟ್‍ ಗಳನ್ನ ತೆರವುಗೊಳಿಸುವಂತೆ ಆಗ್ರಹಿಸಿದರು.

    ತೋಂಟದಾರ್ಯ ಮಠದ ಡಾ. ಸಿದ್ದಲಿಂಗ ಮಹಾಸ್ವಾಮಿಗಳ ಜಾಥಾ ನೇತೃತ್ವ ವಹಿಸಿದ್ದರು. ಈ ವೇಳೆ “ಬಾರ್ ಹಠಾವ್, ಮಠ ಬಚಾವ್” ಎಂಬ ಪ್ರತಿಭಟನೆ ಘೋಷಣೆಯನ್ನು ಮಾಡಲಾಯಿತು. ಜಾಥಾ ಮೆರವಣಿಗೆಯಲ್ಲಿ ನಗರದ ತಿರಂಗಾ ಯುವಮೋರ್ಚಾ ಘಟಕ ಕಾರ್ಯಕರ್ತರು ಸೇರಿದಂತೆ ಹಲವು ಭಾಗವಹಿಸಿದ್ದರು.

    ತೋಂಟದಾರ್ಯ ಮಠದ ಸುತ್ತ-ಮುತ್ತ ಸುಮಾರು 6 ಮದ್ಯದ ಅಂಗಡಿಗಳಿದ್ದು ಮಠಕ್ಕೆ ಬರುವ ಭಕ್ತರಿಗೆ, ಮಹಿಳೆಯರಿಗೆ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಪತ್ರಿಭಟನಾಕಾರರು, ಮದ್ಯವೆಸನಿಗಳ ವರ್ತನೆಗೆ ಬೇಸತ್ತು ಸ್ವಾಮಿಜಿಗಳು, ಸಂಘಟಿಕರು, ಸಾರ್ವಜನಿಕರರು, ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

    ಮಠದ ಸುತ್ತಲಿನ ಸುಮಾರು 200 ಮೀಟರ್ ಒಳಗಿರುವ ಮದ್ಯದ ಅಂಗಡಿಗಳನ್ನ ಸ್ಥಳಾಂತರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಮದ್ಯ ವ್ಯಾಪಾರಿಗಳು ಹಾಗೂ ಅಧಿಕಾರಿಗಳ ಒಳ ಒಪ್ಪಂದಿಂದ ಬಾರ್ ತೆರವಿಗೆ ಮುಂದಾಗುತ್ತಿಲ್ಲ ಎಂಬ ಗಂಭೀರ ಆರೋಪವನ್ನು ತೋಂಟದ ಶ್ರೀಗಳು ಮಾಡಿದ್ದಾರೆ.

  • ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿರುವ ರಾಹುಲ್- ಶ್ರೀಗಳ ಜೊತೆ ಪ್ರತ್ಯೇಕ ಧರ್ಮದ ಬಗ್ಗೆ ಚರ್ಚೆ?

    ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿರುವ ರಾಹುಲ್- ಶ್ರೀಗಳ ಜೊತೆ ಪ್ರತ್ಯೇಕ ಧರ್ಮದ ಬಗ್ಗೆ ಚರ್ಚೆ?

    ದಾವಣಗೆರೆ/ ತುಮಕೂರು: ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜ್ಯಕ್ಕೆ ಭೇಟಿ ನೀಡಿರೋ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ದಾವಣಗೆರೆ ಹಾಗೂ ತುಮಕೂರು ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ.

    ದಾವಣಗೆರೆ ಬಾಪೂಜಿ ಗೆಸ್ಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಿದ್ದ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ, ಬೆಳಗ್ಗೆ 4 ಜಿಲ್ಲೆಗಳ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಕಾಂಗ್ರೆಸ್ ಪದಾಧಿಕಾರಿಗಳ ಸಭೆ ನಡೆಸುತ್ತಿದ್ದಾರೆ. ನಂತರ ಅಸಂಘಟಿತ ಕಾರ್ಮಿಕರ ಜೊತೆ ಸಂವಾದ ಏರ್ಪಡಿಸಲಾಗಿದ್ದು, ತದನಂತರ ಕಾರ್ಮಿಕ ಸಮಸ್ಯೆಗಳ ಬಗ್ಗೆ ಕುರಿತು ಚರ್ಚೆ ನಡೆಸಲಿದ್ದಾರೆ.

