ರಾಷ್ಟ್ರೀಯ ಭೂಕಂಪನ ಕೇಂದ್ರದ ಪ್ರಕಾರ, ಶುಕ್ರವಾರ ಸಂಜೆ ನೇಪಾಳದಲ್ಲಿ 5.0 ತೀವ್ರತೆಯ ಭೂಕಂಪ ಸಂಭವಿಸಿದೆ. ಸ್ಥಳೀಯ ಕಾಲಮಾನ ರಾತ್ರಿ 7.52ಕ್ಕೆ (ಸ್ಥಳೀಯ ಕಾಲಮಾನ) ಭೂಮಿಯಿಂದ 20 ಕಿಮೀ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದೆ. ಇದರ ಪರಿಣಾಮ ಉತ್ತರ ಭಾರತದಲ್ಲೂ ಲಘು ಭೂಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ.
ಇತ್ತೀಚೆಗಷ್ಟೇ ಮ್ಯಾನ್ಮಾರ್ನಲ್ಲಿ 7.7 ತೀವ್ರತೆಯೇ ಭಾರೀ ಭೂಕಂಪ (Myanmar Earthquake) ಸಂಭವಿಸಿತ್ತು. ಇದರಿಂದ ನೂರಾರು ಗಗನಚುಂಬಿ ಕಟ್ಟಡಗಳು ನೆಲಸಮಗೊಂಡಿದ್ದಲ್ಲದೇ ಸಾವಿರಾರು ಸಂಖ್ಯೆಯ ಜನ ಸಾವನ್ನಪ್ಪಿದ್ದಾರೆ. ಈವರೆಗೆ ಸುಮಾರು 441 ಮಂದಿ ಕಾಣೆಯಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಬ್ಯಾಂಕಾಕ್: ಕಳೆದ ವಾರ ಥೈಲ್ಯಾಂಡ್ (Thailand) ರಾಜಧಾನಿ ಬ್ಯಾಂಕಾಕ್ನಲ್ಲಿ (Bangkok) ಸಂಭವಿಸಿದ್ದ ಭೂಕಂಪದ ವೇಳೆ ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು, ಸ್ಥಳಕ್ಕೆ ಅಕ್ರಮವಾಗಿ ಪ್ರವೇಶಿಸಿ ದಾಖಲೆಗಳನ್ನು ಕದ್ದುಕೊಂಡು ಹೋಗಲು ಯತ್ನಿಸಿದ್ದ ನಾಲ್ವರು ಚೀನಿ ಪ್ರಜೆಗಳನ್ನು ಥೈಲ್ಯಾಂಡ್ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಥೈಲ್ಯಾಂಡ್ ಪೊಲೀಸರು ಮಾತನಾಡಿ, ಮಾ.28 ರಂದು ಮಯನ್ಮಾರ್ನಲ್ಲಿ ಸಂಭವಿಸಿದ್ದ ಪ್ರಬಲವಾದ ಭೂಕಂಪದ ಪರಿಣಾಮ ಬ್ಯಾಕಾಂಕ್ನ ಕೆಲವು ಕಡೆಗಳಲ್ಲಿ ಕಟ್ಟಡಗಳು ಕುಸಿದಿದ್ದವು. ಈ ವೇಳೆ ಬ್ಯಾಂಕಾಕ್ನ ಚತುಚಕ್ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದಿತ್ತು. ಈ ವೇಳೆ ಸ್ಥಳಕ್ಕೆ ಅಕ್ರಮವಾಗಿ ಪ್ರವೇಶಿಸಿ ದಾಖಲೆಗಳನ್ನು ಅಲ್ಲಿಂದ ಕೊಂಡೊಯ್ಯಲು ಪ್ರಯತ್ನಿಸಿದ್ದರು ಎಂದು ತಿಳಿಸಿದ್ದಾರೆ.ಇದನ್ನೂ ಓದಿ:ಗುಜರಾತ್ನಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ – ಮಹಿಳಾ ಪೈಲಟ್ಗೆ ಗಾಯ
ಮ್ಯಾನ್ಮಾರ್ನ ಮಧ್ಯಭಾಗದಲ್ಲಿ ಸಂಭವಿಸಿದ 7.7 ತೀವ್ರತೆಯ ಭೂಕಂಪದ ಸಂದರ್ಭದಲ್ಲಿ 30 ಅಂತಸ್ತಿನ ಬಹುಮಹಡಿ ಕಟ್ಟಡ ಕುಸಿದಿದೆ. ಭೂಕಂಪದ ಬಳಿಕ ಬ್ಯಾಂಕಾಕ್ ಗವರ್ನರ್ ಕುಸಿತದ ಪ್ರದೇಶವನ್ನು ವಿಪತ್ತು ವಲಯವೆಂದು ಘೋಷಿಸಿದ್ದು, ಈ ಮೂಲಕ ಅದನ್ನು ನಿರ್ಬಂಧಿತ ಪ್ರದೇಶವೆಂದು ತಿಳಿಸಲಾಗಿತ್ತು. ಆ ಪ್ರದೇಶಕ್ಕೆ ಅನುಮತಿಯಿಲ್ಲದೆ ಯಾರಿಗೂ ಪ್ರವೇಶಿಸಲು ಅವಕಾಶವಿಲ್ಲ ಎಂದು ಸೂಚಿಸಲಾಗಿತ್ತು. ಆದರೆ ಮಾ.29 ರಂದು ನಾಲ್ವರು ಚೀನೀ ಪ್ರಜೆಗಳು ಸ್ಥಳದಿಂದ 32 ದಾಖಲೆಗಳ ಫೈಲ್ಗಳನ್ನು ಕೊಂಡೊಯ್ಯತ್ತಿರುವ ಮಾಹಿತಿ ತಿಳಿದು ಬಂದಿದೆ ಎಂದು ಮಾಹಿತಿ ನೀಡಿದ್ದಾರೆ.
ಭಾನುವಾರದ ವೇಳೆಗೆ 17 ಜನರು ಸಾವನ್ನಪ್ಪಿದ್ದು, 32 ಮಂದಿ ಗಾಯಗೊಂಡಿದ್ದಾರೆ. 76 ಜನರು ಇನ್ನೂ ಪತ್ತೆಯಾಗಿಲ್ಲ. ಆ ಪೈಕಿ ಹೆಚ್ಚಿನವರು ಕುಸಿದ ಕಟ್ಟಡದಲ್ಲಿ ನಿರ್ಮಾಣ ಕಾರ್ಮಿಕರಾಗಿದ್ದವರು. ಬದುಕುಳಿದವರನ್ನು ಪತ್ತೆಹಚ್ಚಲು ಶೋಧ ಕಾರ್ಯಗಳು ತೀವ್ರವಾಗಿ ನಡೆಯುತ್ತಿವೆ.
ನೇಪಿಟಾವ್: ಮ್ಯಾನ್ಮಾರ್ (Myanmar Earthquake) ಮತ್ತು ಥಾಯ್ಲೆಂಡ್ನ (Thailand) ಬ್ಯಾಂಕಾಕ್ನಲ್ಲಿ ಸಂಭವಿಸಿದ ಪ್ರಬಲ ಭೂಕಂಪನ ಎರಡು ದೇಶಗಳನ್ನು ತೀವ್ರವಾಗಿ ಕಾಡಿದೆ. ಒಂದು ಕಡೆ ಅವಶೇಷಗಳ ಅಡಿಗಳಲ್ಲಿ ಸಿಲುಕಿರುವ ರಕ್ಷಣೆ ಮುಂದುವರಿದಿದ್ದು, ಸಾವು-ನೋವುಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಮತ್ತೊಂದು ಕಡೆ ಭೂಕಂಪನ ಬಗ್ಗೆ ಅಧ್ಯಯನಗಳು ನಡೆಯುತ್ತಿದ್ದು, ಮ್ಯಾನ್ಮಾರ್ನಲ್ಲಿ ಆದ ಕಂಪನದ ಬಗ್ಗೆ ವಿಜ್ಞಾನಿಗಳು ಆಘಾತ ವ್ಯಕ್ತಪಡಿಸಿದ್ದಾರೆ. ಈ ಕಂಪನದ ಶಕ್ತಿಯನ್ನು 334 ಅಣುಬಾಂಬ್ಗಳಿಗೆ ಹೋಲಿಸಿದ್ದಾರೆ.
