Tag: Muzaffarnagar

  • ಬಿರಿಯಾನಿಗಾಗಿ ಬಡಿದಾಡಿಕೊಂಡ ಕೈ ಕಾರ್ಯಕರ್ತರು- 9 ಮಂದಿ ಅರೆಸ್ಟ್

    ಬಿರಿಯಾನಿಗಾಗಿ ಬಡಿದಾಡಿಕೊಂಡ ಕೈ ಕಾರ್ಯಕರ್ತರು- 9 ಮಂದಿ ಅರೆಸ್ಟ್

    ಲಕ್ನೋ: ಬಿರಿಯಾನಿ ಹಂಚುವ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡ ಘಟನೆ ಉತ್ತರ ಪ್ರದೇಶದ ಮುಜಾಫುರ್ ನಗರದಲ್ಲಿ ನಡೆದಿದೆ.

    ಬಿಜ್ನೋರ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಾಸಿರ್ ಉದ್ದಿನ್ ಸಿದ್ದಿಕಿ ಅವರ ಪರ ಪ್ರಚಾರ ಮಾಡುವ ನಿಟ್ಟಿನಲ್ಲಿ ನಡೆದಿದ್ದ ಸಭೆಯಲ್ಲಿ ಈ ಘಟನೆ ನಡೆದಿದೆ. ಕಾರ್ಯಕರ್ತರ ಮಧ್ಯೆ ಮಾರಾಮಾರಿ ಆಗಿದ್ದು, ಅನೇಕರು ಗಾಯಗೊಂಡಿದ್ದಾರೆ. ಘಟನೆಯ ಸಂಬಂಧ 9 ಜನರನ್ನು ಪೊಲೀಸರು ಬಂಧಿಸಿದ್ದಾರೆ.

    ಆಗಿದ್ದೇನು?:
    ಮಾಜಿ ಶಾಸಕ ಮೌಲಾನ ಜಮೀಲ್ ಅವರು, ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಹೀಗಾಗಿ ಬಿಜ್ನೋರ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಾಸಿರ್ ಉದ್ದಿನ್ ಸಿದ್ದಿಕಿ ಪರ ಪ್ರಚಾರ ಮಾಡುವ ಕುರಿತಾಗಿ ಕಾರ್ಯಕರ್ತರ ಸಭೆ ಕರೆದಿದ್ದರು. ಸಭೆಯ ಬಳಿಕ ಬಿರಿಯಾನಿ ವ್ಯವಸ್ಥೆ ಕೂಡ ಮಾಡಿದ್ದರು.

    ಬಿರಿಯಾನಿ ಹಂಚುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ವಾಗ್ದಾಳಿ ನಡೆದಿದೆ. ಬಳಿಕ ಪರಸ್ಪರ ಕೈ ಕೈ ಮಿಲಾಯಿಸಿದ್ದು, ಪರಿಸ್ಥಿತಿ ಕೈಮಿರಿತ್ತು. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಎರಡೂ ಗುಂಪನ್ನು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಎಂದು ವರದಿಯಾಗಿದೆ.

    ಮಾಜಿ ಶಾಸಕ ಮೌಲಾನ ಜಮೀಲ್ ಹಾಗೂ ಪುತ್ರ ಸೇರಿದಂತೆ 34 ಜನರ ಮೇಲೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ಈ ಸಂಬಂಧ 9 ಜನರನ್ನು ಬಂಧಿಸಿರುವ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

    ಮೀರಾಪುರ ವಿಧಾನಸಭಾ ಕ್ಷೇತ್ರದಿಂದ 2012ರ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಆದರೆ ಕಳೆದ ವಾರ ಬಿಎಸ್‍ಪಿ ತೊರೆದು ಕಾಂಗ್ರೆಸ್ ಸೇರಿಕೊಂಡಿದ್ದರು.

  • ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಅತ್ಯಂತ ಬಡ ಅಭ್ಯರ್ಥಿ

    ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಅತ್ಯಂತ ಬಡ ಅಭ್ಯರ್ಥಿ

    ಲಕ್ನೋ: ಲೋಕಸಭಾ ಚುನಾವಣೆಗೆ ಪಕ್ಷಗಳಿಂದ ಮತ್ತು ಪಕ್ಷೇತರ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸುತ್ತಿದ್ದಾರೆ. ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸುವ ವೇಳೆ ತಮ್ಮ ಆಸ್ತಿಯನ್ನು ಘೋಷಣೆ ಮಾಡಿಕೊಳ್ಳುತ್ತಾರೆ. ಕೋಟಿ ಒಡೆಯರಾಗಿರುವ ಹಲವು ಅಭ್ಯರ್ಥಿಗಳು ಚುನಾವಣೆ ಅಖಾಡದಲ್ಲಿದ್ದಾರೆ. ಮುಜಾಫರನಗರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಮಾಂಗೆರಾಮ್ ಕಶ್ಯಪ್ ಅತ್ಯಂತ ಬಡ ಅಭ್ಯರ್ಥಿ ಎಂದು ವರದಿಯಾಗಿದೆ.

    ಎಲ್‍ಎಲ್‍ಬಿ ಪದವಿಧರ ಆಗಿರುವ ಮಂಗೆರಾಮ್ ಕಶ್ಯಪ್ ಬ್ಯಾಂಕ್ ಖಾತೆ ಜೀರೋ ಬ್ಯಾಲೆನ್ಸ್ ಹೊಂದಿದೆ. ಒಂದು ಬೈಕ್ ಹೊಂದಿರುವ ಮಂಗೆರಾಮ್ ಕೆಲವೊಮ್ಮೆ ತಮ್ಮ ವಾಹನಕ್ಕೆ ಪೆಟ್ರೋಲ್ ಹಾಕಿಸಲು ಪರದಾಡುವ ಪರಿಸ್ಥಿತಿಯಲ್ಲಿದ್ದಾರೆ. ಆರ್ಥಿಕ ಸಂಕಷ್ಟದ ನಡುವೆಯೂ ತಮ್ಮದೇ ಬೈಕ್ ಮೇಲೆಯೇ ಗ್ರಾಮಗಳಿಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ.

    ಈಗಾಗಲೇ ಮೂರು ಚುನಾವಣೆಗಳಲ್ಲಿ ಸೋಲು ಕಂಡಿರುವ ಮಂಗೆರಾಮ್ ಛಲ ಬಿಡದೇ ಈ ಬಾರಿಯೂ ಸ್ಪರ್ಧೆ ಮಾಡಿದ್ದಾರೆ. ಪತ್ನಿ ಮತ್ತು ಮಕ್ಕಳ ವಿರೋಧದ ನಡುವೆಯೂ ಮಂಗೆರಾಮ್ ತಮ್ಮ ಪಕ್ಷದ ಬಾವುಟ ಮತ್ತು ಬ್ಯಾನರ್ ಹಿಡಿದುಕೊಂಡು ಏಕಾಂಗಿಯಾಗಿ ಪ್ರಚಾರ ನಡೆಸುತ್ತಿದ್ದಾರೆ.

    ಅಲೆಗಳಿಗೆ ಹೆದರಿ ನೌಕೆ ಎಂದು ತನ್ನ ಪ್ರಯಾಣ ಆರಂಭಿಸಲು ಹಿಂದೇಟು ಹಾಕಲ್ಲ. ಪ್ರಯತ್ನ ಮಾಡುವವರಿಗೆ ಸೋಲು ಇಲ್ಲ ಎಂದು ನಾನು ನಂಬಿದ್ದೇನೆ ಎಂದು ಮಂಗೆರಾಮ್ ಕಶ್ಯಪ್ ಹೇಳುತ್ತಾರೆ.

    ಮೂಲತಃ ಉತ್ತರಖಂಡದವರಾಗಿರುವ ಮಂಗೆರಾಮ್, ಬಡತನದ ಮನೆಯಲ್ಲಿ ಹುಟ್ಟಿದ ವ್ಯಕ್ತಿ. ಮನೆಯ ಆರ್ಥಿಕ ಸ್ಥಿತಿ ಸರಿ ಇರದಿದ್ದ ಕಾರಣ ಪೋಷಕರು ಮಂಗೆರಾಮ್ ಅವರಿಗೆ ಓದಿಸಲು ಹಿಂದೇಟು ಹಾಕಿದ್ದರು. ಓದಬೇಕೆಂಬ ಹಂಬಲದಿಂದ ಮನೆಯಿಂದ ಹೊರ ಬಂದ ಮಂಗೆರಾಮ್ ಮುಜಾಫರನಗರದಲ್ಲಿ ಬಿಎಸ್‍ಸಿ, ಬಿಎಡ್ ಜೊತೆಗೆ ಎಲ್‍ಎಲ್‍ಬಿ ಪದವಿ ಓದಿದ್ದಾರೆ. ವಕೀಲ ವೃತ್ತಿ ಆರಂಭಿಸುವುದರ ಜೊತೆಗೆ 2000ರಲ್ಲಿ ಮಜದೂರ್ ಯೂನಿಯನ್ ಎಂಬ ಪಕ್ಷ ಸ್ಥಾಪಿಸಿ ಚುನಾವಣೆಗೆ ಸ್ಪರ್ಧಿಸುತ್ತಾ ಬಂದಿದ್ದಾರೆ.

