Tag: muttodi

  • ಕಾಫಿನಾಡ ಕಾಡಲ್ಲಿ ಬಂಗಾರದ ಕಾಡೆಮ್ಮೆ ಪತ್ತೆ

    ಕಾಫಿನಾಡ ಕಾಡಲ್ಲಿ ಬಂಗಾರದ ಕಾಡೆಮ್ಮೆ ಪತ್ತೆ

    ಚಿಕ್ಕಮಗಳೂರು: 1980-90 ದಶಕದಲ್ಲಿ ಕಣ್ಮರೆಯಾಗಿದ್ದ ಅಪರೂಪದ ಕಾಟಿ ತಳಿಯ ಕಾಡೆಮ್ಮೆ ಸಂತತಿ ಮತ್ತೆ ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತ ಅರಣ್ಯದ ಮುತ್ತೋಡಿ ವಲಯದಲ್ಲಿ ಪತ್ತೆಯಾಗಿದೆ.

    ಕಾಡೆಮ್ಮೆಗಳು ಬಹುತೇಕ ಕಪ್ಪು ಬಣ್ಣದಿಂದ ಕೂಡಿರುತ್ತವೆ. ಆದರೆ ಕಾಟಿ ತಳಿಯ ಈ ಕಾಡೆಮ್ಮೆ ಬಂಗಾರದ ಬಣ್ಣದಿಂದ ಕಂಗೊಳಿಸುತ್ತಿದೆ. ಈ ಅಪರೂಪದ ಕಾಡೆಮ್ಮೆ ಬಣ್ಣ ಹಾಗೂ ಮೈಕಟ್ಟು ನೋಡುಗರಲ್ಲಿ ಅಚ್ಚರಿ ಮೂಡಿಸಿದರೂ 80-90ರ ದಶಕದಲ್ಲಿ ಈ ತಳಿಯ ಕಾಡೆಮ್ಮೆಗಳು ಕಾಫಿನಾಡ ಅರಣ್ಯದಲ್ಲಿ ಇತ್ತು. ಆಗ ಇಂದರ್ಫಿಸ್ಟ್ ಎಂಬ ಕಾಯಿಲೆಯಿಂದ ಈ ತಳಿ ಸಂಪೂರ್ಣ ನಾಶವಾಗಿತ್ತು. ಇದೀಗ ಮತ್ತೆ ಈ ತಳಿಯ ಕಾಡೆಮ್ಮೆ ಪತ್ತೆಯಾಗಿರೋದು ಈ ತಳಿಗಳ ಬೆಳವಣಿಗೆಯಾಗಿದೆ ಎಂದೇ ಭಾವಿಸಲಾಗಿದೆ.

    ಹುಲಿಗಳಲ್ಲಿ ಬಿಳಿ ಹುಲಿ, ಚಿರತೆಗಳಲ್ಲಿ ಕಪ್ಪು ಚಿರತೆ ಇರುವಂತೆ ಕಾಡೆಮ್ಮೆಗಳಲ್ಲಿ ಈ ರೀತಿ ಕಂಡು ಬರಲಿದೆ. ಇದನ್ನ ಇಂಗ್ಲಿಷಿನಲ್ಲಿ ಗಾರ್ ಎಂದು ಕರೆಯುತ್ತಾರೆ. ಈ ಸಂತತಿ ಈಗ ಮತ್ತೆ ಹೆಚ್ಚಾಗಿರೋದ್ರಿಂದ ಈ ರೀತಿ ಪ್ರವಾಸಿಗರ ಕಣ್ಣಿಗೆ ಬಿದ್ದಿದೆ ಎಂದು ಹೇಳಲಾಗಿದೆ. ಚಿನ್ನದ ಲೇಪನದಂತೆ ಹೊಳೆಯುವ ಕಾಡೆಮ್ಮೆಯೊಂದು ಕಂಡಿದ್ದು. ಈ ಭಾಗದಲ್ಲಿ ಈ ರೀತಿಯ ಕಾಡೆಮ್ಮೆ ಕಾಣ ಸಿಗುವುದು ವಿಶೇಷ.

    ಜಿಲ್ಲೆಯ ಮುತ್ತೋಡಿ ಅರಣ್ಯ ಹಲವು ವಿಚಿತ್ರ ಹಾಗೂ ವೈವಿಧ್ಯಮಯ ಘಟನೆಗೆ ಸಾಕ್ಷಿಯಾಗಿದೆ. ಈಗ ಸುಮಾರು 30-40 ವರ್ಷಗಳ ಹಿಂದೆಯೇ ನಾಶವಾಗಿರುವ ಪ್ರಾಣಿಗಳ ಸಂತತಿ ಒಂದು ಮತ್ತೆ ಅಭಿವೃದ್ಧಿ ಆಗಿರುವಂಥದ್ದು ಬೆಳಕಿಗೆ ಬಂದಂತಿದೆ. ಈ ಕಾಡೆಮ್ಮೆ ಇರುವುದು ಅಪರೂಪ, ನಿಸರ್ಗದಲ್ಲಿ ಅನೇಕ ವಿಸ್ಮಯಗಳು ನಡೆಯುತ್ತದೆ. ಅಂತಹಾ ವಿಸ್ಮಯಗಳಲ್ಲಿ ಇದು ಕೂಡ ಸಹಜ. ನೋಡಲು ಬಂಗಾರದ ಲೇಪನವಾದಂತೆ ಕಾಣೋ ಈ ಕಾಡೆಮ್ಮೆ ನೋಡುಗರ ಗಮನ ಸೆಳೆದಿದೆ.