    10.30ಕ್ಕೆ ದಾವಣಗೆರೆ ಬಿಐಇಟಿ ಕಾಲೇಜ್ ಸಭಾಂಗಣದಲ್ಲಿ ವರ್ತಕರು ವ್ಯಾಪಾರಿಗಳ ಜೊತೆ ಜಿ ಎಸ್ ಟಿ, ನೋಟ್ ಬ್ಯಾನ್ ಎಫೆಕ್ಟ್ ಕುರಿತ ಸಂವಾದ ಕಾರ್ಯಕ್ರಮವಿದ್ದು, ನಂತರ 11 ಕ್ಕೆ ಹೊಳೆಲ್ಕೆರೆ ಪಯಣ, ಸಮಾಜ ಕಲ್ಯಾಣ ಸಚಿವ ಹೆಚ್ ಆಂಜನೇಯ ಕ್ಷೇತ್ರದಲ್ಲಿ ರಾಹುಲ್ ಸಂಚಾರ ಮಾಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

    ಮಧ್ಯಾಹ್ನ 2.30 ಕ್ಕೆ ತುಮಕೂರು ವಿಶ್ವವಿದ್ಯಾಲಯದ ಹೆಲಿಪ್ಯಾಡ್‍ಗೆ ಬಂದು ಇಳಿಯಲಿದ್ದಾರೆ. ಅಲ್ಲಿಂದ ನೇರವಾಗಿ ರಸ್ತೆ ಮಾರ್ಗದ ಮೂಲಕ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟು ಶಿವಕುಮಾರ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ಸುಮಾರು ಅರ್ಧಗಂಟೆಗಳ ಕಾಲ ಶ್ರೀಗಳೊಂದಿಗೆ ಕುಶಲೋಪರಿ ನಡೆಸಲಿದ್ದಾರೆ. ಬಳಿಕ ಕ್ಯಾತಸಂದ್ರ ಸರ್ಕಲ್ ನಲ್ಲಿ ಸಾರ್ವಜನಿರನ್ನು ಉದ್ದೇಶಿಸಿ ಐದು ನಿಮಿಷಗಳ ಕಾಲ ಮಾತನಾಡಲಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

    ಅಲ್ಲಿಂದ ನೇರವಾಗಿ ಬಿಎಚ್ ರಸ್ತೆ ಮಾರ್ಗವಾಗಿ ವಿಶೇಷ ಬಸ್ ಮೂಲಕ ರೋಡ್ ಶೋ ಸಾಗಿ ಟೌನ್ ಹಾಲ್ ಸರ್ಕಲ್ ನಲ್ಲಿ 10 ನಿಮಿಷ ಭಾಷಣ ಮಾಡಲಿದ್ದಾರೆ. ನಂತರ ಕುಣಿಗಲ್‍ನತ್ತ ಪ್ರಯಾಣ ಬೆಳೆಸಲಿದ್ದಾರೆ. ದಾರಿ ಮಧ್ಯೆ ಗೂಳುರು, ನಾಗವಲ್ಲಿ ಹೆಬ್ಬೂರು ಕುಣಿಗಲ್‍ನಲ್ಲಿ ನಿಂತು ಐದೈದು ನಿಮಿಷ ಭಾಷಣ ಮಾಡಲಿದ್ದಾರೆ, ಬಳಿಕ ಕುಣಿಗಲ್ ಮೂಲಕ ಮಾಗಡಿಯತ್ತ ಹೊರಡಲಿದ್ದಾರೆ ಎನ್ನಲಾಗಿದೆ.

  • ಕಾಂಗ್ರೆಸ್ ಅಭ್ಯರ್ಥಿಗಳಿಲ್ಲದ 3 ಕ್ಷೇತ್ರದಲ್ಲಿಂದು ರಾಹುಲ್ ಪ್ರವಾಸ

    ಕಾಂಗ್ರೆಸ್ ಅಭ್ಯರ್ಥಿಗಳಿಲ್ಲದ 3 ಕ್ಷೇತ್ರದಲ್ಲಿಂದು ರಾಹುಲ್ ಪ್ರವಾಸ

    ಮಂಡ್ಯ: ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜ್ಯ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಮಂಡ್ಯದಲ್ಲಿ ತಮ್ಮ ಪ್ರವಾಸ ಕೈಗೊಳ್ಳಲಿದ್ದಾರೆ.

