Tag: muttappa rai

  • ಫೈರಿಂಗ್ ಕೇಸ್ – ವಿಚಾರಣೆಗೆ ಹಾಜರಾಗುವಂತೆ ರಿಕ್ಕಿ ರೈಗೆ ನೋಟಿಸ್

    ಫೈರಿಂಗ್ ಕೇಸ್ – ವಿಚಾರಣೆಗೆ ಹಾಜರಾಗುವಂತೆ ರಿಕ್ಕಿ ರೈಗೆ ನೋಟಿಸ್

    ರಾಮನಗರ: ಮುತ್ತಪ್ಪ ರೈ (Muttappa Rai) ಪುತ್ರ ಮೇಲಿನ ಫೈರಿಂಗ್ ಪ್ರಕರಣ ಸಂಬಂಧ ರಿಕ್ಕಿ ರೈಗೂ ಬಿಡದಿ ಪೊಲೀಸರು (Bidadi Police) ನೋಟಿಸ್ ನೀಡಿದ್ದಾರೆ.

    ಈಗಾಗಲೇ ಆಸ್ಪತ್ರೆಯಲ್ಲೇ ರಿಕ್ಕಿ ರೈ (Ricky Rai) ಹೇಳಿಕೆ ದಾಖಲಿಸಿಕೊಂಡಿದ್ದ ಪೊಲೀಸರು, ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ಅವಶ್ಯಕತೆ ಇದ್ದು ಖುದ್ದು ಠಾಣೆಗೆ ಹಾಜರಾಗುವಂತೆ ರಿಕ್ಕಿ ರೈಗೆ ಬುಧವಾರ ನೋಟಿಸ್ ನೀಡಿದ್ದಾರೆ. ಫೈರಿಂಗ್‌ನ ವೇಳೆ ರಿಕ್ಕಿ ರೈ ಕೈ ಹಾಗೂ ಮೂಗಿನ ಭಾಗಕ್ಕೆ ಗಂಭೀರ ಗಾಯವಾಗಿತ್ತು.  ಇದನ್ನೂ ಓದಿ: ಸತ್ತವರು ವಾಪಸ್ ಬರಲ್ಲ ಅಂತ ಬಿಟ್ರೆ ನಾಳೆ ನಿಮ್ಮನೆಗೂ ಉಗ್ರರು ಬರ್ತಾರೆ: ಸಿಎಂ ವಿರುದ್ಧ ಶಿವಾಚಾರ್ಯಶ್ರೀ ಕಿಡಿ

    2 ಆಪರೇಷನ್‌ಗಳಿಗೆ ಒಳಗಾಗಿದ್ದ ರಿಕ್ಕಿ ಸದ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬಂಧಿತ ಗನ್‌ಮ್ಯಾನ್ ವಿಠ್ಠಲ್ ಫೈರಿಂಗ್ ಮಾಡಿರುವ ಶಂಕೆ ಇದ್ದು, ಘಟನೆ ಸಂಬಂಧ ವಿಚಾರಣೆಯಲ್ಲಿ ವಿಠ್ಠಲ್ ಯಾವುದೇ ಸತ್ಯ ಬಾಯ್ಬಿಡುತ್ತಿಲ್ಲ. ಹೀಗಾಗಿ ರಿಕ್ಕಿ ರೈ ಹಾಗೂ ಆರೋಪಿ ವಿಠ್ಠಲ್ ಮುಖಾಮುಖಿ ವಿಚಾರಣೆ ನಡೆಸಲು ಪೊಲೀಸರ ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: PublicTV Explainer: ಪುಲ್ವಾಮಾ to ಪಹಲ್ಗಾಮ್‌ ದಾಳಿ; ಭಾರತ ಕೆಂಡ – ಉಗ್ರರನ್ನು ಓಲೈಸುವ ಪಾಕಿಸ್ತಾನ ತೆತ್ತ ಬೆಲೆ ಏನು?

    ಅಲ್ಲದೇ ಎಫ್‌ಎಸ್‌ಎಲ್ ವರದಿಗಾಗಿ (Forensic Science Laboratory  Report) ಕಾಯುತ್ತಿರುವ ಪೊಲೀಸರು, ವಶಪಡಿಸಿಕೊಂಡ 7 ಗನ್‌ಗಳಲ್ಲಿ ಯಾವ ಗನ್‌ಗೆ ಸ್ಥಳದಲ್ಲಿ ಸಿಕ್ಕ ಬುಲೆಟ್ ಮ್ಯಾಚ್ ಆಗುತ್ತೆ ಎಂಬ ಮಾಹಿತಿ ತಿಳಿದು ತನಿಖೆಯನ್ನ ಮತ್ತಷ್ಟು ಚುರುಕುಗೊಳಿಸಲು ಮುಂದಾಗಿದ್ದಾರೆ.

  • ರಿಕ್ಕಿ ರೈ ಮೇಲೆ ಫೈರಿಂಗ್ ಪ್ರಕರಣ – ಗನ್ ಮ್ಯಾನ್ ವಿಠ್ಠಲ್ ಪೊಲೀಸರ ವಶಕ್ಕೆ

    ರಿಕ್ಕಿ ರೈ ಮೇಲೆ ಫೈರಿಂಗ್ ಪ್ರಕರಣ – ಗನ್ ಮ್ಯಾನ್ ವಿಠ್ಠಲ್ ಪೊಲೀಸರ ವಶಕ್ಕೆ

    ರಾಮನಗರ: ಮುತ್ತಪ್ಪ ರೈ (Muthappa Rai) ಪುತ್ರ ರಿಕ್ಕಿ ರೈ (Ricky Rai) ಮೇಲೆ ನಡೆದ ಫೈರಿಂಗ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಇದೊಂದು ಫೇಕ್ ಅಟ್ಯಾಕ್ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ. ರಿಕ್ಕಿ ರೈ ಮನೆಯ ಭದ್ರತೆ ನೋಡಿಕೊಳ್ಳುತ್ತಿದ್ದ ವಿಠ್ಠಲ್‌ನನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

    ಕಳೆದ ಏ.18ರ ಮಧ್ಯರಾತ್ರಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ನಡೆದ ಫೈರಿಂಗ್ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ಇದು ಸುಪಾರಿ ಕಿಲ್ಲರ್‌ನಿಂದ ನಡೆದ ಅಟ್ಯಾಕಾ ಅಥವಾ ಜೊತೆಯಲ್ಲಿದ್ದವರಿಂದಲೇ ನಡೆದ ಕೊಲೆ ಯತ್ನವಾ ಎಂಬ ಅನುಮಾನದ ಮೇಲೆ ತನಿಖೆ ನಡೆಸಿದ ಪೊಲೀಸರಿಗೆ ಸ್ಥಳದಲ್ಲಿ ಸಿಕ್ಕ ಸಾಕ್ಷ್ಯಗಳು ಮಹತ್ವದ ಸುಳಿವು ನೀಡಿವೆ. ಇದನ್ನೂ ಓದಿ: Exclusive | ರಿಕ್ಕಿ ರೈಗಿದ್ದ ಭದ್ರತೆ ನೋಡಿದ್ರೆ ಎದುರಾಳಿಗಳು ಹತ್ತಿರ ಸುಳಿಯೋಕು ನಡುಗುತ್ತಾರೆ!

    ಮನೆಗೆಲಸದವರು, ಗನ್ ಮ್ಯಾನ್‌ಗಳು, ಸೆಕ್ಯುರಿಟಿ, ಮ್ಯಾನೇಜರ್ ಹಾಗೂ ಆಡಿಟರ್‌ಗಳನ್ನ ವಿಚಾರಣೆ ಮಾಡಿದ್ದ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದರು. ಆದರೆ ವಿಚಾರಣಾಧೀನರ ಹೇಳಿಕೆಗೂ ಸ್ಥಳದಲ್ಲಿ ಸಿಕ್ಕ ಸಾಕ್ಷ್ಯಗಳಿಗೂ ತಾಳೆ ಆಗದಿರುವುದು ಇದೊಂದು ಫೇಕ್ ಅಟ್ಯಾಕ್ ಎಂಬ ಅನುಮಾನ ಬಂದಿದೆ. ಇದನ್ನೂ ಓದಿ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಹತ್ಯೆಗೆ ಯತ್ನ – ಶೂಟೌಟ್‌ ಹಿಂದೆ ಭೂಗತ ಲೋಕದ ಕೈವಾಡ..?

    ಸೋಮವಾರ ಇಡೀ ದಿನ ರಿಕ್ಕಿ ರೈ ಗನ್ ಮ್ಯಾನ್‌ಗಳನ್ನ ವಿಚಾರಣೆ ಮಾಡಿದ್ದ ಪೊಲೀಸರು, ಬಿಡದಿ ಫಾರ್ಮ್ಹೌಸ್‌ನಲ್ಲೂ ಸಂಪೂರ್ಣ ತಲಾಶ್ ಮಾಡಿದ್ದರು. ರಿಕ್ಕಿ ಭದ್ರತೆಗಾಗಿ ಇಟ್ಟುಕೊಂಡಿದ್ದ ಗನ್‌ಗಳೆಷ್ಟು, ಎಷ್ಟು ಬುಲೆಟ್ ಇವೆ. ಎಲ್ಲಾ ಗನ್‌ಗಳಿಗೂ ಲೈಸೆನ್ಸ್ ಇದ್ಯಾ ಎಂಬ ಪರಿಶೀಲನೆ ವೇಳೆ ಫೈರಿಂಗ್ ಸ್ಥಳದಲ್ಲಿ ಸಿಕ್ಕ ಗುಂಡಿಗೂ ರಿಕ್ಕಿ ರೈ ಮನೆಯ ಭದ್ರತೆ ನೋಡಿಕೊಳ್ಳುತ್ತಿದ್ದ ವಿಠ್ಠಲ್ ಎಂಬಾತನಿಗೂ ಗನ್‌ಗೂ ಸಾಮ್ಯತೆ ಇದೆ. ಹಾಗಾಗಿ ಗನ್ ಮ್ಯಾನ್ ವಿಠ್ಠಲ್‌ನನ್ನ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ. ಅಲ್ಲದೇ ತನಿಖೆಯ ದಿಕ್ಕು ತಪ್ಪಿಸಲು ಸಿಮ್ ಇಲ್ಲದ ಮೊಬೈಲ್ ಬಿಸಾಕಿ, ನಾಲ್ವರ ಮೇಲೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ವಿಂಗ್ ಕಮಾಂಡರ್ ತಪ್ಪು ಮಾಡಿದ್ರೂ ತಪ್ಪೇ: ಸಿಎಂ

    ಮುತ್ತಪ್ಪ ರೈ ಗನ್ ಮ್ಯಾನ್ ಆಗಿದ್ದ ಮಡಿಕೇರಿ (Madikeri) ಮೂಲದ ವಿಠ್ಠಲ್, ಮುತ್ತಪ್ಪ ರೈ ನಿಧನದ ಬಳಿ ಅವರ ಕುಟುಂಬದ ಭದ್ರತೆ ನೋಡಿಕೊಳ್ಳುತ್ತಿದ್ದರು. ಇತ್ತೀಚೆಗೆ ಅನಾರೋಗ್ಯ ಹೆಚ್ಚಾಗಿದ್ದ ಕಾರಣ ಅವರಿಗೆ ಬಿಡದಿ ಮನೆಯ ಭದ್ರತೆ ಜವಾಬ್ದಾರಿ ನೀಡಲಾಗಿತ್ತು. ಘಟನೆ ನಡೆಯುವ ಮುನ್ನ ರಿಕ್ಕಿ ರೈ ಹಾಗೂ ವಿಠ್ಠಲ್ ಪ್ರತ್ಯೇಕ ಮಾತುಕತೆ ನಡೆಸಿದ್ದು, ಮನೆಯಿಂದ ಹೊರ ಹೋಗಿದ್ದರು.

    ಘಟನೆ ನಡೆದು ರಿಕ್ಕಿ ರೈ ಆಸ್ಪತ್ರೆಗೆ ಸೇರಿದ ಬಳಿಕ ಮತ್ತೆ ವಿಠ್ಠಲ್ ಮನೆಗೆ ವಾಪಸ್ ಬಂದಿದ್ದ ಎಂಬುದು ಮನೆಯ ಸಿಸಿಟಿವಿ ಕ್ಯಾಮರಾದಿಂದ ಪೊಲೀಸರಿಗೆ ತಿಳಿದುಬಂದಿದೆ. ಹಾಗಾಗಿ ವಿಠ್ಠಲ್‌ನನ್ನ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ವೇಳೆ ವಿಠ್ಠಲ್‌ಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಮತ್ತಷ್ಟು ವಿಚಾರಣೆ ನಡೆಯಲಿದೆ. ಇದನ್ನೂ ಓದಿ: ಸಂಸತ್ತೇ ಸರ್ವೋಚ್ಚ, ಚುನಾಯಿತ ಪ್ರತಿನಿಧಿಗಳು ಸಾಂವಿಧಾನಿಕ ವಿಷಯದ ಅಲ್ಟಿಮೇಟ್‌ ಮಾಸ್ಟರ್ಸ್‌: ಧನಕರ್‌

    ಒಟ್ಟಾರೆ ರಿಕ್ಕಿ ರೈ ಮೇಲೆ ಅಟ್ಯಾಕ್ ಆದಾಗ ಗನ್ ಮ್ಯಾನ್ ಇದ್ರೂ ಕೌಂಟರ್ ಅಟ್ಯಾಕ್ ಆಗಿರಲಿಲ್ಲ. ಇದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದು, ಇದೊಂದು ಫೇಕ್ ಅಟ್ಯಾಕ್ ಎನ್ನಲಾಗಿದೆ. ತನಿಖೆ ಬಳಿಕವಷ್ಟೇ ಸತ್ಯಾಸತ್ಯತೆ ಹೊರಬೀಳಬೇಕಿದೆ.

  • ಕೇವಿಯರ್ ಡಿಸ್ಟ್ರಿಬ್ಯೂಷನ್‌ನಲ್ಲಿ ವಿಶ್ವದಲ್ಲೇ ಮುಂಚೂಣಿ – ರಿಕ್ಕಿ ರೈ ಆಸ್ತಿ ಎಷ್ಟಿದೆ?

    ಕೇವಿಯರ್ ಡಿಸ್ಟ್ರಿಬ್ಯೂಷನ್‌ನಲ್ಲಿ ವಿಶ್ವದಲ್ಲೇ ಮುಂಚೂಣಿ – ರಿಕ್ಕಿ ರೈ ಆಸ್ತಿ ಎಷ್ಟಿದೆ?

    ಬೆಂಗಳೂರು: ಅಪ್ಪನ ಬಿಸಿನೆಸ್ ಜೊತೆಗೆ ತನ್ನ ಬಿಸಿನೆಸ್‌ನಲ್ಲೂ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ (Ricky Rai) ಸಕ್ಸಸ್ ಕಂಡಿದ್ದಾರೆ. ಅಂದಾಜಿನ ಪ್ರಕಾರ, ರಿಕ್ಕಿ ರೈ 1,000 ಕೋಟಿ ಮೌಲ್ಯದ ಆಸ್ತಿಯ ಸರದಾರ. ಕೇವಿಯರ್ ಡಿಸ್ಟ್ರಿಬ್ಯೂಷನ್‌ನಲ್ಲಿ (Caviar Distribution) ರಿಕ್ಕಿ ರೈ ವಿಶ್ವದಲ್ಲೇ ಮುಂಚೂಣಿಯಲ್ಲಿದ್ದಾರೆ.

    ರಿಕ್ಕಿ ರೈ ಅಪ್ಪನ ಕೇವಿಯರ್ ಬಿಸಿನೆಸ್ ಇಂಪ್ರೂವ್ ಮಾಡಿದ್ದಾರೆ. ಅಸಲಿಗೆ ಕೇವಿಯರ್ ಅಂದರೆ ಮೀನಿನ ಮೊಟ್ಟೆ. ಮಾರ್ಕೆಟ್‌ನಲ್ಲಿ ಇದರ ಬೆಲೆ 100 ಗ್ರಾಂಗೆ ಸಾವಿರ ಗಟ್ಟಲೆ ರೇಟ್ ಇದೆ. ಬಡಬಗ್ಗರು ಇದನ್ನ ಆಸೆಪಡೋಕು ಆಗಲ್ಲ. ಚೈನಿಸ್ ಫುಡ್ ಮೇಲಿಟ್ಟು ಈ ಕೇವಿಯರ್ ಅನ್ನು ತಿನ್ನುತ್ತಾರೆ. ಅಲ್ಲದೇ ಯೌವ್ವನ ಕಾಪಾಡಲು ಕೇವಿಯರ್ ಒಳ್ಳೆ ಅಮೃತದಂತೆ ಕೆಲಸ ಮಾಡುತ್ತದೆ. ಇದನ್ನೂ ಓದಿ: ಕೆಕೆಆರ್‌ಟಿಸಿ ಬಸ್‌ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

    ರಷ್ಯಾದಲ್ಲಿ ಮಾಸ್ಕೋ ಐಟಿ ಕಂಪನಿ, ಹೋಟೆಲ್ಸ್, ಕ್ಲಬ್, ಕೆಸಿನೊ ಅಲ್ಲದೇ ಹೈ ಎಂಡ್ ಕಾರ್‌ಗಳ ಚಕ್ರ ತಯಾರಿಕಾ ಕಂಪನಿಯನ್ನು ರಿಕ್ಕಿ ಹೊಂದಿದ್ದಾರೆ. ರಷ್ಯಾದ ಮಾಸ್ಕೋದಲ್ಲಿ ನೂರಾರು ಕೋಟಿ ಇನ್ವೆಸ್ಟ್ ಮಾಡಿರುವ ರಿಕ್ಕಿ ರೈ, ಅಪ್ಪನ ಆಸ್ತಿ ಜೋಪಾನ ಮಾಡುವುದರ ಜೊತೆಗೆ ತಾನೂ ನೂರಾರು ಕೋಟಿ ದುಡಿದಿದ್ದಾರೆ. ಇದನ್ನೂ ಓದಿ: ನಾನು ಚಿಕ್ಕಂದಿನಿಂದ ಶಿವನ ಭಕ್ತ: ಉಜ್ಜಯಿನಿಯ ಮಹಾಕಾಳೇಶ್ವರ ದೇಗುಲದಲ್ಲಿ ಯಶ್

  • ಗುಂಡೇಟಿನಿಂದ ಆಸ್ಪತ್ರೆ ಸೇರಿರೋ ಮುತ್ತಪ್ಪ ರೈ ಮಗನ ಆರೋಗ್ಯ ವಿಚಾರಿಸಿದ ಡಿಕೆಶಿ

    ಗುಂಡೇಟಿನಿಂದ ಆಸ್ಪತ್ರೆ ಸೇರಿರೋ ಮುತ್ತಪ್ಪ ರೈ ಮಗನ ಆರೋಗ್ಯ ವಿಚಾರಿಸಿದ ಡಿಕೆಶಿ

    ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ (Muttappa Rai) ಪುತ್ರ ರಿಕ್ಕಿ ರೈ ಗುಂಡೇಟು ತಿಂದು ಮಣಿಪಾಲ್ ಆಸ್ಪತ್ರೆ (Manipal Hospital)  ಸೇರಿದ್ದು, ಚಿಕಿತ್ಸೆ ಪಡೆಯುತ್ತಿರುವ ರಿಕ್ಕಿ ಆರೋಗ್ಯವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)  ವಿಚಾರಿಸಿದ್ದಾರೆ.

    ಆಸ್ಪತ್ರೆಗೆ ಭೇಟಿ ನೀಡುವ ಮೊದಲೇ ರಿಕ್ಕಿ ರೈಗೆ (Rikki Rai) ಕರೆ ಮಾಡಿ ಘಟನೆ ಹೇಗಾಯ್ತು ಎಂದು ಮಾಹಿತಿ ಪಡೆದಿದ್ದಾರೆ. ಆರೋಪಿಗಳು ಯಾರೇ ಆಗಿದ್ದರೂ ಪೊಲೀಸರು ಪತ್ತೆ ಹಚ್ಚುತ್ತಾರೆ. ನಾನು ಗೃಹ ಇಲಾಖೆ ಜೊತೆಗೆ ಪ್ರಕರಣದ ಬಗ್ಗೆ ಮಾತನಾಡುತ್ತೇನೆ. ಪೊಲೀಸರು ಆರೋಪಿಗಳನ್ನ ಪತ್ತೆ ಮಾಡುತ್ತಾರೆ. ನೀನು ಆರೋಗ್ಯದ ಕಡೆ ಗಮನ ಕೊಡು ಎಂದು ಡಿಕೆಶಿ ಪೋನ್ ಮೂಲಕ ಸಾಂತ್ವನ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: Exclusive | ರಿಕ್ಕಿ ರೈಗಿದ್ದ ಭದ್ರತೆ ನೋಡಿದ್ರೆ ಎದುರಾಳಿಗಳು ಹತ್ತಿರ ಸುಳಿಯೋಕು ನಡುಗುತ್ತಾರೆ!

    ಶನಿವಾರ ಸಂಜೆ ಡಿಕೆಶಿ ರಿಕ್ಕಿ ರೈ ಜೊತೆ ಮಾತನಾಡಿ ಆರೋಗ್ಯ ವಿಚಾರಿಸಿದ್ದಾರೆ. ಇತ್ತ ಪೊಲೀಸರ ತನಿಖೆ ನಡುವೆ ಡಿಸಿಎಂ ಆರೋಗ್ಯ ವಿಚಾರಿಸಿರುವುದು ಆತ್ಮಬಲ ಹೆಚ್ಚಿಸಿದೆ ಎಂದು ರಿಕ್ಕಿ ರೈ ಹೇಳಿದ್ದಾರೆ.

    ಏನಿದು ಘಟನೆ?
    ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರಿಕ್ಕಿ ರೈ ಅವರಿಗೆ ಗಾಯಗಳಾಗಿವೆ.

    ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿ ಫೈರಿಂಗ್:
    ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲೆ ನಡೆದ ಶೂಟೌಟ್‌ನಲ್ಲಿ ದುಷ್ಕರ್ಮಿಗಳು ಡ್ರೈವಿಂಗ್ ಸೀಟ್‌ನನ್ನೇ ಗುರಿಯಾಗಿಸಿ 2 ಸುತ್ತು ಗುಂಡುಗಳನ್ನು ಹಾರಿಸಿದ್ದಾರೆ. ರಿಕ್ಕಿ ರೈ ಸಾಮಾನ್ಯವಾಗಿ ತಾನೇ ಕಾರು ಚಾಲನೆ ಮಾಡುತ್ತಿದ್ದ ಕಾರಣ, ದಾಳಿಕೋರರು ಡ್ರೈವಿಂಗ್ ಸೀಟ್‌ನ ಮೇಲೆ ಗುರಿ ಇಟ್ಟಿದ್ದರು. ಆದರೆ, ಈ ಬಾರಿ ಕಾರನ್ನು ಚಾಲಕ ರಾಜು ಚಲಾಯಿಸುತ್ತಿದ್ದು, ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದ. ಆದರೆ, ಪಕ್ಕದ ಸೀಟ್‌ನಲ್ಲಿದ್ದ ರಿಕ್ಕಿ ರೈ ಅವರ ಮೂಗು ಮತ್ತು ಕೈಗೆ ಗುಂಡು ತಾಕಿದ್ದು, ಗಂಭೀರ ಗಾಯಗೊಂಡಿದ್ದರು.

    ಘಟನೆಯ ಸ್ಥಳಕ್ಕೆ ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ಮತ್ತು ಡಿವೈಎಸ್‌ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ದಾಳಿಯ ಹಿಂದಿನ ಕಾರಣ, ದುಷ್ಕರ್ಮಿಗಳ ಗುರುತು ಮತ್ತು ಈ ಘಟನೆಯ ಹಿನ್ನೆಲೆಯನ್ನು ಪತ್ತೆಹಚ್ಚಲು ತೀವ್ರ ಪ್ರಯತ್ನ ನಡೆಯುತ್ತಿದೆ.ಇದನ್ನೂ ಓದಿ: ಗೆಳತಿಯೊಂದಿಗೆ ಲಿವ್‌ ಇನ್‌ನಲ್ಲಿರಲು ಮನೆಯವರ ವಿರೋಧ – ರೈಲ್ವೆ ಹಳಿಗೆ ಹಾರಿ ಯುವಕ ಆತ್ಮಹತ್ಯೆ

  • ಮಾಜಿ ಡಾನ್ ಮುತ್ತಪ್ಪ ರೈ ಆಸ್ತಿ ಎಷ್ಟಿದೆ? – ವಿವಾದ ಹುಟ್ಟಿಕೊಂಡಿದ್ದು ಯಾವಾಗ?

    ಮಾಜಿ ಡಾನ್ ಮುತ್ತಪ್ಪ ರೈ ಆಸ್ತಿ ಎಷ್ಟಿದೆ? – ವಿವಾದ ಹುಟ್ಟಿಕೊಂಡಿದ್ದು ಯಾವಾಗ?

    ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ (Muthappa Rai) ಬೆಂಗಳೂರು (Bengaluru), ಬಿಡದಿ, ಕರಾವಳಿ ಪ್ರದೇಶ, ದುಬೈ, ರಷ್ಯಾ ಸೇರಿದಂತೆ ಹಲವು ಕಡೆಗಳಲ್ಲಿ ಸುಮಾರು 2,000 ಕೋಟಿಗೂ ಹೆಚ್ಚು ಆಸ್ತಿ ಮಾಡಿದ್ದಾರೆ ಎಂದು ಕೆಲ ಆಪ್ತ ಮೂಲಗಳು ತಿಳಿಸಿವೆ.

    ಮುತ್ತಪ್ಪ ರೈ ಮೊದಲ ಪತ್ನಿ ರೇಖಾ ರೈ ಸಾವನ್ನಪ್ಪಿದ ನಂತರ ಅನುರಾಧ ರೈ ಅನ್ನೋರನ್ನ 2ನೇ ಮದುವೆ ಮಾಡಿಕೊಂಡಿದ್ರು. ಆದರೆ ಮುತ್ತಪ್ಪ ರೈಗೆ ಅನಾರೋಗ್ಯ ಸಮಸ್ಯೆ ಶುರುವಾಗ್ತಿದ್ದಂತೆ. ಆಸ್ತಿ ಸಂಬಂಧ ಗಲಾಟೆಗಳು ಶುರುವಾಗಿದ್ದವು. ಕೋರ್ಟ್‌ನಲ್ಲಿ ರಾಜೀ ಆಗಿದ್ದರೂ ಮತ್ತೆ ಮತ್ತೆ ವಿವಾದ ನಡೆಯುತ್ತಲೇ ಇತ್ತು.

    ಮುತ್ತಪ್ಪ ರೈ ಅವರು ಸಾಯುವ ಮುನ್ನವೇ ತನ್ನ ಆಸ್ತಿಯ ಬಗ್ಗೆ ವಿಲ್ ಬರೆದು ಇಟ್ಟಿದ್ದರು. ಇದರಲ್ಲಿ ಅವರ ಆಸ್ತಿ ಯಾರಿಗೇ ಸೇರಬೇಕು ಮತ್ತು ಎಷ್ಟು ಸೇರಬೇಕು ಎಂದು ತಿಳಿಸಿದ್ದರು. ಹೀಗಿದ್ದರೂ ಅವರ ಸಾವಿನ ಬಳಿಕ ಅವರ ಎರಡನೇ ಪತ್ನಿ ಅನುರಾಧಾ ಪಾಲು ಕೋರಿ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿಂದೆಯೇ ಎರಡನೇ ಪತ್ನಿ ಅನುರಾಧಾಗೆ ಚಿನ್ನಾಭರಣ, ಕಾರು, ಕೋಟ್ಯಂತರ ರೂಪಾಯಿ ಹಣದ ಜೊತೆ ಹೆಚ್ ಡಿ ಕೋಟೆ ಆಸ್ತಿ, ಜೊತೆಗೆ ಸಹಕಾರ ನಗರದಲ್ಲಿ ಎರಡು ಅಂತಸ್ತಿನ ಕಟ್ಟಡವನ್ನು ನಿರ್ಮಿಸಿ ಕೊಡಲಾಗಿದೆ. ಅನುರಾಧಾ ಜೊತೆಗಿದ್ದ ಸಂದರ್ಭದಲ್ಲಿ ಅವರಿಗೆ ಸೇರಬೇಕಾದ ಆಸ್ತಿಯನ್ನು ನೀಡಲಾಗಿದೆ ಎಂದು ವಿಲ್‍ನಲ್ಲಿ ಉಲ್ಲೇಖವಾಗಿದೆ.

    ಆಸ್ತಿ ಎಷ್ಟಿದೆ?
    ವಿಲ್ ಪ್ರಕಾರ ಸುಮಾರು 2 ಸಾವಿರ ಕೋಟಿಗೂ ಅಧಿಕ ಆಸ್ತಿ ರೈ ಹೆಸರಿನಲ್ಲಿದೆ. ದೇವನಹಳ್ಳಿ, ಯಲಹಂಕ, ಬಿಡದಿಯಲ್ಲಿ 150ಕ್ಕೂ ಅಧಿಕ ಎಕರೆ ಜಾಗ, ಮೈಸೂರು, ಮಂಗಳೂರು, ಬಂಟ್ವಾಳ, ಪುತ್ತೂರಿನಲ್ಲಿ ನೂರಾರು ಎಕರೆ ಜಮೀನು ಮುತ್ತಪ್ಪ ರೈ ಹೆಸರಿನಲ್ಲಿದೆ. ಸಕಲೇಶಪುರದಲ್ಲಿ 200 ಎಕರೆ ಜಮೀನಿದೆ.

    ಹಂಚಿಕೆ ಹೇಗೆ?
    ಒಟ್ಟು 600ಕ್ಕೂ ಅಧಿಕ ಎಕರೆ ಜಮೀನನ್ನು ತನ್ನಿಬ್ಬರು ಮಕ್ಕಳಾದ ರಿಕ್ಕಿ ಹಾಗೂ ರಾಖಿ ರೈಗೆ ಗಿಫ್ಟ್ ಡೀಡ್ ಮಾಡಿದ್ದಾರೆ. ಆಸ್ತಿಗಳ ಪೈಕಿ ಮೈಸೂರು, ಪುತ್ತೂರು, ಬಂಟ್ವಾಳ, ಮಂಗಳೂರು ಜಾಗವನ್ನು ರಾಖಿ ರೈಗೆ ನೀಡಿದ್ದರೆ, ಸಕಲೇಶಪುರ, ಬಿಡದಿ, ಯಲಹಂಕ ಹಾಗೂ ದೇವನಹಳ್ಳಿ ಜಾಗವನ್ನು ಚಿಕ್ಕ ಮಗ ರಿಕ್ಕಿ ರೈಗೆ ಹಂಚಿಕೆ ಮಾಡಿದ್ದಾರೆ. ಆಪ್ತರು, ಸಂಬಂಧಿಕರಿಗೆ ಶೇ.20 ರಷ್ಟು ಆಸ್ತಿ ನೀಡಬೇಕೆಂದು ಸೂಚಿಸಿದ್ದಾರೆ. ಬಿಡದಿ ಹಾಗೂ ಸದಾಶಿವನಗರದ ಎರಡೂ ಮನೆಗಳ ಜವಾಬ್ದಾರಿಯನ್ನು ಚಿಕ್ಕ ಮಗ ರಿಕ್ಕಿ ರೈಗೆ ನೀಡಿದ್ದು ಟ್ರೇಡಿಂಗ್ ವ್ಯವಹಾರ ಕಂಪನಿಯನ್ನು ದೊಡ್ಡ ಮಗ ರಾಖಿ ನೋಡಿಕೊಳ್ಳುವಂತೆ ಸೂಚಿಸಿದ್ದರು.

    ಕೆಲಸಗಾರರಿಗೆ ಸೈಟ್:
    ನಂಬಿಕೆಯಿಂದ 15 ವರ್ಷಗಳ ಕಾಲ ತನ್ನ ಬಳಿ ಕೆಲಸ ಮಾಡಿದ 25 ಕೆಲಸಗಾರರಿಗೆ ಒಂದೊಂದು ಸೈಟ್ ಹಾಗೂ ಕೈಲಾದಷ್ಟು ಹಣ ನೀಡುವಂತೆ ಕಿರಿಯ ಮಗ ರಿಕ್ಕಿ ರೈಗೆ ಸೂಚಿಸಿದ್ದರು. ತಂದೆಯ ಸೂಚನೆಯಂತೆ ರಿಕ್ಕಿ ತಲಾ ಒಬ್ಬೊಬ್ಬರಿಗೆ 3 ಲಕ್ಷ ರೂಪಾಯಿಗಳನ್ನು ಹಂಚಿಕೆ ಮಾಡಿದ್ದರು.

  • ಮುತ್ತಪ್ಪ ರೈ ಕುಟುಂಬದ ಮೇಲೆ ಸಾಕಷ್ಟು ಜನರಿಗೆ ದ್ವೇಷ ಇದೆ: ಪ್ರಕಾಶ್‌ ರೈ

    ಮುತ್ತಪ್ಪ ರೈ ಕುಟುಂಬದ ಮೇಲೆ ಸಾಕಷ್ಟು ಜನರಿಗೆ ದ್ವೇಷ ಇದೆ: ಪ್ರಕಾಶ್‌ ರೈ

    – ಚಾಲಕ ಬಸವರಾಜು ಕರೆತಂದು‌ ಬಿಡದಿ ಮನೆಯಲ್ಲಿ ಸ್ಥಳ ಮಹಜರು
    – ವಿವಿಧ ಆಯಾಮಗಳಲ್ಲಿ ಪೊಲೀಸರ ತನಿಖೆ ಚುರುಕು

    ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ (Ricky Rai) ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಬಿಡದಿ ಪೊಲೀಸರು (Bidadi Police) ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

    ದೂರು ನೀಡಿದ ಕಾರು ಚಾಲಕ ಬಸವರಾಜುನನ್ನ ಈಗಾಗಲೇ ಸ್ಥಳಕ್ಕೆ ಕರೆತಂದು ಮಹಜರು ನಡೆಸುತ್ತಿದ್ದಾರೆ. ಬಸವರಾಜುನಿಂದ ಕಾರ್‌ ಡ್ರೈವ್‌ ಮಾಡಿಸಿ ಘಟನೆಯನ್ನ ಮರುಸೃಷ್ಠಿ ಮಾಡಿಸಿ, ಮಾಹಿತಿ ಕಲೆಹಾಕುತ್ತಿದ್ದಾರೆ. ಮತ್ತೊಂದೆಡೆ ಟವರ್ ಡಂಪ್ ಮೂಲಕ ಕಾಲ್ ಡಿಟೇಲ್ಸ್ ಹಾಗೂ ಲೊಕೇಶನ್ ಪರಿಶೀಲನೆ ನಡೆಸಲಾಗುತ್ತಿದೆ. ಘಟನೆ ನಡೆಯುವ ವೇಳೆ ಯಾರೆಲ್ಲಾ ಮೊಬೈಲ್ ಉಪಯೋಗಿಸಿದ್ದಾರೆ, ಯಾರಿಂದೆಲ್ಲಾ ಕರೆ ಬಂದಿವೆ, ಯಾರಿಗೆ ಕರೆ ಹೋಗಿದೆ ಎಂಬುದರ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಇದನ್ನೂ ಓದಿ: ರಿಕ್ಕಿ ರೈ ಮೇಲೆ ಶೂಟೌಟ್‌ ಕೇಸ್‌: ಮುತ್ತಪ್ಪ ರೈ 2ನೇ ಪತ್ನಿ ಅನುರಾಧ ಸೇರಿ ನಾಲ್ವರ ವಿರುದ್ಧ FIR

    ಇನ್ನೂ ಘಟನೆ ಕುರಿತು ಬಿಡದಿಯಲ್ಲಿ ಮುತ್ತಪ್ಪ ರೈ ಸಂಬಂಧಿ ಪ್ರಕಾಶ್ ರೈ ಮಾತನಾಡಿ, ರಾತ್ರಿ ನನಗೆ ವಿಚಾರ ಗೊತ್ತಾಯ್ತು, ಸೆಕ್ಯುರಿಟಿ ನನಗೆ ಫೋನ್ ಮಾಡಿದ್ರು. ಮುತ್ತಪ್ಪ ರೈ ಕಾಲದಿಂದಲೂ ಅವರ ಕುಟುಂಬದ ಮೇಲೆ ಸಾಕಷ್ಟು ಜನರಿಗೆ ದ್ವೇಷ ಇದೆ. ಆಸ್ತಿ ವಿಚಾರಕ್ಕೆ ಸಂಭಂಧಿಸಿದ ಒಂದಷ್ಟು ಇಶ್ಯೂ ಇತ್ತು. ರಿಕ್ಕಿ ಹೆಚ್ಚಿನ ಸಮಯ ಬಿಡದಿಯಲ್ಲಿ ಕಳೆಯುತ್ತಿದ್ರು. ಬೆಂಗಳೂರಿನ ಸದಾಶಿವ ನಗರದಲ್ಲೂ ಮನೆ ಇದೆ. ಬಿಡದಿ ಮನೆಯಲ್ಲಿ ಇಂಟೀರಿಯರ್ ಕೆಲಸ ನಡೆಯುತ್ತಿತ್ತು. ಅದನ್ನೂ ನೋಡೊಕೆ ರಿಕ್ಕಿ ಬಂದಿದ್ರು. ರಾತ್ರಿ ಇಲ್ಲಿಂದ ಹೋಗುವಾಗ ಯಾರೋ ಅಟ್ಯಾಕ್ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

