Tag: mynaa film

  • ನಿತ್ಯಾ ಮೆನನ್ ಜೊತೆ ತಮಿಳು ನಟ ಅನುಚಿತವಾಗಿ ವರ್ತಿಸಿದ್ರಾ? ಮೈನಾ ನಟಿ ಸ್ಪಷ್ಟನೆ

    ನಿತ್ಯಾ ಮೆನನ್ ಜೊತೆ ತಮಿಳು ನಟ ಅನುಚಿತವಾಗಿ ವರ್ತಿಸಿದ್ರಾ? ಮೈನಾ ನಟಿ ಸ್ಪಷ್ಟನೆ

    ನ್ನಡದ ನಟಿ ನಿತ್ಯಾ ಮೆನನ್ (Nithya Menen) ಮತ್ತೆ ಸುದ್ದಿಯಲ್ಲಿದ್ದಾರೆ. ನಟಿ ಜೊತೆ ತಮಿಳು ನಟ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾದ ಸುದ್ದಿ ಮತ್ತೆ ವೈರಲ್ ಆಗ್ತಿದ್ದು, ಈ ಬಗ್ಗೆ ‘ಮೈನಾ’ (Mynaa) ನಾಯಕಿ ನಿತ್ಯಾ ಮೆನನ್ ಸ್ಪಷ್ಟನೆ ನೀಡಿದ್ದಾರೆ.

    ಕಾಲಿವುಡ್‌ನ ನಾಯಕನೊಬ್ಬ (Kollywood Hero) ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಶೂಟಿಂಗ್ ಸಮಯದಲ್ಲಿ ಅವರು ತನ್ನನ್ನು ಸ್ಪರ್ಶಿಸುವ ಮೂಲಕ ತುಂಬಾ ಹಿಂಸೆ ನೀಡಿದ್ದರು. ನಾಯಕನ ಹುಚ್ಚು ವರ್ತನೆಯಿಂದ ಸರಿಯಾಗಿ ಶೂಟಿಂಗ್‌ನಲ್ಲಿ ಭಾಗವಹಿಸಲು ಆಗುತ್ತಿರಲಿಲ್ಲ ಎಂಬ ಎನ್ನಲಾದ ಸುದ್ದಿಗೆ ನಿತ್ಯಾ ಮೆನನ್ ಪ್ರತಿಕ್ರಿಯಿಸಿ, ಈ ಸುದ್ದಿ ಸುಳ್ಳು ಎಂದು ನಟಿ ಸೋಶಿಯಲ್ ಮೀಡಿಯಾದಲ್ಲಿ ಸ್ಪಷ್ಟನೆ ನೀಡಿದ್ದಾರೆ.

    ತಮಿಳು ನಟ, ತಮಿಳು ಚಿತ್ರರಂಗದ ವಿರುದ್ಧ ತಾವು ಯಾವುದೇ ಹೇಳಿಕೆ ನೀಡಿಲ್ಲ. ಇದೆಲ್ಲಾ ಸುಳ್ಳು ಸುದ್ದಿ ಎಂದು ಸ್ವತಃ ನಟಿ ಸ್ಪಷ್ಟನೆ ನೀಡಿದ್ದಾರೆ. ಸುಳ್ಳು ಸುದ್ದಿ ವೈರಲ್ ಆಗಿರೋದ್ದಕ್ಕೆ ಅಸಮಾಧಾನ ಹೊರಹಾಕಿದ್ದಾರೆ.

    ಕುಮಾರಿ ಶ್ರೀಮತಿ ಎಂಬ ವೆಬ್ ಸಿರೀಸ್‌ನಲ್ಲಿ ನಿತ್ಯಾ ಮೆನನ್ ನಟಿಸಿದ್ದಾರೆ. ಸೆ.28ಕ್ಕೆ ಬಹುಭಾಷೆಗಳಲ್ಲಿ ಓಟಿಟಿಯಲ್ಲಿ ರಿಲೀಸ್ ಆಗುತ್ತಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಲಿತಕೇರಿಯಲ್ಲಿ ಮಾತ್ರ ಈ ರೀತಿ ನಡೆದಿದೆ: ಕಲುಷಿತ ನೀರು ಸೇವಿಸಿ ಐವರ ಸಾವಿನ ಬಗ್ಗೆ ಚೇತನ್‌ ಪ್ರತಿಕ್ರಿಯೆ

    ದಲಿತಕೇರಿಯಲ್ಲಿ ಮಾತ್ರ ಈ ರೀತಿ ನಡೆದಿದೆ: ಕಲುಷಿತ ನೀರು ಸೇವಿಸಿ ಐವರ ಸಾವಿನ ಬಗ್ಗೆ ಚೇತನ್‌ ಪ್ರತಿಕ್ರಿಯೆ

