Tag: Muzarai Department

  • ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಪ್ರಸಾದ ಟೆಸ್ಟ್ ಮಾಡಲು ತೀರ್ಮಾನ: ರಾಮಲಿಂಗಾ ರೆಡ್ಡಿ

    ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಪ್ರಸಾದ ಟೆಸ್ಟ್ ಮಾಡಲು ತೀರ್ಮಾನ: ರಾಮಲಿಂಗಾ ರೆಡ್ಡಿ

    – ದೇಶದ ಎಲ್ಲಾ ದೇವಸ್ಥಾನಗಳ ಪ್ರಸಾದವನ್ನೂ ಟೆಸ್ಟ್ ಮಾಡಲಿ
    – ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಎಚ್ಚೆತ್ತ ಮುಜರಾಯಿ ಇಲಾಖೆ

    ಬೆಂಗಳೂರು: ತಿರುಪತಿ ಲಡ್ಡು (Tirupathi Laddu) ವಿವಾದವಾದ ಬೆನ್ನಲ್ಲೇ, ರಾಜ್ಯ ಎಚ್ಚೆತ್ತಿದೆ. ರಾಜ್ಯದ ಎಲ್ಲಾ ದೇವಾಲಯಗಳ ಪ್ರಸಾದ ಟೆಸ್ಟ್ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಹೇಳಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರು, ಆಗಮಿಕರ ಹಾಗೂ ಉಪಾಧಿವಂತರ ಒಕ್ಕೂಟದ ತೀರ್ಮಾನಕ್ಕೆ ಪ್ರತಿಕ್ರಿಯಿಸಿದ್ದಾರೆ. ಮಲ್ಲೇಶ್ವರಂ ಟಿಟಿಡಿ (Malleshwaram TTD) ದೇವಸ್ಥಾನದ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ತಿಳಿಸುತ್ತೇನೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ನಾಗಮಂಗಲ ಗಲಭೆ ಬೆನ್ನಲ್ಲೇ ಗ್ರಾಮ ತೊರೆದು ಬಂಧನ ಭೀತಿಯಲ್ಲಿ ಯುವಕ ಸಾವು

    ದೇಶದ ಎಲ್ಲಾ ದೇವಸ್ಥಾನಗಳ ಪ್ರಸಾದ ಟೆಸ್ಟ್ ಮಾಡಲಿ:
    ರಾಜ್ಯದ ಎಲ್ಲಾ ದೇವಾಲಯಗಳ ಪ್ರಸಾದ ಟೆಸ್ಟ್ ಮಾಡಿಸುತ್ತೇನೆ. ನಮ್ಮ ರಾಜ್ಯ 99% ದೇವಾಲಯಗಳು ನಂದಿನಿ ತುಪ್ಪವನ್ನೆ ಬಳಸಿಕೊಳ್ಳುತ್ತಾ ಇದ್ದಾರೆ. ಜನರಿಗೆ ಸಂಶಯ ಬೇಡ ಅಂತಾ ನಂದಿನಿ ತುಪ್ಪ ಬಳಕೆ ಮಾಡಬೇಕು ಅಂತಾ ಆದೇಶ ಮಾಡಿದ್ದೇವೆ. ಕೇಂದ್ರದ ಮಂತ್ರಿ ಒಬ್ಬರು ಪ್ರಸಾದ ಟೆಸ್ಟ್ ಮಾಡಬೇಕು ಅಂತಾ ಹೇಳಿದ್ದಾರೆ. ನನ್ನ ಅಭಿಪ್ರಾಯ ದೇಶದ ಎಲ್ಲಾ ದೇವಸ್ಥಾನಗಳ ಪ್ರಸಾದ ಟೆಸ್ಟ್ ಮಾಡಲಿ ಎಂದಿದ್ದಾರೆ.

    ನಮ್ಮ ರಾಜ್ಯದ ದೇವಸ್ಥಾನಗಳಲ್ಲಿ ಎಲ್ಲಿಯೂ ಅಂತಹ ಘಟನೆ ಆಗಿಲ್ಲ. ತಿರುಪತಿ ಲಡ್ಡು ಪ್ರಸಾದದ ಸಂಶಯದ ಬಗ್ಗೆ ತೀರ್ಮಾನ ಆಗೋವರೆಗೂ ಬಳಸಬಾರದು ಅಂತಾ ಚರ್ಚೆ ಆಗ್ತಿರೋ ವಿಷಯ. ನಮ್ಮ ರಾಜ್ಯದ ವಿಚಾರ ಅಲ್ಲ ಇದು ಆಂಧ್ರಪ್ರದೇಶ ವಿಚಾರ ಅಲ್ಲಿನ ಸರ್ಕಾರ ತೀರ್ಮಾನ ಮಾಡಬೇಕು. ಜನ ಬಳಸದೇ ಇದ್ರೆ ಮುಗಿದೇ ಹೋಯ್ತು ಎಂದಿದ್ದಾರೆ.

    ಏನಿದು ವಿವಾದ?
    ಬುಧವಾರ ನಡೆದ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ ನಾಯ್ಡು, ಜಗನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನವು ಪ್ರಸಾದವಾಗಿ ನೀಡುವ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆರೋಪಿಸಿದ್ದರು.

    ಆಂಧ್ರಪ್ರದೇಶದ (Andhrapradesh) ಸಿಎಂ ಎನ್.ಚಂದ್ರಬಾಬು ನಾಯ್ಡು (N Chandrababu Naidu) ಅವರ ಆರೋಪದ ಕುರಿತು ಈಗಾಗಲೇ ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ಅವರಿಗೆ ವಿವರವಾದ ವರದಿ ಕೇಳಿದ್ದಾರೆ.ಇದನ್ನೂ ಓದಿ: ಮೀಸಲಾತಿ ಕುರಿತ ಹೇಳಿಕೆಗೆ ಆಕ್ಷೇಪ – ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ದೂರು

    ಇದರ ಬೆನ್ನಲ್ಲೇ ರಾಜ್ಯ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಮುಜರಾಯಿ ಇಲಾಖೆ ಎಚ್ಚೆತ್ತಿದೆ. ರಾಜ್ಯದ ಎಲ್ಲಾ ದೇವಾಲಯಗಳ ಪ್ರಸಾದ ಟೆಸ್ಟ್ ಮಾಡಲು ತೀರ್ಮಾನಿಸಲಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

  • ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ – ಸಂಕಷ್ಟದಲ್ಲಿ ಮುಜರಾಯಿ ಇಲಾಖೆಯ ಶಾಲೆ

    ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ – ಸಂಕಷ್ಟದಲ್ಲಿ ಮುಜರಾಯಿ ಇಲಾಖೆಯ ಶಾಲೆ

    ರಾಯಚೂರು: ಜಿಲ್ಲೆಯಲ್ಲಿ ಮುಜರಾಯಿ ಇಲಾಖೆಯ ನಿರ್ಲಕ್ಷ್ಯದಿಂದ ನೂರಾರು ವಿದ್ಯಾರ್ಥಿಗಳ ಓದು ಅತಂತ್ರ ಸ್ಥಿತಿಗೆ ತಲುಪಿದೆ. ತಾಲೂಕಿನ ದೇವಸುಗೂರಿನ ಐತಿಹಾಸಿಕ ಶ್ರೀ ಸುಗೂರೇಶ್ವರ ದೇವಾಲಯ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಶಾಲೆಯನ್ನೇ ಮುಚ್ಚುವ ಸ್ಥಿತಿ ಬಂದಿದೆ.

    ಶ್ರೀ ಸುಗೂರೇಶ್ವರ ದೇವಾಲಯ ಹಿಂದು ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿರುವ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಸ್ಥಳ. ದೇವಾಲಯದ ಶಿಕ್ಷಣ ಸಂಸ್ಥೆ ನರ್ಸರಿಯಿಂದ ಪದವಿವರೆಗೆ ತರಗತಿಗಳನ್ನು ನಡೆಸುತ್ತ ಗ್ರಾಮೀಣ ಭಾಗಕ್ಕೆ ತನ್ನದೇ ಆದ ಕೊಡುಗೆಗಳನ್ನು ನೀಡುತ್ತಿತ್ತು. ಆದರೆ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನ ಆಡಳಿತ ಮಂಡಳಿ ದಿವ್ಯ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳ ಪಾಲಿಗೆ ಶಾಲೆ ಮಕ್ಕಳಿಗೆ ವರದಾನವಾಗುವ ಬದಲು ಶಾಪವಾಗಿದೆ. 2019ರಲ್ಲಿ ಶಾಲೆ ಮತ್ತು ಕಾಲೇಜ್‍ನ್ನು ಖಾಸಗಿಯವರಿಗೆ ಗುತ್ತಿಗೆ ನೀಡಲಾಗಿದ್ದು ಸಂಸ್ಥೆ ಇದೀಗ ಅಧೋಗತಿಗೆ ಹೋಗಿದೆ ಎಂದು ಪೋಷಕರು, ಶಿಕ್ಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: 21 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ- ರಾಜ್ಯದಲ್ಲಿಂದು 92 ಮಂದಿಗೆ ಕೊರೊನಾ, ಇಬ್ಬರು ಸಾವು

    ನರ್ಸರಿಯಿಂದ ಡಿಗ್ರಿವರೆಗೆ ಸುಮಾರು 170 ವಿದ್ಯಾರ್ಥಿಗಳು ಓದುತ್ತಿದ್ದು 12 ಜನ ಶಿಕ್ಷಕರು ಕೆಲಸ ಮಾಡುತ್ತಿದ್ದಾರೆ. ಕೆಲ ಶಿಕ್ಷಕರನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. ಕೆಲಸ ಕಳೆದುಕೊಂಡ ಶಿಕ್ಷಕರು ಕೆಲಸ ಹಾಗೂ ಬಾಕಿ ಸಂಬಳಕ್ಕಾಗಿ ಹೋರಾಟ ನಡೆಸಿದ್ದಾರೆ. ವಿದ್ಯಾರ್ಥಿಗಳು ಅಗತ್ಯ ಶಿಕ್ಷಕರಿಲ್ಲದೆ ಪಾಠಗಳು ಸರಿಯಾಗಿ ನಡೆಯದೇ ಪರದಾಡುತ್ತಿದ್ದಾರೆ. ಬಡ ಪೋಷಕರು ಮಕ್ಕಳ ಭವಿಷ್ಯದ ಬಗ್ಗೆ ಚಿಂತಿಸುತ್ತಿದ್ದಾರೆ.

    ಶಿಕ್ಷಣ ಸಂಸ್ಥೆ ಸರಿಯಾಗಿ ನಡೆಯದೇ, ಗುತ್ತಿಗೆ ಪಡೆದವರು ಬಾಡಿಯನ್ನೂ ನೀಡದೆ ಲಕ್ಷಾಂತರ ರೂಪಾಯಿ ಬಾಕಿ ಉಳಿಸಿಕೊಂಡ ಹಿನ್ನೆಲೆ ಸರ್ಕಾರ 2021 ಜೂನ್ ತಿಂಗಳಲ್ಲಿ ಸಂಸ್ಥೆ ನಿರ್ವಹಣೆಗೆ ಟೆಂಡರ್ ಕರೆದಿತ್ತು. ಅದಕ್ಕೆ ಏಳು ಅರ್ಜಿಗಳು ಬಂದಿದ್ದು ಅತೀ ಹೆಚ್ಚು ದರ ತೋರಿಸಿರುವ ಅರ್ಜಿದಾರರಿಗೆ ಟೆಂಡರ್ ನೀಡಬೇಕು. ಆದ್ರೆ ಜಿಲ್ಲಾಡಳಿತ ವಿಳಂಬ ಧೋರಣೆ ತೋರುತ್ತಿತುವುದರಿಂದ ಶಾಲೆಯ ಪರಸ್ಥಿತಿ ಇನ್ನೂ ಅಧೋಗತಿಗೆ ಹೋಗಿದೆ. ಟೆಂಡರ್ ಪ್ರಕ್ರಿಯೆ ಆರಂಭವಾಗಿ 9 ತಿಂಗಳು ಕಳೆದರು ಪೂರ್ಣಗೊಳಿಸುತ್ತಿಲ್ಲ. ಇದರಿಂದ ಶಿಕ್ಷಕರೂ ಇಲ್ಲದೆ, ಸಮರ್ಪಕ ಆಡಳಿತ ಮಂಡಳಿಯೂ ಇಲ್ಲದೆ ವಿದ್ಯಾರ್ಥಿಗಳ ಓದು ಅತಂತ್ರಕ್ಕೆ ಸಿಲುಕಿದೆ. ಅಧಿಕಾರಿಗಳು ಮಾತ್ರ ಒಬ್ಬರ ಮೇಲೆ ಒಬ್ಬರು ಆರೋಪ ಹೊರಿಸುತ್ತಾ ನಿರ್ಲಕ್ಷ್ಯ ಮೆರೆಯುತ್ತಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲೇ ಟೆಂಡರ್ ಫೈಲ್ ಕೊಳೆಯುತ್ತಿದೆ. ಇದನ್ನೂ ಓದಿ: ಇನ್ಮುಂದೆ 60 ಕಿ.ಮೀ. ವ್ಯಾಪ್ತಿಯೊಳಗೆ ಟೋಲ್ ತೆರಿಗೆ ಇರಲ್ಲ: ನಿತಿನ್‌ ಗಡ್ಕರಿ

    ಮುಜರಾಯಿ ಇಲಾಖೆ ಅಡಿಯಲ್ಲಿರುವ ಶಿಕ್ಷಣ ಸಂಸ್ಥೆ ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡುವ ಬದಲು ಗೊಂದಲಕ್ಕೀಡು ಮಾಡಿದೆ. ಕನಿಷ್ಠ ಈಗಲಾದ್ರೂ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಅರ್ಹರ ಕೈಗೆ ಅವಕಾಶ ನೀಡಬೇಕಿದೆ. ಇಲ್ಲಿನ ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂಬುದು ಇಲ್ಲಿನ ಜನರ ಆಶಯವಾಗಿದೆ.