    ವಿಶೇಷ ಅಂದ್ರೆ ರಾಹುಲ್ ಇಂದು ಪ್ರವಾಸ ಮಾಡುತ್ತಿರುವ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಲ್ಲ. ಶನಿವಾರವಷ್ಟೇ ಹಳೆ ಮೈಸೂರು ಭಾಗದ ಪ್ರವಾಸದಲ್ಲಿದ್ದ ರಾಹುಲ್ ಗಾಂಧಿ, ಈ ಭಾಗದ ಪ್ರಬಲ ಮಠಗಳಿಗೆ ಭೇಟಿ ನೀಡದೇ ಅಂತರ ಕಾಯ್ದುಕೊಂಡಿರುವುದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಇದನ್ನೂ ಓದಿ: ರಾಹುಲ್‍ಗೆ ಎನ್‍ಸಿಸಿ ಟ್ರೈನಿಂಗ್ ಬಗ್ಗೆ ಗೊತ್ತೇ ಇಲ್ಲ-ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆದ ರಾಗಾ

    ಮೈಸೂರಿಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ, ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದಿದ್ರು. ಆದ್ರೆ ಲಿಂಗಾಯತ ಸಮುದಾಯದ ಸುತ್ತೂರು ಮಠದತ್ತ ಸುಳಿಯಲಿಲ್ಲ.

    ಇಂದು ಜೆಡಿಎಸ್ ಭದ್ರಕೋಟೆ ಮಂಡ್ಯಕ್ಕೆ ಭೇಟಿ ನೀಡಲಿರುವ ರಾಹುಲ್ ಗಾಂಧಿ, ಒಕ್ಕಲಿಗರ ಆದಿಚುಂಚನಗಿರಿ ಮಠಕ್ಕೂ ಭೇಟಿ ನೀಡದಿರಲು ನಿರ್ಧರಿಸಿದ್ದಾರೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಹೆಲಿಕಾಪ್ಟರ್ ಮೂಲಕ ಕೆಆರ್ ಪೇಟೆಗೆ ಆಗಮಿಸಲಿರುವ ರಾಹುಲ್, ಬಸ್ ನಿಲ್ದಾಣದ ಬಳಿ ಚಿಕ್ಕ ವೇದಿಕೆಯಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದನ್ನೂ ಓದಿ: ಕನ್ನಡದಲ್ಲಿ ಪ್ರಶ್ನೆ ಕೇಳಿದ ವಿದ್ಯಾರ್ಥಿನಿಗೆ ರಾಹುಲ್ ಗಾಂಧಿ ಹೀಗಂದ್ರು

    ಕೆಆರ್ ಪೇಟೆಯಲ್ಲಿಯೇ ಮಧ್ಯಾಹ್ನದ ಊಟ ಮಾಡಲಿದ್ದಾರೆ. ನಂತರ ಬಸ್ ಮೂಲಕ ಪಾಂಡವಪುರ ಮತ್ತು ಶ್ರೀರಂಗಪಟ್ಟಣಕ್ಕೆ ತೆರಳಿ ರೈತರು, ಸಾರ್ವಜನಿಕರೊಂದಿಗೆ ಕಾರ್ನರ್ ಸಭೆ ನಡೆಸಲಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಬಂಡಾಯ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ರಾಹುಲ್ ಗಾಂಧಿಯವರನ್ನು ಸ್ವಾಗತಿಸಲಿದ್ದಾರೆ. ಸಂಜೆ 5 ಗಂಟೆ ಸುಮಾರಿಗೆ ರಸ್ತೆ ಮಾರ್ಗವಾಗಿ ಮೈಸೂರು ತಲುಪಲಿದ್ದಾರೆ.

  • ಮಠಗಳನ್ನು ಸರ್ಕಾರದ ಸುಪರ್ದಿಗೆ ಪಡೆಯುವುದಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ವಿರೋಧ

    ಮಠಗಳನ್ನು ಸರ್ಕಾರದ ಸುಪರ್ದಿಗೆ ಪಡೆಯುವುದಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ವಿರೋಧ

    ಹಾಸನ: ಮಠಗಳನ್ನು ಸರ್ಕಾರದ ಸುರ್ಪದಿಗೆ ಪಡೆಯುವುದಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರೋಧ ವ್ಯಕ್ತಪಡಿಸಿದ್ದಾರೆ.