    ಮುತ್ತಪ್ಪ ರೈ ಮೇಲಿನ ದ್ವೇಷ ಮಗನ ಮೇಲೂ ಮುಂದುವರೆದಿರುವ ಸಾಧ್ಯತೆ ಇದೆ. ಯಾರೋ ಟಾರ್ಗೆಟ್ ಮಾಡಿ ಹತ್ಯೆಗೆ ಸ್ಕೆಚ್ ಹಾಕಿದ್ದಾರೆ. ರಿಕ್ಕಿ ರೈಗೆ ಮುತ್ತಪ್ಪ ರೈ ಅವರು ಇದ್ದಾಗಲೇ ಮೊದಲ ಪತ್ನಿಯಿಂದ ಡೈವರ್ಸ್ ಆಗಿತ್ತು. 2ನೇ ಪತ್ನಿ ವಿದೇಶದವರು, ಅವರು ಮಗು ಜೊತೆ ವಿದೇಶದಲ್ಲೇ ಇದ್ದಾರೆ. ರಿಕ್ಕಿ ರೈ ಕೂಡ ಹೆಚ್ಚಿನ ಸಮಯ ವಿದೇಶದಲ್ಲೇ ಕಳೆಯುತ್ತಿದ್ರು ಅಂತ ಪ್ರಕಾಶ್‌ ರೈ ಹೇಳಿದ್ದಾರೆ.  ಇದನ್ನೂ ಓದಿ: ರಿಕ್ಕಿ ರೈ ಮೇಲೆ 2 ಸುತ್ತು ಗುಂಡಿನ ದಾಳಿ – ಡ್ರೈವಿಂಗ್‌ ಸೀಟ್‌ ಟಾರ್ಗೆಟ್‌ ಮಾಡಿ ಫೈರಿಂಗ್‌ ಮಾಡಿದ್ದು ಏಕೆ?

    ಏನಿದು ಘಟನೆ?
    ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ತಡರಾತ್ರಿ 12:50ರ ವೇಳೆಗೆ ಗುಂಢಿನ ದಾಳಿ ನಡೆದಿದೆ. ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರಿಕ್ಕಿ ರೈ ಅವರಿಗೆ ಗಾಯಗಳಾಗಿವೆ.  ಇದನ್ನೂ ಓದಿ: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಫೈರಿಂಗ್ – ಕೂದಲೆಳೆ ಅಂತರದಲ್ಲಿ ಪಾರು

  • ರಿಕ್ಕಿ ರೈ ಮೇಲೆ ಶೂಟೌಟ್‌ ಕೇಸ್‌: ಮುತ್ತಪ್ಪ ರೈ 2ನೇ ಪತ್ನಿ ಅನುರಾಧ ಸೇರಿ ನಾಲ್ವರ ವಿರುದ್ಧ FIR

    ರಿಕ್ಕಿ ರೈ ಮೇಲೆ ಶೂಟೌಟ್‌ ಕೇಸ್‌: ಮುತ್ತಪ್ಪ ರೈ 2ನೇ ಪತ್ನಿ ಅನುರಾಧ ಸೇರಿ ನಾಲ್ವರ ವಿರುದ್ಧ FIR

    ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈನ 2ನೇ ಪತ್ನಿ ಅನುರಾಧಾ ಸೇರಿದಂತೆ ನಾಲ್ವರ ವಿರುದ್ಧ ಬಿಡದಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

    ರಾಕೇಶ್‌ಮಲ್ಲಿ, 2ನೇ ಪತ್ನಿ ಅನುರಾಧ, ನಿತೇಶ್ ಶೆಟ್ಟಿ, ವೈದ್ಯನಾಥನ್ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 173 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹೀಗಾಗಿ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಫೈರಿಂಗ್ – ಕೂದಲೆಳೆ ಅಂತರದಲ್ಲಿ ಪಾರು

    2 ಬಾರಿ ದಾಳಿ ನಡೆದಿರೋದು ಕನ್ಫರ್ಮ್‌
    ರಿಕ್ಕಿ ರೈ ಮೇಲೆ 2 ಬಾರಿ ಗುಂಡಿನ ದಾಳಿ ನಡೆದಿರುವುದು ಪೊಲೀಸ್‌ ತನಿಖೆ ವೇಳೆ ತಿಳಿದುಬಂದಿದೆ. ಬಿಡದಿ ಮನೆಯಿಂದ ಸದಾಶಿವ ನಗರ ಮನೆಗೆ ಹೊರಟಿದ್ದ ರಾತ್ರಿ 11 ಗಂಟೆ ಹೊತ್ತಿಗೆ ಫೈರಿಂಗ್ ನಡೆದಿದೆ. ಅದೃಷ್ಟವಶಾತ್ ಈ ವೇಳೆ ಕಾರಿಗೆ ಅಥವಾ ರಿಕ್ಕಿ ರೈಗೆ ಯಾವುದೇ ಗುಂಡು ತಾಗಿಲ್ಲ. ಶಬ್ಧ ಕೇಳಿ ಚಾಲಕ ಬಸವರಾಜು ಕೆಳಗೆ ಇಳಿದು ನೋಡಿದ್ದಾರೆ, ಬಳಿಕ ಪರ್ಸ್‌ ಮರೆತು ಬಂದಿರುವುದಾಗಿ ರಿಕ್ಕಿಗೆ ತಿಳಿಸಿ ಮತ್ತೆ ಮನೆಗೆ ಹೋಗಿದ್ದಾರೆ. ಬಳಿಕ ಬೆಂಗಳೂರಿಗೆ ಹೊರಡಲು ಮುಂದಾದಾಗ ರಾತ್ರಿ 12:50ರ ಸುಮಾರಿಗೆ ಮತ್ತೆ ಗುಂಡಿನ ದಾಳಿ ನಡೆದಿದೆ. ಪೊಲೀಸರು ಪರಿಶೀಲನೆ ನಡೆಸಿದಾಗ 2 ಬುಲೆಟ್‌ಗಳು ಪತ್ತೆಯಾಗಿವೆ.

    ಏನಿದು ಘಟನೆ?
    ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ 12:50ರ ಸುಮಾರಿಗೆ 2 ಸುತ್ತಿನ ಗುಂಡಿನ ದಾಳಿ ನಡೆದಿದೆ. ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರಿಕ್ಕಿ ರೈ ಅವರಿಗೆ ಗಾಯಗಳಾಗಿವೆ. ತಕ್ಷಣವೇ ಅವರನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇದನ್ನೂ ಓದಿ: ರಿಕ್ಕಿ ರೈ ಮೇಲೆ 2 ಸುತ್ತು ಗುಂಡಿನ ದಾಳಿ – ಡ್ರೈವಿಂಗ್‌ ಸೀಟ್‌ ಟಾರ್ಗೆಟ್‌ ಮಾಡಿ ಫೈರಿಂಗ್‌ ಮಾಡಿದ್ದು ಏಕೆ?

    ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿ ಫೈರಿಂಗ್:
    ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲೆ ನಡೆದ ಶೂಟೌಟ್‌ನಲ್ಲಿ ದುಷ್ಕರ್ಮಿಗಳು ಡ್ರೈವಿಂಗ್ ಸೀಟ್‌ನನ್ನೇ ಗುರಿಯಾಗಿಸಿ ಮೂರು ಸುತ್ತು ಗುಂಡುಗಳನ್ನು ಹಾರಿಸಿದ್ದಾರೆ. ರಿಕ್ಕಿ ರೈ ಸಾಮಾನ್ಯವಾಗಿ ತಾನೇ ಕಾರು ಚಾಲನೆ ಮಾಡುತ್ತಿದ್ದ ಕಾರಣ, ದಾಳಿಕೋರರು ಡ್ರೈವಿಂಗ್ ಸೀಟ್‌ನ ಮೇಲೆ ಗುರಿ ಇಟ್ಟಿದ್ದರು. ಆದರೆ, ಈ ಬಾರಿ ಕಾರನ್ನು ಚಾಲಕ ರಾಜು ಚಲಾಯಿಸುತ್ತಿದ್ದು, ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ, ಪಕ್ಕದ ಸೀಟ್‌ನಲ್ಲಿದ್ದ ರಿಕ್ಕಿ ರೈ ಅವರ ಮೂಗು ಮತ್ತು ಕೈಗೆ ಗುಂಡು ತಾಕಿದ್ದು, ಗಂಭೀರ ಗಾಯಗೊಂಡಿದ್ದಾರೆ.

    ಘಟನೆಯ ಸ್ಥಳಕ್ಕೆ ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ಮತ್ತು ಡಿವೈಎಸ್‌ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ದಾಳಿಯ ಹಿಂದಿನ ಕಾರಣ, ದುಷ್ಕರ್ಮಿಗಳ ಗುರುತು ಮತ್ತು ಈ ಘಟನೆಯ ಹಿನ್ನೆಲೆಯನ್ನು ಪತ್ತೆಹಚ್ಚಲು ತೀವ್ರ ಪ್ರಯತ್ನ ನಡೆಯುತ್ತಿದೆ. ಇದನ್ನೂ ಓದಿ: ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ ನೋ ಎಂಟ್ರಿ – ಬೀದರ್ ವಿದ್ಯಾರ್ಥಿಗೆ ನ್ಯಾಯ ಕೊಡಿಸಲು ಕೆಇಎ ಸಿದ್ಧತೆ

  • ರಿಕ್ಕಿ ರೈ ಮೇಲೆ 2 ಸುತ್ತು ಗುಂಡಿನ ದಾಳಿ – ಡ್ರೈವಿಂಗ್‌ ಸೀಟ್‌ ಟಾರ್ಗೆಟ್‌ ಮಾಡಿ ಫೈರಿಂಗ್‌ ಮಾಡಿದ್ದು ಏಕೆ?

    ರಿಕ್ಕಿ ರೈ ಮೇಲೆ 2 ಸುತ್ತು ಗುಂಡಿನ ದಾಳಿ – ಡ್ರೈವಿಂಗ್‌ ಸೀಟ್‌ ಟಾರ್ಗೆಟ್‌ ಮಾಡಿ ಫೈರಿಂಗ್‌ ಮಾಡಿದ್ದು ಏಕೆ?

    ಬೆಂಗಳೂರು: ಬಿಡದಿಯಲ್ಲಿ ತಡರಾತ್ರಿ ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ (Ricky Rai) ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಘಟನೆ ನಡೆದಿದೆ. ತಡರಾತ್ರಿ 12:50ರ ವೇಳೆಗೆ 2 ಸುತ್ತು ಗುಂಡು ಹಾರಿಸಿದ್ದ ದುಷ್ಕರ್ಮಿಗಳು ಡ್ರೈವಿಂಗ್‌ ಸೀಟನ್ನೇ (Driving Seat) ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದರು ಅನ್ನೋದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

    ಹೌದು. ರಿಕ್ಕಿ ರೈ ಮೇಲೆ ನಡೆದ ಶೂಟೌಟ್‌ನಲ್ಲಿ ದುಷ್ಕರ್ಮಿಗಳು ಡ್ರೈವಿಂಗ್ ಸೀಟ್‌ನನ್ನೇ ಗುರಿಯಾಗಿಸಿ 2 ಸುತ್ತು ಗುಂಡುಗಳನ್ನು ಹಾರಿಸಿದ್ದಾರೆ. ರಿಕ್ಕಿ ರೈ ಸಾಮಾನ್ಯವಾಗಿ ತಾನೇ ಕಾರು ಚಾಲನೆ ಮಾಡುತ್ತಿದ್ದ ಕಾರಣ, ದಾಳಿಕೋರರು ಡ್ರೈವಿಂಗ್ ಸೀಟನ್ನೇ ಟಾರ್ಗೆಟ್‌ ಮಾಡಿದ್ದರು. ಆದ್ರೆ ಈ ಬಾರಿ ಕಾರನ್ನು ಚಾಲಕ ರಾಜು ಚಲಾಯಿಸುತ್ತಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ, ಪಕ್ಕದ ಸೀಟ್‌ನಲ್ಲಿದ್ದ ರಿಕ್ಕಿ ರೈ ಅವರ ಮೂಗು ಮತ್ತು ಕೈಗೆ ಗುಂಡು ತಾಕಿದ್ದು, ಗಂಭೀರ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಫೈರಿಂಗ್ – ಕೂದಲೆಳೆ ಅಂತರದಲ್ಲಿ ಪಾರು

    ಏನಿದು ಘಟನೆ?
    ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ (Bengaluru) ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರಿಕ್ಕಿ ರೈ ಅವರಿಗೆ ಗಾಯಗಳಾಗಿವೆ. ತಕ್ಷಣವೇ ಅವರನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ (Private Hospital) ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.  ಇದನ್ನೂ ಓದಿ: ಆನೇಕಲ್ | ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಪೋಸ್ಟ್ ಮಾಡಿ ವ್ಯಕ್ತಿ ಆತ್ಮಹತ್ಯೆ

    ಘಟನೆಯ ಸ್ಥಳಕ್ಕೆ ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ಮತ್ತು ಡಿವೈಎಸ್‌ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ದಾಳಿಯ ಹಿಂದಿನ ಕಾರಣ, ದುಷ್ಕರ್ಮಿಗಳ ಗುರುತು ಮತ್ತು ಈ ಘಟನೆಯ ಹಿನ್ನೆಲೆಯನ್ನು ಪತ್ತೆಹಚ್ಚಲು ತೀವ್ರ ಪ್ರಯತ್ನ ನಡೆಯುತ್ತಿದೆ. ಇದನ್ನೂ ಓದಿ: Mangaluru| ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಹೊರರಾಜ್ಯದ ಯುವತಿ ಪತ್ತೆ – ಗ್ಯಾಂಗ್ ರೇಪ್ ಯತ್ನ ಶಂಕೆ, ಮೂವರು ಅರೆಸ್ಟ್

  • ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಫೈರಿಂಗ್ – ಕೂದಲೆಳೆ ಅಂತರದಲ್ಲಿ ಪಾರು

    ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಫೈರಿಂಗ್ – ಕೂದಲೆಳೆ ಅಂತರದಲ್ಲಿ ಪಾರು

    ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿಯಲ್ಲಿ ತಡರಾತ್ರಿ ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ (Ricky Rai) ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಘಟನೆ ನಡೆದಿದೆ.