  • ಕೊರೊನಾ ಎಫೆಕ್ಟ್- ಚಿಕ್ಕಬಳ್ಳಾಪುರದಲ್ಲಿ ದೇವಾಲಯ ಬಂದ್

    ಕೊರೊನಾ ಎಫೆಕ್ಟ್- ಚಿಕ್ಕಬಳ್ಳಾಪುರದಲ್ಲಿ ದೇವಾಲಯ ಬಂದ್

    – ಭಕ್ತರ ಪ್ರವೇಶಕ್ಕೆ ಬ್ರೇಕ್

    ಚಿಕ್ಕಬಳ್ಳಾಪುರ: ಕೊರೊನಾ ವೈರಸ್ ಭೀತಿ ಹಿನ್ನೆಲೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮುದುಗಾನಕುಂಟೆ ಗ್ರಾಮದ ಶ್ರೀ ಗಂಗಾಭಾಗೀರಥಿ ದೇವಾಲಯವನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

    ಗಂಗಾಭಾಗೀರಥಿ ದೇವಾಲಯಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಹೀಗಾಗಿ ಪ್ರತಿ ಸೋಮವಾರ ದೇವಾಲಯಕ್ಕೆ ಬರುತ್ತಿದ್ದ ಭಕ್ತರು ಇಂದು ಸಹ ಎಂದಿನಂತೆ ದೇವಾಲಯಕ್ಕೆ ಆಗಮಿಸಿದ್ದರು. ಆದರೆ ದೇವರ ದರ್ಶನ ಸಿಗದೆ ಮರಳಿದ್ದಾರೆ. ಚಿಕ್ಕಬಳ್ಳಾಪುರ -ಗೌರಿಬಿದನೂರು ಮಾರ್ಗದ ಪ್ರಮುಖ ರಸ್ತೆಯ ಕೇಂಗೇನಹಳ್ಳಿ ಬಳಿಯ ದೇವಾಲಯದ ಪ್ರವೇಶ ದ್ವಾರ, ಕಡಬೂರು ಮಾರ್ಗ ಹಾಗೂ ಗಂಗಸಂದ್ರ ಗ್ರಾಮದ ಬಳಿಯ ಪ್ರವೇಶ ದ್ವಾರ ಸೇರಿದಂತೆ ಸಾಗಾನಹಳ್ಳಿ ಗ್ರಾಮದ ಕಡೆ ಇರುವ ಪ್ರವೇಶ ದ್ವಾರಗಳಲ್ಲಿ ದೇವಸ್ಥಾನ ಬಂದ್ ಆಗಿರುವ ನಾಮಫಲಕ ಹಾಕಲಾಗಿದೆ.

    ನಾಲ್ಕೂ ಕಡೆ ಪೊಲೀಸರು ಹಾಗೂ ಕಂದಾಯ ಇಲಾಖೆಯ ಗ್ರಾಮ ಸಹಾಯಕರು, ಮುಜರಾಯಿ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ದೇವಸ್ಥಾನಕ್ಕೆ ಆಗಮಿಸುವ ಭಕ್ತರನ್ನು ವಾಪಸ್ ಕಳುಹಿಸಲಾಗುತ್ತಿದೆ. ಹೀಗಾಗಿ ದೂರದೂರುಗಳಿಂದ ಬಂದ ಭಕ್ತರು ಗಂಗಾದೇವಿಯ ದರ್ಶನ ಪಡೆಯಲಾಗದೆ ನಿರಾಸೆಯಿಂದ ತೆರಳುತ್ತಿದ್ದಾರೆ.

    ಸಂತಾನಭಾಗ್ಯ ಇಲ್ಲದವರು ಈ ಗಂಗಾಭಾಗೀರಥಿಗೆ ಪ್ರತಿ ಸೋಮವಾರ ಆಗಮಿಸಿ ದೇವಾಯಲದ ಆವರಣದಲ್ಲಿನ ಕಲ್ಯಾಣಿಯಲ್ಲಿ ಸ್ನಾನ ಮಾಡಿ ಪೂಜೆ ಸಲ್ಲಿಸಿ ದೇವಿಗೆ ಹರಕೆ ಹೊತ್ತರೆ ಮಕ್ಕಳಾಗುತ್ತವೆ ಎನ್ನುವ ನಂಬಿಕೆ ಭಕ್ತರಲ್ಲಿದೆ. ಹೀಗಾಗಿ ಪ್ರತಿ ಸೋಮವಾರ ಸಾವಿರಾರು ಭಕ್ತರು ಈ ದೇವಾಲಯಕ್ಕೆ ಆಗಮಿಸುತ್ತಾರೆ. ಆದರೆ ಕೊರೊನಾ ವೈರಸ್‍ನಿಂದಾಗಿ ಭಕ್ತರ ಆಗಮನಕ್ಕೆ ಬ್ರೇಕ್ ಬಿದ್ದಿದೆ. ಇಡೀ ದೇವಾಲಯದ ಆವರಣ ಬಿಕೋ ಎನ್ನುತ್ತಿದೆ. ಕೊರೊನ ವೈರಸ್ ಹರಡುವ ಸಾಧ್ಯತೆ ಇರುವುದರಿಂದ ಮುದುಗಾನಕುಂಟೆ ದೇವಾಲಯಕ್ಕೆ ಕೆಲ ದಿನಗಳ ಕಾಲ ಭಕ್ತರು ಆಗಮಿಸಬಾರದು ಎಂದು ಆಡಳಿತ ಮಂಡಳಿಯ ಸದಸ್ಯರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

  • ದೇವರಿಗೂ ತಟ್ಟಿದ ಕೊರೊನಾ ಭೀತಿ

    ದೇವರಿಗೂ ತಟ್ಟಿದ ಕೊರೊನಾ ಭೀತಿ

    ಬೆಂಗಳೂರು: ಕೊರೊನಾ ವೈರಸ್ ಭೀತಿ ದೇವರಿಗೂ ತಟ್ಟಿದ್ದು, ಬೆಂಗಳೂರಿನ ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ, ಹೋಮ, ಪ್ರಸಾದ ವಿತರಣೆಗೆ ಬ್ರೇಕ್ ಬಿದ್ದಿದೆ.

    ಕೊರೊನಾ ವೈರಸ್‍ನ ಹಾವಳಿ ಇರುವುದರಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶವಿಲ್ಲ ಎಂಬ ಸೂಚನಾ ಫಲಕವನ್ನ ದೇಗುಲಗಳ ಮುಂದೆ ಹಾಕಲಾಗಿದೆ. ಬೆಂಗಳೂರಿನಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಒಟ್ಟು 60 ದೇವಸ್ಥಾನಗಳಿವೆ. 60 ದೇಗುಲಗಳ ಪೈಕಿ ಹಲವು ದೇಗುಲಗಳಲ್ಲಿ ರಥೋತ್ಸವ, ಜಾತ್ರ ಮಹೋತ್ಸವ ಮುಕ್ತವಾಗಿವೆ. ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಬನಶಂಕರಿ, ಯಡಿಯೂರು, ಗವಿಗಂಗಾಧರೇಶ್ವರ, ಕಾಡುಮಲ್ಲೇಶ್ವರಂ ಸೇರಿದಂತೆ ಹಲವು ದೇಗುಲಗಳಲ್ಲಿ ಭಕ್ತರ ಪ್ರವೇಶವನ್ನ ನಿಷೇಧಿಸಲಾಗಿದೆ.

    ದೇಗುಲಗಳಲ್ಲಿ ಅನ್ನ ಸಂತರ್ಪಣೆ, ಪ್ರಸಾದ ವಿತರಣೆಯನ್ನೂ ಸ್ಥಗಿತಗೊಳಿಸಲಾಗಿದೆ. ದೇವಸ್ಥಾನಗಳಿಗೆ ಪ್ರವೇಶವಿಲ್ಲ ಎಂಬ ಮಾಹಿತಿ ಇಲ್ಲದೇ ಕೆಲ ಭಕ್ತರು ದೇಗುಲಕ್ಕೆ ಬರುತ್ತಿದ್ದಾರೆ. ಹೀಗೆ ಬರುವ ಭಕ್ತರಿಗೆ ದೇಗುಲದ ಹೊರಗಡೆಯೇ ಕೈಗಳನ್ನು ಶುದ್ಧವಾಗಿ ತೊಳೆದುಕೊಂಡು ದೇಗುಲದೊಳಗೆ ಪ್ರವೇಶ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ. ವಿಜಯನಗರದ ಕೊದಂಡರಾಮ ಸ್ವಾಮಿ ದೇಗುಲದಲ್ಲಿಯೂ ಪೂಜೆ- ಹೋಮವನ್ನ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

  • ಸುಳ್ವಾಡಿ ಕಿಚ್‍ಗುತ್ ಮಾರಮ್ಮ ದೇವಸ್ಥಾನ ಮುಜರಾಯಿ ವ್ಯಾಪ್ತಿಗೆ- ರಾಜಶೇಖರ ಪಾಟೀಲ್

    ಸುಳ್ವಾಡಿ ಕಿಚ್‍ಗುತ್ ಮಾರಮ್ಮ ದೇವಸ್ಥಾನ ಮುಜರಾಯಿ ವ್ಯಾಪ್ತಿಗೆ- ರಾಜಶೇಖರ ಪಾಟೀಲ್

    ಕಲಬುರಗಿ: ಚಾಮರಾಜನಗರದ ಸುಳ್ವಾಡಿ ಮಾರಮ್ಮನ ದೇವಸ್ಥಾನವನ್ನು ಮುಜರಾಯಿ ವ್ಯಾಪ್ತಿಗೆ ಸೇರಿಸಲು ನಿರ್ಧರಿಸಲಾಗಿದೆ ಎಂದು ಮುಜರಾಯಿ ಖಾತೆಯ ಸಚಿವ ರಾಜಶೇಖರ ಪಾಟೀಲ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ವಾಡಿ ದೇಗುಲದ ವಿಷ ಪ್ರಸಾದ ಸೇವನೆ ಪ್ರಕರಣದಿಂದಾಗಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಹೀಗಾಗಿ ಸುಳ್ವಾಡಿ ಮಾರಮ್ಮ ದೇವಾಸ್ಥಾನವನ್ನು ಮುಜರಾಯಿ ವ್ಯಾಪ್ತಿಗೆ ಸೇರಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಈಗಾಗಲೇ ತಹಶೀಲ್ದಾರ್ ದೇವಸ್ಥಾನದ ಸರ್ವೇ ಕಾರ್ಯವನ್ನು ಸಹ ಮಾಡಿ ಮುಗಿಸಿದ್ದಾರೆ. ಇದರ ಜೊತೆ ಗ್ರಾಮಸ್ಥರು ಸಹ ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸಬೇಕೆಂದು ಬೇಡಿಕೆಯಿಟ್ಟಿದ್ದಾರೆ. ಹೀಗಾಗಿ ಕೂಡಲೇ ಕಿಚ್‍ಗುತ್ ಮಾರಮ್ಮ ದೇವಾಲಯವನ್ನು ಶೀಘ್ರವೇ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ತರುತ್ತೇವೆಂದು ಹೇಳಿದ್ದಾರೆ.

    ಏನಿದು ಪ್ರಕರಣ?
    ಡಿಸೆಂಬರ್ 14ರ ಶುಕ್ರವಾರದಂದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಕಿಚ್‍ಗುತ್ ಮಾರಮ್ಮ ದೇವಸ್ಥಾನದಲ್ಲಿ ಗೋಪುರದ ಶಂಕುಸ್ಥಾಪನೆ ಕಾರ್ಯಕ್ರಮ ನೇರವೇರಿತ್ತು. ಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ್ದ ಬಳಿಕ, ಭಕ್ತರು ಪ್ರಸಾದದ ರೂಪದಲ್ಲಿ ರೈಸ್ ಬಾತ್ ಸೇವಿಸಿದ್ದರು. ಆದರೆ ಸ್ವಲ್ಪ ಸಮಯದ ನಂತರ ರೈಸ್ ಬಾತ್ ಸೇವಿಸಿದ್ದ 100 ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿ ಬಿದ್ದಿದ್ದರು. ಇದನ್ನು ಗಮನಿಸಿದ್ದ ಸ್ಥಳೀಯರು ಕೂಡಲೇ 108 ಆಂಬ್ಯುಲೆನ್ಸ್ ಗೆ ಕರೆ ಮಾಡಿ ಅಸ್ವಸ್ಥರನ್ನು ಆಸ್ಪತ್ರೆಗೆ ರವಾನಿಸಿದ್ದರು. ಅಸ್ವಸ್ಥರನ್ನು ಪರೀಕ್ಷಿಸಿದ್ದ ವೈದ್ಯರು, ಪ್ರಸಾದಲ್ಲಿ ವಿಷ ಬೆರೆತಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದರು. ಅಲ್ಲದೇ ವಿಧಿವಿಜ್ಞಾನ ವರದಿಯ ಪ್ರಕಾರ ಪ್ರಸಾದದಲ್ಲಿ ಆರ್ಗಾನ್ ಪಾಸ್ಫರಸ್ ಕಾಂಪೌಂಡ್ ಮೋನೋಕ್ರೋಟೋಫೋಸ್ ಎಂಬ ಕ್ರಿಮಿನಾಶಕ ಮಿಶ್ರಣವಾಗಿರುವುದಾಗಿ ಹೇಳಿತ್ತು. ಈ ಕ್ರಿಮಿನಾಶಕ ಮಿಶ್ರಣ ಮಾಡಿದ್ದ ಪ್ರಸಾದ ಸೇವಿಸಿದ್ದರ ಪರಿಣಾಮ ಇದುವರೆಗೂ 17 ಮಂದಿ ಮೃತಪಟ್ಟಿದ್ದರು.

    ಘಟನೆಗೆ ಕಾರಣವೇನು?
    ಸುಳ್ವಾಡಿ ದೇವಾಲಯದ ಟ್ರಸ್ಟ್ ನಲ್ಲಿ ಎರಡು ಬಣಗಳಿತ್ತು. ಟ್ರಸ್ಟ್ ಅಧ್ಯಕ್ಷರಾಗಿ ಇಮ್ಮಡಿ ಮಹದೇವಸ್ವಾಮೀಜಿ, ಸದಸ್ಯ ವಿ.ಮಾದಯ್ಯ, ವ್ಯವಸ್ಥಾಪಕ ಮಾದೇಶ್ ಒಂದು ಬಣವಾಗಿದ್ದರೆ, ಖಜಾಂಚಿ ನೀಲಕಂಠ ಶಿವಾಚಾರ್ಯ, ಉಪಾಧ್ಯಕ್ಷ ಪಿ.ಗುರುಮಲ್ಲಪ್ಪ, ಕಾರ್ಯದರ್ಶಿ ಶಶಿಬಿಂಬ, ಸದಸ್ಯರಾದ ಚಿನ್ನಪ್ಪಿ, ಪಿ.ಶಿವಣ್ಣ, ಎಚ್.ಲೋಕೇಶ್, ಎನ್.ಕೇಶವಮೂರ್ತಿ ಮತ್ತೊಂದು ಬಣವಾಗಿತ್ತು.

    ಮಾರಮ್ಮ ದೇವಸ್ಥಾನಕ್ಕೆ ಇತ್ತೀಚೆಗೆ ಲಕ್ಷಾಂತರ ಆದಾಯ ಬರತೊಡಗಿತ್ತು. ಹರಕೆ ರೂಪದಲ್ಲಿ ಬಂದ ಚಿನ್ನಾಭರಣ ಹಾಗೂ ಹಣಕಾಸನ್ನು ಇಮ್ಮಡಿ ಮಹದೇವಸ್ವಾಮಿ ಕೊಂಡೊಯ್ಯುತ್ತಿದ್ದರು. ಇದು ಇನ್ನೊಂದು ಬಣಕ್ಕೆ ನುಂಗಲಾರದ ತುತ್ತಾಗಿತ್ತು. ಈ ಹಿನ್ನೆಲೆಯಲ್ಲಿ ಎರಡು ಬಣದ ನಡುವೆ ಗಲಾಟೆಗಳು ನಡೆಯುತ್ತಿದ್ದವು. ಈ ನಡುವೆ ದೇವಸ್ಥಾನದ ಆಡಳಿತವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಇಮ್ಮಡಿ ಸ್ವಾಮೀಜಿ ಪ್ರಯತ್ನ ನಡೆಸುತ್ತಿದ್ದ.

    ಹೇಗಾದರೂ ಮಾಡಿ ಇನ್ನೊಂದು ಬಣಕ್ಕೆ ಕೆಟ್ಟ ಹೆಸರು ತರಬೇಕೆಂಬ ಕೆಟ್ಟ ಆಲೋಚನೆ ಇಮ್ಮಡಿ ಸ್ವಾಮೀಜಿಯದ್ದಾಗಿತ್ತು. ಆಗ ಪ್ರಸಾದಕ್ಕೆ ವಿಷ ಬೆರೆಸುವ ಕುತಂತ್ರ ಹೊಳೆದಿದೆ. ವಿಷಮಿಶ್ರಿತ ಪ್ರಸಾದ ಸೇವಿಸಿದವರು ವಾಂತಿ ಮಾಡಿ ಅಸ್ವಸ್ಥಗೊಳ್ಳುತ್ತಾರೆ. ಆಗ ಟ್ರಸ್ಟಿ ಚಿನ್ನಪ್ಪಿ ಹಾಗೂ ಇತರರಿಗೆ ಕೆಟ್ಟ ಹೆಸರು ಬರುತ್ತದೆ. ಇದರಿಂದಾಗಿ ದೇವಸ್ಥಾನ ಸಂಪೂರ್ಣವಾಗಿ ತಮ್ಮ ಆಡಳಿತಕ್ಕೆ ಒಳಪಡುತ್ತೆ ಎಂಬುದು ಸ್ವಾಮೀಜಿ ಪ್ಲಾನ್ ಮಾಡಿಕೊಂಡಿದ್ದ.

    ಸ್ವಾಮೀಜಿ ಕೃತ್ಯಕ್ಕೆ ವ್ಯವಸ್ಥಾಪಕ ಮಾದೇಶ್, ಮಾದೇಶನ ಹೆಂಡತಿ ಅಂಬಿಕಾ (ಅಂಬಿಕಾ ಸ್ವಾಮೀಜಿಯ ಸಂಬಂಧಿಯೂ ಹೌದು). ಈ ಮೂವರು ಸೇರಿ ಪ್ರಸಾದಕ್ಕೆ ವಿಷ ಬೆರೆಸಲು ಸಂಚು ರೂಪಿಸಿದ್ದರು. ಕ್ರಿಮಿನಾಶಕ ತಂದು ನಾಗರಕೊಯೀಲು ದೇವಸ್ಥಾನದ ಅರ್ಚಕ ದೊಡ್ಡಯ್ಯನಿಂದ ಪ್ರಸಾದದಲ್ಲಿ ವಿಷ ಬೆರೆಸಿದ್ದರು. ಪ್ರಕರಣದ ತೀವ್ರತೆಯನ್ನು ಅರಿತ ಪೊಲೀಸರು ತೀವ್ರವಾಗಿ ತನಿಖೆ ನಡೆಸಿದಾಗ ಈ ನಾಲ್ವರು ಆರೋಪಿಗಳು ಬಲೆಗೆ ಬಿದ್ದಿದ್ದಾರೆ. ಸದ್ಯ ನಾಲ್ವರು ಆರೋಪಿಗಳನ್ನು ವಿಚಾರಣೆಗೊಳಪಡಿಸಿ, ಜೈಲಿಗೆ ಕಳುಹಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸುಳ್ವಾಡಿ ದುರಂತದ ಬಳಿಕ ಎಚ್ಚೆತ್ತ ಮುಜರಾಯಿ ಇಲಾಖೆ! – ಆದೇಶದಲ್ಲಿ ಏನಿದೆ?

    ಸುಳ್ವಾಡಿ ದುರಂತದ ಬಳಿಕ ಎಚ್ಚೆತ್ತ ಮುಜರಾಯಿ ಇಲಾಖೆ! – ಆದೇಶದಲ್ಲಿ ಏನಿದೆ?

    ಬೆಂಗಳೂರು: ಸುಳ್ವಾಡಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ನೀಡಿದ್ದ ವಿಷ ಪ್ರಸಾದ ಸೇವಿಸಿ 14 ಮಂದಿ ಸಾವನ್ನಪ್ಪಿದ ಬಳಿಕ ಎಚ್ಚೆತ್ತಿರುವ ರಾಜ್ಯ ಮುಜರಾಯಿ ಇಲಾಖೆ, ದೇವಾಲಯಗಳಲ್ಲಿ ಅನ್ನದಾಸೋಹ, ಪ್ರಸಾದ ವಿತರಣೆಗೆ ಸ್ಥಳೀಯ ಅಧಿಕಾರಿಗಳ ಅನುಮತಿ ಕಡ್ಡಾಯ ಎಂಬ ಖಡಕ್ ಆದೇಶವನ್ನು ಹೊರಡಿಸಿದೆ.

    ಆದೇಶದಲ್ಲಿ ಏನಿದೆ?
    ದೇವರ ನೈವೇದ್ಯ ಮತ್ತು ದಾಸೋಹ ತಯಾರಿಸುವ ಕೋಣೆಯಲ್ಲಿ ಸಿಸಿ ಟಿವಿ ಅಳವಡಿಕೆಯೂ ಕೂಡ ಕಡ್ಡಾಯ. ಪ್ರಮುಖವಾಗಿ ದೇವಾಲಯದ ಅಡುಗೆ ಕೋಣೆಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ ಮೇಲೆ ಕಟ್ಟುನಿಟ್ಟಿನ ನಿಗಾವಹಿಸುವುದು.

    ತಯಾರಿಸಿದ ನೈವೇದ್ಯ/ ಅಡುಗೆಗೆ ಸ್ವೀಕರಿಸಲು ಯೋಗ್ಯವಾಗಿರುವ ಬಗ್ಗೆ ಖಚಿತಪಡಿಸಿಕೊಂಡು ನಂತರ ವಿತರಣೆ ಮಾಡಬೇಕು. ದೇವಾಲಯಗಳಲ್ಲಿ ತಯಾರಿಸುವ ಪ್ರಸಾದವನ್ನು ಆರೋಗ್ಯಾಧಿಕರಿಗಳು ಪರಿಶೀಲನೆ ನಡೆಸಬೇಕು. ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ನೀಡುವ ಪ್ರಸಾದಕ್ಕೆ ಆರೋಗ್ಯಾಧಿಕಾರಿಯಿಂದ ಅನುಮತಿ ಪಡೆದ ಮೇಲೆಯೇ ವಿತರಣೆ
    ಮಾಡಬೇಕು.

    ದೇವಾಲಯದ ಪರಿಸರದಲ್ಲಿ ಭಕ್ತಾದಿಗಳೇ ಪ್ರಸಾದ ತಯಾರಿಸಿ ನೇರವಾಗಿ ಭಕ್ತರಿಗೆ ನೀಡುವ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಆಹಾರ ಸುರಕ್ಷತಾ ತಂಡದಿಂದ ಪರೀಕ್ಷೆ ಒಳಪಡಿಸಿ ಅನುಮತಿ ಪತ್ರ ಪಡೆಯುವುದು ಕಡ್ಡಾಯ ಮಾಡಲಾಗಿದೆ.

    ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲಿ ಇಲಾಖೆ ನೀಡಿದ ನಿಯಮಗಳನ್ನು ಆಯಾ ದೇವಾಲಯ ಸಂಸ್ಥೆಗಳು ಪಾಲಿಸಬೇಕು ಎಂದು ತಿಳಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದೇಗುಲದ ಸಿಬ್ಬಂದಿಗೆ ಡ್ರೆಸ್ ಕೋಡ್ ಕಡ್ಡಾಯ: ಮುಜರಾಯಿ ಇಲಾಖೆ

    ದೇಗುಲದ ಸಿಬ್ಬಂದಿಗೆ ಡ್ರೆಸ್ ಕೋಡ್ ಕಡ್ಡಾಯ: ಮುಜರಾಯಿ ಇಲಾಖೆ

    ಬೆಂಗಳೂರು: ದೇವಸ್ಥಾನದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ ಕಡ್ಡಾಯವಾಗಿ ಡ್ರೆಸ್ ಕೋಡ್ ಪಾಲನೆ ಮಾಡಬೇಕೆಂದು ಮುಜರಾಯಿ ಇಲಾಖೆ ದೇಗುಲಗಳಿಗೆ ಸುತ್ತೋಲೆಯನ್ನು ಹೊರಡಿಸಿದೆ.

    ಮಹಿಳಾ ಸಿಬ್ಬಂದಿಗೆ ಸಲ್ವಾರ್ ಕಮೀಜ್, ಕುರ್ತಾಗಳನ್ನು ನಿಷೇಧಿಸಲಾಗಿದೆ. ಪುರಷರಿಗೆ ಜೀನ್ಸ್ ಪ್ಯಾಂಟ್‍ಗಳನ್ನು ಧರಿಸದಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಮಹಿಳಾ ಸಿಬ್ಬಂದಿ ನೀಲಿ ಸೀರೆ , ಬಿಳಿ ಬ್ಲೌಸ್ ಮತ್ತು ಪುರುಷ ಸಿಬ್ಬಂದಿಗೆ ನೀಲಿ ಶರ್ಟ್, ಸೆಕ್ಯೂರಿಟಿ ಗಳಿಗೆ ಖಾಕಿ ಪ್ಯಾಂಟ್ ಖಾಕಿ ಶರ್ಟ್ ಧರಿಸಲು ಆದೇಶಿಸಲಾಗಿದೆ. ಈ ಡ್ರೆಸ್ ಕೋಡ್ ಕಡ್ಡಾಯವಿದ್ದರೂ ಇದೂವರೆಗೂ ಪಾಲನೆ ಆಗುತ್ತಿರಲಿಲ್ಲ. ಹಾಗಾಗಿ ಮುಜರಾಯಿ ಇಲಾಖೆ ಮರು ಸುತ್ತೋಲೆಯನ್ನು ಹೊರಡಿಸಿದೆ.

    ಮುಜರಾಯಿ ಇಲಾಖೆಯ ಈ ಆದೇಶ ಎ ಮತ್ತು ಬಿ ಗ್ರೇಡ್ ದೇವಾಲಯಗಳಿಗೆ ಮಾತ್ರ ಅನ್ವಯವಾಗಲಿದೆ. ಈ ಹಿಂದೆ ದೇವಸ್ಥಾನಗಳಿಗೆ ಬರುವ ಭಕ್ತರಿಗೆ ಡ್ರೆಸ್ ಕೋಡ್ ಮಾಡಬೇಕೆಂದು ಚಿಂತಿಸಲಾಗಿತ್ತು. ಆರಂಭದಲ್ಲಿ ಭಕ್ತರಿಗೆ ಡ್ರೆಸ್ ಕೋಡ್ ವಿಧಿಸುವುದರಿಂದ ಬೇರೆ ರಾಜ್ಯ ಮತ್ತು ವಿದೇಶಗಳಿಂದ ಬರುವ ಭಕ್ತಾದಿಗಳ ಸಂಖ್ಯೆ ಇಳಿಮುಖವಾಗಲಿದೆ ಎಂಬ ಉದ್ದೇಶದಿಂದ ಯೋಚನೆಯನ್ನು ಆರಂಭದಲ್ಲಿಯೇ ಕೈಬಿಡಲಾಯಿತು.

  • ಮುಜುರಾಯಿ ದೇವಾಲಯಗಳಲ್ಲಿ ವ್ಯವಸ್ಥಾಪನಾ ಸಮಿತಿ ರಚನೆ: ಏನಿದು ವಿವಾದ? ಸಮಿತಿಯಲ್ಲಿ ಯಾರು ಇರುತ್ತಾರೆ?

    ಮುಜುರಾಯಿ ದೇವಾಲಯಗಳಲ್ಲಿ ವ್ಯವಸ್ಥಾಪನಾ ಸಮಿತಿ ರಚನೆ: ಏನಿದು ವಿವಾದ? ಸಮಿತಿಯಲ್ಲಿ ಯಾರು ಇರುತ್ತಾರೆ?

    ಕಾರವಾರ: ಮುಜರಾಯಿ ಆಡಳಿತಕ್ಕೆ ಒಳಪಟ್ಟ ದೇವಸ್ಥಾನಗಳಲ್ಲಿ ರಾಜ್ಯಸರ್ಕಾರ ವ್ಯವಸ್ಥಾಪನಾ ಸಮಿತಿ ರಚನೆ ಮಾಡಲು ಮುಂದಾಗಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ಉತ್ತರ ಕನ್ನಡ ಜಿಲ್ಲೆಯ ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿ ರಚನೆ ಪ್ರಕ್ರಿಯೆ ಚುರುಕು ಗೊಂಡಿದೆ. ಈ ಹಿನ್ನೆಲೆಯಲ್ಲಿ ಇದನ್ನು ವಿರೋಧಿಸಿ ಸ್ವರ್ಣವಲ್ಲಿ ಮಠದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳ ಅಧ್ಯಕ್ಷತೆಯಲ್ಲಿ ಬುಧವಾರ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

    ವಿವಾದ ಏನು?
    ಈ ಹಿಂದೆ ಮುಜರಾಯಿ ಇಲಾಖೆಯ ಕಾಯ್ದೆಯು ಕರ್ನಾಟಕದಲ್ಲಿ ಒಂದೊಂದು ಭಾಗಕ್ಕೆ ಅದರದೇ ಆದ ಕಾಯ್ದೆಯನ್ನು ಮಾಡಲಾಗಿತ್ತು. ಇದರಂತೆ ರಾಜ್ಯದಲ್ಲಿ ಮದ್ರಾಸ್, ಕೊಡಗು, ಮೈಸೂರು, ಹೈದರಾಬಾದ್, ಮುಂಬೈ ಕರ್ನಾಟಕ ದತ್ತಿ ನಿಯಮಗಳು ಜಾರಿಯಲ್ಲಿದ್ದು. ಒಂದೊಂದು ಭಾಗಕ್ಕೆ ಅದರದೇ ಆದ ಹಕ್ಕುಗಳು ಜಾರಿಯಲ್ಲಿದ್ದ ಕಾರಣ ಹಲವು ಆಡಳಿತಾತ್ಮಕ ಸಮಸ್ಯೆಗಳು ಎದುರಾಗಿತ್ತು. ಈ ತೊಂದರೆಯನ್ನು ನೀಗಿಸಲು ಏಕರೂಪ ಶಾಸನ ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಕೋರ್ಟ್ ನಿರ್ದೇಶನ ನೀಡಿತ್ತು. ಇದರಂತೆ 1997 ಮತ್ತು ನಿಯಮಗಳು 20002 ಎಂಬ ಏಕರೂಪ ಮುಜರಾಯಿ ಕಾಯ್ದೆಯನ್ನು 2003ರ ಮೇ 1 ರಂದು ಜಾರಿಗೆ ತಂದಿದೆ. ಆದರೇ ಇದನ್ನು ಪ್ರಶ್ನಿಸಿ ಜಿಲ್ಲಾ ಹಿಂದೂ ಧಾರ್ಮಿಕ ದೇವಾಲಯಗಳ ಮಹಾ ಮಂಡಳಿ ಧಾರವಾಡ ಕೋರ್ಟ ನಲ್ಲಿ ದಾವೇ ಹೂಡಿ ಈ ಕಾಯ್ದೆ ರದ್ದಾಗುವಂತಾಯ್ತು. ಇನ್ನು ಅಂದಿನ ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿಗಳಾದ ರಾಮಜೋಯಿಸ್ ನೇತೃತ್ವದಲ್ಲಿ ಸಮಿತಿ ರಚಿಸಿ ಕಾಯ್ದೆಯನ್ನು ಜಾರಿಗೊಳಿಸಿತ್ತು.

    ಇನ್ನು ಈ ಬಗ್ಗೆ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿ ಕಾಯ್ದೆ ರದ್ದಾಗುವಂತೆ ಜಿಲ್ಲಾ ಹಿಂದೂ ಧಾರ್ಮಿಕ ದೇವಾಲಯದ ಮಹಾಮಂಡಳಿಗಳು ಪ್ರಯತ್ನಿಸಿದ್ದವು, ಆದರೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‍ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಿ ತಡೆಯಾಜ್ಞೆ ಪಡೆದಿದೆ. ಅಲ್ಲದೇ ಕಾಯ್ದೆಯ ಕಾಲಂ 25, 29 ರ ಅಡಿಯಲ್ಲಿ ದೇವಸ್ಥಾನದ ಆಡಳಿತ ಸುಗಮವಾಗಿ ನಡೆಯಲು ಸಮಿತಿ ರಚನೆಗೆ ಅನುವು ಮಾಡಿಕೊಟ್ಟಿದೆ.

    ಈ ಕಾಯ್ದೆಯನ್ನು ಸದುಪಯೋಗ ಪಡಿಸಿಕೊಂಡ ಅಂದಿನ ಬಿಜೆಪಿ ಸರ್ಕಾರ ಉಡುಪಿಯ ಕೃಷ್ಣ ದೇವಸ್ಥಾನ, ಗೋಕರ್ಣದ ಮಹಾಭಲೇಶ್ವರ ದೇವಸ್ಥಾನ ಮುಜರಾಯಿ ಇಲಾಖೆಯಿಂದ ಕೈ ತಪ್ಪುವಂತೆ ಮಾಡಿತ್ತು. ಪ್ರಸ್ತುತ ಸಿಎಂ ಸಿದ್ಧರಾಮಯ್ಯ ನವರ ಸರ್ಕಾರ ಇದೇ ನಿಟ್ಟಿನಲ್ಲಿ ಮುಂದುವರೆದಿದ್ದು ದೇವಸ್ಥಾನದ ಆಡಳಿತ ಸುಗಮವಾಗಿ ನಡೆಯಲು ಮೂರು ವರ್ಷ ಅಧಿಕಾರಾವಧಿಯ 9 ಜನರ ಸಮಿತಿ ರಚನೆಗೆ ಮುಂದಾಗಿದ್ದು ಈಗ ವಿವಾದಕ್ಕೆ ಕಾರಣವಾಗಿದೆ.

    ಸಮಿತಿ ಹೇಗೆ ರಚನೆಯಾಗುತ್ತೆ..?
    ವ್ಯವಸ್ಥಾಪನಾ ಸಮಿತಿ ರಚನೆಯಲ್ಲಿ ಒಂದು ಎಸ್‍ಸಿ, ಎಸ್‍ಟಿ, ಪ್ರತಿನಿಧಿ, 1 ಮಹಿಳೆ, ದೇವಸ್ಥಾನದ ಅರ್ಚಕ ಸೇರಿದಂತೆ ಅರ್ಜಿ ಸಲ್ಲಿಸಿದ ಸಾರ್ವಜನಿಕರಿಗೆ ಅವಕಾಶ ಮಾಡಿಕೊಟ್ಟಿದೆ. ಈ ಸಮಿತಿಯನ್ನು ಜಿಲ್ಲಾಧಿಕಾರಿ, ಜಿಲ್ಲಾ ಧಾರ್ಮಿಕ ನ್ಯಾಯ ಸಮಿತಿಯ ಸದಸ್ಯರೊಳಗೊಂಡ ನಿರ್ದೇಶಿತ ಸದಸ್ಯರು ನೇರ ಸಂದರ್ಶನದಲ್ಲಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಿದ್ದಾರೆ. ಈ ಸಮಿತಿಯು ದೇವಸ್ಥಾನದ ಆಡಳಿತ, ಅಭಿವೃದ್ಧಿ, ಕೆಲಸಗಾರರ ನೇಮಕ ಮುಂತಾದ ಅಧಿಕಾರವನ್ನು ಹೊಂದಿದೆ.

    ಉತ್ತರ ಕನ್ನಡ ಜಿಲ್ಲೆಯಲ್ಲಿ 622 ಮುಜರಾಯಿ ದೇವಸ್ಥಾನಗಳಲ್ಲಿ 10 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ 113 ಸಿ ಮತ್ತು ಬಿ ಹಂತದ ಧಾರ್ಮಿಕ ಪರಿಷತ್ ಗೆ ಒಳಪಟ್ಟ ದೇವಸ್ಥಾನಗಳಿಗೆ 9 ಜನ ಸದಸ್ಯರಿರುವ ಸಮಿತಿಯನ್ನು ರಚಿಸುವ ಪ್ರಕ್ರಿಯೆಯಲ್ಲಿದೆ. ಇದರಲ್ಲಿ 30 ದೇವಸ್ಥಾನಗಳಿಗೆ ಸಮಿತಿ ಸದಸ್ಯತ್ವಕ್ಕಾಗಿ ಸಾರ್ವಜನಿಕರಿಂದ ಅರ್ಜಿ ಬಂದಿದ್ದು ಉಳಿದ 83 ದೇವಸ್ಥಾನಗಳಿಗೆ ಯಾರೊಬ್ಬರೂ ಅರ್ಜಿ ಸಲ್ಲಿಸಿಲ್ಲ. ಇನ್ನು ಬಿ ವರ್ಗದ 9 ದೇವಸ್ಥಾನಗಳಲ್ಲಿ 5 ದೇವಸ್ಥಾನಗಳಿಗೆ ಸಮಿತಿ ರಚಿಸಲಾಗಿದ್ದು ಉಳಿದ 4 ದೇವಸ್ಥಾನದ ಆಡಳಿತವರ್ಗ ಕೋರ್ಟ್ ಮೆಟ್ಟಿಲೇರಿದೆ.

    ಪರ, ವಿರೋಧ ಯಾಕೆ..?
    ದೇವಸ್ಥಾನಗಳಲ್ಲಿ ನಡೆಯುವ ಭ್ರಷ್ಟಾಚಾರ ತಡೆಯಲು ಈ ಸಮಿತಿ ರಚನೆಯಾಗಿದ್ದರೂ ಈ ಸಮಿತಿಯಲ್ಲಿ ತಮಗೆ ಬೇಕಾದವರನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಹಿಂದೂಗಳ ಧಾರ್ಮಿಕ ಹಕ್ಕಿಗೆ ತೊಂದರೆಯಾಗುತ್ತಿದ್ದು, ಸಮಿತಿ ರಚನೆಯಿಂದ ದೇವಸ್ಥಾನಕ್ಕೆ ಬರುವ ಹಣ ಕೂಡ ದುರುಪಯೋಗವಾಗಬಹುದು ಎಂಬುದು ಕೆಲವರ ವಾದವಾಗಿದೆ. ಜಿಲ್ಲೆಯ ಹಲವು ದೇವಸ್ಥಾನದಲ್ಲಿ ಈ ಹಿಂದೆ ವಂಶಪಾರಂಪರ್ಯವಾಗಿ ಆಡಳಿತ ಮಾಡುತ್ತಿದ್ದ ಕೆಲವರು ದೇವಸ್ಥಾನದ ಹಕ್ಕಿನ ಜಾಗವನ್ನೇ ಮಾರಿ ತಮ್ಮ ಸ್ವಂತಕ್ಕೆ ಬಳಸಿಕೊಂಡ ನಿದರ್ಶನಗಳಿದ್ದು ಇದನ್ನು ತಪ್ಪಿಸಲು ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಇಂತಹ ಘಟನೆಗಳು ಜರುಗಿದ್ದರಿಂದಾಗಿ ತಕ್ಷಣದಲ್ಲಿ ಸಮಿತಿ ರಚಿಸಲು ಕ್ರಮ ಕೈಗೊಂಡಿದೆ. ಶೀಘ್ರದಲ್ಲಿ ಸಮಿತಿ ರಚಿಸುತ್ತಿರುವುದರಿಂದ ಜಿಲ್ಲಾ ಹಿಂದೂ ಧಾರ್ಮಿಕ ದೇವಾಲಯದ ಮಹಾ ಮಂಡಲಿ ಬುಧವಾರ ಸ್ವರ್ಣವಲ್ಲಿ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳ ಅಧ್ಯಕ್ಷತೆಯಲ್ಲಿ ಪ್ರತಿಭಟನಾ ಸಭೆ ನಡೆಸಿ ಮುಂದೆ ಕಾನೂನಿನ ಹೋರಾಟಕ್ಕೆ ಸಜ್ಜಾಗಿದೆ.

    ವ್ಯವಸ್ಥಾಪನಾ ಸಮಿತಿ ರಚನೆಯಿಂದ ದೇವಾಲಯಗಳಲ್ಲಿ ರಾಜಕೀಯ ಹಸ್ತಕ್ಷೇಪ ಹೆಚ್ಚಾಗುವುದರ ಜೊತೆಗೆ ಹಿಂದು ಧಾರ್ಮಿಕ ಹಕ್ಕಿಗೆ ಚ್ಯುತಿ ಬರುತ್ತದೆ.
    ಈಗಾಗಲೇ ಸುಪ್ರೀಂ ಕೋರ್ಟ ನಲ್ಲಿ ದಾವೆ ಇರುವುದರಿಂದ ಒಂದು ವೇಳೆ ಕೋರ್ಟ್ ಸರ್ಕಾರದ ಪರವಾಗಿ ಆದೇಶ ನೀಡಿದರೆ, ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಗಳು ಮುಜರಾಯಿ ಕೈ ಸೇರುವುದರಲ್ಲಿ ಅನುಮಾನವಿಲ್ಲ ಎಂಬುದು ಧಾರ್ಮಿಕ ಮುಖಂಡರ ವಾದ. ಆದರೆ ಸರ್ಕಾರ ಭ್ರಷ್ಟಾಚಾರ ರಹಿತ ಉತ್ತಮ ಆಡಳಿತ ನೀಡಲು ಈ ಸಮಿತಿ ಅಗತ್ಯವಿದೆ ಎಂದು ಹೇಳಿದೆ.