    ಶ್ರವಣಬೆಳಗೊಳದಲ್ಲಿ ಮಾತನಾಡಿದ ಅವರು, ಧರ್ಮ ಬೇರೆ. ರಾಜಕಾರಣ ಬೇರೆ. ಎರಡನ್ನು ಒಟ್ಟಿಗೆ ನೋಡಬಾರದು ಎಂದಿದ್ದಾರೆ. ಈ ಬಗ್ಗೆ ನನಗೆ ಖಚಿತ ಮಾಹಿತಿ ಇಲ್ಲ. ಹಾಗೇನಾದ್ರು ಆದ್ರೆ ಅದಕ್ಕೆ ಸ್ಪಷ್ಟವಾಗಿ ವಿರೋಧಿಸುವುದು ನನ್ನ ಅಭಿಪ್ರಾಯ ಅಂತ ಹೇಳಿದ್ದಾರೆ.

    ಧರ್ಮಕ್ಕೆ ರಾಜಕಾರಣದ ಸೊಂಕು ತಗಲಬಾರದು. ಇದು ತಪ್ಪು. ಎಲ್ಲವನ್ನೂ ರಾಷ್ಟ್ರೀಕರಣ ಮಾಡಲು ಸಾಧ್ಯವಿಲ್ಲ. ಇದು ಒಪ್ಪತಕ್ಕುದ್ದಲ್ಲ. ಇದಕ್ಕೆ ವಿರೋಧಿಸುವ ಮತ್ತು ಪ್ರತಿಭಟನೆ ಮಾಡುವ ಕುರಿತು ಬೇರೆ ರೀತಿ ಪ್ರಯತ್ನ ಮಾಡುತ್ತೇವೆ ಎಂದಿದ್ದಾರೆ.


    ರಾಜ್ಯದ ಮಠ, ದೇವಸ್ಥಾನ, ಧಾರ್ಮಿಕ ಸಂಸ್ಥೆಗಳೇ ಸಿಎಂ ಸಿದ್ದರಾಮಯ್ಯ ಟಾರ್ಗೆಟ್ ಮಾಡುತ್ತಿದ್ದು, ಸರ್ಕಾರಕ್ಕೆ ಇನ್ನು 3 ತಿಂಗಳ ಅವಧಿ ಇರುವಾಗಲೇ ಆಪರೇಷನ್‍ಗೆ ಕೈ ಹಾಕಿಬಿಟ್ರಾ ಅನ್ನೋ ಮಾತುಗಳು ಕೇಳಿಬರುತ್ತಿವೆ. ಮಠಗಳು, ದೇವಸ್ಥಾನಗಳು, ಧಾರ್ಮಿಕ ಸಂಸ್ಥೆಗಳ ಮೇಲೆ ಸಿದ್ದರಾಮಯ್ಯ ಕಣ್ಣಿಟ್ಟಿದ್ದು, ಇವುಗಳನ್ನು ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ತರಲು ಕರಡು ರಚನೆಗೆ ನಿರ್ಧರಿಸಿರುವುದಾಗಿ ತಿಳಿದುಬಂದಿದೆ. ಈ ಕುರಿತು ಸಾರ್ವಜನಿಕ ಅಭಿಪ್ರಾಯ, ಆಕ್ಷೇಪಣೆಗೆ ಧಾರ್ಮಿಕ ದತ್ತಿ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದೆ ಎನ್ನಲಾಗಿದೆ.

    ಜ.29ರಂದು ಸಾರ್ವಜನಿಕ ಪ್ರಕಟಣೆ ಹೊರಡಿಸಿ, 15 ದಿನದೊಳಗಾಗಿ ಸಾರ್ವಜನಿಕ ಅಭಿಪ್ರಾಯ, ಸಲಹೆ ನೀಡುವಂತೆ ಸಾರ್ವಜನಿಕ ಪ್ರಕಟಣೆಯಲ್ಲಿ ತಿಳಿಸಿಲಾಗಿದೆ. ಧಾರ್ಮಿಕ ಸಂಸ್ಥೆಗಳನ್ನು ಧಾರ್ಮಿಕ ದತ್ತಿ ಕಾಯ್ದೆಗೆ ಒಳಪಡಿಸಬೇಕೆ? ಬೇಡವೇ.? ಒಳಪಡಿಸಬೇಕಿದ್ರೆ ಎಷ್ಟರಮಟ್ಟಿಗೆ ಒಳಪಡಿಸಬೇಕೆಂದು ಧಾರ್ಮಿಕ ದತ್ತಿ ಇಲಾಖೆ ಅಭಿಪ್ರಾಯ ಕೇಳಿದೆ ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ.