Tag: Mysure

  • ಬೆಂಗಳೂರಿನಲ್ಲಿ ನಕಲಿ ನಂದಿನಿ ತುಪ್ಪದ ಜಾಲದ ಮೇಲೆ ಅಧಿಕಾರಿಗಳ ದಾಳಿ

    ಬೆಂಗಳೂರಿನಲ್ಲಿ ನಕಲಿ ನಂದಿನಿ ತುಪ್ಪದ ಜಾಲದ ಮೇಲೆ ಅಧಿಕಾರಿಗಳ ದಾಳಿ

    ನೆಲಮಂಗಲ: ನಕಲಿ ನಂದಿನಿ ತುಪ್ಪದ ಜಾಲದ ಹಿನ್ನೆಲೆಯಲ್ಲಿ ಖಾಸಗಿ ಗೋದಾಮಿನ ಮೇಲೆ ಆಹಾರ ಸಂರಕ್ಷಣಾ ಇಲಾಖೆ ಹಾಗೂ ಕೆಎಂಎಫ್ ಅಧಿಕಾರಿಗಳ ತಂಡ ಮತ್ತು ಮಾದನಾಯಕನಹಳ್ಳಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.

    ಆಹಾರ ಸಂರಕ್ಷಣಾ ಇಲಾಖೆ ಹಾಗೂ ಪೊಲೀಸರು ನಕಲಿ ತುಪ್ಪದ ಜಾಲದ ಮೇಲೆ ತನಿಖೆ ಚುರುಕುಗೊಳಿಸಿದ್ದು, ಇಂದು ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪದ ಮಾಕಳಿ ಬಳಿಯ ಖಾಸಗಿ ಗೋದಾಮಿನ ಮೇಲೆ, ಖಚಿತ ಮಾಹಿತಿ ಆಧರಿಸಿ ದಿಢೀರ್ ದಾಳಿ ನಡೆಸಿದರು. ಇದನ್ನೂ ಓದಿ: ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಸಿದವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಎಸ್‍ಟಿಎಸ್ ಸೂಚನೆ

    ಖಾಸಗಿ ಗೋದಾಮಿನಲ್ಲಿ ಸಂಗ್ರಹವಾಗಿದ್ದ ನಕಲಿ ನಂದಿನಿ ತುಪ್ಪವನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಖಾಸಗಿ ಗೋದಾಮಿನಲ್ಲಿ ಸಂಗ್ರಹವಾಗಿದ್ದ, ನಂದಿನಿ ತುಪ್ಪ ಕೆಎಂಎಫ್ ನ ನಂದಿನಿ ತುಪ್ಪವನ್ನೇ ಹೋಲುವ ನಕಲಿ ತುಪ್ಪವಾಗಿದ್ದು, ಸುಮಾರು 15 ಲಕ್ಷ ಮೌಲ್ಯದ, ನಕಲಿ ತುಪ್ಪವನ್ನು ಅಧಿಕಾರಿಗಳ ತಂಡ ವಶ ಪಡಿಸಿಕೊಂಡಿದ್ದಾರೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮತಾಂತರ ನಿಷೇಧ ಜೊತೆಗೆ ಪಕ್ಷಾಂತರ ನಿಷೇಧ ಕಾನೂನನ್ನೂ ಜಾರಿಗೆ ತರಲಿ: ಸಿ.ಎಂ ಇಬ್ರಾಹಿಂ

    ಇನ್ನೂ ಮೈಸೂರಿನಲ್ಲಿ ಬಯಲಾಗಿದ್ದ ನಕಲಿ ತುಪ್ಪ ರಾಜ್ಯದ ಮೂಲೆ ಮೂಲೆಗಳಲ್ಲಿ ಸರಬರಾಜು ಆಗಿರುವುದು ಸದ್ಯ ಕಂಡು ಬರುತ್ತಿದೆ. ಈ ಜಾಲವನ್ನು ಪತ್ತೆ ಹಚ್ಚುವುದು ಅಕ್ಷರಶಃ ಕೆಎಂಎಫ್ ಅಧಿಕಾರಿಗಳಿಗೆ ತಲೆ ನೋವಾಗಿ ಪರಿಣಮಿಸಿದೆ.

  • ಮಗುವಿನ ಸಮೇತ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ!

    ಮಗುವಿನ ಸಮೇತ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ!

    ಮಂಡ್ಯ: ಮಗುವಿನ ಸಮೇತ ತಾಯಿ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಶರಣಾದ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

    ಮೈಸೂರಿನ ನಿವಾಸಿ ಭಾರ್ಗವಿ (31) ಆತ್ಮಹತ್ಯೆಗೆ ಶರಣಾದ ತಾಯಿ. ದೀಕ್ಷಾ (3) ಭಾರ್ಗವಿಯ ಮಗು. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗೋಸಾಯ್ ಘಾಟ್ ಬಳಿ ಘಟನೆ ನಡೆದಿದೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

    ಮೈಸೂರಿನ ಹೌಸಿಂಗ್ ಬೋರ್ಟ್ ನಿವಾಸಿಯಾದ ಭಾರ್ಗವಿಗೆ ಕೆಲಸ ಮಾಡಬೇಕೆಂಬ ಆಸೆಯಿತ್ತು. ಆದರೆ ಭಾರ್ಗವಿ ಕೆಲಸಕ್ಕೆ ಸೇರಲು ಪತಿ ಪ್ರವೀಣ್ ಕುಮಾರ್ ವಿರೋಧಿಸಿದ್ದನು. ಈ ಬಗ್ಗೆ ಸಂಬಂಧಿಕರೊಂದಿಗೂ ಭಾರ್ಗವಿ ಹೇಳಿಕೊಂಡಿದ್ದಳು. ಇದನ್ನೂ ಓದಿ: ಹಳ್ಳಿಗೆ 300 ಕೋವಿಡ್ ಲಸಿಕೆಗಳನ್ನು ಸಾಗಿಸಿದ ಡ್ರೋನ್

    POLICE JEEP

    ಶುಕ್ರವಾರ ಬೆಳಿಗ್ಗೆ ಮಗುವನ್ನು ಕರೆದುಕೊಂಡು ಭಾರ್ಗವಿ ಮನೆ ಬಿಟ್ಟು ಹೋಗಿದ್ದಳು. ಘೋಸಾಯಿ ಘಾಟ್ ಬಳಿ ಮೊಬೈಲ್ ಹಾಗೂ ಬ್ಯಾಗ್ ಪತ್ತೆಯಾಗಿತ್ತು. ಅಗ್ನಿಶಾಮಕ ಹಾಗೂ ಪೊಲೀಸರಿಂದ ಇಂದು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ನದಿಯಲ್ಲಿ ಪತ್ತೆಯಾಗಿರುವ ತಾಯಿ, ಮಗು ಶವ ಪತ್ತೆಯಾಗಿದೆ. ಶ್ರೀರಂಗಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಕಪ್ಪು ಬಟ್ಟೆ ಮೇಲೆ MES ಎಂದು ಬರೆದು ಚಪ್ಪಲಿ ಏಟು ಕೊಟ್ಟ ರಾಯಣ್ಣನ ಅಭಿಮಾನಿಗಳು

  • ಕಾಶಿ ಉಳಿಸಿದ್ದ ಅಹಲ್ಯ ಬಾಯಿಯನ್ನು ಮರೆತಿದ್ದು ಸರಿಯೇ?: ಎಚ್. ವಿಶ್ವನಾಥ್

    ಕಾಶಿ ಉಳಿಸಿದ್ದ ಅಹಲ್ಯ ಬಾಯಿಯನ್ನು ಮರೆತಿದ್ದು ಸರಿಯೇ?: ಎಚ್. ವಿಶ್ವನಾಥ್

    ಮೈಸೂರು: ವಾರಣಾಸಿಯಲ್ಲಿ ವಿಶ್ವನಾಥ ಕಾರಿಡಾರ್ ನಿರ್ಮಾಣ ಸ್ವಾಗತಾರ್ಹ. ಆದರೆ ಕಾರ್ಯಕ್ರಮದಲ್ಲಿ ಒಂದು ಸಣ್ಣ ಲೋಪವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾರಣಾಸಿಯನ್ನು ಬೇರೆ ಬೇರೆ ಧರ್ಮದವರು ನಾಶ ಮಾಡಿದ್ದರು. 16ನೇ ಶತಮಾನದಲ್ಲಿ ಉಳಿಸಿದ್ದು ಅಹಲ್ಯಬಾಯಿ. ಅವರೇ ಕಾಶಿ ವಿಶ್ವನಾಥ ದೇವಸ್ಥಾನ ಉಳಿಸಿದ್ದರು. ಯುದ್ಧದ ಬದಲು ಯುಕ್ತಿಯಿಂದ ಉಳಿಸಿದ್ದರು. ಶಿವನ ಹೆಸರಲ್ಲೇ ಅವರು ಆಡಳಿತ ಮಾಡಿದ್ದರು. ಇಂತಹ ಯುಕ್ತಿ ಪ್ರದರ್ಶಿಸಿದ ಅಹಲ್ಯಬಾಯಿ ಅವರನ್ನು ಎಲ್ಲರೂ ಮರೆತಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪ್ರಧಾನಿ ನರೇಂದ್ರ ಮೋದಿ ಸಹ ಮರೆತಿದ್ದಾರೆ ಎಂದು ಆರೋಪಿಸಿದರು.

    ಸ್ತ್ರೀಯನ್ನು ಮರೆತರೆ ಚರಿತ್ರೆಯನ್ನು ಮರೆತಂತೆ. ಇದು ಬಹಳ ವೇದನೆಯ ವಿಚಾರವಾಗಿದೆ. ವಾರಣಾಸಿಯಲ್ಲಿ ಅಹಲ್ಯಬಾಯಿ ಪ್ರತಿಮೆ ಮಾಡಿಸಿ ಹಾಗೂ ಅಲ್ಲಿನ ವಿಮಾನ ನಿಲ್ದಾಣಕ್ಕೆ ಅವರ ಹೆಸರು ಇಡಿ ಎಂದು ಪ್ರಧಾನಿ ಮೋದಿ ಅವರಲ್ಲಿ ವಿನಂತಿಸಿದರು. ಇದನ್ನೂ ಓದಿ: ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ 15 ಸೀಟ್ ಗೆಲುವು- ಬಿಎಸ್‌ವೈ ವಿಶ್ವಾಸ

    ಉತ್ತರ ಪ್ರದೇಶದಲ್ಲಿ ಒಂದೂವರೆ ಕೋಟಿ ಜನ ಕುರುಬರು ಇದ್ದಾರೆ. ಕುರುಬ ಜನಾಂಗಕ್ಕೆ ಸೇರಿದ ಅಹಲ್ಯಬಾಯಿ ಅವರನ್ನು ಮರೆತಿರುವುದು ಪ್ರಮಾದವಾಗಿದೆ. ನಮ್ಮದು ಸಹ ದೊಡ್ಡ ಮಠವಾಗಿದೆ. ಹಾವೇರಿ, ಕಲಬುರಗಿ, ರಾಯಚೂರು ಸೇರಿ ನಾಲ್ಕು ಕಡೆ ಇದೆ. ನಮ್ಮ ಕಾಗಿನೆಲೆ ಪಕ್ಕಾ ಹಿಂದೂಗಳ ಮಠವಾಗಿದೆ. ನಮ್ಮ ಜನಾಂಗ ಹಿಂದೂ ಧರ್ಮದ ಪ್ರತಿಪಾದಕರಾಗಿದ್ದವರು. ಹಾಗಾದರೆ ಕುರುಬರು ಬೇಡವಾ ನಿಮಗೆ ಎಂದು ಪ್ರಶ್ನಿಸಿದರು.

  • ಬಿಜೆಪಿ ಆಡಳಿತ ಟೀಕಿಸುವ ನೈತಿಕತೆ ಕಾಂಗ್ರೆಸ್‍ಗೆ ಉಳಿದಿಲ್ಲ: ಬಿ.ವೈ.ವಿಜಯೇಂದ್ರ

    ಬಿಜೆಪಿ ಆಡಳಿತ ಟೀಕಿಸುವ ನೈತಿಕತೆ ಕಾಂಗ್ರೆಸ್‍ಗೆ ಉಳಿದಿಲ್ಲ: ಬಿ.ವೈ.ವಿಜಯೇಂದ್ರ

    – ಎಕ್ಸಾಂ ಬರೆದಾಗಿ ರಿಸಲ್ಟ್ ಸಹ ಬಂದಾಗಿದೆ

    ಮೈಸೂರು: ರಾಜ್ಯ ಕಾಂಗ್ರೆಸ್ ಗೆ ಬಿಜೆಪಿ ಆಡಳಿತ ಟೀಕಿಸುವ ನೈತಿಕತೆಯೆ ಉಳಿದಿಲ್ಲ. ಕೊರೊನಾ ಸಂಕಷ್ಟ ಕಾಲದಲ್ಲಿ ಜನರ ನೋವಿಗೆ ಸ್ಪಂದಿಸುವುದನ್ನ ಮರೆತು ಹಾದಿ ಬೀದಿಯಲ್ಲಿ ನಿಂತು ಸಿಎಂ ಅಭ್ಯರ್ಥಿ ಬಗ್ಗೆ ಮಾತಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೈಸೂರಿನಲ್ಲಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

    ಕಾಂಗ್ರೆಸ್ ಎಲ್ಲಾ ವಿಚಾರದಲ್ಲೂ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ನವರು ಬಿಜೆಪಿ ಬಗ್ಗೆ ಟೀಕಿಸುವುದು ಹಾಸ್ಯಸ್ಪದ. ಇದೇ ವೇಳೆ ಅವರು ತಮ್ಮ ರಾಜಕೀಯ ಭವಿಷ್ಯದ ಪ್ರಶ್ನೆಗೆ ಉತ್ತರಿಸಿ, ನಾನು ಚುನಾವಣೆಗೆ ನಿಲ್ಲಬೇಕೋ ಅಥವಾ ಬೇಡ್ವೋ? ನಿಲ್ಲುವುದಾದರೆ ಯಾವ ಕ್ಷೇತ್ರದಿಂದ ನಿಲ್ಲಬೇಕು ಎಂಬುದು ಎರಡು ವರ್ಷದ ನಂತರ ತೀರ್ಮಾನವಾಗುತ್ತದೆ. ಅದಬನ್ನು ಬಿಜೆಪಿ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಮಾಡುತ್ತದೆ. ಅಲ್ಲಿಯವರೆಗೆ ಪಕ್ಷ ಸಂಘಟನೆಗೆ ಇಡೀ ರಾಜ್ಯ ಸುತ್ತುವುದು ನನ್ನ ಕೆಲಸ ಎಂದರು.

    ವರುಣಾ ಕ್ಷೇತ್ರದ ಕಾರ್ಯಕರ್ತರ ಜೊತೆ ನಿರಂತರ ಸಂಪರ್ಕದಲ್ಲಿರೋದು ನಿಜ. ಎಲ್ಲಾ ಕ್ಷೇತ್ರಗಳಲ್ಲೂ ಸಂಚರಿಸಿ ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ಪಕ್ಷ ನೀಡಿರುವ ಜವಾಬ್ದಾರಿಯನ್ನು ನಾನು ನಿಭಾಯಿಸುತ್ತಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಕೊರೊನಾದಿಂದ ಮೃತಪಟ್ಟರೆ ಪರಿಹಾರ ನೀಡಿ – ಸುಪ್ರೀಂ ಮಹತ್ವದ ಆದೇಶ

    ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ:
    ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಎಂಬುದು ಮುಗಿದ ಅಧ್ಯಾಯ. ಇನ್ನೂ ಎರಡು ವರ್ಷ ಯಡಿಯೂರಪ್ಪ ಅವರೇ ಸಿಎಂ ಆಗಿರುತ್ತಾರೆ. ಈ ಬಗ್ಗೆ ಇನ್ನೂ ಗೊಂದಲಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮುಖಂಡರು ದೆಹಲಿಗೆ ಹೋಗುವುದು ಅವರ ವೈಯಕ್ತಿಕ ವಿಚಾರ. ಅದಕ್ಕೆ ರಾಜಕೀಯ ಬಣ್ಣ ಕಟ್ಟುವುದು ಬೇಡ. ಎಕ್ಸಾಂ ಬರೆದಾಗಿದೆ ರಿಸಲ್ಟ್ ಕೂಡ ಬಂದಿದೆ. ಇನ್ನೂ ಈ ಬಗ್ಗೆ ಗೊಂದಲಗಳು ಬೇಡ ಎಂದರು. ಇದನ್ನೂ ಓದಿ: ಯತ್ನಾಳ್ ಪರ ಸದಾ ಕಾಲ ಇರುತ್ತೇನೆ: ಸಿ.ಪಿ ಯೋಗೇಶ್ವರ್