ಮೊನ್ನೆ ಮ್ಯಾನ್ಮಾರ್ನಲ್ಲಿ ಸಂಭವಿಸಿದ 7.7 ತೀವ್ರತೆಯ ಭೂಕಂಪವು ದೇಶದ ಮಧ್ಯಭಾಗವನ್ನು ನಾಶ ಮಾಡಿದೆ. ಕಟ್ಟಡಗಳು, ದೇವಸ್ಥಾನಗಳು ಸೇರಿ ಐತಿಹಾಸಿಕ ರಚನೆಗಳು ನೆಲಸಮವಾಗಿದೆ. ಇತ್ತೀಚಿನ ಮಾಹಿತಿಯ ಪ್ರಕಾರ, ಸಾವಿನ ಸಂಖ್ಯೆ 1,644ಕ್ಕೆ ಏರಿದ್ದು, 3,408ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಮ್ಯಾನ್ಮಾರ್ನ ಸೇನಾ ಸರ್ಕಾರ ದೃಢಪಡಿಸಿದೆ. ರಕ್ಷಣಾ ಕಾರ್ಯಚರಣೆ ಇನ್ನೂ ಮುಂದುವರಿದಿದ್ದು, ಈ ವಿನಾಶದ ಹೊಡೆತದಿಂದ ಹೊರ ತರಲು ಇನ್ನೂ ಸಾಕಷ್ಟು ಸಮಯ ಬೇಕಿದೆ. ಇದನ್ನೂ ಓದಿ: Myanmar Earthquake | ಭೀಕರ ಭೂಕಂಪಕ್ಕೆ 1,600ಕ್ಕೂ ಹೆಚ್ಚು ಮಂದಿ ಬಲಿ – 3,000ಕ್ಕೂ ಅಧಿಕ ಮಂದಿಗೆ ಗಾಯ
ಒಂದು ಕಡೆ ಸಾವುಗಳು ಹೆಚ್ಚುತ್ತಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದರೆ, ಮತ್ತೊಂದು ಕಡೆ ಈ ಪ್ರಬಲ ಭೂಕಂಪನದ ಬಗ್ಗೆ ಭೂಗರ್ಭಶಾಸ್ತ್ರದ ವಿಜ್ಞಾನಿಗಳು ಅಧ್ಯಯನ ಆರಂಭಿಸಿದ್ದಾರೆ. ಈ ನಡುವೆ ಮ್ಯಾನ್ಮಾರ್ನಲ್ಲಿ ಸಂಭವಿಸಿದ ಭೂಕಂಪದ ತೀವ್ರತೆಯು 334 ಅಣುಬಾಂಬ್ಗಳ ಶಕ್ತಿಗೆ ಸಮಾನವಾಗಿದೆ ಎಂದು ಅಮೆರಿಕದ ಭೂವಿಜ್ಞಾನಿ ಜೆಸ್ ಫೀನಿಕ್ಸ್ ತಿಳಿಸಿದ್ದಾರೆ.
ಇದೇ ರೀತಿ ಥೈಲ್ಯಾಂಡ್ನ ಬ್ಯಾಂಕಾಕ್ನಲ್ಲಿ ಸಹ ಒಂದು ನಿರ್ಮಾಣ ಹಂತದ ಗಗನಚುಂಬಿ ಕಟ್ಟಡ ಕುಸಿದು 20 ಕ್ಕೂ ಅಧಿಕ ಮಂದಿ ಜನರು ಮೃತಪಟ್ಟಿದ್ದಾರೆ. ಭೂಕಂಪದ ನಂತರ 6.4 ತೀವ್ರತೆಯ ಪ್ರಬಲ ಆಫ್ಟರ್ಶಾಕ್ ಸೇರಿದಂತೆ ಹಲವಾರು ಸಣ್ಣ ಕಂಪನಗಳು ದಾಖಲಾಗಿವೆ. ಯುನೈಟೆಡ್ ಸ್ಟೇಟ್ಸ್ ಜಿಯಾಲಾಜಿಕಲ್ ಸರ್ವೇ ಪ್ರಕಾರ, ಶುಕ್ರವಾರದಂದು 10 ಗಂಟೆಗಳ ಅವಧಿಯಲ್ಲಿ ಒಟ್ಟು 15 ಭೂಕಂಪಗಳು ಸಂಭವಿಸಿವೆ. ಈ ಆಫ್ಟರ್ಶಾಕ್ಗಳು ಮುಂದಿನ ಕೆಲವು ತಿಂಗಳ ವರೆಗೆ ಮುಂದುವರಿಯಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಆಪರೇಷನ್ ಬ್ರಹ್ಮ | ಭೂಕಂಪಕ್ಕೆ ನಲುಗಿದ ಮ್ಯಾನ್ಮಾರ್ಗೆ ಭಾರತ ನೆರವು
ಮ್ಯಾನ್ಮಾರ್ನ ಸೇನಾ ಸರ್ಕಾರವು ಆರು ಪ್ರದೇಶಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದು, ಅಂತಾರಾಷ್ಟ್ರೀಯ ಸಹಾಯಕ್ಕಾಗಿ ಮನವಿ ಮಾಡಿದೆ. ಇದು ಸಾಮಾನ್ಯವಾಗಿ ವಿದೇಶಿ ಸಹಾಯವನ್ನು ತಿರಸ್ಕರಿಸುವ ಮ್ಯಾನ್ಮಾರ್ನಿಂದ ಅಪರೂಪದ ಕ್ರಮವಾಗಿದೆ. ಭಾರತವು ತನ್ನ ನೆರೆಯ ರಾಷ್ಟ್ರಕ್ಕೆ ಸಹಾಯ ಮಾಡಲು ಮುಂದೆ ಬಂದಿದ್ದು, ‘ಆಪರೇಷನ್ ಬ್ರಹ್ಮ’ದಡಿ 15 ಟನ್ಗಳ ಸಹಾಯ ಸಾಮಗ್ರಿಗಳನ್ನು ಭಾರತೀಯ ವಾಯುಪಡೆಯ C-130J ವಿಮಾನದ ಮೂಲಕ ಮ್ಯಾನ್ಮಾರ್ಗೆ ರವಾನಿಸಿದೆ. ಇದರಲ್ಲಿ ಟೆಂಟ್ಗಳು, ಸ್ಲೀಪಿಂಗ್ ಬ್ಯಾಗ್ಗಳು, ಕಂಬಳಿಗಳು, ಆಹಾರ ಪೊಟ್ಟಣಗಳು, ವಾಟರ್ ಪ್ಯೂರಿಫೈಯರ್ಗಳು, ಸೌರ ದೀಪಗಳು ಮತ್ತು ವೈದ್ಯಕೀಯ ಸಾಮಗ್ರಿಗಳು ಸೇರಿವೆ. ಜೊತೆಗೆ, ಭಾರತೀಯ ನೌಕಾಪಡೆಯ ಎರಡು ಯುದ್ಧನೌಕೆಗಳಾದ INS ಸತ್ಪುರ ಮತ್ತು INS ಸಾವಿತ್ರಿ 40 ಟನ್ಗಳ ಸಹಾಯ ಸಾಮಗ್ರಿಗಳೊಂದಿಗೆ ಯಾಂಗೊನ್ ಬಂದರಿಗೆ ತೆರಳಿವೆ.
ಚೀನಾವು ತನ್ನ 37 ಸದಸ್ಯರ ರಕ್ಷಣಾ ತಂಡವನ್ನು ಮ್ಯಾನ್ಮಾರ್ಗೆ ಕಳುಹಿಸಿದ್ದು, ಇದು ಅಂತಾರಾಷ್ಟ್ರೀಯ ರಕ್ಷಣಾ ಗುಂಪಾಗಿ ಮೊದಲಿಗೆ ಆಗಮಿಸಿದೆ. ಜೊತೆಗೆ, 100 ಮಿಲಿಯನ್ ಯುವಾನ್ (13 ಮಿಲಿಯನ್ ಡಾಲರ್) ಮೌಲ್ಯದ ಮಾನವೀಯ ಸಹಾಯವನ್ನು ಒದಗಿಸುವ ಭರವಸೆ ನೀಡಿದೆ. ರಷ್ಯಾ ಕೂಡಾ ರಕ್ಷಣಾ ತಂಡ ಕಳುಹಿಸಿದೆ. ಅಮೆರಿಕ ಕೂಡಾ ನೆರವಿನ ಭರವಸೆ ನೀಡಿದೆ. ಇದನ್ನೂ ಓದಿ: ಮ್ಯಾನ್ಮಾರ್ನಲ್ಲಿ ಮತ್ತೆ ಭೂಕಂಪ – ಆಸ್ಪತ್ರೆ ಕಟ್ಟಡಗಳೇ ನಾಮಾವಶೇಷ, ರಸ್ತೆಯಲ್ಲೇ ರೋಗಿಗಳಿಗೆ ಚಿಕಿತ್ಸೆ
USGS ಪ್ರಕಾರ, ಈ ಭೂಕಂಪದಿಂದ ಸಾವಿನ ಸಂಖ್ಯೆ 10,000 ದಾಟುವ ಸಂಭವನೀಯತೆ ಇದೆ ಎಂದು ಎಚ್ಚರಿಸಲಾಗಿದೆ. ಮ್ಯಾನ್ಮಾರ್ನ ಆಂತರಿಕ ಸಂಘರ್ಷ ಮತ್ತು ಸಂಪರ್ಕದ ಕೊರತೆಯಿಂದಾಗಿ ನಿಖರ ಮಾಹಿತಿ ಸಂಗ್ರಹಿಸುವುದು ಸವಾಲಾಗಿದೆ. ಇದೇ ವೇಳೆ, ವಿರೋಧಿ ಗುಂಪುಗಳಾದ ಪೀಪಲ್ಸ್ ಡಿಫೆನ್ಸ್ ಫೋರ್ಸ್ ರಕ್ಷಣಾ ಕಾರ್ಯಗಳಿಗೆ ಸಹಕಾರ ನೀಡಲು ಎರಡು ವಾರಗಳ ಕದನ ವಿರಾಮ ಘೋಷಿಸಿದೆ. ಈ ಭೂಕಂಪವು ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ಗೆ ದೊಡ್ಡ ಆಘಾತವನ್ನುಂಟು ಮಾಡಿದ್ದು, ಅಂತಾರಾಷ್ಟ್ರೀಯ ಸಮುದಾಯವು ತುರ್ತು ಸಹಾಯಕ್ಕಾಗಿ ಒಗ್ಗಟ್ಟಾಗಿ ಪ್ರಯತ್ನಿಸುತ್ತಿದೆ.
ನೇಪಿಟಾವ್/ಬ್ಯಾಂಕಾಕ್: ಮಯನ್ಮಾರ್ (Myanmar) ಮತ್ತು ನೆರೆಯ ಥೈಲ್ಯಾಂಡ್ನಲ್ಲಿ ಸಂಭವಿಸಿರುವ ಭೂಕಂಪದಲ್ಲಿ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಶುಕ್ರವಾರ ಬೆಳಗ್ಗೆ 11:50ರ ವೇಳೆಗೆ ಸಂಭವಿಸಿದ ಭೂಕಂಪ ಶನಿವಾರದ ಹೊತ್ತಿಗೆ ಸುಮಾರು 1600ಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿದೆ. ಅಲ್ಲದೇ 3,400 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಶುಕ್ರವಾರ ಮ್ಯಾನ್ಮಾರ್ನಲ್ಲಿ ಮೊದಲ 7.7 ತೀವ್ರತೆಯ ಭೂಕಂಪ ಸಂಭವಿಸಿತ್ತು. ಸಾಗಯಿಂಗ್ನ ವಾಯುವ್ಯಕ್ಕೆ ಭೂಮಿಯಿಂದ 10 ಕಿಮೀ ಆಳದಲ್ಲೇ ಕೇಂದ್ರ ಬಿಂದು ಪತ್ತೆಯಾಗಿತ್ತು. ಇದಾದ ಕೆಲವು ಗಂಟೆಗಳಲ್ಲಿ ಇನ್ನೂ ಮೂರ್ನಾಲ್ಕು ಭಾರಿ ಭೂಕಂಪ ಸಂಭವಿಸಿತ್ತು. ಸರಣಿ ಭೂಕಂಪದ ಹಿನ್ನೆಲೆ ಗಗನ ಚುಂಬಿ ಕಟ್ಟಡಗಳು ನೆಲಕ್ಕಪ್ಪಳಿಸಿದವು. ಇದರಿಂದ ಭಾರತದ ಕೆಲ ಪ್ರದೇಶಗಳಲ್ಲೂ ಭೂಮಿ ಕಂಪಿಸಿದ ಅನುಭವವಾಗಿತ್ತು. ಇದನ್ನೂ ಓದಿ: ಭೂಕಂಪದಿಂದಾಗಿ ಆಸ್ಪತ್ರೆ ನಾಮಾವಶೇಷ – ಬ್ಯಾಂಕಾಕ್ನ ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಈ ನಡುವೆ ಮ್ಯಾನ್ಮಾರ್ನಲ್ಲಿ ನಡೆಯುತ್ತಿರುವ ಅಂತರ್ಯುದ್ಧದಿಂದಾಗಿ ತುರ್ತುಸೇವೆಗಳು ದುರ್ಬಲವಾಗಿವೆ. ಅಲ್ಲದೇ ಅಲ್ಲಿನ ಸರ್ಕಾರವೂ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಅಸಮರ್ಥವಾಗಿದೆ ಎಂದು ಹೇಳಲಾಗಿದೆ. ಸದ್ಯ ಮ್ಯಾನ್ಮಾರ್ ಒಂದರಲ್ಲೇ 1,640 ಮಂದಿ ಸಾವನ್ನಪ್ಪಿದ್ದು, ಬ್ಯಾಂಕಾಂಕ್ನಲ್ಲಿ ಈವರೆಗೆ 10 ರಿಂದ 20 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಕುಸಿದ ಕಟ್ಟಡಗಳ ಅವಶೇಷಗಳ ಅಡಿ ನೂರಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: Myanmar Earthquake | ಸಾವಿನ ಸಂಖ್ಯೆ ಬರೋಬ್ಬರಿ 1,000ಕ್ಕೆ ಏರಿಕೆ – 2,000ಕ್ಕೂ ಅಧಿಕ ಮಂದಿಗೆ ಗಾಯ
100 ವರ್ಷಗಳ ಹಳೆಯ ಸೇತುವೆ ಕುಸಿತ
ಮ್ಯಾನ್ಮಾರ್ನಲ್ಲಿ ಉಂಟಾದ ಭೀಕರ ಭೂಕಂಪ ಸಾಕಷ್ಟು ಸಾವು-ನೋವು ಉಂಟುಮಾಡಿದೆ. ಒಂದೆಡೆ ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಮತ್ತೊಂದೆಡೆ ಜೀವ ಉಳಿಸಬೇಕಾದ ಆಸ್ಪತ್ರೆಗಳೇ ಕಣ್ಣೀರಿನ ಕಥೆ ಹೇಳುತ್ತಿವೆ. ಸಾವಿರಾರು ಹಾಸಿಗೆ ಸೌಲಭ್ಯ ಹೊಂದಿರುವ ಆಸ್ಪತ್ರೆಗಳು ನಾಮಾವಶೇಷವಾಗಿದ್ದು, ನೊಂದ ಸಂತ್ರಸ್ತರಿಗೆ ರಸ್ತೆಯಲ್ಲೇ ಚಿಕಿತ್ಸೆ ನೀಡುವಂತಹ ಪರಿಸ್ಥಿತಿ ಬಂದೊದಗಿವೆ. ಅಲ್ಲದೇ ಸಾಗಯಿಂಗ್ನಿಂದ ಐರಾವಡ್ಡಿ ನದಿ ವರೆಗೆ ವ್ಯಾಪಿಸಿರುವ ಸುಮಾರು 100 ವರ್ಷಗಳಷ್ಟು ಹಳೆಯದಾದ ಆವಾ ಸೇತುವೆಯು ನೀರಿನಲ್ಲಿ ಕುಸಿದಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಪತಿ, ಕೈತುಂಬ ಸಂಬಳ ಸಿಗುತ್ತಿದ್ದ ಕೆಲಸ ಬಿಟ್ಟ ಬಳಿಕ ಬರೋಬ್ಬರಿ 45 ಕೆಜಿ ತೂಕ ಇಳಿಸಿಕೊಂಡ ಮಹಿಳೆ
ನೇಪಿಟಾವ್/ಬ್ಯಾಂಕಾಕ್: ಮಯನ್ಮಾರ್ (Myanmar) ಮತ್ತು ನೆರೆಯ ಥೈಲ್ಯಾಂಡ್ನಲ್ಲಿ ಭೀಕರ ಭೂಕಂಪ ಸಂಭವಿಸಿದ್ದು, ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಶನಿವಾರದ ಹೊತ್ತಿಗೆ ಸಾವಿನ ಸಂಖ್ಯೆ 1,000ಕ್ಕೆ ಏರಿಕೆಯಾಗಿದ್ದು, 2,376 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಗಳು ವರದಿ ಮಾಡಿವೆ.
India sends 15 tonnes of humanitarian aid to Myanmar after devastating #earthquake
IAF C-130J aircraft departed from AFS Hindon with relief including tents, blankets, hygiene kits, solar lamps & medical supplies like antibiotics, syringes & bandages
ಮ್ಯಾನ್ಮಾರ್ನಲ್ಲಿ ಶುಕ್ರವಾರ 11:50ರ ಹೊತ್ತಿಗೆ ಮೊದಲ ಬಾರಿಗೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತ್ತು. ಇದಾದಗ 15 ನಿಮಿಷಗಳಲ್ಲೇ ಮತ್ತೊಮ್ಮೆ 6.4 ತೀವ್ರತೆಯ ಭೂಕಂಪ ಸಂಭವಿಸಿತ್ತು. ಅಲ್ಲದೇ ಶುಕ್ರವಾರ ರಾತ್ರಿ 11:56ರ ವೇಳೆ ಮ್ಯಾನ್ಮಾರ್ನಲ್ಲಿ 6ನೇ ಬಾರಿಗೆ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆ ದಾಖಲಾಗಿತ್ತು. ಹೀಗಾಗಿ ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ ಎರಡೂ ಕಡೆ ಸೇರಿ ಒಟ್ಟು ಸಾವಿನ ಸಂಖ್ಯೆ ಸಾವಿರಕ್ಕೆ ಏರಿಕೆಯಾಗಿದೆ. ಅಲ್ಲದೇ ಅವಶೇಷಗಳ ಅಡಿ ಇನ್ನೂ ನೂರಾರು ಮಂದಿ ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಧಾವಿಸಿರುವ ರಕ್ಷಣಾ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ.
ರಸ್ತೆಗಳಲ್ಲೇ ಚಿಕಿತ್ಸೆ:
ಮ್ಯಾನ್ಮಾರ್ನಲ್ಲಿ ಉಂಟಾದ ಭೀಕರ ಭೂಕಂಪ ಸಾಕಷ್ಟು ಸಾವು-ನೋವು ಉಂಟುಮಾಡಿದೆ. ಒಂದೆಡೆ ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಈವರೆಗೆ 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಇನ್ನೂ ನೂರಾರು ಮಂದಿ ಅವಶೇಷಗಳ ಅಡಿ ಸಿಲುಕಿರುವ ಶಂಕೆಯಿದೆ. ಮತ್ತೊಂದೆಡೆ ಜೀವ ಉಳಿಸಬೇಕಾದ ಆಸ್ಪತ್ರೆಗಳೇ ಕಣ್ಣೀರಿನ ಕಥೆ ಹೇಳುತ್ತಿವೆ. ಸಾವಿರಾರು ಹಾಸಿಗೆ ಸೌಲಭ್ಯ ಹೊಂದಿರುವ ಆಸ್ಪತ್ರೆಗಳು ನಾಮಾವಶೇಷವಾಗಿದ್ದು, ನೊಂದ ಸಂತ್ರಸ್ತರಿಗೆ ರಸ್ತೆಯಲ್ಲೇ ಚಿಕಿತ್ಸೆ ನೀಡುವಂತಹ ಪರಿಸ್ಥಿತಿ ಬಂದೊದಗಿವೆ. ಇದರಿಂದ ಮ್ಯಾನ್ಮಾರ್ನ ನೈಪಿತಾವು ಸೇರಿ 6 ಪ್ರದೇಶ ಹಾಗೂ ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.
ಆಪರೇಷನ್ ಭ್ರಹ್ಮ ಸಕ್ಸಸ್
ಸಂತ್ರಸ್ತವಾಗಿರುವ ಮ್ಯಾನ್ಮಾರ್ಗೆ ಭಾರತ ನೆರವಿನ ಹಸ್ತ ಚಾಚಿದೆ. ಸುಮಾರು 15 ಟನ್ಗಳಷ್ಟು ಪರಿಹಾರ ಸಾಮಗ್ರಿಗಳನ್ನು ಕಳುಹಿಸಿಕೊಟ್ಟಿದೆ. ಪರಿಹಾರ ಸಾಮಗ್ರಿ ಹೊತ್ತ C-130-A ಐಎಎಫ್ (IAF) ವಿಮಾನ ಯಶಸ್ವಿಯಾಗಿ ಮ್ಯಾನ್ಮಾರ್ ತಲುಪಿದ್ದು, ಸಂತ್ರಸ್ತರಿಗೆ ಪರಿಹಾರ ಸಾಮಗ್ರಿ ವಿತರಣೆ ಮಾಡುತ್ತಿದೆ. ತಾತ್ಕಾಲಿಕ ಟೆಂಟ್ಗಳು, ಮಲಗುವ ಹಾಸಿಗೆ, ಹೊದಿಕೆಗಳು, ಆಹಾರ, ನೀರು, ನೈರ್ಮಲ್ಯ ಕಿಟ್, ಸೋಲಾರ್ ಲೈಟ್, ಜನರೇಟರ್ ಸೆಟ್ ಹಾಗೂ ಔಷಧಗಳ ನೆರವನ್ನು ಭಾರತ ನೀಡಿದೆ.
ಅಫ್ಘಾನಿಸ್ತಾನದಲ್ಲೂ ಕಂಪಿಸಿದ ಭೂಮಿ:
ಮ್ಯಾನ್ಮಾರ್, ಥಾಯ್ಲೆಂಡ್ನಲ್ಲಿ ಭೂಂಕಪದ ಬೆನ್ನಲ್ಲೇ ಶನಿವಾರ ಮುಂಜಾನೆ ಅಫ್ಘಾನಿಸ್ತಾನದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಇಂದು ಮುಂಜಾನೆ 5:16ಕ್ಕೆ ಭೂಮಿ ಕಂಪಿಸಿದ್ದು, ಭೂಮಿಯಿಂದ 180 ಕಿಮೀ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದ್ದೆ. ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಅಫ್ಘಾನಿಸ್ತಾನದಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ.
– ನಿನ್ನೆಯಿಂದ 6 ಬಾರಿ ಭೂಕಂಪ, ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆ
ನೇಪಿಟಾವ್/ಬ್ಯಾಂಕಾಕ್: ಮಯನ್ಮಾರ್ನಲ್ಲಿ (Myanmar) ನಿನ್ನೆಯಿಂದ 6 ಬಾರಿ ಭೂಕಂಪ ಸಂಭವಿಸಿದ್ದು, ಸಾವಿನ ಪ್ರಮಾಣ ಏರಿಕೆಯಾಗುತ್ತಲೇ ಇದೆ. ಈ ಕ್ಷಣದ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 694ಕ್ಕೆ ಏರಿಕೆಯಾಗಿದ್ದು, 1,600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಅವಶೇಷಗಳ ಅಡಿ ಇನ್ನೂ ನೂರಾರು ಮಂದಿ ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಧಾವಿಸಿರುವ ರಕ್ಷಣಾ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ.
ರಸ್ತೆಗಳಲ್ಲೇ ಚಿಕಿತ್ಸೆ:
ಮ್ಯಾನ್ಮಾರ್ನಲ್ಲಿ ಉಂಟಾದ ಭೀಕರ ಭೂಕಂಪ ಸಾಕಷ್ಟು ಸಾವು-ನೋವು ಉಂಟುಮಾಡಿದೆ. ಒಂದೆಡೆ ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಈವರೆಗೆ 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಇನ್ನೂ ನೂರಾರು ಮಂದಿ ಅವಶೇಷಗಳ ಅಡಿ ಸಿಲುಕಿರುವ ಶಂಕೆಯಿದೆ. ಮತ್ತೊಂದೆಡೆ ಜೀವ ಉಳಿಸಬೇಕಾದ ಆಸ್ಪತ್ರೆಗಳೇ ಕಣ್ಣೀರಿನ ಕಥೆ ಹೇಳುತ್ತಿವೆ. ಸಾವಿರಾರು ಹಾಸಿಗೆ ಸೌಲಭ್ಯ ಹೊಂದಿರುವ ಆಸ್ಪತ್ರೆಗಳು ನಾಮಾವಶೇಷವಾಗಿದ್ದು, ನೊಂದ ಸಂತ್ರಸ್ತರಿಗೆ ರಸ್ತೆಯಲ್ಲೇ ಚಿಕಿತ್ಸೆ ನೀಡುವಂತಹ ಪರಿಸ್ಥಿತಿ ಬಂದೊದಗಿವೆ. ಇದರಿಂದ ಮ್ಯಾನ್ಮಾರ್ನ ನೈಪಿತಾವು ಸೇರಿ 6 ಪ್ರದೇಶ ಹಾಗೂ ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.
ಭಾರತದಿಂದ ನೆರವಿನ ಹಸ್ತ
ಸಂತ್ರಸ್ತವಾಗಿರುವ ಮ್ಯಾನ್ಮಾರ್ಗೆ ಭಾರತ ನೆರವಿನ ಹಸ್ತ ಚಾಚಿದೆ. ತಾತ್ಕಾಲಿಕ ಟೆಂಟ್ಗಳು, ಮಲಗುವ ಹಾಸಿಗೆ, ಹೊದಿಕೆಗಳು, ಆಹಾರ, ನೀರು, ನೈರ್ಮಲ್ಯ ಕಿಟ್, ಸೋಲಾರ್ ಲೈಟ್, ಜನರೇಟರ್ ಸೆಟ್ ಹಾಗೂ ಔಷಧಗಳ ನೆರವನ್ನು ಭಾರತ ನೀಡಿದೆ. ಈಗಾಗಲೇ ಸುಮಾರು 15 ಟನ್ ಪರಿಹಾರ ಸಾಮಗ್ರಿಗಳನ್ನು ಭಾರತೀಯ ವಾಯುಸೇನೆಯ C-130-J ವಿಮಾನ ವಿಮಾನದಲ್ಲಿ ಮ್ಯಾನ್ಮಾರ್ಗೆ ಕಳುಹಿಸಲಾಗುತ್ತಿದೆ.
ಅಫ್ಘಾನಿಸ್ತಾನದಲ್ಲೂ ಕಂಪಿಸಿದ ಭೂಮಿ:
ಮ್ಯಾನ್ಮಾರ್, ಥಾಯ್ಲೆಂಡ್ನಲ್ಲಿ ಭೂಂಕಪದ ಬೆನ್ನಲ್ಲೇ ಶನಿವಾರ ಮುಂಜಾನೆ ಅಫ್ಘಾನಿಸ್ತಾನದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಇಂದು ಮುಂಜಾನೆ 5:16ಕ್ಕೆ ಭೂಮಿ ಕಂಪಿಸಿದ್ದು, ಭೂಮಿಯಿಂದ 180 ಕಿಮೀ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದ್ದೆ. ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಅಫ್ಘಾನಿಸ್ತಾನದಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ.
ನೇಪಿಟಾವ್/ಬ್ಯಾಂಕಾಕ್: ಮ್ಯಾನ್ಮಾರ್ನಲ್ಲಿ ಶುಕ್ರವಾರ ಒಂದೇ ದಿನ ಮೂರು ಬಾರಿ ಭೂಕಂಪ (Earthquake) ಸಂಭವಿಸಿದ್ದು, ಭೂಕಂಪನದ ತೀವ್ರತೆ ಥ್ಯಾಯ್ಲೆಂಡ್ ನ ಬ್ಯಾಂಕಾಂಕ್ ಮತ್ತು ಬಾಂಗ್ಲಾದೇಶದ ವರಗೂ ವ್ಯಾಪಿಸಿದೆ. ಭೂ ಕಂಪನದ ಕೇಂದ್ರ ಬಿಂದು ಇದ್ದ ಮಯನ್ಮಾರ್ನಲ್ಲಿ (Myanmar) ಭಾರೀ ಹಾನಿಯಾಗಿದ್ದು ಈವರೆಗೆ 200ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ.
I pray you never find yourself in this situation. Buildings swaying, people taking cover, and panic everywhere. #earthquakepic.twitter.com/hHdx2Hsnmu
ಅಲ್ಲದೇ ಶುಕ್ರವಾರ ರಾತ್ರಿಯೂ ಮತ್ತೆ ಭೂಕಂಪನವಾಗಿದ್ದು, ಸಾವು ನೋವಿನ ಪ್ರಮಾಣವನ್ನು ಮತ್ತಷ್ಟು ಏರಿಕೆ ಮಾಡಿದೆ. ಶುಕ್ರವಾರ ರಾತ್ರಿ 11:56ರ ವೇಳೆ ಮ್ಯಾನ್ಮಾರ್ನಲ್ಲಿ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆ ದಾಖಲಾಗಿದೆ.
The scene after the collapse of the Shwe Pho Shing Mosque in #Mandalay due to the 7.7 magnitude #earthquake hit #Myanmar.
At least 20 people were killed when the Shwe Pho Shing Mosque in Mandalay collapsed during worship today due to a devastating… pic.twitter.com/UkJBGRRTkY
ಅಫ್ಘಾನಿಸ್ತಾನದಲ್ಲೂ ಕಂಪಿಸಿದ ಭೂಮಿ:
ಮ್ಯಾನ್ಮಾರ್, ಥಾಯ್ಲೆಂಡ್ನಲ್ಲಿ ಭೂಂಕಪದ ಬೆನ್ನಲ್ಲೇ ಶನಿವಾರ ಮುಂಜಾನೆ ಅಫ್ಘಾನಿಸ್ತಾನದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಇಂದು ಮುಂಜಾನೆ 5:16ಕ್ಕೆ ಭೂಮಿ ಕಂಪಿಸಿದ್ದು, ಭೂಮಿಯಿಂದ 180 ಕಿಮೀ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದ್ದೆ. ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಅಫ್ಘಾನಿಸ್ತಾನದಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ.
— ต่อต้านสยามและอิสลามพหุสังคมของมัน (@CBuri17007) March 28, 2025
ರಸ್ತೆಗಳಲ್ಲೇ ಚಿಕಿತ್ಸೆ:
ಮ್ಯಾನ್ಮಾರ್ನಲ್ಲಿ ಉಂಟಾದ ಭೀಕರ ಭೂಕಂಪ ಸಾಕಷ್ಟು ಸಾವು-ನೋವು ಉಂಟುಮಾಡಿದೆ. ಒಂದೆಡೆ ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಈವರೆಗೆ 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಇನ್ನೂ ನೂರಾರು ಮಂದಿ ಅವಶೇಷಗಳ ಅಡಿ ಸಿಲುಕಿರುವ ಶಂಕೆಯಿದೆ. ಮತ್ತೊಂದೆಡೆ ಜೀವ ಉಳಿಸಬೇಕಾದ ಆಸ್ಪತ್ರೆಗಳೇ ಕಣ್ಣೀರಿನ ಕಥೆ ಹೇಳುತ್ತಿವೆ. ಸಾವಿರಾರು ಹಾಸಿಗೆ ಸೌಲಭ್ಯ ಹೊಂದಿರುವ ಆಸ್ಪತ್ರೆಗಳು ನಾಮಾವಶೇಷವಾಗಿದ್ದು, ನೊಂದ ಸಂತ್ರಸ್ತರಿಗೆ ರಸ್ತೆಯಲ್ಲೇ ಚಿಕಿತ್ಸೆ ನೀಡುವಂತಹ ಪರಿಸ್ಥಿತಿ ಬಂದೊದಗಿವೆ. ಇದರಿಂದ ಮ್ಯಾನ್ಮಾರ್ನ ನೈಪಿತಾವು ಸೇರಿ 6 ಪ್ರದೇಶ ಹಾಗೂ ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.
ನೇಪಿಟಾವ್/ಬ್ಯಾಂಕಾಕ್: ಮ್ಯಾನ್ಮಾರ್ನಲ್ಲಿ ಸಂಭವಿಸಿದ ಪ್ರಬಲ ಭೂಕಂಪ (Myanmar Earthquake) 900 ಕಿಲೋ ಮೀಟರ್ ದೂರದ ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಂಕ್ ಮೇಲೂ ದೊಡ್ಡ ಪರಿಣಾಮ ಬೀರಿದೆ. 1930ರ ನಂತರ ಥಾಯ್ಲೆಂಡ್ನಲ್ಲಿ ಎದುರಿಸಿದ ಅತ್ಯಂತ ಶಕ್ತಿಶಾಲಿ ಕಂಪನ ಇದಾಗಿದ್ದು, ಗಗನಚುಂಬಿ ಕಟ್ಟಡಗಳ ಧರಾಶಾಹಿಯಾಗಿವೆ. ನಿಂತ ಸ್ಥಳದಲ್ಲಿ ಮೆಟ್ರೋ ರೈಲ್ವೆ (Metro Train) ನಲುಗಿ ಹೋಗಿವೆ, ರಸ್ತೆಗಳು ಬಾಯಿತೆರದು ನಿಂತಿದೆ. ಘಟನೆಯಲ್ಲಿ ಈವರೆಗೆ 144 ಮಂದಿ ಸಾವನ್ನಪ್ಪಿದ್ದಾರೆ.
ಈ ನಡುವೆ ಸಂತ್ರಸ್ತವಾಗಿರುವ ಮ್ಯಾನ್ಮಾರ್ಗೆ ಭಾರತ ನೆರವಿನ ಹಸ್ತ ಚಾಚಿದೆ. ತಾತ್ಕಾಲಿಕ ಟೆಂಟ್ಗಳು, ಮಲಗುವ ಹಾಸಿಗೆ, ಹೊದಿಕೆಗಳು, ಆಹಾರ, ನೀರು, ನೈರ್ಮಲ್ಯ ಕಿಟ್, ಸೋಲಾರ್ ಲೈಟ್, ಜನರೇಟರ್ ಸೆಟ್ ಹಾಗೂ ಔಷಧಗಳ ನೆರವನ್ನು ಭಾರತ ನೀಡಿದೆ. ಈಗಾಗಲೇ ಸುಮಾರು 15 ಟನ್ ಪರಿಹಾರ ಸಾಮಗ್ರಿಗಳನ್ನು ಭಾರತೀಯ ವಾಯುಸೇನೆಯ C-130-J ವಿಮಾನ ವಿಮಾನದಲ್ಲಿ ಮ್ಯಾನ್ಮಾರ್ಗೆ ಕಳುಹಿಸಲಾಗುತ್ತಿದೆ. ಇದನ್ನೂ ಓದಿ: ಮೊದಲು ನನಗೆ ತಲೆ ಸುತ್ತುತ್ತಿದೆ ಎಂದು ಭಾವಿಸಿದ್ದೆ – ಥೈಲ್ಯಾಂಡ್ ಭೂಕಂಪದ ಭಯಾನಕ ಚಿತ್ರಣ ಬಿಚ್ಚಿಟ್ಟ ಕನ್ನಡಿಗ
ನಲುಗಿ ಹೋದ ಮೆಟ್ರೋಗಳು
ಥಾಯ್ಲೆಂಡ್ ಮತ್ತು ಮಯನ್ಮಾರ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಭೂಕಂಪವು ಥಾಯ್ಲೆಂಡ್ ರಾಜಧಾನಿ ಬ್ಯಾಕಾಂಕ್ ಅನ್ನು ನಲುಗಿಸಿದೆ. ಬ್ಯಾಕಾಂಕ್ನಲ್ಲಿ ಸಂಭವಿಸಿದ ಭೂಕಂಪನವು ರಿಕ್ಟರ್ ಮಾಪಕದಲ್ಲಿ 7.3 ರಿಂದ 7.7 ರವರೆಗೆ ತೀವ್ರತೆಯಲ್ಲಿ ದಾಖಲಾಗಿದೆ. ಥಾಯ್ಲೆಂಡ್ನ ಖನಿಜ ಸಂಪನ್ಮೂಲ ಇಲಾಖೆಯ ಪ್ರಕಾರ, ಈ ಭೂಕಂಪವು 1930ರ ನಂತರ ಥಾಯ್ಲೆಂಡ್ನಲ್ಲಿ ಅನುಭವಿಸಿದ ಅತ್ಯಂತ ಶಕ್ತಿಶಾಲಿ ಕಂಪನವಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: Myanmar Earthquake: ಮ್ಯಾನ್ಮಾರ್ನಲ್ಲಿ ಪ್ರಬಲ ಭೂಕಂಪಕ್ಕೆ 60 ಸಾವು, 250 ಮಂದಿಗೆ ಗಾಯ
ಘಟನೆಯಲ್ಲಿ ಈವರೆಗೆ 144 ಮಂದಿ ಸಾವನ್ನಪ್ಪಿದ್ದು ರಕ್ಷಣಾ ಕಾರ್ಯಚರಣೆ ಮುಂದುವರಿದಿದೆ. ದೇಶದಲ್ಲಿ ಈಗ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಥಾಯ್ಲೆಂಡ್ನ ಪ್ರಧಾನಿ ಪೇಟೊಂಗ್ತಾರ್ನ್ ಶಿನವತ್ರಾ ಅವರು ಭೂಕಂಪದ ನಂತರ ಬ್ಯಾಂಕಾಕ್ನ ಕುಸಿತದ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಇದನ್ನೂ ಓದಿ: ಮ್ಯಾನ್ಮಾರ್ನಲ್ಲಿ ಭೂಕಂಪ – 144ಕ್ಕೇರಿದ ಸಾವಿನ ಸಂಖ್ಯೆ; ತುರ್ತು ಪರಿಸ್ಥಿತಿ ಘೋಷಣೆ
ನೇಪಿಟಾವ್: ಮ್ಯಾನ್ಮಾರ್ನಲ್ಲಿ (Myanmar Earthquake) ಎರಡು ಪ್ರಬಲ ಭೂಕಂಪನ ಸಂಭವಿಸಿದೆ. ಭೂಕಂಪನದ ತೀವ್ರತೆ ಥ್ಯಾಯ್ಲೆಂಡ್ನ (Thailand) ಬ್ಯಾಂಕಾಕ್ ಮತ್ತು ಬಾಂಗ್ಲಾದೇಶದ ವರೆಗೂ ವ್ಯಾಪಿಸಿದೆ. ಭೂಕಂಪನದ ಕೇಂದ್ರಬಿಂದು ಇದ್ದ ಮ್ಯಾನ್ಮಾರ್ನಲ್ಲಿ ಭಾರಿ ಹಾನಿಯಾಗಿದ್ದು, 144 ಜನರು ಸಾವನ್ನಪ್ಪಿದ್ದಾರೆ. ಮನೆ ದೇವಸ್ಥಾನ ಸೇರಿದಂತೆ ನೂರಾರು ಕಟ್ಟಡಗಳು ಧರೆಗುರುಳಿದ್ದು, ಜನರ ಬದುಕು ಬೀದಿಗೆ ಬಂದಿದೆ.
11:50 ಸುಮಾರಿಗೆ 7.7 ಮತ್ತು 7.4 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದ್ದು, ಭಾರಿ ಅನಾಹುತಗಳು ಸಂಭವಿಸಿವೆ. ಈ ಭೂಕಂಪದ ಕೇಂದ್ರಬಿಂದು ಸಗೈಂಗ್ ಪ್ರದೇಶದಿಂದ ಸುಮಾರು 45 ಕಿಲೋಮೀಟರ್ ದೂರದಲ್ಲಿ, ಭೂಮಿಯಿಂದ 10 ಕಿಲೋಮೀಟರ್ ಆಳದಲ್ಲಿ ಇತ್ತು ಎಂದು ಯುನೈಟೆಡ್ ಸ್ಟೇಟ್ಸ್ ಜಿಯಾಲಾಜಿಕಲ್ ಸರ್ವೇ ತಿಳಿಸಿದೆ. ಇದನ್ನೂ ಓದಿ: Myanmar Earthquake: ಮ್ಯಾನ್ಮಾರ್ನಲ್ಲಿ ಪ್ರಬಲ ಭೂಕಂಪಕ್ಕೆ 60 ಸಾವು, 250 ಮಂದಿಗೆ ಗಾಯ
ಈ ಘಟನೆಯು ಮ್ಯಾನ್ಮಾರ್ನ ಜನಜೀವನವನ್ನು ಅಸ್ಥವ್ಯಸ್ಥ ಮಾಡಿದ್ದು, ಪಕ್ಕದ ರಾಷ್ಟ್ರಗಳಾದ ಭಾರತ, ಥೈಲ್ಯಾಂಡ್ ಮತ್ತು ಬಾಂಗ್ಲಾದೇಶದಲ್ಲೂ ತೀವ್ರ ಕಂಪನ ಅನುಭವವಾಗಿದೆ. ಮುಖ್ಯವಾಗಿ ಈ ಭೂಕಂಪವು ಮ್ಯಾನ್ಮಾರ್ನ ಉತ್ತರ ಮತ್ತು ಮಧ್ಯ ಭಾಗಗಳಲ್ಲಿ ಭಾರೀ ವಿನಾಶವನ್ನು ಉಂಟುಮಾಡಿದೆ. ಸಗೈಂಗ್ ಪ್ರದೇಶದಲ್ಲಿ ಹಲವಾರು ಕಟ್ಟಡಗಳು ಕುಸಿದಿದ್ದು, ಇತಿಹಾಸ ಪ್ರಸಿದ್ಧ ಸಗೈಂಗ್ ಗುಡ್ಡದ ಸುತ್ತಮುತ್ತಲಿನ ದೇವಾಲಯಗಳಿಗೆ ಹಾನಿಯಾಗಿದೆ.
ಘಟನೆಯಲ್ಲಿ ಇದುವರೆಗೆ ಕನಿಷ್ಠ 144 ಜನರು ಸಾವನ್ನಪ್ಪಿದ್ದಾರೆ ಮತ್ತು 732 ಜನರು ಗಾಯಗೊಂಡಿದ್ದಾರೆ. ಯುನೈಟೆಡ್ ಸ್ಟೇಟ್ಸ್ ಸರ್ಕಾರಿ ಸಂಸ್ಥೆಯು ಭೂಕಂಪದ ಶಕ್ತಿ ಮತ್ತು ಆಳವನ್ನು ವಿಶ್ಲೇಷಿಸಿದ ನಂತರ, ತೀವ್ರ ಆರ್ಥಿಕ ನಷ್ಟಗಳೊಂದಿಗೆ ಸಾವಿನ ಸಂಖ್ಯೆ ಸಾವಿರಾರು ಸಂಖ್ಯೆಯಲ್ಲಿರಬಹುದು ಎಂದು ಎಚ್ಚರಿಸಿದೆ. ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಜನರು ಸಿಲುಕಿದ್ದು ರಕ್ಷಣೆ ಕಾರ್ಯ ನಡೆಯುತ್ತಿದೆ. ಇದನ್ನೂ ಓದಿ: Photo Gallary: ಮ್ಯಾನ್ಮಾರ್, ಥೈಲ್ಯಾಂಡ್ನಲ್ಲಿ ಡೆಡ್ಲಿ ಭೂಕಂಪ – ಭೀಕರ ದೃಶ್ಯಗಳನ್ನು ಫೋಟೊಗಳಲ್ಲಿ ನೋಡಿ..
ಭೂಕಂಪಕ್ಕೆ ಆದ ಅನಾಹುತಗಳೇನು?
* ಭೂಕಂಪದಿಂದಾಗಿ ಐದು ನಗರಗಳು ಮತ್ತು ಪಟ್ಟಣಗಳಲ್ಲಿ ಕಟ್ಟಡಗಳು ಕುಸಿದಿವೆ.
* ಯಾಂಗೂನ್-ಮಂಡಲೆ ಎಕ್ಸ್ಪ್ರೆಸ್ವೇಯಲ್ಲಿ ರೈಲ್ವೆ ಸೇತುವೆ ಮತ್ತು ರಸ್ತೆ ಸೇತುವೆ ಕೂಡ ಕುಸಿದು ಬಿದ್ದಿದೆ.
* ಪ್ರಬಲ ಭೂಕಂಪದ ನಂತರ ಮಂಡಲೆಯಲ್ಲಿರುವ 90 ವರ್ಷ ಹಳೆಯದಾದ ಅವಾ ಸೇತುವೆ ಇರಾವಡ್ಡಿ ನದಿಯಲ್ಲಿ ಕುಸಿದಿದೆ.
* ಐತಿಹಾಸಿಕ ಪ್ರಸಿದ್ಧವಾಗಿರುವ ಗಡಿಯಾರ ಗೋಪುರ ಮತ್ತು ಐತಿಹಾಸಿಕ ಮಂಡಲೆ ಅರಮನೆಯ ಹಾನಿಯಾಗಿದೆ.
* ಮ್ಯಾನ್ಮಾರ್ನಲ್ಲಿರುವ ದೊಡ್ಡ ಅಣೆಕಟ್ಟುಗಳ ಸ್ಥಿತಿಯ ಬಗ್ಗೆ ಮಾನವೀಯ ಸಂಸ್ಥೆ ರೆಡ್ಕ್ರಾಸ್ ಕಳವಳ ವ್ಯಕ್ತಪಡಿಸಿದೆ.
* ರಸ್ತೆಗಳು, ಸೇತುವೆಗಳು ಮತ್ತು ಸಾರ್ವಜನಿಕ ಕಟ್ಟಡಗಳು ಸೇರಿದಂತೆ ಸಾರ್ವಜನಿಕ ಮೂಲಸೌಕರ್ಯಗಳು ಹಾನಿಗೊಳಗಾಗಿವೆ.
* ಮ್ಯಾನ್ಮಾರ್ನ ಸಾಗೈಂಗ್, ಮಂಡಲೆ ಮತ್ತು ರಾಜಧಾನಿ ನೇಪಿಟಾವ್ ಸೇರಿದಂತೆ ಆರು ಪ್ರದೇಶಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದೆ.
ಯಾಂಗೊನ್ನಲ್ಲಿ ಕೂಡ ಕಂಪನದ ಪರಿಣಾಮವಾಗಿ ಜನರು ಭಯಭೀತರಾಗಿ ರಸ್ತೆಗಳಿಗಿಳಿದಿದ್ದಾರೆ. ಮ್ಯಾನ್ಮಾರ್ ಸರ್ಕಾರವು ತುರ್ತು ಪರಿಸ್ಥಿತಿ ಘೋಷಿಸಿ, ಸೇನೆ ಮತ್ತು ಸ್ಥಳೀಯ ರಕ್ಷಣಾ ತಂಡಗಳನ್ನು ಕಾರ್ಯಾಚರಣೆಗೆ ಇಳಿಸಿದೆ. ಭಗ್ನಾವಶೇಷಗಳಡಿ ಸಿಲುಕಿರುವ ಜನರನ್ನು ರಕ್ಷಿಸಲು ತೀವ್ರ ಪ್ರಯತ್ನಗಳು ನಡೆಯುತ್ತಿವೆ. ಆದರೆ, ರಸ್ತೆ ಸಂಪರ್ಕ ಕಡಿತ ಮತ್ತು ಸಂವಹನ ವ್ಯವಸ್ಥೆಯ ವೈಫಲ್ಯದಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಸವಾಲು ಎದುರಾಗಿದೆ. ಸ್ಥಳೀಯ ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಔಷಧಿ ಮತ್ತು ಆಹಾರ ಸಾಮಗ್ರಿಗಳ ಕೊರತೆಯಾಗಿದೆ. ಇದನ್ನೂ ಓದಿ: ಮೊದಲು ನನಗೆ ತಲೆ ಸುತ್ತುತ್ತಿದೆ ಎಂದು ಭಾವಿಸಿದ್ದೆ – ಥೈಲ್ಯಾಂಡ್ ಭೂಕಂಪದ ಭಯಾನಕ ಚಿತ್ರಣ ಬಿಚ್ಚಿಟ್ಟ ಕನ್ನಡಿಗ
ನೇಪಿಟಾವ್: ಮ್ಯಾನ್ಮಾರ್ನಲ್ಲಿ (Myanmar Earthquake) ಸಂಭವಿಸಿದ ಪ್ರಬಲ ಭೂಕಂಪಕ್ಕೆ 60 ಮಂದಿ ಸಾವನ್ನಪ್ಪಿದ್ದು, 250 ಮಂದಿ ಗಾಯಗೊಂಡಿದ್ದಾರೆ.
ಮ್ಯಾನ್ಮಾರ್ನಲ್ಲಿ ಸತತ ಎರಡು ಭೂಕಂಪಗಳು ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.7 ಮತ್ತು 6.4 ತೀವ್ರತೆ ದಾಖಲಾಗಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್ಜಿಎಸ್) ಶುಕ್ರವಾರ ತಿಳಿಸಿದೆ. ಭೂಕಂಪದ ಕೇಂದ್ರಬಿಂದುವು ಮಧ್ಯ ಮ್ಯಾನ್ಮಾರ್ನಲ್ಲಿದ್ದು, ಮೋನಿವಾ ನಗರದಿಂದ ಸುಮಾರು 50 ಕಿಲೋಮೀಟರ್ ಪೂರ್ವಕ್ಕೆ ಇದೆ ಎಂದು ವರದಿಯಾಗಿದೆ. ಇದನ್ನೂ ಓದಿ: Photo Gallary: ಮ್ಯಾನ್ಮಾರ್, ಥೈಲ್ಯಾಂಡ್ನಲ್ಲಿ ಡೆಡ್ಲಿ ಭೂಕಂಪ – ಭೀಕರ ದೃಶ್ಯಗಳನ್ನು ಫೋಟೊಗಳಲ್ಲಿ ನೋಡಿ..
ಥೈಲ್ಯಾಂಡ್ನಲ್ಲಿಯೂ ನಾಲ್ಕು ಸಾವುಗಳು ವರದಿಯಾಗಿವೆ. 81 ಜನರು ಕಾಣೆಯಾಗಿದ್ದಾರೆ. 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಥೈಲ್ಯಾಂಡ್ನ ಹಲವಾರು ಭಾಗಗಳಲ್ಲಿಯೂ ಭೂಕಂಪದ ಅನುಭವವಾಯಿತು. ಭೂಕಂಪದ ನಂತರ ಬ್ಯಾಂಕಾಕ್ನಲ್ಲಿ ನಿರ್ಮಾಣ ಹಂತದಲ್ಲಿದ್ದ ಗಗನಚುಂಬಿ ಕಟ್ಟಡ ಕುಸಿದು ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಹತ್ತಾರು ಮಂದಿ ಕಾರ್ಮಿಕರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.
ಭೂಕಂಪದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದು, ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದಾಗಿ ಹೇಳಿದ್ದಾರೆ. ಭಾರತೀಯ ಅಧಿಕಾರಿಗಳು ಸನ್ನದ್ಧರಾಗಿರುವಂತೆ ಸೂಚನೆ ನೀಡಿದ್ದಾರೆ.