    ಕವಾಡಿಗರಹಟ್ಟಿಗೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ನಟ ಚೇತನ್‌ ಸಾಂತ್ವನ

    ಚಿತ್ರದುರ್ಗ (Chitradurga) ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು(Polluted Water Case) ಸೇವಿಸಿ ಐವರು ಸಾವನ್ನಪ್ಪಿದ್ದರು. ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಲು ಸ್ಯಾಂಡಲ್‌ವುಡ್ ನಟ ಚೇತನ್ (Actor Chethan) ಭೇಟಿ ನೀಡಿದ್ದಾರೆ. ಈ ವೇಳೆ ನಟನ ಜೊತೆ ಡಿಎಸ್‌ಎಸ್ ಮುಖಂಡರು ಸಾಥ್ ನೀಡಿದ್ದಾರೆ.

    ಜುಲೈ 30ರಿಂದ ಇಲ್ಲಿಯವರೆಗೆ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ನೂರಾರು ಜನರು ಅಸ್ವಸ್ಥರಾಗಿದ್ದರು. ಬಳಿಕ ಐವರು ಮೃತಪಟ್ಟಿದ್ದರು. ಕವಾಡಿಗರಹಟ್ಟಿಯಲ್ಲಿ ಸೂತಕದ ಛಾಯೆ ಮನೆ ಮಾಡಿದ್ದು, ಮೈನಾ ಹೀರೋ ಚೇತನ್, ಕುಟುಂಬಸ್ಥರ ಮನೆಗೆ ಭೇಟಿ ನೀಡಿ ಬಂದಿದ್ದಾರೆ. ಬಳಿಕ ಈ ಪ್ರಕರಣದ ಬಗ್ಗೆ ನಟ ಪ್ರತಿಕ್ರಿಯೆ ನೀಡಿದ್ದಾರೆ.

    ದಲಿತಕೇರಿಯಲ್ಲಿ ಮಾತ್ರ ಈ ರೀತಿ ಪ್ರಕರಣ ನಡೆದಿದೆ. ಇಡೀ ಸರ್ಕಾರಿ ವ್ಯವಸ್ಥೆಯ ವೈಫಲ್ಯ ಈ ಪ್ರಕರಣದಿಂದ ಎದ್ದು ಕಾಣುತ್ತಿದೆ. ದ್ವೇಷದಿಂದ ವಿಷ ಬೆರೆಸಿದ ಆರೋಪದ ಬಗ್ಗೆಯೂ ತನಿಖೆ ನಡೆಯಲಿ. ಸರ್ಕಾರದಿಂದ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ. ಕವಾಡಿಗರಹಟ್ಟಿ ಪ್ರಕರಣದ ಬಗ್ಗೆ ಉನ್ನತಮಟ್ಟದ ತನಿಖೆ ಆಗಲೇಬೇಕು ಎಂದು ನಟ ಮಾತನಾಡಿದ್ದಾರೆ. ಎಸ್‌ಸಿಪಿ, ಟಿಎಸ್‌ಪಿ ಹಣ ಸರ್ಕಾರದಿಂದ ದುರ್ಬಳಕೆಯಾಗಿದೆ. ದಲಿತರ ಅಭಿವೃದ್ಧಿಗೆ ಎಂದು ಮೀಸಲಿದ್ದ ಹಣವನ್ನ 5 ಗ್ಯಾರಂಟಿಗೆ ಸರ್ಕಾರ ಬಳಕೆ ಮಾಡಿದೆ ಎಂದು ಚೇತನ್ ಆರೋಪ ಮಾಡಿದ್ದಾರೆ. ಇದನ್ನೂ ಓದಿ:ಬಿಪಾಶಾ ಬಸು ಮಗಳ ಹಾರ್ಟ್‌ನಲ್ಲಿ ಹೋಲ್- ಕಣ್ಣೀರಿಟ್ಟ ನಟಿ

    ಐವರು ಮೃತಪಟ್ಟ ಕುಟುಂಬಸ್ಥರ ಮನೆಗೆ ಆರೋಗ್ಯ ಸಚಿವ ದಿನೇಶ್ ಗಂಡೂರಾವ್ (Dinesh Gundu Rao) ಅವರು ಭೇಟಿ ನೀಡಿ ಸಾಂತ್ವನ ಹೇಳಿದ್ದರು. ಬಳಿಕ ಆ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಚೆಕ್ ನೀಡಿದ್ದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಜ್ಜಿಯನ್ನು ಕಳೆದುಕೊಂಡ ನೋವಿನಲ್ಲಿ ನಟಿ- ಕಣ್ಣೀರಿಟ್ಟ ನಿತ್ಯಾ ಮೆನನ್

    ಅಜ್ಜಿಯನ್ನು ಕಳೆದುಕೊಂಡ ನೋವಿನಲ್ಲಿ ನಟಿ- ಕಣ್ಣೀರಿಟ್ಟ ನಿತ್ಯಾ ಮೆನನ್

    ಹುಭಾಷಾ ನಟಿ ನಿತ್ಯಾ ಮೆನನ್ (Nithya Menen) ಅವರ ಮನೆಯಲ್ಲಿ ಸೂತಕದ ಛಾಯೆ ಮನೆ ಮಾಡಿದೆ. ನಿತ್ಯಾ ಅವರ ಅಜ್ಜಿ ಇತ್ತೀಚಿಗೆ ಇಹಲೋಕ ತ್ಯಜಿಸಿದ್ದಾರೆ. ಎಂದೂ ಬಾರದ ಲೋಕಕ್ಕೆ ಹೋಗಿರುವ ಅಜ್ಜಿ ಬಗ್ಗೆ ನಟಿ ಕಣ್ಣೀರಿಟ್ಟಿದ್ದಾರೆ. ಅಜ್ಜಿ (Grand Mother) ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ, ನಿತ್ಯಾ ಭಾವುಕರಾಗಿದ್ದಾರೆ.

    ಕನ್ನಡದ ಮೈನಾ(Mynaa), ಕೋಟಿಗೊಬ್ಬ2 (Kotigobba 2), ಸಿನಿಮಾಗಳಲ್ಲಿ ನಟಿಸಿರುವ ನಿತ್ಯಾ ಮೆನನ್ ಬಹುಭಾಷಾ ನಟಿಯಾಗಿ ಮಿಂಚ್ತಿದ್ದಾರೆ. ಹಿಂದಿ, ತೆಲುಗು, ತಮಿಳು ಸಿನಿಮಾಗಳಲ್ಲಿ ಬೆಂಗಳೂರಿನ ಬೆಡಗಿ ನಿತ್ಯಾ ಬ್ಯುಸಿಯಾಗಿದ್ದಾರೆ. ಸೌಂದರ್ಯದ ಜೊತೆ ಪ್ರತಿಭೆಯಿರುವ ಟ್ಯಾಲೆಂಟೆಡ್ ನಟಿ ನಿತ್ಯಾ ವಿಭಿನ್ನ ಪಾತ್ರಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ.

    ತುಂಬಾ ಪ್ರೀತಿಸುತ್ತಿದ್ದ ನಿತ್ಯಾ ಅಜ್ಜಿ ತೀರಿಕೊಂಡರು. ನಿತ್ಯಾ ಈ ಮೊದಲೇ ಅಜ್ಜನನ್ನು (Grand Father) ಕಳೆದುಕೊಂಡಳು. ಈಗ ಇವರಿಬ್ಬರು ಜೊತೆಗಿಲ್ಲ ಎನ್ನುವುದನ್ನು ನಿತ್ಯಾ ಮೆನನ್‌ಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ನೋವಿನಿಂದಾಗಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಅಜ್ಜಿ ಮತ್ತು ಅಜ್ಜನೊಂದಿಗಿನ ಚಿತ್ರವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಜೈಲೂಟ ಫಿಕ್ಸ್ ಆದ್ರೂ ತಾನು ತಪ್ಪೇ ಮಾಡಿಲ್ಲ ಅಂತಿರೋ ವಂಚಕಿ ನಿಶಾ ನರಸಪ್ಪ!

     

    View this post on Instagram

     

    A post shared by Nithya Menen (@nithyamenen)

    ಯುಗವೊಂದು ಕೊನೆಗೊಂಡಿದೆ. ಗುಡ್ ಬೈ ಅಜ್ಜಿ ಮತ್ತು ನನ್ನ ಚೆರ್ರಿಮನ್. ನಾನು ನಿಮ್ಮನ್ನು ಬೇರೊಂದು ಜಗತ್ತಿನಲ್ಲಿ ಭೇಟಿಯಾಗುತ್ತೇನೆ ಎಂದು ಅವರು ಪೋಸ್ಟ್ ಮಾಡಿದ್ದಾರೆ. ತಮ್ಮ ಅಜ್ಜ, ಅಜ್ಜಿಯ ಜೊತೆಗೆ ಇರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ನೋಡಿದ ನೆಟ್ಟಿಗರು ದುಖಃದಲ್ಲಿರುವ ನಟಿಗೆ ಧೈರ್ಯ ಹೇಳಿದ್ದಾರೆ. ಸದ್ಯ ಈ ಪೋಸ್ಟ್‌ ಸಖತ್‌ ವೈರಲ್‌ ಆಗುತ್ತಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]