  • ಮೊದಲ ಪತ್ನಿಯಿಂದಲೇ ಪತಿಯ ಮರ್ಮಾಂಗ ಕಟ್!

    ಮೊದಲ ಪತ್ನಿಯಿಂದಲೇ ಪತಿಯ ಮರ್ಮಾಂಗ ಕಟ್!

    ಲಕ್ನೋ: ತನ್ನ ಬಗ್ಗೆ ನಿಷ್ಕಾಳಜಿ ತೋರಿ, ಹೆಚ್ಚು ಕಾಲ ಎರಡನೇ ಪತ್ನಿಯೊಂದಿಗೆಯೇ ಇರುತ್ತಿದ್ದ ಪತಿಯ ಮರ್ಮಾಂಗವನ್ನೇ ಮೊದಲನೇ ಪತ್ನಿ ಕತ್ತರಿಸಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

    ಮುಜಾಫರ್ ನಗರ ಜಿಲ್ಲೆಯ ಮಿಮ್ಲಾನ ಗ್ರಾಮದಲ್ಲಿ ಬುಧವಾರ ಈ ಘಟನೆ ನಡೆದಿದ್ದು, ಪತ್ನಿಯ ಕೃತ್ಯದಿಂದ ಪತಿ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಮೊದಲ ಪತ್ನಿಗೆ ಮಕ್ಕಳಾಗಿರಲಿಲ್ಲ. ಹೀಗಾಗಿ ಆಕೆಯ ಒಪ್ಪಿಗೆ ಪಡೆದು ಪತಿ ಎರಡನೇ ಮದುವೆಯಾಗಿದ್ದ. ಇತ್ತೀಚೆಗೆ ಎರಡನೇ ಪತ್ನಿ ಮಗುವಿಗೆ ಜನ್ಮ ನೀಡಿದ್ದಳು. ಪತಿ ಮೊದಲ ಪತ್ನಿಯನ್ನು ನಿರ್ಲಕ್ಷಿಸಿ, ಹೆಚ್ಚು ಕಾಲ ಎರಡನೇ ಪತ್ನಿಯೊಂದಿಗೆ ಇರುತ್ತಿದ್ದ. ಇದರಿಂದ ಮನನೊಂದ ಆಕೆ ಪತಿಯ ಮರ್ಮಾಂಗವನ್ನೇ ಕತ್ತರಿಸಿದ್ದಾಳೆ ಎಂದು ವರದಿಯಾಗಿದೆ.

    ಈ ಕುರಿತು ಹಲ್ಲೆಗೆ ಒಳಗಾದ ಪತಿಯ ಮೊದಲ ಪತ್ನಿಯ ವಿರುದ್ಧ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಅಪರಾಧ ಮಾಡಲು ಜನರು ಹೆದರುತ್ತಿದ್ದಾರೆ, ಕ್ರಿಮಿನಲ್ ಗಳು ತರಕಾರಿ ಮಾರುತ್ತಿದ್ದಾರೆ : ಯೋಗಿ ಆದಿತ್ಯನಾಥ್

    ಅಪರಾಧ ಮಾಡಲು ಜನರು ಹೆದರುತ್ತಿದ್ದಾರೆ, ಕ್ರಿಮಿನಲ್ ಗಳು ತರಕಾರಿ ಮಾರುತ್ತಿದ್ದಾರೆ : ಯೋಗಿ ಆದಿತ್ಯನಾಥ್

    ಲಕ್ನೊ: ಬಿಜೆಪಿ ಸರ್ಕಾರ ಆಡಳಿತ ವಹಿಸಿಕೊಂಡ ಬಳಿಕ ಜನರು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವುದು ಕಡಿಮೆಯಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

    ಅಪರಾಧ ಕೃತ್ಯಗಳಲ್ಲಿ ತೊಡಗುವುದನ್ನು ಬಿಟ್ಟು ಕ್ರಿಮಿನಲ್ ಗಳು ತರಕಾರಿಯನ್ನು ಮಾರಾಟ ಮಾಡುತ್ತಿದ್ದಾರೆ. ಹಿಂದಿನ ಸಮಾಜವಾದಿ ಮತ್ತು ಬಹುಜನ ಸಮಾಜವಾದಿ ಪಕ್ಷಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡಿದ್ದವು ಎಂದು ದೂರಿದರು.

    ಇದೇ ವೇಳೆ ಯುವಕರಿಗೆ ಉದ್ಯೋಗವನ್ನು ಸೃಷ್ಟಿಸುವ ಭರವಸೆಯನ್ನು ನೀಡಿದರು. 1.62 ಲಕ್ಷ ಪೊಲೀಸ್ ಕಾನ್ಸ್ ಟೇಬಲ್ ಗಳನ್ನು ಮತ್ತು 1.37 ಲಕ್ಷ ಶಿಕ್ಷಕರನ್ನು ಸರ್ಕಾರ ನೇಮಕ ಮಾಡಿಕೊಳ್ಳುತ್ತದೆ. ಗುತ್ತಿಗೆ ಆಧಾರದ ಶಿಕ್ಷಕರಿಗೆ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನವನ್ನು ಹೆಚ್ಚಿಸಲಾಗುವುದು ಎಂದು ತಿಳಿಸಿದರು.

    2013ರಲ್ಲಿ ಮುಜಾಫರ್ ನಗರದಲ್ಲಿ ನಡೆದ ಹಿಂದು ಮುಸ್ಲಿಂ ಗಲಭೆಯಲ್ಲಿ ಹಲವಾರು ಮುಸಲ್ಮಾನ ಕುಟುಂಬಗಳು ಸ್ಥಳಾಂತರಗೊಂಡವು. 2016 ರಲ್ಲಿ ಶಾಮ್ಲಿ ಜಿಲ್ಲೆಯ ಕೈರಾನ ಬ್ಲಾಕ್ ನಲ್ಲಿ ಹಿಂದೂಗಳಿಗೆ ಅಪಾಯ ಇದೆ ಎಂದು ಹಲವಾರು ಹಿಂದು ಕುಟುಂಬಗಳು ಸ್ಥಳಾಂತರಗೊಂಡವು ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಹಿಂದಿನ ಎಸ್ ಪಿ ಸರ್ಕಾರದಲ್ಲಿ ಎಲ್ಲಾ ಸಮುದಾಯದ ಯುವಕರಿಗೆ ಉದ್ಯೋಗ ಸಿಗಲಿಲ್ಲ. ಕೇವಲ ನಿರ್ಧಿಷ್ಟ ಸಮುದಾಯದವರಿಗೆ ಉದ್ಯೋಗಗಳು ದೊರೆತಿದೆ. ನಮ್ಮ ಸರ್ಕಾರದಲ್ಲಿ ಎಲ್ಲಾ ವರ್ಗದವರಿಗೂ ಉದ್ಯೋಗ ಸಿಗುವಂತೆ ನಿಯಮಗಳನ್ನು ರೂಪಿಸಿದ್ದೇವೆ ಎಂದು ತಿಳಿಸಿದರು.

  • ಲವ್ವರ್ ಜೊತೆ ಓಡಿ ಹೋಗಿದ್ದಕ್ಕೆ ಅಪ್ರಾಪ್ತೆಯ ಮೇಲೆ ತಂದೆ, ಅಣ್ಣ, ಕುಟುಂಬಸ್ಥರಿಂದ ಗ್ಯಾಂಗ್‍ರೇಪ್!

    ಲವ್ವರ್ ಜೊತೆ ಓಡಿ ಹೋಗಿದ್ದಕ್ಕೆ ಅಪ್ರಾಪ್ತೆಯ ಮೇಲೆ ತಂದೆ, ಅಣ್ಣ, ಕುಟುಂಬಸ್ಥರಿಂದ ಗ್ಯಾಂಗ್‍ರೇಪ್!

    ಲಕ್ನೋ: ಪ್ರೀತಿಸಿದ ಹುಡುಗನ ಜೊತೆ ಮನೆ ಬಿಟ್ಟು ಓಡಿಹೋಗಿದ್ದಕ್ಕೆ 17 ವರ್ಷದ ಹುಡುಗಿಯ ಮೇಲೆ ಕುಟುಂಬಸ್ಥರೇ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಉತ್ತರಪ್ರದೇಶದ ಮುಜಫರ್ ನಗರದ ದಂಧೇಡಾ ಗ್ರಾಮದಲ್ಲಿ ನಡೆದಿದೆ.

    ನಾನು ಪ್ರಿಯಕರನ ಜೊತೆ ಓಡಿ ಹೋಗಿದ್ದಕ್ಕೆ ಕುಟುಂಬದವರೇ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರು ನೀಡಿದ್ದಾಳೆ. ಈ ದೂರಿನ ಅನ್ವಯ ಆಕೆಯ ಅಪ್ಪ, ಅಣ್ಣ ಮತ್ತು ಇಬ್ಬರು ಚಿಕ್ಕಪ್ಪಂದಿರನ್ನು ಪೊಲೀಸರು ಬಂಧಿಸಿದ್ದಾರೆ.

     ಏನಿದು ಪ್ರಕರಣ?
    ಅದೇ ಗ್ರಾಮದ ಮೂರು ಮಕ್ಕಳ ತಂದೆಯಾಗಿರುವ, 32 ವರ್ಷದ ವ್ಯಕ್ತಿಯ ಜೊತೆ ಇದೇ ವರ್ಷದ ಜುಲೈ ಮತ್ತು ಅಕ್ಟೋಬರ್ ನಲ್ಲಿ ಎರಡು ಬಾರಿ ಯುವತಿ ಓಡಿ ಹೋಗಿದ್ದಳು. ಈ ವೇಳೆ ಪೋಷಕರು ತನ್ನ ಮಗಳನ್ನು ಅಪಹರಣ ಮಾಡಲಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ್ದರು.

    ಈ ದೂರಿನ ಆಧಾರದಲ್ಲಿ ಸಂತ್ರಸ್ತೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದರು. ಈ ಸಂದರ್ಭದಲ್ಲಿ ಸಂತ್ರಸ್ತೆ ನಾನೇ ಇಷ್ಟ ಪಟ್ಟು ಆತನ ಹಿಂದೆ ಓಡಿ ಹೋಗಿದ್ದೆ ಎಂದು ಹೇಳಿದ ಮೇಲೆ ಆತನನ್ನು ಬಿಟ್ಟು ಕಳುಹಿಸಿದ್ದರು.

    ಮನೆಯವರು ಎರಡನೇ ಬಾರಿ ಆರೋಪಿ ವ್ಯಕ್ತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದಾಗ, ಆಕೆ ಅಲಹಾಬಾದ್ ಹೈಕೋರ್ಟ್‍ಗೆ ನವೆಂಬರ್ 2 ರಂದು ಅರ್ಜಿ ಸಲ್ಲಿಸಿ ನರ್ಸಿಂಗ್ ಹೋಮ್ ಒಂದರಲ್ಲಿ ತನ್ನ ಮನೆಯವರೇ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಬಲವಂತದಿಂದ ಗರ್ಭಪಾತ ಮಾಡಿಸಲು ಮುಂದಾಗಿದ್ದರು ಎಂದು ತಿಳಿಸಿದ್ದಳು.

    ಈಗ ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376ಡಿ ಮತ್ತು 313 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

    ಸಂತ್ರಸ್ತೆಯ ತಾಯಿ ಮತ್ತು ಅತ್ತಿಗೆ ಪ್ರತಿಕ್ರಿಯಿಸಿ, ತಮ್ಮ ಮನೆಯವರ ವಿರುದ್ಧ ಮಾಡಲಾಗಿರುವ ಆರೋಪಗಳು ಸುಳ್ಳು ಎಂದು ಹೇಳಿದ್ದಾರೆ.

     

  • 12 ಮದುವೆ, 13ನೇ ಹೆಂಡ್ತಿಯನ್ನ ಕೊಲೆ ಮಾಡ್ದ- 14ನೇ ಮದುವೆಗೂ ರೆಡಿ!

    12 ಮದುವೆ, 13ನೇ ಹೆಂಡ್ತಿಯನ್ನ ಕೊಲೆ ಮಾಡ್ದ- 14ನೇ ಮದುವೆಗೂ ರೆಡಿ!

    ಲಕ್ನೋ: 12 ಮಹಿಳೆಯರಿಗೆ ವಿಚ್ಛೇದನ ನೀಡಿದ್ದ ವ್ಯಕ್ತಿಯೊಬ್ಬ 14ನೇ ಮದುವೆ ಮಾಡಿಕೊಳ್ಳಲು ಮುಂದಾಗಿ, ತನ್ನ 13ನೇ ಹೆಂಡತಿಯನ್ನು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ರಾಯ್‍ಬರೇಲಿಯಲ್ಲಿ ನಡೆದಿದೆ.

    ಪತ್ನಿಯನ್ನು ಕೊಲೆ ಮಾಡಿರುವ ಆರೋಪಿ ರಾಯ್‍ಬರೇಲಿಯ ಅಮೇಥಿ ಪ್ರದೇಶದ ನಿವಾಸಿ ಮೊಹಮ್ಮದ್ ಮುಸ್ತಕೀಮ್ ಎಂದು ತಿಳಿದು ಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಆರೋಪಿ ಮುಸ್ತಕೀಮ್ ನಾಲ್ಕು ವರ್ಷಗಳ ಹಿಂದೆ 13ನೇ ಮದುವೆಯಾಗಿದ್ದು, ದಂಪತಿಗೆ ಮೂರು ತಿಂಗಳ ಮಗು ಸಹ ಇದೆ. ಸ್ಥಳೀಯರು ನೀಡಿರುವ ಮಾಹಿತಿಯಂತೆ ಆರೋಪಿ ಪ್ರತಿದಿನ ತನ್ನ ಪತ್ನಿಯೊಂದಿಗೆ ಜಗಳವಾಡ್ತಿದ್ದ. ನಾಲ್ಕು ದಿನಗಳ ಹಿಂದೆ ಮೃತ ಮಹಿಳೆ ತಂದೆಯನ್ನು ಭೇಟಿ ಮಾಡಿ ಮಗಳಿಗೆ ವಿಚ್ಛೇದನ ನೀಡುವುದಾಗಿ ತಿಳಿಸಿದ್ದ.

    ಮೃತ ಮಹಿಳೆಯು ಸೋಮವಾರ ಮನೆಯಿಂದ ಕಾಣೆಯಾಗಿದ್ದು, ಮಂಗಳವಾರ ರಾತ್ರಿ ಆಕೆಯ ದೇಹ ಗ್ರಾಮದ ಗದ್ದೆಯೊಂದರಲ್ಲಿ ಪತ್ತೆಯಾಗಿತ್ತು. ಅಲ್ಲದೆ ಆಕೆಯ ದೇಹದ ಮೇಲೆ ಹಲವು ಗಾಯದ ಗುರುತುಗಳಾಗಿದ್ದು, ಕತ್ತು ಹಿಸುಕಿ ಕೊಲೆ ಮಡುವ ಮುನ್ನ ಆಕೆಯ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿಯನ್ನು ನೀಡಿದ್ದಾರೆ. ಅದೇ ರಾತ್ರಿ ಮುಸ್ತಕೀಮ್‍ನನ್ನು ಪೊಲೀಸರು ಬಂಧಿಸಿದ್ದಾರೆ.

    ಮುಸ್ತಕೀಮ್ ತನ್ನ ಮಗಳನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ಅಶ್ವಾಸನೆ ನೀಡಿದ್ದರಿಂದ ಮಗಳನ್ನು ಕೊಟ್ಟು ಮದುವೆ ಮಾಡಿಕೊಟ್ಟೆ ಎಂದು ಮೃತ ಮಹಿಳೆಯ ತಂದೆ ಹೇಳಿದ್ದಾರೆ. ಮೂಲಗಳ ಪ್ರಕಾರ ಆರೋಪಿ ಮುಸ್ತಕೀಮ್ 14 ನೇ ಮದುವೆ ಮಾಡಿಕೊಳ್ಳಲು ಯೋಚಿಸಿದ್ದ. ಅದಕ್ಕಾಗಿ ಹುಡುಗಿಯನ್ನೂ ಆರಿಸಿದ್ದ ಎಂದು ವರದಿಯಾಗಿದೆ.

  • ಗಂಡನ ಎದುರೇ ಮಹಿಳೆಯ ಮೇಲೆ ಗ್ಯಾಂಗ್‍ರೇಪ್

    ಗಂಡನ ಎದುರೇ ಮಹಿಳೆಯ ಮೇಲೆ ಗ್ಯಾಂಗ್‍ರೇಪ್

    ಲಕ್ನೋ: ಗಂಡನ ಎದುರೆ ಮಹಿಳೆಗೆ ಗನ್ ತೋರಿಸಿ ಬೆದರಿಸಿ ನಾಲ್ವರು ಸಾಮೂಹಿಕ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ. ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಈ ಘಟನೆ ನಡೆದಿದೆ.

    ಗನ್ ತೋರಿಸಿ ಬೆದರಿಸಿ ನಾಲ್ವರು ದುಷ್ಕರ್ಮಿಗಳು ಅತ್ಯಾಚಾರವನ್ನು ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಅಲ್ಲದೇ ಆಕೆಯ ಮಗನನ್ನು ಕೊಲೆ ಮಾಡುವುದಾಗಿ ಬೆದರಿಸಿದ್ದು, ಗಂಡನ ಮೇಲೂ ಹಲ್ಲೆ ಮಾಡಿದ್ದಾಗಿ ಮಹಿಳೆ ಹೇಳಿದ್ದಾರೆ.

    ಈ ಕುರಿತು ಸಂತ್ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ನಾಲ್ವರು ದುಷ್ಕರ್ಮಿಗಳು ತನ್ನನ್ನು ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ಎಸಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

    ಘಟನೆಯ ಕುರಿತು ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದು, ಸಂತ್ರಸ್ತೆ ಮತ್ತು ಆಕೆಯ ಪತಿಯನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದರೆ. ಮುಂದಿನ ತನಿಖೆಯನ್ನು ನಡೆಸುವುದಾಗಿ ಪೊಲೀಸ್ ಅಧೀಕ್ಷಕರು ಮಾಹಿತಿ ನೀಡಿದ್ದಾರೆ.

  • ಹಳಿ ತಪ್ಪಿ ಮನೆ-ಕಾಲೇಜ್ ಗೆ ನುಗ್ಗಿದ ಉತ್ಕಲ್ ಎಕ್ಸ್ ಪ್ರೆಸ್-10 ಸಾವು

    ಹಳಿ ತಪ್ಪಿ ಮನೆ-ಕಾಲೇಜ್ ಗೆ ನುಗ್ಗಿದ ಉತ್ಕಲ್ ಎಕ್ಸ್ ಪ್ರೆಸ್-10 ಸಾವು

    ಮುಜಾಫರ್ ನಗರ: ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಖೌತಲಿ ಎಂಬಲ್ಲಿ ಉತ್ಕಲ್ ಎಕ್ಸ್ ಪ್ರೆಸ್ ಅಪಘಾತಕ್ಕೀಡಾಗಿದೆ. ಸ್ಥಳೀಯ ಮಾಧ್ಯಮಗಳ ವರದಿಯ ಪ್ರಕಾರ ಸದ್ಯ ಹತ್ತು ಜನರು ಸಾವನ್ನಪ್ಪಿದ್ದು, ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

    ರೈಲ್ವೆ ಓರಿಸ್ಸಾದ ಪುರಿಯಿಂದ ಹರಿದ್ವಾರಕ್ಕೆ ತೆರಳುವ ವೇಳೆ ಅಪಘಾತ ಸಂಭವಿಸಿದೆ. ನವದೆಹಲಿಯ 100 ಕಿ.ಮೀ ದೂರದಲ್ಲಿ ಅಪಘಾತ ಸಂಭವಿಸಿದೆ. ರೈಲ್ವೆ ಸಚಿವ ಸುರೇಶ್ ಪ್ರಭು ಈಗಾಗಲೇ ಸ್ಥಳೀಯ ರೈಲ್ವೆ ಇಲಾಖೆಯಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಅಪಘಾತಕ್ಕೆ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸಲು ಸುರೇಶ್ ಪ್ರಭು ಆದೇಶಿಸಿದ್ದಾರೆ.

    ಅಪಘಾತ ಸಂಭವಿಸಿದ ಸ್ಥಳದಲ್ಲಿ ವಿದ್ಯುತ್ ಇಲ್ಲದಿರುವುದು ರಕ್ಷಣಾ ಕಾರ್ಯಚರಣೆಗೆ ತೊಂದರೆಯನ್ನುಂಟು ಮಾಡಿದೆ. ರೈಲ್ವೆಯ 6 ರಿಂದ 8 ಬೋಗಿಗಳು ಹಳಿ ತಪ್ಪಿದ್ದು, ಸುಮಾರು 50ಕ್ಕೂ ಹೆಚ್ಚು ಜನರು ರೈಲ್ವೆಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಹಲವು ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಎರಡೂ ಬೋಗಿಗಳು ಒಂದರ ಮೇಲೊಂದು ಬಿದ್ದಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ.

    ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ 3.5 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂ. ಮತ್ತು ಸಣ್ಣ ಪುಟ್ಟ ಗಾಯಾಳುಗಳಿಗೆ 25 ಸಾವಿರ ರೂ. ಪರಿಹಾರ ಹಣವನ್ನು ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಪ್ರಕಟಿಸಿದ್ದಾರೆ.

     

  • 327 ದಿನಗಳಲ್ಲಿ 6000 ಕೇಸ್ ಇತ್ಯರ್ಥ: ವಿಶ್ವ ದಾಖಲೆ ನಿರ್ಮಿಸಿದ ಉತ್ತರಪ್ರದೇಶದ ಜಡ್ಜ್

    327 ದಿನಗಳಲ್ಲಿ 6000 ಕೇಸ್ ಇತ್ಯರ್ಥ: ವಿಶ್ವ ದಾಖಲೆ ನಿರ್ಮಿಸಿದ ಉತ್ತರಪ್ರದೇಶದ ಜಡ್ಜ್

    – 903 ದಂಪತಿಗಳು ಒಂದಾದ್ರು

    ಮುಜಾಫರ್‍ನಗರ್: 327 ಕೆಲಸದ ದಿನಗಳಲ್ಲಿ ಒಟ್ಟು 6065 ಪ್ರಕರಣಗಳನ್ನು ಇತ್ಯರ್ಥ ಮಾಡುವ ಮೂಲಕ ಉತ್ತರಪ್ರದೇಶದ ಮುಜಾಫರ್‍ನಗರದ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರೊಬ್ಬರು ವಿಶ್ವ ದಾಖಲೆ ನಿರ್ಮಿಸಿದ್ದಾರೆ.

    ಜಿಲ್ಲೆಯಲ್ಲಿ ವಕೀಲರ ಪ್ರತಿಭಟನೆಯ ನಡುವೆಯೂ 327 ದಿನಗಳಲ್ಲಿ 6065 ಕೇಸ್‍ಗಳನ್ನು ಬಗೆಹರಿಸಿದ್ದೇನೆ ಎಂದು ನ್ಯಾಯಾಧೀಶರಾದ ತೇಜ್ ಬಹದ್ದೂರ್ ಸಿಂಗ್ ವರದಿಗಾರರಿಗೆ ತಿಳಿಸಿದ್ದಾರೆ.

    ತೇಜ್ ಬಹದ್ದೂರ್ ಅವರ ಈ ದಾಖಲೆ ಗಿನ್ನೀಸ್ ಬುಕ್ ಆಫ್ ರೆಕಾರ್ಡ್ಸ್ ನ ಪುಟ ಸೇರಿರುವುದನ್ನು ಗಿನ್ನೀಸ್ ರೆಕಾಡ್ರ್ಸ್‍ನವರು ಸ್ಪಷ್ಟಪಡಿಸಿದ್ದಾರೆಂದು ವರದಿಯಾಗಿದೆ.

    ಕೋರ್ಟ್ ನಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಸಂಖ್ಯೆಯನ್ನ ಕಡಿಮೆ ಮಾಡಿ ಕಕ್ಷಿಗಾರರಿಗೆ ನ್ಯಾಯ ಒದಗಿಸುವುದು ನನ್ನ ಉದ್ದೇಶ ಎಂದು ನ್ಯಾಯಾಧೀಶರಾದ ಸಿಂಗ್ ಹೇಳಿದ್ದಾರೆ. ಇಡೀ ದೇಶದಲ್ಲಿ ವಿಲೇವಾರಿ ಮಾಡಲಾದ ಕೇಸ್‍ಗಳಲ್ಲಿ ಇದು ಅತ್ಯಂತ ಹೆಚ್ಚಿನದ್ದು. ಕೌಟುಂಬಿಕ ನ್ಯಾಯಾಲಯದಲ್ಲಿ ಕೇಸ್ ಬಗೆಹರಿದ ನಂತರ ಒಟ್ಟು 903 ದಂಪತಿಗಳು ಒಂದಾಗಿದ್ದಾರೆ ಎಂದು ಸಿಂಗ್ ತಿಳಿಸಿದ್ದಾರೆ.