  • ಅಪರೂಪದ ಪ್ರಾಣಿ ನೀಲ್ ಗಾಯ್ ಹುಲಿ ದಾಳಿಗೆ ಬಲಿ

    ಅಪರೂಪದ ಪ್ರಾಣಿ ನೀಲ್ ಗಾಯ್ ಹುಲಿ ದಾಳಿಗೆ ಬಲಿ

    ಚಿಕ್ಕಮಗಳೂರು: ಕರ್ನಾಟಕದಲ್ಲಿ ಅಪರೂಪಕ್ಕೆ ಗೋಚರವಾಗಿದ್ದ ನೀಲ್ ಗಾಯ್ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನ ಮುತ್ತೋಡಿ ಅರಣ್ಯದಲ್ಲಿ ನಡೆದಿದೆ.

    ಇತ್ತೀಚೆಗಷ್ಟೇ ಮುತ್ತೋಡಿ ಅರಣ್ಯದಲ್ಲಿ ನೀಲ್ ಗಾಯ್ ಕಾಣಿಸಿಕೊಂಡಿತ್ತು. ಇದೀಗ ಹುಲಿ ದಾಳಿಗೆ ಬಲಿಯಾಗಿದೆ ಎಂದು ಹೇಳಲಾಗುತ್ತಿದೆ. 20 ವರ್ಷದ ಬಳಿಕ ಕಳೆದ ವರ್ಷ ಮುತ್ತೋಡಿಯಲ್ಲಿ ಕಾಣಿಸಿಕೊಂಡಿತ್ತು.

    ಈ ಪ್ರಾಣಿ ಹೆಚ್ಚಾಗಿ ಉತ್ತರ ಭಾರತದಲ್ಲಿ ಕಾಣಸಿಗುತ್ತಿದ್ದು, ಕಡವೆ ಜಾತಿಗೆ ಸೇರಿದ ಅತಿ ಭಯಪಡುವ ಪ್ರಾಣಿಯಾಗಿದೆ. ಸದ್ಯ ಸಾವನ್ನಪ್ಪಿದ ನೀಲ್ ಗಾಯ್ ಇದ್ದ ಪ್ರದೇಶಕ್ಕೆ ಅರಣ್ಯಾಧಿಕಾರಿಗಳು ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಬ್ಲೂ ಬುಲ್ ಅಂತಲೂ ಕರೆಯುತ್ತಾರೆ.

    ಕಳೆದ ಮಾರ್ಚ್ ತಿಂಗಳಿನಲ್ಲಿ ಪ್ರವಾಸಿಗರು ಮುತ್ತೋಡಿ ಅರಣ್ಯದಲ್ಲಿ ಸಫಾರಿಗೆ ಹೋಗಿದ್ದ ವೇಳೆ ಈ ಅಪರೂಪದ ಬ್ಲೂ ಬುಲ್ ಪ್ರಾಣಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಭದ್ರಾ ಮುತ್ತೋಡಿ ಅರಣ್ಯದಲ್ಲಿ ಈ ಹಿಂದೆ ಯಾವತ್ತೂ ಬ್ಲೂ ಬುಲ್ ಪ್ರಾಣಿ ಕಂಡಿರಲಿಲ್ಲ. ಈ ಪ್ರಾಣಿ ಇರುವ ಬಗ್ಗೆ ಯಾರ ಗಮನಕ್ಕೂ ಬಂದಿರಲಿಲ್ಲ. ಕೇವಲ ಹುಲ್ಲುಗಾವಲಲ್ಲಿ ವಾಸಿಸುವ ಪ್ರಾಣಿ ಇದಾಗಿದ್ದು, ಯಾರೋ ತಂದು ಬಿಟ್ಟಿರುವ ಶಂಕೆ ವ್ಯಕ್ತವಾಗಿದೆ.

    1950 ರಲ್ಲಿ ಬಂಡೀಪುರ ಅರಣ್ಯದಲ್ಲಿ ಕಾಣಿಸಿಕೊಂಡಿತ್ತು. ಈ ಪ್ರಾಣಿ ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶ ರಾಜ್ಯಗಳಲ್ಲಿ ಮಾತ್ರ ಹೆಚ್ಚಾಗಿವೆ ಕಂಡುಬರುತ್ತದೆ. ಇದನ್ನ ನೀಲ್ ಗಾಯ್ ಎಂತಲೂ ಕರೆಯುತ್ತಾರೆ. ಹುಲಿ ಹಾಗೂ ಚಿರತೆಯಂತಹ ಮಾಂಸಾಹಾರಿ ಪ್ರಾಣಿಗಳ ಕಣ್ಣಿಗೆ ಬಿದ್ದರೆ ಇದನ್ನ ಸುಲಭವಾಗಿ ಬೇಟೆ ಆಡುತ್ತವೆ. ಈ ಪ್ರಾಣಿ ಕಾಡಿನೊಳಗೆ ಬಹಳ ದಿನ ಬದುಕುವುದು ಕಷ್ಟ. ಆದ್ದರಿಂದ ಕೂಡಲೇ ಇದನ್ನ ಪತ್ತೆ ಮಾಡಿ ರಕ್ಷಣೆ ಮಾಡಿ ಎಂದು ಅರಣ್ಯ ಸಿಬ್ಬಂದಿಗೆ ಭದ್ರಾ ಹುಲಿ ಯೋಜನೆ ನಿರ್ದೇಶಕ ಕಾಂತರಾಜ್ ಸೂಚನೆ ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews