Tag: Mysore Dasara

  • ಇಂದು ಸಿಂಹಾಸನ ಜೋಡಣೆ ಕಾರ್ಯ – ಮೈಸೂರು ಅರಮನೆ ಅರ್ಧ ದಿನ ಪ್ರವಾಸಿಗರಿಗೆ ನಿರ್ಬಂಧ

    ಇಂದು ಸಿಂಹಾಸನ ಜೋಡಣೆ ಕಾರ್ಯ – ಮೈಸೂರು ಅರಮನೆ ಅರ್ಧ ದಿನ ಪ್ರವಾಸಿಗರಿಗೆ ನಿರ್ಬಂಧ

    ಮೈಸೂರು: ದಸರಾ (Dasara) ಹಿನ್ನೆಲೆಯಲ್ಲಿ ಅರಮನೆಯಲ್ಲಿ (Mysuru Palace) ಇಂದು ಸಿಂಹಾಸನ ಜೋಡಣೆ ಕಾರ್ಯ ನಡೆಯಲಿದೆ. ಈ ಹಿನ್ನೆಲೆ ಮಂಗಳವಾರ ಮಧ್ಯಾಹ್ನದ ವರೆಗೆ ಅರಮನೆ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

    ರಾಜವಂಶ್ಥರು ನಡೆಸುವ ಧಾರ್ಮಿಕ ಕಾರ್ಯ ಖಾಸಗಿ ದರ್ಬಾರ್‌ಗಾಗಿ ಇಂದು ಸಿಂಹಾಸನ ಜೋಡಣೆ ಮಾಡಲಾಗುವುದು. ಸ್ಟ್ರಾಂಗ್ ರೂಂನಿಂದ ಬಿಗಿ ಭದ್ರತೆಯೊಂದಿಗೆ ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಸಮ್ಮುಖದಲ್ಲಿ ಸಿಂಹಾಸನ ಜೋಡಣೆ ನಡೆಯಲಿದೆ. ಇದನ್ನೂ ಓದಿ: ದಸರಾ ಉದ್ಘಾಟಕಿ ಬಾನು ಮುಷ್ತಾಕ್‌ಗೆ ಹೈಕೋರ್ಟ್ ಸಿಗ್ನಲ್ – ವಾದ, ಪ್ರತಿವಾದ ಹೇಗಿತ್ತು?

    ಬೆ. 8:30 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಅರಮನೆಗೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ. ಚಿನ್ನದ ಸಿಂಹಾಸನದ ಬಿಡಿಭಾಗ ಹಾಗೂ ಬೆಳ್ಳಿಯ ಭದ್ರಾಸನದ ಬಿಡಿ ಭಾಗಗಳನ್ನ ದರ್ಬಾರ್ ಹಾಲ್‌ಗೆ ತಂದು ಜೋಡಣೆ ಮಾಡಲಾಗುವುದು.

    ಬೆಳ್ಳಿ ಭದ್ರಾಸನವನ್ನ ಕನ್ನಡಿ ತೊಟ್ಟಿಯಲ್ಲಿ ಜೋಡಣೆ ಮಾಡಲಾಗುವುದು. ಸಿಂಹಾಸನ ಜೋಡಣೆ ಕಾರ್ಯ ನಡೆಯುವ ವೇಳೆ ದರ್ಬಾಲ್ ಹಾಲ್ ಸೇರಿದಂತೆ ವಿವಿಧೆಡೆ ಅಳವಡಿಸಿರುವ ಸಿಸಿ ಕ್ಯಾಮೆರಾಗೆ ಪರದೆ ಹಾಕಲಾಗುವುದು. ಇದನ್ನೂ ಓದಿ: ದಸರಾ ನಿಮಿತ್ತ ಸಿಡಿಮದ್ದು ತಾಲೀಮು – ವಿಚಲಿತಗೊಂಡ ಗಜಪಡೆಯ ಶ್ರೀಕಂಠ, ಹೇಮಾವತಿ

    ಸಿಂಹಾಸನ ಜೋಡಣೆ ಕಾರ್ಯದ ನಿಮಿತ್ತ ಬೆಳಗ್ಗೆಯೇ ದರ್ಬಾರ್ ಹಾಲ್‌ನಲ್ಲಿ ಗಣಪತಿ, ಚಾಮುಂಡಿ ಪೂಜೆ ಸೇರಿಂದತೆ ಕೆಲ ಹೋಮ ಹವನ ನಡೆಯಲಿದೆ. ಪೂಜೆ ಮುಗಿದ ಬಳಿಕ ಸಿಂಹಾಸನ ಬಿಡಿಭಾಗವನ್ನ ದರ್ಬಾರ್ ಹಾಲ್‌ಗೆ ತಂದು ಸಿಂಹಾಸನ ಜೋಡಣೆ ಮಾಡಲಾಗುವುದು.

  • ಈ ಬಾರಿ ಮೈಸೂರು ದಸರಾಗೆ ಖರ್ಚಾಗಿದ್ದು 5.42 ಕೋಟಿ ರೂ.: ಎಸ್‌.ಟಿ.ಸೋಮಶೇಖರ್

    ಈ ಬಾರಿ ಮೈಸೂರು ದಸರಾಗೆ ಖರ್ಚಾಗಿದ್ದು 5.42 ಕೋಟಿ ರೂ.: ಎಸ್‌.ಟಿ.ಸೋಮಶೇಖರ್

    ಮೈಸೂರು: ಈ ಬಾರಿಯ ದಸರಾ ಮಹೋತ್ಸವಕ್ಕೆ ಸರ್ಕಾರ 6 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಇದರಲ್ಲಿ 5,42,07,679 ರೂ. ಖರ್ಚಾಗಿದ್ದು, 57 ಲಕ್ಷ ರೂ.ಗೂ ಹೆಚ್ಚು ಹಣ ಉಳಿತಾಯವಾಗಿದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಖರ್ಚುವೆಚ್ಚಗಳ ಮಾಹಿತಿ ಬಿಡುಗಡೆ ಮಾಡಿದರು.

    ನಾಡಹಬ್ಭ ಮೈಸೂರು ದಸರಾ ಮಹೋತ್ಸವದ ಇತಿಹಾಸದಲ್ಲಿ ಎರಡನೇ ಬಾರಿಗೆ ರಾಜ್ಯ ಸರ್ಕಾರದಿಂದ ಬಿಡುಗಡೆಯಾದ ಅನುದಾನದ ಖರ್ಚು ವೆಚ್ಚ ಸಂಪೂರ್ಣ ಮಾಹಿತಿಯನ್ನು ಅರಮನೆ ಮಂಡಳಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಮೂಲಕ ಬಿಡುಗಡೆ ಮಾಡಿದರು.‍‌‌ ಇದನ್ನೂ ಓದಿ: ದೇವರು ಎಂದು ನಾವು ತಿಳಿದುಕೊಂಡಿದ್ದೆವು, ನಮ್ಮ ನೋವನ್ನು ಯಾರ ಬಳಿ ಹೇಳೋದು: ಸೆಕ್ಯೂರಿಟಿ ಕಣ್ಣೀರು

    ಮೈಸೂರು ದಸರಾಗೆ 4,22,07,679 ರೂ., ಖರ್ಚಾಗಿದೆ. ಶ್ರೀರಂಗಪಟ್ಟಣ, ಚಾಮರಾಜನಗರ ದಸರಾ ಆಚರಣೆಗೆ ತಲಾ 50 ಲಕ್ಷ ರೂ., ಅರಕಲಗೂಡು ದಸರಾಗೆ 20 ಲಕ್ಷ ರೂ. ಬಿಡುಗಡೆ ಮಾಡಿದ್ದು ಒಟ್ಟು 5,42,07,679 ರೂ. ಹಣ ಖರ್ಚಾಗಿದೆ ಎಂದು ವಿವರಿಸಿದರು.

    ಮೈಸೂರು ದಸರಾ ಆಮಂತ್ರಣ ಪತ್ರಿಕೆ ಮುದ್ರಣ ಇತ್ಯಾದಿಗಳಿಗೆ 5,91,960 ರೂ. ಖರ್ಚಾಗಿದ್ದರೆ, ಗಣ್ಯರು ಮತ್ತು ಕಲಾವಿದರ ಸಾರಿಗೆ ವ್ಯವಸ್ಥೆಗೆ 29,16,416 ರೂ. ಖರ್ಚಾಗಿದೆ. ಜಂಬೂಸವಾರಿ ಮೆರವಣಿಗೆಗೆ 37,50,772 ರೂ., ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಕಲಾವಿದರ ಸಂಭಾವನೆಗೆ 1,03,64,272 ರೂ. ಖರ್ಚಾಗಿದೆ. ಸ್ತಬ್ಧ ಚಿತ್ರ ನಿರ್ಮಾಣಕ್ಕೆ 18,85,102 ರೂ., ಆನೆಗಳ‌ ನಿರ್ವಹಣೆಗೆ 50 ಲಕ್ಷ ರೂ., ದಸರಾ ಕಾರ್ಯಕ್ರಮಗಳ ವೇದಿಕೆ ಮತ್ತು ವಿದ್ಯುತ್ ಕಾಮಗಾರಿಗಳ ವ್ಯವಸ್ಥೆಗಾಗಿ 93,80,000 ರೂ., ವೆಬ್ ಕ್ಯಾಸ್ಟಿಂಗ್ ಗೆ 11,09,200 ರೂ. ವೆಚ್ಚವಾಗಿದೆ. ಅರಮನೆಗೆ ಗೌರವ ಸಂಭಾವನೆಯಾಗಿ 40 ಲಕ್ಷ ರೂ., ದೂರದರ್ಶನದಲ್ಲಿ ಜಂಬೂಸವಾರಿ ನೇರಪ್ರಸಾರ ಮಾಡಿದ್ದಕ್ಕೆ 6,22,513 ರೂ., ದಸರಾ ಆನೆಗಳು ಹಾಗೂ ಕಾವಾಡಿಗರ ವಿಮೆಗೆ 24 ಸಾವಿರ ರೂ. ಭರಿಸಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಚಾಮರಾಜನಗರ ಜಿಲ್ಲಾ ಉಸ್ತುವಾರಿ ಕೊಟ್ರೆ ಮಾಡೋಣ: ವಿ ಸೋಮಣ್ಣ

    ದಸರಾ ಸಂಬಂಧ ಉಪ ಸಮಿತಿ ಸಭೆಗೆ ಲೇಖನ ಸಾಮಾಗ್ರಿಗೆ 3245 ರೂ., ಉನ್ನತ ಮಟ್ಟದ ಸಮಿತಿ ಸಭೆ ಶಿಷ್ಟಾಚಾರಕ್ಕೆ ಹೋಟೆಲ್ ಮತ್ತು ಇತರೆ ವೆಚ್ಚಗಳಿಗೆ 47250 ರೂ., ದಸರಾ ಸಂಬಂಧ ನಡೆದ ವಿವಿಧ ಸಭೆಗಳಿಗೆ ಕಾಫಿ, ಟೀ, ಸ್ಮ್ಯಾಕ್ಸ್ ಗೆ 40,878 ರೂ., ಬಿಎಸ್‌ಎನ್‌ಎಲ್‌ಗೆ 78,668 ರೂ., ಉನ್ನತ ಮಟ್ಟದ ಸಭೆಗೆ ಮತ್ತು ವಿಶೇಷಾಧಿಕಾರಿಗಳ ಕಚೇರಿಗೆ ಲೇಖನ ಸಾಮಾಗ್ರಿ ಖರೀದಿಗೆ 90,919 ರೂ., ಜಂಬೂ ಸವಾರಿ ನೇರ ವೀಕ್ಷಣೆ ವಿವರಣೆ ಬಿತ್ತರಿಸಲು ಆಕಾಶವಾಣಿಗೆ 67 ಸಾವಿರ ರೂ. ಪಾವತಿಸಲಾಗಿದೆ. ದಸರಾ ಕಾರ್ಯಕ್ರಮಗಳ ಫೋಟೋ, ವೀಡಿಯೋಗ್ರಾಫಿಗೆ 95 ಸಾವಿರ ರೂ., ಸ್ವಚ್ಛತೆ ನಿರ್ವಹಣೆಗೆ 10, 76,072 ರೂ., ವಾರ್ತಾ ಇಲಾಖೆಗೆ 64,412 ರೂ., ದಸರಾ ರಂಗೋತ್ಸವ ಕಾರ್ಯಕ್ರಮಕ್ಕೆ ಅಂದಾಜು 10 ಲಕ್ಷ ರೂ. ವೆಚ್ಚವಾಗಿದೆ ಎಂದು ಸಚಿವರು ಮಾಹಿತಿ ಬಿಡುಗಡೆ ಮಾಡಿದರು.

  • 7ನೇ ದಿನ ಕಾಲರಾತ್ರಿಯನ್ನು ಪೂಜೆ ಮಾಡೋದು ಯಾಕೆ?

    7ನೇ ದಿನ ಕಾಲರಾತ್ರಿಯನ್ನು ಪೂಜೆ ಮಾಡೋದು ಯಾಕೆ?

    ಗನ್ಮಾತೆ ದುರ್ಗೆಯ ಏಳನೇ ಶಕ್ತಿಯನ್ನು ಕಾಲರಾತ್ರಿ ಎಂಬ ಹೆಸರಿನಿಂದ ಕರೆಯಲಾಗುತ್ತದೆ. ಇವಳ ಶರೀರದ ಬಣ್ಣವು ದಟ್ಟವಾದ ಅಂಧಕಾರದಂತೆ ಪೂರ್ಣವಾಗಿ ಕಪ್ಪಾಗಿದೆ. ತಲೆಯ ಕೂದಲೂ ಬಿಟ್ಟುಕೊಂಡು ಹರಡಿಕೊಂಡಿದೆ. ಕತ್ತಿನಲ್ಲಿ ಮಿಂಚಿನಂತೆ ಹೊಳೆಯುತ್ತಿರುವ ಮಾಲೆ ಇದ್ದು, ಮೂರುಕಣ್ಣುಗಳಿವೆ. ಈ ಮೂರು ಕಣ್ಣುಗಳು ಬ್ರಹ್ಮಾಂಡದಂತೆ ಗೋಲವಾಗಿದೆ. ಇವುಗಳ ಕಿರಣಗಳು ವಿದ್ಯುತ್ತಿನಂತೆ ಪಸರಿಸಿಕೊಂಡಿವೆ. ಇವಳ ವಾಹನ ಕತ್ತೆಯಾಗಿದ್ದು ನಾಲ್ಕು ಭುಜಗಳನ್ನು ಹೊಂದಿದ್ದಾಳೆ.

    ಮೇಲಕ್ಕೆ ಎತ್ತಿರುವ ಬಲಕೈಯ ವರಮುದ್ರೆಯಿಂದ ಎಲ್ಲರಿಗೂ ವರದಾನ ನೀಡಿದರೆ ಕೆಳಗಿನ ಬಲಕೈಯಲ್ಲಿ ಅಭಯ ಮುದ್ರೆ ಇದೆ. ಎಡಗಡೆಯ ಮೇಲಿನ ಕೈಯಲ್ಲಿ ಕಬ್ಬಿಣದ ಮುಳ್ಳು ಹಾಗೂ ಕೆಳಗಿನ ಕೈಯಲ್ಲಿ ಖಡ್ಗವಿದೆ. ಕಾಲರಾತ್ರಿ ದುರ್ಗೆಯ ಸ್ವರೂಪವು ನೋಡಲು ಅತ್ಯಂತ ಭಯಂಕರವಾಗಿ ಕಂಡರೂ ಇವಳು ಶುಭಫಲವನ್ನೇ ನೀಡುವ ಕಾರಣ ಈಕೆಯನ್ನು ಶುಭಂಶರೀ ಎಂದು ಕರೆಯುತ್ತಾರೆ.

    ನವರಾತ್ರಿಯ ಏಳನೇ ದಿನ ಕಾಲರಾತ್ರಿಯ ಉಪಾಸನೆಯ ವಿಧಾನವಿದೆ. ಈ ದಿನ ಸಾಧಕನ ಮನಸ್ಸು ‘ಸಹಸ್ರಾರ’ ಚಕ್ರದಲ್ಲಿ ನೆಲೆಗೊಳ್ಳುತ್ತದೆ. ಅವನಿಗಾಗಿ ಬ್ರಹ್ಮಾಂಡದ ಎಲ್ಲ ಸಿದ್ಧಿಗಳ ಬಾಗಿಲು ತೆರೆದುಕೊಳ್ಳುತ್ತದೆ. ಈ ಚಕ್ರದಲ್ಲಿ ಸ್ಥಿತವಾದ ಸಾಧಕನ ಮನಸ್ಸು ಪೂರ್ಣವಾಗಿ ತಾಯಿ ಕಾಲರಾತ್ರಿಯ ಸ್ವರೂಪದಲ್ಲೇ ಸ್ಥಿರವಾಗುತ್ತದೆ. ಅವಳ ಸಾಕ್ಷಾತ್ಕಾರದಿಂದ ಸಿಗುವ ಪುಣ್ಯಕ್ಕೆ ಅವನು ಭಾಗಿಯಾಗುತ್ತಾನೆ. ಅವನ ಸಮಸ್ತ ಪಾಪ-ವಿಘ್ನಗಳ ನಾಶವಾಗುತ್ತದೆ. ಅವನಿಗೆ ಅಕ್ಷಯ ಪುಣ್ಯ ಲೋಕಗಳ ಪ್ರಾಪ್ತಿಯಾಗುತ್ತದೆ ಎನ್ನುವ ನಂಬಿಕೆ. ಇದನ್ನೂ ಓದಿ: ಜನ್ಮ-ಜನ್ಮಾಂತರದ ಪಾಪಗಳನ್ನು ನಾಶಮಾಡುವ 6ನೇ ಅವತಾರ ಕಾತ್ಯಾಯನೀ

    ಜಗನ್ಮಾತೆಯ ಕಾಲರಾತ್ರಿಯು ದುಷ್ಟರ ವಿನಾಶ ಮಾಡುವವಳಾಗಿದ್ದಾಳೆ. ದಾನವ, ದೈತ್ಯ, ರಾಕ್ಷಸ, ಭೂತ-ಪ್ರೇತ ಮುಂತಾದವು ಇವಳ ಸ್ಮರಣೆಯಿಂದಲೇ ಭಯಭೀತರಾಗಿ ಓಡಿ ಹೋಗುತ್ತವೆ. ಇವಳು ಗ್ರಹಬಾಧೆಗಳನ್ನೂ ಕೂಡ ದೂರ ಮಾಡುತ್ತಾಳೆ. ಇವಳ ಉಪಾಸಕರಿಗೆ ಅಗ್ನಿಯ, ಜಲ, ಶತು, ಮತ್ತು ರಾತ್ರಿಯ ಭಯ ಮುಂತಾದವುಗಳು ಎಂದೂ ಆಗುವುದಿಲ್ಲ. ಇವಳ ಕೃಪೆಯಿಂದ ಅವನು ಸರ್ವಥಾ ಭಯ ಮುಕ್ತನಾಗಿ ಹೋಗುತ್ತಾನೆ.

    ಕಾಲರಾತ್ರಿ ದೇವಿಯ ಸ್ವರೂಪದ ವಿಗ್ರಹವನ್ನು ತನ್ನ ಹೃದಯದಲ್ಲಿ ನೆಲೆಗೊಳಿಸಿ ಮನುಷ್ಯನು ಏಕನಿಷ್ಠ ಭಾವದಿಂದ ಅವಳ ಉಪಾಸನೆ ಮಾಡಬೇಕು. ಯಮ, ನಿಯಮ, ಸಂಮಯವನ್ನು ಅವನು ಪೂರ್ಣವಾಗಿ ಪಾಲಿಸಬೇಕಾಗುತ್ತದೆ. ಇದನ್ನೂ ಓದಿ: ನವರಾತ್ರಿ ಸಂಭ್ರಮ – 9 ದಿನ ಯಾವ ಬಣ್ಣದ ಉಡುಪು ಧರಿಸಿ ಪೂಜಿಸಿದ್ರೆ ಉತ್ತಮ? ಇಲ್ಲಿದೆ ವಿವರ

     

  • ನವರಾತ್ರಿ ವಿಶೇಷ – ಸ್ಕಂದಮಾತೆಯನ್ನ ಪೂಜಿಸುವುದು ಏಕೆ?

    ನವರಾತ್ರಿ ವಿಶೇಷ – ಸ್ಕಂದಮಾತೆಯನ್ನ ಪೂಜಿಸುವುದು ಏಕೆ?

    ಗನ್ಮಾತೆ ದುರ್ಗೆಯ ಐದನೇ ಸ್ವರೂಪವನ್ನು ‘ಸ್ಕಂದಮಾತಾ’ ಎಂಬ ಹೆಸರಿನಿಂದ ಕರೆಯಲಾಗುತ್ತದೆ. ಈ ಭಗವಾನ್ ಸ್ಕಂದನು ‘ಕುಮಾರ ಕಾರ್ತಿಕೇಯ’ ಎಂಬ ಹೆಸರಿನಿಂದಲೂ ತಿಳಿಯಲ್ಪಡುತ್ತಾನೆ. ಇವನು ಪ್ರಸಿದ್ಧ ತಾರಕನ ಜೊತೆಗಿನ ಸಂಗ್ರಾಮದಲ್ಲಿ ದೇವತೆಗಳ ಸೇನಾಪತಿಯಾಗಿದ್ದನು. ಪುರಾಣಗಳಲ್ಲಿ ಇವನನ್ನು ಕುಮಾರ ಹಾಗೂ ಶಕ್ತಿಧರ ಎಂದು ಹೇಳಿ ಇವನ ಮಹಿಮೆಯನ್ನು ವರ್ಣಿಸಲಾಗಿದೆ. ನವಿಲನ್ನು ವಾಹನವಾಗಿ ಬಳಸುವ ಕಾರಣ ಈತನನ್ನು ‘ಮಯೂರವಾಹನ’ ಎಂದೂ ಕರೆಯುತ್ತಾರೆ.

    ಸ್ಕಂದನ ತಾಯಿಯಾದ್ದರಿಂದ ದುರ್ಗೆಯ ಈ ಐದನೇ ಸ್ವರೂಪವನ್ನು ‘ಸ್ಕಂದಮಾತಾ’ ಎಂದು ಕರೆಯಲಾಗುತ್ತದೆ. ನವರಾತ್ರಿಯ ಐದನೇ ದಿನ ಇವಳ ಉಪಾಸನೆ ಮಾಡಲಾಗುತ್ತದೆ. ಈ ದಿನ ಸಾಧಕನ ಮನಸ್ಸು ವಿಶದ್ಧ ಚಕ್ರದಲ್ಲಿ ನೆಲೆ ನಿಲ್ಲುತ್ತದೆ. ಇವಳ ವಿಗ್ರಹದಲ್ಲಿ ಭಗವಾನ್ ಸ್ಕಂದನು ಬಾಲರೂಪದಲ್ಲಿ ಇವಳ ತೊಡೆಯಲ್ಲಿ ಕುಳಿತ್ತಿದ್ದಾನೆ. ಇದನ್ನೂ ಓದಿ: ನವರಾತ್ರಿ ವಿಶೇಷ- ನಾಲ್ಕನೇ ದಿನ ಕೂಷ್ಮಾಂಡ ದೇವಿ ಆರಾಧನೆ ಮಾಡೋದು ಯಾಕೆ ಗೊತ್ತಾ?

    ಸ್ಕಂದಮಾತೆಯಾದ ಇವಳಿಗೆ ನಾಲ್ಕು ಭುಜಗಳಿರುತ್ತವೆ. ಇವಳು ಬಲಗಡೆಯ ಮೇಲಿನ ಕೈಯಿಂದ ಸ್ಕಂದನ್ನು ತೊಡೆಯಲ್ಲಿ ಹಿಡಿದುಕೊಂಡಿದ್ದಾಳೆ. ಮೇಲಕ್ಕಿತ್ತಿರುವ ಕೆಳಗಿನ ಬಲ ಕೈಯಲ್ಲಿ ಕಮಲ ಪುಷ್ಪವನ್ನು ಹಿಡಿದಿದ್ದಾಳೆ. ಎಡಗಡೆಯ ಮೇಲಿನ ಕೈಯಲ್ಲಿ ವರಮುದ್ರೆ ಮತ್ತು ಮೇಲಕ್ಕೆತ್ತಿರುವ ಎಡಗೈಯಲ್ಲಿಯೂ ಕಮಲವಿದೆ. ಇವಳ ಶರೀರದ ಬಣ್ಣವೂ ಪೂರ್ಣವಾಗಿ ಬೆಳ್ಳಗಿದ್ದು, ಕಮಲದ ಆಸನದಲ್ಲಿ ವಿರಾಜಮಾನಳಾಗಿದ್ದಾಳೆ. ಇದೇ ಕಾರಣದಿಂದ ಇವಳನ್ನು ಪದ್ಮಸನಾದೇವೀ ಎಂದೂ ಹೇಳುತ್ತಾರೆ. ಸಿಂಹವೂ ಇವಳ ವಾಹನವಾಗಿದೆ. ಇದನ್ನೂ ಓದಿ: ನವರಾತ್ರಿ ಸಂಭ್ರಮ – 9 ದಿನ ಯಾವ ಬಣ್ಣದ ಉಡುಪು ಧರಿಸಿ ಪೂಜಿಸಿದ್ರೆ ಉತ್ತಮ? ಇಲ್ಲಿದೆ ವಿವರ

    ನವರಾತ್ರಿಯ ಪೂಜೆಯಲ್ಲಿ ಐದನೇ ದಿನದ ಮಹತ್ವ ಶಾಸ್ತ್ರಗಳಲ್ಲಿ ತುಂಬಾ ಹೇಳಲಾಗಿದೆ. ವಿಶುದ್ಧ ಚಕ್ರದಲ್ಲಿ ನೆಲೆಸಿದ ಮನಸ್ಸುಳ್ಳ ಸಾಧಕನ ಸಮಸ್ತ ಬಾಹ್ಯ ಕ್ರಿಯೆಗಳು ಹಾಗೂ ಚಿತ್ತವೃತ್ತಿಗಳು ಲೋಪವಾಗುತ್ತವೆ. ಅವನು ವಿಶುದ್ಧ ಚೈತನ್ಯ ಸ್ವರೂಪದತ್ತು ಮುಂದುವರಿಯುತ್ತವೆ. ಅವನ ಮನಸ್ಸು ಎಲ್ಲ ಲೌಕಿಕ, ಸಾಂಸಾರಿಕ ಬಂಧನಗಳಿಂದ ಮುಕ್ತವಾಗಿ ಪದ್ಮಾಸನಾ ಸ್ಕಂದಮಾತೆಯ ಸ್ವರೂಪದಲ್ಲಿ ಪೂರ್ಣವಾಗಿ ತಲ್ಲೀನವಾಗುತ್ತದೆ. ಈ ಸಮಯದಲ್ಲಿ ಸಾಧಕನು ಹೆಚ್ಚಿನ ಎಚ್ಚರಿಕೆಯಿಂದ ಉಪಾಸನೆಯಲ್ಲಿ ಮುಂದರಿಯಬೇಕು. ಅವನು ತನ್ನ ಎಲ್ಲ ಧ್ಯಾನ- ವೃತ್ತಿಗಳನ್ನು ಏಕಾಗ್ರವಿರಿಸಿಕೊಂಡು ಸಾಧನೆಯ ಪಥದಲ್ಲಿ ಮುಂದೆ ಹೋಗಬೇಕು. ಇದನ್ನೂ ಓದಿ: ನವರಾತ್ರಿ ವಿಶೇಷ – ಮೂರನೇ ದಿನ ಚಂದ್ರಘಂಟಾ ದೇವಿಯ ಪೂಜೆ ಮಾಡೋದು ಯಾಕೆ?

    ಜಗಜ್ಜನನಿ ಸ್ಕಂದಮಾತೆಯ ಉಪಾಸನೆಯಿಂದ ಭಕ್ತನ ಎಲ್ಲ ಇಚ್ಛೆಗಳು ಪೂರ್ಣವಾಗುತ್ತವೆ. ಈ ಮತ್ರ್ಯಲೋಕದಲ್ಲೇ ಅವನಿಗೆ ಪರಮ ಶಾಂತಿ ಮತ್ತು ಸುಖದ ಅನುಭವವಾಗ ತೊಡಗುತ್ತದೆ. ಅವನಿಗಾಗಿ ಮೋಕ್ಷದ ಬಾಗಿಲು ತಾನಾಗಿ ಸುಲಭವಾಗುತ್ತದೆ ಎನ್ನುವ ನಂಬಿಕೆಯಿದೆ. ಸ್ಕಂದಮಾತೆಯ ಉಪಾಸನೆಯಿಂದ ಬಾಲರೂಪೀ ಭಗವಾನ್ ಸ್ಕಂದನ ಉಪಾಸನೆಯೂ ಕೂಡ ತಾನಾಗಿಯೇ ಆಗುತ್ತದೆ.

     

  • ಮಡಿಕೇರಿ ದಸರಾಕ್ಕೆ ಕ್ಷಣಗಣನೆ – ದಶಮಂಟಪಗಳ ಪ್ರದರ್ಶನಕ್ಕಾಗಿ ಕಾದು ಕುಳಿತ ಜನರು

    ಮಡಿಕೇರಿ ದಸರಾಕ್ಕೆ ಕ್ಷಣಗಣನೆ – ದಶಮಂಟಪಗಳ ಪ್ರದರ್ಶನಕ್ಕಾಗಿ ಕಾದು ಕುಳಿತ ಜನರು

    ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾದ ದಶಮಂಟಪ ಮೆರವಣಿಗೆಗೆ ಕ್ಷಣಗಣನೆ ಆರಂಭಗೊಂಡಿದೆ. ಈ ಬಾರಿ ಅದ್ಧೂರಿ ದಸರಾ ಆಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ನಗರದ 10 ಪ್ರಮುಖ ದೇವಾಲಯಗಳಿಂದ ಸಿದ್ಧಗೊಳ್ಳುತ್ತಿರುವ ದಶಮಂಟಪಗಳ ಪ್ರದರ್ಶನಕ್ಕಾಗಿ ಸಾವಿರಾರು ಜನರು ಕಾದು ಕುಳಿತಿದ್ದಾರೆ.

    ಈ ಬಾರಿ ಪಂಚಮುಖಿ ಆಂಜನೇಯನ ದರ್ಶನ, ನರಸಿಂಹನಿಂದ ಹಿರಣ್ಯ ಕಶಿಪು ವಧೆ, ಮಹಿಷಾಸುರ ಮರ್ಧಿನಿ, ಸುಬ್ರಹ್ಮಣ್ಯನಿಂದ ತಾರಕಾಸುರ ವಧೆ, ಅರ್ಧನಾರೀಶ್ವರ ದರ್ಶನ, ತ್ರಿಪುರಾಸುರ ವಧೆ ಹೀಗೆ ನಾನಾ ಕಥಾ ಭಾಗಗಳನ್ನು ಬೃಹತ್ ಧ್ವನಿ ಬೆಳಕಿನ ಸಂಯೋಜನೆಗಳೊಂದಿಗೆ ಕೃತಕವಾಗಿ ತಯಾರಿಸಿದ, ಟ್ಯಾಬ್ಲೋಗಳ ಪ್ರದರ್ಶನ ಎಲ್ಲರನ್ನು ಬೆರಗುಗೊಳಿಸಲಿದೆ.

    ರಾತ್ರಿ 11 ಗಂಟೆ ನಂತರ ಆರಂಭಗೊಳ್ಳುವ ದಶಮಂಟಪಗಳ ಪ್ರದರ್ಶನ ಮುಂಜಾನೆಯವರೆಗೂ ಸಂಚರಿಸಿ ಪ್ರದರ್ಶನ ನೀಡಲಿವೆ. ಲಕ್ಷಾಂತರ ರೂಪಾಯಿಗಳನ್ನು ಖರ್ಚುಮಾಡಿ ದಶಮಂಟಪಗಳನ್ನು ಸಿದ್ಧಗೊಳಿಸುವ ಕಾರ್ಯ ಈಗಾಗಲೇ ಮುಗಿದಿದ್ದು, ಅಂತಿಮ ತಯಾರಿ ನಡೆಯುತ್ತಿದೆ. ಹಗಲಿನಲ್ಲಿ ಮೈಸೂರು ದಸರಾ ರಾತ್ರಿ ಮಡಿಕೇರಿ ದಸರಾ ಎಂದೇ ಪ್ರಸಿದ್ಧಗೊಂಡಿರುವ ಮಂಜಿನ ನಗರಿ ಮಡಿಕೇರಿಯಲ್ಲಿ ರಾತ್ರಿ ವರ್ಣರಂಜಿತ ದಶಮಂಟಪ ಪ್ರದರ್ಶನಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು ಜನರು ರಾತ್ರಿಯ ಅದ್ಭುತ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.

    ಪೌರಾಣಿಕ ಹಿನ್ನೆಲೆಯ ಕತೆಯನ್ನು ಪ್ರದರ್ಶನಮಾಡಲು ನಾಲ್ಕು ಶಕ್ತಿದೇವತೆಗಳ ದೇವಾಲಯ ಸಮಿತಿಗಳು ಸೇರಿದಂತೆ 10 ದೇವಾಲಯಗಳೂ ಕೂಡ ಒಂದೊಂದು ಕಥೆಯನ್ನು ಆಯ್ಕೆಮಾಡಿಕೊಂಡು ಪ್ರದರ್ಶನ ನೀಡಲು ಸಿದ್ಧವಾಗಿದ್ದು, ರಾಜ್ಯದ ವಿವಿಧೆಡೆಯಿಂದ ಆಗಮಿಸುವ ಲಕ್ಷಾಂತರ ಜನರು ದಶಮಂಟಪ ಪ್ರದರ್ಶನ ವೀಕ್ಷಣೆಗೆ ಕಾಯುತ್ತಿದ್ದಾರೆ.

  • ಹಬ್ಬಕ್ಕಾಗಿ ಗಸಗಸೆ, ಸಬ್ಬಕ್ಕಿ ಪಾಯಸ ಮಾಡಿ

    ಹಬ್ಬಕ್ಕಾಗಿ ಗಸಗಸೆ, ಸಬ್ಬಕ್ಕಿ ಪಾಯಸ ಮಾಡಿ

    ಹಬ್ಬಗಳು ಬಂದರೆ ಸಿಹಿ ಮಾಡಬೇಕು. ಇಂದಿನ ದಿನ ಸಿಹಿ ತಿನಿಸುಗಳನ್ನು ಎಷ್ಟೆ ಮಾಡಿದ್ರೂ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಗಸಗಸೆ ಪಾಯಸ ಅಂದರೆ ತುಂಬಾ ಇಷ್ಟ.. ಆದ್ದರಿಂದ ನಿಮಗಾಗಿ ಸಿಂಪಲ್ ಆಗಿ ಗಸಗಸೆ ಪಾಯಸ ಮಾಡುವ ವಿಧಾನ ಇಲ್ಲಿದೆ..

    ಬೇಕಾಗುವ ಸಾಮಾಗ್ರಿಗಳು
    1. ಕೊಬ್ಬರಿ ತುರಿ – 1 ಕಪ್
    2. ಗಸಗಸೆ- 50 ಗ್ರಾಂ
    3. ಬೆಲ್ಲ – 3 ಅಚ್ಚು
    4. ಏಲಕ್ಕಿ – 2-3
    5. ಗೋಡಂಬಿ – ದ್ರಾಕ್ಷಿ – 50 ಗ್ರಾಂ
    6. ಶ್ಯಾವಿಗೆ – 100 ಗ್ರಾಂ
    7. ಕಡ್ಲೆಬೇಳೆ – ಸ್ವಲ್ಪ
    8. ಹೆಸರು ಬೇಳೆ – 50 ಗ್ರಾಂ.
    9. ತುಪ್ಪ – 2-3 ಚಮಚ

    ಮಾಡುವ ವಿಧಾನ
    * ಮೊದಲಿಗೆ ಬೆಲ್ಲವನ್ನು ನೀರಿನಲ್ಲಿ ಕರಗಿಸಿ ಸೋಸಿಕೊಳ್ಳಿ.
    * ಶ್ಯಾವಿಗೆ, ಗಸಗಸೆಯನ್ನು ಬೇರೆ ಬೇರೆಯಾಗಿ ಹುರಿದಿಟ್ಟುಕೊಳ್ಳಿ.
    * ಇತ್ತ ತುಪ್ಪದಲ್ಲಿ ಗೋಡಂಬಿ ಹಾಗೂ ದ್ರಾಕ್ಷಿಯನ್ನು ಹುರಿದಿಟ್ಟುಕೊಳ್ಳಿ
    * ಒಂದು ಮಿಕ್ಸಿ ಜಾರಿಗೆ ಕೊಬ್ಬರಿ ತುರಿ, ಹುರಿದ ಗಸಗಸೆ, ಏಲಕ್ಕಿಯನ್ನು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ.
    * ದೊಡ್ಡದಾದ ಪಾತ್ರೆಯನ್ನು ಒಲೆಯ ಮೇಲಿಟ್ಟು ಅದಕ್ಕೆ ಹೆಸರು ಬೇಳೆ, ಕಡ್ಲೆಬೇಳೆ ನೀರು ಹಾಕಿ ಕುದಿಸಿ.
    * ಸ್ವಲ್ಪ ಬೆಂದ ಬಳಿಕ ಅದಕ್ಕೆ ಸೋಸಿದ ಬೆಲ್ಲದ ನೀರು, ರುಬ್ಬಿದ ಮಿಶ್ರಣವನ್ನು ಹಾಕಿ ಕುದಿಸಿ.
    * ಒಂದು ಕುದಿ ಬಂದ ಮೇಲೆ ಅದಕ್ಕೆ ಹುರಿದ ಶ್ಯಾವಿಗೆ, ಗೋಡಂಬಿ, ದ್ರಾಕ್ಷಿ ಹಾಕಿ. 2-3 ನಿಮಿಷ ಕುದಿಸಿ ತಟ್ಟೆ ಮುಚ್ಚಿ.
    * ಈಗ ತುಪ್ಪ ಹಾಕಿಕೊಂಡು ಪಾಯಸವನ್ನು ಸವಿಯಿರಿ.

    ಸಬ್ಬಕ್ಕಿ ಪಾಯಸಕ್ಕೆ ಬೇಕಾಗುವ ಸಾಮಾಗ್ರಿಗಳು
    1. ಸಬ್ಬಕ್ಕಿ – 1 ಕಪ್
    2. ಹಾಲು – ಅರ್ಧ ಲೀಟರ್
    3. ಸಕ್ಕರೆ – 4 ಚಮಚ
    4. ಏಲಕ್ಕಿ ಪುಡಿ – 1 ಚಮಚ
    5. ಗೋಡಂಬಿ – 10
    6. ದ್ರಾಕ್ಷಿ – 10
    7. ತುಪ್ಪ – ಒಂದು ಚಮಚ

    ಮಾಡುವ ವಿಧಾನ
    * ಮೊದಲಿಗೆ ಒಂದು ಕಪ್ ಸಬ್ಬಕ್ಕಿಗೆ ಅರ್ಧ ಕಪ್ ನೀರು ಸೇರಸಿ, 2-3 ಗಂಟೆ ನೆನೆಸಿ.
    * ಇತ್ತ ಒಂದು ಚಮಚ ತುಪ್ಪ ಹಾಕಿ ಗೋಡಂಬಿಯನ್ನ ಹುರಿದಿಟ್ಟುಕೊಳ್ಳಿ
    * ಈಗ ಒಂದು ಬೌಲಿಗೆ ಹಾಲು ಹಾಕಿ ಕುದಿಸಿರಿ.
    * ಹಾಲು ಬಿಸಿಯಾಗುತ್ತಲೆ ನೆನೆಸಿದ ಸಬ್ಬಕ್ಕಿಯನ್ನು ಹಾಕಿ, ತಿರುಗಿಸುತ್ತೀರಿ.
    * ಸಬ್ಬಕ್ಕಿ ತಳ ಹಿಡಿಯದಂತೆ ತಿರುವುತ್ತಾ, 4-5 ನಿಮಿಷ ಬೇಯಿಸಿಕೊಳ್ಳಿ.
    * ಸಬ್ಬಕ್ಕಿ ಚೆನ್ನಾಗಿ ಬೆಂದ ನಂತರ ಸಕ್ಕರೆಯನ್ನು ಹಾಕಿ.
    * ಸಕ್ಕರೆ ಕರಗುತ್ತಲೆ ಏಲಕ್ಕಿ ಪುಡಿಯನ್ನು ಹಾಕಿ.
    * ಈಗ ಹುರಿದಿಟ್ಟುಕೊಂಡಿದ್ದ ಗೋಡಂಬಿಯನ್ನು ಹಾಕಿ
    * ದ್ರಾಕ್ಷಿಯನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿದ್ರೆ ರುಚಿರುಚಿಯಾದ ಸಬ್ಬಕ್ಕಿ ಪಾಯಸ ಸವಿಯಲು ಸಿದ್ಧ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಆಯುಧಪೂಜೆ, ಜಂಬೂಸವಾರಿ: ಮೈಸೂರು ಅರಮನೆಯಲ್ಲಿ ನಡೆಯಲಿರುವ ಕಾರ್ಯಕ್ರಮಗಳ ಪೂರ್ಣ ಪಟ್ಟಿ ಇಲ್ಲಿದೆ

    ಆಯುಧಪೂಜೆ, ಜಂಬೂಸವಾರಿ: ಮೈಸೂರು ಅರಮನೆಯಲ್ಲಿ ನಡೆಯಲಿರುವ ಕಾರ್ಯಕ್ರಮಗಳ ಪೂರ್ಣ ಪಟ್ಟಿ ಇಲ್ಲಿದೆ

    ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಎರಡು ದಿನ ಬಾಕಿ ಇದ್ದು, ಇದಕ್ಕಾಗಿ ಮೈಸೂರಿನಲ್ಲಿ ಸಕಲ ರೀತಿಯ ಸಿದ್ಧತೆ ನಡೆಯುತ್ತಿದೆ.

    ಗುರುವಾರ ಮೈಸೂರು ಅರಮನೆಯಲ್ಲಿ ಸಾಂಪ್ರದಾಯಿಕ ಆಯಧ ಪೂಜೆ ನಡೆಯಲಿದೆ. ಇದಕ್ಕಾಗಿ ಇಂದು ಅರಮನೆಯಲ್ಲಿದ್ದ ಬೆಳ್ಳಿರಥವನ್ನ ಹೊರತೆಗೆದು ಸ್ವಚ್ಛಗೊಳಿಸಲಾಯಿತು.

    ಗುರುವಾರದ ಕಾರ್ಯಕ್ರಮಗಳು
    – ಬೆಳಗ್ಗೆ 5.30ಕ್ಕೆ ಚಂಡಿ ಹೋಮದ ಕೊಠಡಿಯಲ್ಲಿ ಚಂಡಿಕಾ ಹೋಮ ಆರಂಭವಾಗಲಿದೆ.
    – ಬೆಳಗ್ಗೆ 7ಕ್ಕೆ ಆನೆ ಬಾಗಿಲಿಗೆ ಪಟ್ಟದ ಆನೆ, ಪಟ್ಟದ ಹಸು, ಪಟ್ಟದ ಕುದುರೆ ಆಗಮನ.
    – ಬೆಳಗ್ಗೆ 7.45ಕ್ಕೆ ಖಾಸ್ ಆಯುಧಗಳು ಅರಮನೆಯಿಂದ ಜಯ ಮಾರ್ತಾಂಡ ದ್ವಾರದ ಮಾರ್ಗವಾಗಿ ಕೋಡಿ ಸೋಮೇಶ್ವರ ದೇವಾಲಯಕ್ಕೆ ಕಳುಹಿಸಿ ಪೂಜೆ. ಆಯುಧಗಳೊಂದಿಗೆ ಹೆಜ್ಜೆ ಹಾಕಲಿರುವ ಪಟ್ಟದ ಆನೆ, ಕುದುರೆ, ಹಸು.
    – ಬೆಳಗ್ಗೆ 8.15ರಿಂದ 8.30ಕ್ಕೆ ಕೋಡಿ ಸೋಮೇಶ್ವರ ದೇವಾಲಯದಿಂದ ಅರಮನೆಯ ಕಲ್ಯಾಣ ಮಂಟಪಕ್ಕೆ ಆಯುಧಗಳ ಆಗಮನ.
    – ಬೆಳಗ್ಗೆ 9ಕ್ಕೆ ಚಂಡಿಕಾ ಹೋಮದ ಕೊಠಡಿಯಲ್ಲಿ ಚಂಡಿಕಾ ಹೋಮ ಪೂರ್ಣಾಹುತಿ.
    – ಬೆಳಗ್ಗೆ 10ರಿಂದ 10.25 ಕಲ್ಯಾಣ ಮಂಟಪದಲ್ಲಿ ಆಯುಧ ಪೂಜೆ. ಕತ್ತಿ, ಖಡ್ಗ, ಗುರಾಣಿ, ಯುದ್ಧೋಪಕರಣ, ವಾಹನ ಸೇರಿದಂತೆ ಅರಮನೆಯ ಆಯುಧಗಳಿಗೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದ ಪೂಜೆ.
    – ಸಾಯಂಕಾರ ಅಂಬಾವಿಲಾಸ ದರ್ಬಾರ್ ಹಾಲ್‍ನಲ್ಲಿ ಸಿಂಹಾಸನ ವಿಸರ್ಜನೆ.
    – ವಾಣಿ ವಿಲಾಸ ದೇವರ ಮನೆಯಲ್ಲಿ ಕಂಕಣ ವಿಸರ್ಜನೆ.

    ಶುಕ್ರವಾರದ ಕಾರ್ಯಕ್ರಮಗಳು
    – ಬೆಳಗ್ಗೆ 8.45 ಕ್ಕೆ ಅರಮನೆಗೆ ಪಟ್ಟದ ಆನೆ, ಕುದುರೆ, ಹಸು, ಆಗಮನ ಮತ್ತು ಪೂಜೆ
    – 9.10 ರಿಂದ 10.15 ರ ಒಳಗೆ ವಜ್ರಮುಷ್ಠಿ ಕಾಳಗ
    – ಕಾಳಗ ಮುಗಿದ ಮೇಲೆ ಬೆಳ್ಳಿ ರಥದಲ್ಲಿ ಯದುವೀರ್ ವಿಜಯಯಾತ್ರೆ
    – ಅರಮನೆಯ ಒಳಗಿನ ಭುವನೇಶ್ವರಿ ದೇವಾಲಯದಲ್ಲಿ ಯದುವೀರ್ ಪೂಜೆ
    – ಪೂಜೆ ನಂತರ ಮೆರವಣಿಗೆ ಮೂಲಕ ಯದುವೀರ್ ಅರಮನೆಗೆ ವಾಪಸ್
    – ಅಲ್ಲಿಗೆ ಖಾಸಗಿ ದರ್ಬಾರ್ ಮುಕ್ತಾಯ.
    – ಮಧ್ಯಾಹ್ನ 2.30 ರಿಂದ 3.16 ರ ಕುಂಭ ಲಗ್ನದಲ್ಲಿ ನಂದಿ ಧ್ವಜಕ್ಕೆ ಪೂಜೆ.
    – 3.40 ರಿಂದ 4.10 ರ ಲಗ್ನದಲ್ಲಿ ವಿಜಯದಶಮಿಯ ಮೆರವಣಿಗೆಗೆ ಪುಷ್ಪಾರ್ಚನೆ.
    – ಮೆರವಣಿಗೆ ಮುಗಿದ ಮೇಲೆ 7ಕ್ಕೆ ಬನ್ನಿಮಂಟಪದಲ್ಲಿ ಪಂಜಿನ ಕವಾಯತು ಆರಂಭ.

    ಇಂದು ಶಸ್ತ್ರ ಸಹಿತ ಪೊಲೀಸ್ ಸಿಬ್ಬಂದಿಗಳು, ಗಜಪಡೆ ಹಾಗೂ ಅಶ್ವಪಡೆಗಳು ಕೊನೆ ಹಂತದ ತಾಲೀಮಿನಿಲ್ಲಿ ಭಾಗಿಯಾಗಿದ್ದವು. ಆನೆಗಳಿಗೆ ಪುಷ್ಪರ್ಚನೆ ಮಾಡಿ ಗೌರವ ವಂದನೆ ಸ್ವೀಕರಿಸಿದ ನಗರ ಪೊಲೀಸ್ ಆಯುಕ್ತರು, ಶುಕ್ರವಾರ ನಡೆಯಲಿರುವ ಜಂಬೂಸವಾರಿಗೆ ಎಲ್ಲ ಸಿದ್ಧತೆ ನಡೆದಿದೆ. ಯಶಸ್ವಿ ಜಂಬೂಸವಾರಿಗೆ ಪೊಲೀಸ್ ಇಲಾಖೆ ಸಜ್ಜಾಗಿದೆ. ಜಂಬೂಸವಾರಿ ಸಮಯದಲ್ಲಿ ಪಾರಂಪರಿಕ ಹಳೆ ಕಟ್ಟಡಗಳ ಮೇಲೆ ಹತ್ತಬಾರದು ಅಂತ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಸೂಚನೆ ನೀಡಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಹೇಳಿದ್ದಾರೆ.

    ಜಂಬೂಸವಾರಿಯಲ್ಲಿ ಗಮನ ಸೆಳೆಯುವ ಸ್ತಬ್ಧ ಚಿತ್ರಗಳಿಗೆ ಕೊನೆ ಹಂತದ ಸ್ಪರ್ಶ ನೀಡಲಾಗುತ್ತಿದೆ. ಈ ಬಾರಿ 42 ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಭಾಗಿಯಾಗುತ್ತಿವೆ. 30 ಜಿಲ್ಲೆಗಳ ಜೊತೆ 12 ಇಲಾಖೆಯ ಸ್ತಬ್ಧ ಚಿತ್ರಗಳು. ಭಿನ್ನ ವಿಭಿನ್ನ ಸಂದೇಶ ಸಾರುತ್ತಿದ್ದು ಈ ಬಾರಿ ಜನರಿಗೆ ಸ್ತಬ್ಧ ಚಿತ್ರಗಳು ಮುದ ನೀಡಲಿದೆ ಎಂದು ಹಾವೇರಿ ಸ್ತಬ್ಧ ಚಿತ್ರ ಅಧಿಕಾರಿ ಪ್ರಕಾಶ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನವರಾತ್ರಿಯ 9ನೇ ದಿನ ಸಿದ್ಧಿದಾತ್ರೀ ಆರಾಧನೆ

    ನವರಾತ್ರಿಯ 9ನೇ ದಿನ ಸಿದ್ಧಿದಾತ್ರೀ ಆರಾಧನೆ

    ಗನ್ಮಾತೆ ದುರ್ಗಾದೇವಿಯ ಒಂಭತ್ತನೇ ಶಕ್ತಿಯ ಹೆಸರು ಸಿದ್ಧಿದಾತ್ರಿ. ಇವಳು ಎಲ್ಲ ಪ್ರಕಾರದ ಸಿದ್ಧಿಗಳನ್ನು ಕೊಡುವಂತಹವಳು. ಮಾರ್ಕಡೇಯ ಪುರಾಣದ ಅನುಸಾರ ಅಣಿಮಾ, ಮಾಹಿಮಾ, ಗರಿಮಾ, ಲಘಮಾ, ಪ್ರಾಪ್ತಿ, ಪ್ರಾಕಮ್ಯ, ಈಶಿತ್ವ ಮತ್ತು ವಶಿತ್ವ ಹೀಗೆ ಎಂಟು ಸಿದ್ಧಿಗಳು ಇವೆ.

    ದೇವೀಪುರಾಣಕ್ಕನುಸಾರ ಭಗವಾನ್ ಶಿವನು ಇವಳ ಕೃಪೆಯಿಂದ ಇವೆಲ್ಲ ಸಿದ್ಧಿಗಳನ್ನು ಪಡೆದುಕೊಂಡಿದ್ದನು. ಇವಳ ಅನುಕಂಪದಿಂದಲೇ ಭಗವಾನ್ ಶಿವನ ಅರ್ಧ ಶರೀರವು ದೇವಿಯಾಗಿತ್ತು. ಇದೇ ಕಾರಣದಿಂದ ಅವನು ಜಗತ್ತಿನಲ್ಲಿ ‘ಅರ್ಧನಾರೀಶ್ವರ’ ಹೆಸರಿನಿಂದ ಪ್ರಸಿದ್ಧನಾದನು. ಸಿದ್ಧಿದಾತ್ರಿಗೆ ನಾಲ್ಕು ಭುಜಗಳಿದ್ದು, ಇವಳ ವಾಹನ ಸಿಂಹವಾಗಿದೆ. ಇವಳು ಫಲಪುಷ್ಪದ ಮೇಲೆ ವಿರಾಜಮಾನವಾಗಿ ಕುಳಿತುಕೊಂಡಿರುತ್ತಾಳೆ. ಇವಳ ಕೆಳಗಿನ ಬಲಕೈಯಲ್ಲಿ ಚಕ್ರ, ಮೇಲಿನ ಕೈಯಲ್ಲಿ ಗದೆ ಇದೆ. ಎಡಗಡೆ ಕೆಳಗಿನ ಕೈಯಲ್ಲಿ ಶಂಖ ಮತ್ತು ಮೇಲಿನ ಕೈಯಲ್ಲಿ ಕಮಲವಿದೆ.

    ನವರಾತ್ರಿಯ 9ನೇ ದಿನ ಇವಳ ಉಪಾಸನೆ ಮಾಡಲಾಗುತ್ತದೆ. ಈ ದಿನ ಶಾಸ್ತ್ರೀಯ ವಿಧಿ-ವಿಧಾನದಿಂದ ಹಾಗೂ ಪೂರ್ಣನಿಷ್ಠೆಯಿಂದ ಸಾಧನೆ ಮಾಡುವ ಸಾಧಕರಿಗೆ ಸಿದ್ಧಿಗಳು ಪ್ರಾಪ್ತಿ ಆಗುತ್ತವೆ. ಬ್ರಹ್ಮಾಂಡದ ಮೇಲೆ ವಿಜಯವನ್ನು ಪಡೆಯುವ ಸಾಮಥ್ರ್ಯ ಅವನಲ್ಲಿ ಬಂದು ಬಿಡುತ್ತದೆ. ಪ್ರತಿಯೊಬ್ಬ ಮನುಷ್ಯನು ತಾಯಿ ಸಿದ್ಧಿದಾತ್ರಿಯ ಕೃಪೆಯನ್ನು ಪಡೆದುಕೊಳ್ಳಲು ನಿರಂತರ ಪ್ರಯತ್ನ ಮಾಡಬೇಕು. ಅವಳ ಆರಾಧನೆಯ ಕಡೆಗೆ ಮುಂದುವರಿಯಬೇಕು. ಇವಳ ಕೃಪೆಯಿಂದ ಅತ್ಯಂತ ದುಃಖರೂಪೀ ಸಂಸಾರದಿಂದ ನಿರ್ಲಿಪ್ತನಾಗಿದ್ದುಕೊಂಡು ಎಲ್ಲ ಸುಖವನ್ನು ಭೋಗಿಸುತ್ತಾ ಅವನು ಮೋಕ್ಷವನ್ನು ಪಡೆಯಬಲ್ಲನು.

    ನವದುರ್ಗೆಯಲ್ಲಿ ಸಿದ್ಧಿದಾತ್ರಿ ದೇವಿಯೂ ಕೊನೆಯವಳಾಗಿದ್ದಾಳೆ. ಬೇರೆ ಎಂಟು ದುರ್ಗೆಯರ ಪೂಜೆ ಉಪಾಸನೆಯನ್ನು ಶಾಸ್ತ್ರೀಯ ವಿಧಿ-ವಿಧಾನಕ್ಕನುಸಾರ ಮಾಡುತ್ತಾ ಭಕ್ತರು ನವರಾತ್ರಿಯ ಒಂಭತ್ತನೇ ದಿನ ಇವಳ ಉಪಾಸನೆಯಲ್ಲಿ ಪ್ರವೃತ್ತರಾಗುತ್ತಾರೆ. ಈ ಸಿದ್ಧಿದಾತ್ರೀ ದೇವಿಯ ಉಪಾಸನೆಯನ್ನು ಪೂರ್ಣಗೊಳಿಸಿದ ಬಳಿಕ ಭಕ್ತರ, ಸಾಧಕರ, ಲೌಕಿಕ-ಪಾರಲೌಕಿಕ ಎಲ್ಲ ಪ್ರಕಾರದ ಕಾಮನೆಯಗಳ ಪೂರ್ತಿ ಆಗಿ ಹೋಗುತ್ತದೆ ಎನ್ನುವ ನಂಬಿಕೆಯಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    ದಸರಾ ಸುದ್ದಿಗಳು:

    1. ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಯ ಮಹತ್ವವೇನು?

    2. ಮೈಸೂರು ದಸರಾ: ರತ್ನ ಖಚಿತ ಸಿಂಹಾಸನದ ಜೋಡಣೆ ಕಾರ್ಯ ಆರಂಭ

    3. ದಸರಾಗೆ ನಿಮ್ಮ ಮನೆಯಲ್ಲಿರಲಿ ಮೈಸೂರು ಪಾಕ್

    4. ಮೈಸೂರು ಪಾಕ್ ಕಂಡು ಹಿಡಿದಿದ್ದು ಯಾರು? ಇಲ್ಲಿದೆ ಮಾಹಿತಿ

    5. ಗೊಂಬೆ ಹಬ್ಬದ ಸಿದ್ಧತೆ ಹೀಗಿರಲಿ

    6. ದಸರಾ ಹಬ್ಬಕ್ಕೆ ಸ್ಟೈಲಿಶ್ ಆಗಿ ಕಾಣ್ಬೇಕಾ ಹೀಗಿರಲಿ ನಿಮ್ಮ ಸೀರೆ ಆಯ್ಕೆ

    7. ನವರಾತ್ರಿ ಸಂಭ್ರಮ – 9 ದಿನ ಯಾವ ಬಣ್ಣದ ಉಡುಪು ಧರಿಸಿ ಪೂಜಿಸಿದ್ರೆ ಉತ್ತಮ? ಇಲ್ಲಿದೆ ವಿವರ

    8.ದೇಶದ ವಿವಿಧ ರಾಜ್ಯಗಳಲ್ಲಿ ದಸರಾ ಹೇಗೆ ಆಚರಿಸುತ್ತಾರೆ? – ಇಲ್ಲಿದೆ ಮಾಹಿತಿ

    9.ನವರಾತ್ರಿ ಹಬ್ಬ ಹೆಣ್ಣು ಮಕ್ಕಳಿಗೆ ಇಷ್ಟ ಯಾಕೆ?

    10. ನವರಾತ್ರಿ ಮೊದಲ ದಿನ ಶೈಲಪುತ್ರಿಯ ಪೂಜೆ: ದಾಕ್ಷಾಯಿಣಿ ಶೈಲಪುತ್ರಿಯಾಗಿ ಶಿವನ ಕೈ ಹಿಡಿದ ಕಥೆ ಓದಿ

    11. ನವರಾತ್ರಿ ಎರಡನೇ ದಿನ ಇಷ್ಟಾರ್ಥ ಸಿದ್ಧಿಗಾಗಿ ಬ್ರಹ್ಮಚಾರಿಣಿಯನ್ನು ಪೂಜಿಸೋದು ಯಾಕೆ? ಪುರಾಣ ಕಥೆ ಓದಿ

    12. ಸಿಂಪಲ್ ಮೈಸೂರು ಬೋಂಡಾ ಮಾಡುವ ವಿಧಾನ

    13. ನವದುರ್ಗೆಯ 4ನೇ ರೂಪ ಕೂಷ್ಮಾಂಡ -ಇವಳ ಭಕ್ತಿಯಿಂದ ಆಯಸ್ಸು, ಬಲ, ಆರೋಗ್ಯ ವೃದ್ಧಿ

    14. ನವರಾತ್ರಿ ವಿಶೇಷ – ಸ್ಕಂದಮಾತೆಯನ್ನ ಪೂಜಿಸುವುದು ಏಕೆ?

    15. ಜನ್ಮ-ಜನ್ಮಾಂತರದ ಪಾಪಗಳನ್ನು ನಾಶಮಾಡುವ 6ನೇ ಅವತಾರ ಕಾತ್ಯಾಯನೀ

    16. ಮೈಸೂರಿನ ಸಿಹಿ ಮಾತ್ರವಲ್ಲ ಹಬ್ಬಕ್ಕಾಗಿ ಬಾದೂಷವನ್ನು ಮಾಡಿ-ಇಲ್ಲಿದೆ ಸರಳ ವಿಧಾನ

    17. 7ನೇ ದಿನ ಕಾಲರಾತ್ರಿಯನ್ನು ಪೂಜೆ ಮಾಡೋದು ಯಾಕೆ?

    18. ನವರಾತ್ರಿಯ 8ನೇ ದಿನ ಮಹಾಗೌರಿಯ ಪೂಜೆ!

  • 10 ನಿಮಿಷದಲ್ಲಿ ಮಾಡಿ ಸವಿಯಿರಿ ಮೈಸೂರು ಸಿಂಪಲ್ ರಸಂ!

    10 ನಿಮಿಷದಲ್ಲಿ ಮಾಡಿ ಸವಿಯಿರಿ ಮೈಸೂರು ಸಿಂಪಲ್ ರಸಂ!

    ನಾಡಿನಾದ್ಯಂತ ಕಾತರದಿಂದ ಕಾಯುತ್ತಿರುವ ಮೈಸೂರು ಜಂಬು ಸವಾರಿ ಶುಕ್ರವಾರ ನಡೆಯಲಿದೆ. ಇಲ್ಲಿಯವರೆಗೂ ನವದುರ್ಗೆಯನ್ನು ಪೂಜೆ ಮಾಡಿ ಸಿಹಿ ಮಾಡಿ ಸಂಭ್ರಮಿಸಿದ್ದೀರಾ. ಈಗ ಹಬ್ಬಕ್ಕಾಗಿ ಆರೋಗ್ಯಕ್ಕೂ ಉತ್ತಮವಾದ ಮೈಸೂರು ಬಿಸಿಬಿಸಿ ರಸಂ ಮಾಡುವ ವಿಧಾನ ಇಲ್ಲಿದೆ.

    ಬೇಕಾಗುವ ಸಾಮಾಗ್ರಿಗಳು
    ಪುಡಿ ಮಾಡಲು
    1. ದನಿಯಾ – 2 ಚಮಚ
    2. ಜೀರಿಗೆ – 1 ಚಮಚ
    3. ಕಡಲೆ ಬೇಳೆ – 1 ಚಮಚ
    4. ಮೆಣಸು – 1 ಚಮಚ
    5. ಕೆಂಪು ಒಳ ಮೆಣಸಿನ ಕಾಯಿ – 3 ರಿಂದ 4
    6. ಕೊಬ್ಬರಿ ತುರಿ – ಅರ್ಧ ಬಟ್ಟಲು

    ಪೌಡರ್ ಮಾಡುವ ವಿಧಾನ:
    * ಒಂದು ಫ್ರೈಯಿಂಗ್ ಪ್ಯಾನ್‍ಗೆ ದನಿಯಾ, ಜೀರಿಗೆ, ಕಡಲೆಬೇಳೆ, ಮೆಣಸು, ಕೆಂಪು ಒಣ ಮೆಣಸಿನಕಾಯಿ ಹಾಕಿ ಫ್ರೈ ಮಾಡಿ.
    * ಅದಕ್ಕೆ ಕೊಬ್ಬರಿ ತುರಿ ಹಾಕಿ ಚೆನ್ನಾಗಿ ಫ್ರೈ ಮಾಡಿ.
    * ಮಿಕ್ಸರ್ ಜಾರ್ ಗೆ ಹಾಕಿ ನುಣ್ಣಗೆ ಪುಡಿ ಮಾಡಿಟ್ಟುಕೊಳ್ಳಿ.

    ರಸಕ್ಕೆ
    1. ಟೊಮೋಟೋ – 2 ರಿಂದ 3
    2. ಹುಣಸೆಹಣ್ಣು – ನಿಂಬೆ ಗಾತ್ರ
    3. ಅರಿಶಿನ ಪುಡಿ – ಅರ್ಧ ಚಮಚ
    4. ಉಪ್ಪು – ರುಚಿಗೆ ತಕ್ಕಷ್ಟು
    5. ಬೆಲ್ಲ – 1 ಚಮಚ
    6. ತೊಗರಿ ಬೇಳೆ – 1 ಬಟ್ಟಲು

    ಒಗ್ಗರಣೆಗೆ
    1. ಎಣ್ಣೆ – 3 ಚಮಚ
    2. ಸಾಸಿವೆ – ಅರ್ಧ ಚಮಚ
    3. ಕರಿಬೇವು – ಸ್ವಲ್ಪ
    4. ಇಂಗು – ಚಿಟಿಕೆ
    5. ಕೆಂಪು ಮೆಣಸಿನ ಕಾಯಿ -3 ರಿಂದ 4
    6. ಕೊತ್ತಂಬರಿ ಸೊಪ್ಪು


    ರಸಂ ಮಾಡುವ ವಿಧಾನ:
    * ಮೊದಲಿಗೆ ತೊಗರಿಬೇಳೆಯನ್ನು ಕುಕ್ಕರ್ ಗೆ  ಹಾಕಿ 2-3 ಕೂಗು ಕೂಗಿಸಿಟ್ಟುಕೊಳ್ಳಿ.
    * ಫ್ರೈಯಿಂಗ್ ಪ್ಯಾನಿಗೆ ಹೆಚ್ಚಿದ ಟೊಮೋಟೋ, ಹುಣಸೆ ರಸ, ಅರಿಶಿನ ಪುಡಿ, ರುಚಿಗೆ ತಕ್ಕಷ್ಟು ಉಪ್ಪು, ಬೆಲ್ಲ ಹಾಕಿ ಲಿಡ್ ಮುಚ್ಚಿ 5 ರಿಂದ 10 ನಿಮಿಷ ಚೆನ್ನಾಗಿ ಕುದಿಸಿ.
    * ಬಳಿಕ ಅದಕ್ಕೆ ಈ ಮೊದಲೇ ಬೇಯಿಸಿಟ್ಟುಕೊಂಡ ತೊಗರಿ ಬೇಳೆಯನ್ನು ಸೇರಿಸಿ ಲಿಡ್ ಮುಚ್ಚಿ ಬೇಯಿಸಿ. ಚೆನ್ನಾಗಿ ಕುದಿಸಿ.
    * ಈಗ ರಸಂಗೆ ಬೇಕಾದಷ್ಟು ನೀರು ಸೇರಿಸಿ, ಹುರಿದು ಪುಡಿ ಮಾಡಿದ ಪೌಡರ್ ಅನ್ನು 2 ರಿಂದ 3 ಚಮಚ ಸೇರಿಸಿ ಕುದಿಸಿ.
    * ರಸ ಚೆನ್ನಾಗಿ ಕುದಿ ಬಂದು ಸುವಾಸನೆ ಬರುತ್ತದೆ.
    * ಅದಕ್ಕೀಗ ಒಗ್ಗರಣೆ ಸೇರಿಸಿ. ಮೇಲೆ ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪನ್ನು ಸೇರಿಸಿ. ಸ್ಟೌವ್ ಆರಿಸಿದರೆ 10 ನಿಮಿಷದಲ್ಲಿ ರಸಂ ರೆಡಿ.
    * ಬಿಸಿ ಅನ್ನದೊಂದಿಗೆ ರಸಂ ಜೊತೆ ತುಪ್ಪ ಸೇರಿಸಿ ಊಟ ಮಾಡಿದರೆ ಅದರ ಮಜಾವೇ ಬೇರೆ.

    ಒಗ್ಗರಣೆ:
    * ಒಂದು ಒಗ್ಗರಣೆ ಬೌಲಿಗೆ ಎಣ್ಣೆ ಹಾಕಿ.
    * ಕಾದ ಮೇಲೆ ಸಾಸಿವೆ, ಕರಿಬೇವು, ಇಂಗು, ಕೆಂಪು ಮೆಣಸಿನ ಕಾಯಿ ಹಾಕಿ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನವರಾತ್ರಿಯ 8ನೇ ದಿನ ಮಹಾಗೌರಿಯ ಪೂಜೆ!

    ನವರಾತ್ರಿಯ 8ನೇ ದಿನ ಮಹಾಗೌರಿಯ ಪೂಜೆ!

    ಗನ್ಮಾತೆ ದುರ್ಗಾದೇವಿಯ ಎಂಟನೇ ರೂಪ ಮಹಾಗೌರಿ. ಶ್ವೇತ ಬಣ್ಣದ ದೇವಿಗೆ ಶಂಖ, ಚಂದ್ರ ಮತ್ತು ಕುಂದ ಪುಷ್ಪ ಇವುಗಳ ಉಪಮೆ ಕೊಡಲಾಗಿದೆ. ಇವಳಿಗೆ ನಾಲ್ಕು ಭುಜಗಳಾಗಿದ್ದು, ಇವಳ ವಾಹನ ವೃಷಭವಾಗಿದೆ. ಆ ವೃಷಭ ಕೂಡ ಬೆಳ್ಳಗಿದೆ. ಇವಳ ಮೇಲಿನ ಬಲಕೈಯಲ್ಲಿ ಅಭಯಮುದ್ರೆ ಮತ್ತು ಕೆಳಗಿನ ಬಲಕೈಯಲ್ಲಿ ತ್ರಿಶೂಲವಿದೆ.

    ಮೇಲಿನ ಎಡಕೈಯಲ್ಲಿ ಢಮರು ಹಾಗೂ ಕೆಳಗಿನ ಎಡಗೈಯಲ್ಲಿ ವರಮುದ್ರೆ ಇದೆ. ತನ್ನ ಪಾರ್ವತಿ ರೂಪದಲ್ಲಿ ಇವಳು ಭಗವಾನ್ ಶಿವವನ್ನು ಪತಿಯಾಗಿ ಪಡೆಯಲು ಭಾರೀ ಕಠೋರ ತಪಸ್ಸು ಮಾಡಿದ್ದಳು. ನಾನು ಶಿವನಲ್ಲದೇ ಬೇರೆ ಯಾವುದೇ ದೇವತೆಯನ್ನು ವರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಳು. ಕಠೋರ ತಪಸ್ಸಿನಿಂದಾಗಿ ಈಕೆಯ ಶರೀರ ಕಪ್ಪು ಬಣ್ಣಕ್ಕೆ ತಿರುಗಿತ್ತು. ಇವಳ ತಪಸ್ಸಿಗೆ ಸಂತುಷ್ಟನಾಗಿ ಭಗವಾನ್ ಶಿವನು ಇವಳ ಶರೀರವನ್ನು ಗಂಗೆಯ ಪವಿತ್ರ ಜಲದಿಂದ ಚೆನ್ನಾಗಿ ತೊಳೆದಾಗ ಶ್ವೇತ ಬಣ್ಣಕ್ಕೆ ಬದಲಾದ ಕಾರಣ ಈಕೆಗೆ ಗೌರಿ ಹೆಸರು ಬಂದಿದೆ.

    ನವರಾತ್ರಿಯ ಎಂಟನೇ ದಿನ ಇವಳ ಉಪಾಸನೆಯಿಂದ ಭಕ್ತರ ಎಲ್ಲ ಕಷ್ಟಗಳು ತೊಳೆದು ಹೋಗುತ್ತದೆ. ಅವರ ಪಾಪಗಳೂ ಕೂಡ ನಾಶವಾಗಿ ಹೋಗುತ್ತದೆ. ಭವಿಷ್ಯದಲ್ಲಿ ಪಾಪ-ಸಂತಾಪ, ದೈನ್ಯ- ದುಃಖ, ಅವರ ಬಳಿಗೆ ಎಂದು ಬರುವುದಿಲ್ಲ. ಅವರು ಎಲ್ಲ ಪ್ರಕಾರದಿಂದ ಪವಿತ್ರ ಅಕ್ಷಯ ಪುಣ್ಯಗಳ ಅಧಿಕಾರಿಯಾಗುತ್ತಾರೆ. ಜಗಜ್ಜನನಿಯ ಧ್ಯಾನ-ಸ್ಮರಣೆ, ಪೂಜೆ-ಆರಾಧನೆಯು ಭಕ್ತರಿಗಾಗಿ ಎಲ್ಲಾವಿಧದಿಂದ ಶ್ರೇಯಸ್ಕರವಾಗಿದೆ.

    ಇವಳ ಕೃಪೆಯಿಂದ ಅಲೌಕಿಕ ಸಿದ್ಧಿಗಳು ಪ್ರಾಪ್ತವಾಗುತ್ತದೆ. ಮನಸ್ಸನ್ನು ಏಕನಿಷ್ಠವಾಗಿಸಿ ಮನುಷ್ಯನು ಸದಾಕಾಲ ಇವಳ ಧ್ಯಾನ ಮಾಡಬೇಕು. ಇವಳ ಉಪಾಸನೆಯಿಂದ ಭಕ್ತರ ಅಸಂಭವ ಕಾರ್ಯಕಗಳು ಕೂಡ ನೆರವೇರುತ್ತದೆ ಎನ್ನುವ ನಂಬಿಕೆಯಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    ದಸರಾ ಸುದ್ದಿಗಳು:

    1. ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಯ ಮಹತ್ವವೇನು?

    2. ಮೈಸೂರು ದಸರಾ: ರತ್ನ ಖಚಿತ ಸಿಂಹಾಸನದ ಜೋಡಣೆ ಕಾರ್ಯ ಆರಂಭ

    3. ದಸರಾಗೆ ನಿಮ್ಮ ಮನೆಯಲ್ಲಿರಲಿ ಮೈಸೂರು ಪಾಕ್

    4. ಮೈಸೂರು ಪಾಕ್ ಕಂಡು ಹಿಡಿದಿದ್ದು ಯಾರು? ಇಲ್ಲಿದೆ ಮಾಹಿತಿ

    5. ಗೊಂಬೆ ಹಬ್ಬದ ಸಿದ್ಧತೆ ಹೀಗಿರಲಿ

    6. ದಸರಾ ಹಬ್ಬಕ್ಕೆ ಸ್ಟೈಲಿಶ್ ಆಗಿ ಕಾಣ್ಬೇಕಾ ಹೀಗಿರಲಿ ನಿಮ್ಮ ಸೀರೆ ಆಯ್ಕೆ

    7. ನವರಾತ್ರಿ ಸಂಭ್ರಮ – 9 ದಿನ ಯಾವ ಬಣ್ಣದ ಉಡುಪು ಧರಿಸಿ ಪೂಜಿಸಿದ್ರೆ ಉತ್ತಮ? ಇಲ್ಲಿದೆ ವಿವರ

    8.ದೇಶದ ವಿವಿಧ ರಾಜ್ಯಗಳಲ್ಲಿ ದಸರಾ ಹೇಗೆ ಆಚರಿಸುತ್ತಾರೆ? – ಇಲ್ಲಿದೆ ಮಾಹಿತಿ

    9.ನವರಾತ್ರಿ ಹಬ್ಬ ಹೆಣ್ಣು ಮಕ್ಕಳಿಗೆ ಇಷ್ಟ ಯಾಕೆ?

    10. ನವರಾತ್ರಿ ಮೊದಲ ದಿನ ಶೈಲಪುತ್ರಿಯ ಪೂಜೆ: ದಾಕ್ಷಾಯಿಣಿ ಶೈಲಪುತ್ರಿಯಾಗಿ ಶಿವನ ಕೈ ಹಿಡಿದ ಕಥೆ ಓದಿ

    11. ನವರಾತ್ರಿ ಎರಡನೇ ದಿನ ಇಷ್ಟಾರ್ಥ ಸಿದ್ಧಿಗಾಗಿ ಬ್ರಹ್ಮಚಾರಿಣಿಯನ್ನು ಪೂಜಿಸೋದು ಯಾಕೆ? ಪುರಾಣ ಕಥೆ ಓದಿ

    12. ಸಿಂಪಲ್ ಮೈಸೂರು ಬೋಂಡಾ ಮಾಡುವ ವಿಧಾನ

    13. ನವದುರ್ಗೆಯ 4ನೇ ರೂಪ ಕೂಷ್ಮಾಂಡ -ಇವಳ ಭಕ್ತಿಯಿಂದ ಆಯಸ್ಸು, ಬಲ, ಆರೋಗ್ಯ ವೃದ್ಧಿ

    14. ನವರಾತ್ರಿ ವಿಶೇಷ – ಸ್ಕಂದಮಾತೆಯನ್ನ ಪೂಜಿಸುವುದು ಏಕೆ?

    15. ಜನ್ಮ-ಜನ್ಮಾಂತರದ ಪಾಪಗಳನ್ನು ನಾಶಮಾಡುವ 6ನೇ ಅವತಾರ ಕಾತ್ಯಾಯನೀ

    16. ಮೈಸೂರಿನ ಸಿಹಿ ಮಾತ್ರವಲ್ಲ ಹಬ್ಬಕ್ಕಾಗಿ ಬಾದೂಷವನ್ನು ಮಾಡಿ-ಇಲ್ಲಿದೆ ಸರಳ ವಿಧಾನ

    17. 7ನೇ ದಿನ ಕಾಲರಾತ್ರಿಯನ್ನು ಪೂಜೆ ಮಾಡೋದು ಯಾಕೆ?