    ಬಿಡದಿಯಲ್ಲಿರುವ ಮುತ್ತಪ್ಪ ರೈ (Muttappa Rai) ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ರಾತ್ರಿ 12:50ರ ಸುಮಾರಿಗೆ 2 ಸುತ್ತಿನ ಗುಂಡಿನ ದಾಳಿ ನಡೆದಿದೆ. ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಲಾಗಿದೆ. ಈ ವೇಳೆ ರಿಕ್ಕಿ ರೈ, ಮೂಗು, ಕೈಗೆ ಗುಂಡು ತಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕಾರವಾರ| ಮಟ್ಕಾ ಆಡಿಸಲು ಲಂಚ ಪಡೆದ ಪೊಲೀಸ್‌ಗೆ 8 ವರ್ಷಗಳ ಬಳಿಕ ಜೈಲು ಶಿಕ್ಷೆ

    ಏನಿದು ಘಟನೆ?
    ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರಿಕ್ಕಿ ರೈ ಅವರಿಗೆ ಗಾಯಗಳಾಗಿವೆ. ತಕ್ಷಣವೇ ಅವರನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇದನ್ನೂ ಓದಿ: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ, ಏನಿವಾಗ? – ಅನುರಾಗ್‌ ಕಶ್ಯಪ್‌ ವಿವಾದ

    ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿ ಫೈರಿಂಗ್:
    ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲೆ ನಡೆದ ಶೂಟೌಟ್‌ನಲ್ಲಿ ದುಷ್ಕರ್ಮಿಗಳು ಡ್ರೈವಿಂಗ್ ಸೀಟ್‌ನನ್ನೇ ಗುರಿಯಾಗಿಸಿ 2 ಸುತ್ತು ಗುಂಡುಗಳನ್ನು ಹಾರಿಸಿದ್ದಾರೆ. ರಿಕ್ಕಿ ರೈ ಸಾಮಾನ್ಯವಾಗಿ ತಾನೇ ಕಾರು ಚಾಲನೆ ಮಾಡುತ್ತಿದ್ದ ಕಾರಣ, ದಾಳಿಕೋರರು ಡ್ರೈವಿಂಗ್ ಸೀಟ್‌ನ ಮೇಲೆ ಗುರಿ ಇಟ್ಟಿದ್ದರು. ಆದರೆ, ಈ ಬಾರಿ ಕಾರನ್ನು ಚಾಲಕ ರಾಜು ಚಲಾಯಿಸುತ್ತಿದ್ದು, ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ, ಪಕ್ಕದ ಸೀಟ್‌ನಲ್ಲಿದ್ದ ರಿಕ್ಕಿ ರೈ ಅವರ ಮೂಗು ಮತ್ತು ಕೈಗೆ ಗುಂಡು ತಾಕಿದ್ದು, ಗಂಭೀರ ಗಾಯಗೊಂಡಿದ್ದಾರೆ.

    ಘಟನೆಯ ಸ್ಥಳಕ್ಕೆ ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ಮತ್ತು ಡಿವೈಎಸ್‌ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ದಾಳಿಯ ಹಿಂದಿನ ಕಾರಣ, ದುಷ್ಕರ್ಮಿಗಳ ಗುರುತು ಮತ್ತು ಈ ಘಟನೆಯ ಹಿನ್ನೆಲೆಯನ್ನು ಪತ್ತೆಹಚ್ಚಲು ತೀವ್ರ ಪ್ರಯತ್ನ ನಡೆಯುತ್ತಿದೆ. ಇದನ್ನೂ ಓದಿ: ಮೇ ತಿಂಗಳಲ್ಲಿ ಬಾಹ್ಯಾಕಾಶ ನಿಲ್ದಾಣಕ್ಕೆ ಹಾರಲಿದ್ದಾರೆ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ

  • ಕಪ್ಪು ಸುಂದರಿ ಮೇಲೆ ಮುತ್ತಪ್ಪ ರೈ ಪುತ್ರನ ಕಣ್ಣು- ಉದ್ಯಮಿಯ ಕಾರು ಸುಟ್ಟ ಕೇಸ್‍ಗೆ ಟ್ವಿಸ್ಟ್

    ಕಪ್ಪು ಸುಂದರಿ ಮೇಲೆ ಮುತ್ತಪ್ಪ ರೈ ಪುತ್ರನ ಕಣ್ಣು- ಉದ್ಯಮಿಯ ಕಾರು ಸುಟ್ಟ ಕೇಸ್‍ಗೆ ಟ್ವಿಸ್ಟ್

    ಬೆಂಗಳೂರು: ಉದ್ಯಮಿ ಶ್ರೀನಿವಾಸ್ ನಾಯ್ಡು (Srinivas Naidu) ಅವರ ಕೋಟಿ ರೂ. ಬೆಳೆಬಾಳುವ ರೇಂಜ್ ರೋವರ್ (Range Rover) ಕಾರಿಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಾನ್ ದಿ.ಮುತ್ತಪ್ಪ ರೈ (Muttappa Rai) ಪುತ್ರ ಸೇರಿದಂತೆ 9 ಜನರ ವಿರುದ್ಧ ಸದಾಶಿವನಗರ ಪೊಲೀಸರು 188 ಪುಟಗಳ ಚಾರ್ಜ್‍ಶೀಟ್ ಸಲ್ಲಿಸಿದ್ದಾರೆ.

    2021ರ ಅಕ್ಟೋಬರ್ ನಲ್ಲಿ ಸದಾಶಿವನಗರದ ಸಪ್ತಗಿರಿ ಅಪಾರ್ಟ್ ಮೆಂಟ್‍ (Saptagiri Apartment Sadashivanagar) ನಲ್ಲಿ ಉದ್ಯಮಿ ಶ್ರೀನಿವಾಸ್ ನಾಯ್ಡು ಅವರ ರೇಂಜ್ ರೋವರ್ ಕಾರನ್ನು ಆರೋಪಿಗಳು ಸುಟ್ಟುಹಾಕಿದ್ದರು. ಈ ಕುರಿತು ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಒಟ್ಟು 10 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ರಿಕ್ಕಿ ರೈ (Rikki Rai) ಸೂಚನೆಯಂತೆ ಕಾರು ಸುಟ್ಟಿರುವುದಾಗಿ ಆರೋಪಿಗಳು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಬ್ಯಾಂಕ್‌ಗಳಲ್ಲಿ ಶುರುವಾಯ್ತು ಪಿಂಕ್ ನೋಟ್ ವಿನಿಮಯ – RBI ಆದೇಶದ ವಿರುದ್ಧ ಹೈಕೋರ್ಟ್‌ಗೆ ಅರ್ಜಿ

    ಘಟನೆ ಕುರಿತು ತನಿಖೆ ನಡೆಸಿದ ಸದಾಶಿವನಗರ ಪೊಲೀಸರು 33ನೇ ಎಸಿಎಂಎಂ ಕೋರ್ಟ್‍ಗೆ 188 ಪುಟಗಳ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದ್ದಾರೆ. ಮಾಜಿ ಡಾನ್ ಮುತ್ತಪ್ಪ ರೈ ಅವರ ಮಗ ರಿಕ್ಕಿ ರೈ ಮತ್ತು ಉದ್ಯಮಿ ಶ್ರೀನಿವಾಸ್ ನಾಯ್ಡು ಒಂದು ಕಾಲದಲ್ಲಿ ಆತ್ಮೀಯ ಗೆಳೆಯರಾಗಿದ್ದರು. ಮುತ್ತಪ್ಪ ರೈ ಅವರ ನಿಧನದ ಬಳಿಕ ಶ್ರೀನಿವಾಸ್ ನಾಯ್ಡು ರೈ ಗ್ರೂಪಿನಿಂದ ಹೊರಬಂದಿದ್ದರು. ನಾಯ್ಡು ಹೊರ ಬಂದಿದಕ್ಕೆ ರಿಕ್ಕಿ ರೈ ದ್ವೇಷ ಸಾಧಿಸಿ ಈ ಕೃತ್ಯ ಎಸಗಿದ್ದಾರಾ ಎಂಬ ಶಂಕೆ ಈಗ ವ್ಯಕ್ತವಾಗಿದೆ.